Connect with us

Article

2 ಕೋಟಿ ವೆಚ್ಚದಲ್ಲಿ ಹೊಸ ಅಣೆಕಟ್ಟು ಕಾಮಗಾರಿ ಪ್ರಾರಂಭ- ಅಶೋಕ್ ರೈ; ಒಳಮೊಗ್ರು ಗ್ರಾಮದ ಎರ್ಮೆಟ್ಟಿಯ ಕಿಂಡಿ ಅಣೆಕಟ್ಟು ವೀಕ್ಷಣೆ ಮಾಡಿದ ಶಾಸಕರು; ಈಗಾಗಲೇ ಕಿಂಡಿಅಣೆಕಟ್ಟಿಗೆ 2 ಕೋಟಿ ರೂ ಪ್ರಸ್ತಾವನೆ

Published

on

ಪುತ್ತೂರು : ಒಳಮೊಗ್ರು ಗ್ರಾಮ ಪಂ.ವ್ಯಾಪ್ತಿಯ ಕೈಕಾರ-ಎರ್ಮೆಟ್ಟಿ ಸಂಪರ್ಕದ ಹೊಳೆಯಲ್ಲಿ 1975ರಲ್ಲಿ ಕೃಷಿಕರ ಅನುಕೂಲಕ್ಕಾಗಿ ನಿರ್ಮಾಣವಾಗಿದ್ದ ಕಿಂಡಿ ಅಣೆಕಟ್ಟು ಜನನಾಯಕರ ನಿರ್ಲಕ್ಷ್ಯದಿಂದಾಗಿ ನೀರುಪಾಲಾಗಿ ಇತಿಹಾಸದ ಪುಟ ಸೇರುವ ಮುನ್ನ ಎಚ್ಚೆತ್ತುಕೊಂಡ ಜನಪ್ರಿಯ ಶಾಸಕರಾದ ಆಶೋಕ್ ಕುಮಾರ್ ರೈ ಯವರು ಈ ಭಾಗದ ಕೃಷಿಕರ ಜೀವನಾಡಿ ಮಿಡಿತವನ್ನು ಅರಿತುಕೊಂಡು ಕಿಂಡಿ ಅಣೆಕಟ್ಟು ವೀಕ್ಷಣೆ ಮಾಡಿ ಈಗಾಗಲೇ ಕೃಷಿಕರಿಗೆ ಶಾಶ್ವತವಾದ ನೀರಿನ ಆಶ್ರಯವನ್ನು ನಿರ್ಮಿಸಲು ಈ ಕಿಂಡಿಅಣೆಕಟ್ಟಿಗೆ ಎರಡು ಕೋಟಿ ರೂ ಪ್ರಸ್ತಾವನೆ ಕಳುಹಿಸಲಾಗಿದ್ದು, ಮುಂದಿನ ವರ್ಷ ಹೊಸ ಅಣೆಕಟ್ಟು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಭರವಸೆ ನೀಡಿದರು .

ಈ ಮೂಲಕ ಈ ಭಾಗದ ಕೃಷಿಕರ ಬಹು ಸಮಯಗಳ ಬೇಡಿಕೆಯೊಂದು ಕ್ಷೇತ್ರದ ಶಾಸಕರ ಮುತುವರ್ಜಿಯಲ್ಲಿ ಸಾಕಾರಗೊಂಡಿದ್ದು, ದೀವಟಿಗೆ ಡಿಜಿಟಲ್ ಮೀಡಿಯಾವೊಂದರಲ್ಲಿ ಡಿ.31ರಂದು ತಮ್ಮ ನೀರಿನ ಬವಣೆಗಳನ್ನು ಕೃಷಿಕರು ಹೇಳಿಕೊಂಡಿದ್ದು, ತಮ್ಮ ಸಂಕಷ್ಟಗಳಿಗೆ ತಕ್ಷಣವಾಗಿ ಸ್ಪಂದಿಸಿದ ಶಾಸಕರ ಕಾರ್ಯನಡೆಯನ್ನು ಕೃಷಿಕರು ಅಭಿನಂದಿಸಿದ್ದಾರೆ.

