Connect with us

Bantawala

ಕ್ರೀಡಾಕೂಟಗಳು ದೇಶದ ಸೌಹಾರ್ಧತೆಗೆ ಪೂರಕವಾಗಬೇಕು: ಕುಳಾಲು ಸುಭಾಶ್ಚಂದ್ರ ಶೆಟ್ಟಿ.

Published

on

ಕ್ರೀಡಾಕೂಟಗಳು ದೇಶದ ಸೌಹಾರ್ಧತೆಗೆ ಪೂರಕವಾಗಬೇಕು:

ವಿಟ್ಲ: ಬಿಬಿಕೆ ಕೋಡಪದವು ತಂಡದ ಆಯೋಜನೆಯಲ್ಲಿ ಎರಡು ದಿನಗಳ ಕಾಲ ನಡೆದ ಅಂಡರ್ ಆರ್ಮ್ 8 ತಂಡಗಳ ಲೀಗ್ ಮಾದರಿಯ ಬೃಹತ್ ಕ್ರಿಕೆಟ್ ಕೂಟದ ಸಮಾರೋಪ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಭಾನುವಾರ ನಡೆಯಿತು. ಕ್ರೀಡಾಭಿಮಾನಿಗಳ ಅಪಾರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮವು ಸೌಹಾರ್ದತೆ, ಏಕತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಸಂದೇಶವನ್ನು ನೀಡಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು, ಹಿಂದಿನ ಕಾಲದಲ್ಲಿ ಜಾತಿ–ಮತ ಬೇಧವಿಲ್ಲದೆ ನಡೆಯುತ್ತಿದ್ದ ಕ್ರೀಡಾಕೂಟಗಳ ಸಂಸ್ಕೃತಿಯನ್ನು ಸ್ಮರಿಸಿದರು. ಕ್ರೀಡೆಗಳು ಸಮಾಜವನ್ನು ಒಗ್ಗೂಡಿಸುವ ಶಕ್ತಿಯುತ ಮಾಧ್ಯಮವಾಗಿದ್ದು, ಇಂದಿನ ಕಾಲಘಟ್ಟದಲ್ಲಿ ದೇಶದ ಸೌಹಾರ್ದತೆಯನ್ನು ಕಾಪಾಡುವಲ್ಲಿ ಅವುಗಳ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.


ಬಿಬಿಕೆ ತಂಡವು ಕೇವಲ ಕ್ರಿಕೆಟ್ ಕೂಟವನ್ನಷ್ಟೇ ಆಯೋಜಿಸದೆ, ಸಾಮಾಜಿಕ ಸೌಹಾರ್ದತೆಗೆ ಒತ್ತು ನೀಡಿ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವುದು ಶ್ಲಾಘನೀಯ ಕಾರ್ಯವೆಂದು ಅವರು ಪ್ರಶಂಸಿಸಿದರು. ಇಂತಹ ಕ್ರೀಡಾಕೂಟಗಳು ಯುವಜನರಲ್ಲಿ ಶಿಸ್ತು, ಸಹಕಾರ ಮತ್ತು ಸಹಬಾಳ್ವೆಯ ಮನೋಭಾವ ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.
ಗ್ರಾಮೀಣ ಮಟ್ಟದಲ್ಲಿ ಇಂತಹ ಬೃಹತ್ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಬಿಬಿಕೆ ಕೋಡಪದವು ತಂಡವು ಮಾದರಿಯನ್ನೇ ನಿರ್ಮಿಸಿದೆ ಎಂದು ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಕ್ರೀಡೆಯ ಮೂಲಕ ಸಾಮಾಜಿಕ ಏಕತೆ ಮತ್ತು ರಾಷ್ಟ್ರಭಾವನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.


ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಸೈನಾರ್ ತಾಳಿತ್ತನೂಜಿ,ಎ.ಕೆ.ಕುಕ್ಕಿಲ, ಡಿ ಗ್ರೂಪ್ ವಿಟ್ಲ ಹಾಗೂ ಪೊಲೀಸ್ ಇಲಾಖೆಯಲ್ಲಿ ನಿವೃತ್ತಿ ಹೊಂದಿದ ಮೋನಪ್ಪ ಗೌಡ ಕುಕ್ಕಿಲ, ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶಕುಂತಲಾ ಎಂ.ಬಿ., 4 ಬಾರಿ ರಾಷ್ಟ್ರೀಯ ತಂಡದಲ್ಲಿ ಆಡಿದ ಕಬಡ್ಡಿ ಕ್ರೀಡಾಪಟು ಕುಮಾರಿ ಕೀರ್ತಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯೂ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಂ.ಎಸ್.ಮಹಮ್ಮದ್, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಹರ್ಷದ್ ಕುಕ್ಕಿಲ, ಬಿಬಿಕೆ ಇದರ ಅಧ್ಯಕ್ಷರಾದ ರಿಯಾಜ್ ತಾಳಿತ್ತನೂಜಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement
Click to comment

Leave a Reply

Your email address will not be published. Required fields are marked *

Bantawala

ಪಣೋಳಿಬೈಲು ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಅಗೇಲು ಸೇವೆ ಸಮರ್ಪಣೆ!

