Bantawala
ನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ ಅಪಾಯ ಎದುರಾಗಿದೆ ಎಂಬೆಲ್ಲ ಸ್ಲೋಗನ್ಗಳು ವೈರಲ್ ಆಗುತ್ತಿತ್ತು.

ದೈವಗಳ ನೆಲೆವೀಡು ಕರಾವಳಿಯಲ್ಲಿ ಶತಶತಮಾನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಮೂಲ ನಾಗದೇವರ ಬನ ಮತ್ತು ಕೆರೆಯನ್ನು ಸರ್ವನಾಶಮಾಡಿ ಭಕ್ತಾದಿಗಳ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದಕ್ಕೆ ದೈವಭಕ್ತರಿಂದಾಗಲಿ, ಧರ್ಮಪಾಲಕರಿಂದಾಗಲಿ ಯಾವುದೇ ವಿರೋಧಗಳು ಬಾರದೆ ಇದ್ದ ಅತ್ಯಂತ ನೋವಿನ ವಿಚಾರವೊಂದು ಇದೀಗ ಬೊಂಡಾಲ ಎಂಬ ಕರಾವಳಿ ಭಾಗದಿಂದ ಸದ್ದಿಲ್ಲದೆ ಬೆಳಕಿಗೆ ಬಂದಿದೆ.

ಬoಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಹಲವಾರು ಕುಟುಂಬಗಳಿಗೆ ಮೂಲನಾಗದೇವರಾಗಿ ಆರಾಧನೆಯಾಗುತ್ತಿದ್ದ ಪವಿತ್ರ ನಾಗಬನವನ್ನು ಭೂಮಿ ಖರೀದಿದಾರ ಸಂಪೂರ್ಣವಾಗಿ ದ್ವಂಸ ಗೊಳಿಸಿ ಅದರ ಪ್ರಾಕೃತಿಕ ರಚನೆಯನ್ನೇ ನೆಲಸಮ ಮಾಡಿ ಭಕ್ತಾದಿಗಳ ಭಾವನೆಗಳನ್ನು ಜೀವಂತ ಸುಟ್ಟು ಹಾಕಿದ ಘಟನೆಯ ಸುತ್ತು ಭಕ್ತರು ಆಕ್ರೋಶಿತರಾಗಿರುವುದು ಕಂಡುಬoದಿದೆ.

ನಮ್ಮ ಪೂರ್ವಜರ ಲಗಾಯಿತು ನೂರಾರು ವರ್ಷಗಳಿಂದ ಆರಾಧನೆಯಾಗುತ್ತಿದ್ದ ನಾಗದೇವರು ನಾಗಬ್ರಹ್ಮ, ನಾಗರಾಜ, ಮತ್ತು ನಾಗಕನ್ನಿಕೆ ಸೇರಿದಂತೆ ಅಷ್ಟಕುಲ ನಾಗದೇವರ ಸಾನಿಧ್ಯವನ್ನು ದ್ವಂಸಗೊಳಿಸಿರುವ ವಿಚಾರವನ್ನು ಬೊಂಡಾಲ ಬೊಳ್ಳೆಮಾರ್ ಬಿಲ್ಲವ ಕಿರೋಡಿಯನ್ ಕುಟುಂಬಸ್ತರು ಅವರ ಕ್ಷೇತ್ರದ ದೈವಜ್ಞರಲ್ಲಿ ಪ್ರಶ್ನಾಚಿಂತನೆಯನ್ನು ಇಟ್ಟು ಕೇಳಿದಾಗ ನಿಮ್ಮ ಮೂಲ ನಾಗದೇವರ ಸಂಕಷ್ಟ ಸಂದರ್ಭ ನೀವು ಅದನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಿಸಿದಲ್ಲಿ ನಾಗದೇವರು ಇನ್ನಷ್ಟು ಸಾನಿಧ್ಯಶಕ್ತಿಯಾಗಿ ಬೆಳಗಲಿದ್ದಾರೆ ಎಂದು ತಿಳಿಸಿದರೆನ್ನಲಾಗಿದೆ.
ಅವರ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದoತೆ ಕಣಿಯೂರು ಕ್ಷೇತ್ರದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ತಂತ್ರಿಗಳಾದ ಶಂಕರನಾರಾಯಣ ಪುರೋಹಿತರ ದಿವ್ಯ ಉಪಸ್ಥಿತಿಯಲ್ಲಿ ಜನವರಿ 9ರಂದು ಕುಟುಂಬಸ್ತರು ಸಾನಿಧ್ಯದಲ್ಲಿ ಸೇರಿಕೊಂಡು ದೈವಗಳ ಪವಿತ್ರವಾದ ಬನ ಕಟ್ಟೆಗಳನ್ನು ದ್ವಂಸಗೊಳಿಸಲಾದ ಅದೇ ಜಾಗದಲ್ಲಿ ನಾಗದೇವರು ಮತ್ತು ರಕ್ತೇಶ್ವರಿ ಸಾನಿಧ್ಯದ ಸಂಕಲ್ಪವನ್ನು ದೀಪದಲ್ಲಿ ಲಯನ ಮಾಡಿಕೊಂಡು ಕುಟುಂಬಸ್ತರು ಸಾಮೂಹಿಕ ಪ್ರಾರ್ಥನೆ ನಡೆಸಿದರು.