ಒಳಮೊಗ್ರು ಗ್ರಾಮ ಪಂ.ವ್ಯಾಪ್ತಿಯ ಕೈಕಾರ-ಎರ್ಮೆಟ್ಟಿ ಸಂಪರ್ಕದ ಹೊಳೆಯಲ್ಲಿ 1975ರಲ್ಲಿ ಕೃಷಿಕರ ಅನುಕೂಲಕ್ಕಾಗಿ ನಿರ್ಮಾಣವಾಗಿದ್ದ ಕಿಂಡಿ ಅಣೆಕಟ್ಟು ಜನನಾಯಕರ ನಿರ್ಲಕ್ಷ್ಯದಿಂದಾಗಿ
ಕಳೆದ ಆರು ವರ್ಷಗಳಿಂದ ಮರಳು ತುಂಬಿದ ಗೋಣಿಗಳ ಸಹಾಯದಿಂದ ಸ್ಥಳೀಯರೇ ಕಿಂಡಿ ಅಣೆಕಟ್ಟು ನಿರ್ವಹಣೆ ಮಾಡುವ ಮೂಲಕ ತಮ್ಮ ಕೃಷಿ ನೀರಿನ ಬವಣೆಯನ್ನು ನಿವಾರಿಸುತ್ತಿದ್ದರು.
ಅಣೆಕಟ್ಟು ನಿರ್ವಹಣೆ ಮಾಡಿಸುವಂತೆ ಇಪ್ಪತ್ತೈದಕ್ಕೂ ಹೆಚ್ಚು ಬಡ ಕೃಷಿಕರು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಭರವಸೆ ನೀಡುತ್ತಿದ್ದ ಜನಪ್ರತಿನಿಧಿಗಳು ಚುನಾವಣೆ ಕಳೆದ ಬಳಿಕ ದುರಸ್ತಿ ಮಾಡಿಸುವುದು ಬಿಡಿ ಅತ್ತ ಕಡೆ ಅಪ್ಪಿತಪ್ಪಿಯೂ ತಲೆ ಹಾಕಿ ಮಲಗಿಲ್ಲ ಎಂಬುದು ಬಡ ಕೃಷಿಕರ ನೋವಿನ ಮಾತಾಗಿತ್ತು.

ಜನಪ್ರತಿನಿಧಿಗಳ/ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿಯಿಂದ ಮನನೊಂದ ಇಪ್ಪತೈದಕ್ಕೂ ಹೆಚ್ಚು ಅಣೆಕಟ್ಟು ನೀರಿನ ಫಲಾನುಭವಿಗಳು ಸ್ಥಳೀಯ ನಿವಾಸಿ ನೀರ್ಪಾಡಿ ಸತೀಶ್ ರೈ ನೇತೃತ್ವದಲ್ಲಿ ಅಣೆಕಟ್ಟು ನೀರಿನ ಫಲಾನುಭವಿ ಕೃಷಿಕರ ಸಹಕಾರದಲ್ಲಿ ಸುಮಾರು 4.5 ಲಕ್ಷ ವೆಚ್ಚದಲ್ಲಿ ಮರದ ಹಲಗೆ ಉಪಯೋಗಿಸಿ ಕಿಂಡಿ ಅಣೆಕಟ್ಟು ನಿರ್ವಹಣೆ ಮಾಡಿ ತಮ್ಮ ಕೃಷಿಗೆ ಬೇಕಾದ ಜೀವಜಲದ ಶೇಖರಣೆಯನ್ನು ಮಾಡುವಲ್ಲಿ ಯಶಸ್ವಿಯಾಗುವುದರ ಜೊತೆಗೆ ದೀವಟಿಗೆ ನ್ಯೂಸ್.ಕಾಮ್ ಡಿಜಿಟಲ್ ಮೀಡಿಯಾದ ಮೂಲಕ ತಮ್ಮ ನೀರಿನ ಸಂಕಷ್ಟದ ಗೋಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು ಶಾಶ್ವತವಾದ ಪರಿಹಾರಕ್ಕಾಗಿ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರು.

ಈ ಬಗ್ಗೆ ವಿವರವಾಗಿ ‘50ವರ್ಷಗಳ ಹಿಂದಿನ ಓಬಿರಾಯನ ಕಾಲದ ಕಿಂಡಿ ಅಣೆಕಟ್ಟು.. ಜನನಾಯಕರಿಂದ ನಿರ್ಲಕ್ಷ್ಯಕ್ಕೊಳಗಾದ ಕೃಷಿಕರ ಜೀವನಾಡಿ ಕಿಂಡಿ ಅಣೆಕಟ್ಟು.’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.31ರಂದು ತಮ್ಮ ಡಿಜಿಟಲ್ ಮೀಡಿಯಾದಲ್ಲಿ ವರದಿ ಪ್ರಸಾರ ಮಾಡಿತ್ತು.

