Connect with us

Bantawala

ನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ

Published

on

ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ ಅಪಾಯ ಎದುರಾಗಿದೆ ಎಂಬೆಲ್ಲ ಸ್ಲೋಗನ್‌ಗಳು ವೈರಲ್ ಆಗುತ್ತಿತ್ತು.

ದೈವಗಳ ನೆಲೆವೀಡು ಕರಾವಳಿಯಲ್ಲಿ ಶತಶತಮಾನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಮೂಲ ನಾಗದೇವರ ಬನ ಮತ್ತು ಕೆರೆಯನ್ನು ಸರ್ವನಾಶಮಾಡಿ ಭಕ್ತಾದಿಗಳ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದಕ್ಕೆ ದೈವಭಕ್ತರಿಂದಾಗಲಿ, ಧರ್ಮಪಾಲಕರಿಂದಾಗಲಿ ಯಾವುದೇ ವಿರೋಧಗಳು ಬಾರದೆ ಇದ್ದ ಅತ್ಯಂತ ನೋವಿನ ವಿಚಾರವೊಂದು ಇದೀಗ ಬೊಂಡಾಲ ಎಂಬ ಕರಾವಳಿ ಭಾಗದಿಂದ ಸದ್ದಿಲ್ಲದೆ ಬೆಳಕಿಗೆ ಬಂದಿದೆ.

ಬoಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಹಲವಾರು ಕುಟುಂಬಗಳಿಗೆ ಮೂಲನಾಗದೇವರಾಗಿ ಆರಾಧನೆಯಾಗುತ್ತಿದ್ದ ಪವಿತ್ರ ನಾಗಬನವನ್ನು ಭೂಮಿ ಖರೀದಿದಾರ ಸಂಪೂರ್ಣವಾಗಿ ದ್ವಂಸ ಗೊಳಿಸಿ ಅದರ ಪ್ರಾಕೃತಿಕ ರಚನೆಯನ್ನೇ ನೆಲಸಮ ಮಾಡಿ ಭಕ್ತಾದಿಗಳ ಭಾವನೆಗಳನ್ನು ಜೀವಂತ ಸುಟ್ಟು ಹಾಕಿದ ಘಟನೆಯ ಸುತ್ತು ಭಕ್ತರು ಆಕ್ರೋಶಿತರಾಗಿರುವುದು ಕಂಡುಬoದಿದೆ.

ನಮ್ಮ ಪೂರ್ವಜರ ಲಗಾಯಿತು ನೂರಾರು ವರ್ಷಗಳಿಂದ ಆರಾಧನೆಯಾಗುತ್ತಿದ್ದ ನಾಗದೇವರು ನಾಗಬ್ರಹ್ಮ, ನಾಗರಾಜ, ಮತ್ತು ನಾಗಕನ್ನಿಕೆ ಸೇರಿದಂತೆ ಅಷ್ಟಕುಲ ನಾಗದೇವರ ಸಾನಿಧ್ಯವನ್ನು ದ್ವಂಸಗೊಳಿಸಿರುವ ವಿಚಾರವನ್ನು ಬೊಂಡಾಲ ಬೊಳ್ಳೆಮಾರ್ ಬಿಲ್ಲವ ಕಿರೋಡಿಯನ್ ಕುಟುಂಬಸ್ತರು ಅವರ ಕ್ಷೇತ್ರದ ದೈವಜ್ಞರಲ್ಲಿ ಪ್ರಶ್ನಾಚಿಂತನೆಯನ್ನು ಇಟ್ಟು ಕೇಳಿದಾಗ ನಿಮ್ಮ ಮೂಲ ನಾಗದೇವರ ಸಂಕಷ್ಟ ಸಂದರ್ಭ ನೀವು ಅದನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಿಸಿದಲ್ಲಿ ನಾಗದೇವರು ಇನ್ನಷ್ಟು ಸಾನಿಧ್ಯಶಕ್ತಿಯಾಗಿ ಬೆಳಗಲಿದ್ದಾರೆ ಎಂದು ತಿಳಿಸಿದರೆನ್ನಲಾಗಿದೆ.

