F.I.R.
ಕುಂಬಳೆ ಆರಿಕ್ಕಾಡಿ ಹೆದ್ದಾರಿಯ ಅಕ್ರಮ ಟೋಲ್ ದೌರ್ಜನ್ಯ ಪ್ರಶ್ನಿಸಿದ ವ್ಯಕ್ತಿಯನ್ನು ಪುಟ್ಟ ಮಕ್ಕಳ ಕಣ್ಮುಂದೆಯೇ ಹೊತ್ತೊಯ್ದ ಪೊಲೀಸರು..ಮಾನವ ಹಕ್ಕು ಉಲ್ಲಂಘಿಸಿದ ಪೊಲೀಸ್ ದೌರ್ಜನ್ಯ ವಿರುದ್ಧ ಇಂದು ಸಂಜೆ ಯುಡಿಎಫ್ ಪ್ರತಿಭಟನೆ.
ಅಂತರ್ ರಾಜ್ಯ ಹೆದ್ದಾರಿಯ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ಹೆದ್ದಾರಿ ಇಲಾಖೆ ತಾತ್ಕಾಲಿಕ ಸ್ಥಾಪಿಸಿದ ಅನಧಿಕೃತ ಟೋಲ್ ಪ್ಲಾಜಾ ಸಂಬಂಧ ಕೇರಳ ಹೈಕೋರ್ಟು ಅಂತಿಮ ತೀರ್ಪು ನೀಡಲು ದಿನಾಂಕ ಮುಂದೂಡಿದ ಬೆನ್ನಲ್ಲೇ ಕುಂಬಳೆ ಟೋಲ್ ಪ್ಲಾಜಾದಲ್ಲಿ ವಾಹನ ಚಾಲಕರಿಂದ ಟೋಲ್ ವಸೂಲಿ ದಂಧೆ ಬುಧವಾರ ಸಂಜೆಯಿಂದ ಅಧಿಕೃತವಾಗಿ ಆರಂಭಗೊಂಡಿದೆ.

ಅನಧಿಕೃತ ಟೋಲ್ ಪ್ಲಾಜಾ ವಿರೋಧಿಗಳ ಆಕ್ರೋಶಕ್ಕೆ ಇದು ಕಾರಣವಾಗಿದೆ. ಅಕ್ರಮ ಟೋಲ್ ವ್ಯವಸ್ಥೆಯನ್ನು ಪ್ರಶ್ನಿಸಿದ ವಾಹನ ಚಾಲಕರೊಬ್ಬರನ್ನು ಟೋಲ್ ಗೇಟಲ್ಲಿ ತಡೆದ ಪೊಲೀಸರು ಬಲಾತ್ಕಾರದಿಂದ ಮಕ್ಕಳ ಕಾರಿನಿಂದ ಹೊರಗೆಳೆದು ಕುಖ್ಯಾತ ಕ್ರಿಮಿನಲ್ ಆರೋಪಿಯಂತೆ ದೌರ್ಜನ್ಯ ಎಸಗಿ ತಮ್ಮ ಪೊಲೀಸ್ ವಾಹನಕ್ಕೆ ಹೊತ್ತೊಯ್ದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇದು ಸ್ಪಷ್ಟ ಮಾನವ ಹಕ್ಕು ಉಲ್ಲಂಘನೆಯಾಗಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಜನವರಿ 29(ಗುರುವಾರ)ರಂದು ಕುಂಬಳೆ ಪೊಲೀಸ್ ದೌರ್ಜನ್ಯ/ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಮಂಜೇಶ್ವರ ಮಂಡಲ ಯು. ಡಿ. ಎಫ್ ನೇತೃತ್ವದಲ್ಲಿ ಕುಂಬಳೆ ಠಾಣೆಗೆ ಮುತ್ತಿಗೆ ನಡೆಸುವುದಾಗಿ ಘೋಷಿಸಿದ್ದಾರೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