ನಿಷ್ಕ್ರಿಯ ಆಡಳಿತ ವ್ಯವಸ್ಥೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಗೆ ಸಡ್ಡು ಹೊಡೆದ ಕೃಷಿಕರೇ ಇದೀಗ ಜೀವನಾಡಿಯಾದ ಕಿಂಡಿ ಅಣೆಕಟ್ಟು ನಿರ್ಮಿಸುತ್ತಿರುವುದು ಪೊಳ್ಳು ಭರವಸೆ ನೀಡುವ ಪುಢಾರಿಗಳಿಗೆ, ಬಾಲಂಗೋಚಿಯಾಗಿರುವ ಅಧಿಕಾರಿಗಳಿಗೆ ನಾಚಿಕೆಯಿಲ್ಲವೇ? ಎಂದು ಜನಪ್ರತಿನಿಧಿಗಳ ಕಾರ್ಯದಕ್ಷತೆಯ ಬಗ್ಗೆ ಮೀಡಿಯಾ ಪ್ರಶ್ನಿಸಿದ್ದು, ತನ್ನ ಕ್ಷೇತ್ರದ ಜನರ ನೋವು ಅರ್ಥೈಸಿಕೊಂಡು ಹಲವಾರು ಜನಪರ ಕಾರ್ಯಗಳನ್ನು ಮಾಡುತ್ತಾ ಜನಪ್ರಿಯರಾಗಿರುವ ಕ್ಷೇತ್ರದ ಶಾಸಕರು ತಕ್ಷಣವೇ ಕೃಷಿಕರ ಜೀವನಾಡಿಯಾಗಿರುವ ಎರ್ಮೆಟ್ಟಿ ಹೊಳೆಯ ಕಿಂಡಿ ಅಣೆಕಟ್ಟು ಹಾಗೂ ತಡೆಗೋಡೆಗಳ ಬಗ್ಗೆ ಸ್ಪಂದಿಸಬೇಕಾಗಿದೆ ಎಂದೂ ಕೃಷಿಕರ ಪರವಾಗಿ ವಿನಂತಿ ಮಾಡಿತ್ತು.


ಜನವರಿ18 ರಂದು ಒಳಮೊಗ್ರು ಗ್ರಾಮದ ಎರ್ಮೆಟ್ಟಿಯ ಕಿಂಡಿ ಅಣೆಕಟ್ಟು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈಯವರು ಈ ಕಿಂಡಿಅಣೆಕಟ್ಟಿಗೆ ಎರಡು ಕೋಟಿ ರೂ ಪ್ರಸ್ತಾವನೆ ಕಳುಹಿಸಲಾಗಿದ್ದು, ಮುಂದಿನ ವರ್ಷ ಹೊಸ ಅಣೆಕಟ್ಟು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಭರವಸೆ ನೀಡುವ ಮೂಲಕ ಈ ಭಾಗದ ಕೃಷಿಕರು ಉದ್ಯಮಿಗಳು ಆಗಿರುವ ಸತೀಶ್ ರೈ ನೀರ್ಪಾಡಿ ಮತ್ತು ನೊಂದ ಕೃಷಿಕರ ಬಹುಸಮಯಗಳ ಬೇಡಿಕೆಯನ್ನು ಈಡೇರಿಸಿದ್ದಾರೆ. ನಮ್ಮ ಬೇಡಿಕೆಗೆ ಸ್ಪಂದಿಸುವ ಜನಪ್ರತಿನಿಧಿಗಳು ಇಲ್ಲವೇ ಇಲ್ಲ ಎಂಬ ಬೇಸರದಲ್ಲಿದ ಜನರಿಗೆ ಶಾಸಕ ಆಶೋಕ್ ಕುಮಾರ್ ರೈ ಸಂಕಷ್ಟ ನಿವಾರಕನಾಗಿ ಬಂದಿದ್ದು, ನಾವೂ ಕೂಡಾ ಅವರೊಂದಿಗೆ ಸದಾ ಇದ್ದೇವೆ ಎಂದು ಮೀಡಿಯಾಗೆ ತಿಳಿಸಿದ್ದಾರೆ.

‘50ವರ್ಷಗಳ ಹಿಂದಿನ ಓಬಿರಾಯನ ಕಾಲದ ಕಿಂಡಿ ಅಣೆಕಟ್ಟು.. ಜನನಾಯಕರಿಂದ ನಿರ್ಲಕ್ಷ್ಯಕ್ಕೊಳಗಾದ ಕೃಷಿಕರ ಜೀವನಾಡಿ ಕಿಂಡಿ ಅಣೆಕಟ್ಟು.’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.31ರಂದು ತಮ್ಮ ದೀವಟಿಗೆ ನ್ಯೂಸ್.ಕಾಮ್ ಡಿಜಿಟಲ್ ಮೀಡಿಯಾದಲ್ಲಿ ವರದಿ ಪ್ರಸಾರ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Article

ಆಕಾಶದ ಕಾಣುತ್ತಿದೆ ಅಚ್ಚರಿ: ಚಂದ್ರನ ಪಕ್ಕ‌ ಇಂದು ಮಿನುಗುತ್ತಿರುವ ‘ಬೆಳ್ಳಿ ಚುಕ್ಕೆ’ ಶುಕ್ರ ಗ್ರಹದ ರಹಸ್ಯ!

