crime
ಪುತ್ತೂರು ಅತ್ಯಾಚಾರ ವಂಚನೆ ಪ್ರಕರಣ; ಹಿಂದೂ ಸಂಘಟನೆಗಳ ಮೌನವೇಕೆ ? ಪ್ರತಿಭಾ ಕುಳಾಯಿ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/puttur.jpg&description=ಪುತ್ತೂರು ಅತ್ಯಾಚಾರ ವಂಚನೆ ಪ್ರಕರಣ; ಹಿಂದೂ ಸಂಘಟನೆಗಳ ಮೌನವೇಕೆ ? ಪ್ರತಿಭಾ ಕುಳಾಯಿ', 'pinterestShare', 'width=750,height=350'); return false;" title="Pin This Post">
ಸಂಧಾನದ ಬಾಗಿಲು ಮುಚ್ಚಿದೆ; ಆರೋಪಿ ಕೃಷ್ಣ ಜೆ.ರಾವ್ ( KRISHNA J. RAO)ಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ; ನಾಮಕರಣ ಶಾಸ್ತçದ ಮೂಲಕ ಕಲ್ಲಡ್ಕದಿಂದಲೇ ಪ್ರತಿಭಟನೆ, ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ – ಪ್ರತಿಭಾ ಕುಳಾಯಿ ಸವಾಲು
ಮಂಗಳೂರು : ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್ಗೆ ಕೋರ್ಟ್ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.

50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ
ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಎನ್ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನ ಅವರ ಜತೆಗಿದೆ ಎಂದರು. ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕುಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.

ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ
ಕರಾವಳಿಯಲ್ಲಿ ಹಿಂದು ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.
ಪೂಜಾ ಆತ್ಮಹತ್ಯೆಗೂ ಯೋಚಿಸಿದ್ದಾಳೆ
ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಪೂಜಾಳನ್ನು ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ
ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬಾ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ಆಗಬೇಕಾಗಿರುವುದು ಪೂಜಾಳಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ. ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳವನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂತೃಸ್ತೆ ಪೂಜಾ ಮಾತಾಡಿ ತನ್ನ ನೋವನ್ನು ಹೇಳಿಕೊಂಡು ಗಳಗಳನೆ ಅತ್ತು ಕಣ್ನೀರು ಸುರಿಸಿದ ಘಟನೆಯೂ ನಡೆಯಿತು.
ಪ್ರಕರಣದ ಹಿನ್ನೆಲೆ
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿತ್ತು. ಯುವತಿ ಗರ್ಭವತಿಯಾದಾಗ ಆತ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿದ್ದ. ಸಂತ್ರಸ್ತ ಯುವತಿಯು ಜೂನ್ 2024ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2024ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಂದ ಡಿಎನ್ಎ ಪರೀಕ್ಷಾ ವರದಿಯು, ಕೃಷ್ಣ ಜೆ. ರಾವ್ ಅವರೇ ಆ ಮಗುವಿನ ತಂದೆ ಎಂಬುದನ್ನು ಸಾಬೀತುಪಡಿಸಿದೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು. ಕೃಷ್ಣ ಜೆ. ರಾವ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸೆಪ್ಟೆಂಬರ್ ತಿಂಗಳಿನಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ನೀಡಿತು.

ರಾಜಕೀಯ ಮತ್ತು ಸಾಮಾಜಿಕ ಪರಿಣಾಮ
ಈ ಪ್ರಕರಣ ಪುತ್ತೂರಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಬಿಜೆಪಿ ಮುಖಂಡನ ಪುತ್ರನ ಬಂಧನಕ್ಕೆ ಒತ್ತಾಯಿಸಿ ಬೀದಿಗಿಳಿದಿದ್ದವು. ಸಂತ್ರಸ್ತ ಯುವತಿಯ ಪರವಾಗಿ ಮಹಿಳಾ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮತ್ತು ವಿಶ್ವಕರ್ಮ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುoಡಿ ನ್ಯಾಯ ಒದಗಿಸಲು ಧ್ವನಿ ಎತ್ತಿದ್ದರು ಮತ್ತು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಹಿಂದೂ ಸಂಘಟನೆಗಳೂ ಸಹ ಸಂತ್ರಸ್ತ ಯುವತಿಗೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿ ಜಗನ್ನಿವಾಸ ರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.
ಒಟ್ಟಾರೆಯಾಗಿ ಈ ಪ್ರಕರಣವು ವೈಯಕ್ತಿಕ ವಂಚನೆಯಿoದ ಆರಂಭವಾಗಿ, ರಾಜಕೀಯ ಮುಜುಗರಕ್ಕೆ ಕಾರಣವಾಗಿ, ಅಂತಿಮವಾಗಿ ಡಿಎನ್ಎ ವರದಿಯ ಮೂಲಕ ಸತ್ಯ ಸಾಬೀತಾದ ನಂತರ ಜಗನ್ನಿವಾಸ ರಾವ್ ಅವರ ರಾಜಕೀಯ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬಿದ್ದರೂ ಮಗ ಮಾಡುತ್ತಿರುವ ವಂಚನೆಗೆ ತಂದೆ ಉತ್ತರಿಸಲಾರದೆ ಹೋದರು.

ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಾಧ್ಯತೆ
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ಗೆ ಕೆಲವು ಷರತ್ತುಗಳ ಅನ್ವಯ ಹೈಕೋರ್ಟಿನಿಂದ ಜಾಮೀನು ಮಂಜೂರಾಗಿದೆ. ಇದೀಗ ಮಗುವಿನ ಡಿಎನ್ಎ ವರದಿಯು ಆರೋಪಿಯ ವಿರುದ್ಧವಾಗಿ ಬಂದಿರುವುದರಿoದ, ಇದು ನ್ಯಾಯಾಲಯದಲ್ಲಿ ಪ್ರಬಲ ಸಾಕ್ಷ್ಯವಾಗಿ ಪರಿಣಮಿಸಲಿದೆ. ಸಂತ್ರಸ್ತ ಯುವತಿಗೆ ಪರಿಹಾರ ಕೊಡಿಸಲು ಮತ್ತು ಮಗುವಿನ ಹಕ್ಕುಗಳನ್ನು ರಕ್ಷಿಸಲು ಈ ವರದಿ ಪ್ರಮುಖ ಪಾತ್ರ ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Chargesheet) ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯದಂತೆ ಸ್ಥಳೀಯ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ನಿರಂತರವಾಗಿ ನಿಗಾ ಇಟ್ಟಿವೆ. ಸಂತ್ರಸ್ತ ಯುವತಿಯು ತನಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಹಿಂದೂ ಸಂಘಟನೆಗಳು ಹಿಂದೂ ಸಮಾಜಕ್ಕೆ ನ್ಯಾಯ ಒದಗಿಸುವ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಎಂದು ವೇದಿಕೆಯಲ್ಲಿ ಹೇಳುತ್ತಾ ಬಂದರೂ ನಮ್ಮ ಸಮಾಜದಿಂದಲೇ ಅನ್ಯಾಯಗಳು ನಡೆದಾಗ ಬಹುತೇಕ ಮೌನವಾಗಿರುವುದು ಮತ್ತು ಅನ್ಯಧರ್ಮಿಯರಿಂದ ಆಗುವ ಆಗಬಹುದಾದ ಅನ್ಯಾಯಗಳಿಗೆ ಮಾತ್ರ ಹಿಂದೂ ಸಂಘಟನೆಗಳು ಸೀಮಿತವಾಗಿರುವಂತೆ ಕಾಣುತ್ತಿದೆ ಎಂದು ಸಾರ್ವಜನಿಕವಾಗಿ ಕೇಳಿಬರುತ್ತಿದೆ.
arrest
ಮಂಗಳೂರು: 42.7 ಕೆಜಿ ಆನೆದಂತ ವಶ, ಮೂವರು ಅಂತಾರಾಜ್ಯ ಕಳ್ಳಸಾಗಣೆದಾರರ ಬಂಧನ!
ಮಂಗಳೂರು: ಅಕ್ರಮವಾಗಿ ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಸಿಐಡಿ ಅರಣ್ಯ ಘಟಕ ಯಶಸ್ವಿಯಾಗಿದೆ. ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಬರೋಬ್ಬರಿ 42.7 ಕೆಜಿ ತೂಕದ ಎರಡು ಆನೆದಂತ ಹಾಗೂ ಸಾಗಾಟಕ್ಕೆ ಬಳಸಿದ್ದ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಜೋಡುಕಟ್ಟೆ ಬಳಿ ಸಿನಿಮೀಯ ಶೈಲಿಯಲ್ಲಿ ದಾಳಿ
