Connect with us

government

88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅವುಗಳ ಪ್ರಮಾಣವನ್ನು ತಗ್ಗಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಕಳೆದ ಸಾಲಿನಲ್ಲಿ ಸುಮಾರು 88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದ್ದು, ಇದು ಸರ್ಕಾರಕ್ಕೆ ಮಾತ್ರವಲ್ಲದೆ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಕೆಲವು ಪೊಲೀಸ್ ಠಾಣೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಇನ್ನು ಕೆಲವು ಠಾಣೆಗಳ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಯದೆ ಯಾವುದೇ ರೀತಿಯ ಕ್ರೈಂ ನಡೆಯಲು ಸಾಧ್ಯವಿಲ್ಲ. ಹೀಗಿದ್ದರೂ ಅಪರಾಧಗಳು ನಡೆಯುತ್ತಿವೆ ಎಂದರೆ ಪೊಲೀಸರು ಬಲಾಢ್ಯರ ಕೈಗೊಂಬೆಯOತೆ ಕೆಲಸ ಮಾಡುತ್ತಿದ್ದಾರೆ ಎಂದರ್ಥ ಎಂದು ಅವರು ಎಚ್ಚರಿಸಿದರು. ಇದೇ ವೇಳೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆಯು ದೇಶದಲ್ಲೇ 3ನೇ ಸ್ಥಾನ ಪಡೆದಿರುವುದನ್ನು ಅವರು ಸ್ಮರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕಳ್ಳತನ, ಸುಲಿಗೆ ಮತ್ತು ದರೋಡೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಮ್ಮ ಸರ್ಕಾರವು ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಪಣ ತೊಟ್ಟಿದ್ದು, ಪೊಲೀಸರು ಶ್ರದ್ಧೆಯಿಂದ ಕೆಲಸ ಮಾಡಿದರೆ ಈ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾಧ್ಯವಿದೆ. ಡ್ರಗ್ಸ್ ಜಾಲದ ಮೂಲವನ್ನು ಪತ್ತೆಹಚ್ಚಲು ಪೆಡ್ಲರ್‌ಗಳು ಹಾಗೂ ವ್ಯಸನಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಬೇಕು. ಈ ಮೂಲಕ ಅಮೂಲ್ಯ ಮಾಹಿತಿ ಸಂಗ್ರಹಿಸಿ ದಂಧೆಯ ಬೇರನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಹಚ್ಚಿರುವುದು ರಾಜ್ಯದ ಪೊಲೀಸರಿಗೆ ಶೋಭೆ ತರುವ ವಿಷಯವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ರಾಜ್ಯದ ಪೊಲೀಸರು ಇಂತಹ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಇನ್ಮುಂದೆ ಇಂತಹ ಲೋಪಗಳು ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ವಿದೇಶಿಯರನ್ನು ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆಯಬೇಕು ಮತ್ತು ಪಿಐ ಹಾಗೂ ಪಿಎಸ್ಐಗಳ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಎಂದು ಅವರು ನಿರ್ದೇಶಿಸಿದರು.


ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳOತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು.

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಸಮ್ಮೇಳನದಲ್ಲಿ ಉಪಸ್ಥಿತರಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಸೈಬರ್ ಕ್ರೈಂ ತಡೆಗೆ ಈಗಾಗಲೇ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದರು. ರಾಜ್ಯದ ಪೊಲೀಸ್ ಇಲಾಖೆಯು ಕೈಗೊಂಡಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಲಭಿಸಿರುವುದು ಹೆಮ್ಮೆಯ ವಿಷಯ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

🛑33ನೇ ವರ್ಷದ ವಿಟ್ಲೋತ್ಸವ-2026
🛑ರಮಾನಾಥ್ ವಿಟ್ಲ ಸಾರಥ್ಯದಲ್ಲಿ ನಡೆಯುವ ಸಾಂಸ್ಕೃತಿಕ ಉತ್ಸವ
🛑ಇತಿಹಾಸದ ಛತ್ರಪತಿ ಶಿವಾಜಿ ನಾಟಕ
🛑ಪ್ರತಿಭಾವಂತರಿಗೆ ಗೌರವ ಪುರಸ್ಕಾರ

ದೀವಟಿಗೆ ನ್ಯೂಸ್ ವಾಟ್ಸಾಪ್ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/ElnwvKqnWdxE7rYJHa8YSh

Continue Reading
Advertisement

Bantawala

ಬಾಕ್ಸೆಟ್ ಸಾಗಾಟದ ಲಾರಿಗಳಿಗೆ ಪರವಾನಿಗೆ ಇದೆಯಲ್ಲ ಓಕೆ ! ಮತ್ತೆ ಜನರಿಗೆ ಆಕ್ರೋಶ ಯಾಕೆ ?

