Connect with us

Dakshina Kannada

ಪುತ್ತೂರು ಬಿಜೆಪಿಯ ಮಾಜಿ ನಗರಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಪಕ್ಷದಿಂದ ಉಚ್ಚಾಟನೆ

Published

on

by : V.T. prasad

ಪುತ್ತೂರು: ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬoಧಿಸಿದoತೆ ನಾವು ಹಲವು ಬಾರಿ ಅವರ ಜೊತೆಗೆ ಮಾತುಕತೆ ನಡೆಸಿದ್ದೇವೆ ಈ ಬಗ್ಗೆ ನೋಟಿಸ್ ಕೊಟ್ಟು ಪಕ್ಷದಿಂದ ತೆಗೆದು ಹಾಕಲಾಗಿದೆ ಹಾಗಾಗಿ ಯುವತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವ ಆಗ್ರಹಕ್ಕೆ ಬಿಜೆಪಿ ಬೆಂಬಲ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಯುವತಿಯ ವಿಚಾರದಲ್ಲಿ ನಾವೆಲ್ಲ ಒಟ್ಟು ಸೇರಿ ಜಗನ್ನಿವಾಸ್ ರಾವ್ ಬಳಿ ಮಾತನಾಡಿದ್ದೇವೆ. ಅದರಲ್ಲಿ ಯುವತಿಗೆ ನ್ಯಾಯ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು

ಪುತ್ರನ ಮೇಲಿನ ಗಂಭೀರ ಆರೋಪ:

ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ವಿರುದ್ಧ ಯುವತಿಯೊಬ್ಬರಿಗೆ ಮದುವೆಯ ಭರವಸೆ ನೀಡಿ ವಂಚಿಸಿದ ಮತ್ತು ಲೈಂಗಿಕ ದರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅವರ ಪುತ್ರನ ಬಂಧನವೂ ಆಗಿತ್ತು. ಆರೋಪಿಗೆ ಸಹಕಾರ ನೀಡಿದ ಆರೋಪ: ತಮ್ಮ ಪುತ್ರ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆಯು ಜಿಲ್ಲಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿದ್ದು, ಪ್ರತಿಪಕ್ಷಗಳು ಬಿಜೆಪಿಯ ವಿರುದ್ಧ ಪ್ರತಿಭಟನೆ ನಡೆಸಲು ಕಾರಣವಾಯಿತು. ಪಕ್ಷದ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿಯು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.


ಜಗನ್ನಿವಾಸ ರಾವ್ ಅವರ ಪುತ್ರ ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಯುವತಿ ಗರ್ಭವತಿಯಾದಾಗ ಮದುವೆಯಾಗಲು ನಿರಾಕರಿಸಿದ ಕಾರಣ, ಯುವತಿಯ ಕುಟುಂಬ ಪೊಲೀಸರ ಮೊರೆ ಹೋಗಿತ್ತು. ಈ ಪ್ರಕರಣವು ಪುತ್ತೂರಿನಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿ, ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಉಚ್ಚಾಟನೆಯು ಕೇವಲ ಪಕ್ಷದ ಆಂತರಿಕ ಭಿನ್ನಮತದಿಂದ ಆಗಿದ್ದಲ್ಲ, ಬದಲಿಗೆ ಅವರ ಕುಟುಂಬದ ಮೇಲೆ ಬಂದ ಗಂಭೀರ ಕ್ರಿಮಿನಲ್ ಆರೋಪಗಳು ಮತ್ತು ಅದರಿಂದ ಪಕ್ಷಕ್ಕಾದ ಮುಜುಗರದ ನೇರ ಪರಿಣಾಮವಾಗಿದೆ.
ಪುತ್ತೂರು ಬಿಜೆಪಿಯ ಮಾಜಿ ನಗರಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರ ಉಚ್ಚಾಟನೆ ಹಾಗೂ ಅವರ ಪುತ್ರನ ಮೇಲಿರುವ ಪ್ರಕರಣಕ್ಕೆ ಸಂಬoಧಿಸಿದ ಸಂಪರ್ಣ ವಿವರಗಳು ಮತ್ತು ಇತ್ತೀಚಿನ ಬೆಳವಣಿಗೆಗಳು