Published

on

ಬಂಟ್ವಾಳ: ತುಳುನಾಡಿನ ಇತಿಹಾಸ ಪ್ರಸಿದ್ಧ, ಪರಮ ಕಾರಣೀಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಪಣೋಳಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ಗರಿಷ್ಠ ಪ್ರಮಾಣದ ಅಗೇಲು ಸೇವೆ ನಡೆದಿದೆ. ಅಂದು ಒಂದೇ ದಿನ ಭಕ್ತರಿಂದ ಬರೋಬ್ಬರಿ 4,180 ಅಗೇಲು ಸೇವೆಗಳು ಸಂದಾಯವಾಗುವ ಮೂಲಕ ಕ್ಷೇತ್ರದ ಕಾರಣೀಕ ಶಕ್ತಿಗೆ ಸಾಕ್ಷಿಯಾಯಿತು .

ಇಷ್ಟೊಂದು ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಏಕದಿನದಲ್ಲಿ ಅಗೇಲು ಸೇವೆ ಸಲ್ಲಿಸುತ್ತಿರುವುದು ಕಲ್ಲುರ್ಟಿ ದೈವದ ಮೇಲಿನ ಅವರ ಅಚಲ ಭಕ್ತಿ ಮತ್ತು ನಂಬಿಕೆಯ ಸಂಕೇತವಾಗಿದೆ. ಇದು ಈ ವರ್ಷದಲ್ಲಿ ಸಂದಾಯವಾದ ಅತ್ಯಂತ ಗರಿಷ್ಠ ಸಂಖ್ಯೆಯ ಅಗೇಲು ಸೇವೆಯಾಗಿದೆ.

ಶೈಕ್ಷಣಿಕ ವರ್ಷದ ಆರಂಭ: ಪ್ರಾರ್ಥನೆ ಸಲ್ಲಿಸಿದ ಭಕ್ತರ ದಂಡು

ಪ್ರಸ್ತುತ ಶಾಲಾ-ಕಾಲೇಜುಗಳ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಲುರ್ಟಿ ದೈವಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಲು ಭಕ್ತರು ಮುಗಿಬಿದ್ದಿದ್ದರು. ಮಕ್ಕಳ ಉತ್ತಮ ವಿದ್ಯಾಭ್ಯಾಸ, ಉನ್ನತ ಶಿಕ್ಷಣ ಸಂಸ್ಥೆಗಳ ಆಯ್ಕೆ, ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಹರಕೆ ತೀರಿಸಲು ಹಾಗೂ ವಿದೇಶಕ್ಕೆ ತೆರಳುವ ಭಕ್ತರ ಕನಸು ಸಾಕಾರಗೊಂಡ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಲು ಕರಾವಳಿ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಸನ್ನಿಧಿಗೆ ಭೇಟಿ ನೀಡಿ ಅಗೇಲು ಸೇವೆ ಸಲ್ಲಿಸಿದರು. ಸಾಮಾನ್ಯವಾಗಿ ಶಾಲಾ-ಕಾಲೇಜು ರಜೆ ಅಥವಾ ವಿಶೇಷ ಹಬ್ಬಗಳ ದಿನಗಳಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ಹರಕೆ ತೀರಿಸುವುದು ಕ್ಷೇತ್ರದ ವಿಶೇಷತೆಯಾಗಿದೆ.