Published

on

ಕರಾವಳಿ ಪ್ರದೇಶದಿಂದ ಹೊರ ರಾಜ್ಯಗಳಿಗೆ ಕಳೆದ ಹಲವು ಸಮಯಗಳಿಂದ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆ ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಲವು ಗಂಭೀರ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಅತಿಯಾದ ಭಾರ ಹೊತ್ತ ಬಾಕ್ಸೈಟ್ ಲಾರಿಗಳಿಂದಾಗಿ ಕರಾವಳಿಯ ಪ್ರಮುಖ ಹೆದ್ದಾರಿಗಳು ಮತ್ತು ಒಳರಸ್ತೆಗಳು ಗುಂಡಿಬಿದ್ದು ಹಾಳಾಗಿ ಹೋಗಿದೆ. ಲಾರಿಗಳ ಅತಿ ವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಸಣ್ಣ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವಭಯದಲ್ಲಿ ಸಂಚರಿಸುವಂತಾಗಿದೆ. ಸಾಗಾಟದ ವೇಳೆ ಲಾರಿಗಳಿಂದ ಹಾರುವ ಬಾಕ್ಸೈಟ್ ಪುಡಿ ರಸ್ತೆಯ ಪಕ್ಕದ ಮನೆಗಳು, ಅಂಗಡಿಗಳು ಮತ್ತು ಕೃಷಿ ಭೂಮಿಯ ಮೇಲೆ ಕುಳಿತು ಆರೋಗ್ಯ ಸಮಸ್ಯೆಗಳನ್ನು (ಶ್ವಾಸಕೋಶದ ತೊಂದರೆ) ಉಂಟುಮಾಡುವ ಭಯವಿದೆ. ರಾತ್ರಿ ಎನ್ನದೆ ಸಂಚರಿಸುವ ಈ ಬೃಹತ್ ಲಾರಿಗಳ ಶಬ್ದದಿಂದಾಗಿ ಸ್ಥಳೀಯ ನಿವಾಸಿಗಳ ನೆಮ್ಮದಿಗೆ ಭಂಗ ಬಂದಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಅದಿರನ್ನು ಸಾಗಿಸುವುದು ಇಲ್ಲಿ ಸಾಮಾನ್ಯವಾಗಿದ್ದು, ಹಲವು ಬಾರಿ ಈ ಸಾಗಾಟವು ಅಕ್ರಮ ಗಣಿಗಾರಿಕೆಯ ಭಾಗವಾಗಿರುತ್ತದೆಯೇ ಅಥವಾ ಸರಿಯಾದ ಪರವಾನಗಿ ಹೊಂದಿದೆಯೇ ಎಂಬ ಸಂಶಯ ಸ್ಥಳೀಯರಲ್ಲಿ ಬಂದಾಗ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆಗೆ ಸ್ಥಳೀಯರು ಎಚ್ಚರಿಕೆ ನೀಡಿದ್ದೂ ಆಯಿತು. ಆವರದೇ ಆದ ಸಾಮ್ರಾಜ್ಯದಂತೆ ಅಪಘಾತಗಳನ್ನೂ ನಡೆಸಿದಾಗಲೂ ಬಾಕ್ಸೆಟ್ ಸಾಗಾಟದ ಲಾರಿಗಳದೇ ಮೇಲುಗೈ ಆಯಿತು. ನಂತರ ನಡೆದಿರುವುದು ಪ್ರತಿಭಟನೆ …

ರಸ್ತೆಯಲ್ಲಿ ಓಡಾಡುವ ನಾಗರಿಕರ ಮತ್ತು ವಾಹನ ಸವಾರರ ಪಾಲಿಗೆ ಅಕ್ರಮ ಹಾಗೂ ಸಾರಿಗೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವ ಬಾಕ್ಸೈಟ್ ಸಾಗಾಟದ ಯಮದೂತ ಲಾರಿಗಳು ಸಂಕಷ್ಟ ತಂದೊಡ್ಡಿದೆಯೆಂದು ಈ ಬಗ್ಗೆ ಎಚ್ಚೆತ್ತುಕೊಂಡು ಬಾಕ್ಸೈಟ್ ಲಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ಮನವಿ ನೀಡಿದ್ದರೂ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸದ ಕಾರಣ ಕನ್ಯಾನ ನೆಲ್ಲಿಕಟ್ಟೆ ಜಂಕ್ಷನಲ್ಲಿ ಪ್ರತಿಭಟನೆಯೂ ನಡೆಯಿತು. ಎಲ್ಲದಕ್ಕೂ ಉತ್ತರ ಒಂದೇ ಆಗಿತ್ತು. ಅದು ಪರವಾನಿಗೆ ಇದ್ದು ಆಗುತ್ತಿರುವ ಸಾಗಾಟ..ಎಷ್ಟೋ ವರ್ಷಗಳ ಪರವಾನಿಗೆಯಡಿಯಲ್ಲಿ ಮಂತ್ರಿಗಳ ಕೃಪಾ ಕಟಾಕ್ಷದಲ್ಲಿಯೇ ನಡೆಯುತ್ತಿರುವ ಬಾಕ್ಸೆಟ್ ಸಾಗಾಟ. ಹೌದು ! ಈಗ ಹೋರಾಟಗಾರರು, ಮಾದ್ಯಮದವರು, ನಾಗರೀಕರು ಇದರ ಎದುರು ಹೋರಾಟ ಮಾಡುವುದು ಕಷ್ಟ ಸಾಧ್ಯ ಎಂದು ಮೌನವಾಗಿದ್ದಾರೆ.
ಈಗಲೂ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆ ಕೇಳಿಸುತ್ತಲೇ ಇದೆ. 6ಅಲ್ಲ 8ಅಲ್ಲ 14 ಅಲ್ಲ 18ರಿಂದಲೂ ಹೆಚ್ಚು ಚಕ್ರದ ಲಾರಿಗಳು…ಅದು ಸಾಗುವ ವೇಳೆಗೆ ರಾಜ ಮರ್ಯಾದೆಯನ್ನು ನೀಡಲೇ ಬೇಕು ಇಲ್ಲವಾದರೆ ಅನುಭವಿಸಬೇಕು ಎಂತಾಗಿದೆ ಸ್ಥಿತಿ.


