Bantawala
ವಿಟ್ಲ ಜಾತ್ರೆಯ ಸಂತೆ ಮಳಿಗೆಗಳ ಗೋಲ್ಮಾಲ್ ಬೆಳಕಿಗೆ… ಇದು ಪಂಚಲಿಂಗೇಶ್ವರನ ಮಹಿಮೆ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/santhe-mahesh-1000x600.jpg&description=ವಿಟ್ಲ ಜಾತ್ರೆಯ ಸಂತೆ ಮಳಿಗೆಗಳ ಗೋಲ್ಮಾಲ್ ಬೆಳಕಿಗೆ… ಇದು ಪಂಚಲಿಂಗೇಶ್ವರನ ಮಹಿಮೆ', 'pinterestShare', 'width=750,height=350'); return false;" title="Pin This Post">
ವಿಟ್ಲ : ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯಲ್ಲಿ ಸಂತೆ ವ್ಯಾಪಾರದ ಗುತ್ತಿಗೆ ಪಡೆದ ವ್ಯಕ್ತಿಯೋರ್ವ ಸಂತೆ ವ್ಯಾಪಾರಸ್ಥರಿಂದ ಬೇಕಾಬಿಟ್ಟಿ ಬಾಡಿಗೆ ಕಿತ್ತುಕೊಂಡು ಪಂಚಾಯತ್ ಅಧ್ಯಕ್ಷರಿಗೆ ಸನ್ಮಾನ ಮಾಡಿ ಕೈತೊಳೆದುಕೊಂಡ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ನ್ಯಾಯಕ್ಕಾಗಿ ಬಡ ವ್ಯಾಪಾರಸ್ಥರು ಪಂಚಾಯತಿನ ಮೆಟ್ಟಿಲೇರಿದ್ದಾರೆ.
ಸಂತೆ ವ್ಯಾಪಾರದಲ್ಲಿ ಮಿತಿಮೀರಿದ ಬ್ರೋಕರ್ಗಳ ಹಾವಳಿಯಿಂದ ಬಡ ವ್ಯಾಪಾರಸ್ಥರಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುತ್ತಿದ್ದ ಮಹೇಶ್ದಾಸ್ ಎಂಬಾತನೇ ಇದೀಗ ವಿಟ್ಲ ಜಾತ್ರೆಯ ಸಂತೆ ಮಳಿಗೆಗಳ ಗುತ್ತಿಗೆಯನ್ನು ವಹಿಸಿಕೊಂಡು ಬಡ ವ್ಯಾಪಾರಸ್ಥರಲ್ಲಿ ಒಂದಕ್ಕೆ ಎರಡುಪಟ್ಟು ಬಾಡಿಗೆ ವಸೂಲಾತಿ ಮಾಡಿಕೊಂಡು ಮೋಸ ಎಸಗಿದ ಸಂತೆ ವ್ಯಾಪಾರಿಗಳ ಅಧ್ಯಕ್ಷ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಎಂಬ ಸಂತೆ ವ್ಯಾಪಾರಸ್ಥರು ಪಂಚಾಯತ್ಗೆ ದೂರು ನೀಡಿದವರಾಗಿದ್ದು, ತನ್ನ ವ್ಯಾಪಾರದ ಬಾಬ್ತು ಪಂಚಾಯತ್ ನಿಯಮಗಳನ್ನು ಮೀರಿ ಗುತ್ತಿಗೆದಾರ ಅಧಿಕ ಬಾಡಿಗೆಯನ್ನು ತನ್ನಿಂದ ವಸೂಲಾತಿ ಮಾಡಿರುವನೆಂದು ಆರೋಪಿಸಿದ್ದಾರೆ. ನಾನು, ನನ್ನ ಅಣ್ಣ, ನನ್ನ ಚಿಕ್ಕಮ್ಮ, ಹೇಮಂತ್, ಸುಬಾಶ್, ಪ್ರಸಾದ್ ಮತ್ತು ಅವರ ಪತ್ನಿ ಹಾಗೆ ಸುಮಾರು 10 ಜನ ವ್ಯಾಪಾರಸ್ಥರು ಜ,28ರಂದು ದೂರು ಸಲ್ಲಿಸಿದ್ದೇವೆ ಎಂದು ಲಕ್ಷ್ಮೀಶ ಮಾದ್ಯಮಕ್ಕೆ ತಿಳಿಸಿದ್ದಾರೆ.
