Connect with us

Bantawala

ನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ

Published

on

ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ ಅಪಾಯ ಎದುರಾಗಿದೆ ಎಂಬೆಲ್ಲ ಸ್ಲೋಗನ್‌ಗಳು ವೈರಲ್ ಆಗುತ್ತಿತ್ತು.

ದೈವಗಳ ನೆಲೆವೀಡು ಕರಾವಳಿಯಲ್ಲಿ ಶತಶತಮಾನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಮೂಲ ನಾಗದೇವರ ಬನ ಮತ್ತು ಕೆರೆಯನ್ನು ಸರ್ವನಾಶಮಾಡಿ ಭಕ್ತಾದಿಗಳ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದಕ್ಕೆ ದೈವಭಕ್ತರಿಂದಾಗಲಿ, ಧರ್ಮಪಾಲಕರಿಂದಾಗಲಿ ಯಾವುದೇ ವಿರೋಧಗಳು ಬಾರದೆ ಇದ್ದ ಅತ್ಯಂತ ನೋವಿನ ವಿಚಾರವೊಂದು ಇದೀಗ ಬೊಂಡಾಲ ಎಂಬ ಕರಾವಳಿ ಭಾಗದಿಂದ ಸದ್ದಿಲ್ಲದೆ ಬೆಳಕಿಗೆ ಬಂದಿದೆ.

ಬoಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಹಲವಾರು ಕುಟುಂಬಗಳಿಗೆ ಮೂಲನಾಗದೇವರಾಗಿ ಆರಾಧನೆಯಾಗುತ್ತಿದ್ದ ಪವಿತ್ರ ನಾಗಬನವನ್ನು ಭೂಮಿ ಖರೀದಿದಾರ ಸಂಪೂರ್ಣವಾಗಿ ದ್ವಂಸ ಗೊಳಿಸಿ ಅದರ ಪ್ರಾಕೃತಿಕ ರಚನೆಯನ್ನೇ ನೆಲಸಮ ಮಾಡಿ ಭಕ್ತಾದಿಗಳ ಭಾವನೆಗಳನ್ನು ಜೀವಂತ ಸುಟ್ಟು ಹಾಕಿದ ಘಟನೆಯ ಸುತ್ತು ಭಕ್ತರು ಆಕ್ರೋಶಿತರಾಗಿರುವುದು ಕಂಡುಬoದಿದೆ.

ನಮ್ಮ ಪೂರ್ವಜರ ಲಗಾಯಿತು ನೂರಾರು ವರ್ಷಗಳಿಂದ ಆರಾಧನೆಯಾಗುತ್ತಿದ್ದ ನಾಗದೇವರು ನಾಗಬ್ರಹ್ಮ, ನಾಗರಾಜ, ಮತ್ತು ನಾಗಕನ್ನಿಕೆ ಸೇರಿದಂತೆ ಅಷ್ಟಕುಲ ನಾಗದೇವರ ಸಾನಿಧ್ಯವನ್ನು ದ್ವಂಸಗೊಳಿಸಿರುವ ವಿಚಾರವನ್ನು ಬೊಂಡಾಲ ಬೊಳ್ಳೆಮಾರ್ ಬಿಲ್ಲವ ಕಿರೋಡಿಯನ್ ಕುಟುಂಬಸ್ತರು ಅವರ ಕ್ಷೇತ್ರದ ದೈವಜ್ಞರಲ್ಲಿ ಪ್ರಶ್ನಾಚಿಂತನೆಯನ್ನು ಇಟ್ಟು ಕೇಳಿದಾಗ ನಿಮ್ಮ ಮೂಲ ನಾಗದೇವರ ಸಂಕಷ್ಟ ಸಂದರ್ಭ ನೀವು ಅದನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಿಸಿದಲ್ಲಿ ನಾಗದೇವರು ಇನ್ನಷ್ಟು ಸಾನಿಧ್ಯಶಕ್ತಿಯಾಗಿ ಬೆಳಗಲಿದ್ದಾರೆ ಎಂದು ತಿಳಿಸಿದರೆನ್ನಲಾಗಿದೆ.