ಸಾಗಾಟವನ್ನು ನಿಲ್ಲಿಸಿ ಪ್ರಶ್ನಿಸಿ ಆಯ್ತು, ಸಾರಿಗೆ ಇಲಾಖೆಗೆ ತಿಳಿಸಿ ಆಯ್ತು, ಜನ ಸೇರಿ ಪ್ರತಿಭಟನೆ ಮಾಡಿ ಆಯ್ತು, ಈಗ ಜನ ಕೇಳುವುದು ಮಾದ್ಯಮವೇಕೆ ಮೌನವಾಗಿದೆ ? ಎಂದು. ಅದು ಸಹಜವೇ ಕೇಳಲೇ ಬೇಕು, ಜನರ ಸಮಸ್ಯೆಗಳಿಗೆ ಕಟ್ಟ ಕಡೆಗೆ ಪರಿಹಾರ ಸಿಗುವುದು ಮಾದ್ಯಮಗಳಿಂದ ಎಂಬುವುದು ಜನರಿಗೂ ಗೊತ್ತು.


ವಿಟ್ಲದ ಮಾದ್ಯಮ ವರದಿಗಾರ ರಾಮ್‌ದಾಸ್‌ ವಿಟ್ಲ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿಗಳಲ್ಲಿ ಈ ಬಗ್ಗೆ ಕೇಳಿಯೇ ಬಿಟ್ಟಿದ್ದಾರೆ. ರಾತ್ರಿ ಹೊತ್ತು ಸಾಗಾಟವಾಗುತ್ತಿರುವ ಬಾಕ್ಸೈಟ್‌ ಲಾರಿಗಳ ವಿಡಿಯೋವನ್ನು ಕಳುಹಿಸಿ ಪ್ರಶ್ನಿಸಿದ್ದಾರೆ. ಇದಕ್ಕೆ ಸಮರ್ಪಕವಾದ ಉತ್ತರವನ್ನು ಮಾಹಿತಿ ರೂಪದಲ್ಲಿ ಎಸ್. ಪಿ. ಯವರು ನೀಡಿದ್ದಾರೆ. ಅದು ಈ ರೀತಿ ಇದೆ.


ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಪಾದೇಕಲ್ಲು ಎಂಬಲ್ಲಿ ದಾಖಲಾತಿ ಮತ್ತು ಪರವಾನಿಗೆಯಲ್ಲಿ ( MDP No.252617431T003662), (Lease No.DSKN5413) ಬಾಕ್ಸೆಟ್ ಮಣ್ಣು ಲಾರಿಗಳ ಮುಖಾಂತರ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದು. ಸದ್ರಿ ಬಾಕ್ಸೆಟ್ ಸಾಗಾಟ ಮಾಡುತ್ತಿದ್ದ ಬಗ್ಗೆ ಶಾಲಾ ಮಕ್ಕಳಿಗೆ ಶಾಲೆಗೆ ಹೋಗಿ ಬರುವಾಗ ತೊಂದರೆಯಾಗುತ್ತಿರುವ ಬಗ್ಗೆ ದಿನಾಂಕ 30-12-2026 ರಂದು ಸ್ಥಳೀಯರು ಪ್ರತಿಭಟನೆ ಮಾಡಿದ್ದು. ಅದರಂತೆ ಶಾಲಾ ಮಕ್ಕಳು ಬೆಳಗ್ಗೆ ಶಾಲೆಗೆ ಹೋಗುವ ಸಮಯ ಮತ್ತು ಶಾಲೆ ಬಿಡುವ ಸಮಯ ಲಾರಿಗಳನ್ನು ಸಂಚಾರ ಮಾಡದಂತೆ ಬಾಕ್ಸೇಟ್ ಸರಕು ಸಾಗಾಣಿಕೆ ಮಾಡುವವರಿಗೆ ತಿಳುವಳಿಕೆ ನೀಡಲಾಗಿದೆ ಎಂಬುವುದಾಗಿದೆ.