ನಿರಂತರವಾಗಿ ಸಾಗಿದ ಪ್ರಸಾದ ವಿತರಣೆ

ಸಾಮಾನ್ಯ ದಿನಗಳಲ್ಲಿ ಮಧ್ಯಾಹ್ನ 1:30ರ ಬಳಿಕ ಅಗೇಲು ಸೇವೆಯ ಪ್ರಸಾದ ವಿತರಣೆ ಆರಂಭಗೊಳ್ಳುತ್ತದೆ. ಆದರೆ ಭಾನುವಾರ ಇತಿಹಾಸದಲ್ಲೇ ಗರಿಷ್ಠ ಸಂಖ್ಯೆಯ ಸೇವೆಗಳು ಇದ್ದ ಕಾರಣ ಪ್ರಕ್ರಿಯೆ ಸ್ವಲ್ಪ ತಡವಾಗಿ ಆರಂಭಗೊಂಡು, ಸಂಜೆಯ ನಂತರವೂ ನಿರಂತರವಾಗಿ ಸಾಗಿತು. ಕ್ಷೇತ್ರಕ್ಕೆ ಹರಿದುಬಂದಿದ್ದ ಸಾವಿರಾರು ಭಕ್ತರು ಸರದಿಯಲ್ಲಿ ನಿಂತು ದೈವದ ಪ್ರಸಾದ ಸ್ವೀಕರಿಸಿದರು.

ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ಹಾಗೂ ಸೇವೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.

ಕಳೆದ ವರ್ಷ ಜೂನ್ 22ರಂದು ಆ ವರ್ಷದ ಗರಿಷ್ಠ ಅಂದರೆ 3,871 ಅಗೇಲು ಸೇವೆಗಳು ಸಂದಾಯವಾಗಿದ್ದವು.

ಅದಕ್ಕೂ ಮುನ್ನ, 2024ರ ಜೂನ್ 2ರಂದು 3,908 ಅಗೇಲು ಸೇವೆಗಳು ಸಲ್ಲಿಕೆಯಾಗಿದ್ದವು. ಆದರೆ ಈ ಬಾರಿ ಭಾನುವಾರ 4,180 ಸೇವೆಗಳು ಸಲ್ಲಿಕೆಯಾಗಿದೆ.

ಪಣೋಳಿಬೈಲು ಕ್ಷೇತ್ರದ ಪ್ರಮುಖ ವಿಶೇಷತೆಗಳು:

  • ಸಜೀಪ ಮೂಡದ ಪುಣ್ಯಕ್ಷೇತ್ರ: ಈ ಪ್ರಸಿದ್ಧ ಕಾರಣೀಕ ಕ್ಷೇತ್ರವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಂದರ ಪರಿಸರದಲ್ಲಿದೆ.
  • ವಿಶೇಷ ಸೇವೆಗಳ ದಿನ: ಈ ದೈವಸ್ಥಾನದಲ್ಲಿ ವಾರದ ಮೂರು ದಿನಗಳು ಅಂದರೆ ಮಂಗಳವಾರ, ಶುಕ್ರವಾರ ಮತ್ತು ಭಾನುವಾರಗಳಂದು ಮಾತ್ರ ವಿಶೇಷ ಅಗೇಲು ಸೇವೆ ನಡೆಯುತ್ತದೆ. ಉಳಿದ ದಿನಗಳಲ್ಲಿ ಕ್ಷೇತ್ರದಲ್ಲಿ ಕೋಲ ಸೇವೆ ಜರುಗುತ್ತದೆ.
  • ಭಾವೈಕ್ಯತೆಯ ಸನ್ನಿಧಿ: ಪಣೋಳಿಬೈಲು ಕ್ಷೇತ್ರವು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಇಲ್ಲಿ ಜಾತಿ, ಮತ, ಭೇದವಿಲ್ಲದೆ ಎಲ್ಲಾ ಧರ್ಮದವರೂ ಮುಕ್ತವಾಗಿ ಬಂದು ದೈವಕ್ಕೆ ಹರಕೆ ಸಲ್ಲಿಸಿ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿಕೊಳ್ಳುವ ಅಪೂರ್ವ ಭಾವೈಕ್ಯತೆಯ ಕೇಂದ್ರವಾಗಿದೆ.
Continue Reading

accident

ಪೆರುವಾಯಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದ ಕೋಳಿ ಸಾಗಾಟದ ಪಿಕಪ್; ಚಾಲಕ ಅದೃಷ್ಟವಶಾತ್ ಪಾರು!

