Uncategorized
29ವರ್ಷಗಳ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ ದಂಡುಪಾಳ್ಯ ಗ್ಯಾಂಗ್ ನ ಸದಸ್ಯ ಬಂಧನ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಪ್ರಾಯ: 55 ವರ್ಷ, ತಂದೆ: ವೆಂಕಟಪ್ಪ ವಾಸ: ದಂಡುಪಾಳ್ಯ ಗ್ರಾಮ, ಹೊಸಕೋಟೆ ತಾಲೂಕು. ಬೆಂಗಳೂರು ಜಿಲ್ಲೆ. ಹಾಲಿ ವಾಸ: ವಿಜಯನಗರ ಕಾಲೋನಿ, ಬಿ.ಕೆ ಪಳ್ಳಿ, ಮದನಪಳ್ಳಿ, ಅನ್ನಮಯ್ಯ ಜಿಲ್ಲೆ, ಆಂದ್ರಪ್ರದೇಶ ಈತನನ್ನು ಆಂದ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳೆ ಎಂಬಲ್ಲಿ ಉರ್ವ ಠಾಣಾ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
29ವರ್ಷ ಹಿಂದಿನ ಕೊಲೆ ಪಾತಕಿ ಚಿಕ್ಕ ಹನುಮ..
ದಿನಾಂಕ: 11-10-1997 ರಂದು ಮಧ್ಯರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರಗಳಾದ 1) ದೊಡ್ಡ ಹನುಮ @ ಹನುಮ 2)ವೆಂಕಟೇಶ @ ಚಂದ್ರ 3) ಮುನಿಕೃಷ್ಣ @ ಕೃಷ್ಣ ಮತ್ತು 4) ನಲ್ಲತಿಮ್ಮ @ ತಿಮ್ಮ5). ಕೃಷ್ಣ @ ದಂಡುಪಾಳ್ಯ ಕೃಷ್ಣ @ ನಾಗರಾಜ 6) ಚಿಕ್ಕ ಹನುಮ 7) ಕೃಷ್ಣಾಡು @ ಕೃಷ್ಣ 8) ವೆಂಕಟೇಶ್ @ ರಮೇಶ್ ಇವರುಗಳು ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ, ಪ್ರಾಯ 80 ವರ್ಷ ಹಾಗೂ ರಂಜಿತ್ ವೇಗಸ್, ಪ್ರಾಯ 19 ವರ್ಷ ರವರನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುತ್ತಾರೆ. ಸದ್ರಿ ಆಪಾದಿತರುಗಳ ಮೇಲೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ಮಾನ್ಯ ನಾಯಾಲಯಕ್ಕೆ ಸಲ್ಲಿಸಿದಂತೆ ಘನ 34 ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ರವರ ಎಸ್.ಸಿ ನಂ. 728/2010 ರಂತೆ ಸದ್ರಿ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಇತರೆ 5 ಆಪಾದಿತರು ದೊಡ್ಡ ಹನುಮ @ ಹನುಮ ಸೇರಿ ಘನ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿರುತ್ತದೆ.
ಈ ಪ್ರಕರಣದಲ್ಲಿ ಆಪಾಧಿತನಾದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ತನ್ನ ಬುಧ್ಧಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ದಸ್ತಗಿರಿಗೆ ಸಿಗದೇ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂದ್ರಪ್ರದೇಶ ರಾಜ್ಯದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈತನ ಮೇಲೆ ಮಂಗಳೂರು ಮಾನ್ಯ JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ ,ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. .
ಈ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂಧರ್ ಹೆಚ್.ಎಮ್ , ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್.ಮಂಜುಳಾ ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ , ಹರೀಶ್ ರವರು ಶ್ರಮಿಸಿರುತ್ತಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಾಂಸೆಯನ್ನು ವ್ಯಕ್ತ ಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ&ಐಜಿಪಿ ರವರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Mangaluru
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ‘ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ’ ಹೆಸರಿಡಲು ಮನವಿ
ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ಗೆ ಮರುನಾಮಕರಣ ಮಾಡಬೇಕು ಹಾಗೂ ನಿಲ್ದಾಣದ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಕರ್ನಾಟಕ ಸರಕಾರದ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಮೇಯರ್ ಅನಂತ್ ಮೈಸೂರು ಆಗ್ರಹಿಸಿದ್ದಾರೆ.