DEATH
ಪತ್ನಿಯ ಕಿರುಕುಳಕ್ಕೆ ಮಗ ಬಲಿ: ಸುದೀಪ್ ರೈ ತಂದೆ ದಾಮೋದರ ರೈ ಗಂಭೀರ ಆರೋಪ
ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ನಿವಾಸಿ ಸುದೀಪ್ ರೈ ಅವರ ಸಾವಿಗೆ ಅವರ ಪತ್ನಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ ರೈ ನೆಲ್ಯಾಡಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಬಂಗ್ಲೆಗುಡ್ಡೆಯ ಸೌಮ್ಯಾ ಶೆಟ್ಟಿ ಎಂಬಾಕೆ ನೀಡಿದ ಮಾನಸಿಕ ಕಿರುಕುಳವೇ ತನ್ನ ಮಗನ ಸಾವಿಗೆ ನೇರ ಕಾರಣವಾಗಿದ್ದು, ಆಕೆಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಫೇಸ್ಬುಕ್ ಪರಿಚಯ, ರಿಜಿಸ್ಟರ್ ಮದುವೆ:
ದಾಮೋದರ ರೈ ಅವರು ಘಟನೆಯ ಹಿನ್ನೆಲೆಯನ್ನು ವಿವರಿಸುತ್ತಾ, “ನನ್ನ ಮಗ ಸುದೀಪ್ ರಿಯಲ್ ಎಸ್ಟೇಟ್ ಮತ್ತು ಸೋಲಾರ್ ಪ್ಯಾನಲ್ ಅಳವಡಿಸುವ ಕೆಲಸ ಮಾಡುತ್ತಿದ್ದ. ಆತನಿಗೆ ಸೌಮ್ಯಾ ಶೆಟ್ಟಿ ಎಂಬಾಕೆಯ ಪರಿಚಯ ಫೇಸ್ಬುಕ್ ಮೂಲಕವಾಗಿತ್ತು. ಮದುವೆ ಪ್ರಸ್ತಾಪ ಬಂದಾಗ ನಾವು ಅವರ ಮನೆಗೆ ಹೋಗಿದ್ದೆವು ಮತ್ತು ಅವರು ನಮ್ಮ ಮನೆಗೆ ಬಂದಿದ್ದರು. ಫೆಬ್ರವರಿ 16ರಂದು ನಾವು ಅವರ ಮನೆಗೆ ಭೇಟಿ ನೀಡಿ ಬಂದ ಬಳಿಕ, ‘ಸದ್ಯಕ್ಕೆ ಮದುವೆ ಅರ್ಜೆಂಟ್ ಬೇಡ, ಯೋಚಿಸಿ ನಿರ್ಧಾರ ಮಾಡೋಣ’ ಎಂದು ಹೇಳಿದ್ದೆವು. ಆದರೆ ನಮಗೆ ತಿಳಿಯದಂತೆ ಮರುದಿನವೇ ಅಂದರೆ ಫೆಬ್ರವರಿ 17ರಂದು ಅವರಿಬ್ಬರು ಪುತ್ತೂರಿನ ನೋಂದಣಿ ಕಚೇರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂಬ ವಿಷಯ ಈಗ ತಿಳಿದುಬಂದಿದೆ,” ಎಂದು ತಿಳಿಸಿದರು.