ಅವರ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದoತೆ ಕಣಿಯೂರು ಕ್ಷೇತ್ರದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ತಂತ್ರಿಗಳಾದ ಶಂಕರನಾರಾಯಣ ಪುರೋಹಿತರ ದಿವ್ಯ ಉಪಸ್ಥಿತಿಯಲ್ಲಿ ಜನವರಿ 9ರಂದು ಕುಟುಂಬಸ್ತರು ಸಾನಿಧ್ಯದಲ್ಲಿ ಸೇರಿಕೊಂಡು ದೈವಗಳ ಪವಿತ್ರವಾದ ಬನ ಕಟ್ಟೆಗಳನ್ನು ದ್ವಂಸಗೊಳಿಸಲಾದ ಅದೇ ಜಾಗದಲ್ಲಿ ನಾಗದೇವರು ಮತ್ತು ರಕ್ತೇಶ್ವರಿ ಸಾನಿಧ್ಯದ ಸಂಕಲ್ಪವನ್ನು ದೀಪದಲ್ಲಿ ಲಯನ ಮಾಡಿಕೊಂಡು ಕುಟುಂಬಸ್ತರು ಸಾಮೂಹಿಕ ಪ್ರಾರ್ಥನೆ ನಡೆಸಿದರು.


ಇದೇ ಜಾಗದಲ್ಲಿ ನಮಗೆ ನಾಗಸಾನಿಧ್ಯ ಮತ್ತೆ ಉದಯಿಸಿ ಬರುವಂತೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದ ಸ್ವಾಮೀಜಿಯವರು. ಸಮಾಜದಲ್ಲಿ ದೈವಬಲ ಇಲ್ಲವಾದರೆ ಆತನಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ. ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಹುಡುಕುವ ಕೆಲಸ ಮಾಡಿದಾಗ ದೈವೀ ಅನುಗ್ರಹದ ಮೂಲಕ ಮತ್ತೇ ನಾಗಬನದ ನಿರ್ಮಾಣ ಇದೇ ಜಾಗದಲ್ಲಿ ಆಗಿಯೇ ಆಗುತ್ತದೆ ಎಂದು ಆಶೀರ್ವಚನ ಮಾಡಿದರು.

ತಲೆ ತಲಾಂತರಗಳಿOದ ಕ್ಷೇತ್ರದ ತಂತ್ರಿಗಳಾಗಿ ನಾಗದೇವರು ಸೇರಿದಂತೆ ದೈವದೇವರ ಸೇವೆಯನ್ನು ಮಾಡಿಕೊಂಡು ಬಂದಿರುವ ಶಂಕರನಾರಾಯಣ ತಂತ್ರಿಗಳವರು ಈ ಕ್ಷೇತ್ರ ನಮ್ಮವರಿಂದಲೇ ದ್ವಂಸವಾಗಿರುವ ದುಖಃದ ವಾರ್ತೆಯನ್ನು ಕೇಳಿ ಸಾನಿಧ್ಯಕ್ಕೆ ಆಗಮಿಸಿ ನೋಡಿ ಆತಂಕಗೊoಡು ನಾಗದೇವರಿಗೆ ಬಂದಿರುವ ಸಂಕಷ್ಟವನ್ನು ನೆನೆದು ಅದೇ ಸ್ಥಳದಲ್ಲಿ ಕಣ್ಣೀರು ಹಾಕಿ ಹೋಗಿದ್ದರು. ತನ್ನ ಹೃದಯಂತರಾಳದಿOದ ಸಾನಿಧ್ಯದಲ್ಲಿ ಪ್ರಾರ್ಥಿಸಿ ತೆರಳಿದವರು ಇಂದು ಮತ್ತೆ ಈ ಸಾನಿಧ್ಯಕ್ಕೆ ಆಗಮಿಸಿ ಭಕ್ತಾದಿಗಳ ನೋವಿನೊಂದಿಗೆ ಜೊತೆಯಾಗಿ ಮಾತನಾಡುತ್ತಾ ದೈವತಾ ಕಾರ್ಯವನ್ನು ನಾವು ಯಾವ ರೀತಿಯಲ್ಲಿ ಈ ಕ್ಷೇತದಲ್ಲಿ ಮಾಡಿಕೊಂಡು ಬಂದಿದ್ದೇವೆಯೋ ಅದೇ ರೀತಿಯಲ್ಲಿ ಇನ್ನು ಮುಂದೆಯೂ ಮಾಡಲು ಆ ದೈವಶಕ್ತಿಗಳು ಅನುಗ್ರಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಈ ಭೂಮಿಯ ಹಕ್ಕುದಾರ್ತಿಯಾಗಿರುವ ಗಿರಿಜ ಅವರ ಮಗಳು ಗಂಗಮ್ಮ ಮತ್ತು ಮಕ್ಕಳು ಉಪಸ್ಥಿತರಿದ್ದು, ನ್ಯಾಯಾಲಯದಲ್ಲಿ ದಾವೆಯಲ್ಲಿರುವ ಜಾಗವನ್ನು ಪರಬಾರೆ ಅಥವಾ ಮಾರಾಟ ಮಾಡಬಾರದೆಂಬ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ದೈವದೇವರ ಸ್ವತ್ತು ಎಂಬ ಭಯಭಕ್ತಿಯೂ ತೋರದೆ ಸಾನಿಧ್ಯವನ್ನು ಸಂಪೂರ್ಣವಾಗಿ ದ್ವಂಸ ಮಾಡಿರುವ ಬಗ್ಗೆ ಕಣ್ಣೀರು ಹಾಕಿದ ಘಟನೆಯೂ ನಡೆಯಿತು.

