Connect with us

Dakshina Kannada

ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಜನವರಿ 20, ಹೂತೇರಿನಂದು ‘ವಿಟ್ಲೋತ್ಸವ-2026’

Published

on

ವರ್ಷಂಪ್ರತಿಯಂತೆ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದು ವರ್ಷಂಪ್ರತಿಯಂತೆ ವಿಆರ್‌ಸಿ ವಿಟ್ಲ ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ 33ನೇ ವರ್ಷದ ಸಾಂಸ್ಕೃತಿಕ ಕಲಾ ಕಾಣಿಕೆ ‘ವಿಟ್ಲೋತ್ಸವ-2026’ ಸಾಂಸ್ಕೃತಿಕ ಕಾರ್ಯಕ್ರಮವು ಜನವರಿ 20ರಂದು ರಾತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.


ಈ ಸಾಂಸ್ಕೃತಿಕ ಕಲಾ ವೈಭವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ವಿಟ್ಲದವರೇ ಆದ ಖ್ಯಾತ ಸಾಹಿತಿ ಹಾಗೂ ಸಂಗೀತ ನಿರ್ದೇಶಕರಾದ ವಿ. ಮನೋಹರ್ ಭಾಗವಹಿಸಲಿದ್ದಾರೆ


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿಜಯಕುಮಾರ್ ಕೋಡಿಯಾಲ್ ಬೈಲ್ ನಿರ್ದೇಶನದಲ್ಲಿ ಕಲಾಸಂಗಮದ ಯಶಸ್ವೀ ಶಿವದೂತೇ ಗುಳಿಗೆ ನಾಟಕ ತಂಡದಿಂದ ಮತ್ತೊಂದು ಕಲಾಕಾಣಿಕೆ ಛತ್ರಪತಿ ಶಿವಾಜಿ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.


ವರ್ಷಂಪ್ರತಿಯಂತೆ ವಿಆರ್‌ಸಿ ವಿಟ್ಲ ಪ್ರತಿಭಾವಂತರನ್ನು ಗುರುತಿಸುವ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು, ಈ ಬಾರಿ ಕೂಡಾ ಈಜು ಪಟುಗಳಾದ ಲಕ್ಷ್ಮಿ ಗಾಣಿಗ ಮತ್ತು ಚರಿತ ಅಮೀನ್ ಕೆ. ಅದೇ ರೀತಿ ಕಬಡ್ಡಿ ಪಟುಗಳಾದ ತೀರ್ಥೇಶ್, ತರುಣ ಕೃಷ್ಣ ಜಿ.ಎಸ್ ಮತ್ತು ಮಹಮ್ಮದ್ ಶಾಹಿದ್ ಅವರನ್ನು ಆಯ್ಕೆ ಮಾಡಿದ್ದು, ಪ್ರತಿಭಾವಂತರು ವೇದಿಕೆಯಲ್ಲಿ ಗಣ್ಯರಿಂದ ಪುರಸ್ಕೃತಗೊಳ್ಳಲಿರುವರು.
ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು, ಕಲಾಭಿಮಾನಿಗಳು, ಕಲಾಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವೀ 33ನೇ ವರ್ಷದ ವಿಟ್ಲೋತ್ಸವ-2026 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಸಹಕರಿಸಬೇಕೆಂದು ವಿಆರ್ ಸಿ ವಿಟ್ಲ ಇದರ ಮುಖ್ಯಸ್ಥರಾದ ರಮಾನಾಥ್ ವಿಟ್ಲ ವಿನಂತಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್‌ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ

ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.

ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು

ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.

ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.

ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.

ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.

ಪ್ರಶಸ್ತಿ ಹಾಗೂ ಪುರಸ್ಕಾರ

ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Continue Reading

Dakshina Kannada

ಭಾರಿ ಮಳೆ ಹಿನ್ನೆಲೆ: ಆಗಸ್ಟ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 3, 2026 ರಂದು ಜಿಲ್ಲೆಯ ಪ್ರಮುಖ ತಾಲೂಕುಗಳ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಈ ತುರ್ತು ಕ್ರಮ ಕೈಗೊಂಡಿದ್ದಾರೆ.