ಸಾರ್ವಜನಿಕವಾಗಿ ಅವಮಾನ ಮತ್ತು ಕಿರುಕುಳ:
ಮದುವೆಯ ನಂತರ ಸುದೀಪ್ ಉಜಿರೆಯಲ್ಲಿರುವ ಮಾವನ ಮನೆಯಲ್ಲಿ ವಾಸವಿದ್ದ ಎನ್ನಲಾಗಿದೆ. ಮಾರ್ಚ್ 16ರಂದು ನೆಲ್ಯಾಡಿಗೆ ಬಂದಿದ್ದ ಸೌಮ್ಯಾ, ಸುದೀಪ್ ಮತ್ತು ಅವರ ಪೋಷಕರ ಎದುರೇ ರಂಪಾಟ ಮಾಡಿದ್ದಾಳೆ. “ಫೋನ್ ತೆಗೆದಿಲ್ಲ ಎಂಬ ಕಾರಣಕ್ಕೆ ನೆಲ್ಯಾಡಿ ಪೇಟೆಯಲ್ಲಿ ಎಲ್ಲರ ಎದುರೇ ಅಸಭ್ಯವಾಗಿ ಬೈದು ನಮಗೆ ತೀವ್ರ ಅವಮಾನ ಮಾಡಿದ್ದಾಳೆ. ಆನಂತರ ಸುದೀಪ್ ಆಕೆಯ ಜೊತೆಗೇ ಹೋಗಿದ್ದ,” ಎಂದು ತಂದೆ ಅಳಲು ತೋಡಿಕೊಂಡಿದ್ದಾರೆ.

ಸಾವಿನ ಬಗ್ಗೆ ಅನುಮಾನ:
ಸೌಮ್ಯಾ ಜೊತೆಗೆ ಹೋದ ಎರಡು ದಿನಗಳಲ್ಲೇ ಸುದೀಪ್ ಅವರಿಗೆ ಆರೋಗ್ಯ ಸರಿ ಇಲ್ಲ ಎಂದು ಕಾರ್ಕಳದ ನಿಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಇದು ಡೆಂಗ್ಯೂ ಜ್ವರ ಎಂದು ಹೇಳಲಾಗುತ್ತಿತ್ತು. ಆದರೆ ಈ ಸಾವಿನ ಹಿಂದೆ ಪತ್ನಿಯ ಕಿರುಕುಳ ಮತ್ತು ಸಂಚಿದೆ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ನೆಲ್ಯಾಡಿಯ ಸುದೀಪ್ ರೈ ಸಾವಿನ ಪ್ರಕರಣವು ಈಗ ಹನಿಟ್ರಾಪ್ ಮತ್ತು ಸರಣಿ ಮದುವೆ ವಂಚನೆಯ ಆಯಾಮವನ್ನು ಪಡೆದುಕೊಂಡಿದೆ. ಆರೋಪಿ ಸೌಮ್ಯಾ ಶೆಟ್ಟಿ ಕೇವಲ ಸುದೀಪ್ಗೆ ಮಾತ್ರವಲ್ಲದೆ, ಈ ಹಿಂದೆ ಹಲವು ಪುರುಷರಿಗೆ ಮದುವೆಯ ಆಮಿಷವೊಡ್ಡಿ ವಂಚಿಸಿರುವ ಗಂಭೀರ ವಿಚಾರಗಳು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಗಿವೆ.
ಹನಿಟ್ರಾಪ್ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆಯೇ?
ಸುದೀಪ್ ಅವರ ಪೋಷಕರು ಸೌಮ್ಯಾ ಶೆಟ್ಟಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, “ಆಕೆ ನಾಟಕ ತಂಡದಲ್ಲಿ ಕಲಾವಿದೆಯಾಗಿದ್ದು, ಮೇಕಪ್ ಆರ್ಟಿಸ್ಟ್ ಕೂಡ ಆಗಿದ್ದಾಳೆ. ಹಣಕ್ಕಾಗಿ ಮದುವೆಯಾಗುವ ಭರವಸೆ ನೀಡಿ ಹಲವರನ್ನು ನಂಬಿಸಿ ಮೋಸ ಮಾಡಿದ್ದಾಳೆ. ಈಕೆಯ ಹಿಂದೆ ಹನಿಟ್ರಾಪ್ ಗ್ಯಾಂಗ್ ಇರುವ ಶಂಕೆ ಇದೆ,” ಎಂದು ಕಣ್ಣೀರು ಹಾಕಿದ್ದಾರೆ. ಮಗನ ಸಾವಿಗೆ ನ್ಯಾಯ ಸಿಗಲೇಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ.
