Bantawala
ಬಿಬಿಕೆ ಸ್ಪೋರ್ಟ್ಸ ಕ್ಲಬ್ ಇದರ ವತಿಯಿಂದ ಎರಡು ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾಕೂಟ ಯಶಸ್ವಿಯಾಗಿ ಮುಕ್ತಾಯ.

ಬಿಗ್ ಬ್ಲಾಸ್ಟರ್ ಸ್ಪೋರ್ಟ್ಸ್ ಕ್ಲಬ್, ಕೋಡಪದವು ಇದರ ವತಿಯಿಂದ ಕೋಡಪದವು ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರೀಮಿಯರ್ ಲೀಗ್ ಸೀಸನ್–5 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಭಾನುವಾರ ಕ್ರೀಡಾ ಉತ್ಸಾಹ, ಜನಸಾಗರ ಹಾಗೂ ಸಂಭ್ರಮದ ನಡುವೆ ಯಶಸ್ವಿಯಾಗಿ ಮುಕ್ತಾಯವಾಯಿತು. ನೇರ ಪ್ರಸಾರದ ಮೂಲಕ ನಡೆದ ಈ ಪಂದ್ಯಾಟವು ಬಂಟ್ವಾಳ ತಾಲೂಕಿನ ಅತೀದೊಡ್ಡ ಪಂದ್ಯಾಕೂಟ ಎಂದೆನಿಸಿತು.ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯಿತು.
ಈ ಬೃಹತ್ ಪಂದ್ಯಾಟದಲ್ಲಿ ಎರಡೂ ಜಿಲ್ಲೆಗಳ ಹೆಸರಾಂತ ಐಕಾನ್ ಆಟಗಾರರನ್ನು ಒಳಗೊಂಡ 8 ತಂಡಗಳು ಭಾಗವಹಿಸಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಕ್ಷಣಗಳನ್ನು ನೀಡಿತು. ಗ್ರಾಮೀಣ ಕ್ರೀಡಾಕ್ಷೇತ್ರಕ್ಕೆ ಹೊಸ ಶಕ್ತಿ ತುಂಬಿದ ಈ ಲೀಗ್ ಮಾದರಿಯ ಟೂರ್ನಿ, ಸಂಘಟನೆಯ ಶಿಸ್ತು, ವ್ಯವಸ್ಥೆ ಹಾಗೂ ಉತ್ಸಾಹದಿಂದ ಮಾದರಿಯಾಗಿ ಮೂಡಿಬಂದಿತು.
ಪಂದ್ಯಾಟದ ಅಂಗವಾಗಿ ನಡೆದ ಸಾಧಕರ ಸನ್ಮಾನ ಸಮಾರಂಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾಧ್ಯಮ ಕ್ಷೇತ್ರದ ಸನ್ಮಾರ್ಗ ಚಾನೆಲ್ ಪ್ರದಾನ ಸಂಪಾದಕ ಎ.ಕೆ. ಕುಕ್ಕಿಲ, ಸಾಮಾಜಿಕ ಸೇವಾ ಕ್ಷೇತ್ರದ ಹಸೈನಾರ್ ತಾಳಿತ್ತನೂಜಿ, ಡಿ ಗ್ರೂಪ್ ವಿಟ್ಲ, ನಿವೃತ್ತ ಶಿಕ್ಷಕಿ ಶಕುಂತಲ, ನಿವೃತ್ತ ಪೊಲೀಸ್ ಅಧಿಕಾರಿ ಮೋನಪ್ಪ ಗೌಡ ಕುಕ್ಕಿಲ, ಹಾಗೂ 14ರ ವಯಸ್ಸಿನಲ್ಲೇ ರಾಷ್ಟ್ರೀಯ ಕಬಡ್ಡಿ ತಂಡವನ್ನು ನಾಲ್ಕು ಬಾರಿ ಪ್ರತಿನಿಧಿಸಿದ ಕುಮಾರಿ ಕೀರ್ತಿ ಅವರನ್ನು ಗೌರವಿಸಲಾಯಿತು.

ರೋಚಕ ಫೈನಲ್ ಪಂದ್ಯದಲ್ಲಿ ಕರೀಂ ಮದಕ ಅವರ ಮಾಲಕತ್ವದ ಅಸೀಪ್ ಕುಲ್ಯಾರ್ ನಾಯಕತ್ವದ ರೋಯಲ್ ಚಾಲೆಂಜರ್ಸ್ ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡರೆ, ಬಾಲಕೃಷ್ಣ ಕುಕ್ಕಿಲ ಅವರ ಮಾಲಕತ್ವದ ಯಶವಂತ ಮದಕ ನಾಯಕತ್ವದ ಮಾರುತಿ ಫ್ರೆಂಡ್ಸ್ ಕೋಡಪದವು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ರೋಯಲ್ ಚಾಲೇಂಜರ್ಸ್ ತಂಡದ ವಿಶಾಲ್ ಉತ್ತಮ ದಾಂಡಿಗ ಮತ್ತು ಸರಣಿಶ್ರೇಷ್ಠಿ ಪ್ರಶಸ್ತಿ ಪಡೆಸುಕೊಂಡರೆ,ಮಾರುತಿ ತಂಡದ ಶೀನಾಥ ಉತ್ತಮ ಎಸೆತಗಾರ ಪ್ರಶಸ್ತಿ ಪಡೆದುಕೊಂಡರು.ಉಭಯ ತಂಡಗಳ ಹೋರಾಟ ಕ್ರೀಡಾಭಿಮಾನಿಗಳಿಂದ ಭಾರೀ ಪ್ರಶಂಸೆಗೆ ಪಾತ್ರವಾಯಿತು.