ಮಂಗಳೂರು ನಗರದ ಪಡವು ಗ್ರಾಮದ ಮಾರೋಳಿ ಜೋಡುಕಟ್ಟೆ ಬಳಿ ಗುರುವಾರ ಆನೆದಂತ ಮಾರಾಟ ಮಾಡಲು ಕೆಲವು ವ್ಯಕ್ತಿಗಳು ಸಂಚು ರೂಪಿಸಿದ್ದಾರೆ ಎಂಬ ಖಚಿತ ಮಾಹಿತಿ ಸಿಐಡಿ ಅರಣ್ಯ ಘಟಕಕ್ಕೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳ ತಂಡ, ಸ್ಥಳದ ಮೇಲೆ ಜಂಟಿ ದಾಳಿ ನಡೆಸಿ ದಂತಗಳನ್ನು ಮಾರಾಟ ಮಾಡಲು ಗ್ರಾಹಕರಿಗಾಗಿ ಕಾಯುತ್ತಿದ್ದ ಆರೋಪಿಗಳನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದೆ.
ಬಂಧಿತ ಆರೋಪಿಗಳ ವಿವರ:
- ಶಶಾಂಕ್ ಪುದುವೆಟ್ಟು – ಬೆಳ್ತಂಗಡಿ ತಾಲೂಕು
- ಅಬ್ದುಲ್ ಖಾದರ್ – ಮಂಜೇಶ್ವರ, ಕೇರಳ
- ಪ್ರಭಾಚಂದ್ರ – ಅಟ್ಟಾವರ, ಮಂಗಳೂರು
ಪ್ರಮುಖ ಆಸ್ತಿಗಳ ಜಪ್ತಿ: ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಎರಡು ಆನೆದಂತಗಳ ಒಟ್ಟು ತೂಕ 42.7 ಕೆಜಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಅಕ್ರಮ ಸಾಗಾಟಕ್ಕೆ ಬಳಸಲಾಗಿದ್ದ ಎರಡು ಕಾರುಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಕಾರ್ಯಾಚರಣೆಯ ಯಶಸ್ವಿ ತಂಡ
ಮಡಿಕೇರಿ ಸಿಐಡಿ ಅರಣ್ಯ ಘಟಕದ ಎಸ್ಪಿ ಪವನ್ ನೆಜ್ಜೂರ್ ಅವರ ಸಮರ್ಥ ಮಾರ್ಗದರ್ಶನದಲ್ಲಿ ಈ ಹೈ-ವೋಲ್ಟೇಜ್ ಕಾರ್ಯಾಚರಣೆ ನಡೆದಿದೆ. ಮಂಗಳೂರು ಸಿಐಡಿ ಅರಣ್ಯ ಮೊಬೈಲ್ ಸ್ಕ್ವಾಡ್ನ ಪಿಎಸ್ಐ ದಿಲೀಪ್ ಜಿ.ಆರ್ ನೇತೃತ್ವದ ತಂಡದಲ್ಲಿ ಸಿಬ್ಬಂದಿಗಳಾದ ಜಯರಾಮ್ ಕೆ.ಟಿ, ಬಾಲಕೃಷ್ಣ ಕೆ.ಎಂ, ತಾರಾನಾಥ್ ಎಸ್ ಹಾಗೂ ಅಬ್ದುಲ್ ರೌಫ್ ಸಕ್ರಿಯವಾಗಿ ಪಾಲ್ಗೊಂಡು ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈ ದಂತಗಳನ್ನು ಎಲ್ಲಿಂದ ತರಲಾಗಿತ್ತು? ಇದರ ಹಿಂದೆ ಬೇರೆ ಯಾವುದಾದರೂ ಅಂತಾರಾಜ್ಯ ದಂಧೆಕೋರರ ಕೈವಾಡವಿದೆಯೇ? ಎಂಬ ಬಗ್ಗೆ ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ



arrest
ಬಂಟ, ಬಿಲ್ಲವ ಸಮುದಾಯಕ್ಕೆ ಅವಹೇಳನ: ಆರೋಪಿ ಅನಿತಾ ಕಾಸರಗೋಡು ಜೈಲುಪಾಲು
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿಯ ಪ್ರತಿಷ್ಠಿತ ಬಂಟ ಮತ್ತು ಬಿಲ್ಲವ ಸಮುದಾಯಗಳ ಕುರಿತು ಅತ್ಯಂತ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಆರೋಪಿ ಅನಿತಾ ಕಾಸರಗೋಡು ಅವರನ್ನು ಬರ್ಕೆ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಅನಿತಾ ಕಾಸರಗೋಡು ಸದ್ಯ ಕಾನೂನು ಬಲೆಗೆ ಬಿದ್ದು ಜೈಲು ಪಾಲಾಗಿದ್ದಾಳೆ.

ಕಾನೂನು ಹೋರಾಟದಲ್ಲಿ ಜಯ
ಬಿಲ್ಲವ ಸಮುದಾಯವನ್ನು ಅತ್ಯಂತ ಕೆಟ್ಟ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಲಾಯಿತು. ಸರಕಾರಿ ವಕೀಲರಾದ ಅಶ್ವಿತಾ ವಿ. ಅಮೀನ್, ವಕೀಲರಾದ ಪ್ರಸಾದ್ ಬಂಗೇರ ಮತ್ತು ಅರುಣ್ ಬಂಗೇರ ಅವರು ಸಮಾಜದ ಪರವಾಗಿ ಪ್ರಬಲವಾಗಿ ವಾದಿಸಿ, ಆರೋಪಿಗೆ ಜೈಲು ಶಿಕ್ಷೆ (ನ್ಯಾಯಾಂಗ ಬಂಧನ) ಆಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾನೂನು ಹೋರಾಟದ ಪ್ರತಿ ಹಂತದಲ್ಲೂ ಹಗಲಿರುಳು ಶ್ರಮಿಸಿ, ನ್ಯಾಯ ಒದಗಿಸುವಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷರಾದ ಶ್ರೀ ದೀಪಕ್ ಕೋಟ್ಯಾನ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇವರಿಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಮಲ್ ಕಾರ್ಕಳ ಹಾಗೂ ಸೋಮೇಶ್ವರ ಪುರಸಭಾ ಸದಸ್ಯರಾದ ದೀಪಕ್ ಪಿಲಾರ್ ಅವರು ಸಾಥ್ ನೀಡಿದ್ದಾರೆ.

ಬಂಟ ಸಮುದಾಯದಿಂದಲೂ ಆಕ್ರೋಶ: ಪುತ್ತೂರಿನಲ್ಲಿ ದೂರು ದಾಖಲು
ಬಿಲ್ಲವ ಸಮಾಜದ ಜೊತೆಗೆ ಬಂಟ ಸಮುದಾಯವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕುರಿತು ಪುತ್ತೂರಿನಲ್ಲೂ ಪ್ರಕರಣ ದಾಖಲಾಗಿದೆ. ಅಪ್ಪಟ ಕರಾವಳಿಯ ಸಂಸ್ಕೃತಿಯ ಭಾಗವಾಗಿರುವ ಬಂಟ ಸಮಾಜಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು. ಪ್ರತಿಷ್ಠಿತ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಗುರವಾಗಿ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದರು.

ಮುಂಬಯಿ ಬಿಲ್ಲವ ಸಮಾಜದಿಂದಲೂ ಪೊಲೀಸ್ ದೂರು
ಆರೋಪಿ ಅನಿತಾ ಕಾಸರಗೋಡು ಇಡೀ ಬಿಲ್ಲವ ಸಮಾಜ ತಲೆತಗ್ಗಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ಮುಂಬಯಿ ಬಿಲ್ಲವ ಸಮಾಜದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಮುಂಬಯಿ ಬಿಲ್ಲವ ಸಮಾಜದ ಪ್ರಮುಖರು ಹಾಗೂ ಮುಖಂಡರ ನಿಯೋಗವು ಮುಂಬಯಿನ ವಾಕೋಲಾ ಪೊಲೀಸ್ ಠಾಣೆಗೆ (Vakola Police Station) ಖುದ್ದಾಗಿ ಭೇಟಿ ನೀಡಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕೃತವಾಗಿ ದೂರು ಪತ್ರವನ್ನು ಸಲ್ಲಿಸಿದ್ದರು. ಈ ಮೂಲಕ ದೇಶದ ಯಾವುದೇ ಮೂಲೆಯಲ್ಲಿದ್ದರೂ ಸಮಾಜಕ್ಕೆ ಅವಮಾನ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಗಟ್ಟಿಯಾದ ಸಂದೇಶವನ್ನು ಮುಂಬಯಿ ಬಿಲ್ಲವರು ರವಾನಿಸಿದ್ದರು
ಬೆಂಗಳೂರಿನಲ್ಲಿ ಅಕ್ಕನ ಮನೆಯಲ್ಲಿ ಬಂಧನ: ಈ ನಡುವೆ, ‘ಬಿರುವೆರ್ ಕುಡ್ಲ’ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ ಅವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು. ದೂರಿನ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಬರ್ಕೆ ಪೊಲೀಸರು, ಆರೋಪಿಯು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಲ್ಲಿರುವ ಆಕೆಯ ಸಹೋದರಿಯ (ಅಕ್ಕನ) ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜೂನ್ 25ರವರೆಗೆ ನ್ಯಾಯಾಂಗ ಬಂಧನ: ಬಂಧಿತ ಆರೋಪಿ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಜೂನ್ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಸಮುದಾಯಗಳ ನಡುವೆ ಶಾಂತಿ ಕದಡುವ ಹಾಗೂ ಸಮಾಜದ ಗಣ್ಯ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಅವಮಾನಿಸುವ ಇಂತಹ ಕೃತ್ಯಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ಈಗಲೂ ಆಕ್ರೋಶ ಮುಂದುವರಿದಿದೆ.



