Uncategorized
ಹತ್ತು ಕೋಟಿ ಎಟಿಎಂ ಹಣ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ದರೋಡೆ..1ಕೋಟಿ 37ಲಕ್ಷ ಹಣದೊಂದಿಗೆ ಹಿಟಾಚಿ ಪೇಮೆಂಟ್ ಸರ್ವಿಸಸ್ ಕಂಪನಿಯ ಸಿಬ್ಬಂದಿಗಳು ಎಸ್ಕೇಪ್..
ಬೆಂಗಳೂರಿನಲ್ಲಿ ಕಳೆದ ನವಂಬರ್ ನಲ್ಲಿ ಸಿಎಂಎಸ್ ಕ್ಯಾಶ್ ಮ್ಯಾನೇಜ್ ಮೆಂಟ್ ಕಂಪನಿಯ ಸಿಬ್ಬಂದಿಯಿಂದ 10 ಕೋಟಿ ರೂಪಾಯಿ ನಗದು ಹಣ ದರೋಡೆ ಮಾಡಲಾಗಿತ್ತು. ಇದೀಗ ಹಿಟಾಚಿ ಪೇಮೆಂಟ್ ಸರ್ವೀಸ್ ಪ್ರೈ.ಲಿಮಿಟೆಡ್ ಕಂಪನಿಯಿಂದ ಎಟಿಎಂ ಗೆ ತುಂಬುವ ಒಂದು ಕೋಟಿ ಮೂವತ್ತೇಳು ಲಕ್ಷ ರೂಪಾಯಿ ಹಣದ ಜೊತೆಗೆ ಕಂಪನಿಯ ಸಿಬ್ಬಂದಿಗಳೇ ಎಸ್ಕೇಪ್ ಆಗಿದ್ದಾರೆ. CMS ರಾಬರಿ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಹಣ ದರೋಡೆ ಪ್ರಕರಣ ನಡೆದಿದೆ.
ATM ಗೆ ಹಣ ತುಂಬಲು ಕೊಟ್ಟಿದ್ದ ಒಂದು ಕೋಟಿ ಮೂವತ್ತೇಳು ಲಕ್ಷ ನಗದು ಹಣವನ್ನು ಖದೀಮರು ದೋಚಿದ್ದಾರೆ. 2025 ರ ನವೆಂಬರ್ ನಲ್ಲಿ ನಡೆದಿದ್ದ CMS ವಾಹನ ದರೋಡೆ ಕೇಸ್ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು.

ಹಾಡಹಗಲೇ ನಡೆದಿದ್ದ ದರೋಡೆ ಪ್ರಕರಣವನ್ನ ಕಂಡು ಜನರು ಬೆಚ್ಚಿ ಬಿದ್ದಿದ್ದರು. CMS ಮಾಜಿ ಸಿಬ್ಬಂದಿ ಮತ್ತು ತಂಡದಿಂದ ಪಕ್ಕಾ ಪ್ಲಾನ್ ಮಾಡಿ ದರೋಡೆ ಮಾಡಲಾಗಿತ್ತು.
ಈಗ HITACHI ಎಂಬ ಮತ್ತೊಂದು ಕಂಪನಿಯ ಸಿಬ್ಬಂದಿಗಳು ಹಣ ದರೋಡೆ ಮಾಡಿಕೊಂಡು ಕಾಲಿಗೆ ಬುದ್ಧಿ ಹೇಳಿದ್ದಾರೆ. ಎರಡು ಪ್ರತ್ಯೇಕ ತಂಡಗಳು ಹಣ ದರೋಡೆ ಮಾಡಿವೆ ಎಂದು ಕಂಪೆನಿಯ ಅಧಿಕಾರಿ ದೂರಿನಲ್ಲಿ ವಿವರಿಸಿದ್ದಾರೆ. ಒಂದು ತಂಡ 50 ಲಕ್ಷ ಮತ್ತೊಂದು ತಂಡದಿಂದ 80 ಲಕ್ಷ ದರೋಡೆ ಮಾಡಿ ಪರಾರಿಯಾಗಿವೆ ಜನವರಿ 19ರಂದು ATMಗೆ ಹಣ ಹಾಕಲು ಕಂಪನಿಯ ಅಧಿಕಾರಿ ಮಿಥುನ್ ಸಿಬ್ಬಂದಿಗಳಿಗೆ ಸೂಚಿಸಿದ್ದರು. ಸದ್ಯ ಘಟನೆ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಗೆ ಮಿಥುನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
Uncategorized
ಕುಖ್ಯಾತ ಕಳವು ಪ್ರಕರಣದ ಆರೋಪಿ ಪೊಲೀಸ್ ಬಲೆಗೆಆರೋಪಿತನಿಂದ ನಗದು, ಬೈಕ್ ಹಾಗೂ ಮೊಬೈಲ್ ಫೋನ್ ವಶಕ್ಕೆ.ಕ್ಷೀಪ್ರ ಕಾರ್ಯಾಚರಣೆಯನ್ನು ನಡೆಸಿ ಆರೋಪಿತನ ಬಂಧನ.