ವಿಟ್ಲದ ಜಾತ್ರೆಯ ನೊಂದ ಸಂತೆ ವ್ಯಾಪಾರಸ್ಥ ಲಕ್ಷ್ಮೀಶ ಅವರು ಮಾದ್ಯಮದೊಂದಿಗೆ ಮಾತನಾಡಿದ ಆಡಿಯೋ ಕೇಳಿಸಿಕೊಳ್ಳಿ
ಮಹೇಶ್ ವಿರುದ್ಧ ಸಂತೆ ಮಳಿಗೆಗಳ ವಸೂಲಾತಿಯಲ್ಲಿ ದೊಡ್ಡ ಮಟ್ಟದಲ್ಲಿ ಅವ್ಯವಹಾರ ಮತ್ತು ಮೋಸ ಮಾಡಿರುವುದಾಗಿ ವಿಟ್ಲ ಪಟ್ಟಣ ಪಂಚಾಯತ್ಗೆ ಲಿಖಿತ ದೂರು ನೀಡಿದ್ದು, ಒಟ್ಟು 65 ಅಂಗಡಿಮಳಿಗೆಗಳ ಲೆಕ್ಕ ಸಿಕ್ಕಿದ್ದು. ಈ ಪೈಕಿ ಇನ್ನು ಹೆಚ್ಚುವರಿ 25 ಅಂಗಡಿಗಳ ಹಣ ಬರಬೇಕಾಗಿದೆ ಅದಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದಿರುವ ಪಂಚಾಯತ್ ಖಂಡಿತಾ ಆತನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಭರವಸೆ ನೀಡಿದ್ದಾರೆ.
ಪಂಚಾಯತ್ ಟೆಂಡರ್ ಪ್ರಕಾರ ಜಾತ್ರಾ ಸಂತೆಗಾಗಿ 10ಅಡಿ ಜಾಗಕ್ಕೆ 10ಸಾವಿರ ಬಾಡಿಗೆ, 1800 ರೂ. ಜಿಎಸ್ಟಿ ಹಾಗೂ ಆತನೇ ಟೆಂಡರ್ ಪ್ರಕ್ರಿಯೆಯಲ್ಲಿ ನಿಗದಿ ಪಡಿಸಿದ 1900 ರೂ. ಸೇರಿ ಒಟ್ಟು 13700 ರೂ. ಆಗಿರುತ್ತದೆ. ಆದರೆ ಈತ ಬಡ ವ್ಯಾಪಾರಸ್ಥರಿಂದ 20 ಅಡಿ ಜಾಗಕ್ಕೆ 27400 ರೂ. ಪಡೆದುಕೊಳ್ಳಬೇಕಾದ ಬದಲು 35000.00 ಪಡೆದುಕೊಂಡಿರುತ್ತಾನೆ. ಹಾಗೆಯೇ 10 ಫೀಟ್ ಅಂಗಡಿಗೆ 15 ಸಾವಿರ ಮತ್ತು 15 ಫೀಟ್ ನ ಅಂಗಡಿಗೆ 10 ಫೀಟ್ ಸ್ಥಳದ ರಶೀದಿ ನೀಡಿ 18000/20000 ಹಣವನ್ನು ಕೊಡುವಂತೆ ದಮ್ಕಿ ಹಾಕಿ ಪಡೆದಿರುವುದಾಗಿದೆ ಎಂದು ಆರೋಪಿಸಿದ್ದಾರೆ.
ದೂರುದಾರ ಲಕ್ಷ್ಮೀಶ್ ಮತ್ತು ಆತನ ಸಹೋದರ ನವನೀತ್ ಸಂತೆ ವ್ಯಾಪಾರಸ್ಥರಾಗಿದ್ದು, ಅವರು ಪಡೆದುಕೊಂಡ 20 ಫೀಟ್ ಅಂಗಡಿಯ ಸ್ಥಳಾವಕಾಶಕ್ಕೆ 27400 ಆಗಿದ್ದು, 35000 ರೂ. ಪಡೆದುಕೊಂಡು ಮೋಸ ಮಾಡಿರುವುದಾಗಿದೆ. ಈ ಮೊದಲು ಮದ್ಯವತಿಗಳ ವಿರುದ್ಧ ಹೋರಾಡುತಿದ್ದ ಮಹೇಶ್ ಈಗ ಸ್ವತಃ ತಾನೇ ಬ್ರೋಕರ್ ಆಗಿ ಧಮ್ಕಿ ಹಾಕಿದ ಘಟನೆ ನಡೆದಿದ್ದು ಬಡ ವ್ಯಾಪಾರಸ್ಥರಾದ ನಮಗೆ ಮೋಸ ಆಗಿದೆ ಎಂದು ತಿಳಿಸಿದ್ದಾರೆ.
