Connect with us

Educational

ನ್ಯೂಜಿಲ್ಯಾಂಡ್ ದೇಶದ ಶೈಕ್ಷಣಿಕ ಚಟುವಟಿಕೆಗಳು; ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ವಿನೂತನ ಕಾರ್ಯಾಗಾರ

Published

on

ಪುತ್ತೂರು : ಇಲ್ಲಿನ ಹೃದಯ ಭಾಗದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಿದ್ಯಾ ದೇಗುಲ ಪ್ರಗತಿ ಸ್ಟಡಿ ಸೆಂಟರ್ ವಿದ್ಯಾರ್ಥಿಗಳಲ್ಲಿ ದೇಶಪ್ರೇಮದೊಂದಿಗೆ ಸಾಮಾಜಿಕ ಜ್ಞಾನದ ಜೊತೆಗೆ, ಭವಿಷ್ಯದ ಚಿಂತನೆಗಳನ್ನು ಬೆಳೆಸಿ ಭವ್ಯ ಭಾರತದ ಸತ್ಪçಜೆಯನ್ನಾಗಿ ರೂಪಿಸುವಲ್ಲಿ ಆಗಾಗ ಪೂರಕವಾದ ಪಠ್ಯೇತರ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದೆ.


ಅದರಂತೆ ಈ ವಿನೂತನ ಮಾಹಿತಿ ಕಾರ್ಯಾಗಾರವೊಂದರಲ್ಲಿ ಇತ್ತೀಚೆಗೆ ಮಂಗಳೂರಿನಲ್ಲಿ ವಿವಾಹಿತರಾದ ನ್ಯೂಜಿಲ್ಯಾಂಡ್ ನ ಹುಡುಗಿ ಲಿಲ್ಲಿಚೂಅರ್ಜುನ್ ಹಾಗೂ ಅರ್ಜುನ್ ರಮೇಶ್ ಕುಮಾರ್ ದಂಪತಿಗಳು ತಮ್ಮ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಅವರಿಂದ ವಿದ್ಯಾರ್ಥಿಗಳು ನ್ಯೂಜಿಲ್ಯಾಂಡ್ ನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು ಮತ್ತು ಪ್ರಗತಿ ಸ್ಟಡಿ ಸೆಂಟರ್ ಸಂಸ್ಥೆ ನಡೆದುಬಂದ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ದಂಪತಿಗಳು ಮುಕ್ತ ಕಂಠದಿoದ ಶ್ಲಾಘಿಸಿದರು.


ನ್ಯೂಜಿಲ್ಯಾಂಡ್ ನಲ್ಲಿ ಹತ್ತನೇ ತರಗತಿಯ ನಂತರ ಶಿಕ್ಷಣವನ್ನು ವಿಶ್ವವಿದ್ಯಾಲಯದಲ್ಲಿ ನೀಡಲಾಗುತ್ತದೆ ಪ್ರತಿ ವಿದ್ಯಾರ್ಥಿಯ ಖರ್ಚು ವೆಚ್ಚಗಳಿಗಾಗಿ 10000 ಡಾಲರ್ ನಿಂದ 20,000 ಡಾಲರ್ ವರೆಗೆ ಸರಕಾರವೇ ಒದಗಿಸಿಕೊಡುತ್ತದೆ.

ಉನ್ನತ ವ್ಯಾಸಂಗ ಮಾಡುವ ಸಮಯದಲ್ಲಿ ವಿದ್ಯಾರ್ಥಿಯೇ ವಿಷಯವನ್ನು ಅರಿತು ಅದರ ಕುರಿತು ವಿಮರ್ಶಿಸಿ ಮಂಡನೆ ಮಾಡಬೇಕು. ತನ್ನ ವಿಷಯವನ್ನು ತಾನೇ ಆಯ್ಕೆ ಮಾಡಿಕೊಂಡು 5,000 ಪದಗಳ ಪ್ರಬಂಧ ರಚಿಸಿ ಪ್ರಸ್ತುತಪಡಿಸಬೇಕು.


