Bantawala
ಬಿಬಿಕೆ ಸ್ಪೋರ್ಟ್ಸ ಕ್ಲಬ್ ಇದರ ವತಿಯಿಂದ ಎರಡು ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾಕೂಟ ಯಶಸ್ವಿಯಾಗಿ ಮುಕ್ತಾಯ.
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2025/12/WhatsApp-Image-2025-12-22-at-00.20.47-1-1000x600.jpeg&description=ಬಿಬಿಕೆ ಸ್ಪೋರ್ಟ್ಸ ಕ್ಲಬ್ ಇದರ ವತಿಯಿಂದ ಎರಡು ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾಕೂಟ ಯಶಸ್ವಿಯಾಗಿ ಮುಕ್ತಾಯ.', 'pinterestShare', 'width=750,height=350'); return false;" title="Pin This Post">

ಬಿಗ್ ಬ್ಲಾಸ್ಟರ್ ಸ್ಪೋರ್ಟ್ಸ್ ಕ್ಲಬ್, ಕೋಡಪದವು ಇದರ ವತಿಯಿಂದ ಕೋಡಪದವು ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರೀಮಿಯರ್ ಲೀಗ್ ಸೀಸನ್–5 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಭಾನುವಾರ ಕ್ರೀಡಾ ಉತ್ಸಾಹ, ಜನಸಾಗರ ಹಾಗೂ ಸಂಭ್ರಮದ ನಡುವೆ ಯಶಸ್ವಿಯಾಗಿ ಮುಕ್ತಾಯವಾಯಿತು. ನೇರ ಪ್ರಸಾರದ ಮೂಲಕ ನಡೆದ ಈ ಪಂದ್ಯಾಟವು ಬಂಟ್ವಾಳ ತಾಲೂಕಿನ ಅತೀದೊಡ್ಡ ಪಂದ್ಯಾಕೂಟ ಎಂದೆನಿಸಿತು.ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯಿತು.
ಈ ಬೃಹತ್ ಪಂದ್ಯಾಟದಲ್ಲಿ ಎರಡೂ ಜಿಲ್ಲೆಗಳ ಹೆಸರಾಂತ ಐಕಾನ್ ಆಟಗಾರರನ್ನು ಒಳಗೊಂಡ 8 ತಂಡಗಳು ಭಾಗವಹಿಸಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಕ್ಷಣಗಳನ್ನು ನೀಡಿತು. ಗ್ರಾಮೀಣ ಕ್ರೀಡಾಕ್ಷೇತ್ರಕ್ಕೆ ಹೊಸ ಶಕ್ತಿ ತುಂಬಿದ ಈ ಲೀಗ್ ಮಾದರಿಯ ಟೂರ್ನಿ, ಸಂಘಟನೆಯ ಶಿಸ್ತು, ವ್ಯವಸ್ಥೆ ಹಾಗೂ ಉತ್ಸಾಹದಿಂದ ಮಾದರಿಯಾಗಿ ಮೂಡಿಬಂದಿತು.
ಪಂದ್ಯಾಟದ ಅಂಗವಾಗಿ ನಡೆದ ಸಾಧಕರ ಸನ್ಮಾನ ಸಮಾರಂಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾಧ್ಯಮ ಕ್ಷೇತ್ರದ ಸನ್ಮಾರ್ಗ ಚಾನೆಲ್ ಪ್ರದಾನ ಸಂಪಾದಕ ಎ.ಕೆ. ಕುಕ್ಕಿಲ, ಸಾಮಾಜಿಕ ಸೇವಾ ಕ್ಷೇತ್ರದ ಹಸೈನಾರ್ ತಾಳಿತ್ತನೂಜಿ, ಡಿ ಗ್ರೂಪ್ ವಿಟ್ಲ, ನಿವೃತ್ತ ಶಿಕ್ಷಕಿ ಶಕುಂತಲ, ನಿವೃತ್ತ ಪೊಲೀಸ್ ಅಧಿಕಾರಿ ಮೋನಪ್ಪ ಗೌಡ ಕುಕ್ಕಿಲ, ಹಾಗೂ 14ರ ವಯಸ್ಸಿನಲ್ಲೇ ರಾಷ್ಟ್ರೀಯ ಕಬಡ್ಡಿ ತಂಡವನ್ನು ನಾಲ್ಕು ಬಾರಿ ಪ್ರತಿನಿಧಿಸಿದ ಕುಮಾರಿ ಕೀರ್ತಿ ಅವರನ್ನು ಗೌರವಿಸಲಾಯಿತು.

