Uncategorized
29ವರ್ಷಗಳ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ ದಂಡುಪಾಳ್ಯ ಗ್ಯಾಂಗ್ ನ ಸದಸ್ಯ ಬಂಧನ.
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/IMG-20260122-WA0092-1000x600.jpg&description=29ವರ್ಷಗಳ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ ದಂಡುಪಾಳ್ಯ ಗ್ಯಾಂಗ್ ನ ಸದಸ್ಯ ಬಂಧನ.', 'pinterestShare', 'width=750,height=350'); return false;" title="Pin This Post">
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಕಲಂ 460, 396, 400 ಐಪಿಸಿ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಪ್ರಾಯ: 55 ವರ್ಷ, ತಂದೆ: ವೆಂಕಟಪ್ಪ ವಾಸ: ದಂಡುಪಾಳ್ಯ ಗ್ರಾಮ, ಹೊಸಕೋಟೆ ತಾಲೂಕು. ಬೆಂಗಳೂರು ಜಿಲ್ಲೆ. ಹಾಲಿ ವಾಸ: ವಿಜಯನಗರ ಕಾಲೋನಿ, ಬಿ.ಕೆ ಪಳ್ಳಿ, ಮದನಪಳ್ಳಿ, ಅನ್ನಮಯ್ಯ ಜಿಲ್ಲೆ, ಆಂದ್ರಪ್ರದೇಶ ಈತನನ್ನು ಆಂದ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳೆ ಎಂಬಲ್ಲಿ ಉರ್ವ ಠಾಣಾ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
29ವರ್ಷ ಹಿಂದಿನ ಕೊಲೆ ಪಾತಕಿ ಚಿಕ್ಕ ಹನುಮ..
ದಿನಾಂಕ: 11-10-1997 ರಂದು ಮಧ್ಯರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರಗಳಾದ 1) ದೊಡ್ಡ ಹನುಮ @ ಹನುಮ 2)ವೆಂಕಟೇಶ @ ಚಂದ್ರ 3) ಮುನಿಕೃಷ್ಣ @ ಕೃಷ್ಣ ಮತ್ತು 4) ನಲ್ಲತಿಮ್ಮ @ ತಿಮ್ಮ5). ಕೃಷ್ಣ @ ದಂಡುಪಾಳ್ಯ ಕೃಷ್ಣ @ ನಾಗರಾಜ 6) ಚಿಕ್ಕ ಹನುಮ 7) ಕೃಷ್ಣಾಡು @ ಕೃಷ್ಣ 8) ವೆಂಕಟೇಶ್ @ ರಮೇಶ್ ಇವರುಗಳು ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ, ಪ್ರಾಯ 80 ವರ್ಷ ಹಾಗೂ ರಂಜಿತ್ ವೇಗಸ್, ಪ್ರಾಯ 19 ವರ್ಷ ರವರನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುತ್ತಾರೆ. ಸದ್ರಿ ಆಪಾದಿತರುಗಳ ಮೇಲೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ಮಾನ್ಯ ನಾಯಾಲಯಕ್ಕೆ ಸಲ್ಲಿಸಿದಂತೆ ಘನ 34 ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ರವರ ಎಸ್.ಸಿ ನಂ. 728/2010 ರಂತೆ ಸದ್ರಿ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಇತರೆ 5 ಆಪಾದಿತರು ದೊಡ್ಡ ಹನುಮ @ ಹನುಮ ಸೇರಿ ಘನ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿರುತ್ತದೆ.
ಈ ಪ್ರಕರಣದಲ್ಲಿ ಆಪಾಧಿತನಾದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ತನ್ನ ಬುಧ್ಧಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ದಸ್ತಗಿರಿಗೆ ಸಿಗದೇ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂದ್ರಪ್ರದೇಶ ರಾಜ್ಯದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈತನ ಮೇಲೆ ಮಂಗಳೂರು ಮಾನ್ಯ JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ ,ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. .