ಏನಿದು ದಾವೆ ?
ಬೊಂಡಾಳ ಸೇನೆರ ಬೈಲು ಎಂಬಲ್ಲಿ ಗಿರಿಜ ಎಂಬವರಿಗೆ ಸುಮಾರು 5.5 ಎಕ್ರೆ ಜಮೀನಿದ್ದು, ಸುಮಾರು 10 ವರ್ಷಗಳ ಹಿಂದೆ ಸಮಾನ ಹಕ್ಕುದಾರರಾಗಿರುವ 4 ಗಂಡು ಮತ್ತು 5 ಹೆಣ್ಣು ಮಕ್ಕಳಿರುವ ಸಂಸಾರದಲ್ಲಿ ಹೆಣ್ಣು ಮಕ್ಕಳ ಸಹಿಯನ್ನು ಪೋರ್ಜರಿ ಮಾಡಿ 4 ಗಂಡು ಮಕ್ಕಳು ಜಾಗವನ್ನು ಕಬಳಿಸಿರುವುದು ಮತ್ತು ಈ ಬಗ್ಗೆ ಗಿರಿಜ ಅವರ ಮಗಳು ಗಂಗಮ್ಮ ಗಂಡು ಮಕ್ಕಳು ಪಡೆದಿರುವ ಆಸ್ತಿ ಹಕ್ಕು ಅಕ್ರಮವಾಗಿ ಪಡೆದಿರುವುದಾಗಿದೆ, ಹಾಗೂ ತನ್ನ ಪಾಲಿನ ಆಸ್ತಿಯ ಹಕ್ಕನ್ನು ಪಡೆಯಲು ಮುಂದಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಶ್ರೀಮತಿ ಗಂಗಮ್ಮ,ಇತರರು ಮತ್ತು ಎದುರುವಾದಿಗಳ ಮದ್ಯೆ ಒ ಎಸ್ ನಂ.80/2018 ಎಂಬ ಮೂಲದಾವೆ ಮಾನ್ಯ ಪ್ರದಾನ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿರುತ್ತದೆ.ಅದಾಗ್ಯೂ ಬಿ ಶೆಡ್ಯೂಲ್ ಆಸ್ತಿಗೆ ಸಂಬOಧಪಟ್ಟOತೆ ಮಾನ್ಯ ನ್ಯಾಯಾಲಯವು 2018ರ ಪೆ.17.ರಂದು ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿದ ನಂತರ ,2018ರ ಫೆ. 24ರಂದು ತಡೆಯಾಜ್ಞೆ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದ್ದು, ಈ ತಡೆ ಆದೇಶದಲ್ಲಿ ದಾವಾ ಆಸ್ತಿಯ ಮಾರಾಟ ಅಥವಾ ಹಸ್ತಾಂತರವನ್ನು ನಿರ್ಬಂಧಿಸಿರುವುದು ಈಗಲೂ ಚಾಲ್ತಿಯಲ್ಲಿರುದನ್ನು ಎದ್ರಿಯವರು ಮನಗಂಡಿದ್ದರೂ ಸಾನಿಧ್ಯವಿರುವ ಜಾಗದ ಹಕ್ಕುದಾರ್ತಿ ಎಂದಿರುವ ಗಿರಿಜ ಅವರ ಮಗ ಶೇಖರ ಸಾಲ್ಯಾನ್‌ರವರ ಪತ್ನಿ ವಿಜಯ ಮತ್ತು ಮಗ ರಾಹುಲ್ ಅವರು ಬಿಸಿರೋಡಿನ ಅಮರ್ ಸತೀಶ್ ಕುಮಾರ್ ಎಂಬವರಿಗೆ ವಿಕ್ರಯಿಸಿರುವುದು ಮತ್ತು ಅವರು ಕಮರ್ಷಿಯಲ್ ಆಗಿ ಸಾನಿಧ್ಯ ಅಗೆದು ದ್ವಂಸ ಮಾಡಿರುವುದಾಗಿ.. ಇದರಿಂದ ಅನೇಕ ಭಕ್ತರ ಮನಸ್ಸಿಗೆ ಆಘಾತವಾಗಿರುವುದಾಗಿ ಗಂಗಮ್ಮ ಅವರ ಮಗ ಜಯಶಂಕರ್ ಮಾದ್ಯಮಕ್ಕೆ ತಿಳಿಸಿದ್ದಾರೆ.