40 ಅಂಗಡಿಗಳ ಲೆಕ್ಕಾಚಾರದಲ್ಲಿ ಪಂಚಾಯತ್ಗೆ ಹಣ ಪಾವತಿಸಿದ್ದು, ಪಂಚಾಯತ್ ಸಾರ್ವಜನಿಕ ಭಕ್ತಾದಿಗಳ ಮತ್ತು ಮಾದ್ಯಮದವರ ಒತ್ತಡಕ್ಕೆ ಈಗಾಗಲೇ ಸಂತೆ ಅಂಗಡಿಗಳನ್ನು ಎಣಿಸಿ 65 ಎಂದು ಲೆಕ್ಕ ಮಾಡಿದ್ದು, ಹೆಚ್ಚುವರಿ ಬಾಡಿಗೆ ಅಂಗಡಿಗಳ ಹಣವನ್ನು ಗುತ್ತಿಗೆದಾರನಿಂದ ವಸೂಲಾತಿ ಮಾಡಿ ಕೊಳ್ಳುತ್ತೇವೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳವರು ಮಾದ್ಯಮಕ್ಕೆ ತಿಳಿಸಿದ್ದಾರೆ.
ಸಂತೆ ವ್ಯಾಪಾರಸ್ಥರ ಅಧ್ಯಕ್ಷ ,ಹಿಂದೂ ಜಾತ್ರೆ ವ್ಯಾಪಾರಸ್ಥರ ಅಧ್ಯಕ್ಷ ,ಜಿಲ್ಲಾ ಅಧ್ಯಕ್ಷ ಎಂದೆಲ್ಲಾ ಹೇಳಿಕೊಳ್ಳುತ್ತಿರುವ ಮಹೇಶ್ ವಿಟ್ಲ ಜಾತ್ರೆಯ ಸುಸಂದರ್ಭದಲ್ಲಿಯೇ ಜನಪ್ರತಿನಿಧಿಗಳ ಮನವೊಲಿಸಲು ಸಂತೆ ವ್ಯಾಪಾರದ ಹೆಸರಿನಲ್ಲಿ ಪಂಚಾಯತ್ ಅಧ್ಯಕ್ಷರಿಗೆ ಸನ್ಮಾನ ಮಾಡುವಾಗಲೇ ಸಂತೆ ಗೋಲ್ ಮಾಲ್ ಬಯಲಾಗಿದೆ.
ಬಡ ವ್ಯಾಪಾರಸ್ಥರಿಗೆ ಬತ್ತಿಯಿಟ್ಟು, ಪಂಚಾಯತನ್ನು ಏಮಾರಿಸಿ ಅಧಿಕಾರಿಗಳನ್ನು ತನ್ನ ಕಪಿಮುಷ್ಠಿಯೊಳಗೆ ಇರಿಸಿಕೊಳ್ಳುವ ಗುತ್ತಿಗೆದಾರರೇ ಅಥವಾ ಜಾತ್ರೆ ಹೆಸರಲ್ಲಿ ಗುಳುಂ ಮಾಡುವ ಭಕ್ತ ವೇಷದಾರಿಗಳೇ ಕಾಲಾವಧಿಗೆ ನಡೆದುಕೊಂಡು ಬಂದಿರುವ ಜಾತ್ರೋತ್ಸವ ಶ್ರದ್ಧಾ ಕೇಂದ್ರಗಳು ದೇವರ ಹೆಸರಿನಲ್ಲಿ ಜೇಬು ತುಂಬಿಸಿಕೊಳ್ಳಲು ಇರುವ ಧಾರ್ಮಿಕ ಜೂಜು ಕೇಂದ್ರವಲ್ಲ. ಹಿಂದೂ ಧಾರ್ಮಿಕ ಆಚರಣೆಯಲ್ಲಿ ಭಕ್ತಾದಿಗಳಿಗೆ ಸಂತೆ ಸಾಮಾನುಗಳ ಅಧಿಕ ಹೊರೆ ಬೀಳಬಾರದೆಂದು ಪಂಚಾಯತ್ ಅತೀ ಕಡಿಮೆ ಬಾಡಿಗೆಗೆ ಅಂಗಡಿ ಮಳಿಗೆಗಳನ್ನು ನೀಡಿರುವಾಗ ಬಡ ವ್ಯಾಪಾರಸ್ಥರ ಮೇಲೆ ಅಪ್ರಯೋಜಿತವಾಗಿ ಹೇರುವ ಬಾಡಿಗೆ ದರಗಳು ನೇರವಾಗಿ ಭಕ್ತರ ಜೇಬಿಗೆ ಬೀಳುತ್ತದೆ ಎಂಬುವುದು ಸುಳ್ಳಲ್ಲ.
