crime
ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದ ವಿಟ್ಲ ಪಟ್ಟಣ ಪಂಚಾಯತ್..ಹಣ ಪಡೆದು ಏಳು ತಿಂಗಳಾದರೂ ಅವ್ಯವಸ್ಥೆ ಸರಿಪಡಿಸದೇ ಬೇಜವಾಬ್ದಾರಿ..ಕಾನೂನು ಹೋರಾಟಕ್ಕೆ ಮುಂದಾದ ಬಳಕೆದಾರರು..
ವಿಟ್ಲ : ಯಾವುದೇ ಇಲಾಖೆಗಳಲ್ಲಿ ಕೆಲಸ-ಕಾರ್ಯಗಳು ಜನಪರವಾಗಿ ನಡೆಯುತ್ತಿಲ್ಲ ಎಂದಾದರೆ ಆಡಳಿತದ/ಅಧಿಕಾರಿಗಳ ಬೇಜವಾಬ್ದಾರಿ/ಸೋಮಾರಿತನವನ್ನು ಪ್ರಶ್ನಿಸುವುದಕ್ಕಿಂತಲೂ ಮುಖ್ಯವಾಗಿ ಆಡಳಿತಕ್ಕೆ ಚಿವುಟಬೇಕಾದ ಜವಾಬ್ದಾರಿಯುತ ಮಾಧ್ಯಮಗಳು ಮತ್ತು ವಿರೋಧ ಪಕ್ಷಗಳು ಅಡ್ಜೆಸ್ಟ್ ಮೆಂಟ್ ಅಥವಾ ಗಾಢ ನಿದ್ದೆಯಲ್ಲಿವೆ ಎಂದು ಜನ ತಿಳಿಯಬೇಕಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ಕೂಡಾ ಅದೇ ಸಾಲಿನಲ್ಲಿದೆ ಎಂದರೆ ತಪ್ಪಾಗಲಾರದು.
ವಿಟ್ಲ ಪಟ್ಟಣ ಪಂಚಾಯತ್ ಒಳ್ಳೆಯ ಆಡಳಿತ ನೀಡುತ್ತಿದೆ ಎಂದು ಹೇಳಬೇಕಾದರೆ ಇಲ್ಲಿ ಹೋರಾಟದ ಮೂಲಕವೇ ಜನಪ್ರತಿನಿಧಿಯಾಗಿ ಗೌರವ, ಉನ್ನತ ಸ್ಥಾನಮಾನವನ್ನು ಪಡೆದ ಒಬ್ಬ ಉತ್ತಮ ಅಧ್ಯಕ್ಷರಿದ್ದಾರೆ. ನೇರ ನಡೆ ನುಡಿಯ ದಕ್ಷ ಚೀಫ್ ಆಫೀಸರಿದ್ದಾರೆ. ಆದರೆ ಇವರಿಗೆ ಚುರುಕು ಮುಟ್ಟಿಸಬೇಕಾದ ಜವಾಬ್ದಾರಿಯುತ ವಿರೋಧ ಪಕ್ಷಗಳು ಅದ್ಯಾಕೋ ತೆಪ್ಪಗಾಗಿರುವುದರಿಂದ ಜನರ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದಕ್ಕೆ ಒಂದು ಉತ್ತಮ ಉದಾಹರಣೆಯೊಂದಿಗೆ ಈ ವರದಿಯನ್ನು ಆರಂಭಿಸುತ್ತೇನೆ.
ಕುಡಿಯುವ ನೀರಿನ ವಿಚಾರ ಅಷ್ಟೇ..! ವಿಟ್ಲ ಪಟ್ಟಣ ಪಂಚಾಯತ್ ನ 2ನೇ ವಾರ್ಡಿನ ವಾಣಿಜ್ಯ ಸಂಕೀರ್ಣವೊಂದಕ್ಕೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂಬುದೇ ಯಕ್ಷಪ್ರಶ್ನೆಯಾಗಿದೆ. ವಿಟ್ಲದ ಬೊಬ್ಬೆಕೇರಿಯಲ್ಲಿರುವ ಲ್ಯಾಂಪ್ ಸೊಸೈಟಿಯ ವಾಣಿಜ್ಯ ಸಂಕೀರ್ಣ.