ಈ ಕಾನೂನು ಪ್ರಕ್ರಿಯೆಗಳನ್ನು ತಿಳಿದುಕೊಂಡ ಜಮೀನುದಾರರು ವ್ಯಕ್ತಿಯೊಬ್ಬರಿಗೆ ಮಾರಾಟ ಹೆಸರಿನಲ್ಲಿ ಜಾಗವನ್ನು ಹಸ್ತಾಂತರಿಸಿರುವುದು ಮೊದಲನೇಯ ಅಪರಾಧವಾದರೆ. ಆ ಜಾಗವನ್ನು ಪಡೆದು ಕಮರ್ಶಿಯಲ್ ಯೋಚನೆಯಲ್ಲಿ ಅದರಲ್ಲಿದ್ದ ನಾಗಬನ ಮತ್ತು ಅದಕ್ಕೆ ಸಂಬAದಿಸಿದ ಕೆರೆಯನ್ನು ನಾಶಮಾಡಿರುವುದು ದೈವದ್ರೋಹವಾಗಿರುವುದಾಗಿ ಭಕ್ತರು ಆರೋಪಿಸಿದ್ದಾರೆ. ಅತೀ ಪುರಾತನವಾದ ನಾಗ ಬನದೊಳಗೆ ಭವ್ಯವಾದ ಕಟ್ಟೆಯನ್ನು ನಿರ್ಮಾಣ ಮಾಡಿ ಸಂಬAಧಿಸಿದ ಕೆರೆಗೂ ಕಲ್ಲಿನ ಕಟ್ಟೆಯನ್ನು ಕಟ್ಟಿ ರಕ್ತೇಶ್ವರಿ ದೈವಕ್ಕೂ ಪವಿತ್ರವದ ಕಟ್ಟೆಯನ್ನು ಕಟ್ಟಿ, ಹೀಗೆ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಐತಿಹ್ಯವನ್ನು ದ್ವಂಸಗೊಳಿಸಿದಾಗ ಅದನ್ನು ವೀಕ್ಷಿಸಲು ಬಂದ ಭಕ್ತರ ಮೇಲೆಯೇ ಕೇಸು ದಾಖಲಿಸುವುದೆಂದರೆ ನಾವು ಪಾಕಿಸ್ತಾನದಲ್ಲಿದ್ದೇವೆಯೋ ಎಂಬ ಭಯ ಬಂದಿದೆ. ಮೇಲಾಗಿ ನಾಗಬನದಲ್ಲಿ ಬೆಳೆದಿದ್ದ ಬೃಹದಾಕಾರದ ಮರಗಳನ್ನು ಅರಣ್ಯ ಇಲಾಖೆಯ ಕೃಪಾ ಕಟಾಕ್ಷದಲ್ಲಿ ಕಡಿದು ಸಾಗಾಟ ಮಾಡುವಾಗ ಯಾವುದೇ ಅಡೆತಡೆಗಳು ಬಂದಿಲ್ಲ, ಯಾವ ಇಲಾಖೆಗಳೂ ಇತ್ತ ಸುಳಿಯಲೇ ಇಲ್ಲ ಎಂದರೆ ಎಲ್ಲವೂ ನಾಗದೇವರಿಗೆ ಅರ್ಪಿತವಾಗಲಿ ಎಂದು ನಾವು ಸುಮ್ಮನೆ ಬಿಡುವುದಿಲ್ಲ. ಮರ ಸಾಗಾಟದ ಹಿಂದೆ ಇಲಾಖೆಯ ಅನುಮತಿ ಪತ್ರವನ್ನು ಪ್ರಶ್ನಿಸುತ್ತೇವೆ ಎಂದು ರಾಜೇಶ್ ಬಾಕಿಲ ತಿಳಿಸಿದ್ದಾರೆ.