ಈ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂಧರ್ ಹೆಚ್.ಎಮ್ , ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್.ಮಂಜುಳಾ ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ , ಹರೀಶ್ ರವರು ಶ್ರಮಿಸಿರುತ್ತಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಾಂಸೆಯನ್ನು ವ್ಯಕ್ತ ಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ&ಐಜಿಪಿ ರವರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
government
ಕುಳ ಕಂದಾಯ ಕಚೇರಿ ವಿವಾದ: ದಲ್ಲಾಳಿ ಆರೋಪಕ್ಕೆ ಹರಿನಾಮ ಸಂಕೀರ್ತನಕಾರ ಧರಣ್ ಮಾಣಿ ಸ್ಪಷ್ಟನೆ
ಮಾಣಿ: ಕುಳ ಗ್ರಾಮದ ಕಂದಾಯ ಕಚೇರಿಯಲ್ಲಿ ತಾವು ಯಾವುದೇ ದಲ್ಲಾಳಿ ಕೆಲಸ ಮಾಡಿಲ್ಲ, ಕೇವಲ ಗೆಳೆತನ ಹಾಗೂ ಗ್ರಾಮದ ಕೆಲಸದ ನಿಮಿತ್ತ ಅಲ್ಲಿಗೆ ಹೋಗುತ್ತಿದ್ದೆ ಎಂದು ಹರಿನಾಮ ಸಂಕೀರ್ತನಕಾರ ಮತ್ತು ರಾಜ್ಯ ಮಟ್ಟದ ಕಲಾವಿದ ಎಲ್. ಕೆ. ಧರಣ್ ಮಾಣಿ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಕುಳ ಕಂದಾಯ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯಲ್ಲಿ ತಮ್ಮ ಹೆಸರನ್ನು ಬಳಸಿ ದಲ್ಲಾಳಿ ಎಂದು ಬಿಂಬಿಸಿರುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಯ ಹಿನ್ನೆಲೆ ಮತ್ತು ಸ್ಪಷ್ಟನೆ: “ನಾನು ಕಳೆದ 30 ವರ್ಷಗಳಿಂದ ರಾಜ್ಯ ಮಟ್ಟದ ಕಲಾವಿದನಾಗಿ ಗುರುತಿಸಿಕೊಂಡು ಗೌರವಯುತ ಜೀವನ ನಡೆಸುತ್ತಿದ್ದೇನೆ. ಕಳೆದ 6 ವರ್ಷಗಳಿಂದ ಕುಳ ಗ್ರಾಮದ ಬೆಳೆ ಸಮೀಕ್ಷೆಯನ್ನು ಸಿದ್ಧಪಡಿಸಿ ಗ್ರಾಮ ಕರಣಿಕರಿಗೆ ನೀಡುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೆ. ಈ ಕಾರಣದಿಂದಾಗಿ ಅಲ್ಲಿನ ಗ್ರಾಮ ಕರಣಿಕರು ಹಾಗೂ ಗ್ರಾಮ ಸೇವಕರ ಪರಿಚಯ ಮತ್ತು ಆತ್ಮೀಯತೆ ಇರುವುದು ನಿಜ. ಆದರೆ, ನಾನು ಅಲ್ಲಿ ಯಾವುದೇ ರೀತಿಯ ದಲ್ಲಾಳಿ ಅಥವಾ ಬ್ರೋಕರ್ ಕೆಲಸ ಮಾಡಿಲ್ಲ” ಎಂದು ಧರಣ್ ಮಾಣಿ ತಿಳಿಸಿದ್ದಾರೆ.