ಅವರ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದoತೆ ಕಣಿಯೂರು ಕ್ಷೇತ್ರದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ತಂತ್ರಿಗಳಾದ ಶಂಕರನಾರಾಯಣ ಪುರೋಹಿತರ ದಿವ್ಯ ಉಪಸ್ಥಿತಿಯಲ್ಲಿ ಜನವರಿ 9ರಂದು ಕುಟುಂಬಸ್ತರು ಸಾನಿಧ್ಯದಲ್ಲಿ ಸೇರಿಕೊಂಡು ದೈವಗಳ ಪವಿತ್ರವಾದ ಬನ ಕಟ್ಟೆಗಳನ್ನು ದ್ವಂಸಗೊಳಿಸಲಾದ ಅದೇ ಜಾಗದಲ್ಲಿ ನಾಗದೇವರು ಮತ್ತು ರಕ್ತೇಶ್ವರಿ ಸಾನಿಧ್ಯದ ಸಂಕಲ್ಪವನ್ನು ದೀಪದಲ್ಲಿ ಲಯನ ಮಾಡಿಕೊಂಡು ಕುಟುಂಬಸ್ತರು ಸಾಮೂಹಿಕ ಪ್ರಾರ್ಥನೆ ನಡೆಸಿದರು.


ಇದೇ ಜಾಗದಲ್ಲಿ ನಮಗೆ ನಾಗಸಾನಿಧ್ಯ ಮತ್ತೆ ಉದಯಿಸಿ ಬರುವಂತೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದ ಸ್ವಾಮೀಜಿಯವರು. ಸಮಾಜದಲ್ಲಿ ದೈವಬಲ ಇಲ್ಲವಾದರೆ ಆತನಿಂದ ಏನೂ ಸಾಧಿಸುವುದಕ್ಕೆ ಸಾಧ್ಯವಿಲ್ಲ. ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಹುಡುಕುವ ಕೆಲಸ ಮಾಡಿದಾಗ ದೈವೀ ಅನುಗ್ರಹದ ಮೂಲಕ ಮತ್ತೇ ನಾಗಬನದ ನಿರ್ಮಾಣ ಇದೇ ಜಾಗದಲ್ಲಿ ಆಗಿಯೇ ಆಗುತ್ತದೆ ಎಂದು ಆಶೀರ್ವಚನ ಮಾಡಿದರು.