ಲ್ಯಾಂಪ್ ಸೊಸೈಟಿ, ಪಡಿತರ ಅಂಗಡಿ, ಎಲೆಕ್ಟ್ರಾನಿಕ್ಸ್ ಮಳಿಗೆ, ಮಾಧ್ಯಮ ಕಛೇರಿ ಸೇರಿದಂತೆ ಐದಾರು ಸಂಸ್ಥೆಗಳಿರುವ ಈ ಸಂಕೀರ್ಣಕ್ಕೆ ವಾಣಿಜ್ಯ ಬಳಕೆಯಡಿಯಲ್ಲಿ ನೀರು ಪಡೆದುಕೊಳ್ಳಲು ಪಟ್ಟಣ ಪಂಚಾಯತ್ಗೆ 2025ರ ಮೇ ತಿಂಗಳ 27ರಂದು ಲ್ಯಾಂಪ್ ಸೊಸೈಟಿಯ ಅಧ್ಯಕ್ಷರಾದ ಸುಂದರ ನಾಯ್ಕ ಅವರು ಒಂದು ವರ್ಷದ ಅವಧಿಯ ಮೊತ್ತವಾಗಿ 8400.00 ರೂಪಾಯಿ ನೀಡಿ ರಶೀದಿ ಪಡೆದಿದ್ದಾರೆ. ಸಂಪರ್ಕವಾದ ನಂತರ ಸಮರ್ಪಕವಾಗಿಯೇ ಬರುತ್ತಿದ್ದ ನೀರಿನ ವೇಗದ ಮಿತಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲೇ ಬಂದು ಯಾರ ಹೆದರಿಕೆಯೂ ಇಲ್ಲದೆ ಸೆಪ್ಟೆಂಬರ್ ತಿಂಗಳಿಗೆ ನಿಂತೆೇ ಬಿಟ್ಟಿದೆ. ಸಂಕೀರ್ಣದವರು ನೀರಿಲ್ಲದೆ ಪರದಾಡುತ್ತಿದ್ದಾರೆ. ನೀರಿನ ಬವಣೆಯನ್ನು ಪಂಚಾಯತ್ನ ವಾರ್ಡ್ ಸದಸ್ಯರಾದ ಹರೀಶ್ ಅವರಲ್ಲಿ ಮೌಖಿಕವಾಗಿ ಹಲವು ಬಾರಿ ಅಲವತ್ತುಕೊಂಡಾಗ ಇಂದು ನೀರಿನ ಸಮಸ್ಯೆ ಸರಿಯಾಗುತ್ತದೆ, ನಾಳೆ ಬಗೆಹರಿಯಬಹುದು ಎಂದು ಅಜ್ಜಿ ಕಥೆ ಹೇಳುತ್ತಾ ಅಲ್ಲಿಂದ ಇಲ್ಲಿಂದ ಅಂತ ನೀರು ತಂದು ಶೇಖರಿಸಿಕೊಂಡು ದಿನ ಕಳೆಯುತ್ತಿದ್ದಾರೆ. ಆದರೆ ಇವರ ಸಮಸ್ಯೆಗೆ ಸದಸ್ಯರಾಗಲೀ, ಸಿಬ್ಬಂದಿಗಳಾಗಲೀ, ವಿರೋಧ ಪಕ್ಷವಾಗಲೀ ಸ್ಪಂದಿಸದೇ ತಮ್ಮ ಮೌಖಿಕ ನೋವಿಗೆ ಗಾಢ ಮೌನವಾಗಿ ನೀರಿನ ಕೊಳವೆಗಳು ಅದಾಗಲೇ ಒಣಗಿ ಹೋಗಿತ್ತು. ನಂತರ ದಿನಾಂಕ 2025ರ ನವೆಂಬರ್ 11ರಂದು ಲ್ಯಾಂಪ್ ಸೊಸೈಟಿಯ ಅಧ್ಯಕ್ಷರು ಪಂಚಾಯತ್ ಅಧ್ಯಕ್ಷರು / ಮುಖ್ಯಾಧಿಕಾರಿಗಳಿಗೆ ದೂರು ಅರ್ಜಿ ನೀಡಿದರು.

ಈ ದೂರು ಅರ್ಜಿಯಲ್ಲಿ ವಿಟ್ಲ ಪಟ್ಟಣ ಪಂಚಾಯಿತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 2ರಲ್ಲಿ ಕಾರ್ಯನಿರ್ವಹಿಸುತ್ತಿರುವ ಲ್ಯಾಂಪ್ ಸೊಸೈಟಿಯಲ್ಲಿ ವಾಣಿಜ್ಯ ಬಳಕೆಗೆ ಪಡೆದಿರುವ ನೀರು ಸರಬರಾಜು ಕಳೆದ ಒಂದುವರೆ ತಿಂಗಳಿನಿoದ ವ್ಯತ್ಯಯ ಕಂಡು ಬಂದಿದ್ದು, ಈ ಬಗ್ಗೆ ಸಾಕಷ್ಟು ಬಾರಿ ಎರಡನೇ ವಾರ್ಡ್ ಸದಸ್ಯರಿಗೆ ಮತ್ತು ಸಿಬ್ಬಂದಿಯ ಗಮನಕ್ಕೆ ತಂದರೂ ಈ ಬಗ್ಗೆ ಯಾವುದೇ ರೀತಿಯ ದುರಸ್ತಿ ಕಾರ್ಯ ಕೈಗೊಂಡಿರುವುದಿಲ್ಲ. ಆದ್ದರಿಂದ ಈ ಎಲ್ಲಾ ಸಮಸ್ಯೆಗಳ ಬಗ್ಗೆ ತಾವು ಗಮನಹರಿಸಿ ಶೀಘ್ರವಾಗಿ ಪರಿಹರಿಸಿ ಕೊಡುವಂತೆ ವಿನಂತಿಸಿಕೊoಡಿದ್ದರು.
