Dakshina Kannada
ಪುತ್ತೂರು ಬಿಜೆಪಿಯ ಮಾಜಿ ನಗರಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಪಕ್ಷದಿಂದ ಉಚ್ಚಾಟನೆ
by : V.T. prasad
ಪುತ್ತೂರು: ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬoಧಿಸಿದoತೆ ನಾವು ಹಲವು ಬಾರಿ ಅವರ ಜೊತೆಗೆ ಮಾತುಕತೆ ನಡೆಸಿದ್ದೇವೆ ಈ ಬಗ್ಗೆ ನೋಟಿಸ್ ಕೊಟ್ಟು ಪಕ್ಷದಿಂದ ತೆಗೆದು ಹಾಕಲಾಗಿದೆ ಹಾಗಾಗಿ ಯುವತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವ ಆಗ್ರಹಕ್ಕೆ ಬಿಜೆಪಿ ಬೆಂಬಲ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಯುವತಿಯ ವಿಚಾರದಲ್ಲಿ ನಾವೆಲ್ಲ ಒಟ್ಟು ಸೇರಿ ಜಗನ್ನಿವಾಸ್ ರಾವ್ ಬಳಿ ಮಾತನಾಡಿದ್ದೇವೆ. ಅದರಲ್ಲಿ ಯುವತಿಗೆ ನ್ಯಾಯ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು
ಪುತ್ರನ ಮೇಲಿನ ಗಂಭೀರ ಆರೋಪ:
ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ವಿರುದ್ಧ ಯುವತಿಯೊಬ್ಬರಿಗೆ ಮದುವೆಯ ಭರವಸೆ ನೀಡಿ ವಂಚಿಸಿದ ಮತ್ತು ಲೈಂಗಿಕ ದರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅವರ ಪುತ್ರನ ಬಂಧನವೂ ಆಗಿತ್ತು. ಆರೋಪಿಗೆ ಸಹಕಾರ ನೀಡಿದ ಆರೋಪ: ತಮ್ಮ ಪುತ್ರ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆಯು ಜಿಲ್ಲಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿದ್ದು, ಪ್ರತಿಪಕ್ಷಗಳು ಬಿಜೆಪಿಯ ವಿರುದ್ಧ ಪ್ರತಿಭಟನೆ ನಡೆಸಲು ಕಾರಣವಾಯಿತು. ಪಕ್ಷದ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿಯು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.

ಜಗನ್ನಿವಾಸ ರಾವ್ ಅವರ ಪುತ್ರ ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಯುವತಿ ಗರ್ಭವತಿಯಾದಾಗ ಮದುವೆಯಾಗಲು ನಿರಾಕರಿಸಿದ ಕಾರಣ, ಯುವತಿಯ ಕುಟುಂಬ ಪೊಲೀಸರ ಮೊರೆ ಹೋಗಿತ್ತು. ಈ ಪ್ರಕರಣವು ಪುತ್ತೂರಿನಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿ, ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಉಚ್ಚಾಟನೆಯು ಕೇವಲ ಪಕ್ಷದ ಆಂತರಿಕ ಭಿನ್ನಮತದಿಂದ ಆಗಿದ್ದಲ್ಲ, ಬದಲಿಗೆ ಅವರ ಕುಟುಂಬದ ಮೇಲೆ ಬಂದ ಗಂಭೀರ ಕ್ರಿಮಿನಲ್ ಆರೋಪಗಳು ಮತ್ತು ಅದರಿಂದ ಪಕ್ಷಕ್ಕಾದ ಮುಜುಗರದ ನೇರ ಪರಿಣಾಮವಾಗಿದೆ.
ಪುತ್ತೂರು ಬಿಜೆಪಿಯ ಮಾಜಿ ನಗರಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರ ಉಚ್ಚಾಟನೆ ಹಾಗೂ ಅವರ ಪುತ್ರನ ಮೇಲಿರುವ ಪ್ರಕರಣಕ್ಕೆ ಸಂಬoಧಿಸಿದ ಸಂಪರ್ಣ ವಿವರಗಳು ಮತ್ತು ಇತ್ತೀಚಿನ ಬೆಳವಣಿಗೆಗಳು