ರೋಚಕ ಫೈನಲ್ ಪಂದ್ಯದಲ್ಲಿ ಕರೀಂ ಮದಕ ಅವರ ಮಾಲಕತ್ವದ ಅಸೀಪ್ ಕುಲ್ಯಾರ್ ನಾಯಕತ್ವದ ರೋಯಲ್ ಚಾಲೆಂಜರ್ಸ್ ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡರೆ, ಬಾಲಕೃಷ್ಣ ಕುಕ್ಕಿಲ ಅವರ ಮಾಲಕತ್ವದ ಯಶವಂತ ಮದಕ ನಾಯಕತ್ವದ ಮಾರುತಿ ಫ್ರೆಂಡ್ಸ್ ಕೋಡಪದವು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ರೋಯಲ್ ಚಾಲೇಂಜರ್ಸ್ ತಂಡದ ವಿಶಾಲ್ ಉತ್ತಮ ದಾಂಡಿಗ ಮತ್ತು ಸರಣಿಶ್ರೇಷ್ಠಿ ಪ್ರಶಸ್ತಿ ಪಡೆಸುಕೊಂಡರೆ,ಮಾರುತಿ ತಂಡದ ಶೀನಾಥ ಉತ್ತಮ ಎಸೆತಗಾರ ಪ್ರಶಸ್ತಿ ಪಡೆದುಕೊಂಡರು.ಉಭಯ ತಂಡಗಳ ಹೋರಾಟ ಕ್ರೀಡಾಭಿಮಾನಿಗಳಿಂದ ಭಾರೀ ಪ್ರಶಂಸೆಗೆ ಪಾತ್ರವಾಯಿತು.

ಸಮಾರೋಪ ಸಮಾರಂಭದಲ್ಲಿ ಸಮಾಜಮುಖಿ ಚಿಂತನೆಯ ಭಾಗವಾಗಿ ದ.ಕ. ಜಿ. ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಡಪದವು ಇಲ್ಲಿಗೆ ಸಿ.ಸಿ. ಕ್ಯಾಮರಾವನ್ನು SDMC ಅದ್ಯಕ್ಷರಿಗೆ ಕೊಡುಗೆಯಾಗಿ ನೀಡಲಾಯಿತು. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪಂದ್ಯಾಕೂಟದುದ್ದಕ್ಕೂ ಯಾವುದೇ ಗೊಂದಲಗಳಿಲ್ಲದೇ ಉತ್ತಮ ತೀರ್ಪುಗಾರರಾಗಿ ಪುರುಷೋತ್ತಮ್ ಬೆಳ್ಳಾರೆ, ಅಲಿ ಬೊನ್ಯಕುಕ್ಕು,ಮುಸ್ತಫಾ ಶರವು,ಅಜೀಜ್ ಕೆಲಿಂಜ ಕಾರ್ಯನಿರ್ವಹಿಸಿದರು.ವಿವಿಧ ಬಾಷಾ ವೀಕ್ಷಕ ವಿವರಣೆಗಾರರಾಗಿ ಸುಕೇಶ್,ಪಾರೂಕ್ ಬೊನ್ಯಕುಕ್ಕು,ಸಿದ್ದೀಕ್ ಕೋಡಪದವು,ಇಕ್ಬಾಲ್ ಸುರಿಬೈಲ್ ಪ್ರೇಕ್ಷಕರ ಮನರಂಜಿಸಿದರು.ಇವರನ್ನು ಸಮಾರೋಪ ಸಮಾರಂಭದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್, ಜಿ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಕೆಲಿಂಜ SDMC ಅದ್ಯಕ್ಷರಾದ ಮೋಹಿತ್ ಶೆಟ್ಟಿ,ವಿಟ್ಲಪಡ್ನೂರು ಸೊಸೈಟಿ ಅಧ್ಯಕ್ಷ ನಾರಾಯಣ ಶೆಟ್ಟಿ ಕುಲ್ಯಾರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಲತಾ ಮದಕ, ಸದಸ್ಯರಾದ ಎ.