ಇದೇ ಜಾಗದಲ್ಲಿ ನಮಗೆ ನಾಗಸಾನಿಧ್ಯ ಮತ್ತೆ ಉದಯಿಸಿ ಬರುವಂತೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದ ಸ್ವಾಮೀಜಿಯವರು. ಸಮಾಜದಲ್ಲಿ ದೈವಬಲ ಇಲ್ಲವಾದರೆ ಆತನಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ. ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಹುಡುಕುವ ಕೆಲಸ ಮಾಡಿದಾಗ ದೈವೀ ಅನುಗ್ರಹದ ಮೂಲಕ ಮತ್ತೇ ನಾಗಬನದ ನಿರ್ಮಾಣ ಇದೇ ಜಾಗದಲ್ಲಿ ಆಗಿಯೇ ಆಗುತ್ತದೆ ಎಂದು ಆಶೀರ್ವಚನ ಮಾಡಿದರು.
ತಲೆ ತಲಾಂತರಗಳಿOದ ಕ್ಷೇತ್ರದ ತಂತ್ರಿಗಳಾಗಿ ನಾಗದೇವರು ಸೇರಿದಂತೆ ದೈವದೇವರ ಸೇವೆಯನ್ನು ಮಾಡಿಕೊಂಡು ಬಂದಿರುವ ಶಂಕರನಾರಾಯಣ ತಂತ್ರಿಗಳವರು ಈ ಕ್ಷೇತ್ರ ನಮ್ಮವರಿಂದಲೇ ದ್ವಂಸವಾಗಿರುವ ದುಖಃದ ವಾರ್ತೆಯನ್ನು ಕೇಳಿ ಸಾನಿಧ್ಯಕ್ಕೆ ಆಗಮಿಸಿ ನೋಡಿ ಆತಂಕಗೊoಡು ನಾಗದೇವರಿಗೆ ಬಂದಿರುವ ಸಂಕಷ್ಟವನ್ನು ನೆನೆದು ಅದೇ ಸ್ಥಳದಲ್ಲಿ ಕಣ್ಣೀರು ಹಾಕಿ ಹೋಗಿದ್ದರು. ತನ್ನ ಹೃದಯಂತರಾಳದಿOದ ಸಾನಿಧ್ಯದಲ್ಲಿ ಪ್ರಾರ್ಥಿಸಿ ತೆರಳಿದವರು ಇಂದು ಮತ್ತೆ ಈ ಸಾನಿಧ್ಯಕ್ಕೆ ಆಗಮಿಸಿ ಭಕ್ತಾದಿಗಳ ನೋವಿನೊಂದಿಗೆ ಜೊತೆಯಾಗಿ ಮಾತನಾಡುತ್ತಾ ದೈವತಾ ಕಾರ್ಯವನ್ನು ನಾವು ಯಾವ ರೀತಿಯಲ್ಲಿ ಈ ಕ್ಷೇತದಲ್ಲಿ ಮಾಡಿಕೊಂಡು ಬಂದಿದ್ದೇವೆಯೋ ಅದೇ ರೀತಿಯಲ್ಲಿ ಇನ್ನು ಮುಂದೆಯೂ ಮಾಡಲು ಆ ದೈವಶಕ್ತಿಗಳು ಅನುಗ್ರಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಈ ಭೂಮಿಯ ಹಕ್ಕುದಾರ್ತಿಯಾಗಿರುವ ಗಿರಿಜ ಅವರ ಮಗಳು ಗಂಗಮ್ಮ ಮತ್ತು ಮಕ್ಕಳು ಉಪಸ್ಥಿತರಿದ್ದು, ನ್ಯಾಯಾಲಯದಲ್ಲಿ ದಾವೆಯಲ್ಲಿರುವ ಜಾಗವನ್ನು ಪರಬಾರೆ ಅಥವಾ ಮಾರಾಟ ಮಾಡಬಾರದೆಂಬ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ದೈವದೇವರ ಸ್ವತ್ತು ಎಂಬ ಭಯಭಕ್ತಿಯೂ ತೋರದೆ ಸಾನಿಧ್ಯವನ್ನು ಸಂಪೂರ್ಣವಾಗಿ ದ್ವಂಸ ಮಾಡಿರುವ ಬಗ್ಗೆ ಕಣ್ಣೀರು ಹಾಕಿದ ಘಟನೆಯೂ ನಡೆಯಿತು.