ಎಲ್ಲೆಲ್ಲಿ ರಜೆ ಅನ್ವಯ?

ಮಂಗಳೂರು ಉಪವಿಭಾಗ: ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಹಾಗೂ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ) ರಜೆ ಇರಲಿದೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ).ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (PUC), ITI ಮತ್ತು ಡಿಪ್ಲೊಮಾ ಕಾಲೇಜುಗಳಿಗೆ (12 ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.

ಎಚ್ಚರಿಕೆ: ಈ ರಜೆ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.

ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಮುಖ್ಯ ಸೂಚನೆಗಳು:

  1. ಮಕ್ಕಳ ಸುರಕ್ಷತೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು.
  2. ಮೀನುಗಾರರಿಗೆ ತಡೆ: ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  3. ಸಾರ್ವಜನಿಕರಿಗೆ ಮನವಿ: ನದಿತೀರ ಮತ್ತು ಸಮುದ್ರತೀರಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಭೇಟಿ ನೀಡಬಾರದು.
  4. ಅಧಿಕಾರಿಗಳ ಸಜ್ಜು: ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಕ್ಷಣ ಸ್ಪಂದಿಸಲು ಸೂಚಿಸಲಾಗಿದೆ. ಅಲ್ಲದೆ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧರಾಗಿರಲು ಆದೇಶಿಸಲಾಗಿದೆ.

ತುರ್ತು ಸಹಾಯವಾಣಿ (Emergency Helpline)

ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿಗೆ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:

  • ಉಚಿತ ಟೋಲ್ ಫ್ರೀ ಸಂಖ್ಯೆ: 1077
  • ದೂರವಾಣಿ ಸಂಖ್ಯೆ: 0824-2442590
Continue Reading

Bantawala

ಕರಾವಳಿಯಲ್ಲಿ ಭೋರ್ಗರೆಯುತ್ತಿರುವ ಮುಂಗಾರು: ನದಿಗಳ ಆರ್ಭಟಕ್ಕೆ ಕಂಗೆಟ್ಟ ದಕ್ಷಿಣ ಕನ್ನಡ, ರೈತರಲ್ಲಿ ಹರ್ಷ – ಜನರಲ್ಲಿ ನೆರೆ ಆತಂಕ

Published

on

ದಕ್ಷಿಣ ಕನ್ನಡ: ಕರಾವಳಿ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಘಟ್ಟ ಪ್ರದೇಶದಲ್ಲಿ ಮಳೆ ಧಾರೆ ಎರೆಯುತ್ತಿರುವುದರಿಂದ ನದಿ, ಕಳೆಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಒಂದೆಡೆ ದೀರ್ಘಾವಧಿಯ ನಂತರ ನದಿಗಳು ತುಂಬಿ ಹರಿಯುತ್ತಿರುವುದು ಕೃಷಿಕರಲ್ಲಿ ಹರ್ಷ ತಂದಿದ್ದರೆ, ಇನ್ನೊಂದೆಡೆ ಪ್ರವಾಹ, ಸೇತುವೆ ಕೊಚ್ಚಿಹೋಗಿರುವುದು ಹಾಗೂ ಮನೆ ಹಾನಿಯಂತಹ ಸಾಲು ಸಾಲು ದುರಂತಗಳು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿವೆ.

1. ಸುಬ್ರಹ್ಮಣ್ಯ: ಕುಮಾರಧಾರಾ ಆರ್ಭಟ, ಮುಳುಗಿದ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ಹಾಗೂ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಎಡೆಬಿಡದ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದೆ.

ಸ್ನಾನಘಟ್ಟ ಮುಳುಗಡೆ: ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಪರ್ಯಾಯ ವ್ಯವಸ್ಥೆ: ಭಕ್ತರು ನದಿಗೆ ಇಳಿಯದಂತೆ ಪೊಲೀಸರು ಹಾಗೂ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕಾವಲು ಕಾಯುತ್ತಿದ್ದು, ಪ್ರವಾಸಿಗರ ಭದ್ರತೆಗಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಪರ್ಯಾಯ ಸ್ನಾನದ ವ್ಯವಸ್ಥೆ ಕಲ್ಪಿಸಲಾಗಿದೆ.

