Dakshina Kannada
ಧಾರ್ಮಿಕ ಸಂಪ್ರದಾಯದ ಮೇಲೆ ಸವಾರಿ ಮಾಡಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ- ಸತೀಶ್ ಕುಂಪಲ
ಕೇಪು : ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸಹಕಾರ ಕೊಡಬೇಕೋ ಅದನ್ನು ಭಾರತೀಯ ಜನತಾ ಪಾರ್ಟಿ ಪೂರ್ತಿಯಾಗಿ ನೀಡಿದೆ. ಆದರೆ, ಹಿಂದೂ ಧರ್ಮದ ಆಧಾರದ ಮೇಲೆ ನಡೆಯುವ ಈ ಧಾರ್ಮಿಕ ಸಂಪ್ರದಾಯದ ಮೇಲೆ ಸವಾರಿ ಮಾಡಿದರೆ ಮುಂದಿನ ದಿನಗಳಲ್ಲಿ ನೀವು ಅನುಭವಿಸುತ್ತೀರಿ. ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು

ಅವರು ಬಂಟ್ವಾಳ ತಾಲೂಕು ಕೇಪು ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಕಾರಣಿಕ ಕ್ಷೇತ್ರಕ್ಕೆ ಆಗಮಿಸಿ ನಮ್ಮ ಹಿರಿಯರಿಂದಲೇ ಬಂದಿರುವ ಸಾಂಪ್ರದಾಯಿಕ ಆಚರಣೆಗಳಿಗೆ ತಡೆಯಾಗುತ್ತಿರುವ ಬಗ್ಗೆ ಮಾತನಾಡುತ್ತಾ, ಹಿಂದೂ ಸಂಪ್ರದಾಯಗಳ ಮೇಲೆ ಸರಕಾರ ಸವಾರಿ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ, ಸಂಪ್ರದಾಯವನ್ನು ನಡೆಸಲು ಮುಕ್ತ ಅವಕಾಶವನ್ನು ನೀಡಿ, ನೀವು ಸಂಪ್ರದಾಯಿಕವಾಗಿ ನಡೆಯುವ ಕೋಳಿ ಅಂಕವನ್ನು ಜೂಜು ಎಂದು ಏಕೆ ಕರೆಯುತ್ತೀರಿ ? ಜೂಜು ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿ ನಮ್ಮ ಅಭ್ಯಂತರವಿಲ್ಲ. ಆದರೆ ಸಂಪ್ರದಾಯದ ಮೇಲೆ ಕ್ರಮ ಏಕೆ ? ನಾಳೆ ದೇವಸ್ಥಾನದಲ್ಲಿ ಪೂಜೆ ಮಾಡಬೇಡಿ, ದೈವಸ್ಥಾನದಲ್ಲಿ ಸೇವೆ ನಿಲ್ಲಿಸಿ ಹೇಳುತ್ತೀರಿ ನಿಮ್ಮ ಸರಕಾರ ಬಂದ ತಕ್ಷಣ ಸರಕಾರ ಹೇಳಿದ ಹಾಗೆ, ಮಂತ್ರಿಗಳು ಹೇಳಿದ ಹಾಗೆ ಶಾಸಕರು ಹೇಳಿದ ಹಾಗೆ ಜನ ಕೇಳ ಬೇಕಾ ? ಪಾಪದವರ ಮೇಲೆ ಕೇಸು ಹಾಕಿ ಏನು ಸಾಧಿಸುತ್ತೀರಿ ? ಪೊಲೀಸರು ಮಾಡುತ್ತಾರೆಂದರೆ ಆಡಳಿತ ಕಣ್ಣುಮುಚ್ಚಿ ಕುಳಿತುಕೊಂಡಿದೆಯಾ ? ಕೋಳಿಅಂಕಕ್ಕೆ ಬಂದು ಶಾಸಕರು ಹೋರಾಟ ಮಾಡಬೇಕಾ ? ಕಾಂಗ್ರೇಸ್ ಸರಕಾರವಿದ್ದು, ಕಾಂಗ್ರೇಸ್ ಶಾಸಕರು ಇಲ್ಲಿಗೆ ಬಂದು ಕೋಳಿಅಂಕ ಮಾಡ್ಲಿಕ್ಕೆ ನಾನು ನಿಮ್ಮೊಂದಿಗಿದ್ದೇನೆ ಎಂದರೆ ಏನು ? ಉಸ್ತುವಾರಿ ಸಚಿವರ ಮೂಲಕ ಸರಪಡಿಸಲಿಕ್ಕೆ ಆಗಲಿಲ್ಲವಾ ? ಈ ರೀತಿ ಅತ್ಯಂತ ಕೆಟ್ಟ ಸಂಪ್ರದಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಮೂಲಕ ಕಾಂಗ್ರೇಸ್ ಸರಕಾರ ಮಾಡಿಸುತ್ತಿದೆ. ಪ್ರಜಾತಂತ್ರ ವ್ಯವಸ್ಥೇಯಲ್ಲಿ ಸಂವಿದಾನ ಅಂತ ಹೇಳುತ್ತಾ ಸಂವಿದಾನದ ಎಲ್ಲಾ ವ್ಯವಸ್ಥೆಗಳನ್ನು ಮುಟ್ಟುಗೋಲು ಹಾಕುವ ರೀತಿಯಲ್ಲಿ ವರ್ತಿಸುತ್ತಿರುವ ಕಾಂಗ್ರೇಸ್ ಸರಕಾರದ ನಿಲುವನ್ನು ಈ ಸಂದರ್ಭದಲ್ಲಿ ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದರು.

