Politics
ಎಂನರೇಗಾದಿಂದ ಮಹಾತ್ಮಗಾಂಧಿ ಹೆಸರು ಕೈಬಿಟ್ಟ ಬೆನ್ನಲ್ಲೇ ‘ಕರ್ಮಶ್ರೀ’ ಯೋಜನೆಗೆ ಗಾಂಧಿ ಹೆಸರು
ಪಶ್ಚಿಮ ಬಂಗಾಳ ; ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವ ಬೆನ್ನಲ್ಲೆ ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ ‘ಕರ್ಮಶ್ರೀ’ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಅವರು ಕೋಲ್ಕತ್ತಾದ ಧೋನೋ ಧನ್ಯೋ ಸಭಾಂಗಣದಲ್ಲಿ ನಡೆದ ವ್ಯಾಪಾರ ಮತ್ತು ಕೈಗಾರಿಕಾ ಸಮಾವೇಶದಲ್ಲಿ ಮಾತುಗಳನ್ನಾಡುತ್ತಾ, ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೇಂದ್ರ ಕೈಬಿಟ್ಟಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ, ರಾಷ್ಟ್ರಪಿತನಿಗೆ ಅವರು ಗೌರವ ಸಲ್ಲಿಸದಿದ್ದರೆ ನಾನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್ಆರ್ಇಜಿಎ)’ಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸುವ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) 2025 (ವಿಬಿ-ಜಿ ರಾಮ್-ಜಿ) ಎಂಬ ಹೊಸ ಮಸೂದೆಗೆ ಗುರುವಾರ (ಡಿಸೆಂಬರ್ 18) ಲೋಕಸಭೆಯ ಅನುಮೋದನೆ ಪಡೆದಿದೆ.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ನರೇಗಾ ಕಾಯ್ದೆ ಮತ್ತು ಯೋಜನೆಯ ಹೆಸರು, ನಿಬಂಧನೆಗಳನ್ನು ಬದಲಿಸಲಿದೆ. ಮುಖ್ಯವಾಗಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕಲಿದೆ.
ನರೇಗಾ ಕಾಯ್ದೆಯ ಹೆಸರು ಬದಲಿಸಿರುವ ಕೇಂದ್ರ ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದೆ. ಇದಕ್ಕೆ ಟಕ್ಕರ್ ಕೊಟ್ಟಿರುವ ಮಮತಾ ಬ್ಯಾನರ್ಜಿ ‘ಕರ್ಮಶ್ರೀ’ ಯೋಜನೆಯಡಿ ಪ್ರಸ್ತುತ ಇರುವ ಕೆಲಸದ ದಿನಗಳು 75 ಅನ್ನು 100ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
“ನಾವು ಈಗಾಗಲೇ ‘ಕರ್ಮಶ್ರೀ’ ಅಡಿಯಲ್ಲಿ ಸಾಕಷ್ಟು ಕೆಲಸದ ದಿನಗಳನ್ನು ಸೃಷ್ಟಿಸಿದ್ದೇವೆ. ಅದನ್ನು ನಾವು ನಮ್ಮ ಸ್ವಂತ ಸಂಪನ್ಮೂಲಗಳಿOದ ನಡೆಸುತ್ತಿದ್ದೇವೆ. ಕೇಂದ್ರ ನಿಧಿಯನ್ನು ನಿಲ್ಲಿಸಿದರೂ, ಜನರಿಗೆ ಕೆಲಸ ಸಿಗುವಂತೆ ನೋಡಿಕೊಳ್ಳುತ್ತೇವೆ. ನಾವು ಭಿಕ್ಷುಕರಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ ನೀಡಿ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9,2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ.
ಕೇಂದ್ರ ಸರ್ಕಾರ ಹಣ ನೀಡುವುದನ್ನು ನಿಲ್ಲಿಸಿರುವುದರ ವಿರುದ್ದ ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 1,2025ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಯನ್ನು ಪುನರ್ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27,2024ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಯೋಜನೆ ಪುನರಾರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ.
ಅಂದಿನಿOದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಅದರ ಲಾಭ ಪಡೆಯುತ್ತಿದ್ದವು.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
CONGRESS
ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
CONGRESS
ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ
ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.
ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ
ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.
ಯುವ ಕಂಟೆಂಟ್ ಕ್ರಿಯೇಟರ್ಸ್ ಜೊತೆ ಉಪಾಹಾರ ಹಾಗೂ ಸಂವಾದ
ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ
ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.
ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್ವೆಲ್ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