education
ಸೈನಿಕರು ಇನ್ನು ಮುಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವಂತಿಲ್ಲ ! ವೀಕ್ಷಣೆಗೆ ಮಾತ್ರ ಮೀಸಲು – ಭಾರತೀಯ ಸೇನೆ ಆದೇಶ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2025/12/social-media-1000x600.jpg&description=ಸೈನಿಕರು ಇನ್ನು ಮುಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವಂತಿಲ್ಲ ! ವೀಕ್ಷಣೆಗೆ ಮಾತ್ರ ಮೀಸಲು – ಭಾರತೀಯ ಸೇನೆ ಆದೇಶ', 'pinterestShare', 'width=750,height=350'); return false;" title="Pin This Post">
ಯೋಧರು ಇನ್ನು ಮುಂದೆ ಇನ್ಸ್ಟಾಗ್ರಾಮ್ ಮತ್ತು ಎಕ್ಸ್ \ ತಾಣಗಳನ್ನು. ಕೇವಲ ಮಾಹಿತಿ ಪಡೆಯಲು ಅಥವಾ ವಿಡಿಯೋ/ಪೋಸ್ಟ್ಗಳನ್ನು ನೋಡಲು ಮಾತ್ರ ಬಳಸಬಹುದಾಗಿರುತ್ತದೆ. ಯೋಧರು ಯಾವುದೇ ಪೋಸ್ಟ್ಗಳನ್ನು ಹಾಕುವಂತಿಲ್ಲ, ಯಾವುದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಂತಿಲ್ಲ ಅಥವಾ ಲೈಕ್ ಮಾಡುವಂತಿಲ್ಲ. ಕೇವಲ ಆ ಪೋಸ್ಟ್ಗಳನ್ನ ಮಾತ್ರ ವೀಕ್ಷಿಸಬಹುದು ಎಂಬುವುದಾಗಿ ಭಾರತೀಯ ಸೇನೆಯ ಇತ್ತೀಚಿನ ಆದೇಶದಲ್ಲಿ ತಿಳಿಸಲಾಗಿದೆ.

ದೇಶದ ರಕ್ಷಣೆ ಮಾಡುವ ಯೋಧರ ಶಿಸ್ತು ಮತ್ತು ಭದ್ರತೆಯ ದೃಷ್ಟಿಯಿಂದ ಭಾರತೀಯ ಸೇನೆಯು ತನ್ನ ಸಾಮಾಜಿಕ ಮಾಧ್ಯಮ ಬಳಕೆಯ ನೀತಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ದಶಕಗಳಿಂದಲೂ ಯೋಧರು ಸಾರ್ವಜನಿಕವಾಗಿ ಸೋಶಿಯಲ್ ಮೀಡಿಯಾ ಬಳಸುವುದರ ಮೇಲೆ ಕಟ್ಟುನಿಟ್ಟಿನ ನಿಷೇಧವಿತ್ತು. ಈಗ ಆ ನಿಯಮದಲ್ಲಿ ಸಣ್ಣ ಸಡಿಲಿಕೆ ಮಾಡಲಾಗಿದ್ದು, ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಕೆಲವು ಸಾಮಾಜಿಕ ಜಾಲತಾಣಗಳನ್ನು ಬಳಸಲು ಅನುಮತಿ ನೀಡಲಾಗಿದೆ.
ಶತ್ರು ರಾಷ್ಟ್ರಗಳ ಗುಪ್ತಚರ ಸಂಸ್ಥೆಗಳು ಸುಂದರ ಯುವತಿಯರ ಹೆಸರಿನಲ್ಲಿ ಫೇಕ್ ಪ್ರೊಫೈಲ್ ಸೃಷ್ಟಿಸಿ ಯೋಧರನ್ನು ಸ್ನೇಹದ ಜಾಲಕ್ಕೆ ಬೀಳಿಸುತ್ತವೆ. ಈ ಮೂಲಕ ಸೇನೆಯ ರಹಸ್ಯ ಮಾಹಿತಿಗಳನ್ನು ಕದಿಯುವ ಅಪಾಯವಿರುತ್ತದೆ. ತಿಳಿಯದೆಯೇ ಯೋಧರು ತಮ್ಮ ಸ್ಥಳ ಅಥವಾ ಸೇನಾ ನೆಲೆಯ ಫೋಟೋಗಳನ್ನು ಹಂಚಿಕೊoಡಾಗ, ಅದು ದೇಶದ ಭದ್ರತೆಗೆ ದೊಡ್ಡ ಸಂಚಕಾರ ತರಬಲ್ಲದು ಎಂಬ ಎರಡು ಕಾರಣಗಳು ಈ ಕಠಿಣ ನಿರ್ಧಾರಕ್ಕೆ ಕಾರಣವಾಗಿದೆ.