ನಾಳೆಯೂ ಪಂಚಾಯತ್ಗೆ ಇನ್ನೂ 3-4 ಜನ ವ್ಯಾಪಾರಸ್ಥರು ಬಂದು ದೂರು ನೀಡಲಿದ್ದೇವೆ ಎಂದು ಲಕ್ಷ್ಮೀಶ ತಿಳಿಸಿದ್ದಾರೆ. ಕೊನೆಗೂ ವಿಟ್ಲ ಜಾತ್ರೆಯ ಸಂತೆ ಮಳಿಗೆಗಳ ಗೋಲ್ ಮಾಲ್ ಬಯಲಿಗೆ ಬಂದೇ ಬಿಟ್ಟಿದೆ. ಎಲ್ಲವೂ ಪಂಚಲಿಂಗೇಶ್ವರನ ಮಹಿಮೆ.
arrest
ಅಜ್ಜಿಯ ಮನೆಗೇ ಕನ್ನ ಹಾಕಿದ ಪುಳ್ಳಿ! ಗೆಳೆಯನೊಂದಿಗೆ ಸೇರಿ ಕಳವು ಮಾಡಿ ಸಿಕ್ಕಿಬಿದ್ದ ಆರೋಪಿಗಳ ಬಂಧನ!
ಬಂಟ್ವಾಳ: ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಅತ್ಯಂತ ಚುರುಕಾಗಿ ಬೇಧಿಸಿರುವ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಮತ್ತು ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22) ಬಂಧಿತ ಆರೋಪಿಗಳು.
ಪ್ರಕರಣದ ಹಿನ್ನೆಲೆ:
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಎಂಬಲ್ಲಿನ ಮನೆಯೊಂದರಲ್ಲಿ ಇತ್ತೀಚೆಗೆ ಚಿನ್ನಾಭರಣ ಕಳ್ಳತನ ನಡೆದಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026 ಕಲಂ: 303(2) ಬಿ ಎನ್ ಎಸ್ -2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರಿಂದ ಒಟ್ಟು ರೂ. 2,50,000/- ಮೌಲ್ಯದ 21 ಗ್ರಾಂ ಚಿನ್ನಾಭರಣ ಹಾಗೂ ರೂ. 600/- ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಜ್ಜಿಯ ಮನೆಗೇ ಕನ್ನ ಹಾಕಿದ ಮೊಮ್ಮಗಳು!