ಬಿ. ಅಬ್ದುಲ್ಲಾ, ಸಂದೇಶ್ ಶೆಟ್ಟಿ ಬಿಕ್ನಾಜೆ, ಡಿ.ಗ್ರೂಪ್ ಇದರ ಅದ್ಯಕ್ಷರಾದ ಶಾಕೀರ್ ಅಳಕೆಮಜಲು,ಮಹಮ್ಮದ್ ಮಂಚಿ, ರಾಜೇಶ್ ಬಾರೆಬೆಟ್ಟು, ಹರ್ಷದ್ ಕುಕ್ಕಿಲ, ಸೋಮಶೇಖರ್ ಗೌಡ ತಾಳಿತ್ತನೂಜಿ, ಶಾಕೀರ್ ಅಳಕೆಮಜಲು, ಸಂತೋಷ್ ಕುಮಾರ್ ತಾಳಿತ್ತನೂಜಿ,ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಅದ್ಯಕ್ಷರಾದ ರಿಯಾಜ್ ತಾಳಿತ್ತನೂಜಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಕ್ರೀಡಾ ಗೌರವ ಹೆಚ್ಚಿಸಿದರು. ಬಿಬಿಕೆ ತಂಡದ ಸಿದ್ದೀಕ್ ಪೆಲ್ತಡ್ಕ, ಕರೀಂ ಮದಕ,ಹಾರೀಸ್ ಕುಕ್ಕಿಲ, ಹಂಝ ತಾಳಿತ್ತನೂಜಿ ಸೇರಿದಂತೆ ಅಧಿಕೃತ ಸಲಹೆಗಾರರಾಗಿ ಪಂದ್ಯಾಕೂಟದುದ್ದಕ್ಕೂ ಸಹಕರಿಸಿದರು.
arrest
ವಿಟ್ಲ ಪೊಲೀಸರ ಬಲೆಗೆ ಬಿದ್ದ ಫರ್ಟಿಲೈಸರ್ ಮಾಫಿಯಾ; ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ತಂಡದಿಂದ ದಾಳಿ;ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ; ಅಕ್ರಮ ದಂಧೆ ಜಾಲ ಬೇಧಿಸಿದ ಖಾಕಿ ಪಡೆ!
Breaking News
ವಿಟ್ಲ: ರೈತರಿಗೆ ಕೇಂದ್ರ ಸರ್ಕಾರವು ರಿಯಾಯಿತಿ (ಸಬ್ಸಿಡಿ) ದರದಲ್ಲಿ ನೀಡುವ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿ, ಚೀಲಗಳನ್ನು ಬದಲಾಯಿಸಿ ಬೇರೆಡೆಗೆ ಹೆಚ್ಚಿನ ಬೆಲೆಗೆ ಸಾಗಾಟ ಮಾಡುತ್ತಿದ್ದ ರಾಜ್ಯಮಟ್ಟದ ವ್ಯವಸ್ಥಿತ ಜಾಲವೊಂದನ್ನು ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ತಂಡ ಯಶಸ್ವಿಯಾಗಿ ಬೇಧಿಸಿದೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ಹಾಗೂ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ಬಂಧನ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಖಂಡಿಗ ಸರ್ಕಾರಿ ಶಾಲೆಯ ಬಳಿಯ ನಿವಾಸಿ ಕೆ. ಮಹಮ್ಮದ್ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ (40) ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ಮನೆಯಲ್ಲೇ ಕಾನೂನುಬಾಹಿರವಾಗಿ ಯೂರಿಯಾ ರಸಗೊಬ್ಬರವನ್ನು ಸಂಗ್ರಹಿಸಿ ಈ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಖದೀಮರ ದಂಧೆಯ ಸ್ವರೂಪ: ಕೇಂದ್ರ ಸರ್ಕಾರವು ರೈತರಿಗೆ ನೀಡುವ ಸಬ್ಸಿಡಿ ಯೂರಿಯಾವನ್ನು ವಿವಿಧ ಕೃಷಿ ಪತ್ತಿನ ಸಹಕಾರಿ ಸಂಘಗಳು ಅಥವಾ ಸೊಸೈಟಿಗಳ ಮೂಲಕ ಬೇನಾಮಿ ರೈತರ ಹೆಸರಿನಲ್ಲಿ ಈ ಜಾಲವು ಖರೀದಿಸುತ್ತಿತ್ತು. ಬಳಿಕ, ಸರ್ಕಾರದ ಅಧಿಕೃತ ಮೊಹರು ಹೊಂದಿರುವ ಹಳದಿ ಚೀಲಗಳಿಂದ ಯೂರಿಯಾವನ್ನು ಹೊರತೆಗೆದು, ‘ಟೆಕ್ನಿಕಲ್ ಗ್ರೇಡ್’ ಎಂದು ನಮೂದಿಸಲಾದ 50 ಕೆಜಿಯ ಬಿಳಿ ಚೀಲಗಳಿಗೆ ತುಂಬಿಸಲಾಗುತ್ತಿತ್ತು. ಈ ರೀತಿ ಪ್ಯಾಕ್ ಮಾಡಲಾದ ರಸಗೊಬ್ಬರವನ್ನು ಕೇರಳದ ಫ್ಲೈವುಡ್ ಕಾರ್ಖಾನೆಗಳಿಗೆ ಅತ್ಯಧಿಕ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬೃಹತ್ ಪ್ರಮಾಣದ ರಸಗೊಬ್ಬರ, ಲಾರಿ ಜಪ್ತಿ: ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ತಲಾ 50 ಕಿಲೋ ತೂಕದ 342 ಚೀಲ ಯೂರಿಯಾ ರಸಗೊಬ್ಬರ ಪತ್ತೆಯಾಗಿದೆ. ಇದರೊಂದಿಗೆ ತುಮಕೂರು ಮತ್ತು ಹಾಸನ ಭಾಗಗಳಿಂದ ತಲಾ 300 ರೂಪಾಯಿಯಂತೆ ಖರೀದಿಸಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಮತ್ತೊಂದು 300 ಚೀಲ (ಒಟ್ಟು 642 ಚೀಲ) ರಸಗೊಬ್ಬರ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ KA 11 A 6017 ಸಂಖ್ಯೆಯ ಟಾಟಾ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೈತರ ಹಿತಾಸಕ್ತಿಗೆ ಕನ್ನ: ಪ್ರಸ್ತುತ ಮಾರುಕಟ್ಟೆಯಲ್ಲಿ ತಲಾ 50 ಕಿಲೋ ತೂಕದ ಯೂರಿಯಾ ಚೀಲದ ನೈಜ ಬೆಲೆ 1,457.29 ರೂ. ಆಗಿದ್ದು, ಇದಕ್ಕೆ ಕೇಂದ್ರ ಸರ್ಕಾರವು 1,190.79 ರೂ. ಸಬ್ಸಿಡಿ ನೀಡುತ್ತದೆ. ಹೀಗಾಗಿ ರೈತರಿಗೆ ಇದು ಕೇವಲ 266.50 ರೂ.