ಏನಿದು ದಾವೆ ?
ಬೊಂಡಾಳ ಸೇನೆರ ಬೈಲು ಎಂಬಲ್ಲಿ ಗಿರಿಜ ಎಂಬವರಿಗೆ ಸುಮಾರು 5.5 ಎಕ್ರೆ ಜಮೀನಿದ್ದು, ಸುಮಾರು 10 ವರ್ಷಗಳ ಹಿಂದೆ ಸಮಾನ ಹಕ್ಕುದಾರರಾಗಿರುವ 4 ಗಂಡು ಮತ್ತು 5 ಹೆಣ್ಣು ಮಕ್ಕಳಿರುವ ಸಂಸಾರದಲ್ಲಿ ಹೆಣ್ಣು ಮಕ್ಕಳ ಸಹಿಯನ್ನು ಪೋರ್ಜರಿ ಮಾಡಿ 4 ಗಂಡು ಮಕ್ಕಳು ಜಾಗವನ್ನು ಕಬಳಿಸಿರುವುದು ಮತ್ತು ಈ ಬಗ್ಗೆ ಗಿರಿಜ ಅವರ ಮಗಳು ಗಂಗಮ್ಮ ಗಂಡು ಮಕ್ಕಳು ಪಡೆದಿರುವ ಆಸ್ತಿ ಹಕ್ಕು ಅಕ್ರಮವಾಗಿ ಪಡೆದಿರುವುದಾಗಿದೆ, ಹಾಗೂ ತನ್ನ ಪಾಲಿನ ಆಸ್ತಿಯ ಹಕ್ಕನ್ನು ಪಡೆಯಲು ಮುಂದಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಶ್ರೀಮತಿ ಗಂಗಮ್ಮ,ಇತರರು ಮತ್ತು ಎದುರುವಾದಿಗಳ ಮದ್ಯೆ ಒ ಎಸ್ ನಂ.80/2018 ಎಂಬ ಮೂಲದಾವೆ ಮಾನ್ಯ ಪ್ರದಾನ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿರುತ್ತದೆ.ಅದಾಗ್ಯೂ ಬಿ ಶೆಡ್ಯೂಲ್ ಆಸ್ತಿಗೆ ಸಂಬOಧಪಟ್ಟOತೆ ಮಾನ್ಯ ನ್ಯಾಯಾಲಯವು 2018ರ ಪೆ.17.ರಂದು ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿದ ನಂತರ ,2018ರ ಫೆ. 24ರಂದು ತಡೆಯಾಜ್ಞೆ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದ್ದು, ಈ ತಡೆ ಆದೇಶದಲ್ಲಿ ದಾವಾ ಆಸ್ತಿಯ ಮಾರಾಟ ಅಥವಾ ಹಸ್ತಾಂತರವನ್ನು ನಿರ್ಬಂಧಿಸಿರುವುದು ಈಗಲೂ ಚಾಲ್ತಿಯಲ್ಲಿರುದನ್ನು ಎದ್ರಿಯವರು ಮನಗಂಡಿದ್ದರೂ ಸಾನಿಧ್ಯವಿರುವ ಜಾಗದ ಹಕ್ಕುದಾರ್ತಿ ಎಂದಿರುವ ಗಿರಿಜ ಅವರ ಮಗ ಶೇಖರ ಸಾಲ್ಯಾನ್ರವರ ಪತ್ನಿ ವಿಜಯ ಮತ್ತು ಮಗ ರಾಹುಲ್ ಅವರು ಬಿಸಿರೋಡಿನ ಅಮರ್ ಸತೀಶ್ ಕುಮಾರ್ ಎಂಬವರಿಗೆ ವಿಕ್ರಯಿಸಿರುವುದು ಮತ್ತು ಅವರು ಕಮರ್ಷಿಯಲ್ ಆಗಿ ಸಾನಿಧ್ಯ ಅಗೆದು ದ್ವಂಸ ಮಾಡಿರುವುದಾಗಿ.. ಇದರಿಂದ ಅನೇಕ ಭಕ್ತರ ಮನಸ್ಸಿಗೆ ಆಘಾತವಾಗಿರುವುದಾಗಿ ಗಂಗಮ್ಮ ಅವರ ಮಗ ಜಯಶಂಕರ್ ಮಾದ್ಯಮಕ್ಕೆ ತಿಳಿಸಿದ್ದಾರೆ.