Published

on

ಆಕಾಶದಲ್ಲಿ ಚಂದ್ರನ ಸನಿಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾಗಿ ಮಿನುಗುತ್ತಿರುವುದು ಯಾವುದೇ ನಕ್ಷತ್ರವಲ್ಲ, ಬದಲಾಗಿ ಸೌರವ್ಯೂಹದ ಅತ್ಯಂತ ಪ್ರಕಾಶಮಾನವಾದ ಶುಕ್ರ ಗ್ರಹ (Venus). ಸಂಜೆಯ ಪಶ್ಚಿಮ ದಿಗಂತದಲ್ಲಿ ಬಾಲಚಂದ್ರ ಹಾಗೂ ಈ ಬೆಳ್ಳಿ ಚುಕ್ಕೆಯು ಪರಸ್ಪರ ಅತ್ಯಂತ ಹತ್ತಿರದಲ್ಲಿ ಗೋಚರಿಸುತ್ತಿರುವುದು ಎಲ್ಲೆಡೆ ಭಾರಿ ಕುತೂಹಲ ಮೂಡಿಸಿದೆ.

ಇದು ನಕ್ಷತ್ರವೇಕಲ್ಲ? ಶುಕ್ರ ಗ್ರಹದ ವಿಶೇಷತೆ

ಸ್ವಂತ ಬೆಳಕಿಲ್ಲದಿದ್ದರೂ ಕಾಂತಿ: ಸಾಮಾನ್ಯ ನಕ್ಷತ್ರಗಳು ತಮ್ಮ ಸ್ವಂತ ಬೆಳಕಿನಿಂದ ಮಿನುಗುತ್ತವೆ. ಆದರೆ ಶುಕ್ರ ಗ್ರಹಕ್ಕೆ ಸ್ವಂತ ಬೆಳಕಿಲ್ಲ. ಇದು ಸೂರ್ಯನ ಬೆಳಕನ್ನು ಅತ್ಯಧಿಕ ಪ್ರಮಾಣದಲ್ಲಿ ಪ್ರತಿಫಲಿಸುವುದರಿಂದ ರಾತ್ರಿ ಆಕಾಶದಲ್ಲಿ ಚಂದ್ರ ಬಿಟ್ಟರೆ ಅತಿ ಹೆಚ್ಚು ಕಾಂತಿಯುತವಾಗಿ ಕಾಣಿಸುತ್ತದೆ. ಈ ಕಾರಣಕ್ಕಾಗಿಯೇ ಇದನ್ನು ‘ಸಂಜೆ ನಕ್ಷತ್ರ’ ಅಥವಾ ‘ಬೆಳ್ಳಿ ಚುಕ್ಕೆ’ ಎಂದು ಕರೆಯಲಾಗುತ್ತದೆ.

ದಟ್ಟ ವಾತಾವರಣ: ಶುಕ್ರ ಗ್ರಹವು ಸೂರ್ಯನಿಗೆ ಹತ್ತಿರವಿರುವ ಗ್ರಹವಾಗಿದ್ದು, ಇದರ ದಟ್ಟವಾದ ವಾತಾವರಣವು ಸೂರ್ಯನ ಬೆಳಕನ್ನು ಬಲವಾಗಿ ಪ್ರತಿಫಲಿಸುತ್ತದೆ.

ಸಂಯೋಗ (Conjunction) ಮತ್ತು ಚಂದ್ರ ಮರೆಮಾಚುವಿಕೆ (Lunar Occultation)

ಗ್ರಹ-ಚಂದ್ರ ಯುತಿ: ಖಗೋಳಶಾಸ್ತ್ರದ ಪ್ರಕಾರ, ಭೂಮಿ, ಚಂದ್ರ ಮತ್ತು ಶುಕ್ರ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸುತ್ತುತ್ತಾ ನಿರ್ದಿಷ್ಟ ಸಾಪೇಕ್ಷ ಸ್ಥಾನಕ್ಕೆ ಬಂದಾಗ ಒಂದೇ ನೇರ ಸಾಲಿನಲ್ಲಿ (Conjunction) ಅತಿ ಹತ್ತಿರದಲ್ಲಿ ಕಾಣಿಸಿಕೊಳ್ಳುತ್ತವೆ. ಭೂಮಿಯಿಂದ ನೋಡುವಾಗ ಈ ಎರಡೂ ಆಕಾಶಕಾಯಗಳು ಅಕ್ಕಪಕ್ಕದಲ್ಲಿ ಇದ್ದಂತೆ ಭಾಸವಾಗುತ್ತವೆ.