ಮಂಗಳೂರು ಬಂದರ್ ನ ಜೆ.ಎಂ.ರೋಡ್ ನಲ್ಲಿ ಎರಡು ದಿನಗಳ ಹಿಂದೆ ನಡೆದ ನಗದು ಕಳವು ಪ್ರಕರಣದಲ್ಲಿ ಪ್ರಕರಣವನ್ನು ಭೇಧಿಸಿ, ಕ್ಷೀಪ್ರ ಕಾರ್ಯಾಚರಣೆಯನ್ನು ನಡೆಸಿದ ಪೊಲೀಸರು ಮಂಗಳೂರು ಕಸಬ ಬೆಂಗ್ರೆ ನಿವಾಸಿ ಆರೋಪಿ ಝಾಕೀರ್ ಹುಸೈನ್ @ ಜಾಕಿ ಹಾಲಿಃ ಜಪ್ಪು ಮಾರ್ಕೆಟ್ ಹತ್ತಿರ, ಗುಜ್ಜರೆ ಕೆರೆ ಜಪ್ಪು, ಮಂಗಳೂರು ಎಂಬಾತನನ್ನು ನಗರದ ಮಣ್ಣಗುಡ್ಡ ಜಂಕ್ಷನ್ ಬಳಿ ವಶಕ್ಕೆ ಪಡೆದು ಕಳವು ಮಾಡಿದ ನಗದು ಹಣ ರೂ. 70,000/ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನ, ಹಾಗೂ ಕಳ್ಳತನದ ಹಣದಿಂದ ಖರೀದಿಸಿದ ವಿವೋ ಕಂಪನಿಯ ಮೊಬೈಲ್ ಪೋನ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಮಹಮ್ಮದ್ ನಿಜಾಮುದ್ದಿನ್ ಎಂಬವರು ದಿನಾಂಕ 07/02/2026 ರಂದು ಶ್ರೀಧರ ಆಳ್ವರವರಿಗೆ ಸೇರಿದ ಅಡಿಕೆಯನ್ನು ಕೆಎ-19-AE-8663 ನೇ ಟಾಟಾ ಇಂಟ್ರಾ ವಾಹನದಲ್ಲಿ ತುಂಬಿಸಿಕೊಂಡು ಬೀಭಿ ಅಲಾಬಿಯಲ್ಲಿರುವ ಅಂಬಾರ ಸುಪಾರಿ ಅಂಗಡಿಗೆ ಮಾರಾಟ ಮಾಡಿ ಅವರು ನೀಡಿದ ರೂ 1,28740/- ನ್ನು ತನ್ನ ವಾಹನದ ಡ್ಯಾಶ್ ಬೋರ್ಡ್ ನಲ್ಲಿಟ್ಟು, ಸದ್ರಿ ವಾಹನವನ್ನು ಚಲಾಯಿಸಿಕೊಂಡು 10.30 ಗಂಟೆಗೆ ಬಂದರ್ ನ ಜೆ.ಎಂ.ರೋಡ್ ನಲ್ಲಿರುವ ಸದರ್ನ್ ಏಜೆನ್ಸಿಯಲ್ಲಿ ಎಸಿಪಿ ಶೀಟ್ ಖರೀದಿ ಮಾಡಿ ವಾಹನದಲ್ಲಿ ಕುಳಿತು ಡ್ಯಾಶ್ ಬೋರ್ಡ್ ತೆರೆದಿದ್ದು, ಅದರಲ್ಲಿಟ್ಟಿದ್ದ ರೂ 1,28740/- ಕಳ್ಳತನವಾಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ನಂಬ್ರ 18/2026 ಕಲಂ 303(2) ಬಿ.ಎನ್.ಎಸ್ ಯಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿ ಹಾಗೂ ಸೊತ್ತು ಪತ್ತೆಯ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಸಚಿನ್ ಕುಮಾರ್, ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಶೀತಲ್ ಅಲಗೂರು, ಎ,ಎಸ್,ಐ ಗಳಾದ ಶಶಿಧರ, ದಾಮೋದರ್ ಹಾಗೂ ಉತ್ತರ ಪೊಲೀಸ್ ಠಾಣಾ ಸಿಬ್ಬಂದಿಗಳನ್ನು ಒಳಗೊಂಡ ತಂಡ ದಿನಾಂಕ: 08.02.2026 ರಂದು ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿತನ ವಿರುದ್ದ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ರಾತ್ರಿ ಮನೆ ಕಳವು ಪ್ರಕರಣದಲ್ಲಿ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ವ್ಯಾಪ್ತಿಯಲ್ಲಿ ಅಟೋರಿಕ್ಷಾದ ಶೀಟ್ ನಲ್ಲಿ ಇಟ್ಟಿದ ನಗದು ಹಣವನ್ನು ಕಳವು ಮಾಡಿದ ಪ್ರಕರಣದ ಆರೋಪಿತನಾಗಿರುತ್ತಾನೆ.
crime
ಬಜ್ಪೆ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ..ಮೆಹಂದಿಗೆ ಹೋಗಿದ್ದಾಗ ಮನೆಗೆ ನುಗ್ಗಿ 23ಲಕ್ಷದ ಚಿನ್ನಾಭರಣ, 1,25,000ನಗದು ಹಣ ಎಗರಿಸಿದ ಖದೀಮರಿಬ್ಬರು ಅಂದರ್.
.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ಎಂಬವರು ತನ್ನ ಸಂಬಂಧಿಕರ ಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ಹೋಗಿದ್ದ ಸಂದರ್ಭ ರಾತ್ರಿ ಮನೆಗೆ ನುಗ್ಗಿ 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 1,25,000/- ರೂಪಾಯಿ ನಗದು ಹಣ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 176/2025 ಕಲಂ ಕಲಂ 331(3), 331(4), 305 BNS 2023 ರಂತೆ ಪ್ರಕರಣ ದಾಖಲಾಗಿತ್ತು.
ಬಜ್ಪೆ ಪೊಲೀಸರು ಆರೋಪಿತರ ಪತ್ತೆಗಾಗಿ ಬಲೆ ಬೀಸಿದಾಗ ಮೂಲತಃ ಕಳವಾರು ಚರ್ಚ್ ಬಳಿ ನಿವಾಸಿ, ಪ್ರಸ್ತುತ ಬಜ್ಪೆ ಗ್ರಾಮದ ಜರಿನಗರ ಬಾಡಿಗೆ ಮನೆಯಲ್ಲಿರುವ ಯೂಸುಫ್ ಪುತ್ರ ಅಬ್ದುಲ್ ನಾಸಿರ್@ಸಾಸಿರ್@ನಾಚಿ(31)ಎಂಬಾತ ಕಳ್ಳತನ ಮಾಡಿ ಬಳಿಕ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು.
ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು LOC ಹೊರಡಿಸಿದ್ದರು. ಅಬ್ದುಲ್ ನಾಸೀರ್ @ ನಾಚಿ ಎಂಬಾತನನ್ನು LOC ಯಲ್ಲಿ ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಪ್ರಕರಣದ ಪಿರ್ಯಾದಿದಾರರಾದ ಮೊಹಮ್ಮದ್ ಷರೀಫ್ ಎಂಬವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ತಾನು ಸೇರಿ ಈ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದನು.
