government
88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅವುಗಳ ಪ್ರಮಾಣವನ್ನು ತಗ್ಗಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಕಳೆದ ಸಾಲಿನಲ್ಲಿ ಸುಮಾರು 88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದ್ದು, ಇದು ಸರ್ಕಾರಕ್ಕೆ ಮಾತ್ರವಲ್ಲದೆ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಕೆಲವು ಪೊಲೀಸ್ ಠಾಣೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಇನ್ನು ಕೆಲವು ಠಾಣೆಗಳ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಯದೆ ಯಾವುದೇ ರೀತಿಯ ಕ್ರೈಂ ನಡೆಯಲು ಸಾಧ್ಯವಿಲ್ಲ. ಹೀಗಿದ್ದರೂ ಅಪರಾಧಗಳು ನಡೆಯುತ್ತಿವೆ ಎಂದರೆ ಪೊಲೀಸರು ಬಲಾಢ್ಯರ ಕೈಗೊಂಬೆಯOತೆ ಕೆಲಸ ಮಾಡುತ್ತಿದ್ದಾರೆ ಎಂದರ್ಥ ಎಂದು ಅವರು ಎಚ್ಚರಿಸಿದರು. ಇದೇ ವೇಳೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆಯು ದೇಶದಲ್ಲೇ 3ನೇ ಸ್ಥಾನ ಪಡೆದಿರುವುದನ್ನು ಅವರು ಸ್ಮರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕಳ್ಳತನ, ಸುಲಿಗೆ ಮತ್ತು ದರೋಡೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಮ್ಮ ಸರ್ಕಾರವು ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಪಣ ತೊಟ್ಟಿದ್ದು, ಪೊಲೀಸರು ಶ್ರದ್ಧೆಯಿಂದ ಕೆಲಸ ಮಾಡಿದರೆ ಈ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾಧ್ಯವಿದೆ. ಡ್ರಗ್ಸ್ ಜಾಲದ ಮೂಲವನ್ನು ಪತ್ತೆಹಚ್ಚಲು ಪೆಡ್ಲರ್ಗಳು ಹಾಗೂ ವ್ಯಸನಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಬೇಕು. ಈ ಮೂಲಕ ಅಮೂಲ್ಯ ಮಾಹಿತಿ ಸಂಗ್ರಹಿಸಿ ದಂಧೆಯ ಬೇರನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಹಚ್ಚಿರುವುದು ರಾಜ್ಯದ ಪೊಲೀಸರಿಗೆ ಶೋಭೆ ತರುವ ವಿಷಯವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ರಾಜ್ಯದ ಪೊಲೀಸರು ಇಂತಹ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಇನ್ಮುಂದೆ ಇಂತಹ ಲೋಪಗಳು ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ವಿದೇಶಿಯರನ್ನು ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆಯಬೇಕು ಮತ್ತು ಪಿಐ ಹಾಗೂ ಪಿಎಸ್ಐಗಳ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಎಂದು ಅವರು ನಿರ್ದೇಶಿಸಿದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳOತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು.

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.
ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.
ಸಮ್ಮೇಳನದಲ್ಲಿ ಉಪಸ್ಥಿತರಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಸೈಬರ್ ಕ್ರೈಂ ತಡೆಗೆ ಈಗಾಗಲೇ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದರು. ರಾಜ್ಯದ ಪೊಲೀಸ್ ಇಲಾಖೆಯು ಕೈಗೊಂಡಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಲಭಿಸಿರುವುದು ಹೆಮ್ಮೆಯ ವಿಷಯ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
🛑33ನೇ ವರ್ಷದ ವಿಟ್ಲೋತ್ಸವ-2026
🛑ರಮಾನಾಥ್ ವಿಟ್ಲ ಸಾರಥ್ಯದಲ್ಲಿ ನಡೆಯುವ ಸಾಂಸ್ಕೃತಿಕ ಉತ್ಸವ
🛑ಇತಿಹಾಸದ ಛತ್ರಪತಿ ಶಿವಾಜಿ ನಾಟಕ
🛑ಪ್ರತಿಭಾವಂತರಿಗೆ ಗೌರವ ಪುರಸ್ಕಾರ
ದೀವಟಿಗೆ ನ್ಯೂಸ್ ವಾಟ್ಸಾಪ್ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/ElnwvKqnWdxE7rYJHa8YSh
CONGRESS
ಸಚಿವ ಸ್ಥಾನ ಸಿಗದ್ದಕ್ಕೆ ಕಾಂಗ್ರೆಸ್ನಲ್ಲಿ ತೀವ್ರ ಬಂಡಾಯ: ಶಾಸಕ ಸ್ಥಾನಕ್ಕೆ ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!
ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದಿದೆ. ಬಯಸಿದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಹಿರಿಯ ಶಾಸಕರಾದ ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ನನಗೆ ಅನ್ಯಾಯವಾಗಿದೆ, ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ: ಬೇಳೂರು ಗೋಪಾಲಕೃಷ್ಣ ಆಕ್ರೋಶ
ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, “ಸಂಪುಟ ವಿಸ್ತರಣೆ ಹೆಸರಿನಲ್ಲಿ ನನಗೆ ತೀವ್ರ ಅನ್ಯಾಯವಾಗಿದೆ. ಕೊನೆಯ ಕ್ಷಣದವರೆಗೂ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ” ಎಂದು ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಗಾಡ್ಫಾದರ್ ಹಾಗೂ ಪ್ರಭಾವ ಇರುವವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ನಿಷ್ಠಾವಂತ ಶಾಸಕರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ತಳೆದಿದ್ದೇನೆ” ಎಂದು ತಿಳಿಸಿರುವ ಅವರು, ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಮೂರು ಬಾರಿ ಶಾಸಕರಾಗಿದ್ದರೂ ಕೈತಪ್ಪಿದ ಸಚಿವ ಸ್ಥಾನ: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ಇತ್ತ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಮೂರು ಬಾರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರೂ ಸಹ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕಾಗಿ ಸತತವಾಗಿ ಶ್ರಮಿಸಿದರೂ ಹಾಗೂ ಹಿರಿಯ ಶಾಸಕರಾಗಿದ್ದರೂ ತಮಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಅವರ ಬೆಂಬಲಿಗರು ಮತ್ತು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.
ಸರ್ಕಾರಕ್ಕೆ ಹೆಚ್ಚಿದ ರಾಜಕೀಯ ಬಿಸಿ
ಸಂಪುಟ ವಿಸ್ತರಣೆಯ ಬೆನ್ನಲ್ಲೇ ಒಂದೇ ಬಾರಿಗೆ ಇಬ್ಬರು ಪ್ರಮುಖ ಶಾಸಕರು ರಾಜೀನಾಮೆ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರ ಹಾಗೂ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಅಸಮಾಧಾನಿತ ಶಾಸಕರು ಒಗ್ಗೂಡುತ್ತಿರುವ ಸುಳಿವು ಸಿಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ನಡೆ ಕುತೂಹಲ ಮೂಡಿಸಿದೆ.

Condolences
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಪ್ರತಿಭಟನೆ: ರಾಜಕೀಯ ಸಂಚಲನ ಹಾಗೂ ಪ್ರಮುಖ ನಾಯಕರ ಪ್ರತಿಕ್ರಿಯೆಗಳು; “ಒಂದೆಡೆ ಕ್ಷಮೆಯ ಮಾತು, ಮತ್ತೊಂದೆಡೆ ಪೊಲೀಸ್ ಪ್ರಕರಣಗಳು. ಇದು ಯಾವ ರೀತಿಯ ಕ್ಷಮೆ?”