ಈಗ ದೂರು ನೀಡಿ 2 ತಿಂಗಳುಗಳೇ ಕಳೆದರೂ ಕಾಟಾಚಾರಕ್ಕಾದರೂ ಒಮ್ಮೆಯೂ ನೀರು ಭರ್ತಿಯಾಗಿಲ್ಲ. ಹನಿಹನಿ ತೊಟ್ಟಿಕ್ಕುವ ನೀರು ಯಾವ ಕಾಲಕ್ಕೂ ಟ್ಯಾಂಕಿ ತುಂಬಬಹುದೇ ?ಅಂತೂ ನೀರು ಬಂದೇ ಇಲ್ಲ ಅನ್ನಬಹುದು. ಆದರೆ ಈವರೆಗೂ ಈ ಬಗ್ಗೆ ಯಾವುದೇ ತನಿಖೆ ಅಥವಾ ಸರಿಪಡಿಸುವ ಕ್ರಮಗಳು ನಡೆದಿಲ್ಲ. ಇದರಿಂದಾಗಿ ವಾಣಿಜ್ಯ ಬಳಕೆಗೆ ನೀರಿಲ್ಲದೆ ಸಂಕೀರ್ಣದ ದೈನಂದಿನ ಚಟುವಟಿಕೆಗಳಿಗೆ ತುಂಬಾ ತೊಂದರೆಯಾಗಿದೆ.

ಮೂಲಭೂತ ಸೌಕರ್ಯವಾದ ನೀರಿನ ವ್ಯವಸ್ಥೆಯನ್ನು ಇಪ್ಪತ್ತನಾಲ್ಕು ಗಂಟೆಯೊಳಗೆ ಸ್ಥಳೀಯ ಆಡಳಿತ ಸಂಸ್ಥೆಗಳು ಕಲ್ಪಿಸಬೇಕೆಂಬ ಉಚ್ಚ ನ್ಯಾಯಾಲಯದ ಆದೇಶಗಳನ್ನೂ ಈವರೆಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು/ಆಡಳಿತ ತಿಳಿದಿಲ್ಲವೇ.?
ಮೂರು ದಿನಗಳೊಳಗೆ ಪಟ್ಟಣ ಪಂಚಾಯತ್ ಕಡೆಯಿಂದ ನೀರಿನ ಸಮಸ್ಯೆ ಪರಿಹಾರವಾಗಿಲ್ಲ ಎಂದರೆ ಪಂಚಾಯತ್ ಮಟ್ಟದಲ್ಲಿ ಸ್ಪಂದನೆ ಸಿಗದಿದ್ದರೆ, ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಅಥವಾ ಆನ್ಲೈನ್ ಮೂಲಕ ‘ಜನಸೇವಕ’ ಅಥವಾ ‘ಇ-ಸ್ಪಂದನ’ ಪೋರ್ಟಲ್ನಲ್ಲಿ ದೂರು ದಾಖಲಿಸಬಹುದು ಎಂಬ ಮಾಹಿತಿಯೂ ಇದೆ.
ಆದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಈ ರೀತಿಯಾಗಿ ವರ್ತಿಸಿದರೆ ಹೇಗೆ ? ತಾವು ಜನಸೇವಕರಾಗಿ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗೂ ಸ್ಪಂದಿಸಬೇಕೆo ಬ ಕನಿಷ್ಟ ಜ್ಞಾನವು ಇಲ್ಲದಾಯಿತೇ ? ಒಂದು ವರ್ಷದ ಪೂರ್ತಿ ನೀರಿನ ಬಿಲ್ಲ್ 8400 ನ್ನು ಜಮಾ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿರುವುದೆಂದರೆ ಇದೇನಾ ? ನಿಮ್ಮಲ್ಲಿ ಕೆಲಸ ಮಾಡಿಸಿಕೊಳ್ಳಬೇಕಾದರೆ ಯಾರ ಪ್ರಭಾವವನ್ನು ಬಳಸಿಕೊಳ್ಳಬೇಕು ಎಂಬುದನ್ನಾದರೂ ಹೇಳಬಾರದೇ.? ಜನರ ಸಮಸ್ಯೆಗಳ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ , ತಾತ್ಸಾರವೇಕೆ ಎಂಬುದು ಅರ್ಥವಾಗುತ್ತಿಲ್ಲ.
crime
ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು
ಆನ್ ಲೈನ್ ಪ್ಲಾಟ್ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.