“ಸರಕಾರಿ ಉದ್ಯೋಗಿ ರಾಘವ ಅವರಿಂದ ತೊಂದರೆಗೊಳಗಾದ ಸಾರ್ವಜನಿಕರ ಪರವಾಗಿ ಸಚಿನ್ ಎಂಬುವವರು ಫೋಟೋ ತೆಗೆದು ಮೇಲಾಧಿಕಾರಿಗಳಿಗೆ ಹಾಗೂ ಮಾಧ್ಯಮಗಳಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ನಾನು ಕಚೇರಿಯಲ್ಲಿದ್ದದ್ದು ನಿಜ. ರಾಘವ ಅವರ ಪರಿಚಯದ ಹಿನ್ನೆಲೆಯಲ್ಲಿ ನಾನು ಅಲ್ಲಿಗೆ ಹೋಗುತ್ತಿದ್ದೆ. ಆದರೆ ದೂರುದಾರ ಸಚಿನ್ ಮತ್ತು ರಾಘವ ಅವರು ಸಮೀಪದ ಬಂಧುಗಳಾಗಿದ್ದು, ಅವರೊಳಗೆ ವೈಯಕ್ತಿಕ ವೈಷಮ್ಯಕ್ಕೆ ಅವರು ನೀಡಿದ ದೂರಿನಲ್ಲಿ ನನ್ನ ಹೆಸರನ್ನೂ ಸೇರಿಸಿ, ನಾನು ದಲ್ಲಾಳಿ ಕೆಲಸ ಮಾಡುತ್ತಿದ್ದೇನೆ ಎಂದು ಸುಳ್ಳು ಆರೋಪ ಮಾಡಿರುವುದು ತಮಗೆ ತೀವ್ರ ಬೇಸರ ತಂದಿದೆ” ಎಂದು ಅವರು ಹೇಳಿದ್ದಾರೆ.
ದೂರಿಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ
ಕುಳ ಗ್ರಾಮ ಆಡಳಿತಾಧಿಕಾರಿ ಕಛೇರಿಯೊಳಗೆ ಖಾಸಗಿ ವ್ಯಕ್ತಿ ಹಾಗೂ ಗ್ರಾಮ ಸಹಾಯಕ ಜೊತೆಯಾಗಿ ಗ್ರಾಮಸ್ಥರಿಗೆ ಹಿಂಸೆ, ಕಿರುಕುಳ ಹಾಗೂ ಹಣಕ್ಕಾಗಿ ಸತಾಯಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಸಚಿನ್ ಎಂಬವರು ದೂರು ನೀಡಿದ್ದರು. ಬಂಟ್ವಾಳ ತಹಶೀಲ್ದಾರ್, ಸಹಾಯಕ ಕಮಿಷನರ್, ದ. ಕ.ಜಿಲ್ಲಾಧಿಕಾರಿ, ಕಂದಾಯ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಿಗೆ ನೀಡಿದ ದೂರಿಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದ್ದು, ಇದರ ಬೆನ್ನಲ್ಲೇ ಧರಣ್ ಮಾಣಿ ನನಗೂ ಈ ದೂರಿಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕರ ಅನುಮಾನ & ಧರಣ್ ಮಾಣಿ ನಿರ್ಧಾರ: ಗ್ರಾಮಸೇವಕನ ಜೊತೆ ಗೆಳೆತನ ಮಾಡಿದ್ದಕ್ಕೆ ಸಾರ್ವಜನಿಕರು ಧರಣ್ ಮಾಣಿ ಅವರ ಮೇಲೂ ಅನುಮಾನ ವ್ಯಕ್ತಪಡಿಸುವಂತಾಗಿತ್ತು. ಈ ಕುರಿತು ಮಾತನಾಡಿದ ಅವರು, “ರಾಘವ ಅವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಇವೆ ಎಂದು ನನಗೆ ಮನವರಿಕೆಯಾದ ತಕ್ಷಣವೇ, ನಾನು ಇನ್ನು ಮುಂದೆ ಆ ಕಚೇರಿಗೆ ಹೋಗುವುದಿಲ್ಲ ಮತ್ತು ಅಂತಹ ವ್ಯಕ್ತಿಗಳ ಸಂಪರ್ಕದಿಂದ ದೂರವಿರಲು ತೀರ್ಮಾನಿಸಿದ್ದೇನೆ. ಸಾರ್ವಜನಿಕರಲ್ಲಿ ನನ್ನ ಬಗ್ಗೆ ತಪ್ಪು ಅಭಿಪ್ರಾಯ ಮೂಡುತ್ತಿರುವುದು ವಿಷಾದನೀಯ. ನಾನು ನನ್ನ ಗೌರವಯುತ ಕಲಾ ಸೇವೆಯಲ್ಲಿಯೇ ಮುಂದುವರಿಯಲಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.



crime
ಕಡಬ: ಕಾಣೆಯಾಗಿದ್ದ ನವವಿವಾಹಿತೆ ಶಿವಮೊಗ್ಗದ ತವರಿನಲ್ಲಿ ಪ್ರತ್ಯಕ್ಷ; ನಿಟ್ಟುಸಿರು ಬಿಟ್ಟ ಕುಟುಂಬಸ್ಥರು!
