Connect with us

crime

ಕೋಳಿಜೂಜಿನಲ್ಲಿ 1.53 ಕೋಟಿ ಬಾಚಿದ ರಮೇಶ್

Published

on

ಇದೀಗ ಎಲ್ಲಿ ಹೋದರೂ ಕೋಳಿಅಂಕದ್ದೇ ಸುದ್ದಿ.. ಜೂಜು ರಹಿತವೋ ಸಹಿತವೋ ಕೋಳಿ ಅಂಕ ನಡೆಸುವಂತಿಲ್ಲ.. ಪ್ರಾಣಿಹಿಂಸೆ ಹೆಸರಿನಲ್ಲಿ ತಡೆಯಿದೆ. ಕರಾವಳಿಯಲ್ಲಿ ಇನ್ನು ಕೋಳಿ ಅಂಕ ನಡೆಸುವುದು ಸಾಧ್ಯವೇ ಇಲ್ಲ ಎಂದು ಕದ್ದು ಮುಚ್ಚಿ ಮಜಾ ಪಡೆಯುತ್ತಾ ಆ ವಿಚಾರವನ್ನು ಜನ ಬಿಟ್ಟೇ ಬಿಟ್ಟಿದ್ದಾರೆ. ಈ ಮದ್ಯೆ ಕೋಳಿ ಅಂಕದ ಜೂಜಿನಲ್ಲಿ ಒಬ್ಬರು ಬರೋಬ್ಬರಿ 1.53 ಕೋಟಿ ಪಡೆದುಕೊಂಡ ಸುದ್ದಿಯೊಂದು ಹರಿದಾಡುತ್ತಿದ್ದು, ಕಾನೂನು ಪಾಲಕರು ಅವರ ಹಿಂದೆ ಬಿದ್ದಿದ್ದಾರೆ.
ತಾಡೇಪಲ್ಲಿಗುಡೆಮ್ ಪಟ್ಟಣದ ಕೋಳಿ ಕಾಳಗದಲ್ಲಿ ರಾಜಮಂಡ್ರಿ ರಮೇಶ್ ಎಂಬವರೇ ಕೋಳಿ ಅಂಕದಲ್ಲಿ ಪಣಕಟ್ಟಿ 1.53 ಕೋಟಿ ರೂ. ಗೆದ್ದ ಉದ್ಯಮಿ. . ಕಾನೂನು ನಿಷೇಧದ ನಡುವೆಯೂ ಆಂದ್ರದಲ್ಲಿ ಹಬ್ಬದ ವೇಳೆ ಕೋಳಿ ಮತ್ತು ಎಮ್ಮೆ ಕಾಳಗಗಳು ನಡೆಯುತ್ತಲೇ ಇದೆ

ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಸಂಕ್ರಾoತಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾದ ಕೋಳಿ ಅಂಕದಲ್ಲಿ ವ್ಯಕ್ತಿಯೊಬ್ಬ1.53 ಕೋಟಿ ರೂ.ಗಳನ್ನು ಗೆದ್ದಿರುವ ಘಟನೆ ನಡೆದಿದ್ದು, ಈ ಮೊತ್ತವು ಕೋಳಿ ಅಂಕದ ಇತಿಹಾಸದಲ್ಲೇ ಅತೀ ಹೆಚ್ಚಿನ ಮೊತ್ತವಾಗಿ ದಾಖಲೆಯಾಗಿದೆ. ತಾಡೇಪಲ್ಲಿಗುಡೆಮ್ ಪಟ್ಟಣದಲ್ಲಿ ನಡೆದ ಈ ಜೂಜಿನಲ್ಲ್ಲಿ ರಾಜಮಂಡ್ರಿ ರಮೇಶ್ (Rajamandri Ramesh) ಎಂಬ ವ್ಯಕ್ತಿ ತನ್ನ ಕೋಳಿಯ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.
ಸಂಕ್ರಾoತಿ ಹಬ್ಬದ ಆಚರಣೆಗಳ ಭಾಗವಾಗಿ ಆಯೋಜಿಸಲಾದ ಈ ಕೋಳಿ ಅಂಕದಲ್ಲಿ ರಮೇಶ್ ಮತ್ತು ಗುಡಿವಾಡ ಪ್ರಭಾಕರ್ ಎಂಬವರು ತಮ್ಮ ಕೋಳಿಗಳ ಮೇಲೆ ಭಾರೀ ಮೊತ್ತದ ಪಣ ತೊಟ್ಟಿದ್ದರು. ಹೋರಾಟಕ್ಕೆ ಬಳಸಲಾದ ಕೋಳಿಗಳ ಕಾಲುಗಳಿಗೆ ಸಣ್ಣ ಚೂರಿಗಳನ್ನು ಕಟ್ಟಲಾಗಿದ್ದು, ಈ ಹೋರಾಟದಲ್ಲಿ ರಮೇಶ್ ಅವರ ಕೋಳಿ ಗೆಲ್ಲುವ ಮೂಲಕ ವರ ಅಂಕದ ಕೋಳಿ ವಿಜಯಶಾಲಿಯಾಗಿ ಹೊರಹೊಮ್ಮಿ 1.53 ಕೋಟಿ ರೂ.ಗಳ ಮೊತ್ತವನ್ನು ಗೆಲ್ಲುವಂತೆ ಮಾಡಿದೆ.