Belthangady
ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ; ಬಯಲಾದ ನಿಜಾಂಶ
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದ್ದು, ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದರ ಮೂಲಕ ಪ್ರಕರಣದ ನಿಜಾಂಶ ಬಯಲಾಗಿದೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದು, ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರುತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ.
ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿತ್ತು.ಕೊನೆಗೂ ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಬಯಲಾಗಿದೆ.
Belthangady
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರಂತೆ !

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ.

ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿದೆ.
ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಜನತೆಗೆ ಸತ್ಯಾಂಶ ತಿಳಿಸಿ ಆತಂಕ ದೂರ ಮಾಡುವ ಉದ್ದೇಶಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾ ಎಸ್ಪಿಯವರ ಅಧಿಕೃತ ಹೇಳಿಕೆಗಾಗಿ ಕಾಯುತ್ತಿದ್ದಾರೆ.
ರಾಜಸ್ಥಾನದ ಘಟನೆ: ರಾಜಸ್ಥಾನದ ಬಿಕನೇರ್ನಲ್ಲಿ 10ನೇ ತರಗತಿಯ ಹುಡುಗಿಯೊಬ್ಬಳು ಶಾಲೆಗೆ ಹೋಗಲು ಇಷ್ಟವಿಲ್ಲದೆ ತನ್ನನ್ನು ಅಪಹರಿಸಲಾಗಿದೆ ಎಂದು ಸುಳ್ಳು ಕಥೆ ಸೃಷ್ಟಿಸಿದ್ದಳು. ಪೊಲೀಸರು ತನಿಖೆ ನಡೆಸಿದಾಗ ಆಕೆ ಸುಳ್ಳು ಹೇಳುತ್ತಿರುವುದು ಬಯಲಾಗಿತ್ತು.
ಬೆಂಗಳೂರು ಅಥವಾ ಇತರ ನಗರಗಳಲ್ಲಿ ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಮಕ್ಕಳು ತಮ್ಮ ಕೈ-ಕಾಲುಗಳನ್ನು ತಾವೇ ಕಟ್ಟಿಕೊಂಡು ಅಥವಾ ಬಾಯಿಗೆ ಪಟ್ಟಿ ಅಂಟಿಸಿಕೊಂಡು ಪೋಷಕರನ್ನು ಭಯಪಡಿಸುತ್ತಾರೆ.
ಇಂತಹ ಘಟನೆಗಳು ಬಹುತೇಕ ಪರೀಕ್ಷಾ ಸಮಯ ಹತ್ತಿರಕ್ಕೆ ಬರುವ ಸಂದರ್ಭಗಳಲ್ಲಿಯೇ ನಡೆಯುತ್ತಿದ್ದು, ಪರೀಕ್ಷೆ ಅಥವಾ ಹೋಮ್ ವರ್ಕ್ ಪೂರ್ಣಗೊಳಿಸದಿದ್ದಾಗ ಶಿಕ್ಷಕರಿಗೆ ಹೆದರಿ ಹೀಗೆ ಮಾಡುತ್ತಾರೆ. ಶಾಲೆಯಲ್ಲಿ ಕಿರುಕುಳ (Bullying): ಶಾಲೆಯಲ್ಲಿ ಬೇರೆ ವಿದ್ಯಾರ್ಥಿಗಳು ತೊಂದರೆ ನೀಡುತ್ತಿದ್ದರೆ ಅಲ್ಲಿಗೆ ಹೋಗದಿರಲು ಇಂತಹ ದಾರಿ ಹುಡುಕುತ್ತಾರೆ. ತಮ್ಮ ಮಕ್ಕಳು ಅತೀ ಹೆಚ್ಚು ಅಂಕಗಳನ್ನು ಪಡೆಯಬೇಕೆಂದು ಮಕ್ಕಳ ಮೇಲೆ ಪೋಷಕರು ನಿರಂತರವಾಗಿ ಒತ್ತಡ ಹೇರುತ್ತಿರುವಾಗ ಪೋಷಕರ ಅತಿಯಾದ ನಿರೀಕ್ಷೆಗಳು ಮಕ್ಕಳನ್ನು ಇಂತಹ ಹಂತಕ್ಕೆ ತಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯ ತನಿಖೆ ನಡೆಯಬೇಕಾಗಿದೆ.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