ನೂರಾರು ವರ್ಷಗಳಿಂದ ನಮ್ಮ ಪಾಲಿನ ಮೂಲನಾಗದೇವರು ಎಂದು ಆರಾಧಿಸಿಕೊಂಡು ಬಂದಿರುವ ಕೆಲವು ಕುಟುಂಬಗಳು ತಮ್ಮ ನಂಬಿಕೆಯ ಆರಾಧನಾ ಶಕ್ತಿಗಳಾದ ದೈವದೇವರುಗಳ ಪ್ರಾಕೃತಿಕ ನಾಗಬನ ಮತ್ತು ಸಂಬoದಿಸಿದ ಕೆರೆಯನ್ನು ಜೆಸಿಬಿ ತಂದು ಸಂಪೂರ್ಣವಾಗಿ ನಾಶ ಮಾಡಿರುವ ಘಟನೆಯಿಂದ ನೊಂದು ಹೋಗಿದ್ದು, ಇದೀಗ ಆ ಜಮೀನಿಗೆ ಸಂಬoಧ ಪಟ್ಟಂತೆ ಏಕಮಾತ್ರ ಗಂಗಮ್ಮ ಕುಟುಂಬ ಮಾತ್ರ ಭಕ್ತರೊಂದಿಗೆ ಬೆಂಬಲವಾಗಿ ನಿಂತಿದ್ದು, ತಮ್ಮ ಪಾಲಿನ ಹಕ್ಕನ್ನು ಪಡೆದೇ ಪಡೆಯುತ್ತೇವೆ, ಮತ್ತು ಸದ್ರಿ ಜಾಗದಲ್ಲಿಯೇ ದೈವದೇವರ ಸಾನಿಧ್ಯಕ್ಕೆ ಶಕ್ತಿಯನ್ನು ನೀಡುವ ದೈವೀ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಾಗದೇವರು, ರಕ್ತೇಶ್ವರಿ ದೈವಗಳ ಸಂಕಲ್ಪದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಕುಟುಂಬದ ನೂರಾರು ಭಕ್ತರು ಪಾಲ್ಗೊಂಡರು. ಈ ಜಾಗದಲ್ಲಿದ್ದ ನಾಗಬನವನ್ನು ಜೀಣೋದ್ಧಾರ ಹೆಸರಿನಲ್ಲಿ ಎತ್ತಂಗಡಿ ಮಾಡಿ ಬೇರೆ ಜಾಗದಲ್ಲಿ ಮಾಡಲು ಬರುವುದಿಲ್ಲ. ಒಂದು ವೇಳೆ ಆ ರೀತಿ ಆಗುವುದಿದ್ದರೆ ನಾಗನಿಗೆ ತನು ಎರೆಯಲು ನೂರಾರು ಕಿ.ಮೀ. ಸಾಗುವುದು ಬೇಕಾಗಿರಲಿಲ್ಲ. ನಮ್ಮ ದೈವ ಕ್ಷೇತ್ರದ ಸಾನಿಧ್ಯ ಬಳಿಯಲ್ಲಿಯೇ ನಾಗನ ಪ್ರತಿಷ್ಠಾಪನೆ ಮಾಡಬಹುದಿತ್ತು ಮತ್ತು ನಾಗನ ತೆರವುಗೊಳಿಸಿದ ಪ್ರಕರಣಕ್ಕೆ ನಮ್ಮ ತಕರಾರು ಕೂಡಾ ಇರುತ್ತಿರಲಿಲ್ಲ ಎಂದು ಕುಟುಂಬಸ್ತರಾದ ಹರೀಶ್ ಪೂಜಾರಿ ಬಾಕಿಲ ತಿಳಿಸಿದ್ದಾರೆ.