ಉನ್ನತ ವ್ಯಾಸಂಗ ಸಮಯದಲ್ಲಿ ತನ್ನ ದುಡಿಮೆಯ ಪೂರ್ತಿ ಖರ್ಚು ವೆಚ್ಚವನ್ನು ಆತನೇ ಧರಿಸಬೇಕು. ಎಂದು ಅರ್ಜುನ್ ರಮೇಶ್ ಕುಮಾರ್ ಇವರು ಮಂಗಳೂರಿನಿoದ ನ್ಯೂಜಿಲ್ಯಾಂಡ್ ನವರೆಗಿನ ತನ್ನ ಶೈಕ್ಷಣಿಕ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊoಡರು. ಪ್ರಸ್ತುತ ಅರ್ಜುನ್ ರಮೇಶ್ ರವರು Software Engineer Warehouse Company Auckland, Newzealand ಹಾಗೂ ಲಿಲ್ಲಿಚೂ ಅರ್ಜುನ್ ರವರು Post Graduation in Psychology Auckland univercity, Newzealandನಲ್ಲಿ ಉದ್ಯೋಗದಲ್ಲಿದ್ದಾರೆ.


ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಗೋಕುಲನಾಥ್ ಪಿ.ವಿ. ಇವರು ಗಣ್ಯರನ್ನು ಪರಿಚಯಿಸಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೀತಾ ರಮೇಶ್ ಕುಮಾರ್, ಅಕ್ಷಯ್ ರಮೇಶ್ ಕುಮಾರ್, ಡಾ. ಮೇಘ ಗೋಕುಲ್ ಅಶ್ವಿನ್ ರಮೇಶ್ ಕುಮಾರ್, ಶ್ರೀಮತಿ ನಮೃತಾ ಅಶ್ವಿನ್ ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್‌ನಾಥ್ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಸ್ವಾಗತಿಸಿದರು. ಉಪನ್ಯಾಸಕ ನಾಸಿರ್ ವಂದಿಸಿದರು.

Continue Reading
Advertisement

Educational

ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆ: ಕಠಿಣ ಪ್ರಶ್ನೆಗಳಿಂದ ಕಂಗಾಲಾದ ವಿದ್ಯಾರ್ಥಿಗಳು; ಕೃಪಾಂಕ ನೀಡಲು ಹೆಚ್ಚಿದ ಒತ್ತಾಯ!

Published

on

ರಾಜ್ಯಾದ್ಯಂತ ಶನಿವಾರ ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಠ್ಯಕ್ರಮದ ಹೊರತಾದ ಮತ್ತು ಅತ್ಯಂತ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೃಪಾಂಕ (Grace Marks) ನೀಡಬೇಕೆಂದು ಗಣಿತ ಶಿಕ್ಷಕರ ಸಂಘ ಹಾಗೂ ಪೋಷಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರಿಕೆಯಲ್ಲಿ ಒಟ್ಟು 16 ಅಂಕಗಳ ಪ್ರಶ್ನೆಗಳು ಪಠ್ಯಕ್ರಮದಲ್ಲಿ (Syllabus) ಇರಲಿಲ್ಲ ಮತ್ತು 21 ಅಂಕಗಳ ಪ್ರಶ್ನೆಗಳು ಅತ್ಯಂತ ಕಠಿಣವಾಗಿದ್ದವು ಎಂದು ಶಿಕ್ಷಕರು ಆರೋಪಿಸಿದ್ದಾರೆ. ನಿಯಮದ ಪ್ರಕಾರ ಪ್ರಶ್ನೆಪತ್ರಿಕೆಯಲ್ಲಿ ಶೇ. 20ರಷ್ಟು ಕಠಿಣ, ಶೇ. 20ರಷ್ಟು ಸುಲಭ ಹಾಗೂ ಶೇ. 40ರಷ್ಟು ಮಧ್ಯಮ ಮಟ್ಟದ ಪ್ರಶ್ನೆಗಳಿರಬೇಕು. ಆದರೆ, ಈ ಬಾರಿ 35ಕ್ಕೂ ಹೆಚ್ಚು ಅಂಕಗಳಿಗೆ ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ಮಂಡಳಿಯು ನಿಯಮ ಉಲ್ಲಂಘಿಸಿದೆ ಎನ್ನಲಾಗಿದೆ. ಅನ್ವಯಿಕ ಪ್ರಶ್ನೆಗಳು ಹೆಚ್ಚಾಗಿದ್ದರಿಂದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಪಾಸಾಗಲು ಪರದಾಡುವಂತಾಗಿದೆ. ಇನ್ನು 100ಕ್ಕೆ 100 ಅಂಕಗಳ ಗುರಿ ಹೊಂದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಕೂಡ ನಿರಾಸೆಗೊಂಡಿದ್ದಾರೆ. ಬಹುವದೋಕ್ತಿ (1 ಅಂಕ), ನಿರ್ದೇಶಾಂಕ ರೇಖಾಗಣಿತ (2 ಅಂಕ), ವೃತ್ತಗಳು (2 ಅಂಕ), ತ್ರಿಭುಜಗಳು (3 ಅಂಕ), ವರ್ಗ ಸಮೀಕರಣಗಳು (1 ಅಂಕ), ಮೇಲ್ಮೈ ವಿಸ್ತೀರ್ಣಗಳು ಮತ್ತು ಘನಫಲಗಳು (5 ಅಂಕ) ಸೇರಿದಂತೆ ಪಠ್ಯದಲ್ಲಿಲ್ಲದ ಒಟ್ಟು 16 ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕೈಚೆಲ್ಲಿದ್ದಾರೆ.