ಈ ಕಾನೂನು ಪ್ರಕ್ರಿಯೆಗಳನ್ನು ತಿಳಿದುಕೊಂಡ ಜಮೀನುದಾರರು ವ್ಯಕ್ತಿಯೊಬ್ಬರಿಗೆ ಮಾರಾಟ ಹೆಸರಿನಲ್ಲಿ ಜಾಗವನ್ನು ಹಸ್ತಾಂತರಿಸಿರುವುದು ಮೊದಲನೇಯ ಅಪರಾಧವಾದರೆ. ಆ ಜಾಗವನ್ನು ಪಡೆದು ಕಮರ್ಶಿಯಲ್ ಯೋಚನೆಯಲ್ಲಿ ಅದರಲ್ಲಿದ್ದ ನಾಗಬನ ಮತ್ತು ಅದಕ್ಕೆ ಸಂಬAದಿಸಿದ ಕೆರೆಯನ್ನು ನಾಶಮಾಡಿರುವುದು ದೈವದ್ರೋಹವಾಗಿರುವುದಾಗಿ ಭಕ್ತರು ಆರೋಪಿಸಿದ್ದಾರೆ. ಅತೀ ಪುರಾತನವಾದ ನಾಗ ಬನದೊಳಗೆ ಭವ್ಯವಾದ ಕಟ್ಟೆಯನ್ನು ನಿರ್ಮಾಣ ಮಾಡಿ ಸಂಬAಧಿಸಿದ ಕೆರೆಗೂ ಕಲ್ಲಿನ ಕಟ್ಟೆಯನ್ನು ಕಟ್ಟಿ ರಕ್ತೇಶ್ವರಿ ದೈವಕ್ಕೂ ಪವಿತ್ರವದ ಕಟ್ಟೆಯನ್ನು ಕಟ್ಟಿ, ಹೀಗೆ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಐತಿಹ್ಯವನ್ನು ದ್ವಂಸಗೊಳಿಸಿದಾಗ ಅದನ್ನು ವೀಕ್ಷಿಸಲು ಬಂದ ಭಕ್ತರ ಮೇಲೆಯೇ ಕೇಸು ದಾಖಲಿಸುವುದೆಂದರೆ ನಾವು ಪಾಕಿಸ್ತಾನದಲ್ಲಿದ್ದೇವೆಯೋ ಎಂಬ ಭಯ ಬಂದಿದೆ. ಮೇಲಾಗಿ ನಾಗಬನದಲ್ಲಿ ಬೆಳೆದಿದ್ದ ಬೃಹದಾಕಾರದ ಮರಗಳನ್ನು ಅರಣ್ಯ ಇಲಾಖೆಯ ಕೃಪಾ ಕಟಾಕ್ಷದಲ್ಲಿ ಕಡಿದು ಸಾಗಾಟ ಮಾಡುವಾಗ ಯಾವುದೇ ಅಡೆತಡೆಗಳು ಬಂದಿಲ್ಲ, ಯಾವ ಇಲಾಖೆಗಳೂ ಇತ್ತ ಸುಳಿಯಲೇ ಇಲ್ಲ ಎಂದರೆ ಎಲ್ಲವೂ ನಾಗದೇವರಿಗೆ ಅರ್ಪಿತವಾಗಲಿ ಎಂದು ನಾವು ಸುಮ್ಮನೆ ಬಿಡುವುದಿಲ್ಲ. ಮರ ಸಾಗಾಟದ ಹಿಂದೆ ಇಲಾಖೆಯ ಅನುಮತಿ ಪತ್ರವನ್ನು ಪ್ರಶ್ನಿಸುತ್ತೇವೆ ಎಂದು ರಾಜೇಶ್ ಬಾಕಿಲ ತಿಳಿಸಿದ್ದಾರೆ.