ಕಡಬ: ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದಿಂದ ಚಿನ್ನಾಭರಣಗಳ ಸಮೇತ ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆ ಕೊನೆಗೂ ಶಿವಮೊಗ್ಗದ ತನ್ನ ತವರು ಮನೆಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಆತಂಕದಲ್ಲಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನೀರಾರಿ ಮನೆ ನಿವಾಸಿ ಮೊಹಮ್ಮದ್ ಆಶಿಕ್ (29) ಎಂಬವರ ಪತ್ನಿ ಆರ್ ಫೈನ್ ಮಹ್ತಾಬ್ (18) ಕಾಣೆಯಾದ ಯುವತಿ. ಈಕೆ ಜೂನ್ 7ರ ನಸುಕಿನ ಜಾವ ಗಂಡನ ಮನೆಯಿಂದ ಯಾರಿಗೂ ತಿಳಿಸದೆ ದಿಢೀರ್ ನಾಪತ್ತೆಯಾಗಿದ್ದಳು.

ಮೇ 31 ರಂದು ನಡೆದಿತ್ತು ನಿಕಾಹ್:
ಎಫ್.ಐ.ಆರ್. ವಿವರಗಳ ಪ್ರಕಾರ, ಮೊಹಮ್ಮದ್ ಆಶಿಕ್ ಅವರಿಗೂ, ಶಿವಮೊಗ್ಗದ ಕೆ.ಆರ್. ಪುರಂ ರೋಡ್ ನಿವಾಸಿ ಶೇಖ್ ಫಾಯಾಜ್ ಹಮೀದ್ ಅವರ ಮಗಳು ಆರ್ ಫೈನ್ ಮಹ್ತಾಬ್ ಅವರಿಗೂ ಕಳೆದ ಮೇ 31 ರಂದು ಭಾನುವಾರ ಶಿವಮೊಗ್ಗದ ರಿಜ್ವಾನ್ ಮಸೀದಿಯ ಖಾಜಿಗಳ ಸಮಕ್ಷಮದಲ್ಲಿ ಮುಸ್ಲಿಂ ಧಾರ್ಮಿಕ ವಿಧಿವಿಧಾನದಂತೆ ವಿವಾಹ ನಡೆದಿತ್ತು. ಜೂನ್ 2 ರಂದು ಕಲ್ಲುಗುಡ್ಡೆಯ ಜೆ.ಜೆ. ಪ್ಲಾಜಾದಲ್ಲಿ ಮದುವೆ ಔತಣಕೂಟ (ಡಿನ್ನರ್) ಏರ್ಪಡಿಸಲಾಗಿತ್ತು. ಬಳಿಕ ಜೂನ್ 5 ರಂದು ತಂದೆ-ತಾಯಿ ಮಹ್ತಾಬ್ಳನ್ನು ನೂಜಿಬಾಳ್ತಿಲದಲ್ಲಿರುವ ಗಂಡನ ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದರು.
ಗಂಡನ ಮೊಬೈಲ್ನಲ್ಲಿ ಅಲಾರಾಂ ಸೆಟ್ ಮಾಡಿ ಎಸ್ಕೇಪ್!
ಜೂನ್ 6 ರಂದು ರಾತ್ರಿ ಮನೆಯವರೆಲ್ಲರೂ ಒಟ್ಟಿಗೆ ಊಟ ಮುಗಿಸಿ 10 ಗಂಟೆಗೆ ಮಲಗಿದ್ದರು. ಮಧ್ಯರಾತ್ರಿ 12 ಗಂಟೆಗೆ ಪತಿ ಆಶಿಕ್ ಅವರಿಗೆ ಎಚ್ಚರವಾದಾಗಲೂ ಮಹ್ತಾಬ್ ಪಕ್ಕದಲ್ಲೇ ಮಲಗಿದ್ದಳು. ಆದರೆ, ಜೂನ್ 7ರ ನಸುಕಿನ ಜಾವ 2.00 ಗಂಟೆಗೆ ಆಶಿಕ್ ಅವರ ಮೊಬೈಲ್ನಲ್ಲಿ ದಿಢೀರನೆ ಅಲಾರಾಂ ರಿಂಗಣಿಸಿದೆ.