ಗೆ ಲಭ್ಯವಾಗುತ್ತದೆ. ಆದರೆ, ಇಂತಹ ರಿಯಾಯಿತಿ ದರದ ರಸಗೊಬ್ಬರವನ್ನು ರಸಗೊಬ್ಬರ ಮಾರಾಟ ಕೇಂದ್ರಗಳ ಸಿಬ್ಬಂದಿಗಳ ಜೊತೆ ಶಾಮೀಲಾಗಿ ಕಳ್ಳಮಾರ್ಗದಿಂದ ಲೂಟಿ ಮಾಡುತ್ತಿರುವುದು ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ದಾಳಿ ನಡೆದ ಸ್ಥಳಕ್ಕೆ ಬಂಟ್ವಾಳ ಕೃಷಿ ಅಧಿಕಾರಿ ನಂದನ್ ಶೆಣೈ, ಸಹಾಯಕ ನಿರ್ದೇಶಕಿ ವೀಣಾ, ಜಿಲ್ಲಾ ಜಾಗೃತ ದಳದ (ವಿಜಿಲೆನ್ಸ್) ಅಧಿಕಾರಿ ನಾಗವೇಣಿ, ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವಿನಯ್ ಕುಮಾರ್, ಗದಿಗೆಪ್ಪ, ಮಾಯಪ್ಪ, ಸಾಬು ಮಿರ್ಜಿ ಸೇರಿದಂತೆ ಪ್ರಮುಖರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮುಂದಿನ ಕಾನೂನುಕ್ರಮಕ್ಕಾಗಿ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ಕಛೇರಿಯ ಕೃಷಿ ಅಧಿಕಾರಿಗಳಾದ ನಂದನ ಶೆಣೈ ಪಿ, (ತಾಂತ್ರಿಕ)ರವರಿಗೆ ಮಾಹಿತಿ ನೀಡಲಾಗಿ ಸದ್ರಿಯವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ : 127/2026 ಕಲಂ: 3(2)(a), 3(2)(d), 3(2)(c), 3(2)(f) ESSENTIAL COMMODITIES ACT, 1955 ಯಂತೆ ಪ್ರಕರಣ ದಾಖಲಾಗಿರುತ್ತದೆ.




Bantawala
ಕುಳ ಕಂದಾಯ ಕಛೇರಿಯಲ್ಲಿ ಧರಣ್ ದರ್ಭಾರ್..ನಾಗರಿಕರು ಹೈರಾಣ..ಜಿಲ್ಲಾಧಿಕಾರಿಗೆ ದೂರು..
ಬಂಟ್ವಾಳ: ತಾಲೂಕಿನ ಕುಳ ಗ್ರಾಮದ ಆಡಳಿತ ಅಧಿಕಾರಿಯ (VA) ಕಚೇರಿಯು ಸಾರ್ವಜನಿಕರ ಸೇವೆಗೆ ಇರಬೇಕಾದ ಸರ್ಕಾರಿ ಕಚೇರಿಯೋ ಅಥವಾ ಖಾಸಗಿ ವ್ಯಕ್ತಿಗಳ ಹಣ ವಸೂಲಿ ಕೇಂದ್ರವೋ ಎನ್ನುವ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಕಾಡಲಾರಂಭಿಸಿದೆ. ಕಚೇರಿಯೊಳಗೆ ಧರಣ್ ಮಾಣಿ ಎಂಬ ಖಾಸಗಿ ಬ್ರೋಕರ್ನನ್ನು ಕಾನೂನುಬಾಹಿರವಾಗಿ ಕೂರಿಸಿಕೊಂಡು, ಅಮಾಯಕ ಗ್ರಾಮೀಣ ಜನರಿಂದ ಹಣ ಸುಲಿಗೆ ಮಾಡುತ್ತಿರುವ ಜಿಗಣೆ ದಂಧೆ ಬೆಳಕಿಗೆ ಬಂದಿದೆ.
ಕಚೇರಿ ಕೆಲಸಕ್ಕೆ ಬಂದರೆ ಜೇಬಿಗೆ ಕತ್ತರಿ!
