Connect with us

crime

ಸುಪ್ರೀಂ ಕೋರ್ಟ್ನಿಂದ ಶಿಕ್ಷೆ ಅಮಾನತಿಗೆ ತಡೆ; ಸೆಂಗಾರ್‌ಗೆ ಜೈಲುವಾಸ ಮುಂದುವರಿಕೆ

Published

on

ದೆಹಲಿ : ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯ ಅಮಾನತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೆಂಗಾರ್ ಅವರಿಗೆ ನೋಟಿಸ್ ನೀಡಿದೆ.


ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ರಜಾ ಪೀಠವು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸೆಂಗಾರ್‌ಗೆ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹೈಕೋರ್ಟ್ ಈ ಹಿಂದೆ ಸೆಂಗಾರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಆತನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಇದರರ್ಥ ಸೆಂಗಾರ್ ಸದ್ಯಕ್ಕೆ ಜೈಲಿನಲ್ಲೇ ಇರಬೇಕಾಗುತ್ತದೆ. 2017ರಲ್ಲಿ ಉನ್ನಾವ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸೆಂಗಾರ್ ತಪ್ಪಿತಸ್ಥನೆಂದು ಸಾಬೀತಾಗಿತ್ತು. 2019ರಲ್ಲಿ ದೆಹಲಿಯ ವಿಶೇಷ ನ್ಯಾಯಾಲಯವು ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡ ವಿಧಿಸಿತ್ತು. ತನ್ನ ಮಗಳ ಮದುವೆಯ ಕಾರಣ ನೀಡಿ ಸೆಂಗಾರ್ ಜಾಮೀನು ಕೋರಿದ್ದಾಗ, ಹೈಕೋರ್ಟ್ ಮಾನವೀಯ ನೆಲೆಯಲ್ಲಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು.

ಸೆಂಗಾರ್ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಆತ ಹೊರಬಂದರೆ ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಸಂತ್ರಸ್ತೆ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದರು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ದೆಹಲಿ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ತುರ್ತು ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಒಂದು ಪ್ರಮುಖ ಪ್ರಶ್ನೆಯನ್ನು ಎತ್ತಿದೆ. ಹೈಕೋರ್ಟ್ ತನ್ನ ಆದೇಶದಲ್ಲಿ “ಶಾಸಕರು ಸಾರ್ವಜನಿಕ ಸೇವಕರಲ್ಲ ಎಂಬ ತರ್ಕವನ್ನು ಬಳಸಿರುವ ಬಗ್ಗೆ ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿದೆ. “ಒಂದು ವೇಳೆ ಈ ತರ್ಕ ಒಪ್ಪುವುದಾದರೆ, ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾರ್ವಜನಿಕ ಸೇವಕನಾಗುತ್ತಾನೆ ಆದರೆ ಒಬ್ಬ ಎಂಪಿ ಅಥವಾ ಎಂಎಲ್‌ಎ ಆಗುವುದಿಲ್ಲವೇ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಸೆಂಗಾರ್ ಈಗಾಗಲೆ ಸಂತ್ರಸ್ತೆಯ ತಂದೆಯ ಕಸ್ಟಡಿಯಲ್ ಡೆತ್ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿರುವುದರಿಂದ, ಆತನನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ನ್ಯಾಯಾಲಯ ಹೇಳಿದೆ ಸಂತ್ರಸ್ತೆಯ ಸುರಕ್ಷತೆಯ ದೃಷ್ಟಿಯಿಂದ ಆಕೆಗೆ ಸುಪ್ರೀಂ ಕೋರ್ಟ್ನಿಂದ ಉಚಿತ ಕಾನೂನು ನೆರವು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಸೆಂಗಾರ್‌ಗೆ ಈ ಕುರಿತು ನೋಟಿಸ್ ಜಾರಿ ಮಾಡಲಾಗಿದ್ದು, ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಲಾಗಿದೆ.ಈ ಪ್ರಕರಣದ ಮುಂದಿನ ವಿಚಾರಣೆಯು ಜನವರಿ 2026ರ ಕೊನೆಯ ವಾರದಲ್ಲಿ ನಡೆಯಲಿದೆ. ಅಲ್ಲಿಯವರೆಗೆ ಸೆಂಗಾರ್ ಜೈಲಿನಲ್ಲೇ ಇರಬೇಕಾಗುತ್ತದೆ.ಸಂತ್ರಸ್ತೆಯು ಸುಪ್ರೀಂ ಕೋರ್ಟ್ನ ಈ ಆದೇಶವನ್ನು ಸ್ವಾಗತಿಸಿದ್ದು, ನ್ಯಾಯದೇವತೆಯ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಒಬ್ಬ ‘ಸಾರ್ವಜನಿಕ ಸೇವಕ’ (ಪೊಲೀಸ್, ಸರ್ಕಾರಿ ಅಧಿಕಾರಿ ಅಥವಾ ಜನಪ್ರತಿನಿಧಿ) ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ಎಸಗಿದರೆ, ಅದನ್ನು ‘ಅಗ್ರಾ ವೇಟೆಡ್ ಪೆನೆಟ್ರೇಟಿವ್ ಸೆಕ್ಷುವಲ್ ಅಸಾಲ್ಟ್’ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ.