ಬಂಧಿತ ಆರೋಪಿ ಪೃಥ್ವಿ ಎಂಬಾಕೆಯ ವರ್ತನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಕೆ ಬೋಳ್ಪಾಡಿಯ ನಿವಾಸಿ ರೋಹಿಣಿ ಶೆಟ್ಟಿ ಎಂಬವರ ಮೃತ ಪುತ್ರ ಸುರೇಶ್ ಅವರ ಮಗಳಾಗಿದ್ದಾಳೆ. ಅಂದರೆ, ಕಳ್ಳತನ ನಡೆದ ರೋಹಿಣಿ ಶೆಟ್ಟಿ ಅವರ ಮನೆ ಪೃಥ್ವಿಯ ಸ್ವಂತ ಅಜ್ಜಿಯ ಮನೆಯಾಗಿದೆ. ಪೃಥ್ವಿ ತನ್ನ ಗೆಳೆಯ, ಸುರತ್ಕಲ್ ಮೂಲದ ಕಿಶಾನ್ ಎಂಬಾತನ ಜೊತೆ ಸೇರಿಕೊಂಡು ಸ್ವಂತ ಅಜ್ಜಿಯ ಮನೆಯಲ್ಲೇ ನಗ-
ನಗದು ಕಳವು ಮಾಡಿ, ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹಳೇ ಚಾಳಿ ಮುಂದುವರಿಸಿದ್ದ ಕಿಲಾಡಿ ಯುವತಿ:
ಆರೋಪಿ ಪೃಥ್ವಿ ಈ ಹಿಂದೆಯೂ ಇಂತಹದ್ದೇ ಕೃತ್ಯ ಎಸಗಿದ್ದಳು ಎನ್ನುವ ಆಘಾತಕಾರಿ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಸುಮಾರು 4 ತಿಂಗಳುಗಳ ಹಿಂದೆಯೂ ಬಂಟ್ವಾಳ ತಾಲೂಕಿನ ಕೊಳಕೀರು ಎಂಬಲ್ಲಿ ತನ್ನ ಆತ್ಮೀಯರ ಮನೆಯೊಂದರಲ್ಲಿ ಬಂಗಾರದ ಬಳೆಯನ್ನು ಕದ್ದು ಸಿಕ್ಕಿಬಿದ್ದಿದ್ದಳು. ಕದ್ದ ಬಳೆಯನ್ನು ಅಕ್ಕಸಾಲಿಗನಿಗೆ ಮಾರಾಟ ಮಾಡಿದ್ದ ಆಕೆ, ಬಳಿಕ ಸಿಕ್ಕಿಬಿದ್ದಾಗ ವಾರೀಸುದಾರರು ಅದನ್ನು ವಾಪಸ್ ಪಡೆದುಕೊಂಡಿದ್ದರು ಎನ್ನಲಾಗಿದೆ. ಹಳೇ ಚಾಳಿ ಬಿಡದ ಈಕೆ ಈಗ ಮತ್ತೆ ಗೆಳೆಯನೊಂದಿಗೆ ಸೇರಿ ಅಜ್ಜಿಯ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದಿದ್ದಾಳೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ತಂಡ:
ಈ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಬಂಟ್ವಾಳ ನಗರ ಠಾಣೆಯ ತನಿಖಾಧಿಕಾರಿ ಎ.ಎಸ್.ಐ ನವೀನ್, ಹೆಡ್ ಕಾನ್ಸ್ಟೇಬಲ್ಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷೀತ್, ಕಾನ್ಸ್ಟೇಬಲ್ಗಳಾದ ಬಸವರಾಜ ಕುಡಗುಂಟಿ, ನಾಗನಾಥ, ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಗಳಾದ ರೇವತಿ, ಭಾಗ್ಯಮ್ಮ ಮತ್ತು ಮಾಲಾಶ್ರೀ ರವರುಗಳು ಶ್ಲಾಘನೀಯ ಪಾತ್ರ ವಹಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ದಿವಾಕರ ಮತ್ತು ಸಂಪತ್ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ತಾಂತ್ರಿಕ ಸಹಕಾರ ನೀಡಿರುತ್ತಾರೆ



Bantawala
ಪಣೋಳಿಬೈಲು ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಅಗೇಲು ಸೇವೆ ಸಮರ್ಪಣೆ!
ಬಂಟ್ವಾಳ: ತುಳುನಾಡಿನ ಇತಿಹಾಸ ಪ್ರಸಿದ್ಧ, ಪರಮ ಕಾರಣೀಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಪಣೋಳಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ಗರಿಷ್ಠ ಪ್ರಮಾಣದ ಅಗೇಲು ಸೇವೆ ನಡೆದಿದೆ. ಅಂದು ಒಂದೇ ದಿನ ಭಕ್ತರಿಂದ ಬರೋಬ್ಬರಿ 4,180 ಅಗೇಲು ಸೇವೆಗಳು ಸಂದಾಯವಾಗುವ ಮೂಲಕ ಕ್ಷೇತ್ರದ ಕಾರಣೀಕ ಶಕ್ತಿಗೆ ಸಾಕ್ಷಿಯಾಯಿತು .
