Connect with us

Politics

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ಮತ್ತು ದ್ವೇಷ ಭಾಷಣ ತಡೆ ವಿಧೇಯಕಗಳು ಅಂಗೀಕಾರ

Published

on

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಮತ್ತು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಡಿ.18ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆಯಲ್ಲಿ ಸರ್ವಾನುಮತದ ಮೂಲಕ ಅಂಗೀಕಾರ ಪಡೆಯಿತು

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪ ಅವರು ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಈ ವಿಧೇಯಕವು ವ್ಯಕ್ತಿಗಳ, ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂದು ತಿಳಿಸಿದರು. ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಪ್ರತಿಪಕ್ಷ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು ತೀವ್ರ ವಿರೋಧ ವ್ಯಕ್ತಪಡಿಸಿದ ಮದ್ಯೆಯೇ ಸರ್ವಾನುಮತಗಳಿಂದ ವಿಧೇಯಕ ಅಂಗೀಕಾರ ಪಡೆಯಿತು.
ವಿಧೇಯಕದ ಕುರಿತು ಚರ್ಚಿಸುವಾಗ, ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಕೇಳಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಶ್ನೆಗೆ, ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೆ, ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Kadaba

ನೂಜಿಬಾಳ್ತಿಲ: ಬಾಲೆಮಾರು-ಕುರ್ನೂಜಿಯಲ್ಲಿ ಮಳೆಗಾಲದಲ್ಲಿ ಹೊಳೆದಾಟಲು ಪರದಾಟ; ಸೇತುವೆ ನಿರ್ಮಾಣಕ್ಕೆ ಭರವಸೆ ನೀಡಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ

Published

on

ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆಃ 2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ತೆಪ್ಪವೇ ಆಸರೆ: ಗ್ರಾಮಸ್ಥರ ಮುಗಿಯದ ಸಂಕಷ್ಟ!

ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಸ್ವತಃ ಪಾಲ (ಕಾಲುಸಂಕ) ರಚಿಸಿಕೊಂಡು ಹೊಳೆ ದಾಟುತ್ತಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾದಾಗ, ಈ ಹೊಳೆಯಲ್ಲೂ ನೀರು ಆವರಿಸಿ ಪಾಲ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ.

ತೆಪ್ಪವೇ ಆಸರೆ: ಪಾಲ ಮುಳುಗಡೆಯಾದಾಗ ಅಪಾಯಕಾರಿ ರೀತಿಯಲ್ಲಿ ತೆಪ್ಪವನ್ನೇ ಬಳಸಿಕೊಂಡು ಗ್ರಾಮಸ್ಥರು ಹೊಳೆ ದಾಟಬೇಕಾದ ದುಸ್ಥಿತಿ ಇದೆ.

ಸಾಕಷ್ಟು ಕುಟುಂಬಗಳಿಗೆ ತೊಂದರೆ: ಈ ಭಾಗದಲ್ಲಿ 25ಕ್ಕೂ ಹೆಚ್ಚು ಮನೆಗಳಿದ್ದು, ದಿನನಿತ್ಯ ಶಾಲಾ-ಕಾಲೇಜು ಮಕ್ಕಳು ಹಾಗೂ ಗ್ರಾಮಸ್ಥರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಈ ಹೊಳೆ ದಾಟಿಯೇ ತಮ್ಮ ದೈನಂದಿನ ಕೆಲಸಗಳಿಗೆ ತೆರಳಬೇಕಾಗಿದೆ.

ಹಲವು ವರ್ಷಗಳ ಬೇಡಿಕೆ: ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಭರವಸೆಗಳು ಸಿಕ್ಕಿವೆಯೇ ಹೊರತು ಸೇತುವೆ ಭಾಗ್ಯ ಮಾತ್ರ ಇಂದಿಗೂ ಸಿಕ್ಕಿಲ್ಲ ಎಂಬುದು ಸ್ಥಳೀಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಜಿ.ಕೃಷ್ಣಪ್ಪ ಭೇಟಿ, ಪರಿಶೀಲನೆ

ಇಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಕಾಂಗ್ರೆಸ್ ಮುಖಂಡ ಕರುಣಾಕರ ಗೌಡ ದೊಡ್ಡಉರ್ಕ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಜಿ.ಕೃಷ್ಣಪ್ಪ ರಾಮಕುಂಜ ಅವರು ಕರುಣಾಕರ ಗೌಡ ಅವರೊಂದಿಗೆ ಬಾಲೆಮಾರು-ಕುರ್ನೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪಿಡಬ್ಲ್ಯುಡಿ ಇಂಜಿನಿಯರ್‌ಗೆ ಸೂಚನೆ:

ಸ್ಥಳೀಯರೊಂದಿಗೆ ಸಂಕಷ್ಟ ಆಲಿಸಿದ ಜಿ.ಕೃಷ್ಣಪ್ಪ ಅವರು, ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಸ್ಥಳದಿಂದಲೇ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣವೇ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ (Estimate) ತಯಾರಿಸುವಂತೆ ಸೂಚನೆ ನೀಡಿದರು.

ಭೇಟಿ ವೇಳೆಯಲ್ಲಿದ್ದ ಪ್ರಮುಖರು

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೀನಪ್ಪ ಗೌಡ ಕುರ್ನೂಜಿ, ಶೇಖರ ಗೌಡ ಬಾಲೆಮಾರು, ಧನಂಜಯ ಗೌಡ ಬಳ್ಳೇರಿ, ಪ್ರಮೋದ್ ಗೌಡ ಬಳ್ಳೇರಿ, ಚಂದ್ರಶೇಖರ ಗೌಡ ಬಳ್ಳೇರಿ, ಚೇತನ್ ಬಳ್ಳೇರಿ, ಬಾಲಕೃಷ್ಣ ಬಳ್ಳೇರಿ, ಬಾಲಕ್ಕ ಕುರ್ನೂಜಿ, ನಳಿನಿ ಕುರ್ನೂಜಿ, ರಾಮಕ್ಕ ಬಾಲೆಮಾರು, ದೇಜಪ್ಪ ಗೌಡ ಬಾಲೆಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Politics

ನರಿಮೊಗರು ಗ್ರಾ.ಪಂ ಎದುರು ‘ಪುತ್ತಿಲ ಪರಿವಾರ’ ಬೃಹತ್ ಪ್ರತಿಭಟನೆ: 15 ದಿನಗಳಲ್ಲಿ ರಸ್ತೆ ದುರಸ್ತಿ ಭರವಸೆ

Published

on

ಪುತ್ತೂರು: ಪುರಷರಕಟ್ಟೆ–ಶಾಂತಿಗೋಡು ಸಂಪರ್ಕ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಹಾಗೂ ತಕ್ಷಣ ರಸ್ತೆ ದುರಸ್ತಿಗೆ ಆಗ್ರಹಿಸಿ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ‘ಪುತ್ತಿಲ ಪರಿವಾರ’ದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಧಿಕಾರಿಗಳು 15 ದಿನಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಲಿಖಿತ/ಮೌಖಿಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಪುರಷರಕಟ್ಟೆ–ಶಾಂತಿಗೋಡು ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಮಾರು ಒಂದು ಕಿಲೋಮೀಟರ್‌ ವ್ಯಾಪ್ತಿಯಲ್ಲಿ ವಾಹನ ಸಂಚಾರ ತೀವ್ರ ದುಸ್ತರವಾಗಿದೆ. ಇದರಿಂದಾಗಿ ಸ್ಥಳೀಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ದಿನನಿತ್ಯ ಪರದಾಡುವಂತಾಗಿದೆ. ರಸ್ತೆ ಸರಿಪಡಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿಂದೆ ಗ್ರಾ.ಪಂ ಕಾರ್ಯದರ್ಶಿ ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ನೀಡಿದ್ದ ಭರವಸೆಯೂ ಹುಸಿಯಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪುತ್ತಿಲ ಪರಿವಾರದ ಕಾರ್ಯಕರ್ತರು ಮತ್ತೆ ಬೀದಿಗಿಳಿದು ಧರಣಿ ನಡೆಸಿದರು.