ಅಲಾರಾಂ ಶಬ್ದಕ್ಕೆ ಎದ್ದು ನೋಡಿದ ಆಶಿಕ್ ಅವರಿಗೆ ತೀವ್ರ ಆಘಾತ ಕಾದಿತ್ತು. ಪಕ್ಕದಲ್ಲಿ ಮಲಗಿದ್ದ ಪತ್ನಿ ಮಹ್ತಾಬ್ ಅಲ್ಲಿರಲಿಲ್ಲ! ಗಾಬರಿಗೊಂಡ ಆಶಿಕ್ ಮನೆಯ ಒಳಗೆ, ಹೊರಗೆ ಹಾಗೂ ಪಕ್ಕದಲ್ಲೇ ಇರುವ ಅಣ್ಣನ ಮನೆಯಲ್ಲೂ ಹುಡುಕಾಡಿದ್ದಾರೆ. ಆದರೆ ಎಲ್ಲೂ ಆಕೆ ಪತ್ತೆಯಾಗಿರಲಿಲ್ಲ. ಅಚ್ಚರಿಯ ವಿಷಯವೆಂದರೆ, ತಾನು ಎದ್ದು ಹೋಗುವ ಮುನ್ನ ಪತಿಯ ಮೊಬೈಲ್ನಲ್ಲಿ ಆಕೆಯೇ ನಸುಕಿನ ಜಾವ 2 ಗಂಟೆಗೆ ಅಲಾರಾಂ ಸೆಟ್ ಮಾಡಿಟ್ಟು, ತನ್ನ ಮೈಮೇಲಿದ್ದ ಚಿನ್ನಾಭರಣಗಳ ಸಮೇತ ಯಾರಿಗೂ ತಿಳಿಯದಂತೆ ಮನೆಯಿಂದ ಜಾಗ ಖಾಲಿ ಮಾಡಿದ್ದಾಳೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ತವರು ಮನೆಯಲ್ಲಿ ಲ್ಯಾಂಡ್; ಫೈಲ್ ಕ್ಲೋಸ್ಗೆ ಕಡಬಕ್ಕೆ ಬರಬೇಕಷ್ಟೇ!
ಮಹತ್ವಾಕಾಂಕ್ಷಿ ಹುಡುಕಾಟದ ಬಳಿಕ, ತವರು ಮನೆಗೂ ಮಾಹಿತಿ ನೀಡಿ, ಪತಿ ಆಶಿಕ್ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆಯೇ, ಮಹ್ತಾಬ್ ಶಿವಮೊಗ್ಗದ ತನ್ನ ತವರು ಮನೆಗೆ ಸುರಕ್ಷಿತವಾಗಿ ಬಂದು ತಲುಪಿರುವ ಸಮಾಧಾನಕರ ಸುದ್ದಿ ಬಂದಿದೆ.
ಆದರೆ, ಮದುವೆಯಾದ ಕೇವಲ ವಾರದಲ್ಲೇ, ಅಷ್ಟು ನಸುಕಿನ ಜಾವ ಪತಿಯ ಮೊಬೈಲ್ನಲ್ಲಿ ತಾನೇ ಅಲಾರಾಂ ಇಟ್ಟು ಚಿನ್ನಾಭರಣಗಳೊಂದಿಗೆ ನಾಪತ್ತೆಯಾಗಲು ಅಸಲಿ ಕಾರಣವೇನು? ಎಂಬುದು ಇನ್ನು ನಿಗೂಢವಾಗಿದೆ. ಸದ್ಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದರಿಂದ, ಕಾನೂನಾತ್ಮಕ ತನಿಖೆಯ ಫೈಲ್ ಕ್ಲೋಸ್ ಮಾಡಲು ಯುವತಿಯನ್ನು ಕಡಬಕ್ಕೆ ಕರೆತರಬೇಕಾಗಿದ್ದು, ಪೊಲೀಸರ ವಿಚಾರಣೆಯ ಬಳಿಕವಷ್ಟೇ ಈ ಹೈಡ್ರಾಮಾದ ಹಿಂದಿನ ನೈಜ ಕಾರಣ ಬೆಳಕಿಗೆ ಬರಬೇಕಿದೆ



theft
ವಿಟ್ಲ ವ್ಯಾಪ್ತಿಯಲ್ಲಿ ಮತ್ತೆ ಬ್ಯಾಟರಿ ಕಳ್ಳರ ಅಟ್ಟಹಾಸ: ಒಂದೇ ರಾತ್ರಿ 4 ಲಾರಿಗಳ ಬ್ಯಾಟರಿ ಕಳ್ಳತನ!