ಮತ್ತೊಬ್ಬ ಸಂತ್ರಸ್ತ ಕಲಾವಿದನ ಅಳಲು:
ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ನಾಟಕ ಕಲಾವಿದ ಮೂಲ್ಕಿಯ ವೇಣುಗೋಪಾಲ ಶೆಟ್ಟಿ ಅವರು ಸೌಮ್ಯಾ ಶೆಟ್ಟಿಯಿಂದ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. “ಆಕೆ ನನ್ನನ್ನೂ ಮದುವೆಯಾಗುತ್ತೇನೆಂದು ಹೇಳಿ ವಿಚಿತ್ರವಾಗಿ ಹಿಂಸೆ ಕೊಟ್ಟಿದ್ದಾಳೆ. ಮದುವೆ ಫಿಕ್ಸ್ ಆಗಿದ್ದನ್ನು ನಾನು ಸ್ಟೇಟಸ್ ಹಾಕಿದಾಗ ಹಲವರು ಫೋನ್ ಮಾಡಿ ಆಕೆ ಸರಿಯಿಲ್ಲ ಎಂದು ಎಚ್ಚರಿಸಿದ್ದರು. ಸ್ವತಃ ಆಕೆಯ ಮನೆಯವರೇ ಆಕೆಯನ್ನು ಹೊರಗೆ ಹಾಕಿದ್ದರು,” ಎಂದು ತಿಳಿಸಿದರು.
ವೇಣುಗೋಪಾಲ ಶೆಟ್ಟಿ ಅವರು ಹೇಳುವಂತೆ, ಸೌಮ್ಯಾ ಈ ಹಿಂದೆ ಕನಿಷ್ಠ ಇಬ್ಬರನ್ನು ಮದುವೆಯಾಗಿ ವಂಚಿಸಿದ್ದಾಳೆ. “2024ರ ಡಿಸೆಂಬರ್ ಬಳಿಕ ಆಕೆಯ ಚರಿತ್ರೆ ತಿಳಿದು ನಾನು ಮದುವೆ ಪ್ರಸ್ತಾಪ ಕೈಬಿಟ್ಟಿದ್ದೆ. ಕೊನೆಗೆ ಆಕೆ ನನ್ನ ವಿರುದ್ಧವೇ ಪೊಲೀಸ್ ದೂರು ನೀಡಿದ್ದಳು. ಈಗ ಸುದೀಪ್ ರೈ ಅವರಂತಹ ಅಮಾಯಕ ಆಕೆಯ ಕಿರುಕುಳಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ,” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಪುರುಷರಿಗೂ ಇರಲಿ ಸಾಂತ್ವನ ಕೇಂದ್ರ:
ಸೌಮ್ಯಾ ಶೆಟ್ಟಿಯ ವಂಚನಾ ಜಾಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವೇಣು ಶೆಟ್ಟಿ, ಕಾನೂನಿನ ದುರುಪಯೋಗದ ಬಗ್ಗೆ ಮಾತನಾಡಿದರು. “ಕಾನೂನು ಮಹಿಳೆಯರ ಪರವಾಗಿದೆ, ಅವರು ಸುಳ್ಳು ದೂರು ಕೊಟ್ಟರೂ ಪೊಲೀಸರು ನಮ್ಮನ್ನು ಎಳೆದೊಯ್ಯುತ್ತಾರೆ. ಆದರೆ ಅನ್ಯಾಯಕ್ಕೊಳಗಾದ ಪುರುಷರಿಗಾಗಿ ಯಾವುದೇ ಕಾನೂನಿಲ್ಲ. ಮಹಿಳಾ ಆಯೋಗದ ಮಾದರಿಯಲ್ಲೇ ಪುರುಷರಿಗೂ ಸಾಂತ್ವನ ಕೇಂದ್ರಗಳು ಇರಬೇಕು. ಈ ರೀತಿ ಅನ್ಯಾಯಕ್ಕೊಳಗಾದ ನಮಗೆ ನ್ಯಾಯ ಕೊಡುವವರು ಯಾರು?” ಎಂದು ಅವರು ಪ್ರಶ್ನಿಸಿದ್ದಾರೆ.