Published

on

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಹೋಬಳಿ ವ್ಯಾಪ್ತಿಯ ಪೆರುವಾಯಿ ಗ್ರಾಮದ ಮುಖ್ಯ ಸೇತುವೆ ಬಳಿ ಶುಕ್ರವಾರ ಮುಂಜಾನೆ ಭೀಕರ ಅಪಘಾತವೊಂದು ಸಂಭವಿಸಿದೆ. ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಪಲ್ಟಿ ಹೊಡೆದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮುಂಜಾನೆ ಸಂಭವಿಸಿದ ಅವಘಡ:

ಶುಕ್ರವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಕೋಳಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವು ಪೆರುವಾಯಿ ಸೇತುವೆ ತಲುಪುತ್ತಿದ್ದಂತೆ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನವು ನಿಯಂತ್ರಣ ಕಳೆದುಕೊಂಡು ನೇರವಾಗಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅಪಘಾತದ ತೀವ್ರತೆಗೆ ವಾಹನವು ಸಂಪೂರ್ಣವಾಗಿ ಪಲ್ಟಿಯಾಗಿದ್ದು, ಸ್ಥಳೀಯರು ತಕ್ಷಣ ಧಾವಿಸಿ ಚಾಲಕನನ್ನು ರಕ್ಷಿಸಿದ್ದಾರೆ.

ಕಿರಿದಾದ ಸೇತುವೆ, ಪಕ್ಕದಲ್ಲೇ ಟ್ರಾನ್ಸ್‌ಫಾರ್ಮರ್: ಹೆಚ್ಚಿದ ಅಪಘಾತಗಳ ಭೀತಿ

ಪೆರುವಾಯಿ ಸೇತುವೆಯು ಕರ್ನಾಟಕ ಹಾಗೂ ಕೇರಳ ರಾಜ್ಯಗಳನ್ನು ಜೋಡಿಸುವ ಅಂತರರಾಜ್ಯ ಗಡಿಭಾಗದ ಅತ್ಯಂತ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಈ ರಸ್ತೆಯ ಮೂಲಕ ಪ್ರತಿನಿತ್ಯ ಕೇರಳದ ಬೆರಿಪದವು, ಉಪ್ಪಳ ಮುಂತಾದ ಭಾಗಗಳಿಗೆ ನೂರಾರು ವಾಹನಗಳು ಸಂಚರಿಸುತ್ತವೆ.

ಆದರೆ, ಈ ಸೇತುವೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರಿಗೆ ತೀವ್ರ ಮುಜುಗರ ಉಂಟುಮಾಡುತ್ತಿದೆ. ಇದರ ಜೊತೆಗೆ ಸೇತುವೆಯ ತೀರಾ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಸಲಾಗಿದ್ದು, ಇದು ಅಪಘಾತಗಳಿಗೆ ನೇರ ಆಹ್ವಾನ ನೀಡುವಂತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಇದೇ ತಿರುವಿನಲ್ಲಿ ಹತ್ತಕ್ಕೂ ಹೆಚ್ಚು ವಾಹನಗಳು ಅಪಘಾತಕ್ಕೀಡಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಕ್ರಮ ಕೆಂಪುಕಲ್ಲು ಸಾಗಾಟದ ಹಾವಳಿ:

ಕೇರಳ ಕಡೆಯಿಂದ ಪ್ರತಿನಿತ್ಯ ಈ ಮಾರ್ಗವಾಗಿ ಕೆಂಪುಕಲ್ಲಿನ ಅಕ್ರಮ ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದರಿಂದಾಗಿ ಈ ಕಿರಿದಾದ ರಸ್ತೆಯಲ್ಲಿ ವಾಹನಗಳ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದು ಕೂಡ ಇಲ್ಲಿನ ಸರಣಿ ಅಪಘಾತಗಳಿಗೆ ಪ್ರಮುಖ ಕಾರಣಗಳಲ್ಲೊಂದು ಎಂದು ಸ್ಥಳೀಯರು ದೂರಿದ್ದಾರೆ.

ಗ್ರಾಮಸ್ಥರ ಆಕ್ರೋಶ – ಅಭಿವೃದ್ಧಿಗೆ ಬಿಗಿ ಪಟ್ಟು:

“ಇದು ಅಂತರರಾಜ್ಯ ಸಂಪರ್ಕದ ಪ್ರಮುಖ ರಸ್ತೆಯಾಗಿದ್ದರೂ, ಯಾವುದೇ ಸರ್ಕಾರಗಳು ಈ ಸೇತುವೆಯ ಅಭಿವೃದ್ಧಿಗೆ ಮುತುವರ್ಜಿ ವಹಿಸಿಲ್ಲ. ಸೇತುವೆಯನ್ನು ಅಗಲಗೊಳಿಸದೆ, ಅಪಾಯಕಾರಿ ತಿರುವನ್ನು ಸರಿಪಡಿಸದೆ ಮತ್ತು ಇಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅನ್ನು ಬೇರೆಡೆಗೆ ಸ್ಥಳಾಂತರಿಸದ ಹೊರತು ಈ ಭಾಗದಲ್ಲಿ ಅಪಘಾತಗಳನ್ನು ತಡೆಯಲು ಸಾಧ್ಯವಿಲ್ಲ” ಎಂದು ಪೆರುವಾಯಿ ಗ್ರಾಮಸ್ಥರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಇನ್ನಾದರೂ ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆ (PWD) ಎಚ್ಚೆತ್ತುಕೊಂಡು, ತಕ್ಷಣವೇ ಮಧ್ಯಪ್ರವೇಶಿಸಿ ಸೇತುವೆಯನ್ನು ವಿಸ್ತರಿಸಬೇಕು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆಗಳನ್ನು (Crash Barriers) ನಿರ್ಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.