ಬಾಕ್ಸೈಟ್‌ ಸಾಗಾಟದ ಸಮಸ್ಯೆಗಳ ವಿರುದ್ಧ ಡಿಜಿಟಲ್‌ ಮಾದ್ಯಮದಲ್ಲಿ ಪ್ರಸಾರವಾದ ವಿಡಿಯೋ ಸ್ಟೇಟಸ್


ಮಾನ್ಯ ಪೊಲೀಸ್‌ ವರಿಷ್ಠಾಧಿಕಾರಿಗಳು ಹೇಳಿರುವಂತೆಯೇ ಈಗ ರಾತ್ರಿ ವೇಳೆಯಲ್ಲಿಯೇ ಸಾಗಾಟ ನಡೆಯುತ್ತಿದೆ. ಆದರೆ ಒಳ ರಸ್ತೆಯಲ್ಲಿ ಮಿತಿಮೀರಿ ಸಾಗಾಟ ನಡೆಯುತ್ತಿರುವುದು, ವೇಗದಿಂದ ದೂಳು ಹಾರಿ ರಸ್ತೆ ದೂಳುಮಯವಾಗಿರುವುದು, ರಸ್ತೆಯುದ್ದಕ್ಕೂ ಮಣ್ಣು ಚೆಲ್ಲುತ್ತಿರುವುದು, ವೇಗ ನಿಯಂತ್ರಣ ಇಲ್ಲದಿರುವುದು ಈಗಲೂ ಕಂಡುಬರುತ್ತಿದೆ. ಆದುದರಿಂದ ಜನರ ಪ್ರಬಲ ಒತ್ತಾಯದಂತೆ ಸ್ಥಳೀಯ ಆಡಳಿತ ಮತ್ತು ಸಾರಿಗೆ ಇಲಾಖೆ (RTO) ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಲಾರಿಗಳಿಗೆ ವೇಗ ನಿಯಂತ್ರಕ ಅಳವಡಿಸಬೇಕು ಮತ್ತು ಸಾಗಾಟದ ವೇಳೆ ಅದಿರು ಚೆಲ್ಲದಂತೆ ಟಾರ್ಪಾಲಿನ್ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂಬುದಾಗಿದೆ. ಸಂಬಂದ ಪಟ್ಟವರು ಕ್ರಮ ಕೈಗೊಳ್ಳುವಿರಾಗಿ ಜನ ನಂಬಿದ್ದಾರೆ.

Continue Reading

cyber crime

ಫೇಕ್ ನ್ಯೂಸ್ ತಡೆಗೆ ಎಐ ಸಾಫ್ಟ್ವೇರ್; ಕರ್ನಾಟಕ ಸಚಿವ ಸಂಪುಟ ಅನುಮೋದನೆ

Published

on

ಬೆಂಗಳೂರು: ನಕಲಿ ಸುದ್ದಿ ಹಾಗೂ ಸಮಾಜ ವಿರೋಧಿ ಡಿಜಿಟಲ್ ಕಂಟೆಟ್‌ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಾಫ್ಟ್ವೇರ್ ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಮಾರು 67.26 ಕೋಟಿ ರೂ ವೆಚ್ಚದಲ್ಲಿ `ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್’ ಯೋಜನೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಜಾರಿಯಾಗಲಿದೆ.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ವೇದಿಕೆಗಳಲ್ಲಿ ವಿಷಯವನ್ನು ಟ್ರ್ಯಾಕ್ ಮಾಡಲು AI-ಚಾಲಿತ ಮೇಲ್ವಿಚಾರಣಾ ವ್ಯವಸ್ಥೆಯನ್ನು ಸಂಪುಟ ಅನುಮೋದಿಸಿದೆ.


ಮಾನ್ಯತೆ ಪಡೆದ ಮಾಧ್ಯಮಗಳನ್ನು ಹೊರತುಪಡಿಸಿ, ಗೃಹ ಇಲಾಖೆಯು ವಿಶಾಲವಾದ ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು AI-ಚಾಲಿತ ಮೇಲ್ವಿಚಾರಣಾ ಚೌಕಟ್ಟಿನ ಅಡಿಯಲ್ಲಿ ತರುತ್ತದೆ.
ಫೆಬ್ರವರಿ 5 ರಂದು, ಸಚಿವ ಸಂಪುಟವು 67.26 ಕೋಟಿ ರೂ.ಗಳ ಸಾಮಾಜಿಕ ಮಾಧ್ಯಮ ವಿಶ್ಲೇಷಣಾ ಪರಿಹಾರದ ನಿಯೋಜನೆಯನ್ನು ಅನುಮೋದಿಸಿತು, ಇದು ದುರುದ್ದೇಶಪೂರಿತ ವಿಷಯವನ್ನು ಪತ್ತೆಹಚ್ಚಲು ಮತ್ತು ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಬೆಂಬಲಿಸಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ. AI ಪರಿಕರಗಳು ರಾಜ್ಯವು ನೈಜ ಸಮಯದಲ್ಲಿ ಡಿಜಿಟಲ್ ಬೆದರಿಕೆಗಳನ್ನು ಗುರುತಿಸಲು ಮತ್ತು ಪ್ರತಿಕ್ರಿಯಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದ್ದಾರೆ. “ಸಾಫ್ಟ್‌ವೇರ್ ಸತ್ಯ-ಪರಿಶೀಲನೆ ಮಾಡುವುದಲ್ಲದೆ, ಅಪರಾಧ ಉದ್ದೇಶದೊಂದಿಗೆ ಮಾಹಿತಿಯನ್ನು ಹೇಗೆ ಕುಶಲತೆಯಿಂದ ಮತ್ತು ಪ್ರಸಾರ ಮಾಡಲಾಗುತ್ತದೆ ಎಂಬುದನ್ನು ವಿಶ್ಲೇಷಿಸುತ್ತದೆ, ವಿಶೇಷವಾಗಿ ಮಕ್ಕಳ ಕಳ್ಳಸಾಗಣೆ, ಭಯೋತ್ಪಾದಕ ದಾಳಿಗಳು, ದ್ವೇಷ ಭಾಷಣ ಮತ್ತು ನಕಲಿ ಸುದ್ದಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ, ಅಂತಿಮವಾಗಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಎಚ್ಚರಿಸುತ್ತದೆ” ಎಂದು ಅವರು ಹೇಳಿದ್ದು, ಭವಿಷ್ಯದಲ್ಲಿ ಮೀಸಲಾದ ಶಾಸನದ ಸಾಧ್ಯತೆಯೊಂದಿಗೆ ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ನಕಲಿ ಸುದ್ದಿ, ತಪ್ಪು ಮಾಹಿತಿ ಮತ್ತು ಉದಯೋನ್ಮುಖ ಡಿಜಿಟಲ್ ಬೆದರಿಕೆಗಳನ್ನು ನಿಭಾಯಿಸುವ ಪ್ರಯತ್ನದಲ್ಲಿ, ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ಶೀಘ್ರದಲ್ಲೇ ಕೃತಕ ಬುದ್ಧಿಮತ್ತೆ ಆಧಾರಿತ ಸಾಧನವನ್ನು ನಿಯೋಜಿಸಲಿದೆ. AI-ಚಾಲಿತ ಸಾಮಾಜಿಕ ಮಾಧ್ಯಮ ವಿಶ್ಲೇಷಣಾ ಪರಿಹಾರ (SMAS) ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.