ತಲೆ ತಲಾಂತರಗಳಿOದ ಕ್ಷೇತ್ರದ ತಂತ್ರಿಗಳಾಗಿ ನಾಗದೇವರು ಸೇರಿದಂತೆ ದೈವದೇವರ ಸೇವೆಯನ್ನು ಮಾಡಿಕೊಂಡು ಬಂದಿರುವ ಶಂಕರನಾರಾಯಣ ತಂತ್ರಿಗಳವರು ಈ ಕ್ಷೇತ್ರ ನಮ್ಮವರಿಂದಲೇ ದ್ವಂಸವಾಗಿರುವ ದುಖಃದ ವಾರ್ತೆಯನ್ನು ಕೇಳಿ ಸಾನಿಧ್ಯಕ್ಕೆ ಆಗಮಿಸಿ ನೋಡಿ ಆತಂಕಗೊoಡು ನಾಗದೇವರಿಗೆ ಬಂದಿರುವ ಸಂಕಷ್ಟವನ್ನು ನೆನೆದು ಅದೇ ಸ್ಥಳದಲ್ಲಿ ಕಣ್ಣೀರು ಹಾಕಿ ಹೋಗಿದ್ದರು. ತನ್ನ ಹೃದಯಂತರಾಳದಿOದ ಸಾನಿಧ್ಯದಲ್ಲಿ ಪ್ರಾರ್ಥಿಸಿ ತೆರಳಿದವರು ಇಂದು ಮತ್ತೆ ಈ ಸಾನಿಧ್ಯಕ್ಕೆ ಆಗಮಿಸಿ ಭಕ್ತಾದಿಗಳ ನೋವಿನೊಂದಿಗೆ ಜೊತೆಯಾಗಿ ಮಾತನಾಡುತ್ತಾ ದೈವತಾ ಕಾರ್ಯವನ್ನು ನಾವು ಯಾವ ರೀತಿಯಲ್ಲಿ ಈ ಕ್ಷೇತದಲ್ಲಿ ಮಾಡಿಕೊಂಡು ಬಂದಿದ್ದೇವೆಯೋ ಅದೇ ರೀತಿಯಲ್ಲಿ ಇನ್ನು ಮುಂದೆಯೂ ಮಾಡಲು ಆ ದೈವಶಕ್ತಿಗಳು ಅನುಗ್ರಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಈ ಭೂಮಿಯ ಹಕ್ಕುದಾರ್ತಿಯಾಗಿರುವ ಗಿರಿಜ ಅವರ ಮಗಳು ಗಂಗಮ್ಮ ಮತ್ತು ಮಕ್ಕಳು ಉಪಸ್ಥಿತರಿದ್ದು, ನ್ಯಾಯಾಲಯದಲ್ಲಿ ದಾವೆಯಲ್ಲಿರುವ ಜಾಗವನ್ನು ಪರಬಾರೆ ಅಥವಾ ಮಾರಾಟ ಮಾಡಬಾರದೆಂಬ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ದೈವದೇವರ ಸ್ವತ್ತು ಎಂಬ ಭಯಭಕ್ತಿಯೂ ತೋರದೆ ಸಾನಿಧ್ಯವನ್ನು ಸಂಪೂರ್ಣವಾಗಿ ದ್ವಂಸ ಮಾಡಿರುವ ಬಗ್ಗೆ ಕಣ್ಣೀರು ಹಾಕಿದ ಘಟನೆಯೂ ನಡೆಯಿತು.