ನೂರಾರು ವರ್ಷಗಳಿಂದ ನಮ್ಮ ಪಾಲಿನ ಮೂಲನಾಗದೇವರು ಎಂದು ಆರಾಧಿಸಿಕೊಂಡು ಬಂದಿರುವ ಕೆಲವು ಕುಟುಂಬಗಳು ತಮ್ಮ ನಂಬಿಕೆಯ ಆರಾಧನಾ ಶಕ್ತಿಗಳಾದ ದೈವದೇವರುಗಳ ಪ್ರಾಕೃತಿಕ ನಾಗಬನ ಮತ್ತು ಸಂಬoದಿಸಿದ ಕೆರೆಯನ್ನು ಜೆಸಿಬಿ ತಂದು ಸಂಪೂರ್ಣವಾಗಿ ನಾಶ ಮಾಡಿರುವ ಘಟನೆಯಿಂದ ನೊಂದು ಹೋಗಿದ್ದು, ಇದೀಗ ಆ ಜಮೀನಿಗೆ ಸಂಬoಧ ಪಟ್ಟಂತೆ ಏಕಮಾತ್ರ ಗಂಗಮ್ಮ ಕುಟುಂಬ ಮಾತ್ರ ಭಕ್ತರೊಂದಿಗೆ ಬೆಂಬಲವಾಗಿ ನಿಂತಿದ್ದು, ತಮ್ಮ ಪಾಲಿನ ಹಕ್ಕನ್ನು ಪಡೆದೇ ಪಡೆಯುತ್ತೇವೆ, ಮತ್ತು ಸದ್ರಿ ಜಾಗದಲ್ಲಿಯೇ ದೈವದೇವರ ಸಾನಿಧ್ಯಕ್ಕೆ ಶಕ್ತಿಯನ್ನು ನೀಡುವ ದೈವೀ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನಾಗದೇವರು, ರಕ್ತೇಶ್ವರಿ ದೈವಗಳ ಸಂಕಲ್ಪದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಕುಟುಂಬದ ನೂರಾರು ಭಕ್ತರು ಪಾಲ್ಗೊಂಡರು. ಈ ಜಾಗದಲ್ಲಿದ್ದ ನಾಗಬನವನ್ನು ಜೀಣೋದ್ಧಾರ ಹೆಸರಿನಲ್ಲಿ ಎತ್ತಂಗಡಿ ಮಾಡಿ ಬೇರೆ ಜಾಗದಲ್ಲಿ ಮಾಡಲು ಬರುವುದಿಲ್ಲ. ಒಂದು ವೇಳೆ ಆ ರೀತಿ ಆಗುವುದಿದ್ದರೆ ನಾಗನಿಗೆ ತನು ಎರೆಯಲು ನೂರಾರು ಕಿ.ಮೀ. ಸಾಗುವುದು ಬೇಕಾಗಿರಲಿಲ್ಲ. ನಮ್ಮ ದೈವ ಕ್ಷೇತ್ರದ ಸಾನಿಧ್ಯ ಬಳಿಯಲ್ಲಿಯೇ ನಾಗನ ಪ್ರತಿಷ್ಠಾಪನೆ ಮಾಡಬಹುದಿತ್ತು ಮತ್ತು ನಾಗನ ತೆರವುಗೊಳಿಸಿದ ಪ್ರಕರಣಕ್ಕೆ ನಮ್ಮ ತಕರಾರು ಕೂಡಾ ಇರುತ್ತಿರಲಿಲ್ಲ ಎಂದು ಕುಟುಂಬಸ್ತರಾದ ಹರೀಶ್ ಪೂಜಾರಿ ಬಾಕಿಲ ತಿಳಿಸಿದ್ದಾರೆ.

