accident
ಬಾಕ್ಸೈಟ್ ಲಾರಿಗಳ ಅಟ್ಟಹಾಸದಿಂದ ಎಕ್ಕುಟ್ಟಿ ಹೋದ ಅಂತರ್ರಾಜ್ಯ ಸಂಪರ್ಕ ರಸ್ತೆ..ಕನ್ಯಾನ-ಮುಗುಳಿ-ಉಪ್ಪಳ ರಸ್ತೆ ದುರವಸ್ಥೆ ಖಂಡಿಸಿ ಸಾರ್ವಜನಿಕರ ಪ್ರತಿಭಟನೆ.
ಬಂಟ್ವಾಳ ತಾಲೂಕು ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಮೂಲಕ ಹಾದುಹೋಗುವ ಕನ್ಯಾನ-ಮುಗುಳಿ-ಉಪ್ಪಳ ಅಂತರ್ರಾಜ್ಯ ರಸ್ತೆ ಸಂಪೂರ್ಣ ನರಕ ಸದೃಷವಾಗಿದೆ. ಗ್ರಾಮಾಂತರ ರಸ್ತೆಯಲ್ಲಿ ನಿಯಮಬಾಹಿರವಾಗಿ ಹನ್ನೆರಡು, ಹದಿನಾಲ್ಕು, ಹದಿನಾರು ಹಾಗೂ ಇಪ್ಪತ್ತೆರಡು ಚಕ್ರಗಳ ಭಾರೀ ಸರಕು ಸಾಗಾಟದ ಲಾರಿಗಳು ನಲ್ವತ್ತು, ಐವತ್ತು ಟನ್ ಬಾಕ್ಸೈಟ್ ತುಂಬಿಸಿ ಹೊರ ರಾಜ್ಯಗಳಿಗೆ ಸಂಚರಿಸುತ್ತಿವೆ.

ರಸ್ತೆಯಲ್ಲಿ ಓಡಾಡುವ ನಾಗರಿಕರ ಮತ್ತು ವಾಹನ ಸವಾರರ ಪಾಲಿಗೆ ಅಕ್ರಮ ಹಾಗೂ ಸಾರಿಗೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವ ಬಾಕ್ಸೈಟ್ ಸಾಗಾಟದ ಯಮದೂತ ಲಾರಿಗಳು ಸಂಕಷ್ಟ ತಂದೊಡ್ಡಿದೆ.
ಈ ಬಗ್ಗೆ ಎಚ್ಚೆತ್ತುಕೊಂಡು ಬಾಕ್ಸೈಟ್ ಲಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ಮನವಿ ನೀಡಿದ್ಜರು.
ಆದರೆ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಯಾವುದೇ ರೀತಿಯಲ್ಲಿ ಈವರೆಗೂ ಸ್ಪಂದಿಸದ ಕಾರಣ ಇಂದು ಬೆಳಗ್ಗಿನಿಂದ ನೆಲ್ಲಿಕಟ್ಟೆ ಜಂಕ್ಷನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಹೋರಾಟಗಾರ ಶ್ರೀನಿವಾಸ ಭಟ್ ಕಮ್ಮಾಜೆ, ಮೊಯಿದು ಕುಂಞಿ ಪಾದೆಕಲ್ಲು, ಅಬ್ದುಲ್ ಹಮೀದ್ ಪಾದೆಕಲ್ಲು, ಆನಂದ ಪಾದೆಕಲ್ಲು, ವೆಂಕಟ್ರಮಣ ಭಟ್ ಪಾದೆಕಲ್ಲು, ಸಫಾನ್ ಕರೋಪಾಡಿ, ಕುಂಞಿಮೋನು ಮಂಡಿಯೂರು, ಖಾದರ್ ಕುಕ್ಕಾಜೆ, ರಘುರಾಮ ಶೆಟ್ಟಿ ಕನ್ಯಾನ, ಡಾ. ರಾಮಚಂದ್ರ ಭಟ್ ಮತ್ತು ಗಣೇಶ್ ಭಟ್ ಮಂಡ್ಯೂರು ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಹಾಯಕ ಇಂಜಿನಿಯರ್ ಜಗದೀಶ್, ಬಂಟ್ವಾಳ ಪ್ರಾದೇಶಿಕ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರಾದ ಪ್ರಮೋದ್ ಎಂ.ಭಟ್, ಸಚಿನ್, ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಪ್ರತಿಭಟನಾ ಸಂದರ್ಭ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
accident
ಕನ್ಯಾನದ ಹೋಟೆಲ್ ಕಾರ್ಮಿಕ ಮುನೀರ್ ದುರ್ಮರಣ.. ಕುಂಬಳೆ ಆರಿಕ್ಕಾಡಿಯಲ್ಲಿ ಕಾರು-ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ..