arrest
ಉಡುಪಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕೋಕಾ ಕಾಯ್ದೆಯಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಗಳ ಬಂಧನ
ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಸ್ವರೂಪದ ಕೋಕಾ (KOKA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು: ಬಂಧಿತರನ್ನು ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೋಡಿಕೇರೆ ಹಾಗೂ ಚೇತನ್ ಅಲಿಯಾಸ್ ಚೇತು ಪಡೀಲ್ ಎಂದು ಗುರುತಿಸಲಾಗಿದೆ.
ಕಾರ್ಯಾಚರಣೆಯ ವಿವರ: ಈ ಆರೋಪಿಗಳ ಪತ್ತೆಗಾಗಿ ಪೊಲೀಸರು ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದವರಿಗೆ 50,000 ರೂ. ನಗದು ಬಹುಮಾನ ಘೋಷಿಸಿದ್ದರು. ಸಾರ್ವಜನಿಕರು ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಇಬ್ಬರನ್ನೂ ಸೆರೆಹಿಡಿದಿದ್ದಾರೆ. ನಿಯಮದಂತೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿತ ನಗದು ಬಹುಮಾನವನ್ನು ಪೊಲೀಸ್ ಇಲಾಖೆ ಹಸ್ತಾಂತರಿಸಿದೆ.
ಆರೋಪಿಗಳ ಅಪರಾಧ ಹಿನ್ನೆಲೆ:
ಮನೋಜ್ ಕೋಡಿಕೇರೆ: ಈತನ ವಿರುದ್ಧ ಒಟ್ಟು 19 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಉಡುಪಿ ಜಿಲ್ಲೆಯಲ್ಲಿ 2 ಮತ್ತು ಮಂಗಳೂರು ನಗರದಲ್ಲಿ 17 ಪ್ರಕರಣಗಳು ಸೇರಿವೆ. ಈತನ ಮೇಲೆ 3 ಕೊಲೆ ಪ್ರಕರಣ, 5 ಕೊಲೆ ಯತ್ನ, 1 ಅಪಹರಣ ಹಾಗೂ 10 ಹಲ್ಲೆ ಮತ್ತು ದೋಚಿದ ಪ್ರಕರಣಗಳಿವೆ.
ಚೇತನ್ ಅಲಿಯಾಸ್ ಚೇತು ಪಡೀಲ್: ಈತನ ವಿರುದ್ಧ ಒಟ್ಟು 13 ಪ್ರಕರಣಗಳು ದಾಖಲಾಗಿವೆ (ಮಂಗಳೂರು-9, ಉಡುಪಿ-2, ದಕ್ಷಿಣ ಕನ್ನಡ-2). ಇದರಲ್ಲಿ 2 ಕೊಲೆ ಪ್ರಕರಣ, 2 ಕೊಲೆ ಯತ್ನ, 1 ಅಪಹರಣ, 2 ಮಾದಕ ದ್ರವ್ಯ ಸೇವನೆ ಹಾಗೂ 6 ಹಲ್ಲೆ ಮತ್ತು ದೋಚಿದ ಪ್ರಕರಣಗಳು ಸೇರಿವೆ.
ತಲೆಮರೆಸಿಕೊಂಡಿದ್ದ ಈ ಭೀಕರ ಅಪರಾಧ ಹಿನ್ನೆಲೆಯುಳ್ಳ ರೌಡಿಗಳನ್ನು ಬಂಧಿಸುವ ಮೂಲಕ ಉಡುಪಿ ಪೊಲೀಸರು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿದ್ದಾರೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