ಕೊನೆಗೆ ಭಕ್ತರು ಸಾನಿಧ್ಯದ ಸಮೀಪದಲ್ಲಿರುವ ಪಂಜುರ್ಲಿ ಸಾನಿಧ್ಯಕ್ಕೆ ತೆರಳಿ ಅಲ್ಲಿ ದೈವಗಳಿಗೆ ದೀಪದೂಪ ಬೆಳಗಿ ಆರಾಧನೆಯನ್ನು ಮಾಡಿ ದೈವಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡು ಪ್ರಾರ್ಥನೆಯನ್ನು ಸಲ್ಲಿಸಿದರು. ಬೆಳಿಗ್ಗೆ ಬೊಳ್ಳೆಮಾರ್ ಕುಟುಂಬಸ್ತರು ತಮ್ಮ ಧರ್ಮದೈವ ಧೂಮಾವತಿ ಸಪರಿವಾರ ದೈವಗಳಿಗೆ ಪ್ರಾರ್ಥಿಸಿ ಸಾನಿಧ್ಯಕ್ಕೆ ಆಗಮಿಸಿದರು ಮತ್ತು ಗ್ರಾಮದ ದೈವದೇವರಿಗೆ ಸಂಕಲ್ಪವನ್ನು ಮಾಡಿಕೊಂಡು ನಾಗ ಸಾನಿಧ್ಯವನ್ನು ಉಳಿಸಿಕೊಳ್ಳಲು ಪ್ರಾರ್ಥನೆಯನ್ನು ಮಾಡಿದರು.
award
ಮಂಗಳೂರು ವಿಶ್ವವಿದ್ಯಾಲಯ: ಸುಶ್ಮಿತ ಸಿ.ಎಚ್. ಅವರಿಗೆ ಅನ್ವಯಿಕ ಸಸ್ಯಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪ್ರದಾನ
ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಶ್ಮಿತ ಸಿ.ಎಚ್. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.

ಅವರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್ ಜಿ. ಅವರ ಮಾರ್ಗದರ್ಶನದಲ್ಲಿ “Antidiabetic activities of Syzygium hemisphericum (Wight) Alston and Syzygium kanarense (Talbot) Raizada” (ಸಿಜಿಜಿಯಂ ಹೆಮಿಸ್ಫೆರಿಕಂ ಮತ್ತು ಸಿಜಿಜಿಯಂ ಕೆನರೆನ್ಸ್ ಸಸ್ಯಗಳ ಮಧುಮೇಹ ವಿರೋಧಿ ಚಟುವಟಿಕೆಗಳು) ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದರು.