ಅಧಿಕಾರಿಗಳು ನೆಪ ಹೇಳುವುದು ಬಿಡಲಿ: ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, “ಅಧಿಕಾರಿಗಳು ಅನುದಾನದ ಕೊರತೆಯನ್ನು ನೆಪವಾಗಿ ಹೇಳಿ ಜಾರಿಕೊಳ್ಳುವುದು ಸರಿಯಲ್ಲ. ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಅಗತ್ಯ ಕಾಮಗಾರಿ ನಡೆಸುವುದು ಅಧಿಕಾರಿಗಳ ಪ್ರಥಮ ಕರ್ತವ್ಯ” ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ನಾರಾಯಣ ಪ್ರಕಾಶ್ ಮಾತನಾಡಿ, “ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಈ ಭಾಗಕ್ಕೆ ಸಮರ್ಪಕ ರಸ್ತೆ ಹಾಗೂ ಬಸ್‌ ಸೌಲಭ್ಯ ಸಿಕ್ಕಿಲ್ಲದಿರುವುದು ದುರಂತ. ಅಧಿಕಾರಿಗಳು ಅಹಂಕಾರ ಬಿಟ್ಟು ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಬೇಕು. ಕೊಟ್ಟ ಭರವಸೆಯಂತೆ 15 ದಿನಗಳೊಳಗೆ ಕಾಮಗಾರಿ ಆರಂಭವಾಗದಿದ್ದರೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಉಗ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

15 ದಿನಗಳಲ್ಲಿ ಕಾಮಗಾರಿ ಪೂರ್ಣ: ತಾಪಂ ಇಒ ಭರವಸೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಇಒ ನವೀನ್ ಭಂಡಾರಿ, “ಚರಂಡಿ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ಆರಂಭಿಸಲಾಗುವುದು. ರಸ್ತೆ ದುರಸ್ತಿಯನ್ನು ಮುಂದಿನ 15 ದಿನಗಳ ಒಳಗೆ ಪೂರ್ಣಗೊಳಿಸಲಾಗುವುದು. ಸದ್ಯ ಚರಂಡಿ ಕಾಮಗಾರಿಗಾಗಿ ಗ್ರಾಮ ಪಂಚಾಯಿತಿ ಅನುದಾನದಿಂದ ₹20 ಸಾವಿರ ಮೀಸಲಿರಿಸಲಾಗಿದೆ” ಎಂದು ಸ್ಪಷ್ಟನೆ ನೀಡಿದರು. ಅಧಿಕಾರಿಗಳ ಸ್ಪಂದನೆಯ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರದ ನೂರಾರು ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Continue Reading

cyber crime

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ; ಕಳೆದುಕೊಂಡ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕರು

Published

on

₹22,500 ಕಳೆದುಕೊಂಡ ಮಹಿಳೆಗೆ ಹೆಚ್ಚುವರಿಯಾಗಿ ₹7,500 ಸೇರಿಸಿ ಒಟ್ಟು ₹30 ಸಾವಿರ ನೆರವು • “ನನ್ನ ಹೆಸರು ಹೇಳಿ ವಂಚಿಸಿದ್ದು ನೋವಿನ ಸಂಗತಿ” ಎಂದ ಶಾಸಕ

ಪುತ್ತೂರು, ಜು. 29: ಪುತ್ತೂರು ಶಾಸಕ ಅಶೋಕ್ ರೈ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಳ್ಯ ತಾಲೂಕಿನ ಮಹಿಳೆಯೊಬ್ಬರಿಗೆ ವಂಚನೆ ಎಸಗಿದ ಪ್ರಕರಣದಲ್ಲಿ, ಮಹಿಳೆ ಕಳೆದುಕೊಂಡ ಹಣವನ್ನು ಸ್ವತಃ ಭರಿಸುವ ಮೂಲಕ ಶಾಸಕ ಅಶೋಕ್ ರೈ ಮಾನವೀಯತೆ ಮೆರೆದಿದ್ದಾರೆ.