ನಾಳೆ ನಿರ್ಣಾಯಕ ಸಭೆ:
ಈ ಸಮಸ್ಯೆಯ ಕುರಿತು ಈಗಾಗಲೇ ಶಿಕ್ಷಕರ ಸಂಘದ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಶಿಕ್ಷಕರ ಸಂಘಗಳು ಶಿಕ್ಷಣ ಸಚಿವರಿಗೆ ಮನವಿ ನೀಡಿವೆ.


ಈ ಹಿನ್ನೆಲೆಯಲ್ಲಿ, ಮಾರ್ಚ್ 31ರ ಮಂಗಳವಾರದಂದು ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಪರೀಕ್ಷಾ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಅಥವಾ ಮೌಲ್ಯಮಾಪನದ ವೇಳೆ ರಿಯಾಯಿತಿ ನೀಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

Continue Reading

award

ಶೈಕ್ಷಣಿಕ ಕ್ಷೇತ್ರದಲ್ಲಿ ಮಿಂಚಿದ ಪೆರ್ಲದ ಪ್ರತಿಭೆ: ಎಂ.ಸಿ.ಎ ಪದವಿಯಲ್ಲಿ ಅನನ್ಯ ಬಿ.ಎಸ್. ಅವರಿಗೆ ದ್ವಿತೀಯ ರ‍್ಯಾಂಕ್

Published

on

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ 2023-25ನೇ ಸಾಲಿನ ಎಂ.ಸಿ.ಎ (MCA – Master of Computer Application) ಸ್ನಾತಕೋತ್ತರ ಪದವಿಯಲ್ಲಿ ಅನನ್ಯ ಬಿ.ಎಸ್. ಅವರು ದ್ವಿತೀಯ ರ‍್ಯಾಂಕ್ ಮೂಲಕ ಅನನ್ಯ ಸಾಧನೆ ಮಾಡಿದ್ದಾರೆ.

ಇವರು ಕಾಸರಗೋಡು ಜಿಲ್ಲೆಯ ಪೆರ್ಲದವರಾಗಿದ್ದು, ಭಾಸ್ಕರ್ ಬನಾರಿ ಹಾಗೂ ಸುಜಾತಾ ಸೇರಾಜೆ ದಂಪತಿಯ ಪುತ್ರಿ. ಇವರು ಕೇರಳ ರಾಜ್ಯದಲ್ಲಿಯೇ ಪ್ರಸಿದ್ದಿ ಪಡೆದ ಖ್ಯಾತ ವ್ಯಕ್ತಿ ಸಿಪಿಎಂ ಪಕ್ಷದ ನೇತಾರನಾಗಿದ್ದ ದಿ. ಕೆ.ಪಿ. ಮದನ್ ಮಾಸ್ಟರ್ ಸೇರಾಜೆ ಅವರ ಮರಿಮೊಮ್ಮಗಳು ಎಂಬುದು ಗಮನಾರ್ಹ.