ಉಚ್ಚಾಟನೆಗೆ ಪ್ರಮುಖ ಕಾರಣ
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದಂತೆ, ಜಗನ್ನಿವಾಸ ರಾವ್ ಅವರು ತಮ್ಮ ಪುತ್ರನ ವಂಚನೆ ಪ್ರಕರಣದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಆರಂಭದಲ್ಲಿ, ಈ ಪ್ರಕರಣ ಬೆಳಕಿಗೆ ಬಂದಾಗ ಜಗನ್ನಿವಾಸ ರಾವ್ ಅವರು “ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಗನೊಂದಿಗೆ ಆ ಯುವತಿಯ ಮದುವೆ ಮಾಡಿಸುತ್ತೇನೆ” ಎಂದು ಪಕ್ಷದ ಮುಖಂಡರಿಗೆ ಮತ್ತು ಶಾಸಕರಿಗೆ ಭರವಸೆ ನೀಡಿದ್ದರು. ಆದರೆ, ನಂತರದ ದಿನಗಳಲ್ಲಿ ಅವರು ಈ ಭರವಸೆಯಿಂದ ಹಿಂದೆ ಸರಿದಿದ್ದು ಮತ್ತು ಸಂತ್ರಸ್ತೆಗೆ ನ್ಯಾಯ ಒದಗಿಸಲು ಸಹಕರಿಸದ ಕಾರಣ ಪಕ್ಷಕ್ಕೆ ಮುಜುಗರವುಂಟಾಯಿತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ಇತ್ತೀಚಿನ ಅಪ್ಡೇಟ್
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿತ್ತು. ಯುವತಿ ಗರ್ಭವತಿಯಾದಾಗ ಆತ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿದ್ದ. ಸಂತ್ರಸ್ತ ಯುವತಿಯು ಜೂನ್ 2024ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2024ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಂದ ಡಿಎನ್ಎ ಪರೀಕ್ಷಾ ವರದಿಯು, ಕೃಷ್ಣ ಜೆ. ರಾವ್ ಅವರೇ ಆ ಮಗುವಿನ ತಂದೆ ಎಂಬುದನ್ನು ಸಾಬೀತುಪಡಿಸಿದೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು. ಕೃಷ್ಣ ಜೆ. ರಾವ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸೆಪ್ಟೆಂಬರ್ ತಿಂಗಳಿನಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ನೀಡಿತು.

ರಾಜಕೀಯ ಮತ್ತು ಸಾಮಾಜಿಕ ಪರಿಣಾಮ
ಈ ಪ್ರಕರಣ ಪುತ್ತೂರಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಬಿಜೆಪಿ ಮುಖಂಡನ ಪುತ್ರನ ಬಂಧನಕ್ಕೆ ಒತ್ತಾಯಿಸಿ ಬೀದಿಗಿಳಿದಿದ್ದವು. ಸಂತ್ರಸ್ತ ಯುವತಿಯ ಪರವಾಗಿ ಮಹಿಳಾ ಆಯೋಗ ಮತ್ತು ವಿಶ್ವಕರ್ಮ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುoಡಿ ನ್ಯಾಯ ಒದಗಿಸಲು ಧ್ವನಿ ಎತ್ತಿದ್ದರು ಮತ್ತು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಹಿಂದೂ ಸಂಘಟನೆಗಳೂ ಸಹ ಸಂತ್ರಸ್ತ ಯುವತಿಗೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿ ಜಗನ್ನಿವಾಸ ರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.
ಒಟ್ಟಾರೆಯಾಗಿ ಈ ಪ್ರಕರಣವು ವೈಯಕ್ತಿಕ ವಂಚನೆಯಿoದ ಆರಂಭವಾಗಿ, ರಾಜಕೀಯ ಮುಜುಗರಕ್ಕೆ ಕಾರಣವಾಗಿ, ಅಂತಿಮವಾಗಿ ಡಿಎನ್ಎ ವರದಿಯ ಮೂಲಕ ಸತ್ಯ ಸಾಬೀತಾದ ನಂತರ ಜಗನ್ನಿವಾಸ ರಾವ್ ಅವರ ರಾಜಕೀಯ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.

ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್‌ಗೆ ಕೆಲವು ಷರತ್ತುಗಳ ಅನ್ವಯ ಹೈಕೋರ್ಟಿನಿಂದ ಜಾಮೀನು ಮಂಜೂರಾಗಿದೆ. ಇದೀಗ ಮಗುವಿನ ಡಿಎನ್ಎ ವರದಿಯು ಆರೋಪಿಯ ವಿರುದ್ಧವಾಗಿ ಬಂದಿರುವುದರಿoದ, ಇದು ನ್ಯಾಯಾಲಯದಲ್ಲಿ ಪ್ರಬಲ ಸಾಕ್ಷ್ಯವಾಗಿ ಪರಿಣಮಿಸಲಿದೆ. ಸಂತ್ರಸ್ತ ಯುವತಿಗೆ ಪರಿಹಾರ ಕೊಡಿಸಲು ಮತ್ತು ಮಗುವಿನ ಹಕ್ಕುಗಳನ್ನು ರಕ್ಷಿಸಲು ಈ ವರದಿ ಪ್ರಮುಖ ಪಾತ್ರ ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (charge sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯದಂತೆ ಸ್ಥಳೀಯ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ನಿರಂತರವಾಗಿ ನಿಗಾ ಇಟ್ಟಿವೆ. ಸಂತ್ರಸ್ತ ಯುವತಿಯು ತನಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 29, 2025ರಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟಿಸಿರುವುದಾಗಿ ಘೋಷಿಸಿದರು. “ಡಿಎನ್ಎ ವರದಿ ಸಾಬೀತಾದ ಮೇಲೆ ಸಂತ್ರಸ್ತೆಯೊoದಿಗೆ ಮಗನ ಮದುವೆ ಮಾಡಿಸುತ್ತೇನೆ” ಎಂದು ನೀಡಿದ್ದ ಮಾತನ್ನು ಅವರು ತಪ್ಪಿದ್ದೇ ಈ ಉಚ್ಚಾಟನೆಗೆ ಮುಖ್ಯ ಕಾರಣ ಎನ್ನಲಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರು: ಮಾದಕ ವಸ್ತು ಮಾರಾಟ ದಂಧೆಕೋರರ ಜಾಲಕ್ಕೆ ಪೊಲೀಸ್ ಲಗಾಮು; ಮೂವರ ಬಂಧನ!

Published

on

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೀವ್ರ ನಿಗಾ ಇರಿಸಿದ್ದು, ಪ್ರತ್ಯೇಕ ದಾಳಿಗಳ ಮೂಲಕ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ.

ಪ್ರಕರಣ 1: ಗೂಡ್ ಶೆಡ್ಡೆ ಬಳಿ ಎಂಡಿಎಂಎ ಮಾರಾಟ ಯತ್ನ – ಇಬ್ಬರ ಬಂಧನ

ದಿನಾಂಕ 08-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ ಶೆಡ್ಡೆ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಗಳು: 1. ಜನನ್ ಜಗನ್ನಾಥ್ (29 ವರ್ಷ), ತಂದೆ: ಜಗನ್ನಾಥ್, ವಾಸ: ಸಿಲ್ವ‌ರ್ ಗೇಟ್, ಕುಲಶೇಖರ, ಮಂಗಳೂರು. 2. ಪರೀಕ್ಷಿತ್ (33 ವರ್ಷ), ತಂದೆ: ಲೇ. ಜಯರಾಮ ಶೆಟ್ಟಿ, ವಾಸ: ಬೋಳಾರ, ಮಂಗಳೂರು.

ಸ್ವಾಧೀನಪಡಿಸಿಕೊಂಡ ಸೊತ್ತುಗಳು: ದಾಳಿಯ ವೇಳೆ ಪೊಲೀಸರು ಒಟ್ಟು 11.68 ಗ್ರಾಂ ಎಂಡಿಎಂಎ ಮಾದಕ ವಸ್ತು, ₹1,110 ನಗದು ಹಣ, 3 ಮೊಬೈಲ್ ಫೋನ್‌ಗಳು ಹಾಗೂ ಮಾದಕ ವಸ್ತು ತೂಕ ಮಾಡಲು ಬಳಸುತ್ತಿದ್ದ 1 ತೂಕ ಮಾಪನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ (ಪ್ರಕರಣ ಸಂಖ್ಯೆ 122/2026) ಮೊಕದ್ದಮೆ ದಾಖಲಾಗಿದೆ.