ಚಂದ್ರ ಮರೆಮಾಚುವಿಕೆ: ಭಾರತದ ಕೆಲ ಭಾಗಗಳಲ್ಲಿ ಚಂದ್ರನು ಶುಕ್ರ ಗ್ರಹದ ಮುಂಭಾಗದಲ್ಲೇ ಹಾದುಹೋಗುವ ಅಪರೂಪದ ‘ಚಂದ್ರ ಮರೆಮಾಚುವಿಕೆ’ (Lunar Occultation) ವಿದ್ಯಮಾನವೂ ಜರಗಿದೆ. ಅಂದರೆ ಕೆಲಕಾಲ ಶುಕ್ರ ಗ್ರಹವು ಚಂದ್ರನ ಹಿಂದೆ ಮರೆಯಾಗಿ, ನಂತರ ಆಚೆ ಬಂದಿದೆ. ಇದು ಬರಿಗಣ್ಣಿಗೂ ಅತ್ಯಂತ ಆಕರ್ಷಕವಾಗಿ ಗೋಚರಿಸುವ ದೃಶ್ಯವಾಗಿದೆ.

ಚೌತಿ ಚಂದ್ರನ ನಂಬಿಕೆ ಮತ್ತು ವೈಜ್ಞಾನಿಕ ಸತ್ಯ

ಪೌರಾಣಿಕ ಹಿನ್ನೆಲೆ: ಭಾದ್ರಪದ ಮಾಸದ ಶುಕ್ಲ ಪಕ್ಷದ ಚೌತಿಯ (ಗಣೇಶ ಚತುರ್ಥಿ) ದಿನ ಚಂದ್ರನನ್ನು ನೋಡಿದರೆ ಕಳಂಕ ಅಥವಾ ಅಪವಾದ ಬರುತ್ತದೆ (ಮಣಿಭರಣ ಕಳಂಕ) ಎಂಬುದು ಜನರಲ್ಲಿ ಶತಶತಮಾನಗಳಿಂದ ರೂಢಿಯಲ್ಲಿರುವ ನಂಬಿಕೆಯಾಗಿದೆ.

ವೈಜ್ಞಾನಿಕ ಸತ್ಯ: ಖಗೋಳ ವಿಜ್ಞಾನದ ದೃಷ್ಟಿಯಿಂದ ಚಂದ್ರನನ್ನು ನೋಡುವುದರಿಂದ ಯಾವುದೇ ಶಾಪ, ಅಪವಾದ ಅಥವಾ ಕೆಟ್ಟ ಪರಿಣಾಮಗಳು ಸಂಭವಿಸುವುದಿಲ್ಲ. ಇದು ಕೇವಲ ನೈಸರ್ಗಿಕ ಉಪಗ್ರಹವಾಗಿದ್ದು, ಭೂಮಿಯ ಸುತ್ತ ನಿರಂತರವಾಗಿ ಸುತ್ತುತ್ತದೆ. ಚತುರ್ಥಿಯ ದಿನ ಚಂದ್ರನು ಭೂಮಿಗೆ ಮತ್ತು ಸೂರ್ಯನಿಗೆ ಇರುವ ಸಾಪೇಕ್ಷ ಸ್ಥಾನದಿಂದಾಗಿ ತೆಳುವಾದ ಕಮಾನು ಅಥವಾ ಅರ್ಧಚಂದ್ರಾಕಾರದಲ್ಲಿ ಗೋಚರಿಸುತ್ತಾನೆ.

ವೀಕ್ಷಣೆ ಹೇಗೆ?