ಅನನ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಪೆರ್ಲದ ಶ್ರೀ ಸತ್ಯನಾರಾಯಣ ಹೈಸ್ಕೂಲ್‌ನಲ್ಲಿ ಮುಗಿಸಿದ್ದು, ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 90 ಅಂಕ ಗಳಿಸಿದ್ದರು. ನಂತರ ಬಡಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪಿಯುಸಿ (ವಿಜ್ಞಾನ ವಿಭಾಗ) ಶಿಕ್ಷಣ ಪೂರೈಸಿದರು.

ಉನ್ನತ ಶಿಕ್ಷಣಕ್ಕಾಗಿ ಪುತ್ತೂರಿನ ವಿವೇಕಾನಂದ ಕಾಲೇಜನ್ನು ಸೇರಿ ಬಿ.ಸಿ.ಎ (BCA) ಪದವಿಯಲ್ಲಿ ಶೇ. 93 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದರು. ಇದೀಗ ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಎಂ.ಸಿ.ಎ ಪದವಿಯಲ್ಲಿ ಶೇ. 94 ಅಂಕಗಳನ್ನು ಪಡೆಯುವ ಮೂಲಕ ಇಡೀ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಅನನ್ಯ ಅವರ ಈ ಸಾಧನೆಗೆ ಪೆರ್ಲ ಹಾಗೂ ಸುತ್ತಮುತ್ತಲಿನ ಭಾಗದ ಸಾರ್ವಜನಿಕರು ಮತ್ತು ಶಿಕ್ಷಣ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

Continue Reading

Bantawala

ಸಾಹಿತ್ಯ ಸಾಧನೆಗೆ ವಿಟ್ಲದ ಡಾ. ಮೈತ್ರಿ ಭಟ್‌ ಅವರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಗೌರವ

Published

on

ಬೆಂಗಳೂರು: ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಬೆಂಗಳೂರಿನ ಪಶುವೈದ್ಯ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘2026ನೇ ವರ್ಷದ ಅಂತರಾಷ್ಟ್ರೀಯ ಮಹಿಳಾ ರಾಜ್ಯ ಸಮ್ಮೇಳನ’ದಲ್ಲಿ ಸಾಹಿತ್ಯ ಕ್ಷೇತ್ರದ ಗಣನೀಯ ಸಾಧನೆಗಾಗಿ ವಿಟ್ಲದ ಡಾ. ಮೈತ್ರಿ ಭಟ್ ಅವರಿಗೆ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಹಿತ್ಯ ಲೋಕಕ್ಕೆ ಡಾ. ಮೈತ್ರಿ ಭಟ್ ಅವರು ನೀಡುತ್ತಿರುವ ನಿರಂತರ ಕೊಡುಗೆ ಮತ್ತು ಅವರ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ನಾಡಿನ ವಿವಿಧ ಕ್ಷೇತ್ರಗಳ ಸಾಧಕಿಯರು ಭಾಗವಹಿಸಿದ್ದ ಈ ಸಮ್ಮೇಳನದಲ್ಲಿ ಮೈತ್ರಿ ಭಟ್ ಅವರ ಸಾಧನೆಯನ್ನು ಗಣ್ಯರು ಶ್ಲಾಘಿಸಿದರು.

ಪ್ರಶಸ್ತಿ ಪುರಸ್ಕೃತ ಡಾ. ಮೈತ್ರಿ ಭಟ್ ಅವರು ವಿಟ್ಲದ ನಿವಾಸಿ ರವಿಶಂಕರ ಕುಳಮರ್ವ ಅವರ ಪತ್ನಿಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ವಿಟ್ಲದ ಹೆಮ್ಮೆಯನ್ನು ರಾಜ್ಯಮಟ್ಟದಲ್ಲಿ ಪಸರಿಸಿದ ಇವರ ಸಾಧನೆಗೆ ಸ್ಥಳೀಯ ಗಣ್ಯರು ಹಾಗೂ ಸಾಹಿತ್ಯಾಸಕ್ತರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

Continue Reading

Trending

Copyright © 2025 Deevatige