ಏನಿದು ದಾವೆ ?
ಬೊಂಡಾಳ ಸೇನೆರ ಬೈಲು ಎಂಬಲ್ಲಿ ಗಿರಿಜ ಎಂಬವರಿಗೆ ಸುಮಾರು 5.5 ಎಕ್ರೆ ಜಮೀನಿದ್ದು, ಸುಮಾರು 10 ವರ್ಷಗಳ ಹಿಂದೆ ಸಮಾನ ಹಕ್ಕುದಾರರಾಗಿರುವ 4 ಗಂಡು ಮತ್ತು 5 ಹೆಣ್ಣು ಮಕ್ಕಳಿರುವ ಸಂಸಾರದಲ್ಲಿ ಹೆಣ್ಣು ಮಕ್ಕಳ ಸಹಿಯನ್ನು ಪೋರ್ಜರಿ ಮಾಡಿ 4 ಗಂಡು ಮಕ್ಕಳು ಜಾಗವನ್ನು ಕಬಳಿಸಿರುವುದು ಮತ್ತು ಈ ಬಗ್ಗೆ ಗಿರಿಜ ಅವರ ಮಗಳು ಗಂಗಮ್ಮ ಗಂಡು ಮಕ್ಕಳು ಪಡೆದಿರುವ ಆಸ್ತಿ ಹಕ್ಕು ಅಕ್ರಮವಾಗಿ ಪಡೆದಿರುವುದಾಗಿದೆ, ಹಾಗೂ ತನ್ನ ಪಾಲಿನ ಆಸ್ತಿಯ ಹಕ್ಕನ್ನು ಪಡೆಯಲು ಮುಂದಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಶ್ರೀಮತಿ ಗಂಗಮ್ಮ,ಇತರರು ಮತ್ತು ಎದುರುವಾದಿಗಳ ಮದ್ಯೆ ಒ ಎಸ್ ನಂ.80/2018 ಎಂಬ ಮೂಲದಾವೆ ಮಾನ್ಯ ಪ್ರದಾನ ಸಿವಿಲ್ ನ್ಯಾಯಾಲಯದಲ್ಲಿ ಬಾಕಿಯಿರುತ್ತದೆ.ಅದಾಗ್ಯೂ ಬಿ ಶೆಡ್ಯೂಲ್ ಆಸ್ತಿಗೆ ಸಂಬOಧಪಟ್ಟOತೆ ಮಾನ್ಯ ನ್ಯಾಯಾಲಯವು 2018ರ ಪೆ.17.ರಂದು ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿದ ನಂತರ ,2018ರ ಫೆ. 24ರಂದು ತಡೆಯಾಜ್ಞೆ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದ್ದು, ಈ ತಡೆ ಆದೇಶದಲ್ಲಿ ದಾವಾ ಆಸ್ತಿಯ ಮಾರಾಟ ಅಥವಾ ಹಸ್ತಾಂತರವನ್ನು ನಿರ್ಬಂಧಿಸಿರುವುದು ಈಗಲೂ ಚಾಲ್ತಿಯಲ್ಲಿರುದನ್ನು ಎದ್ರಿಯವರು ಮನಗಂಡಿದ್ದರೂ ಸಾನಿಧ್ಯವಿರುವ ಜಾಗದ ಹಕ್ಕುದಾರ್ತಿ ಎಂದಿರುವ ಗಿರಿಜ ಅವರ ಮಗ ಶೇಖರ ಸಾಲ್ಯಾನ್‌ರವರ ಪತ್ನಿ ವಿಜಯ ಮತ್ತು ಮಗ ರಾಹುಲ್ ಅವರು ಬಿಸಿರೋಡಿನ ಅಮರ್ ಸತೀಶ್ ಕುಮಾರ್ ಎಂಬವರಿಗೆ ವಿಕ್ರಯಿಸಿರುವುದು ಮತ್ತು ಅವರು ಕಮರ್ಷಿಯಲ್ ಆಗಿ ಸಾನಿಧ್ಯ ಅಗೆದು ದ್ವಂಸ ಮಾಡಿರುವುದಾಗಿ.. ಇದರಿಂದ ಅನೇಕ ಭಕ್ತರ ಮನಸ್ಸಿಗೆ ಆಘಾತವಾಗಿರುವುದಾಗಿ ಗಂಗಮ್ಮ ಅವರ ಮಗ ಜಯಶಂಕರ್ ಮಾದ್ಯಮಕ್ಕೆ ತಿಳಿಸಿದ್ದಾರೆ.