ವಿಜಯದ ಬಳಿಕ ಮಾತನಾಡಿದ ರಮೇಶ್, “ನನ್ನ ಕೋಳಿಗಳನ್ನು ಹೋರಾಟಕ್ಕೆ ತಯಾರಿಸಲು ಕಳೆದ ಆರು ತಿಂಗಳುಗಳಿoದ ವಿಶೇಷ ಕಾಳಜಿ ವಹಿಸಿದ್ದೇನೆ. ಉತ್ತಮ ಆಹಾರ, ವ್ಯಾಯಾಮ ಮತ್ತು ವಿಶೇಷ ತಳಿಯ ಆಯ್ಕೆಯೇ ನನ್ನ ಗೆಲುವಿನ ರಹಸ್ಯ” ಎಂದು ತಿಳಿಸಿದ್ದಾರೆ. ಈ ಗೆಲುವಿನೊಂದಿಗೆ ರಮೇಶ್ ತಕ್ಷಣವೇ ಕೋಟ್ಯಾಧಿಪತಿಯಾಗಿದ್ದು, ಅವರ ಮನೆ ಮುಂದೆ ಜನಸಂದಣಿ ಜಮಾಯಿಸಿದ ದೃಶ್ಯಗಳು ಕಂಡುಬoದವು.
ವನ್ಯಜೀವಿ ಸಂರಕ್ಷಣಾ ಹಕ್ಕು ಸಂಘಟನೆಗಳ ಆಕ್ರೋಶ!
ಆದರೆ, ಈ ಘಟನೆಯು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಳಿ ಕಾಳಗವು ಪ್ರಾಣಿ ಹಿಂಸೆ ಮತ್ತು ಜೂಜಿನ ರೂಪವಾಗಿದ್ದು, ಇದು ಕಾನೂನಾತ್ಮಕವಾಗಿ ನಿಷೇಧಿತ ಎಂಬ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಗುರುವಾರ ಸತತ ಎರಡನೇ ದಿನವೂ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೋಳಿ ಅಂಕಗಳು ನಡೆದಿರುವ ವರದಿಗಳು ಹೊರಬಿದ್ದಿವೆ. ಹಬ್ಬದ ಹೆಸರಿನಲ್ಲಿ ಕಾನೂನು ಉಲ್ಲಂಘನೆ ನಡೆಯುತ್ತಿರುವುದರ ಬಗ್ಗೆ ಪ್ರಾಣಿ ಹಕ್ಕು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕೋರ್ಟ್ ನಿಷೇಧವಿದ್ದರೂ ಆಟ ಜಾರಿ!
ಇದೇ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ನಿಷೇಧ ಹೇರಿದ್ದರೂ ಅಸ್ಸಾಂನಲ್ಲಿಯೂ ಇಂತಹದ್ದೇ ಘಟನೆಗಳು ನಡೆದಿರುವುದು ಗಮನಾರ್ಹ. ಮಾಘ ಬಿಹು ಹಬ್ಬದ ಅಂಗವಾಗಿ ಮಧ್ಯ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ಬೈದ್ಯಾಬೋರಿ ಮತ್ತು ಅಹತ್ಗುರಿ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಎಮ್ಮೆ ಕಾಳಗಗಳು ನಡೆದಿವೆ. ಸ್ಥಳೀಯವಾಗಿ ‘ಮೊಹ್ ಜುಜ್’ ಎಂದು ಕರೆಯಲ್ಪಡುವ ಈ ಕಾಳಗಗಳನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸಿದ್ದರು ಎಂದು ಪಿಟಿಐ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಅಧಿಕಾರಿಗಳು ನಿರಾಕರಿಸಿದ್ದು, “ವಿಷಯ ನ್ಯಾಯಾಲಯದಲ್ಲಿ ಬಾಕಿ ಇದೆ” ಎಂದು ಮಾತ್ರ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಆಡಳಿತದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಎಳೆದಿದೆ.
ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ಕೋಳಿಜೂಜುಗಳು ಅವ್ಯಾಹಿತವಾಗಿ ನಡೆದಿರುವ ಬಗ್ಗೆ ಸಂಘಟನೆಗಳು ಇನ್ನಷ್ಟು ಆಕ್ರೋಶಿತರಾಗಿದ್ದು, ಕೋಳಿ ಅಂಕವನ್ನು ಕಾನೂನಾತ್ಮಕವಾಗಿ ನಿಷೇಧ ಮತ್ತು ದಂಡ ವಿಧಿಸಲು ಆಡಳಿತದ ವಿರುದ್ಧ ಹೋರಾಟ ಮುಂದುವರಿಯುವ ಸಾಧ್ಯತೆ ಕಂಡುಬರುತ್ತಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!