ಇಷ್ಟೊಂದು ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಏಕದಿನದಲ್ಲಿ ಅಗೇಲು ಸೇವೆ ಸಲ್ಲಿಸುತ್ತಿರುವುದು ಕಲ್ಲುರ್ಟಿ ದೈವದ ಮೇಲಿನ ಅವರ ಅಚಲ ಭಕ್ತಿ ಮತ್ತು ನಂಬಿಕೆಯ ಸಂಕೇತವಾಗಿದೆ. ಇದು ಈ ವರ್ಷದಲ್ಲಿ ಸಂದಾಯವಾದ ಅತ್ಯಂತ ಗರಿಷ್ಠ ಸಂಖ್ಯೆಯ ಅಗೇಲು ಸೇವೆಯಾಗಿದೆ.
ಶೈಕ್ಷಣಿಕ ವರ್ಷದ ಆರಂಭ: ಪ್ರಾರ್ಥನೆ ಸಲ್ಲಿಸಿದ ಭಕ್ತರ ದಂಡು
ಪ್ರಸ್ತುತ ಶಾಲಾ-ಕಾಲೇಜುಗಳ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಲುರ್ಟಿ ದೈವಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಲು ಭಕ್ತರು ಮುಗಿಬಿದ್ದಿದ್ದರು. ಮಕ್ಕಳ ಉತ್ತಮ ವಿದ್ಯಾಭ್ಯಾಸ, ಉನ್ನತ ಶಿಕ್ಷಣ ಸಂಸ್ಥೆಗಳ ಆಯ್ಕೆ, ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಹರಕೆ ತೀರಿಸಲು ಹಾಗೂ ವಿದೇಶಕ್ಕೆ ತೆರಳುವ ಭಕ್ತರ ಕನಸು ಸಾಕಾರಗೊಂಡ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಲು ಕರಾವಳಿ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಸನ್ನಿಧಿಗೆ ಭೇಟಿ ನೀಡಿ ಅಗೇಲು ಸೇವೆ ಸಲ್ಲಿಸಿದರು. ಸಾಮಾನ್ಯವಾಗಿ ಶಾಲಾ-ಕಾಲೇಜು ರಜೆ ಅಥವಾ ವಿಶೇಷ ಹಬ್ಬಗಳ ದಿನಗಳಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ಹರಕೆ ತೀರಿಸುವುದು ಕ್ಷೇತ್ರದ ವಿಶೇಷತೆಯಾಗಿದೆ.
ನಿರಂತರವಾಗಿ ಸಾಗಿದ ಪ್ರಸಾದ ವಿತರಣೆ
ಸಾಮಾನ್ಯ ದಿನಗಳಲ್ಲಿ ಮಧ್ಯಾಹ್ನ 1:30ರ ಬಳಿಕ ಅಗೇಲು ಸೇವೆಯ ಪ್ರಸಾದ ವಿತರಣೆ ಆರಂಭಗೊಳ್ಳುತ್ತದೆ. ಆದರೆ ಭಾನುವಾರ ಇತಿಹಾಸದಲ್ಲೇ ಗರಿಷ್ಠ ಸಂಖ್ಯೆಯ ಸೇವೆಗಳು ಇದ್ದ ಕಾರಣ ಪ್ರಕ್ರಿಯೆ ಸ್ವಲ್ಪ ತಡವಾಗಿ ಆರಂಭಗೊಂಡು, ಸಂಜೆಯ ನಂತರವೂ ನಿರಂತರವಾಗಿ ಸಾಗಿತು. ಕ್ಷೇತ್ರಕ್ಕೆ ಹರಿದುಬಂದಿದ್ದ ಸಾವಿರಾರು ಭಕ್ತರು ಸರದಿಯಲ್ಲಿ ನಿಂತು ದೈವದ ಪ್ರಸಾದ ಸ್ವೀಕರಿಸಿದರು.
ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ಹಾಗೂ ಸೇವೆಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.
ಕಳೆದ ವರ್ಷ ಜೂನ್ 22ರಂದು ಆ ವರ್ಷದ ಗರಿಷ್ಠ ಅಂದರೆ 3,871 ಅಗೇಲು ಸೇವೆಗಳು ಸಂದಾಯವಾಗಿದ್ದವು.