ಈ ಕಾನೂನು ಪ್ರಕ್ರಿಯೆಗಳನ್ನು ತಿಳಿದುಕೊಂಡ ಜಮೀನುದಾರರು ವ್ಯಕ್ತಿಯೊಬ್ಬರಿಗೆ ಮಾರಾಟ ಹೆಸರಿನಲ್ಲಿ ಜಾಗವನ್ನು ಹಸ್ತಾಂತರಿಸಿರುವುದು ಮೊದಲನೇಯ ಅಪರಾಧವಾದರೆ. ಆ ಜಾಗವನ್ನು ಪಡೆದು ಕಮರ್ಶಿಯಲ್ ಯೋಚನೆಯಲ್ಲಿ ಅದರಲ್ಲಿದ್ದ ನಾಗಬನ ಮತ್ತು ಅದಕ್ಕೆ ಸಂಬAದಿಸಿದ ಕೆರೆಯನ್ನು ನಾಶಮಾಡಿರುವುದು ದೈವದ್ರೋಹವಾಗಿರುವುದಾಗಿ ಭಕ್ತರು ಆರೋಪಿಸಿದ್ದಾರೆ. ಅತೀ ಪುರಾತನವಾದ ನಾಗ ಬನದೊಳಗೆ ಭವ್ಯವಾದ ಕಟ್ಟೆಯನ್ನು ನಿರ್ಮಾಣ ಮಾಡಿ ಸಂಬAಧಿಸಿದ ಕೆರೆಗೂ ಕಲ್ಲಿನ ಕಟ್ಟೆಯನ್ನು ಕಟ್ಟಿ ರಕ್ತೇಶ್ವರಿ ದೈವಕ್ಕೂ ಪವಿತ್ರವದ ಕಟ್ಟೆಯನ್ನು ಕಟ್ಟಿ, ಹೀಗೆ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಐತಿಹ್ಯವನ್ನು ದ್ವಂಸಗೊಳಿಸಿದಾಗ ಅದನ್ನು ವೀಕ್ಷಿಸಲು ಬಂದ ಭಕ್ತರ ಮೇಲೆಯೇ ಕೇಸು ದಾಖಲಿಸುವುದೆಂದರೆ ನಾವು ಪಾಕಿಸ್ತಾನದಲ್ಲಿದ್ದೇವೆಯೋ ಎಂಬ ಭಯ ಬಂದಿದೆ. ಮೇಲಾಗಿ ನಾಗಬನದಲ್ಲಿ ಬೆಳೆದಿದ್ದ ಬೃಹದಾಕಾರದ ಮರಗಳನ್ನು ಅರಣ್ಯ ಇಲಾಖೆಯ ಕೃಪಾ ಕಟಾಕ್ಷದಲ್ಲಿ ಕಡಿದು ಸಾಗಾಟ ಮಾಡುವಾಗ ಯಾವುದೇ ಅಡೆತಡೆಗಳು ಬಂದಿಲ್ಲ, ಯಾವ ಇಲಾಖೆಗಳೂ ಇತ್ತ ಸುಳಿಯಲೇ ಇಲ್ಲ ಎಂದರೆ ಎಲ್ಲವೂ ನಾಗದೇವರಿಗೆ ಅರ್ಪಿತವಾಗಲಿ ಎಂದು ನಾವು ಸುಮ್ಮನೆ ಬಿಡುವುದಿಲ್ಲ. ಮರ ಸಾಗಾಟದ ಹಿಂದೆ ಇಲಾಖೆಯ ಅನುಮತಿ ಪತ್ರವನ್ನು ಪ್ರಶ್ನಿಸುತ್ತೇವೆ ಎಂದು ರಾಜೇಶ್ ಬಾಕಿಲ ತಿಳಿಸಿದ್ದಾರೆ.