ದೆಹಲಿಯ ಜಂತರ್ ಮಂತರ್ನಲ್ಲಿ ದೇಶದ ನೀಟ್ (NEET) ಪರೀಕ್ಷಾರ್ಥಿಗಳು ಮತ್ತು ಯುವಜನತೆ ನಡೆಸಿದ ಪ್ರತಿಭಟನೆಯು ದೇಶಾದ್ಯಂತ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪೋಷಕರ ಕನಸುಗಳು ನುಚ್ಚುನೂರಾದ ಹಿನ್ನೆಲೆಯಲ್ಲಿ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಹೋರಾಟದ ತೀವ್ರತೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿದ ಘಟನೆಯೂ ನಡೆದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋ ಸಂದೇಶ ಮತ್ತು ಅದಕ್ಕೆ ವಿರೋಧ ಪಕ್ಷಗಳು ಹಾಗೂ ಗಣ್ಯರ ಪ್ರತಿಕ್ರಿಯೆಗಳು ರಾಜಕೀಯ ಕಾವನ್ನು ಮತ್ತಷ್ಟು ಹೆಚ್ಚಿಸಿವೆ.
1. ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ವಿದ್ಯಾರ್ಥಿಗಳ ಆಕ್ರೋಶ
ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷೆ ರದ್ದತಿ ಹಾಗೂ ವರ್ಷಪೂರ್ತಿ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ನಿರಾಶೆಯಿಂದಾಗಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಮತ್ತು ಪೋಷಕರ ನಿರಂತರ ಆಕ್ರೋಶದ ಪರಿಣಾಮವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ತಮ್ಮ ಭವಿಷ್ಯವೇ ಕತ್ತಲೆಯಾಗಿದೆ ಎಂದು ಮನನೊಂದು ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತು.
2. ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೋ ಸಂದೇಶ
ಪ್ರತಿಭಟನೆಯ ವೇಳೆ ಕೆಲ ವಿದ್ಯಾರ್ಥಿಗಳು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯ ವಿರುದ್ಧ ಬಳಸಿದ ನಿಂದನೀಯ ಮಾತುಗಳ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ.
ಪ್ರಧಾನಿ ಹೇಳಿಕೆ: “ದಾರಿತಪ್ಪಿದ ಮಕ್ಕಳಿಗೆ ಸರಿಯಾದ ಹಾದಿ ತೋರಿಸಬೇಕು, ಕಾನೂನು ಕ್ರಮವೇ ಪ್ರತಿಯೊಂದಕ್ಕೂ ಪರಿಹಾರವಲ್ಲ. ನನ್ನನ್ನು ಮತ್ತು ನನ್ನ ತಾಯಿಯನ್ನು ನಿಂದಿಸಿದ ಯುವಕರನ್ನು ನಾನು ಕ್ಷಮಿಸುತ್ತೇನೆ. ನಿಂದನೆಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ, ಎಲ್ಲರೂ ಒಟ್ಟಾಗಿ ದೇಶಕ್ಕಾಗಿ ಕೆಲಸ ಮಾಡೋಣ” ಎಂದು ಭಾವುಕರಾಗಿ ಸಮಾಜಕ್ಕೆ ಮನವಿ ಮಾಡಿದರು.
ಪ್ರಧಾನಿ ಮೋದಿ ಅವರ ʼಕ್ಷಮೆಯʼ ಹೇಳಿಕೆ ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಾಗುತ್ತಿರುವ ಎಫ್ಐಆರ್ ಗಳ ನಡುವಿನ ವ್ಯತ್ಯಾಸವನ್ನು ಪ್ರತಿಪಕ್ಷಗಳು ಹಾಗೂ ಸಾಮಾಜಿಕ ಜಾಲತಾಣದ ಬಳಕೆದಾರರು ಪ್ರಶ್ನಿಸುತ್ತಿದ್ದಾರೆ. “ಒಂದೆಡೆ ಕ್ಷಮೆಯ ಮಾತು, ಮತ್ತೊಂದೆಡೆ ಪೊಲೀಸ್ ಪ್ರಕರಣಗಳು. ಇದು ಯಾವ ರೀತಿಯ ಕ್ಷಮೆ?” ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ

3. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ರಾಹುಲ್ ಗಾಂಧಿ ಅವರು ನೀಟ್ ಅಕ್ರಮದಿಂದಾಗಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳನ್ನು ಹಾಗೂ ಮಹಾಬಲಿಪುರಂನಲ್ಲಿ ಸಂಕಷ್ಟಕ್ಕೊಳಗಾದ ಪೋಷಕರನ್ನು ನೇರವಾಗಿ ಭೇಟಿಯಾಗಿ ಸಾಂತ್ವನ ಹೇಳಿದರು. ಪ್ರಧಾನಿ ಮೋದಿ ವೀಡಿಯೋಗೆ ತಿರುಗೇಟು ನೀಡಿದ ಅವರು:
ಕ್ಷಮೆಯ ಅಗತ್ಯವಿಲ್ಲ, ಕ್ಷಮೆಯಾಚನೆ ಬೇಕು: “ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವು ಪದಗಳಿಗೆ ಸಿಗದಂತದ್ದು. ಕಳಪೆ ಶಿಕ್ಷಣ ವ್ಯವಸ್ಥೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳ ಶ್ರಮ ವ್ಯರ್ಥವಾಗಿದೆ. ಪ್ರಧಾನಿಯವರು ಇದುವರೆಗೆ ನೊಂದ ಯಾವುದೇ ಪೋಷಕರನ್ನಾಗಲಿ ಅಥವಾ ಭವಿಷ್ಯ ಹಾಳಾದ ವಿದ್ಯಾರ್ಥಿಗಳನ್ನಾಗಲಿ ಭೇಟಿಯಾಗಿಲ್ಲ.”
“ಭಾರತದ ವಿದ್ಯಾರ್ಥಿಗಳಿಗೆ ಪ್ರಧಾನಿಯವರ ‘ಕ್ಷಮೆ’ ಬೇಕಿಲ್ಲ, ಬದಲಾಗಿ ಪ್ರಧಾನಿಯವರೇ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.
4. ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಖಾರವಾದ ಟೀಕೆ
ಪ್ರಧಾನಿ ಅವರ ವೀಡಿಯೋವನ್ನು “ರೀಲ್” ಎಂದು ಕರೆದಿರುವ ಬಿ.ಕೆ. ಹರಿಪ್ರಸಾದ್, ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ:
“ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನಲು ಪ್ರಧಾನಿ ಮೋದಿ ಉದಾಹರಣೆ. ದಶಕಗಳಿಂದ ವಿರೋಧಿಗಳ ಕುಟುಂಬಗಳ ಮೇಲಿನ ನಿಂದನೆಗೆ ಮೌನಸಮ್ಮತಿ ನೀಡಿದವರು ಇಂದು ಮಾತೃಗೌರವದ ಪ್ರವಚನ ನೀಡುತ್ತಿರುವುದು ಬೆಂಕಿ ಹಚ್ಚಿದವನೇ ಅಗ್ನಿಶಾಮಕನಂತೆ ಪೋಸ್ ಕೊಟ್ಟ ಹಾಗಿದೆ.”
ತಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ರಾಜೀವ್ ಗಾಂಧಿಯವರ ಹತ್ಯೆಯಂತಹ ಅತ್ಯಂತ ಭೀಕರ ದುರಂತವನ್ನು ಅನುಭವಿಸಿದರೂ, ಪ್ರತಿಕ್ರಿಯೆಯಾಗಿ ದ್ವೇಷ ಸಾಧಿಸದೆ ಕ್ಷಮೆಯನ್ನು ಆರಿಸಿಕೊಂಡಿದ್ದರು. ಅದು ಕ್ಯಾಮೆರಾ ಮುಂದೆ ಮಾಡಿದ ಆಟವಲ್ಲ, ಅವರ ಸಂಸ್ಕಾರ ಎಂದು ನೆನಪಿಸಿದರು.