“ಇನ್ನು ಮುಂದೆ ಸರ್ಕಾರವು SMAS ಮೂಲಕ ಸಾಮಾಜಿಕ ಮಾಧ್ಯಮ ವಿಷಯವನ್ನು ಸ್ಕ್ಯಾನ್ ಮಾಡುತ್ತದೆ” ಎಂದು ಸಚಿವ ಎಚ್‌ಕೆ ಪಾಟೀಲ್ ಸಂಪುಟ ಸಭೆಯ ನಂತರ ಹೇಳಿದರು, ಈ ವ್ಯವಸ್ಥೆಯು ಭಯೋತ್ಪಾದಕ ಸಂಘಟನೆಗಳ ಆನ್‌ಲೈನ್ ನೇಮಕಾತಿ ಪ್ರಯತ್ನಗಳನ್ನು ಸಹ ಟ್ರ್ಯಾಕ್ ಮಾಡುತ್ತದೆ ಎಂದು ಹೇಳಿದ್ದಾರೆ.
ಈ ಎಐ ತಂತ್ರಜ್ಞಾನ ಫೇಸ್‌ಬುಕ್, ಯೂಟ್ಯೂಬ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ನಕಲಿ ಸುದ್ದಿ, ದ್ವೇಷ ಭಾಷಣ, ಕೋಮು ಹಿಂಸೆಗೆ ಪ್ರಚೋದನೆ, ಭಯೋತ್ಪಾದನೆ ಮತ್ತು ಮಕ್ಕಳ ಅಪಹರಣಕ್ಕೆ ಸಂಬಂಧಿಸಿದ ವಿಷಯಗಳನ್ನು ಗುರುತಿಸಲಿದೆ. ಸಂಶಯಾಸ್ಪದ ಪೋಸ್ಟ್ಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ನೋಟಿಫಿಕೇಶನ್ ಹೋಗಲಿದೆ. ಇದರೊಂದಿಗೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ.

Continue Reading

Dakshina Kannada

ಪಿಲಿಕುಳಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು! ಸಂಕಷ್ಟದಲ್ಲಿ ಕರ್ನಾಟಕದ ಅತ್ಯಂತ ಸುಂದರ ಮೃಗಾಲಯ ಪಿಲಿಕುಳ

Published

on

ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್‌ ಆದ ನ್ಯಾಯಾದೀಶರು
ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ ಈ ಜಾಗಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು!
ಈಗ ಅವ್ಯವಸ್ಥೆಯಿಂದ ಸಂಕಷ್ಟ ಅನುಭವಿಸುತ್ತಿದೆ. ತುಕ್ಕುಪಂಜರ, ಅಶುಚಿ ನೀರು, ಲೈಸೆನ್ಸ್ ಇಲ್ಲದೆ ಕಾರ್ಯನಿರ್ವಹಣೆ, ಪ್ರಾಣಿಗಳ ದಯನೀಯ ಸ್ಥಿತಿ ಹೈಕೋರ್ಟ್ ನ್ಯಾಯಾಧೀಶರನ್ನು ಶಾಕ್ ಮಾಡಿದೆ.