ಫೇಸ್ಬುಕ್ ಸೇರಿದಂತೆ ಚೀನಾ ಮೂಲದ ಆಪ್ಗಳು ಮತ್ತು ಇತರ ಮೆಸೇಜಿಂಗ್ ಆಪ್ಗಳ ಮೇಲಿನ ಸಂಪೂರ್ಣ ನಿಷೇಧ ಹಾಗೆಯೇ ಮುಂದುವರಿಯಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಯೋಧರಿಗೆ ಸ್ಮಾರ್ಟ್ಫೋನ್ ಬಳಕೆಯ ಮೇಲೂ ಮಿತಿ ಹೇರಲಾಗಿದೆ. ಈ ಹೊಸ ಬದಲಾವಣೆಯು ಕೇವಲ ಯೋಧರು ಜಾಗತಿಕ ವಿದ್ಯಮಾನಗಳನ್ನು ತಿಳಿದುಕೊಳ್ಳಲಿ ಎಂಬ ಉದ್ದೇಶವನ್ನು ಹೊಂದಿದೆ.
ತoತ್ರಜ್ಞಾನದ ಯುಗದಲ್ಲಿ ಮಾಹಿತಿ ಎಲ್ಲರಿಗೂ ಅಗತ್ಯ. ಆದರೆ ದೇಶದ ಭದ್ರತೆಯ ವಿಷಯ ಬಂದಾಗ ಶಿಸ್ತು ಅತಿ ಮುಖ್ಯ. ಭಾರತೀಯ ಸೇನೆಯ ಈ ಸಮತೋಲಿತ ನಿರ್ಧಾರವು ಯೋಧರಿಗೆ ಬಾಹ್ಯ ಪ್ರಪಂಚದ ಅರಿವು ಮೂಡಿಸುವ ಜೊತೆಗೆ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ
Bantawala
ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ
ಕನ್ಯಾನ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳು’ ಎಂಬ ವಿಷಯದ ಕುರಿತು ಇತ್ತೀಚೆಗೆ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ನಿಕಟಪೂರ್ವ ಉಪನ್ಯಾಸಕ ಕಿರಣ್ ಪ್ರಸಾದ್ ಅವರು, “ನಮ್ಮ ಬದುಕಿನ ಪಥವನ್ನು ರೂಪಿಸಿಕೊಳ್ಳಬೇಕಾದವರು ನಾವೇ. ಆದ್ದರಿಂದ ನಮಗೆ ಸಿಗುವ ಪ್ರತಿಯೊಂದು ಸಣ್ಣ ಅವಕಾಶವನ್ನೂ ಸದುಪಯೋಗ ಪಡಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಲ್ಲದೆ, ವಿವಿಧ ಉದ್ಯೋಗಾವಕಾಶಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸವಿತಾ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಚೈತ್ರಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಖಲೀಲ್ ಇಬ್ರಾಹಿಂ ಸ್ವಾಗತಿಸಿ, ಸ್ನೇಹಾ ಎನ್. ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರೆ, ಇಶ್ಮಿತಾ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿದರು.