2025ರ ಅಕ್ಟೋಬರ್ನಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಇವರಿಗೆ, 2026ರ ಮಾರ್ಚ್ 28ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 44ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಲಾಯಿತು.
ಡಾ. ಸುಶ್ಮಿತ ಅವರು ಪ್ರಸಿದ್ಧ ಯಕ್ಷಗಾನ ಭಾಗವತರಾದ ಶ್ರೀ ಕಣಿಯೂರು ಸೂರ್ಯನಾರಾಯಣ ಭಟ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲದ ಉದ್ಯೋಗಿ ಶ್ರೀಮತಿ ಆಶಾಪಾರ್ವತಿ ದಂಪತಿಯ ಪುತ್ರಿ. ಇವರು ಯುವ ಉದ್ಯಮಿ ಶ್ರೀ ಕೃಷ್ಣ ವಿಕಾಸ್ ಅವರ ಪತ್ನಿಯಾಗಿದ್ದಾರೆ.

ತಮ್ಮ ಈ ಶೈಕ್ಷಣಿಕ ಸಾಧನೆಗೆ ಬೆನ್ನೆಲುಬಾಗಿ ನಿಂತ ತಂದೆ-ತಾಯಿ, ಸಹೋದರಿ ಹಾಗೂ ಪತಿಯವರ ನಿರಂತರ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಡಾ. ಸುಶ್ಮಿತ ಅವರು ಈ ಸಂದರ್ಭದಲ್ಲಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದಲ್ಲೇ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Bantawala
ಘನತ್ಯಾಜ್ಯ ವಿಲೇವಾರಿಯಲ್ಲಿ ಗೋಲ್ಮಾಲ್..ಸ್ಮಶಾನದಂತಾದ ವಿಟ್ಲದ ಘನತ್ಯಾಜ್ಯ ಘಟಕ..ಬೆಂಕಿ ಇಟ್ಟು ಸುಡುವ ಮೂಲಕ ಜನರ ಆರೋಗ್ಯದಲ್ಲಿ ಚೆಲ್ಲಾಟ..ಸಾಮಾಜಿಕ ಹೋರಾಟಗಾರನಿಂದ ಪೊಲೀಸ್ ಠಾಣೆಗೆ ದೂರು..
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ಘನತ್ಯಾಜ್ಯ ವಿಲೇವಾರಿ ಮಾಡಬೇಕಾಗಿದ್ದ ಜವಾಬ್ದಾರಿಯುತ ಅಧಿಕಾರಿ, ಸಿಬ್ಬಂದಿಗಳು ತ್ಯಾಜ್ಯಗಳ ರಾಶಿಗೆ ಘಟಕದ ಆವರಣದಲ್ಲೇ ಬೆಂಕಿಹಾಕಿ ಸುಡುವ ಮೂಲಕ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ.

ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ಕಳೆದ ಮೂರು ತಿಂಗಳಿಂದ ಘನತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಸಾಮಾಜಿಕ ಹೋರಾಟಗಾರ ಧನಂಜಯ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಸೇರಿದಂತೆ ಇತರ ಘನತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಾಗಿತ್ತು. ಅದಕ್ಕಾಗಿಯೇ ಅಂಗಡಿ ಮಾಲಿಕರಿಂದ, ಜನ ಸಾಮಾನ್ಯರಿಂದ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ. ಆದರೆ ಮೂಟೆ ಮೂಟೆ ಘನತ್ಯಾಜ್ಯಗಳನ್ನು ವ್ಯವಸ್ಥಿತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಆವರಣದಲ್ಲೇ ಸ್ಮಶಾನದಲ್ಲಿ ಹೆಣಗಳನ್ನು ಸುಡುವ ರೀತಿಯಲ್ಲಿ ಸುಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದ ಏಳುತ್ತಿರುವ ವಿಷಕಾರಿ ಹೊಗೆಯು ಪರಿಸರಕ್ಕೆ, ಪರಿಸರ ನಿವಾಸಿಗಳ ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೇ, ಸುಮಾರು 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ವೈಜ್ಞಾನಿಕವಾಗಿ ಸಂಶೋಧನೆಯಲ್ಲಿ ಸಾಬೀತಾಗಿದೆ.