ಕುಳ ಮತ್ತು ಇಡ್ಕಿದು ಜೋಡು ಗ್ರಾಮಗಳಾಗಿದ್ದು, ಇಲ್ಲಿನ ಕಂದಾಯ ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಬಡ, ಅಮಾಯಕ ಜನರನ್ನು ಗುರಿಯಾಗಿಸಿಕೊಂಡು ಈ ದಲ್ಲಾಳಿ ಜಾಲ ಕಾರ್ಯಾಚರಣೆ ನಡೆಸುತ್ತಿದೆ. ಕಚೇರಿ ಕೆಲಸಗಳಿಗಾಗಿ ಬರುವ ಸಾರ್ವಜನಿಕರಿಂದ ರಾಜಾರೋಷವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಒಂದು ವೇಳೆ ಬೇಡಿಕೆಯಿಟ್ಟಷ್ಟು ಹಣ ನೀಡದಿದ್ದರೆ, ಅಂತವರ ಫೈಲ್ಗಳನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿಸಿ, ಜನ ಸಾಮಾನ್ಯರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಕುಳ ಗ್ರಾಮಸ್ಥರು ನೇರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲ್ಲಾಳಿಗೆ ಗ್ರಾಮ ಸಹಾಯಕ ರಾಘವನ ‘ಶ್ರೀರಕ್ಷೆ’!
ಈ ಇಡೀ ಅಕ್ರಮ ದಂಧೆಯ ಹಿಂದೆ ಕುಳ ಗ್ರಾಮದ ಸಹಾಯಕನಾಗಿರುವ ಇಡೀದು ಗ್ರಾಮದ ರಾಘವ ಗೌಡ ಎಂಬಾತನ ಪೂರ್ಣ ಶ್ರೀರಕ್ಷೆ ಹಾಗೂ ಶಾಮೀಲಾತಿ ಇರುವುದು ಸಾಕ್ಷ್ಯಸಮೇತ ಬಹಿರಂಗವಾಗಿದೆ. ದಿನಾಂಕ 08/06/2026 ರಂದು ಬೆಳಿಗ್ಗೆ 9:18 ರ ಸುಮಾರಿಗೆ ಸ್ಥಳೀಯ ನಾಗರಿಕರಾದ ಸಚಿನ್ ಉರಿಮಜಲು ಅವರು ಕಚೇರಿಗೆ ಭೇಟಿ ನೀಡಿದಾಗ, ಗ್ರಾಮ ಸಹಾಯಕನ ಅಧಿಕೃತ ಪೀಠದಲ್ಲೇ ಈ ಬ್ರೋಕರ್ ಧರಣ್ ಆಸೀನನಾಗಿ ದರ್ಬಾರ್ ನಡೆಸುತ್ತಿದ್ದ ದೃಶ್ಯ ಕಂಡುಬಂದಿದೆ. ಇದನ್ನು ಸಚಿನ್ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲು ಯತ್ನಿಸಿದಾಗ, ಗ್ರಾಮ ಸಹಾಯಕ ರಾಘವ ತಕರಾರು ಎಬ್ಬಿಸಿದ್ದಲ್ಲದೆ, ಕಚೇರಿಯ ಫೈಲ್/ಪುಸ್ತಕವನ್ನು ಮುಖಕ್ಕೆ ಅಡ್ಡ ಹಿಡಿದು ಅಕ್ರಮವನ್ನು ಮುಚ್ಚಿಹಾಕಲು ಹರಸಾಹಸ ಪಟ್ಟಿದ್ದಾನೆ!
ತನ್ನನ್ನು ವಿಎ (ಗ್ರಾಮ ಆಡಳಿತ ಅಧಿಕಾರಿ) ಮತ್ತು ರಾಘವ ಅವರೇ ಇಲ್ಲಿಗೆ ನೇಮಿಸಿದ್ದಾರೆ ಎಂದು ಸ್ವತಃ ದಲ್ಲಾಳಿ ಧರಣ್ ಒಪ್ಪಿಕೊಂಡಿರುವುದು ಕಂದಾಯ ಇಲಾಖೆಯೊಳಗಿನ ಭ್ರಷ್ಟಾಚಾರದ ಜಾಲವನ್ನು ಬಿಚ್ಚಿಟ್ಟಿದೆ.

ಜಾರಿಕೊಂಡ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್!
ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಕುರ್ಚಿ ಹಾಕಿ ದರ್ಬಾರ್ ನಡೆಸುತ್ತಿರುವ ಬಗ್ಗೆ ಪತ್ರಿಕೆಯು ಗ್ರಾಮ ಆಡಳಿತ ಅಧಿಕಾರಿ (VA) ಅನಿಲ್ ಕುಮಾರ್ ಅವರನ್ನು ಪ್ರಶ್ನಿಸಿದಾಗ, ಅವರು ಜಾರಿಕೊಳ್ಳುವ ಉತ್ತರ ನೀಡಿದ್ದಾರೆ. “ನಾನು ಕುಳ ಗ್ರಾಮದಲ್ಲಿ ವಾರಕ್ಕೆ ಎರಡು ದಿನ ಮಾತ್ರ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಉಳಿದ ದಿನಗಳಲ್ಲಿ ಗ್ರಾಮ ಸಹಾಯಕ ರಾಘವ ಇರುತ್ತಾರೆ. ಕಚೇರಿಯೊಳಗೆ ದಲ್ಲಾಳಿ ಇರುವ ಬಗ್ಗೆ ನನಗೆ ತಿಳಿದಿಲ್ಲ, ನಾನು ಯಾರನ್ನೂ ನೇಮಿಸಿಲ್ಲ” ಎಂದು ದಿನಾಂಕ 10/06/2026 ರಂದು ಹೇಳಿಕೆ ನೀಡಿದ್ದಾರೆ. ಆದರೆ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದರಿಂದಲೇ ಇಂತಹ ದಲ್ಲಾಳಿಗಳು ಸರ್ಕಾರಿ ಕಚೇರಿಗಳನ್ನು ತಮ್ಮ ಅಡ್ಡೆಯನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಸಾರ್ವಜನಿಕರು ಆಪಾದಿಸಿದ್ದಾರೆ.
ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು: ಹೋರಾಟದ ಎಚ್ಚರಿಕೆ
ಅಮಾಯಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಬ್ರೋಕರ್ ಧರಣ್ನನ್ನು ತಕ್ಷಣವೇ ಕಚೇರಿಯಿಂದ ತೆರವುಗೊಳಿಸಬೇಕು ಮತ್ತು ಆತನಿಗೆ ಕಚೇರಿಯೊಳಗೆ ಅಕ್ರಮವಾಗಿ ನೆಲೆಸಲು ಆಶ್ರಯ ನೀಡಿದ ಗ್ರಾಮ ಸಹಾಯಕ ರಾಘವ ವಿರುದ್ಧ ತಕ್ಷಣವೇ ಶಿಸ್ತು ಹಾಗೂ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದೂರುದಾರರಾದ ಸಚಿನ್ ಉರಿಮಜಲು ಅವರು ಬಂಟ್ವಾಳ ತಹಶೀಲ್ದಾರರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಹಾಗೂ ಮಂಗಳೂರು ಸಹಾಯಕ ಕಮಿಷನರ್ ಅವರಿಗೆ ಜಿಪಿಎಸ್ ಫೋಟೋ ಸಾಕ್ಷ್ಯಗಳ ಸಮೇತ ಲಿಖಿತ ದೂರು ಸಲ್ಲಿಸಿದ್ದಾರೆ.
“ಸರ್ಕಾರಿ ಕಚೇರಿಯನ್ನು ಇವರು ತಮ್ಮ ಹಿರಿಯರ ಖಾಸಗಿ ಆಸ್ತಿ ಎಂದುಕೊಂಡಿದ್ದಾರೆಯೇ? ಕೂಡಲೇ ಈ ಭ್ರಷ್ಟ ಜಾಲದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮಾಧ್ಯಮ ಮಿತ್ರರನ್ನು ಕರೆಸಿ ಸಾರ್ವಜನಿಕರನ್ನು ಒಟ್ಟುಗೂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ದೂರುದಾರರು ಎಚ್ಚರಿಸಿದ್ದಾರೆ.



accident
ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.
ಅದೃಷ್ಟವಶಾತ್ ಬಚಾವ್
ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.
ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ
ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