ಅಮಾವಾಸ್ಯೆಯ ನಂತರದ ಆರಂಭಿಕ ದಿನಗಳಲ್ಲಿ (ಬಾಲಚಂದ್ರನಿದ್ದಾಗ) ಪಶ್ಚಿಮ ಆಕಾಶದಲ್ಲಿ ಸಂಜೆಯ ಹೊತ್ತು ಈ ಅದ್ಭುತ ದೃಶ್ಯವು ಬರಿಗಣ್ಣಿಗೆ ಸ್ಪಷ್ಟವಾಗಿ ಗೋಚರಿಸುತ್ತದೆ. ಇದೇ ಕಾರಣದಿಂದ ಜನರು ಇದನ್ನು ಮೊಬೈಲ್ ಹಾಗೂ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Continue Reading

Article

ಸರ್ವರಲ್ಲೂ ಸಮಭಾವದ ಪ್ರತೀಕ ಗಣೇಶೋತ್ಸವ: ಹಬ್ಬಗಳು ಒಗ್ಗಟ್ಟಿನ ಸೇತುವೆಯಾಗಲಿ

Published

on

✍️ ಜ್ಯೋತಿಪ್ರಕಾಶ್‌ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್‌ ಮೀಡಿಯಾ-9448441282

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧ್ರಾಮಿಕ ಆಚರಣೆಗಳಲ್ಲ, ಅವು ಮನುಕುಲವನ್ನು ಬೆಸೆಯುವ ಭಾವನಾತ್ಮಕ ಕೊಂಡಿಗಳು. ಅದರಲ್ಲಿಯೂ ಗಣೇಶ ಚತುರ್ಥಿಯು ವಿಘ್ನಗಳನ್ನು ನಿವಾರಿಸಿ, ಬುದ್ಧಿವಂತಿಕೆ ಹಾಗೂ ಸಮೃದ್ಧಿಯನ್ನು ತರುವ ಹಬ್ಬವಾಗಿ ಮಾತ್ರವಲ್ಲದೆ, ಸಮಾಜದಲ್ಲಿ ಸೌಹಾರ್ದತೆ ಮತ್ತು ಐಕ್ಯತೆಯನ್ನು ಸಾರುವ ಮಹತ್ವದ ಸಂದರ್ಭವಾಗಿದೆ.

ಪ್ರಕೃತಿಯ ವಿಸ್ಮಯವನ್ನು ಗಮನಿಸಿದರೆ ನಮಗೆ ದೊಡ್ಡ ಪಾಠ ಸಿಗುತ್ತದೆ. ಸೂರ್ಯನ ಬೆಳಕು, ಚಂದ್ರನ ತಂಪಾದ ಬೆಳಕು, ಬೀಸುವ ಗಾಳಿ ಮತ್ತು ಹರಿಯುವ ನದಿಗಳು ಎಂದಿಗೂ ಜಾತಿ, ಮತ, ಧರ್ಮ ಅಥವಾ ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ. ಪ್ರಕೃತಿಯು ಇಡೀ ಮಾನವ ಕುಲವನ್ನು ತನ್ನ ಮಕ್ಕಳಂತೆ ಸಮಾನವಾಗಿ ಕಾಣುತ್ತದೆ. ಅದೇ ರೀತಿ, ನಮ್ಮ ಹಬ್ಬಗಳ ಆಚರಣೆಯೂ ಕೂಡ ಭೇದಭಾವಗಳನ್ನು ಮರೆತು ಎಲ್ಲರನ್ನು ಅಪ್ಪಿಕೊಳ್ಳುವಂತಾಗಬೇಕು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ಮುನ್ನುಡಿ ಬರೆದಾಗ, ಅದರ ಮುಖ್ಯ ಉದ್ದೇಶವೇ ಜಾತಿ-ಮತಗಳ ಗಡಿಯನ್ನು ಮೀರಿ ಇಡೀ ಸಮಾಜವನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವುದಾಗಿತ್ತು. ಆದರೆ ಇಂದಿನ ದಿನಗಳಲ್ಲಿ ಹಬ್ಬಗಳು ಕೇವಲ ಆಚರಣೆಗಳಿಗೆ ಸೀಮಿತವಾಗದೆ, ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಾಮರಸ್ಯವನ್ನು ಬಿತ್ತುವ ಮಾಧ್ಯಮಗಳಾಗಬೇಕಿದೆ.

ಪ್ರತಿಯೊಬ್ಬರಿಗೂ ಅವರವರ ಧರ್ಮ, ನಂಬಿಕೆಗಳು ಮತ್ತು ಆಚರಣೆಗಳು ಶ್ರೇಷ್ಠವಾಗಿರುವುದು ಸಹಜ ಮತ್ತು ನೈಸರ್ಗಿಕ. ಆದರೆ, ತನ್ನ ಧರ್ಮದಷ್ಟೇ ಇತರರ ಧರ್ಮವನ್ನೂ ಗೌರವಿಸುವುದೇ ನಿಜವಾದ ಮಾನವತೆಯ ಪ್ರತೀಕ. ದ್ವೇಷ ಅಥವಾ ಅಸೂಯೆಗಾಗಿ ಒಗ್ಗೂಡುವುದಕ್ಕಿಂತ, ಸೌಹಾರ್ದತೆ ಮತ್ತು ಮಾನವೀಯತೆಗಾಗಿ ಒಂದಾಗುವುದೇ ಹಬ್ಬಗಳ ಅತಿ ದೊಡ್ಡ ಸಂದೇಶ.