ವಿಟ್ಲ: ಮಳೆಗಾಲ ಆರಂಭವಾಗುತ್ತಿದ್ದಂತೆ ರಾತ್ರಿ ಹೊತ್ತು ರಸ್ತೆಬದಿ ಹಾಗೂ ಮೈದಾನಗಳಲ್ಲಿ ನಿಲ್ಲಿಸುವ ವಾಹನಗಳ ಬ್ಯಾಟರಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುವ ಖದೀಮರ ಗ್ಯಾಂಗ್ ವಿಟ್ಲ ಪರಿಸರದಲ್ಲಿ ಮತ್ತೆ ಸಕ್ರಿಯವಾಗಿದೆ. ಭಾನುವಾರ ರಾತ್ರಿ ಒಂದೇ ದಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಪ್ರತ್ಯೇಕ ವಾಹನಗಳ ಬ್ಯಾಟರಿಗಳನ್ನು ಚೋರರು ಕದ್ದೊಯ್ದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಾಲೆತ್ತೂರು ಮತ್ತು ಕುಡ್ತಮುಗೇರಿನಲ್ಲಿ ರಾತ್ರಿ ಹೊತ್ತು ನಿಲ್ಲಿಸಿದ್ದ ಪಿಕಪ್ ವಾಹನಗಳ ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಇದೀಗ ಮತ್ತೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಅಳಕೆಮಜಲಿನಲ್ಲಿ ಎರಡು ಲಾರಿಗಳ ಬ್ಯಾಟರಿ ಕಳವು:
ಅಳಕೆಮಜಲು ಮಸೀದಿ ಆವರಣದ ಹೊರಗಡೆ ಎಂದಿನಂತೆ ಭಾನುವಾರ ರಾತ್ರಿ ನಿಲ್ಲಿಸಲಾಗಿದ್ದ ಎರಡು ಲಾರಿಗಳ ಬ್ಯಾಟರಿಗಳನ್ನು ಚೋರರು ಎಗರಿಸಿದ್ದಾರೆ. ಪ್ರವೀಣ್ ಶೆಟ್ಟಿ ಎಂಬವರಿಗೆ ಸೇರಿದ ಗೂಡ್ಸ್ ಲಾರಿ ಹಾಗೂ ಸೋನಾ ಸಾಗರ್ ಇಬ್ರಾಹಿಂ ಎಂಬವರ ಲಾರಿಗಳ ಬ್ಯಾಟರಿಗಳು ಕಳವಾಗಿವೆ. ಸೋಮವಾರ ಬೆಳಗ್ಗೆ ಚಾಲಕರು ಬಂದು ನೋಡಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಮತ್ತೆರಡು ಕಡೆ ಕಳ್ಳತನ:
ಇದೇ ರಾತ್ರಿ ಅಳಕೆಮಜಲು ಜಂಕ್ಷನ್ನಿಂದ ಸ್ವಲ್ಪ ಮುಂದಕ್ಕೆ ನಿನ್ನಿಕಲ್ಲು ಸಂಪರ್ಕಿಸುವ ಅಡ್ಡರಸ್ತೆ ಬಳಿ ನಿಲ್ಲಿಸಲಾಗಿದ್ದ ಕೋಳಿ ಸಾಗಾಟದ ಲಾರಿಯಿಂದಲೂ ಬ್ಯಾಟರಿಯನ್ನು ಕದಿಯಲಾಗಿದೆ. ಇದರೊಂದಿಗೆ ಉಕ್ಕುಡ ಚೆಕ್ಪೋಸ್ಟ್ ಸಮೀಪದ ಮಸೀದಿ ಬಳಿಯ ಮೈದಾನದಲ್ಲಿ ನಿಲ್ಲಿಸಿದ್ದ ಮತ್ತೊಂದು ಲಾರಿಯ ಬ್ಯಾಟರಿಯನ್ನೂ ಖದೀಮರು ಹೊತ್ತೊಯ್ದಿದ್ದಾರೆ.