ರಾಷ್ಟ್ರೀಯ ಹೆದ್ದಾರಿಯ ಕುಂಬಳೆ-ಆರಿಕ್ಕಾಡಿಯಲ್ಲಿ ಕಾರು ಮತ್ತು ಡಿಯೋ ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಡಿಯೋ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು ವಿವಾಹವಾಗಿದ್ದು ಬಳಿಕ ಇಲ್ಲೇ ವಾಸವಾಗಿದ್ದರು. ಕನ್ಯಾನ ಪೇಟೆಯಲ್ಲಿರುವ ಹೋಟೆಲಲ್ಲಿ ಕಾರ್ಮಿಕರಾಗಿರುವ ಮುನೀರ್ ಸಂಜೆ ಮಾಲಿಕನ KA19 EW 9003ಸಂಖ್ಯೆಯ ಡಿಯೋ ಸ್ಕೂಟರ್ ಪಡೆದು ಕುಂಬಳೆ ಕಡೆ ಹೋಗಿದ್ದರೆನ್ನಲಾಗಿದೆ.
ಮರಳಿ ಬರುವ ಸಂದರ್ಭ ಆರಿಕ್ಕಾಡಿಯಲ್ಲಿ ಮಿತಿಮೀರಿದ ವೇಗದಲ್ಲಿ ಬಂದ ಕಾರು ಡಿಯೋಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
accident
ಮಿತಿಮೀರಿದ ವೇಗ, ನಿರ್ಲಕ್ಷ್ಯದ ಚಾಲನೆ..ಬೈಕ್ ಸವಾರನ ಹುಚ್ಚಾಟಕ್ಕೆ ವೃದ್ಧೆ ಬಲಿ..ವಿಟ್ಲದಲ್ಲಿ ಬೆಳ್ಳಂಬೆಳಗ್ಗೆ ವೃದ್ಧೆಗೆ ಡಿಕ್ಕಿ ಹೊಡೆದ ಬೈಕ್..
ವಿಟ್ಲ: ವಿಟ್ಲದ ಖಾಸಗಿ ಬಸ್ಟ್ಯಾಂಡ್ ಮುಂದಿನ ಮುಖ್ಯರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ವಿಟ್ಲ ಬಸ್ಸ್ಟ್ಯಾಂಡ್ ಸಮೀಪ ಪುತ್ತೂರು ಕಡೆಗಿಂದ ಅತೀ ವೇಗವಾಗಿ ಬರುತ್ತಿದ್ದ ಬೈಕ್ ಪಾದಾಚಾರಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮದ ಮರುವಾಳ ಸೀತಾ ಶೆಟ್ಟಿ (65) ಮೃತಪಟ್ಟ ವೃದ್ಧೆಯಾಗಿದ್ದಾರೆ. ಅಪಘಾತದ ತೀವ್ರತೆಗೆ ವೃದ್ಧೆಗೆ ಡಿಕ್ಕಿ ಹೊಡೆದ ಬೈಕ್ 50ಮೀಟರ್ ದೂರದವರೆಗೆ ಸವಾರನನ್ನು ಎಳೆದುಕೊಂಡು ಹೋಗಿತ್ತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬೈಕ್ ಸವಾರನು ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ.