ಈ ಗಣೇಶ ಚತುರ್ಥಿಯಂದು ವಿಘ್ನಹರ್ತನನ್ನು ಆರಾಧಿಸುವಾಗ, ನಮ್ಮ ಮನಸ್ಸಿನಲ್ಲಿರುವ ಅಹಂಕಾರ, ತಾರತಮ್ಯ ಮತ್ತು ದ್ವೇಷದ ಭಾವನೆಗಳನ್ನು ವಿಸರ್ಜಿಸೋಣ. ಪ್ರಕೃತಿಯಂತೆ ವಿಶಾಲವಾದ ಹೃದಯವನ್ನು ರೂಢಿಸಿಕೊಂಡು, ಎಲ್ಲರೊಂದಿಗೆ ಬೆರೆತು ಬಾಳುವ ಸಂಕಲ್ಪ ಮಾಡೋಣ. ಹಬ್ಬಗಳು ನಮ್ಮನ್ನು ವಿಭಜಿಸದೆ, ಸೌಹಾರ್ದತೆಯ ಬಂಧದಲ್ಲಿ ಮತ್ತಷ್ಟು ಗಟ್ಟಿಯಾಗಿ ಬೆಸೆಯಲಿ.

ಸರ್ವರಿಗೂ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು!

Continue Reading

Article

ಚಿತ್ರದಲ್ಲಿ ತಾಯಿಯನ್ನು ಹುಡುಕಿದ ಕರು: ಪ್ರಕೃತಿಯ ಮಮತೆ ಮತ್ತು ಮಾನವನ ಕಠೋರತೆಗೆ ಹಿಡಿದ ಕನ್ನಡಿ

Published

on

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ಸಣ್ಣ ವಿಡಿಯೋ ಪ್ರತಿಯೊಬ್ಬರ ಕಣ್ಣಂಚಲ್ಲಿ ನೀರು ತರಿಸುವಂತಿದೆ. ತಾಯಿಯ ಪ್ರೀತಿ, ಮಮತೆ ಮತ್ತು ಅಪ್ಪುಗೆಗಾಗಿ ಒಂದು ಜೀವ ಎಷ್ಟು ತವಕಿಸುತ್ತದೆ ಎಂಬುದಕ್ಕೆ ಈ ಸನ್ನಿವೇಶ ಸಾಕ್ಷಿಯಾಗಿದೆ.

ರಸ್ತೆಯ ಬದಿಯಲ್ಲಿ ನಿಂತಿದ್ದ ಹಾಲಿನ ಡೈರಿಯ ಲಾರಿಯೊಂದರ ಹಿಂಭಾಗದಲ್ಲಿ ಹಸುವಿನ ದೊಡ್ಡ ಚಿತ್ರವಿತ್ತು (ಪೋಸ್ಟರ್). ಹಾದಿಯಲ್ಲಿ ಅನಾಥವಾಗಿ ಅಲೆಯುತ್ತಿದ್ದ ಸಣ್ಣ ಕರುವೊಂದು ಆ ಚಿತ್ರವನ್ನು ಕಂಡ ತಕ್ಷಣ, ಅದು ತನ್ನದೇ ಹೆತ್ತ ತಾಯಿ ಎಂದು ಭಾವಿಸಿದೆ. ಓಡೋಡಿ ಬಂದು “ಅಂಬಾ…” ಎಂದು ಕರೆದಿದೆ. ಚಿತ್ರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ, ತಾಯಿಯ ಬಳಿಗೆ ಹೋಗಲು ಹಂಬಲಿಸಿ ಲಾರಿಯ ಹಿಂಭಾಗಕ್ಕೆ ತನ್ನ ಮುಂಗಾಲುಗಳನ್ನಿಟ್ಟು ನಿಂತಿದೆ. ಹಸುವಿನ ಚಿತ್ರದಲ್ಲಿದ್ದ ಕೆಚ್ಚಲಿಗೆ ಬಾಯಿ ಹಾಕಿ ಹಾಲು ಕುಡಿಯಲು ನಿರಂತರ ಪ್ರಯತ್ನ ನಡೆಸಿದೆ.