ನಾಲ್ಕು ತಿಂಗಳ ಹಿಂದೆಯೂ ನಡೆದಿತ್ತು ಸರಣಿ ಕಳ್ಳತನ:
ವಿಟ್ಲ ಪರಿಸರದಲ್ಲಿ ಬ್ಯಾಟರಿ ಕಳ್ಳರ ಕಾಟ ಇದೇ ಮೊದಲಲ್ಲ. ಇನ್ನು ಸುಮಾರು 4 ತಿಂಗಳ ಹಿಂದೆಯೂ (ಫೆಬ್ರವರಿ ತಿಂಗಳಲ್ಲಿ) ಇದೇ ರೀತಿ ಕಳ್ಳರು ಸರಣಿ ಕಳ್ಳತನ ನಡೆಸಿ ಅಟ್ಟಹಾಸ ಮೆರೆದಿದ್ದರು. ಕೇವಲ 3 ದಿನಗಳ ಅವಧಿಯಲ್ಲಿ ವಿಟ್ಲದ ಕಲ್ಯಾಣಿ ರಸ್ತೆ, ಜಯನಗರ, ಒಕ್ಕೆತ್ತೂರು ಸೇರಿದಂತೆ ವಿಟ್ಲ ಕಸಬಾ ಮತ್ತು ಪೆರುವಾಯಿ ಪರಿಸರದಲ್ಲಿ ನಿಲ್ಲಿಸಲಾಗಿದ್ದ ಒಟ್ಟು 9 ವಾಹನಗಳ ಬ್ಯಾಟರಿಗಳನ್ನು ಕಳ್ಳರು ಲೂಟಿ ಮಾಡಿದ್ದರು. ಆಗಲೂ ಲಾರಿ, ಟಿಪ್ಪರ್, ಪಿಕಪ್ ಹಾಗೂ ಜೆಸಿಬಿ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡಲಾಗಿತ್ತು.
ಇದೀಗ ಮಳೆಗಾಲ ಆರಂಭವಾಗುತ್ತಿದ್ದಂತೆ ಮತ್ತೆ ಕಳ್ಳರು ಅದೇ ಚಾಳಿಯನ್ನು ಮುಂದುವರಿಸಿರುವುದು ವಾಹನ ಮಾಲೀಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ – ಪೊಲೀಸರಿಗೆ ದೂರು:
ವಿಟ್ಲ ವ್ಯಾಪ್ತಿಯಲ್ಲಿ ಭಾನುವಾರ ಒಂದೇ ರಾತ್ರಿ ಒಟ್ಟು ನಾಲ್ಕು ವಾಹನಗಳ ಬ್ಯಾಟರಿ ಕಳ್ಳತನ ನಡೆದಿರುವ ಬಗ್ಗೆ ಲಾರಿ ಚಾಲಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳ್ಳರ ಕರಾಮತ್ತು ಸ್ಥಳೀಯ ಸಿಸಿಟಿವಿ (CC Camera) ಕ್ಯಾಮರಾಗಳಲ್ಲಿ ದಾಖಲಾಗಿದ್ದು, ಪೊಲೀಸರು ಈ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.
ವಿಶೇಷ ಸೂಚನೆ (ವಾಹನ ಸವಾರರ ಗಮನಕ್ಕೆ): ಮಳೆಗಾಲದ ಕತ್ತಲನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವುದರಿಂದ, ವಾಹನ ಮಾಲೀಕರು ರಾತ್ರಿ ವೇಳೆ ಜನಸಂದಣಿ ಇರುವ ಅಥವಾ ಸಿ.ಸಿ. ಕ್ಯಾಮರಾ ನಿಗಾ ಇರುವ ಸುರಕ್ಷಿತ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸುವಂತೆ ವಿನಂತಿಸಲಾಗಿದೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