ಉಚ್ಚಾಟನೆಗೆ ಪ್ರಮುಖ ಕಾರಣ
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದಂತೆ, ಜಗನ್ನಿವಾಸ ರಾವ್ ಅವರು ತಮ್ಮ ಪುತ್ರನ ವಂಚನೆ ಪ್ರಕರಣದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಆರಂಭದಲ್ಲಿ, ಈ ಪ್ರಕರಣ ಬೆಳಕಿಗೆ ಬಂದಾಗ ಜಗನ್ನಿವಾಸ ರಾವ್ ಅವರು “ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಗನೊಂದಿಗೆ ಆ ಯುವತಿಯ ಮದುವೆ ಮಾಡಿಸುತ್ತೇನೆ” ಎಂದು ಪಕ್ಷದ ಮುಖಂಡರಿಗೆ ಮತ್ತು ಶಾಸಕರಿಗೆ ಭರವಸೆ ನೀಡಿದ್ದರು. ಆದರೆ, ನಂತರದ ದಿನಗಳಲ್ಲಿ ಅವರು ಈ ಭರವಸೆಯಿಂದ ಹಿಂದೆ ಸರಿದಿದ್ದು ಮತ್ತು ಸಂತ್ರಸ್ತೆಗೆ ನ್ಯಾಯ ಒದಗಿಸಲು ಸಹಕರಿಸದ ಕಾರಣ ಪಕ್ಷಕ್ಕೆ ಮುಜುಗರವುಂಟಾಯಿತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ಇತ್ತೀಚಿನ ಅಪ್ಡೇಟ್
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿತ್ತು. ಯುವತಿ ಗರ್ಭವತಿಯಾದಾಗ ಆತ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿದ್ದ. ಸಂತ್ರಸ್ತ ಯುವತಿಯು ಜೂನ್ 2024ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2024ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಂದ ಡಿಎನ್ಎ ಪರೀಕ್ಷಾ ವರದಿಯು, ಕೃಷ್ಣ ಜೆ. ರಾವ್ ಅವರೇ ಆ ಮಗುವಿನ ತಂದೆ ಎಂಬುದನ್ನು ಸಾಬೀತುಪಡಿಸಿದೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು. ಕೃಷ್ಣ ಜೆ. ರಾವ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸೆಪ್ಟೆಂಬರ್ ತಿಂಗಳಿನಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ನೀಡಿತು.
ರಾಜಕೀಯ ಮತ್ತು ಸಾಮಾಜಿಕ ಪರಿಣಾಮ
ಈ ಪ್ರಕರಣ ಪುತ್ತೂರಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಬಿಜೆಪಿ ಮುಖಂಡನ ಪುತ್ರನ ಬಂಧನಕ್ಕೆ ಒತ್ತಾಯಿಸಿ ಬೀದಿಗಿಳಿದಿದ್ದವು. ಸಂತ್ರಸ್ತ ಯುವತಿಯ ಪರವಾಗಿ ಮಹಿಳಾ ಆಯೋಗ ಮತ್ತು ವಿಶ್ವಕರ್ಮ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುoಡಿ ನ್ಯಾಯ ಒದಗಿಸಲು ಧ್ವನಿ ಎತ್ತಿದ್ದರು ಮತ್ತು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಹಿಂದೂ ಸಂಘಟನೆಗಳೂ ಸಹ ಸಂತ್ರಸ್ತ ಯುವತಿಗೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿ ಜಗನ್ನಿವಾಸ ರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.
ಒಟ್ಟಾರೆಯಾಗಿ ಈ ಪ್ರಕರಣವು ವೈಯಕ್ತಿಕ ವಂಚನೆಯಿoದ ಆರಂಭವಾಗಿ, ರಾಜಕೀಯ ಮುಜುಗರಕ್ಕೆ ಕಾರಣವಾಗಿ, ಅಂತಿಮವಾಗಿ ಡಿಎನ್ಎ ವರದಿಯ ಮೂಲಕ ಸತ್ಯ ಸಾಬೀತಾದ ನಂತರ ಜಗನ್ನಿವಾಸ ರಾವ್ ಅವರ ರಾಜಕೀಯ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.

ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ಗೆ ಕೆಲವು ಷರತ್ತುಗಳ ಅನ್ವಯ ಹೈಕೋರ್ಟಿನಿಂದ ಜಾಮೀನು ಮಂಜೂರಾಗಿದೆ. ಇದೀಗ ಮಗುವಿನ ಡಿಎನ್ಎ ವರದಿಯು ಆರೋಪಿಯ ವಿರುದ್ಧವಾಗಿ ಬಂದಿರುವುದರಿoದ, ಇದು ನ್ಯಾಯಾಲಯದಲ್ಲಿ ಪ್ರಬಲ ಸಾಕ್ಷ್ಯವಾಗಿ ಪರಿಣಮಿಸಲಿದೆ. ಸಂತ್ರಸ್ತ ಯುವತಿಗೆ ಪರಿಹಾರ ಕೊಡಿಸಲು ಮತ್ತು ಮಗುವಿನ ಹಕ್ಕುಗಳನ್ನು ರಕ್ಷಿಸಲು ಈ ವರದಿ ಪ್ರಮುಖ ಪಾತ್ರ ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (charge sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯದಂತೆ ಸ್ಥಳೀಯ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ನಿರಂತರವಾಗಿ ನಿಗಾ ಇಟ್ಟಿವೆ. ಸಂತ್ರಸ್ತ ಯುವತಿಯು ತನಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 29, 2025ರಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟಿಸಿರುವುದಾಗಿ ಘೋಷಿಸಿದರು. “ಡಿಎನ್ಎ ವರದಿ ಸಾಬೀತಾದ ಮೇಲೆ ಸಂತ್ರಸ್ತೆಯೊoದಿಗೆ ಮಗನ ಮದುವೆ ಮಾಡಿಸುತ್ತೇನೆ” ಎಂದು ನೀಡಿದ್ದ ಮಾತನ್ನು ಅವರು ತಪ್ಪಿದ್ದೇ ಈ ಉಚ್ಚಾಟನೆಗೆ ಮುಖ್ಯ ಕಾರಣ ಎನ್ನಲಾಗಿದೆ.
award
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.

ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್ಎಸ್ಐ, 7ನೇ ಪಡೆ ಕೆಎಸ್ಆರ್ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್ಟೇಬಲ್ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್ಆರ್ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.
accident
ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.

2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

cyber crime
AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್ಬುಕ್ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.
2025ರ ಅಕ್ಟೋಬರ್ನಲ್ಲಿ ಆರೋಪಿಯು ತನ್ನ ಫೇಸ್ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