2. ಜೀವ ಕಳೆ ಪಡೆದ ನೇತ್ರಾವತಿ

ಬಂಟ್ವಾಳ ಹಾಗೂ ಧರ್ಮಸ್ಥಳ ಭಾಗದಲ್ಲಿ ನೇತ್ರಾವತಿ ನದಿ ಈ ವರ್ಷದಲ್ಲಿಯೇ ಮೊದಲ ಬಾರಿಗೆ ಭಾರೀ ಮಟ್ಟದಲ್ಲಿ ಏರಿಕೆ ಕಂಡಿದೆ.

ಬಂಟ್ವಾಳದ ಕಂಚಿಕಾರಪೇಟೆಯಲ್ಲಿ ನದಿಯ ಮಟ್ಟ 5.6 ರಿಂದ 5.88 ಮೀಟರ್‌ಗೆ ಏರಿಕೆಯಾಗಿದ್ದು (ಅಪಾಯದ ಮಟ್ಟ: 8.5 ರಿಂದ 9.0 ಮೀ), ಕೃಷಿಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಬಂಟ್ವಾಳದ ಎಎಂಆರ್ (AMR) ಡ್ಯಾಂ ಗರಿಷ್ಠ ಮಟ್ಟ (18.90 ಮೀ) ತಲುಪಿದ್ದು, ತುಂಬೆ ಡ್ಯಾಂನ 8 ಗೇಟ್‌ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ.

ಉಪ್ಪಿನಂಗಡಿ ಸಂಗಮಕ್ಕೆ ಇನ್ನೆರಡು ದಿನ ಬೇಕು

ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಸನ್ನಿಧಿಯಲ್ಲಿ ನೇತ್ರಾವತಿಯಲ್ಲಿ ನೀರಿನ ಹರಿವು ಹೆಚ್ಚಿದ್ದರೂ, ಕುಮಾರಧಾರಾದಲ್ಲಿ ನೀರು ಕಡಿಮೆಯಿರುವುದರಿಂದ ‘ಸಂಗಮ’ಕ್ಕೆ ಇನ್ನು ಎರಡು ದಿನಗಳ ನಿರಂತರ ಮಳೆಯ ಅಗತ್ಯವಿದೆ. ಈಗ ಸುರಿಯುತ್ತಿರುವಂತೆಯೇ ನಿರಂತರವಾಗಿ ಮಳೆ ಸುರಿಯುತ್ತಲೇ ಇದ್ದರೆ ಇನ್ನೆರಡು ದಿನಗಳಲ್ಲಿ ಸಂಗಮದ ಸೂಚನೆ ಸಿಗಬಹುದು.

3. ಬೆಳ್ತಂಗಡಿಯಲ್ಲಿ ನೆರೆ ಅಭಯ: ಮುಳುಗಿದ ದೇವಾಲಯಗಳು, ಕಡಿತಗೊಂಡ ಸಂಪರ್ಕ

ಬೆಳ್ತಂಗಡಿ ತಾಲೂಕಿನಲ್ಲಿ ಮುಂಗಾರಿನ ಆರ್ಭಟ ತೀವ್ರವಾಗಿದ್ದು, ಕಪಿಲ, ಫಲ್ಗುಣಿ, ಮೃತ್ಯುಂಜಯ ಹಾಗೂ ಸೋಮವತಿ ನದಿಗಳು ಉಕ್ಕಿ ಹರಿಯುತ್ತಿವೆ.

ದೇವಸ್ಥಾನಗಳು ಜಲಾವೃತ: ಕಪಿಲ ನದಿ ಉಕ್ಕಿ ಹರಿದ ಪರಿಣಾಮ ಪ್ರಸಿದ್ಧ ಶ್ರೀ ಶಿಶಿಲೇಶ್ವರ ದೇವಸ್ಥಾನ ಹಾಗೂ ಅಮ್ಮುಂಜೆ ದೇವಸ್ಥಾನಗಳು ಜಲಾವೃತಗೊಂಡಿವೆ.