5. ಕಾಕ್ರೋಚ್ ಜನತಾ ಪಕ್ಷದ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಪ್ರಶ್ನೆ
ಪ್ರಧಾನಿಯವರ ಕ್ಷಮಾದಾನದ ಹೇಳಿಕೆಯನ್ನು ನೇರವಾಗಿ ಪ್ರಶ್ನೆ ಮಾಡಿರುವ ಅಭಿಜಿತ್ ದೀಪ್ಕೆ:
“ಸರ್, ನೀವು ಕೇವಲ ರೀಲ್ಸ್ನಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕ್ಷಮಿಸುತ್ತೀರಾ ಅಥವಾ ಅವರ ಮೇಲೆ ದಾಖಲಾಗಿರುವ ಎಫ್ಐಆರ್ ಹಾಗೂ ಕೇಸ್ಗಳನ್ನು ಹಿಂಪಡೆಯುತ್ತೀರಾ?” ಎಂದು ಸವಾಲು ಹಾಕಿದ್ದಾರೆ.
ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ್ದ ನೋಯ್ಡಾ ಮೂಲದ ಹದಿಹರೆಯದ ಯುವತಿಯ ಮೇಲಿನ ಎಫ್ಐಆರ್ ಪ್ರಸ್ತಾಪಿಸಿದ ಅವರು, ಬಿಜೆಪಿ ಐಟಿ ಸೆಲ್ನ ಸದಸ್ಯರು ಮಹಿಳೆಯರನ್ನು ನಿಂದಿಸಿದಾಗ ಅವರ ಮೇಲೂ ಇದೇ ರೀತಿ ಪ್ರಕರಣ ದಾಖಲಿಸಲಾಗುತ್ತದೆಯೇ ಎಂದು ಚಾಟಿ ಬೀಸಿದ್ದಾರೆ.
6. ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿಕೆ
ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಬೆಂಬಲ ಸೂಚಿಸಿದ್ದ ನಟ ಪ್ರಕಾಶ್ ರಾಜ್, ಸಾಮಾಜಿಕ ಜಾಲತಾಣ ‘X’ ನಲ್ಲಿ ಧ್ವನಿ ಎತ್ತಿದ್ದಾರೆ:
ಪೋಷಕರ ದೃಷ್ಟಿಕೋನ: “ಮಕ್ಕಳು ಹಿರಿಯರಿಗೆ ಕೋಪದಲ್ಲಿ ಅಥವಾ ಆಕ್ರೋಶದಲ್ಲಿ ಅವಾಚ್ಯ ಪದ ಬಳಸಿದಾಗ ಹಿರಿಯರಾಗಿ ಅವರಿಗೆ ಎಚ್ಚರಿಕೆ ನೀಡಿ ತಿದ್ದಬೇಕೇ ಹೊರತು, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವುದು, ಪೋಲಿಸ್ ದೂರು ನೀಡುವುದು ಅಥವಾ ಕಿರುಕುಳ ನೀಡುವುದು ಸರಿಯಾದ ಕ್ರಮವಲ್ಲ” ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.
ನೀಟ್ ಪರೀಕ್ಷೆಯ ಅಕ್ರಮ, ಶಿಕ್ಷಣ ಸಚಿವರ ರಾಜೀನಾಮೆ, ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ಪೋಷಕರ ಆಕ್ರಂದನದಿಂದ ತತ್ತರಿಸಿರುವ ಯುವಜನತೆಗೆ ಪ್ರಧಾನಿಯವರ ‘ಕ್ಷಮೆ’ಗಿಂತ ಹೆಚ್ಚಾಗಿ ನ್ಯಾಯ ಬೇಕಿದೆ ಎನ್ನುವುದು ವಿರೋಧ ಪಕ್ಷಗಳು ಮತ್ತು ಹೋರಾಟಗಾರರ ಸ್ಪಷ್ಟ ನಿಲುವಾಗಿದೆ.

F.I.R.
ಮರಳು ಮಾಫಿಯಾಗೆ ‘ಗೂಂಡಾ ಕಾಯ್ದೆ’ ಶಾಕ್: ಸುಮ್ಮನೆ ಕೂರುವ ಖಾಕಿ ಪಡೆಗೂ ಬಿತ್ತು ಕಠಿಣ ಬಿಸಿ!