ಅಪಘಾತದ ನಂತರ ಬೈಕ್ ಸುಮಾರು 50 ಮೀಟರ್ ದೂರ ರಸ್ತೆಯಲ್ಲಿ ಎಳೆಯುತ್ತ ಹೋಗಿ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ವೃದ್ಧೆ, ಗಂಭೀರ ಗಾಯಗೊಂಡ ಬೈಕ್ ಸವಾರನ ಆಸ್ಪತ್ರೆಗೆ ಕರೆದೊಯ್ಯಲು ಅಂಗಲಾಚಿದರೂ ಯಾವೊಬ್ಬ ಆಟೋ ಚಾಲಕರೂ ಬರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ.
ಮೃತ ಸೀತಾ ಶೆಟ್ಟಿ ಅವರು ಓರ್ವ ಪುತ್ರ ರೂಪೇಶ್ ಹಾಗೂ ಪುತ್ರಿ ರೂಪಿತ ರನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

ವಿಟ್ಲ ಬಸ್ಸು ನಿಲ್ದಾಣದ ಎದುರು ಮಾರ್ಗದ ಎರಡೂ ಬದಿಯೂ ವೇಗ ನಿಯಂತ್ರಕ ಹಂಪ್ಸ್ ಅಳವಡಿಸಬೇಕೆಂದು ಸಾರ್ವಜನಿಕರು ಅಗ್ರಹಿಸುತ್ತಲೇ ಇದ್ದರೂ ಆಗಾಗ ಅತೀ ವೇಗವಾಗಿ ಬರುವ ಗಾಡಿಗಳು ಮಾರ್ಗ ದಾಟುವ ಪಾದಾಚಾರಿಗಳಿಗೆ ಸಂಕಷ್ಟವನ್ನು ಒಡ್ಡುತ್ತಲೇ ಇದ್ದಾರೆ. ತಿಂಗಳಿನ ಹಿಂದೆ ಕೂಡಾ ಓರ್ವ ಬೈಕ್ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಬಸ್ಸು ನಿಲ್ದಾಣದ ಆ ಬದಿಯಿಂದ ಮತ್ತು ಈ ಬದಿಯಿಂದ ನಿರಂತರವಾಗಿ ಪಾದಾಚಾರಿಗಳು ರಸ್ತೆ ದಾಟುತ್ತಲೇ ಇದ್ದರೂ ವಾಹನಗಳು ತಮ್ಮ ವೇಗದ ಮಿತಿಯನ್ನು ಕಡಿಮೆ ಮಾಡದೆ ಸಂಕಷ್ಟವನ್ನು ತರುತ್ತಿರುವುದು ದಿನಂಪ್ರತಿ ಕಂಡುಬರುತ್ತಿದೆ.
ಬಸ್ ಸ್ಟ್ಯಾಂಡ್ , ಶಿಕ್ಷಣ ಸಂಸ್ಥೆ , ಮಾರ್ಕೇಟ್ ಮೊದಲಾದ ಜನನಿಬಿಡ ಪ್ರದೇಶಗಳಲ್ಲಿ ವೇಗದ ಮಿತಿಯನ್ನು ಕಡಿಮೆ ಮಾಡಿಕೊಳ್ಳಬೇಕೆಂಬ ಪರಿಜ್ಞಾನ ಸವಾರರಿಗಿಲ್ಲವಾದರೂ ಹಂಪ್ಸ್ ನಿರ್ಮಿಸುವ ಮೂಲಕ ಮುಂದೆ ನಡೆಯಬಹುದಾದ ದುರ್ಘಟನೆಗಳಿಗೆ ಅಂತ್ಯ ಆಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
-
crime6 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