Continue Reading

Bantawala

ಪಂಚಾಯತ್ ರಾಜ್ ಬಲಪಡಿಸಿದ್ದು ಕಾಂಗ್ರೆಸ್; ದುರ್ಬಲಗೊಳಿಸಲು ಬಿಜೆಪಿ ಯತ್ನ: ಮಾಜಿ ಸಚಿವ ರಮಾನಾಥ ರೈ

Published

on

ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸರ್ವ ಶಿಕ್ಷಣ ಅಭಿಯಾನ, ಗ್ರಾಮೀಣ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ದುರ್ಬಲ ವರ್ಗಗಳ ಸಬಲೀಕರಣಕ್ಕೆ ನೆರವಾಗಿದೆ ಎಂದು ಹೇಳಿದರು.
ಬಿಜೆಪಿ ನಾಯಕರು ಸುಳ್ಳು ಪ್ರಚಾರವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೇ ಸುಮಾರು 5,000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಬಾಷಣಕರರಾಗಿ ಮಾತನಾಡಿದ ಸುಧೀರ್ ಕುಮಾರ್ ಮರೋಳಿ, ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ನೀಟ್ ಪರೀಕ್ಷೆಯ ನಿರ್ವಹಣೆ ಕುರಿತು ಉದ್ಭವಿಸಿರುವ ಪ್ರಶ್ನೆಗಳು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ತಾಂತ್ರಿಕ ಲೋಪಗಳಿಂದ ಅರ್ಹ ಮತದಾರರ ಹೆಸರುಗಳು ಕೈಬಿಡುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿ ಶೃಂಗೇರಿಯ ವಿಧಾನಸಭೆ ಚುನಾವಣೆಯ ಮರು ಮತ ಎಣಿಕೆಯಲ್ಲಿ ಮತ ಡಕಾಯಿತಿ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಕಾರ್ಯಕ್ರಮದಲ್ಲಿ ಗೇರು ನಿಗಮದ ಅದ್ಯಕ್ಷರಾದ ಮಮತಾ ಎಸ್. ಗಟ್ಟಿ, ಪ್ರವಾಸೋದ್ಯಮ ನಿಗಮದ ಅದ್ಯಕ್ಷೆ ಶಾಲೆಟ್ ಪಿಂಟೋ,ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತಾಡಿದರು.

ಈ ಸಂಧರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಬಿ. ಪದ್ಮಶೇಖರ್ ಜೈನ್, ಪಿ.ಪಿ. ವರ್ಗೀಸ್, ಶಾಹುಲ್ ಹಮೀದ್, ಸರ್ವೋತ್ತಮ ಗೌಡ ನೆಲ್ಯಾಡಿ, ದಿನೇಶ್ ಮೂಳೂರು, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಅರುಣ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ರಾಧಾಕೃಷ್ಣ ಬೊಲ್ಲೂರು, ಅಭಿಲಾಷ್ ಪಿ.ಕೆ., ಪ್ರಶಾಂತ್ ಕಾಜವ, ರಮೇಶ್ ಶೆಟ್ಟಿ, ಕುಮಾರಿ ಅಪ್ಪಿ, ಉಷಾ ಅಂಚನ್, ಜಯಂತಿ ಪೂಜಾರಿ, ಸುಧೀರ್ ಕುಮಾರ್ ಶೆಟ್ಟಿ, ಐಡಾ ಸುರೇಶ್, ಶೈಲಜಾ ರಾಜೇಶ್ ಹಾಗೂ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು. ಜಗದೀಶ್ ಕೊಯಿಲ ಸ್ವಾಗತಿಸಿದರು. ಕುಳಾಲು ಸುಭಾಷ್ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೃಂದಾ ಪೂಜಾರಿ ವಂದಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.




Continue Reading

Trending

Copyright © 2025 Deevatige

error: Content is protected !!