ಪ್ರಕರಣ 2: ಡ್ರಗ್ಸ್ ಜಾಲದ ಮತ್ತೊಬ್ಬ ಆರೋಪಿ ಸುಶಾನ್ ಪೂಜಾರಿ ವಶಕ್ಕೆ

ದಿನಾಂಕ 06-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಎನ್.ಡಿ.ಪಿ.ಎಸ್ ಪ್ರಕರಣಕ್ಕೆ (ಕ್ರೈಂ ಸಂಖ್ಯೆ 116/2026) ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ: ಸುಶಾನ್ ಪೂಜಾರಿ (27 ವರ್ಷ), ತಂದೆ: ಲೋಹಿತಾಶ್ವ, ವಾಸ: ನಳಂದ ಶಾಲೆ ಹತ್ತಿರ, ಕಾರ್ ಸ್ಟ್ರೀಟ್, ಮಂಗಳೂರು.

ಹಿನ್ನೆಲೆ: ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಇದೀಗ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಶಾನ್ ಪೂಜಾರಿಯನ್ನು ದಿನಾಂಕ 09-06-2026 ರಂದು ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಮುಂದಿನ ಪೊಲೀಸ್ ಕ್ರಮ:

ಬಂಧಿತ ಎಲ್ಲಾ ಆರೋಪಿಗಳನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಮಾದಕ ವಸ್ತು ಜಾಲದ ಮೂಲ ಹಾಗೂ ಇದರ ಹಿಂದೆ ಇರುವ ಇತರ ಕಿಂಗ್‌ಪಿನ್‌ಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.




Continue Reading

crime

ಕೋಟಿಗಟ್ಟಲೆ ಹನಿಟ್ರ್ಯಾಪ್ ಆರೋಪ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ

Published

on

ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಕೋಟಿಗಟ್ಟಲೆ ಹಣ ಸುಲಿಗೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಈ ಕುರಿತು ಅಧಿಕೃತ ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ.

ಉಚ್ಚಾಟನೆಗೆ ಕಾರಣಗಳೇನು?

ಸಮಾಜ ವಿರೋಧಿ ಚಟುವಟಿಕೆ: ನಿಝಾಮ್ ವಿರುದ್ಧ ಕೇಳಿಬಂದಿರುವ ಸಮಾಜ ವಿರೋಧಿ ಚಟುವಟಿಕೆಯ ಆರೋಪಗಳು ಪಕ್ಷದ ಗಮನಕ್ಕೆ ಬಂದಿವೆ.

ಪಕ್ಷದ ಗೌರವಕ್ಕೆ ಧಕ್ಕೆ: ಈ ಆರೋಪಗಳು ಪಕ್ಷದ ಶಿಸ್ತು ಮತ್ತು ಗೌರವಕ್ಕೆ ತೀವ್ರ ಧಕ್ಕೆ ಉಂಟುಮಾಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಿಸ್ತು ಕ್ರಮ: ಪಕ್ಷದ ಹಿತಾಸಕ್ತಿ ಹಾಗೂ ಶಿಸ್ತನ್ನು ಕಾಪಾಡುವ ದೃಷ್ಟಿಯಿಂದ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಯುವ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ.