ಮಂಗಳೂರು: ಅರಬ್ಬಿ ಸಮುದ್ರದ ತಡಿಯ ಮಂಗಳೂರಿನಲ್ಲಿರೋ (Mangaluru) ಈ ಪಿಲಿಕುಳ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಅಂತಲೇ ಹೆಸರುವಾಸಿ. ಮಂಗಳೂರು ಪಿಲಿಕುಳ ಪಾರ್ಕ್,270 ಎಕರೆಗಳಲ್ಲಿ ಹಬ್ಬಿದ್ದು, ‘ಪಿಲಿ’ ಅಂದ್ರೆ ಹುಲಿ, ‘ಕುಳ’ ಅಂದ್ರೆ ಕೆರೆ. ಒಂದು ಕಾಲದಲ್ಲಿ ಹುಲಿಗಳು (Tigers) ಬಂದು ನೀರು ಕುಡಿಯುತ್ತಿದ್ದ ಈ ಜಾಗವನ್ನ ಇಂದು ಅಂತರಾಷ್ಟ್ರೀಯ ಮಟ್ಟದ ಜೈವಿಕ ಉದ್ಯಾನವನವಾಗಿ ರೂಪಿಸಲಾಗಿದೆ. ಪಶ್ಚಿಮ ಘಟ್ಟಗಳ ಅಳಿವಿನಂಚಿನಲ್ಲಿರೋ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರೋ ಪಿಲಿಕುಳ, ಕರಾವಳಿಗೆ ಬರೋ ಪ್ರವಾಸಿಗರ ಮೊದಲ ಆಯ್ಕೆ. ಅಂತಹ ಸುಂದರ ತಾಣ ಇಂದು ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. ಪಿಲಿಕುಳದ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಅಂದ್ರೆ, ಇಲ್ಲಿನ ಅವ್ಯವಸ್ಥೆ, ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಹೈಕೋರ್ಟ್ ನ್ಯಾಯಧೀಶರೇ ಶಾಕ್ ಆಗಿದ್ದಾರೆ. ಮಂಗಳೂರಿನ ಪ್ರವಾಸಿಗರ ಹಾಟ್ ಫೇವರೆಟ್ ಪಿಲಿಕುಳ ಮೃಗಾಲಯಕ್ಕೀಗ ಇಂತಹದೊಂದು ಸಂಕಷ್ಟ ಎದುರಾಗಿದೆ. ಇದು ಇಲ್ಲಿರೋ ಮೂಕ ಪ್ರಾಣಿಗಳಿಂದಾದ ತಪ್ಪಲ್ಲ. ಬದಲಾಗಿ ಇಲ್ಲಿನ ಆಡಳಿತ ವ್ಯವಸ್ಥೆಯಿಂದ ಸ್ವಯಂ ಕೃತ ಅಪರಾಧ. ತುಕ್ಕು ಹಿಡಿದ ಪಂಜರ, ತುಕ್ಕು ಹಿಡಿದ ಪಂಜರ, ಕಲುಷಿತ ನೀರು ಅಶುಚಿ ವಾತಾವರಣ ಇದು ಪಿಲಿಕುಳ ಮೃಗಾಲಯದ ಸದ್ಯದ ಸ್ಥಿತಿ.

ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಕೇವಲ ದೂರು ನೀಡದೆ, ಮೃಗಾಲಯದ ಒಳಗಿನ ಭೀಕರ ಸ್ಥಿತಿಯನ್ನು ಎತ್ತಿ ತೋರಿಸುವ ಭದ್ರ ಸಾಕ್ಷ್ಯಗಳನ್ನು ಹೈಕೋರ್ಟ್‌ಗೆ ನೀಡಿದ್ದಾರೆ. ಸೊರಗಿದ ಪ್ರಾಣಿಗಳ ಫೋಟೋಗಳು: ಸರಿಯಾದ ಆಹಾರವಿಲ್ಲದೆ ಎಲುಬು ಕಾಣುವಂತಾಗಿರುವ ಚಿರತೆ ಮತ್ತು ಹುಲಿಗಳ ಫೋಟೋಗಳು. ಅಸುರಕ್ಷಿತ ಪಂಜರಗಳು, ತುಕ್ಕು ಹಿಡಿದು ಕಿತ್ತುಹೋಗಿರುವ ಕಬ್ಬಿಣದ ಸರಳುಗಳು, ಇದರಿಂದ ಪ್ರಾಣಿಗಳು ಹೊರಬರುವ ಅಥವಾ ಗಾಯ ಮಾಡಿಕೊಳ್ಳುವ ಅಪಾಯವಿದೆ ಎಂದು ತೋರಿಸಿದ್ದಾರೆ. ಪ್ರಾಣಿಗಳ ಕುಡಿಯುವ ನೀರಿನ ತೊಟ್ಟಿಗಳಲ್ಲಿ ಪಾಚಿ ಕಟ್ಟಿರುವುದು ಮತ್ತು ಪ್ರಾಣಿಗಳ ಮಲ-ಮೂತ್ರ ವಿಲೇವಾರಿ ಆಗದೆ ಪಂಜರದಲ್ಲೇ ಕೊಳೆಯುತ್ತಿರುವುದು. ಅನಾರೋಗ್ಯಕ್ಕೀಡಾದ ಪ್ರಾಣಿಗಳಿಗೆ ಸರಿಯಾದ ಸಮಯದಲ್ಲಿ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಸಂಗ್ರಹಿಸಿ ದಾಖಲೆಯಾಗಿ ನೀಡಿದ್ದಾರೆ.