ಸುಳ್ಯ ಕಸಬಾ ದಕ್ಷಿಣ ಬೀರಮಂಗಲ ನಿವಾಸಿ, ಗಣೇಶ್ ಅವರ ಪತ್ನಿ ಪುಷ್ಪಾವತಿ ವಂಚನೆಗೆ ಒಳಗಾದ ಮಹಿಳೆ. ಪುಷ್ಪಾವತಿಯವರ ಪತಿ ಗಣೇಶ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗೆ ನೆರವಾಗುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಪ್ರಕಟಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ್ದ ದಾನಿಗಳು ಒಟ್ಟು ₹22,500 ಹಣವನ್ನು ಪುಷ್ಪಾವತಿಯವರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು.

ಜು. 27ರಂದು ಸಂಜೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ, “ಪುತ್ತೂರು ಶಾಸಕ ಅಶೋಕ್ ರೈ ಅವರು ನಿಮಗೆ ₹3 ಲಕ್ಷ ಆರ್ಥಿಕ ನೆರವು ನೀಡಲು ಒಪ್ಪಿದ್ದಾರೆ. ಆದರೆ ಹಣ ಬಿಡುಗಡೆ ಮಾಡಲು ಮೊದಲು ₹25 ಸಾವಿರ ತೆರಿಗೆ ಪಾವತಿಸಬೇಕು” ಎಂದು ನಂಬಿಸಿದ್ದಾನೆ.

ಶಾಸಕರ ಹೆಸರಿನ ಮೇಲಿನ ವಿಶ್ವಾಸದಿಂದ ಪುಷ್ಪಾವತಿ ತಮ್ಮ ಖಾತೆಯಲ್ಲಿದ್ದ ₹22,500 ಅನ್ನು ಫೋನ್‌ಪೇ ಮೂಲಕ ಆರೋಪಿಗೆ ವರ್ಗಾಯಿಸಿದ್ದಾರೆ. ಬಳಿಕ ಆರೋಪಿಯ ಮೊಬೈಲ್ ಸಂಖ್ಯೆ ಸ್ವಿಚ್ ಆಫ್ ಆಗಿದ್ದು, ತಾವು ವಂಚನೆಗೆ ಒಳಗಾಗಿರುವುದು ತಿಳಿದು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಷಯ ತಿಳಿದು ಸ್ಪಂದಿಸಿದ ಶಾಸಕ

ಈ ಘಟನೆ ಬಗ್ಗೆ ಮಾಹಿತಿ ಪಡೆದ ಶಾಸಕ ಅಶೋಕ್ ರೈ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಹೆಸರು ಬಳಸಿಕೊಂಡು ಸಂಕಷ್ಟದಲ್ಲಿದ್ದ ಮಹಿಳೆಯನ್ನು ವಂಚಿಸಿರುವುದು ಅಮಾನವೀಯ ಕೃತ್ಯ ಎಂದು ಅವರು ಹೇಳಿದ್ದಾರೆ.

ಪತ್ರಕರ್ತರ ಮೂಲಕ ವಿಷಯ ತಿಳಿದ ಬಳಿಕ, “ನನ್ನ ಹೆಸರಿನ ಮೇಲಿನ ನಂಬಿಕೆಯಿಂದ ಮಹಿಳೆ ಹಣ ಕಳುಹಿಸಿದ್ದಾರೆ. ಅವರು ಕಳೆದುಕೊಂಡ ಹಣವನ್ನು ನಾನು ಭರಿಸುತ್ತೇನೆ” ಎಂದು ಭರವಸೆ ನೀಡಿದರು.

ಅದರಂತೆ ಮಹಿಳೆ ಕಳೆದುಕೊಂಡ ₹22,500 ಜೊತೆಗೆ ಹೆಚ್ಚುವರಿಯಾಗಿ ₹7,500 ಸೇರಿಸಿ ಒಟ್ಟು ₹30,000 ಅನ್ನು ಅವರ ಖಾತೆಗೆ ಜಮೆ ಮಾಡುವುದಾಗಿ ತಿಳಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಶಾಸಕರ ಈ ಮಾನವೀಯ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಮಯೋಚಿತ ನೆರವು ನೀಡಿದ ಕಾರ್ಯ ಶ್ಲಾಘನೀಯವಾಗಿದೆ.

Continue Reading

Trending

Copyright © 2025 Deevatige

error: Content is protected !!