ಈ ಅಕ್ರಮ ಚಟುವಟಿಕೆಯು ಪರಿಸರ ಸಂರಕ್ಷಣಾ ಕಾಯ್ದೆ 1986 (Environment Protection Act 1986), ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 (Air Pollution Act 1981) ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ರ (Plastic Waste Management Rules 2016) ನೇರ ಉಲ್ಲಂಘನೆಯಾಗಿದೆ. ಸರ್ಕಾರದ ಅನುದಾನವನ್ನು ಘನತ್ಯಾಜ್ಯ ವಿಲೇವಾರಿಗೆ ಬಳಸದೆ ದುರ್ಬಳಕೆ ಮಾಡಲಾಗುತ್ತಿದೆ ಪಟ್ಟಣ ಪಂಚಾಯತಿನಲ್ಲಿ ಪ್ಲಾಸ್ಟಿಕ್ ವಿಲೇವಾರಿಗೆ ಸಾಕಷ್ಟು ಅನುದಾನ ಮೀಸಲಿಟ್ಟಿದ್ದರೂ ಅದನ್ನು ಸರಿಯಾಗಿ ಬಳಕೆ ಮಾಡದೆ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಆರೋಗ್ಯಾಧಿಕಾರಿ, ಸುಪರ್ವೈಸರ್ ಮತ್ತು ಕೌನ್ಸಿಲರ್ ಇವರೆಲ್ಲರೂ ಸೇರಿ ಸರಕಾರದಿಂದ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡು ಪ್ಲಾಸ್ಟಿಕನ್ನು ಸುಟ್ಟು ಶಿಕ್ಷಾರ್ಹ ಅಪರಾಧವನ್ನೆಸಗುತ್ತಿದ್ದಾರೆ ಎಂದು ದೂರುದಾರರು ಗಂಭೀರವಾಗಿ ಆರೋಪಿಸಿದ್ದಾರೆ.
ಈ ಅಕ್ರಮ ಹಾಗೂ ಅವೈಜ್ಞಾನಿಕ ವಿಲೇವಾರಿಯು ಪರಿಸರ ಸಂರಕ್ಷಣಾ ಕಾಯ್ದೆ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಗಳ ನೇರ ಉಲ್ಲಂಘನೆಯಾಗಿದೆ. ಸರ್ಕಾರದ ಅನುದಾನವನ್ನು ಸರಿಯಾಗಿ ಬಳಸದೆ ಗೋಲ್ಮಾಲ್ ನಡೆಸುವ ಮೂಲಕ ಸ್ಪಷ್ಟವಾಗಿ ದುರ್ಬಳಕೆ ಮಾಡಲಾಗುತ್ತಿದೆ ಮತ್ತು ಈ ಬಗ್ಗೆ ಪ್ರಶ್ನಿಸಿದರೆ ಸಂಬಂಧಿಸಿದ ಅಧಿಕಾರಿ ಚೇತನ್ ಎಂಬವರು ಬೇಜವಾಬ್ದಾರಿ ಹಾಗೂ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ದೂರುದಾರರು ವಿವರಿಸಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಸದ್ಯ ವಿಟ್ಲ ಪೊಲೀಸರು ಈ ದೂರಿನ ಕುರಿತು ಎನ್ಸಿಆರ್ (NCR) ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Bantawala
ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಶಕಗಳ ಬೇಡಿಕೆಗೆ ಸ್ಪಂದನೆ
ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ.

ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದ ಸ್ಥಳೀಯರು, ಕೂಡಲೇ ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.
ತಾಂತ್ರಿಕ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು:”ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮನವರಿಕೆ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗಡಿ ಭಾಗದ ಅಭಿವೃದ್ಧಿ ಹಾಗೂ ಜನರ ಸಂಕಷ್ಟ ನಿವಾರಣೆಗೆ ಈ ಸೇತುವೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಶ್ರೀಧರ್ ಬಾಳೆಕಲ್ಲು , ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು

-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala1 month agoವೈದ್ಯರೊಬ್ಬರ ರಕ್ತ ಪರೀಕ್ಷಾ ವರದಿಯಲ್ಲೇ ಗೋಲ್ಮಾಲ್..ವಿಟ್ಲದ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಎಡವಟ್ಟು..ಕಾನೂನು ಹೋರಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವೈದ್ಯರು..