ಪಿಲಿಕುಳ ಮೃಗಾಲಯದ ಕರ್ಮ ಕಾಂಡಗಳು ಹೈಕೋರ್ಟ್‍ನಲ್ಲಿ ಹೊರಬಿದ್ದಿವೆ. ಪ್ರಾಣಿಗಳನ್ನು ಇರಿಸಿರುವ ಪಂಜರಗಳು ಸಂಪೂರ್ಣ ತುಕ್ಕು ಹಿಡಿದಿವೆ, ಅಲ್ಲಿ ಸರಿಯಾದ ಭದ್ರತೆಯೇ ಇಲ್ಲ. ಅಶುಚಿಯಾದ ಪರಿಸರದಲ್ಲಿ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಕೆಂಡಾಮಂಡಲವಾಗಿದೆ. ಇಲ್ಲಿ ಮತ್ತೊಂದು ದುರಂತ ಅಂದ್ರೆ ಜನಮನ್ನಣೆ ಪಡೆದ ಈ ಪಾರ್ಕ್‍ನ ಲೈಸೆನ್ಸ್ ಅವಧಿ 2025ರ ಡಿಸೆಂಬರ್ 1ಕ್ಕೇ ಮುಕ್ತಾಯವಾಗಿದೆ. ಅಂದ್ರೆ ಸದ್ಯ ಯಾವುದೇ ಪರವಾನಗಿ ಇಲ್ಲದೇ ಪಿಲಿಕುಳ ಮೃಗಾಲಯ ನಡೀತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಬಗ್ಗೆ ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ 2023 ಮತ್ತು 2025ರಲ್ಲಿ ಶೋಕಾಸ್ ನೋಟಿಸ್ ನೀಡಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿಲ್ಲ. ಮಲೀನಗೊಂಡ ನೀರು ಕುಡಿದು, ಸರಿಯಾದ ಚಿಕಿತ್ಸೆ ಸಿಗದೆ ಮೂಕ ಪ್ರಾಣಿಗಳು ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿವೆ ಅನ್ನೋದು ಅರ್ಜಿದಾರರ ಗಂಭೀರ ಆರೋಪಕ್ಕೆ ಹೈಕೋರ್ಟ್‍ ಗರಂ ಆಗಿದೆ. ಇವುಗಳನ್ನು ನೋಡಿದ ನ್ಯಾಯಾಧೀಶರು ಆಘಾತ ಮತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿ” ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿದ್ದು, ಮೃಗಾಲಯದ ಆಡಳಿತವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಅಥವಾ ವ್ಯವಸ್ಥಿತವಾಗಿ ಸುಧಾರಿಸುವಂತೆ ಸೂಚಿಸಿದೆ. ಕರ್ನಾಟಕ ಹೈಕೋರ್ಟ್ ಫೆಬ್ರವರಿ ಮೊದಲ ವಾರದಲ್ಲಿ ಪಿಲಿಕುಳ ಮೃಗಾಲಯದ ಬಗ್ಗೆ ಅತ್ಯಂತ ಕಠಿಣವಾದ ನಿಲುವನ್ನು ತಳೆದಿದೆ.

ಹೈಕೋರ್ಟ್ ಸರ್ಕಾರಕ್ಕೆ ಈ ಮೂರು ಪ್ರಶ್ನೆಗಳನ್ನು ಕೇಳಿದ್ದು, ಪರವಾನಗಿ ಇಲ್ಲದೆ ಇಷ್ಟು ದಿನ ಮೃಗಾಲಯವನ್ನು ಹೇಗೆ ನಡೆಸಲು ಬಿಟ್ಟಿದ್ದೀರಿ? ಪ್ರಾಣಿಗಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರೀಕ್ಷೆಯ ವರದಿ ಎಲ್ಲಿದೆ? ಪ್ರಾಣಿಗಳ ಅಸಹಜ ಸಾವುಗಳ ಬಗ್ಗೆ ಪೋಸ್ಟ್ ಮಾರ್ಟಂ (Post-mortem) ವರದಿಯನ್ನು ತಕ್ಷಣ ಸಲ್ಲಿಸಿ. ಎಂದು ಉತ್ತರ ನೀಡಲು ತಿಳಿಸಿದೆ. ಮೃಗಾಲಯದ ನಿರ್ದೇಶಕರು ಮತ್ತು ಅಧಿಕಾರಿಗಳು ಇತ್ತೀಚೆಗೆ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅಧಿಕ ಮಳೆಯಿಂದಾಗಿ ತಡೆಗೋಡೆ ಕುಸಿದು ಸಮಸ್ಯೆ ಉಂಟಾಗಿದೆ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ನ್ಯಾಯಾಲಯವು ಇದನ್ನು “ಆಡಳಿತಾತ್ಮಕ ವೈಫಲ್ಯ” ಎಂದು ಕರೆದಿದೆ. ಸರಿಯಾದ ಹಣಕಾಸಿನ ಹಂಚಿಕೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಮಾಜಿ ನಿರ್ದೇಶಕರು (ಜಯಪ್ರಕಾಶ್ ಭಂಡಾರಿ) ಈ ಹಿಂದೆ ರಾಜೀನಾಮೆ ನೀಡುವಾಗ ತಿಳಿಸಿದ್ದರು.