ಇವತ್ತು ಮಲರಾಯ ದೈವದ ಸಮ್ಮುಖದಲ್ಲಿ ಕೋಳಿ ಹರಿಕೆ ಸೇವೆ ನಡೆಯಲಿದ್ದು, ಅವರಿಗೆ ಧಾರ್ಮಿಕ ಸೇವೆ ನಡೆಸಲು ಪೊಲೀಸ್ ಇಲಾಖೆ ಮತ್ತು ಸರಕಾರ ಮುಕ್ತವಾಗಿ ಸಹಕಾರವನ್ನು ನೀಡಬೇಕು ಎಂದು ವಿನಂತಿಸುವುದಕ್ಕಾಗಿ ನಾವು ಜನರ ಪರವಾಗಿ ಜವಾಬ್ಧಾರಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದರು. ಈ ಜಿಲ್ಲೆಯಲ್ಲಿ ನಡೆಯುವಂತಹ ಸಂಪ್ರದಾಯಿಕ ಆಚರಣೆಗಳಿಗೆ ಆಡಳಿತ ವ್ಯವಸ್ಥೆ ವಿರುದ್ಧವಾಗಿ ಹೋದರೆ ಬಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೊಂದಿಗೆ ನಾವು ಯಾವತ್ತೂ ನಿಲ್ಲುತ್ತೇವೆ. ಜನರ ಮದ್ಯೆ ನಿಂತು ಸಹಕಾರ ಮಾಡುತ್ತೇವೆ ಎಂದರು. ಕಾನೂನನ್ನು ಗೌರವಿಸಿಕೊಂಡು ಸಂಪ್ರದಾಯ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿ ನಾನೂ ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆಯನ್ನು ನೀಡಿದರು.
ಜಿಲ್ಲಾಧ್ಯಕ್ಷರ ಜೊತೆಗೆ ಮಾಜಿ ಶಾಸಕರಾದ ಸಂಜೀವ ಮಠಂದೂರು,ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಉಜಿರೆಮಾರು, ವಿಟ್ಲ ಪಟ್ಟಣ ಪಂಚಾಯತ್ ಅದ್ಯಕ್ಷರಾದ ಕರುಣಾಕರ ನಾಯ್ತೊಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಆಶೋಕ್ ಕುಮಾರ್ ಶೆಟ್ಟಿ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಳೆದ ಹಲವಾರು ವರ್ಷಗಳಿಂದ ಕೋಮು ಸಂಘರ್ಷಗಳಿoದ ತತ್ತರಿಸುತ್ತಿದ್ದ ಕರಾವಳಿಯನ್ನು ಹತೋಟಿಗೆ ತರಲು ಪ್ರತಿಯೊಬ್ಬರಿಗೂ ಸಾಮರಸ್ಯದ ಜೀವನ ಮತ್ತು ನ್ಯಾಯ ಸಮ್ಮತವಾದ ಬದುಕು ನೀಡಲು ಆಡಳಿತ ವ್ಯವಸ್ಥೆ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಬಳಿಕ ಬಹುತೇಕ ಅಕ್ರಮ ಚಟುವಟಿಕೆಗಳು ಸೇರಿದಂತೆ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಿತ್ತು. ಅದರಂತೆ ಜೂಜು, ಕೋಳಿಅಂಕ ಸೇರಿದಂತೆ ತಡರಾತ್ರಿಗಳಲ್ಲಿ ನಡೆಯುವ ಮೋಜಿನ ಕಾರ್ಯಕ್ರಮಗಳಿಗೂ ಬ್ರೇಕ್ ನೀಡಲಾಗಿತ್ತು. ಆದರೆ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ಧಾರ್ಮಿಕ ನಂಟು ಹೊಂದಿರುವ ಜೂಜುರಹಿತವಾಗಿ ನಡೆಯುವ ಕೋಳಿ ಅಂಕಕ್ಕೆ ಕೋಳಿ ಅಂಕ ಪ್ರಿಯರು, ದೈವಾಭಿಮಾನಿಗಳು ಕೊನೆಯ ಘಳಿಗೆವರೆಗೂ ಪರವಾನಿಗೆಯ ನಿರೀಕ್ಷೆಯಲ್ಲಿದ್ದರು. ಆದರೆ ಕೋಳಿ ಅಂಕಕ್ಕೆ ಪರ್ಮಿಷನ್ ಸಿಗಲಿಲ್ಲ ಎಂದರೆ ನಾವು ಜೂಜುರಹಿತವಾಗಿ ಕೋಳಿಅಂಕವನ್ನು ಸಾಂಪ್ರದಾಯಿಕವಾಗಿ ಮಾಡಲೇಬೇಕು ಎಂಬುವುದು ಭಕ್ತರ ನಿಲುವು ಆಗಿತ್ತು. ಇದೀಗ ಸಂಪ್ರದಾಯ ಮತ್ತು ಕಾನೂನು ವ್ಯವಸ್ಥೆಗಳ ಮದ್ಯೆ ರಾಜಕೀಯ ನುಸುಳಿದೆ. ಮುಂದೆ ಏನಾಗುವುದೋ ಕಾದುನೋಡಬೇಕು.
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
