Connect with us

crime

ಹನಿಮೂನ್ ಅರ್ಧಕ್ಕೆ ನಿಲ್ಲಿಸಿ ವಾಪಾಸ್ ; ನವವಿವಾಹಿತೆ ಆತ್ಮಹತ್ಯೆಗೆ ಯತ್ನ ; 40 ಲಕ್ಷ ವೆಚ್ಚದ ರಿಸೆಪ್ಷನ್ ! ಆತ್ಮಹತ್ಯೆಗೆ ಮುಂದಾಗಲು ಕಾರಣವೇನು ?

Published

on

ಬೆಂಗಳೂರು: ಪೋಷಕರಿಂದ ಬರೋಬ್ಬರಿ 40 ಲಕ್ಷ ಖರ್ಚು ಮಾಡಿ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಸಿಕೊಂಡು ಹನಿಮೂನ್‌ನಿಂದ ಅರ್ಧದಲ್ಲಿ ಮನಸ್ತಾಪವಾಗಿ, ವಾಪಸ್ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ರಾಜಧಾನಿಯಲ್ಲಿ ನಡೆದಿದೆ.
ಮಗಳು ಒಳ್ಳೆ ಗಂಡನ ಮನೆ ಸೇರಿ ಸುಖವಾಗಿ ಸಂಸಾರ ನಡೆಸಲಿ ಎಂಬ ಮಹಾದಾಸೆಯನ್ನು ಇಟ್ಟುಕೊಂಡು ಬೇಡಿಕೆಯನ್ನೆಲ್ಲಾ ಈಡೇರಿಸುತ್ತಾ ಮದುವೆ ಮಾಡಿಕೊಟ್ಟ ಹೆಣ್ಣು ಹೆತ್ತ ಪೋಷಕರಿಗೆ ಸಿಡಿಲಾಘಾತ ಬಂದೆರಗಿದೆ. ಗಂಡನ ಮನೆಯವರ ಬೇಡಿಕೆಯಂತೆ ಮದುವೆಯಾಗಿ ಒಂದು ತಿಂಗಳ ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬರೋಬ್ಬರಿ 40 ಲಕ್ಷ ಖರ್ಚು ಮಾಡಿ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಸಿ ಶ್ರೀಲಂಕಾ ದೇಶಕ್ಕೆ ನವಜೋಡಿಯನ್ನು ಹನಿಮೂನ್‌ಗೆ ಕಳಿಸಿಕೊಟ್ಟಿದ್ದರು. ಆದ್ರೆ ಅಲ್ಲಿ ಏನಾಯ್ತೋ ಏನೋ ಅವರಿಗೇ ಗೊತ್ತು ಸಮಯಕ್ಕೆ ಮುಂಚೆಯೇ ಹನಿಮೂನ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಬಂದಿದ್ದಾರೆ. ಯಾವುದನ್ನೂ ಹೇಳಲಾರದೆ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆ ದಾಖಲಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಮಗಳ ಪರಿಸ್ಥಿತಿ ಕಂಡು ಪೋಷಕರು ಕಣ್ಣಿರಿಡುತ್ತಿದ್ದಾರೆ. ಮಗಳ ಈ ಸ್ಥಿತಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸುತ್ತಿದ್ದಾರೆ.


40 ಲಕ್ಷ ಖರ್ಚು ಮಾಡಿ ಅದ್ಧೂರಿ ರಿಸೆಪ್ಶನ್!
ಕಳೆದ ಅಕ್ಟೋಬರ್ 29ರಂದು ಸೂರಜ್ ಎಂಬಾತನ ಜೊತೆ ಗಾನವಿ ಮದುವೆ ಆಗಿತ್ತು, ಮದುವೆಯಾಗಿ ಬಹುತೇಕ ಒಂದು ತಿಂಗಳ ನಂತರ ಗಂಡನ ಮನೆಯವರ ಬೇಡಿಕೆಯಂತೆ ಸುಮಾರು 40 ಲಕ್ಷ ಖರ್ಚು ಮಾಡಿ ನವೆಂಬರ್ 23 ರಂದು ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ಮಾಡಿದ್ದರು. ನಂತರ ನವದಂಪತಿಗಳು ಹತ್ತು ದಿನಗಳ ಕಾಲ ಹನಿಮೂನ್ ಹೋಗಿದ್ದರು.
ಆದ್ರೆ, ಇನ್ನೂ ಐದು ದಿನ ಇರುವಾಗಲೇ ಅರ್ಧದಲ್ಲೇ ಇಬ್ಬರು ವಾಪಸ್ ಬಂದಿದ್ರು. ಈ ಬಗ್ಗೆ ಯುವತಿಯ ಕುಟುಂಬದವರು ಸೂರಜ್ ಮನೆಯವರಿಗೆ ಪ್ರಶ್ನೆ ಮಾಡಿದ್ರೆ ನಿಮ್ಮ ಮಗಳನ್ನ ಕರೆದುಕೊಂಡು ಹೋಗ್ರಿ ಎಂದಿದ್ದರು ಎಂಬ ಆರೋಪ ಕೇಳಿಬಂದಿದೆ.
ಹನಿಮೂನ್‌ನಿoದ ಅರ್ಧಕ್ಕೆ ವಾಪಸ್ ಬಂದಿದ್ದ ನವವಿವಾಹಿತೆ ಗಂಡನ ಮನೆ ಬಿಟ್ಟು ತವರು ಮನೆಗೆ ವಾಪಸ್ ಬಂದಿದ್ದಳು. ಆದ್ರೆ ಬುಧವಾರ ಮಧ್ಯಾಹ್ನ ನವವಿವಾಹಿತೆ ನೇಣಿಗೆ ಶರಣಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕುಟುಂಬಸ್ಥರ ಸಮಯಪ್ರಜ್ಞೆಯಿಂದ ನವವಿವಾಹಿತೆಯನ್ನ ನೇಣಿನ ಕುಣಿಕೆಯಿಂದ ಕಾಪಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿದ್ದು, ಸಾವು–ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸದ್ಯ ವೆಂಟಿಲೇಟರ್ ಸಹಾಯದಿಂದ ನವವಿವಾಹಿತೆ ಚಿಕಿತ್ಸೆ ನೀಡಲಾಗುತ್ತಿದ್ದು, ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಯತ್ನಿಸಿರೋ ಬಗ್ಗೆ ಆರೋಪ ಕೇಳಿಬರುತ್ತಿದೆ.
ಘಟನೆಗೆ ಸಂಬoಧಿಸಿದoತೆ ಗಾನವಿ ಕುಟುಂಬ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ, ಪತಿ ಸೂರಜ್, ಅತ್ತೆ ಜಯಂತಿ ಹಾಗೂ ಪತಿಯ ಅಣ್ಣ ಸಂಜಯ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!