ಆರೋಪಿತರಿಂದ ಸುಮಾರು 27 ಲಕ್ಷ ರೂಪಾಯಿ ಮೌಲ್ಯದ 222 ಗ್ರಾಂ ತೂಕದ ಚಿನ್ನವನ್ನು, 20,000/- ರೂಪಾಯಿ ನಗದು ಹಣ, ಸುಮಾರು 50,000/- ರೂಪಾಯಿ ಮೌಲ್ಯದ ಸ್ಕೂಟರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .
ಆರೋಪಿತರನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
crime
ಡ್ರಗ್ಸ್ ಪ್ರಕರಣದಲ್ಲಿ ತಮಿಳು ಚಿತ್ರರಂಗದ ಮಾದಕ ನಟಿ ಅಂಜು ಕೃಷ್ಣ ಅಂದರ್ ; ಚಿತ್ರರಂಗದ ಸಹಾಯಕ ನಿರ್ದೇಶಕಿ ಸಹಿತ ಎಂಟು ಜನ ಪೊಲೀಸ್ ಬಲೆಗೆ ; ತಮಿಳುನಾಡು ಮಾದಕ ವಸ್ತು ನಿಯಂತ್ರಣ ವಿಭಾಗದ ಬಲೆಗೆ ಬಿದ್ದ ನಶೆಕೋರರು..
ತಮಿಳು ಚಿತ್ರರಂಗದ ಮಾದಕ ನಟಿ ಅಂಜು ಕೃಷ್, ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸಹಿತ ಒಟ್ಟು 8 ಮಂದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಚೆನ್ನೈ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ.

ಮಾದಕ ವಸ್ತು ನಿಯಂತ್ರಣ ವಿಭಾಗದ ಪೊಲೀಸ್ ತಂಡ ವಲಸರವಕ್ಕಂ ಎಂಬಲ್ಲಿ ವಿಘ್ನೇಶ್ವರನ್(33)ಎಂಬಾತನನ್ನು ಬಂಧಿಸಿದ್ದರು. ಆತನನ್ನು ತೀವ್ರ ವಿಚಾರಣೆ ಮಾಡಿದಾಗ ವೆಂಕಟೇಶ್ ಎಂಬಾತನಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.

ತಕ್ಷಣವೇ ಎಚ್ಚೆತ್ತ ಪೊಲೀಸರು ವೆಂಕಟೇಶ್ ಎಂಬಾತನ ಬಳಿ ಗ್ರಾಹಕನ ವೇಷದಲ್ಲಿ ಭೇಟಿಯಾಗಿ ಡ್ರಗ್ಸ್ ಖರೀದಿಗೆ ಮುಂದಾಗಿ ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಡ್ರಗ್ಸ್ ಜೊತೆ ಬಂದಾಗ ಆತನನ್ನು ಬಂಧಿಸಿ, ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂ ಗಾಂಜಾ, ಸ್ಮೋಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಆ ಬಳಿಕ ಬಂಧಿತ ಆರೋಪಿಗಳು ವಿಚಾರಣೆ ಸಂದರ್ಭ ನೀಡಿದ ಖಚಿತ ಮಾಹಿತಿಯಂತೆ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಈ ಎಂಟು ಮಂದಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ. ನಟಿ ಅಂಜು ಕೃಷ್ಣ, ಮಲಯಾಳಂ ನಟ ಜೋಜು ನಾಯಕರಾಗಿದ್ದ ‘ಆರೋ’ ಸಿನಿಮಾದಲ್ಲಿ ನಟಿಸಿದ್ದರು.

ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ, ಕಾರ್ತಿಕ್ ರಾಜ, ಯಶವಂತ್, ಶ್ರೀರಾಮ್ ಮತ್ತು ಅಲ್ವಿಬಿನ್ಶಾ ಎಂಬವರನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್ನಲ್ಲಿ ನಟಿ ಸೇರಿದಂತೆ ಇತರರ ಬಂಧನವಾಗಿದೆ.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