ರಾಜ್ಯದಲ್ಲಿ ಅಕ್ರಮ ಮರಳು ದಂಧೆಗೆ ಇನ್ಮುಂದೆ ಸಂಪೂರ್ಣ ಬ್ರೇಕ್! ನಿಯಮ ಮೀರಿದರೆ ಜೈಲು ಗ್ಯಾರಂಟಿ, ಕಣ್ಣು ಮುಚ್ಚಿ ಕುಳಿತರೆ ಅಧಿಕಾರಿಗಳಿಗೂ ತೂಗುಕತ್ತಿ!
ಬೆಂಗಳೂರು: ರಾಜ್ಯದ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಾ, ಕಾನೂನು ಸುವ್ಯವಸ್ಥೆಗೆ ಸವಾಲೊಡ್ಡುತ್ತಿದ್ದ ಮರಳು ಮಾಫಿಯಾದ ಬಹುತೇಕ ಕೊನೆಗಾಲ ಹತ್ತಿರವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಅಕ್ರಮ ಸಾಗಾಟದ ವಿರುದ್ಧ ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಕಾಯ್ದೆಯ ಅಸ್ತ್ರವನ್ನು ಪ್ರಯೋಗಿಸಲು ಮುಹೂರ್ತವಿಟ್ಟಿದೆ. ಇನ್ಮುಂದೆ ಧಂದೆಯಲ್ಲಿ ತೊಡಗುವ ಕಿಂಗ್ಪಿನ್ಗಳಿಗೆ ನೇರವಾಗಿ ‘ಗೂಂಡಾ ಕಾಯ್ದೆ’ ಅಡಿಯಲ್ಲೇ ಖೆಡ್ಡಾ ತೋಡಲು ನಿರ್ಧರಿಸಲಾಗಿದೆ!
ಗೃಹ ಸಚಿವರಿಂದ ಕಟ್ಟುನಿಟ್ಟಿನ ಸೂಚನೆ, ಡಿಜಿ-ಐಜಿಪಿ ಎಂ.ಎ. ಸಲೀಂ ಕಡೆಯಿಂದ ಸುತ್ತೋಲೆ!
ಗೃಹ ಸಚಿವರ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG & IGP) ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್ಪಿಗಳು ಹಾಗೂ ಕಮಿಷನರ್ಗಳಿಗೆ ಅತ್ಯಂತ ಗಂಭೀರ ಸ್ವರೂಪದ ವಿಶೇಷ ಸುತ್ತೋಲೆ ಹೊರಡಿಸಿದ್ದಾರೆ.

“ಅಕ್ರಮ ಮರಳು ಗಣಿಗಾರಿಕೆ ಕೇವಲ ರಾಜ್ಯದ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಅದು ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ಸುವ್ಯವಸ್ಥೆಗೆ ಬಿದ್ದ ದೊಡ್ಡ ಪೆಟ್ಟು. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.” – ಪ್ರಿಯಾಂಕ್ ಖರ್ಗೆ, ಗೃಹ ಸಚಿವರು
ಮಾಫಿಯಾಗೆ ಮಾತ್ರವಲ್ಲ, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ!
ಇಲ್ಲಿಯವರೆಗೆ ಅಕ್ರಮ ಮರಳು ಸಾಗಾಟ ಕಂಡು ಕಂಡರೂ ಕಾಣದಂತೆ, ಮಾಫಿಯಾ ಜೊತೆ ಶಾಮೀಲಾಗಿ ಕಣ್ಮುಚ್ಚಿ ಕುಳಿತುಕೊಳ್ಳುತ್ತಿದ್ದ ಪೊಲೀಸ್ ಅಧಿಕಾರಿಗಳಿಗೂ ಈಗ ನಡುಕ ಶುರುವಾಗಿದೆ!