ಕೊನೆಗೆ ಭಕ್ತರು ಸಾನಿಧ್ಯದ ಸಮೀಪದಲ್ಲಿರುವ ಪಂಜುರ್ಲಿ ಸಾನಿಧ್ಯಕ್ಕೆ ತೆರಳಿ ಅಲ್ಲಿ ದೈವಗಳಿಗೆ ದೀಪದೂಪ ಬೆಳಗಿ ಆರಾಧನೆಯನ್ನು ಮಾಡಿ ದೈವಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡು ಪ್ರಾರ್ಥನೆಯನ್ನು ಸಲ್ಲಿಸಿದರು. ಬೆಳಿಗ್ಗೆ ಬೊಳ್ಳೆಮಾರ್ ಕುಟುಂಬಸ್ತರು ತಮ್ಮ ಧರ್ಮದೈವ ಧೂಮಾವತಿ ಸಪರಿವಾರ ದೈವಗಳಿಗೆ ಪ್ರಾರ್ಥಿಸಿ ಸಾನಿಧ್ಯಕ್ಕೆ ಆಗಮಿಸಿದರು ಮತ್ತು ಗ್ರಾಮದ ದೈವದೇವರಿಗೆ ಸಂಕಲ್ಪವನ್ನು ಮಾಡಿಕೊಂಡು ನಾಗ ಸಾನಿಧ್ಯವನ್ನು ಉಳಿಸಿಕೊಳ್ಳಲು ಪ್ರಾರ್ಥನೆಯನ್ನು ಮಾಡಿದರು.

Continue Reading
Advertisement

Bantawala

ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಶಕಗಳ ಬೇಡಿಕೆಗೆ ಸ್ಪಂದನೆ
ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ.

ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದ ಸ್ಥಳೀಯರು, ಕೂಡಲೇ ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.

ತಾಂತ್ರಿಕ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು:”ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮನವರಿಕೆ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗಡಿ ಭಾಗದ ಅಭಿವೃದ್ಧಿ ಹಾಗೂ ಜನರ ಸಂಕಷ್ಟ ನಿವಾರಣೆಗೆ ಈ ಸೇತುವೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಣಿಲ ಗ್ರಾಮ ಪಂಚಾಯತ್‌ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಶ್ರೀಧರ್ ಬಾಳೆಕಲ್ಲು , ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading

accident

ಮುಳಿಯದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ: ಪರಸ್ಪರ ದೂರು ದಾಖಲು

Published

on

ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಮಾರ್ಚ್ 24ರಂದು ಬೆಳಿಗ್ಗೆ ಕೆಎಸ್ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತವು ಪರಸ್ಪರ ಹಲ್ಲೆ ಮತ್ತು ದೂರು-ಪ್ರತಿದೂರುಗಳಿಗೆ ಕಾರಣವಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಪ್ರಕರಣ 1: ಬಸ್ ಕಂಡಕ್ಟರ್ ಪ್ರಶಾಂತ್ ನೀಡಿದ ದೂರು (ಕ್ರೈಂ ನಂ: 0072/2026)
ಬಸ್ ನಿರ್ವಾಹಕ ಪ್ರಶಾಂತ್ ಅವರು ನೀಡಿದ ದೂರಿನಲ್ಲಿ (ಕ್ರೈಂ ನಂ: 0072/2026), ಟಿಪ್ಪರ್ ಚಾಲಕ ಬಿಲಾಲ್ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ. ಅಪಘಾತದ ಫೋಟೋ ತೆಗೆಯಲು ಹೋದಾಗ ಚಾಲಕನು ಅವಾಚ್ಯವಾಗಿ ಬೈದು, ಪ್ರಶಾಂತ್ ಅವರ ಎದೆ ಮತ್ತು ಕುತ್ತಿಗೆಗೆ ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಶರ್ಟ್ ಜೇಬಿನಲ್ಲಿದ್ದ 3,000 ರೂ. ಸಾರಿಗೆ ಆದಾಯದ ಹಣವನ್ನು ದೋಚಿದ್ದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ದೂರಿರುತ್ತಾರೆ. ಈ ಸಂಬಂಧ ಆರೋಪಿ ಬಿಲಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 (ಅಜಾಗರೂಕ ಚಾಲನೆ), 352 (ಅಪಮಾನ), 115(2) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 132 (ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಕರಣ 2: ಲಾರಿ ಚಾಲಕ ಸೈಯ್ಯದ್ ಬಿಲಾಲ್ ನೀಡಿದ ದೂರು (ಕ್ರೈಂ ನಂ: 0073/2026)
ಮತ್ತೊಂದೆಡೆ, ಟಿಪ್ಪರ್ ಚಾಲಕ ಸೈಯ್ಯದ್ ಬಿಲಾಲ್ ಅವರು ನೀಡಿದ ಪ್ರತಿದೂರಿನಲ್ಲಿ (ಕ್ರೈಂ ನಂ: 0073/2026), ಬಸ್ ಚಾಲಕ ಗಣೇಶ್ ಅವರ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಅಪಘಾತದ ನಂತರ ಬಸ್ ನಿರ್ವಾಹಕ ಪ್ರಶಾಂತ್ ಅವರು ಮರದ ಕೋಲಿನಿಂದ ತಮ್ಮ ಬೆನ್ನಿಗೆ ಹೊಡೆದಿದ್ದಾರೆ ಮತ್ತು ಬಸ್ ಚಾಲಕ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನಿರ್ವಾಹಕರು ಶರ್ಟ್ ಹಿಡಿದು ಎಳೆದಾಡಿ “ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ದೂರಿನನ್ವಯ ಬಸ್ ಚಾಲಕ ಮತ್ತು ನಿರ್ವಾಹಕರ ವಿರುದ್ಧ BNS ಸೆಕ್ಷನ್ 281, 352, 118(1) (ಅಪಾಯಕಾರಿ ಆಯುಧದಿಂದ ಗಾಯಗೊಳಿಸುವುದು), 115(2), 351(2) (ಕ್ರಿಮಿನಲ್ ಬೆದರಿಕೆ) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಪ್ರಸ್ತುತ ಎರಡೂ ಪ್ರಕರಣಗಳ ಕುರಿತು ವಿಟ್ಲ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading

Bantawala

ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ

Published

on

ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞoಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಹಲವು ವರ್ಷಗಳ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ರಸ್ತೆ ಕಾಂಕ್ರೀಟೀಕರಣ ಮತ್ತು ಅಭಿವೃದ್ಧಿಗಾಗಿ 60 ಲಕ್ಷ ರೂಪಾಯಿ ಅನುದಾನ ಮಂಜೂರುಗೊಳಿಸಿದ್ದಾರೆ.

ಸಮಸ್ಯೆಯ ಹಿನ್ನೆಲೆ:
ಅಂತರರಾಜ್ಯ ಸಂಪರ್ಕಿಸುವ ಈ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು. ರಸ್ತೆ ಕಿರಿದಾಗಿದ್ದರಿಂದ ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನುಗಳಿದ್ದ ಕಾರಣ ರಸ್ತೆ ಅಗಲೀಕರಣ ಸಾಧ್ಯವಾಗಿರಲಿಲ್ಲ, ಇದರಿಂದಾಗಿ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ರಸ್ತೆ ಬದಿಯಲ್ಲಿ ಕನಿಷ್ಠ ಜಾಗವೂ ಇಲ್ಲದಂತಾಗಿತ್ತು.

ಶಾಸಕರ ಇಚ್ಛಾಶಕ್ತಿ:
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳೊAದಿಗೆ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಖಾಸಗಿ ಜಮೀನು ಮಾಲೀಕರೊಂದಿಗೆ ಮಾತುಕತೆ ನಡೆಸಿ, ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಭರವಸೆ ನೀಡಿದ ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

“ಬೊಬ್ಬೆಕೇರಿಯಲ್ಲಿ ರಸ್ತೆ ಕಿರಿದಾಗಿದ್ದರಿಂದ ಶಾಲಾ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ಜೀವಭಯವಿತ್ತು. ಈ ಸಮಸ್ಯೆಯನ್ನು ಮನಗಂಡು ಖಾಸಗಿ ಜಮೀನು ಮಾಲೀಕರೊಂದಿಗೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅನುಕೂಲಕ್ಕಾಗಿ ಯಾರೇ ಅಡ್ಡಿಪಡಿಸಿದರೂ ಇಲ್ಲಿ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುವುದು ಖಚಿತ.”
ಅಶೋಕ್ ರೈ, ಶಾಸಕರು, ಪುತ್ತೂರು

Continue Reading

Trending

Copyright © 2025 Deevatige