ಆದರೆ, ಅದು ಕೇವಲ ನಿರ್ಜೀವ ಪೋಸ್ಟರ್ ಎಂಬ ಸತ್ಯ ಆ ಮುಗ್ಧ ಕರುವಿಗೆ ತಿಳಿಯಲಿಲ್ಲ. “ತಾಯಿ ನನ್ನನ್ನು ಏಕೆ ಹತ್ತಿರಕ್ಕೆ ಕರೆದುಕೊಳ್ಳುತ್ತಿಲ್ಲ, ಏಕೆ ಹಾಲು ನೀಡುತ್ತಿಲ್ಲ?” ಎಂದು ಅದು ನಿರಾಶೆಯಿಂದ ಗೋಗರೆಯುವ ದೃಶ್ಯ ಪ್ರತಿಯೊಬ್ಬರ ಕರುಳನ್ನು ಹಿಂಡುವಂತಿದೆ.

ಹೈನುಗಾರಿಕೆ ಮತ್ತು ನಮ್ಮ ನೈತಿಕತೆ:

ಈ ಸನ್ನಿವೇಶವು ಕೇವಲ ಒಂದು ವೈರಲ್ ವಿಡಿಯೋ ಅಲ್ಲ; ಬದಲಿಗೆ ಪ್ರಸ್ತುತ ಸಮಾಜದಲ್ಲಿ ಸಾಗುತ್ತಿರುವ ಹೈನುಗಾರಿಕೆ ಉದ್ಯಮದ ಕಠೋರ ನೈಜತೆಗೆ ಹಿಡಿದ ಕನ್ನಡಿ. ಪ್ರತಿಯೊಂದು ಪ್ರಾಣಿ-ಪಕ್ಷಿಗೂ ತಾಯಿಯ ಮಮತೆ ಅತ್ಯಗತ್ಯ. ಆದರೆ ಮನುಷ್ಯ ತನ್ನ ಸ್ವಾರ್ಥ ಮತ್ತು ಲಾಭಕ್ಕಾಗಿ ಕರು ಕುಡಿಯಬೇಕಾದ ಹಾಲನ್ನು ಸಂಪೂರ್ಣವಾಗಿ ಹಿಂಡಿ ಮಾರಾಟ ಮಾಡುತ್ತಿದ್ದಾನೆ.

ಅದರಲ್ಲೂ ವಿಶೇಷವಾಗಿ ಗಂಡು ಕರು ಹುಟ್ಟಿದರೆ, ಹಾಲು ನೀಡಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ಅದನ್ನು ಬೀದಿಗೆ ತಳ್ಳುವುದು ಅಥವಾ ಅನಾಥವಾಗಿ ಬಿಟ್ಟುಬಿಡುವುದು ಸಮಾಜದಲ್ಲಿ ಸಾಮಾನ್ಯವಾಗಿದೆ. ತಾಯಿಯ ಹಾಲಿನಿಂದಲೂ, ತಾಯಿಯ ಪ್ರೀತಿಯಿಂದಲೂ ವಂಚಿತವಾದ ಇಂತಹ ಮುಗ್ಧ ಜೀವಿಗಳು ರಸ್ತೆ ರಸ್ತೆಗಳಲ್ಲಿ ಅಲೆಯುತ್ತಾ, ನಿರ್ಜೀವ ಚಿತ್ರಗಳಲ್ಲೂ ತಮ್ಮ ತಾಯಿಯನ್ನು ಹುಡುಕುವ ಪರಿಸ್ಥಿತಿ ಬಂದೊದಗಿರುವುದು ಅತ್ಯಂತ ಶೋಚನೀಯ.

ಈ ವಿಡಿಯೋ ನಮಗೆಲ್ಲರಿಗೂ ಒಂದು ಪ್ರಶ್ನೆಯನ್ನು ಎಸೆದಿದೆ — ಮನುಷ್ಯನ ಸ್ವಾರ್ಥಕ್ಕಾಗಿ ಮೂಕ ಪ್ರಾಣಿಗಳ ಕರುಳ ಬಳ್ಳಿಯ ಬಂಧವನ್ನು ಹೀಗೆ ತುಂಡರಿಸುವುದು ಎಷ್ಟು ಸರಿ? ಪ್ರಾಣಿಗಳ ಮೇಲಿನ ದಯೆ ಮತ್ತು ಕರುಣೆ ಕೇವಲ ಮಾತಿಗೆ ಸೀಮಿತವಾಗದೇ ಕಾರ್ಯಾಚರಣೆಗೆ ಬರಬೇಕಿದೆ

Continue Reading

Trending

Copyright © 2025 Deevatige

error: Content is protected !!