ಪಕ್ಷದ ಕಡಕ್ ಸಂದೇಶ: > “ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ:

ಮಂಗಳೂರಿನ ಉದ್ಯಮಿಯೊಬ್ಬರಿಗೆ ಯುವತಿಯನ್ನು ಪರಿಚಯಿಸಿ, ಬಳಿಕ ಖಾಸಗಿ ದೃಶ್ಯಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2.77 ಕೋಟಿ ರೂ. ಹಣವನ್ನು ಸುಲಿಗೆ ಮಾಡಲಾದ ಗಂಭೀರ ಪ್ರಕರಣ ದಾಖಲಾಗಿದೆ. ಈ ಹನಿಟ್ರ್ಯಾಪ್ ಜಾಲದಲ್ಲಿ ನಿಝಾಮ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ತೀವ್ರ ಮುಖಭಂಗ ಉಂಟಾಗಿತ್ತು. ಮುಜುಗರದಿಂದ ಪಾರಾಗಲು ಜಿಲ್ಲಾ ಯುವ ಕಾಂಗ್ರೆಸ್ ಘಟಕವು ಆರೋಪಿ ವಿರುದ್ಧ ಈ ಕಠಿಣ ಕ್ರಮ ಜರುಗಿಸಿದೆ.




Continue Reading

Dakshina Kannada

ಮಾನವೀಯತೆಯ ಸಾಕಾರ: ಕುಂಬ್ರದ ಖ್ಯಾತ ವೈದ್ಯ ಡಾ. ವಿಘ್ನೇಶ್ವರ ಭಟ್‌ ಚಿಕಿತ್ಸೆಗೆ ಹರಿದುಬಂದ ನೆರವು; ಇನ್ನೂ ಬೇಕಿದೆ ಸಹೃದಯಿಗಳ ಸಹಕಾರ

Published

on

ಪುತ್ತೂರು: ಪುತ್ತೂರು ತಾಲೂಕಿನ ಕುಂಬ್ರದ ‘ಅಮೃತ ಕ್ಲಿನಿಕ್’ನಲ್ಲಿ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ನಿರಂತರವಾಗಿ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಾ, ಅಪಾರ ಜನಮನ್ನಣೆ ಗಳಿಸಿರುವ ಪಾರಂಪರಿಕ ಶೈಲಿಯ ಜನಪ್ರಿಯ ಕುಟುಂಬ ವೈದ್ಯ ಡಾ. ವಿಘ್ನೇಶ್ವರ ಭಟ್ ಅವರು ಸದ್ಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕರ ನೆರವಿನ ಹಸ್ತ ಚಾಚಿದ್ದಾರೆ.

ಕಳೆದ 2-3 ತಿಂಗಳುಗಳಿಂದ ದೈಹಿಕ ಅನಾರೋಗ್ಯ ಎದುರಿಸುತ್ತಿದ್ದ ಅವರಿಗೆ ವೈದ್ಯಕೀಯ ಪರೀಕ್ಷೆಗಳ ನಂತರ ತೀವ್ರತರದ ರಕ್ತದ ಕ್ಯಾನ್ಸರ್ (T-Cell Lymphoma) ಇರುವುದು ಪತ್ತೆಯಾಗಿದೆ. ಸದ್ಯ ಮಂಗಳೂರಿನ ಎಂ.ಐ.ಓ (Mangalore Institute of Oncology) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ಈಗಾಗಲೇ ಸುಮಾರು 20 ಲಕ್ಷ ರೂ. ವೆಚ್ಚವಾಗಿದೆ. ಮುಂದಿನ ಹಂತದ ಅಸ್ಥಿಮಜ್ಜೆ ಕಸಿ (Bone Marrow Transplant) ಹಾಗೂ ಇತರ ತುರ್ತು ಚಿಕಿತ್ಸೆಗಳಿಗಾಗಿ ಇನ್ನೂ ಅಂದಾಜು 20 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ. ವೈದ್ಯಕೀಯ ವೃತ್ತಿಯನ್ನೇ ನಂಬಿಕೊಂಡಿದ್ದ ಅವರಿಗೆ ಈ ಬೃಹತ್ ಮೊತ್ತವನ್ನು ಹೊಂದಿಸುವುದು ಕಷ್ಟಸಾಧ್ಯವಾಗಿರುವುದರಿಂದ ಸಹೃದಯಿ ಜನರಲ್ಲಿ ಧನಸಹಾಯಕ್ಕಾಗಿ ವಿನಂತಿಸಿಕೊಂಡಿದ್ದರು.

