crime
ಪುತ್ತೂರು ಅತ್ಯಾಚಾರ ವಂಚನೆ ಪ್ರಕರಣ; ಹಿಂದೂ ಸಂಘಟನೆಗಳ ಮೌನವೇಕೆ ? ಪ್ರತಿಭಾ ಕುಳಾಯಿ
ಸಂಧಾನದ ಬಾಗಿಲು ಮುಚ್ಚಿದೆ; ಆರೋಪಿ ಕೃಷ್ಣ ಜೆ.ರಾವ್ ( KRISHNA J. RAO)ಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ; ನಾಮಕರಣ ಶಾಸ್ತçದ ಮೂಲಕ ಕಲ್ಲಡ್ಕದಿಂದಲೇ ಪ್ರತಿಭಟನೆ, ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ – ಪ್ರತಿಭಾ ಕುಳಾಯಿ ಸವಾಲು
ಮಂಗಳೂರು : ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್ಗೆ ಕೋರ್ಟ್ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.

50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ
ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಎನ್ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನ ಅವರ ಜತೆಗಿದೆ ಎಂದರು. ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕುಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.

ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ
ಕರಾವಳಿಯಲ್ಲಿ ಹಿಂದು ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.
ಪೂಜಾ ಆತ್ಮಹತ್ಯೆಗೂ ಯೋಚಿಸಿದ್ದಾಳೆ
ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಪೂಜಾಳನ್ನು ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ
ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬಾ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ಆಗಬೇಕಾಗಿರುವುದು ಪೂಜಾಳಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ. ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳವನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂತೃಸ್ತೆ ಪೂಜಾ ಮಾತಾಡಿ ತನ್ನ ನೋವನ್ನು ಹೇಳಿಕೊಂಡು ಗಳಗಳನೆ ಅತ್ತು ಕಣ್ನೀರು ಸುರಿಸಿದ ಘಟನೆಯೂ ನಡೆಯಿತು.
ಪ್ರಕರಣದ ಹಿನ್ನೆಲೆ
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿತ್ತು. ಯುವತಿ ಗರ್ಭವತಿಯಾದಾಗ ಆತ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿದ್ದ. ಸಂತ್ರಸ್ತ ಯುವತಿಯು ಜೂನ್ 2024ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2024ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಂದ ಡಿಎನ್ಎ ಪರೀಕ್ಷಾ ವರದಿಯು, ಕೃಷ್ಣ ಜೆ. ರಾವ್ ಅವರೇ ಆ ಮಗುವಿನ ತಂದೆ ಎಂಬುದನ್ನು ಸಾಬೀತುಪಡಿಸಿದೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು. ಕೃಷ್ಣ ಜೆ. ರಾವ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸೆಪ್ಟೆಂಬರ್ ತಿಂಗಳಿನಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ನೀಡಿತು.

ರಾಜಕೀಯ ಮತ್ತು ಸಾಮಾಜಿಕ ಪರಿಣಾಮ
ಈ ಪ್ರಕರಣ ಪುತ್ತೂರಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಬಿಜೆಪಿ ಮುಖಂಡನ ಪುತ್ರನ ಬಂಧನಕ್ಕೆ ಒತ್ತಾಯಿಸಿ ಬೀದಿಗಿಳಿದಿದ್ದವು. ಸಂತ್ರಸ್ತ ಯುವತಿಯ ಪರವಾಗಿ ಮಹಿಳಾ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮತ್ತು ವಿಶ್ವಕರ್ಮ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುoಡಿ ನ್ಯಾಯ ಒದಗಿಸಲು ಧ್ವನಿ ಎತ್ತಿದ್ದರು ಮತ್ತು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಹಿಂದೂ ಸಂಘಟನೆಗಳೂ ಸಹ ಸಂತ್ರಸ್ತ ಯುವತಿಗೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿ ಜಗನ್ನಿವಾಸ ರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.
ಒಟ್ಟಾರೆಯಾಗಿ ಈ ಪ್ರಕರಣವು ವೈಯಕ್ತಿಕ ವಂಚನೆಯಿoದ ಆರಂಭವಾಗಿ, ರಾಜಕೀಯ ಮುಜುಗರಕ್ಕೆ ಕಾರಣವಾಗಿ, ಅಂತಿಮವಾಗಿ ಡಿಎನ್ಎ ವರದಿಯ ಮೂಲಕ ಸತ್ಯ ಸಾಬೀತಾದ ನಂತರ ಜಗನ್ನಿವಾಸ ರಾವ್ ಅವರ ರಾಜಕೀಯ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬಿದ್ದರೂ ಮಗ ಮಾಡುತ್ತಿರುವ ವಂಚನೆಗೆ ತಂದೆ ಉತ್ತರಿಸಲಾರದೆ ಹೋದರು.

ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಾಧ್ಯತೆ
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ಗೆ ಕೆಲವು ಷರತ್ತುಗಳ ಅನ್ವಯ ಹೈಕೋರ್ಟಿನಿಂದ ಜಾಮೀನು ಮಂಜೂರಾಗಿದೆ. ಇದೀಗ ಮಗುವಿನ ಡಿಎನ್ಎ ವರದಿಯು ಆರೋಪಿಯ ವಿರುದ್ಧವಾಗಿ ಬಂದಿರುವುದರಿoದ, ಇದು ನ್ಯಾಯಾಲಯದಲ್ಲಿ ಪ್ರಬಲ ಸಾಕ್ಷ್ಯವಾಗಿ ಪರಿಣಮಿಸಲಿದೆ. ಸಂತ್ರಸ್ತ ಯುವತಿಗೆ ಪರಿಹಾರ ಕೊಡಿಸಲು ಮತ್ತು ಮಗುವಿನ ಹಕ್ಕುಗಳನ್ನು ರಕ್ಷಿಸಲು ಈ ವರದಿ ಪ್ರಮುಖ ಪಾತ್ರ ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Chargesheet) ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯದಂತೆ ಸ್ಥಳೀಯ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ನಿರಂತರವಾಗಿ ನಿಗಾ ಇಟ್ಟಿವೆ. ಸಂತ್ರಸ್ತ ಯುವತಿಯು ತನಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಹಿಂದೂ ಸಂಘಟನೆಗಳು ಹಿಂದೂ ಸಮಾಜಕ್ಕೆ ನ್ಯಾಯ ಒದಗಿಸುವ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಎಂದು ವೇದಿಕೆಯಲ್ಲಿ ಹೇಳುತ್ತಾ ಬಂದರೂ ನಮ್ಮ ಸಮಾಜದಿಂದಲೇ ಅನ್ಯಾಯಗಳು ನಡೆದಾಗ ಬಹುತೇಕ ಮೌನವಾಗಿರುವುದು ಮತ್ತು ಅನ್ಯಧರ್ಮಿಯರಿಂದ ಆಗುವ ಆಗಬಹುದಾದ ಅನ್ಯಾಯಗಳಿಗೆ ಮಾತ್ರ ಹಿಂದೂ ಸಂಘಟನೆಗಳು ಸೀಮಿತವಾಗಿರುವಂತೆ ಕಾಣುತ್ತಿದೆ ಎಂದು ಸಾರ್ವಜನಿಕವಾಗಿ ಕೇಳಿಬರುತ್ತಿದೆ.
Bantawala
ಬಸ್ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
arrest
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ
ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.
30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ
ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.
ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
- ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
- ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
- ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
- ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
- ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 323, 427, 504, 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
- ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
- ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 448, 504, 324, 323, 506, 427 R/w 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
- ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
- ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
- ಕಲಂಗಳು: 379 IPC (ಕಳವು).
- ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
- ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.
ಪೊಲೀಸರ ಸಕಾಲಿಕ ಕಾರ್ಯಾಚರಣೆ
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

crime
ಮಣಿಪಾಲ: ಬಾರ್, ಪಬ್ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು
ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.
ದಾಳಿಗೊಳಗಾದ ಬಾರ್ ಮತ್ತು ಪಬ್ಗಳು:
ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:
- ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
- ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
- ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
- ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ
ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:
ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪೊಲೀಸರ ಎಚ್ಚರಿಕೆ:
“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