ಸೇತುವೆ ಕೊಚ್ಚಿ ಸಾವು-ನೋವಿನ ಭೀತಿ: ಉಜಿರೆ-ಕನ್ಯಾಡಿ ವ್ಯಾಪ್ತಿಯ ಅಂಬಡಬೆಟ್ಟದಲ್ಲಿ ಹಳ್ಳಕ್ಕೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಾಕಷ್ಟು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ. ಮಾಲಾಡಿ ಸೊಣಂದೂರಿನಲ್ಲಿ ಕಿರು ಸೇತುವೆ ಕುಸಿದಿದೆ.

ಅಣೆಕಟ್ಟು ಹಲಗೆ ತೆರವು ಮಾಡದೆ ಅನಾಹುತ: ಪಜಿರಡ್ಕ ಕಿಂಡಿ ಅಣೆಕಟ್ಟಿನಲ್ಲಿ ಹಲಗೆಗಳನ್ನು ಸರಿಯಾದ ಸಮಯಕ್ಕೆ ತೆರವುಗೊಳಿಸದ ಕಾರಣ 5 ಕಿ.ಮೀ ವ್ಯಾಪ್ತಿಯಲ್ಲಿ ಕಾಯರ್ತೋಡಿ, ಕುಡೆಂಚಿ, ಆನಂಗಳ್ಳಿ ಸೇರಿದಂತೆ ಹಲವು ತೋಟಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.

ವೇಣೂರಿನಲ್ಲಿ ಹಲವು ಬಸ್‌ಗಳು ನೆರೆ ನೀರಿನಲ್ಲಿ ಸಿಲುಕಿಕೊಂಡರೆ, ಗಾಳಿ-ಮಳೆಗೆ ನೂರಾರು ಅಡಕೆ, ರಬ್ಬರ್ ಮರಗಳು ಧರಾಶಾಹಿಯಾಗಿವೆ.

4. ಸಾಲು ಸಾಲು ಮನೆ ಕುಸಿತ, ವಿದ್ಯುತ್ ವ್ಯತ್ಯಯ

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರಿನ ಜಯ ಸಪಲ್ಯ, ರಾಯಿ ಗ್ರಾಮದ ಸೀತಾವತಿ ವಿಶ್ವನಾಥ ಪೂಜಾರಿ ಹಾಗೂ ನರಿಕೊಂಬುವಿನ ಪ್ರಶಾಂತ್ ಎಂಬುವವರ ಮನೆಗಳ ಮೇಲೆ ಚಾವಣಿ ಮತ್ತು ತೆಂಗಿನ ಮರಗಳು ಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುदैವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

🚨 ಭಾರೀ ಮಳೆ ಮುನ್ಸೂಚನೆ: ತುರ್ತು ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಟ್ಟುನಿಟ್ಟಿನ ಸೂಚನೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಎಲ್ಲ ತಾಲೂಕು ಆಡಳಿತಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸೂಚಿಸಿದ್ದಾರೆ. ಹವಾಮಾನ ಇಲಾಖೆಯು ದಕ್ಷಿಣ ಕನ್ನಡ,ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ರೆಡ್‌ ಆಲರ್ಟ್‌ ಘೋಷಿಸಿದೆ

ಶನಿವಾರ (ಆಗಸ್ಟ್ 1) ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಪರಿಶೀಲನಾ ಸಭೆ ನಡೆಸಿದ ಅವರು, ಮಳೆ ಅನಾಹುತಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಲು ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.

🚨 ಜಿಲ್ಲಾಧಿಕಾರಿಗಳು ನೀಡಿದ ಪ್ರಮುಖ ಅಭಯ ಹಾಗೂ ಕಟ್ಟುನಿಟ್ಟಿನ ಸೂಚನೆಗಳು:

24 ಗಂಟೆ ಕಂಟ್ರೋಲ್ ರೂಂ ಸಕ್ರಿಯ: ಮಳೆ ಅನಾಹುತಗಳನ್ನು ನಿವರ್ಹಿಸಲು ಜಿಲ್ಲೆಯ ಎಲ್ಲ ತಾಲೂಕು ಆಡಳಿತಗಳು ದಿನದ 24 ಗಂಟೆಯೂ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಕಂಟ್ರೋಲ್ ರೂಂಗಳು ದಿನಪೂರ್ತಿ ಕಾರ್ಯನಿರ್ವಹಿಸಬೇಕು.