ನೂರಾರು ವರ್ಷಗಳಿಂದ ನಮ್ಮ ಪಾಲಿನ ಮೂಲನಾಗದೇವರು ಎಂದು ಆರಾಧಿಸಿಕೊಂಡು ಬಂದಿರುವ ಕೆಲವು ಕುಟುಂಬಗಳು ತಮ್ಮ ನಂಬಿಕೆಯ ಆರಾಧನಾ ಶಕ್ತಿಗಳಾದ ದೈವದೇವರುಗಳ ಪ್ರಾಕೃತಿಕ ನಾಗಬನ ಮತ್ತು ಸಂಬoದಿಸಿದ ಕೆರೆಯನ್ನು ಜೆಸಿಬಿ ತಂದು ಸಂಪೂರ್ಣವಾಗಿ ನಾಶ ಮಾಡಿರುವ ಘಟನೆಯಿಂದ ನೊಂದು ಹೋಗಿದ್ದು, ಇದೀಗ ಆ ಜಮೀನಿಗೆ ಸಂಬoಧ ಪಟ್ಟಂತೆ ಏಕಮಾತ್ರ ಗಂಗಮ್ಮ ಕುಟುಂಬ ಮಾತ್ರ ಭಕ್ತರೊಂದಿಗೆ ಬೆಂಬಲವಾಗಿ ನಿಂತಿದ್ದು, ತಮ್ಮ ಪಾಲಿನ ಹಕ್ಕನ್ನು ಪಡೆದೇ ಪಡೆಯುತ್ತೇವೆ, ಮತ್ತು ಸದ್ರಿ ಜಾಗದಲ್ಲಿಯೇ ದೈವದೇವರ ಸಾನಿಧ್ಯಕ್ಕೆ ಶಕ್ತಿಯನ್ನು ನೀಡುವ ದೈವೀ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಾಗದೇವರು, ರಕ್ತೇಶ್ವರಿ ದೈವಗಳ ಸಂಕಲ್ಪದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಕುಟುಂಬದ ನೂರಾರು ಭಕ್ತರು ಪಾಲ್ಗೊಂಡರು. ಈ ಜಾಗದಲ್ಲಿದ್ದ ನಾಗಬನವನ್ನು ಜೀಣೋದ್ಧಾರ ಹೆಸರಿನಲ್ಲಿ ಎತ್ತಂಗಡಿ ಮಾಡಿ ಬೇರೆ ಜಾಗದಲ್ಲಿ ಮಾಡಲು ಬರುವುದಿಲ್ಲ. ಒಂದು ವೇಳೆ ಆ ರೀತಿ ಆಗುವುದಿದ್ದರೆ ನಾಗನಿಗೆ ತನು ಎರೆಯಲು ನೂರಾರು ಕಿ.ಮೀ. ಸಾಗುವುದು ಬೇಕಾಗಿರಲಿಲ್ಲ. ನಮ್ಮ ದೈವ ಕ್ಷೇತ್ರದ ಸಾನಿಧ್ಯ ಬಳಿಯಲ್ಲಿಯೇ ನಾಗನ ಪ್ರತಿಷ್ಠಾಪನೆ ಮಾಡಬಹುದಿತ್ತು ಮತ್ತು ನಾಗನ ತೆರವುಗೊಳಿಸಿದ ಪ್ರಕರಣಕ್ಕೆ ನಮ್ಮ ತಕರಾರು ಕೂಡಾ ಇರುತ್ತಿರಲಿಲ್ಲ ಎಂದು ಕುಟುಂಬಸ್ತರಾದ ಹರೀಶ್ ಪೂಜಾರಿ ಬಾಕಿಲ ತಿಳಿಸಿದ್ದಾರೆ.

ಕೊನೆಗೆ ಭಕ್ತರು ಸಾನಿಧ್ಯದ ಸಮೀಪದಲ್ಲಿರುವ ಪಂಜುರ್ಲಿ ಸಾನಿಧ್ಯಕ್ಕೆ ತೆರಳಿ ಅಲ್ಲಿ ದೈವಗಳಿಗೆ ದೀಪದೂಪ ಬೆಳಗಿ ಆರಾಧನೆಯನ್ನು ಮಾಡಿ ದೈವಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡು ಪ್ರಾರ್ಥನೆಯನ್ನು ಸಲ್ಲಿಸಿದರು. ಬೆಳಿಗ್ಗೆ ಬೊಳ್ಳೆಮಾರ್ ಕುಟುಂಬಸ್ತರು ತಮ್ಮ ಧರ್ಮದೈವ ಧೂಮಾವತಿ ಸಪರಿವಾರ ದೈವಗಳಿಗೆ ಪ್ರಾರ್ಥಿಸಿ ಸಾನಿಧ್ಯಕ್ಕೆ ಆಗಮಿಸಿದರು ಮತ್ತು ಗ್ರಾಮದ ದೈವದೇವರಿಗೆ ಸಂಕಲ್ಪವನ್ನು ಮಾಡಿಕೊಂಡು ನಾಗ ಸಾನಿಧ್ಯವನ್ನು ಉಳಿಸಿಕೊಳ್ಳಲು ಪ್ರಾರ್ಥನೆಯನ್ನು ಮಾಡಿದರು.

Continue Reading
Advertisement

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Bantawala

ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ

Published

on

ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನೆಯ ಸಭೆ ನಡೆಯಿತು.

ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್‌ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Continue Reading

Trending

Copyright © 2025 Deevatige