ಸಮಾರೋಪ ಸಮಾರಂಭದಲ್ಲಿ ಸಮಾಜಮುಖಿ ಚಿಂತನೆಯ ಭಾಗವಾಗಿ ದ.ಕ. ಜಿ. ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಡಪದವು ಇಲ್ಲಿಗೆ ಸಿ.ಸಿ. ಕ್ಯಾಮರಾವನ್ನು SDMC ಅದ್ಯಕ್ಷರಿಗೆ ಕೊಡುಗೆಯಾಗಿ ನೀಡಲಾಯಿತು. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪಂದ್ಯಾಕೂಟದುದ್ದಕ್ಕೂ ಯಾವುದೇ ಗೊಂದಲಗಳಿಲ್ಲದೇ ಉತ್ತಮ ತೀರ್ಪುಗಾರರಾಗಿ ಪುರುಷೋತ್ತಮ್ ಬೆಳ್ಳಾರೆ, ಅಲಿ ಬೊನ್ಯಕುಕ್ಕು,ಮುಸ್ತಫಾ ಶರವು,ಅಜೀಜ್ ಕೆಲಿಂಜ ಕಾರ್ಯನಿರ್ವಹಿಸಿದರು.ವಿವಿಧ ಬಾಷಾ ವೀಕ್ಷಕ ವಿವರಣೆಗಾರರಾಗಿ ಸುಕೇಶ್,ಪಾರೂಕ್ ಬೊನ್ಯಕುಕ್ಕು,ಸಿದ್ದೀಕ್ ಕೋಡಪದವು,ಇಕ್ಬಾಲ್ ಸುರಿಬೈಲ್ ಪ್ರೇಕ್ಷಕರ ಮನರಂಜಿಸಿದರು.ಇವರನ್ನು ಸಮಾರೋಪ ಸಮಾರಂಭದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್, ಜಿ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಕೆಲಿಂಜ SDMC ಅದ್ಯಕ್ಷರಾದ ಮೋಹಿತ್ ಶೆಟ್ಟಿ,ವಿಟ್ಲಪಡ್ನೂರು ಸೊಸೈಟಿ ಅಧ್ಯಕ್ಷ ನಾರಾಯಣ ಶೆಟ್ಟಿ ಕುಲ್ಯಾರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಲತಾ ಮದಕ, ಸದಸ್ಯರಾದ ಎ.ಬಿ. ಅಬ್ದುಲ್ಲಾ, ಸಂದೇಶ್ ಶೆಟ್ಟಿ ಬಿಕ್ನಾಜೆ, ಡಿ.ಗ್ರೂಪ್ ಇದರ ಅದ್ಯಕ್ಷರಾದ ಶಾಕೀರ್ ಅಳಕೆಮಜಲು,ಮಹಮ್ಮದ್ ಮಂಚಿ, ರಾಜೇಶ್ ಬಾರೆಬೆಟ್ಟು, ಹರ್ಷದ್ ಕುಕ್ಕಿಲ, ಸೋಮಶೇಖರ್ ಗೌಡ ತಾಳಿತ್ತನೂಜಿ, ಶಾಕೀರ್ ಅಳಕೆಮಜಲು, ಸಂತೋಷ್ ಕುಮಾರ್ ತಾಳಿತ್ತನೂಜಿ,ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಅದ್ಯಕ್ಷರಾದ ರಿಯಾಜ್ ತಾಳಿತ್ತನೂಜಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಕ್ರೀಡಾ ಗೌರವ ಹೆಚ್ಚಿಸಿದರು. ಬಿಬಿಕೆ ತಂಡದ ಸಿದ್ದೀಕ್ ಪೆಲ್ತಡ್ಕ, ಕರೀಂ ಮದಕ,ಹಾರೀಸ್ ಕುಕ್ಕಿಲ, ಹಂಝ ತಾಳಿತ್ತನೂಜಿ ಸೇರಿದಂತೆ ಅಧಿಕೃತ ಸಲಹೆಗಾರರಾಗಿ ಪಂದ್ಯಾಕೂಟದುದ್ದಕ್ಕೂ ಸಹಕರಿಸಿದರು.
Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
Bantawala
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನೆಯ ಸಭೆ ನಡೆಯಿತು.
ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