ಗುಡ್ಡ ಕುಸಿತ ಸ್ಥಳಗಳಲ್ಲಿ ನಿಗಾ – ಜನರ ಸ್ಥಳಾಂತರ: ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ಮಣ್ಣು ಜರಿತ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ಗುರುತಿಸಿರುವ ಸಂಭಾವ್ಯ ಕುಸಿತ ಸ್ಥಳಗಳಲ್ಲಿ ತೀವ್ರ ನಿಗಾ ವಹಿಸಬೇಕು. ಅಪಾಯದ ಸಾಧ್ಯತೆ ಇರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಮುಂಜಾಗ್ರತಾ ಕ್ರಮವಾಗಿ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು.

ತಾತ್ಕಾಲಿಕ ತಡೆಗೋಡೆ ವ್ಯವಸ್ಥೆ: ಮಣ್ಣು ಜರಿಯುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಮರಳು ಚೀಲಗಳನ್ನು ಇಟ್ಟು ತಾತ್ಕಾಲಿಕ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ಖಾಸಗಿ ಜಮೀನುಗಳಲ್ಲೂ ಇಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬಹುದು.

24 ಗಂಟೆಯೊಳಗೆ ಪರಿಹಾರ ವಿತರಣೆ: ಪ್ರಾಕೃತಿಕ ವಿಕೋಪದಿಂದ ಸಾವುನಪ್ಪಿದವರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ಚೆಕ್ ನೀಡಬೇಕು. ಮಳೆ ಅನಾಹುತದಿಂದ ಸ್ಥಳಾಂತರಗೊಂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಗಮನಹರಿಸಬೇಕು.

ಹೆದ್ದಾರಿ ತಡೆ ತೆರವಿಗೆ ಜೆಸಿಬಿ/ಯಂತ್ರೋಪಕರಣ ಸಿದ್ಧ: ಚಾರ್ಮಾಡಿ, ಸಂಪಾಜೆ, ಶಿರಾಡಿ ಸೇರಿದಂತೆ ಜಿಲ್ಲೆಯ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಜರಿತದಂತಹ ಪ್ರಕರಣಗಳು ಸಂಭವಿಸಿದಲ್ಲಿ ತಕ್ಷಣವೇ ರಸ್ತೆ ತೆರವುಗೊಳಿಸಲು ಅಗತ್ಯ ಯಂತ್ರೋಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. (ಇದುವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಡಿಸಿ ತಿಳಿಸಿದ್ದಾರೆ).

ರಕ್ಷಣಾ ಪಡೆಗಳು ಹೈ ಅಲರ್ಟ್: ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್ (SDRF) ಮತ್ತು ಎನ್‌ಡಿಆರ್‌ಎಫ್ (NDRF) ತಂಡಗಳು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸದಾ ಸನ್ನದ್ಧವಾಗಿರಬೇಕು.

ರಕ್ಷಣಾ ಪಡೆ ರಂಗಕ್ಕೆ: ಮುಳುಗು ತಜ್ಞರು, NDRF ಹಾಗೂ SDRF ನ 65 ಸಿಬ್ಬಂದಿಗಳನ್ನು 28 ಬೋಟ್‌ಗಳೊಂದಿಗೆ ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ.

ಎಚ್ಚರಿಕೆ ಸಂದೇಶ: ನದಿ ತೀರದ ನಿವಾಸಿಗಳು, ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರ ಹಾಗೂ ಜಲಾಶಯದ ಕಡೆಗೆ ತೆರಳದಂತೆ ಕಟ್ಟುನಿಟ್ಟಿನ ಆಡಳಿತಾತ್ಮಕ ಸೂಚನೆ ನೀಡಲಾಗಿದೆ.

ಮುನ್ಸೂಚನೆ: ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ಸಭೆಯಲ್ಲಿ ಉಪಸ್ಥಿತಿ: ಈ ಆನ್‌ಲೈನ್ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ , ಅಪರ ಜಿಲ್ಲಾಧಿಕಾರಿ ರಾಜು ಕೆ. ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

Continue Reading

Trending

Copyright © 2025 Deevatige

error: Content is protected !!