ಪೊಲೀಸರ ಮೇಲೇ ಬೀಳಲಿದೆ ಗದಾಪ್ರಹಾರ: ಅಕ್ರಮ ಮರಳು ದಂಧೆ ನಡೆಯುವ ವ್ಯಾಪ್ತಿಯ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನೇ ಇದಕ್ಕೆ ನೇರ ಜವಾಬ್ದಾರರನ್ನಾಗಿ ಮಾಡಲಾಗುತ್ತದೆ. ಕರ್ತವ್ಯ ಲೋಪ ಎಸಗುವ ಅಥವಾ ಮಾಫಿಯಾಗೆ ಸಾಥ್ ನೀಡುವ ಅಧಿಕಾರಿಗಳ ವಿರುದ್ಧವೂ ಕಠಿಣ ಇಲಾಖಾ ತನಿಖೆ ಮತ್ತು ಶಿಸ್ತುಕ್ರಮ ಕೈಗೊಳ್ಳಲಾಗುವುದು.
ಕಟ್ಟುನಿಟ್ಟಿನ ಗಡಿ ಕಾವಲು & ಜಂಟಿ ಕಾರ್ಯಾಚರಣೆ:
ಟಾಸ್ಕ್ ಫೋರ್ಸ್ ಅಲರ್ಟ್: ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು (Task Force) ಇನ್ಮುಂದೆ ದಿನದ 24 ಗಂಟೆಯೂ ಸಕ್ರಿಯವಾಗಿರಲಿವೆ. ಅಕ್ರಮ ಗಣಿಗಾರಿಕೆ ನಡೆಯುವ ‘ಹಾಟ್ಸ್ಪಾಟ್’ಗಳನ್ನು ಗುರುತಿಸಿ ನಿರಂತರ ನಿಗಾ ವಹಿಸಲಾಗುತ್ತದೆ.
ಇಲಾಖೆಗಳ ಸಮನ್ವಯ: ಗಣಿ ಮತ್ತು ಭೂವಿಜ್ಞಾನ, ಕಂದಾಯ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ.
ರಾಜ್ಯಾಂತರ ಗಡಿಯಲ್ಲಿ ಸಿಂಹಸ್ವಪ್ನ: ಅಂತರರಾಜ್ಯ ಗಡಿಭಾಗಗಳಲ್ಲಿ ಹಗಲು-ರಾತ್ರಿ ಕಟ್ಟುನಿಟ್ಟಿನ ಚೆಕ್ಪೋಸ್ಟ್ ತಪಾಸಣೆ ನಡೆಸಲಿದ್ದು, ನೆರೆ ರಾಜ್ಯಗಳಿಗೆ ಅಕ್ರಮವಾಗಿ ಮರಳು ಸಾಗಿಸುವ ಲಾರಿ, ಟಿಪ್ಪರ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.
ಖಡಕ್ ಎಚ್ಚರಿಕೆ:
ಇಷ್ಟು ದಿನ ಕಾನೂನಿನ ಕಣ್ಣಿಗೆ ಮಣ್ಣೆರಚಿ ನದಿ ತೀರಗಳನ್ನು ಕೊಳ್ಳೆ ಹೊಡೆಯುತ್ತಿದ್ದ ಮರಳು ದಂಧೆಕೋರರಿಗೆ ಈಗ ಕಾನೂನಿನ ನೈಜ ಶಕ್ತಿ ಏನೆಂಬುದು ತಿಳಿಯಲಿದೆ. ಅಕ್ರಮವಾಗಿ ಮರಳು ಎತ್ತಿದರೆ, ಸಂಗ್ರಹಿಸಿದರೆ ಅಥವಾ ಸಾಗಿಸಿದರೆ ಜೈಲು ಶಿಕ್ಷೆ ಹಾಗೂ ಆಸ್ತಿ ಜಪ್ತಿಯಂತಹ ಭಾರಿ ಬೆಲೆ ತೆರಬೇಕಾಗುತ್ತದೆ!
ಮಾಫಿಯಾದ ಆಟ ಇನ್ಮುಂದೆ ನಡೆಯಲ್ಲ… ಕಾನೂನಿನ ಬಲೆಗೆ ಬೀಳುವುದು ಖಚಿತ!
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