ಪೊಲೀಸ್ ತನಿಖೆಗೆ ಆಗ್ರಹ:
ಸೌಮ್ಯಾ ಶೆಟ್ಟಿ ಮದುವೆಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ಉದ್ದೇಶ ಹೊಂದಿದ್ದಳೇ? ಈಕೆಯ ಹಿಂದೆ ಯಾರಿದ್ದಾರೆ? ಮತ್ತು ಸುದೀಪ್ ರೈ ಸಾವಿನಲ್ಲಿ ಈಕೆಯ ಪಾತ್ರವೇನು? ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಮತ್ತು ಸಂತ್ರಸ್ತರು ಪೊಲೀಸರಿಗೆ ಮನವಿ ಮಾಡಿದ್ದಾರೆ.

F.I.R.
ಎಮ್ಮೆಮಾಡು: ಮದುವೆ ಸಮಾರಂಭದಲ್ಲಿ ದೈವಕ್ಕೆ ಅವಮಾನ ಆರೋಪ; ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲು
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪೂಜನೀಯ ದೈವವನ್ನು ಅಪಹಾಸ್ಯ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಎಮ್ಮೆಮಾಡು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ, ಮದುಮಗನಿಗೆ ತುಳುನಾಡಿನ ದೈವ **’ಕೊರಗಜ್ಜ’**ನ ವೇಷವನ್ನು ಹೋಲುವಂತೆ ಉಡುಪು ಧರಿಸಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಜೊತೆಯಲ್ಲಿದ್ದ ಇತರ ಯುವಕರು ದೈವದ ಆಚರಣೆಯನ್ನು ವಿಕೃತವಾಗಿ ಅನುಕರಿಸುತ್ತಾ, ತಮ್ಮದೇ ಭಾಷೆಯಲ್ಲಿ ‘ತೆಯ್ಯ’ ಎಂದು ಕೂಗುತ್ತಾ ಅಪಹಾಸ್ಯ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್:
ಮಾರ್ಚ್ 30, 2026 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಿಂದೂ ಧರ್ಮದ ದೈವ ನಿಂದನೆ ಹಾಗೂ ಧಾರ್ಮಿಕ ನಂಬಿಕೆಯ ಅಪಹಾಸ್ಯ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಬೆಳಕಿಗೆ ಬಂದಿದ್ದು, ವಿಡಿಯೋದಲ್ಲಿ ಹಿಂದೂ ಧರ್ಮದ ಪವಿತ್ರ ನಂಬಿಕೆಗಳನ್ನು ಮತ್ತು ಪೂರ್ವಜರ ಸಂಸ್ಕೃತಿಯನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ದೂರು ಮತ್ತು ಕ್ರಮ:
ಈ ಘಟನೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ನಾಪೋಕ್ಲುವಿನ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಡಿವೈಎಸ್ಪಿ (DYSP) ಸೂರಜ್ ಹಾಗೂ ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರಿಗೆ ಅಧಿಕೃತ ದೂರು ನೀಡಲಾಗಿತ್ತು.ದೂರಿನ ಆಧಾರದ ಮೇಲೆ ಎಮ್ಮೆಮಾಡು ಗ್ರಾಮದ ಅಬ್ದುಲ್ ರಾಶಿದ್ ( ಮದುಮಗ) ಹನೀಫ್ ಸಿಎಮ್, ಲತೀಫ್ ಸಿಮ್, ಮೊಹಮ್ಮದ್ ಫೈಜಲ್, ಶಕೀರ್ ಮತ್ತು ಬಶೀರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2(BNS), 2023ರ ಕಲಂ 191(1) ಅಡಿಯಲ್ಲಿ ಎಫ್ಐಆರ್ (FIR) ದಾಖಲಾಗಿದ್ದು, ನಾಪೋಕ್ಲು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