ಮುಂದಿನ ಕ್ರಮ ಏನಾಗಬಹುದು?
ನ್ಯಾಯಾಲಯದ ಸೂಚನೆಯಂತೆ ಸರ್ಕಾರವು ಮೃಗಾಲಯದ ನಿರ್ವಹಣೆಯನ್ನು ಸಂಪೂರ್ಣವಾಗಿ ಅರಣ್ಯ ಇಲಾಖೆ ಅಥವಾ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ (KZA) ಹಸ್ತಾಂತರಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಪ್ರಾಣಿಗಳನ್ನು ಬೇರೆ ಸುರಕ್ಷಿತ ಮೃಗಾಲಯಗಳಿಗೆ ವರ್ಗಾಯಿಸುವ ಆದೇಶ ಹೊರಬರುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು (PIL) ಅತ್ಯಂತ ತುರ್ತು ವಿಷಯವೆಂದು ಪರಿಗಣಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ನಡೆಸಲು ನ್ಯಾಯಾಲಯ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಾಣಿಗಳ ಪರಿಸ್ಥಿತಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ (CZA) ಸೂಚಿಸಿದೆ ಒಂದು ವೇಳೆ ಮೃಗಾಲಯದ ಪರವಾನಗಿಯನ್ನು ನವೀಕರಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರ ನಿರಾಕರಿಸಿದರೆ, ಅಲ್ಲಿರುವ ಪ್ರಾಣಿಗಳನ್ನು ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು) ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಅಥವಾ ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬೆಂಗಳೂರು) ಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ

ಪಿಲಿಕುಳ ಒಂದು ಕಾಲದಲ್ಲಿ ಜಿಲ್ಲಾಡಳಿತದ ಅಡಿಯಲ್ಲಿದ್ದ ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ (PNDA) ಮೂಲಕ ನಿರ್ವಹಿಸಲ್ಪಡುತ್ತಿತ್ತು. ಆದರೆ ಈಗ ಉಂಟಾಗಿರುವ ಅವ್ಯವಸ್ಥೆಯಿಂದಾಗಿ, ಇದನ್ನು ಸಂಪೂರ್ಣವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ (KZA) ಸುಪರ್ದಿಗೆ ಪಡೆಯುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಕೆ.ಜೆಡ್.ಎ ಅಡಿಯಲ್ಲಿ ಬಂದರೆ ಪ್ರಾಣಿಗಳಿಗೆ ನಿರಂತರ ಅನುದಾನ ಮತ್ತು ಪರಿಣಿತ ವೈದ್ಯರ ಸೇವೆ ಸಿಗಲಿದೆ.

ಪಿಲಿಕುಳ ಮೃಗಾಲಯ ಒಂದು ಕಾಲದಲ್ಲಿ ಇದು ಕರ್ನಾಟಕದ ಅತ್ಯಂತ ಸುಂದರ ಮೃಗಾಲಯಗಳಲ್ಲಿ ಒಂದಾಗಿತ್ತು ಇದನ್ನು 1990ರ ದಶಕದ ಉತ್ತರಾರ್ಧದಲ್ಲಿ ಮಂಗಳೂರಿನ ವಾಮಂಜೂರಿನಲ್ಲಿ ಸ್ಥಾಪಿಸಲಾಯಿತು. ‘ಪಿಲಿಕುಳ’ ಎಂದರೆ ತುಳು ಭಾಷೆಯಲ್ಲಿ “ಹುಲಿಗಳ ಕೆರೆ” ಎಂದರ್ಥ. ಇಲ್ಲಿ ಅಪರೂಪದ ರಾಜನಾಗ (King Cobra) ಸಂತಾನೋತ್ಪತ್ತಿ ಕೇಂದ್ರವಿದ್ದು, ಇದು ಏಷ್ಯಾದಲ್ಲೇ ಪ್ರಸಿದ್ಧವಾಗಿದೆ. ಸುಮಾರು 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿರುವ ಈ ಉದ್ಯಾನವನವು ಕರಾವಳಿಯ ಜೀವವೈವಿಧ್ಯದ ಕೇಂದ್ರವಾಗಿತ್ತು.
ಪಿಲಿಕುಳ ರೀಜನಲ್ ಸೈನ್ಸ್ ಸೆಂಟರ್ ಮೃಗಾಲಯಕ್ಕೆ ಹೋಲಿಸಿದರೆ ವಿಜ್ಞಾನ ಕೇಂದ್ರದ ಸ್ಥಿತಿ ಉತ್ತಮವಾಗಿದೆ. ಈಗ ಹೈಕೋರ್ಟ್‌ನ ಫೆಬ್ರವರಿ 3ನೇ ವಾರದ ವಿಚಾರಣೆಯ ಮೇಲೆ ಎಲ್ಲರ ಕಣ್ಣಿದೆ. ಅಲ್ಲಿ ಹೊರಬರುವ ತೀರ್ಪು ಪಿಲಿಕುಳದ ಪ್ರಾಣಿಗಳ ಭವಿಷ್ಯವನ್ನು ನಿರ್ಧರಿಸಲಿದೆ.

Continue Reading

Trending

Copyright © 2025 Deevatige