ಕೋಮು ಸೌಹಾರ್ದತೆ ಮೆರೆದ ಶೇಕಮಲೆ ಮಸೀದಿ ಸಮಿತಿ: ಡಾ. ವಿಘ್ನೇಶ್ವರ ಭಟ್ ಅವರ ಕಷ್ಟಕ್ಕೆ ಸ್ಪಂದಿಸಿ ಇತ್ತೀಚೆಗೆ ಶೇಕಮಲೆ ಮಸೀದಿ ಕಮಿಟಿಯವರು “ಮಾನವೀಯತೆಯ ಬಕ್ರೀದ್” ಎಂಬ ಆಶಯದೊಂದಿಗೆ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವ ಮೂಲಕ ಕೋಮು ಸೌಹಾರ್ದತೆ ಮತ್ತು ಜಾತಿಗೆ ತೀತವಾದ ಮಾನವೀಯ ಗುಣವನ್ನು ಸಾರಿದ್ದಾರೆ. ಇವರ ಈ ಕಾರ್ಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

ವಿದೇಶಿ ಉದ್ಯಮಿ ಎಡಕ್ಕಾನ ಮಹಾಬಲೇಶ್ವರ ಶ್ಯಾಂ ಭಟ್ ನೆರವು: ಇದೀಗ ಡಾಕ್ಟರ್ ಅವರ ಚಿಕಿತ್ಸೆಗೆ ಮತ್ತೊಂದು ಆಸರೆಯಾಗಿ ಹೊರದೇಶದ ಖ್ಯಾತ ಉದ್ಯಮಿ ಎಡಕ್ಕಾನ ಮಹಾಬಲೇಶ್ವರ ಶ್ಯಾಂ ಭಟ್ ಅವರು 50,000 ರೂ. ಆರ್ಥಿಕ ಸಹಾಯ ಹಸ್ತ ಚಾಚುವ ಮೂಲಕ ತಮ್ಮ ಉದಾರಿ ಗುಣವನ್ನು ಮೆರೆದಿದ್ದಾರೆ. ಇವರೊಂದಿಗೆ ಹಲವಾರು ಸಹೃದಯಿ ಸಾರ್ವಜನಿಕರು ಕೂಡ ಈಗಾಗಲೇ ತಮ್ಮ ಕೈಲಾದ ಧನಸಹಾಯವನ್ನು ಒದಗಿಸಿದ್ದಾರೆ.

ಇನ್ನೂ ಬೇಕಿದೆ ಸಹೃದಯಿಗಳ ಸಹಕಾರ: ಬಡವರ, ಸಾರ್ವಜನಿಕರ ಕಣ್ಣೊರೆಸುತ್ತಿದ್ದ ವೈದ್ಯರೊಬ್ಬರು ಇಂದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಇವರ ಮುಂದಿನ ಚಿಕಿತ್ಸೆ ಸುಗಮವಾಗಿ ಸಾಗಲು ಇನ್ನು ಕೂಡ ಭಾರಿ ಮೊತ್ತದ ನೆರವಿನ ಅಗತ್ಯವಿದೆ. ಹೀಗಾಗಿ ದೇಶ-ವಿದೇಶಗಳಲ್ಲಿರುವ ದಾನಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಉದಾರವಾಗಿ ಧನಸಹಾಯ ಮಾಡುವ ಮೂಲಕ ಡಾ. ವಿಘ್ನೇಶ್ವರ ಭಟ್ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳುವಂತೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.

ಧನಸಹಾಯ ಮಾಡಬಯಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮೆ ಮಾಡಬಹುದು:

  • ಬ್ಯಾಂಕ್ ಹೆಸರು: ಕರ್ಣಾಟಕ ಬ್ಯಾಂಕ್ (Karnatāka Bank)
  • ಶಾಖೆ: ದರ್ಬೆ, ಪುತ್ತೂರು
  • ಖಾತೆ ಸಂಖ್ಯೆ (A/c No): 1023202500000601
  • ಐಎಫ್‌ಎಸ್‌ಸಿ ಕೋಡ್ (IFSC): KARB0001023
  • ಗೂಗಲ್ ಪೇ ಸಂಖ್ಯೆ (G-Pay): 961163784



Continue Reading

Trending

Copyright © 2025 Deevatige

error: Content is protected !!