ದೆಹಲಿ ಹೈಕೋರ್ಟ್, “ಶಾಸಕರು (ಒಐಂ) ತಾಂತ್ರಿಕವಾಗಿ ಸಾರ್ವಜನಿಕ ಸೇವಕರಲ್ಲ” ಎಂಬ ಕಾರಣ ನೀಡಿ, ಸೆಂಗಾರ್ ವಿರುದ್ಧದ ಈ ಕಠಿಣ ಸೆಕ್ಷನ್ ಅನ್ವಯಿಸುವುದಿಲ್ಲ ಎಂದು ಹೇಳುತ್ತಾ POCSO ಕಾಯ್ದೆಯಡಿ ಅತ್ಯಾಚಾರಕ್ಕೆ ಕನಿಷ್ಠ 7 ರಿಂದ 10 ವರ್ಷಗಳ ಶಿಕ್ಷೆ ಇರುತ್ತದೆ (ಅಪರಾಧ ನಡೆದ ಸಮಯದ ಕಾನೂನಿನಂತೆ). ಸೆಂಗಾರ್ ಈಗಾಗಲೇ ಸುಮಾರು 7 ವರ್ಷ 5 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವುದರಿಂದ ಹೈಕೋರ್ಟ್ ಆತನಿಗೆ ಜಾಮೀನು ನೀಡಿತ್ತು. ಎಂದು ಹೈಕೋರ್ಟ್ ವಾದಿಸಿತು.

ಸುಪ್ರೀಂ ಕೋರ್ಟ್ ಇದನ್ನು ತಳ್ಳಿಹಾಕುತ್ತಾ, “ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾರ್ವಜನಿಕ ಸೇವಕನಾಗುವಾಗ, ಒಬ್ಬ ಶಾಸಕ ಅಥವಾ ಸಂಸದ ಹೇಗೆ ಹೊರತಾಗುತ್ತಾರೆ?” ಎಂದು ಪ್ರಶ್ನಿಸಿದೆ. ಇದು ಕಾನೂನಿನ ವ್ಯಾಖ್ಯಾನದಲ್ಲಿ ದೊಡ್ಡ ತಪ್ಪು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಸಾರ್ವಜನಿಕ ಸೇವಕನಾಗಿದ್ದು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆ, ಅದು ಜೀವಾವಧಿ ಶಿಕ್ಷೆಗೆ ಅರ್ಹವಾಗಿರುತ್ತದೆ. ಸೆಂಗಾರ್ ಒಬ್ಬ ಶಾಸಕನಾಗಿದ್ದುಕೊಂಡು ಈ ಕೃತ್ಯ ಎಸಗಿರುವುದರಿಂದ ಅವರಿಗೆ ಗರಿಷ್ಠ ಶಿಕ್ಷೆ ನೀಡಲಾಗಿತ್ತು.

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಅಪರಾಧ ನಡೆದಾಗ ಸೆಂಗಾರ್ ಒಬ್ಬ ಪ್ರಭಾವಿ ಶಾಸಕನಾಗಿದ್ದ. ಆತ ತನ್ನ ಅಧಿಕಾರ ಮತ್ತು ಸ್ಥಾನಮಾನದ ಮೂಲಕ ಸಂತ್ರಸ್ತೆಯ ಮೇಲೆ ಹತೋಟಿ ಸಾಧಿಸಿದ್ದರಿಂದ ಇದನ್ನು ಸಾಮಾನ್ಯ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ವಾದಿಸಿದರು.

ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಪೀಠವನ್ನು ಒತ್ತಾಯಿಸಿದರು. ಈ ವಿಷಯವನ್ನು ಪರಿಗಣಿಸುವ ಅಗತ್ಯವಿರುವುದರಿಂದ ಪರಿಶೀಲಿಸುವುದಾಗಿ ಪೀಠ ಹೇಳಿದೆ. ಡಿಸೆಂಬರ್ 23 ರ ಹೈಕೋರ್ಟ್ ಆದೇಶದ ನಂತರ ಸೆಂಗಾರ್ ಅವರನ್ನು ಕಸ್ಟಡಿಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಅದು ಹೇಳಿದೆ.


ಸುಪ್ರೀಂ ಕೋರ್ಟ್ ಸಂತ್ರಸ್ತೆಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಸಂತ್ರಸ್ತೆಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯಿಂದ ಉಚಿತ ಕಾನೂನು ನೆರವು ನೀಡುವಂತೆ ಸೂಚಿಸಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯೂ ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸಲು ಹಕ್ಕು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟ್ ಸೆಂಗಾರ್‌ಗೆ 4 ವಾರಗಳ ಕಾಲಾವಕಾಶ ನೀಡಿದ್ದು, ತನ್ನ ಸಮರ್ಥನೆಯನ್ನು ಸಲ್ಲಿಸುವಂತೆ ಸೂಚಿಸಿದೆ. ಅಲ್ಲಿಯವರೆಗೆ ದೆಹಲಿ ಹೈಕೋರ್ಟ್ನ ಜಾಮೀನು ಆದೇಶವು ಕಾರ್ಯರೂಪಕ್ಕೆ ಬರುವುದಿಲ್ಲ.
ಆದಾಗ್ಯೂ, ಉಚ್ಚಾಟಿತ ಬಿಜೆಪಿ ನಾಯಕ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದು, ಆ ಪ್ರಕರಣದಲ್ಲಿ ಜಾಮೀನು ಪಡೆಯದ ಕಾರಣ ಅವರು ಜೈಲಿನಲ್ಲೇ ಇರುತ್ತಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

crime

ಮಣಿಪಾಲ: ಬಾರ್, ಪಬ್‌ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು

Published

on

ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.

ದಾಳಿಗೊಳಗಾದ ಬಾರ್ ಮತ್ತು ಪಬ್‌ಗಳು:

ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:

  1. ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
  2. ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
  3. ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
  4. ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
  5. ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
  6. ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ

ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:

ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್‌ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೊಲೀಸರ ಎಚ್ಚರಿಕೆ:

“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!