ಆಗಸ್ಟ್ 2ರಂದು ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ಗೆ ಭೇಟಿ ನೀಡಿದ ಅವರು, ಗಾಣಿಗ ಸಮಾಜದ ಪ್ರಮುಖ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ರೈಲ್ವೇ ಕ್ಷೇತ್ರಾಧಿಕಾರಿ ರಾಕೇಶ್ ಕುಮಾರ್ ಪಾರಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅನಂತ್ ಮೈಸೂರು, “ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪನವರು ಗಾಣಿಗ (ಸಫಲಿಗ) ಸಮಾಜಕ್ಕೆ ಸೇರಿದವರಾಗಿದ್ದು, ದೇಶಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರು. ನಿಲ್ದಾಣ ನಿರ್ಮಾಣಕ್ಕೆ ತಮ್ಮದೇ ಜಾಗವನ್ನು ಕೊಡುಗೆಯಾಗಿ ನೀಡಿದ ಅವರ ಸ್ಮರಣಾರ್ಥ ನಿಲ್ದಾಣಕ್ಕೆ ಅವರ ಹೆಸರನ್ನಿಟ್ಟು, ಪ್ರತಿಮೆ ನಿರ್ಮಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವ,” ಎಂದರು.

ಪಠ್ಯಪುಸ್ತಕದಲ್ಲೂ ವಿಷಯ ಸೇರ್ಪಡೆಯಾಗಲಿ: ಮೋಹಿತ್
ಅಜೇಯ ಭಾರತ ಸಂಸ್ಥಾಪಕ ಮೋಹಿತ್ ಬೆಂಗಳೂರು ಮಾತನಾಡಿ, “ಅತ್ತಾವರ ಎಲ್ಲಪ್ಪನವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ, ಇಡೀ ದೇಶ ಹೆಮ್ಮೆ ಪಡುವ ವ್ಯಕ್ತಿತ್ವ. ನಿಲ್ದಾಣಕ್ಕೆ ಹೆಸರಿಡುವ ಜತೆಗೆ ಶಾಲಾ ಪಠ್ಯಪುಸ್ತಕಗಳಲ್ಲೂ ಅವರ ಹೋರಾಟದ ಹಾದಿಯ ವಿಷಯಗಳನ್ನು ಸೇರ್ಪಡೆಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಕೇಂದ್ರ ರೈಲ್ವೇ ಸಚಿವ ವಿ. ಸೋಮಣ್ಣ ಅವರ ಗಮನಕ್ಕೂ ತರಲಾಗುವುದು,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಯಾರಿಸ್ಟರ್ ಎಲ್ಲಪ್ಪ ಅವರ ಸೋದರಳಿಯ ಪ್ರಭಾಕರ್ ದಾಸ್, ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಪುತ್ತೂರು ಗಾಣಿಗ ಯಾನೆ ಸಫಲಿಗರ ಸೇವಾ ಸಂಘದ ಲಕ್ಷ್ಮೀ ಪ್ರಸಾದ್ ಬೆಟ್ಟ, ಪ್ರೊ| ಸುರೇಶ್ ಕಟೀಲು, ಕಮಲಾಕ್ಷ ಉಳ್ಳಾಲ್, ರವೀಂದ್ರ ಟಿ. ಮಂಗಳೂರು, ಭರತ್ ಕುಮಾರ್ ಅತ್ತಾವರ, ಹರೀಶ್ ಮಂಜೇಶ್ವರ, ತಾರನಾಥ ಸುವರ್ಣ, ಪದ್ಮನಾಭ, ಕಾರ್ತಿಕ್ ಕಬಕ, ಪ್ರವನ್ ಮೆಲ್ಕಾರ್ ಉಪಸ್ಥಿತರಿದ್ದರು.
CONGRESS
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಹೈಕಮಾಂಡ್ನಿಂದ ಅಂತಿಮ ಪಟ್ಟಿ ಬಿಡುಗಡೆ!
ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಅನುಮೋದಿತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿರುವ ಈ ಪಟ್ಟಿಯಲ್ಲಿ 20 ನೂತನ ಸಚಿವರ ಹೆಸರುಗಳು ಹಾಗೂ ಶಾಸಕಾಂಗದ ಪ್ರಮುಖ ಹುದ್ದೆಗಳ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಂಪುಟ ಸೇರಲಿರುವ 20 ನೂತನ ಸಚಿವರ ಅಧಿಕೃತ ಪಟ್ಟಿ:
- ಪಿ. ಎಂ. ನರೇಂದ್ರಸ್ವಾಮಿ
- ಶಿವರಾಜ್ ತಂಗಡಗಿ
- ರುದ್ರಪ್ಪ ಲಮಾಣಿ
- ಕೆ. ಎಸ್. ಬಸವಂತಪ್ಪ
- ಬಿ. ನಾಗೇಂದ್ರ
- ಟಿ. ರಘುಮೂರ್ತಿ
- ಬಿ. ಝಡ್. ಝಮೀರ್ ಅಹ್ಮದ್ ಖಾನ್
- ರಿಜ್ವಾನ್ ಅರ್ಷದ್
- ಸಂತೋಷ್ ಲಾಡ್
- ಮಧು ಬಂಗಾರಪ್ಪ
- ಪುಟ್ಟರಂಗಶೆಟ್ಟಿ
- ಎಸ್ ಎಸ್ ಮಲ್ಲಿಕಾರ್ಜುನ
- ಡಾ. ಅಜಯ್ ಸಿಂಗ್
- ಎನ್. ಚೆಲುವರಾಯಸ್ವಾಮಿ
- ಕೆ. ಎಂ. ಶಿವಲಿಂಗೇಗೌಡ
- ಹೆಚ್. ಸಿ. ಬಾಲಕೃಷ್ಣ
- ಗಾಯತ್ರಿ ಶಾಂತೇಗೌಡ
- ಬಸವರಾಜ ರಾಯರೆಡ್ಡಿ
- ವಿಜಯಾನಂದ ಕಾಶಪ್ಪನವರ್
- ಲಕ್ಷ್ಮಣ ಸವದಿ
ಶಾಸಕಾಂಗ ಹಾಗೂ ಮೇಲ್ಮನೆಯ ಪ್ರಮುಖ ಹುದ್ದೆಗಳ ನೇಮಕಾತಿ:
ಸಚಿವರ ಪಟ್ಟಿಯ ಜೊತೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳಿಗೂ ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ:
- ವಿಧಾನಸಭಾ ಸ್ಪೀಕರ್ (ಸಭಾಧ್ಯಕ್ಷರು): ಜಿ. ಎಸ್. ಪಾಟೀಲ್
- ವಿಧಾನಸಭಾ ಡೆಪ್ಯೂಟಿ ಸ್ಪೀಕರ್ (ಉಪಸಭಾಧ್ಯಕ್ಷರು): ಎ. ಎಸ್. ಪೊನ್ನಣ್ಣ
- ವಿಧಾನಪರಿಷತ್ ಸಭಾಪತಿ: ಸಲೀಂ ಅಹ್ಮದ್
- ವಿಧಾನಪರಿಷತ್ ಉಪಸಭಾಪತಿ: ಉಮಾಶ್ರೀ
ಈ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಮುದ್ರೆ ಒತ್ತಿದ್ದು, ಶೀಘ್ರದಲ್ಲೇ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ
crime
ರೆಖ್ಯದಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ
- ರೆಖ್ಯದ ಮುಚ್ಚಿರಡ್ಡ ಎಂಬಲ್ಲಿ ಘಟನೆ
- ದಾರಿಯಲ್ಲಿ ರೈನ್ಕೋಟ್, ಆನೆ ಹೆಜ್ಜೆ ಪತ್ತೆ
- ಕಣಿವೆಯಲ್ಲಿ ಸಿಕ್ಕ ಮೃತದೇಹ
ನೆಲ್ಯಾಡಿ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ದಿನಗೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ನಡೆದಿದೆ.
ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಮೃತಪಟ್ಟವರು.
ನೆಡೆಯದ್ದೇನು?: ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಾತ್ರಿಯಾದರೂ ಅವರು ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಅವರು ಧರಿಸಿದ್ದರೆನ್ನಲಾದ ಪ್ಲಾಸ್ಟಿಕ್ ರೈನ್ಕೋಟ್ ದಾರಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
ಅಷ್ಟೇ ಅಲ್ಲದೆ, ಅದರ ಪಕ್ಕದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳೂ ಪತ್ತೆಯಾಗಿದ್ದರಿಂದ ಆನೆ ದಾಳಿ ನಡೆಸಿರುವ ಅನುಮಾನ ಬಲಗೊಂಡಿತ್ತು. ಬಳಿಕ ಸ್ಥಳೀಯರು ಅರಣ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಶೋಧ ಮುಂದುವರಿಸಿದಾಗ ಸಮೀಪದ ಕಣಿವೆಯಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ.
ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಭಾನುವಾರ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಹಾಗೂ ಸದಸ್ಯರು, ಸ್ಥಳೀಯ ಸಾರ್ವಜನಿಕರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಸ್ಥಳದಲ್ಲೇ ಮೃತದೇಹದ ಮಹಜರು ನಡೆಸಿದ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅರಣ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