DEATH
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ; ಟ್ಯಾಂಕರ್ ಡಿಕ್ಕಿಯಾಗಿ ವೈದ್ಯಕೀಯ ವಿದ್ಯಾರ್ಥಿನಿ ಸಾವು
ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಲಾವಣ್ಯ (25) ಮೃತಪಟ್ಟ ವಿದ್ಯಾರ್ಥಿನಿ. ಇವರು ಶಿವಮೊಗ್ಗದಲ್ಲಿ ಅಂತಿಮ ವರ್ಷದ ಎಂಡಿ (MD) ವ್ಯಾಸಂಗ ಮಾಡುತ್ತಿದ್ದರು. ಲಾವಣ್ಯ ಅವರು ತಮ್ಮ ಸಹಪಾಠಿ ಓವೇರಿಯಾ ಅವರೊಂದಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಸುತ್ತಿದ್ದ ಟ್ಯಾಂಕರ್ ಲಾರಿಯು ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟರ್ನ ಹಿಂಬದಿ ಸವಾರಿಯಾಗಿದ್ದ ಲಾವಣ್ಯ ಅವರು ಕೆಳಕ್ಕೆ ಬಿದ್ದಿದ್ದು, ಟ್ಯಾಂಕರ್ ಚಕ್ರ ಅವರ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತ ಲಾವಣ್ಯ ಅವರು ಪೋಷಕರಿಗೆ ಒಬ್ಬಳೇ ಮಗಳಾಗಿದ್ದು, ವೈದ್ಯಕೀಯ ಶಿಕ್ಷಣ ಮುಗಿಸಿ ಉಜ್ವಲ ಭವಿಷ್ಯದ ಕನಸು ಕಂಡಿದ್ದ ಕುಟುಂಬಕ್ಕೆ ಆಘಾತ ಎದುರಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಓವೇರಿಯಾ ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲಾವಣ್ಯ ಅವರು ಉಡುಪಿ ಜಿಲ್ಲೆಯ ಕಾರ್ಕಳ ಮೂಲದವರಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ (ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ – SIMS) ಅಂತಿಮ ವರ್ಷದ MD (Post Graduation) ವ್ಯಾಸಂಗ ಮಾಡುತ್ತಿದ್ದರು. ಇವರು ತಮ್ಮ ಪೋಷಕರಿಗೆ ಒಬ್ಬಳೇ ಪುತ್ರಿಯಾಗಿದ್ದರು. ಈ ಘಟನೆ ರಸ್ತೆಯಲ್ಲಿ ನಡೆದಿರುವುದಲ್ಲ, ಬದಲಾಗಿ ನೂರಾರು ರೋಗಿಗಳ ಪ್ರಾಣ ರಕ್ಷಿಸುವ ಮೆಗ್ಗಾನ್ ಆಸ್ಪತ್ರೆಯ ಆವರಣದ ಒಳಗಡೆಯೇ ಸಂಭವಿಸಿದೆ. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಹೊಸ ಕಟ್ಟಡದ ಕಾಮಗಾರಿಗೆ ನೀರು ಪೂರೈಸಲು ಬಂದಿದ್ದ ಟ್ಯಾಂಕರ್ ವೈದ್ಯಕೀಯ ವಿದ್ಯಾರ್ಥಿನಿಯನ್ನು ಬಲಿ ಪಡೆದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಲಾವಣ್ಯ ಅವರ ಸ್ನೇಹಿತೆ ಓವೇರಿಯಾ ಕೂಡ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Bantawala
ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮ
ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಮುಟ್ಟಿನ ನೈರ್ಮಲ್ಯ, ಮಹಿಳೆಯರ ಆರೋಗ್ಯ ಮತ್ತು ಪೋಷಣೆ‘ ಕುರಿತು ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ವಿಮೆನ್ ಸೆಲ್ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿತ್ತು.

ಕನ್ಯಾನ ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸೌಮ್ಯ ಎಸ್ ಕೆ ಅವರು ಮುಟ್ಟಿನ ಸ್ವಚ್ಛತೆ, ಅರೋಗ್ಯ ರಕ್ಷಣೆ ಹಾಗೂ ಪೋಷಣೆ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಲ್ಲಿ ಅರೋಗ್ಯ ಜಾಗೃತಿಯನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸವಿತಾ, ಶ್ರೀಮತಿ ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿ, ಶ್ರಾವಣ್ಯ ವಂದಿಸಿ, ಇಶ್ಮಿತಾ ನಿರೂಪಿಸಿ, ಚೇತನಾ ಮತ್ತು ಬಳಗ ಪ್ರಾರ್ಥಿಸಿದರು.
-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada5 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