ಅದಕ್ಕೂ ಮುನ್ನ, 2024ರ ಜೂನ್ 2ರಂದು 3,908 ಅಗೇಲು ಸೇವೆಗಳು ಸಲ್ಲಿಕೆಯಾಗಿದ್ದವು. ಆದರೆ ಈ ಬಾರಿ ಭಾನುವಾರ 4,180 ಸೇವೆಗಳು ಸಲ್ಲಿಕೆಯಾಗಿದೆ.
ಪಣೋಳಿಬೈಲು ಕ್ಷೇತ್ರದ ಪ್ರಮುಖ ವಿಶೇಷತೆಗಳು:
- ಸಜೀಪ ಮೂಡದ ಪುಣ್ಯಕ್ಷೇತ್ರ: ಈ ಪ್ರಸಿದ್ಧ ಕಾರಣೀಕ ಕ್ಷೇತ್ರವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಂದರ ಪರಿಸರದಲ್ಲಿದೆ.
- ವಿಶೇಷ ಸೇವೆಗಳ ದಿನ: ಈ ದೈವಸ್ಥಾನದಲ್ಲಿ ವಾರದ ಮೂರು ದಿನಗಳು ಅಂದರೆ ಮಂಗಳವಾರ, ಶುಕ್ರವಾರ ಮತ್ತು ಭಾನುವಾರಗಳಂದು ಮಾತ್ರ ವಿಶೇಷ ಅಗೇಲು ಸೇವೆ ನಡೆಯುತ್ತದೆ. ಉಳಿದ ದಿನಗಳಲ್ಲಿ ಕ್ಷೇತ್ರದಲ್ಲಿ ಕೋಲ ಸೇವೆ ಜರುಗುತ್ತದೆ.
- ಭಾವೈಕ್ಯತೆಯ ಸನ್ನಿಧಿ: ಪಣೋಳಿಬೈಲು ಕ್ಷೇತ್ರವು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಇಲ್ಲಿ ಜಾತಿ, ಮತ, ಭೇದವಿಲ್ಲದೆ ಎಲ್ಲಾ ಧರ್ಮದವರೂ ಮುಕ್ತವಾಗಿ ಬಂದು ದೈವಕ್ಕೆ ಹರಕೆ ಸಲ್ಲಿಸಿ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿಕೊಳ್ಳುವ ಅಪೂರ್ವ ಭಾವೈಕ್ಯತೆಯ ಕೇಂದ್ರವಾಗಿದೆ.
accident
ಪೆರುವಾಯಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದ ಕೋಳಿ ಸಾಗಾಟದ ಪಿಕಪ್; ಚಾಲಕ ಅದೃಷ್ಟವಶಾತ್ ಪಾರು!
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಹೋಬಳಿ ವ್ಯಾಪ್ತಿಯ ಪೆರುವಾಯಿ ಗ್ರಾಮದ ಮುಖ್ಯ ಸೇತುವೆ ಬಳಿ ಶುಕ್ರವಾರ ಮುಂಜಾನೆ ಭೀಕರ ಅಪಘಾತವೊಂದು ಸಂಭವಿಸಿದೆ. ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಪಲ್ಟಿ ಹೊಡೆದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮುಂಜಾನೆ ಸಂಭವಿಸಿದ ಅವಘಡ:
ಶುಕ್ರವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಕೋಳಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವು ಪೆರುವಾಯಿ ಸೇತುವೆ ತಲುಪುತ್ತಿದ್ದಂತೆ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನವು ನಿಯಂತ್ರಣ ಕಳೆದುಕೊಂಡು ನೇರವಾಗಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅಪಘಾತದ ತೀವ್ರತೆಗೆ ವಾಹನವು ಸಂಪೂರ್ಣವಾಗಿ ಪಲ್ಟಿಯಾಗಿದ್ದು, ಸ್ಥಳೀಯರು ತಕ್ಷಣ ಧಾವಿಸಿ ಚಾಲಕನನ್ನು ರಕ್ಷಿಸಿದ್ದಾರೆ.

ಕಿರಿದಾದ ಸೇತುವೆ, ಪಕ್ಕದಲ್ಲೇ ಟ್ರಾನ್ಸ್ಫಾರ್ಮರ್: ಹೆಚ್ಚಿದ ಅಪಘಾತಗಳ ಭೀತಿ
ಪೆರುವಾಯಿ ಸೇತುವೆಯು ಕರ್ನಾಟಕ ಹಾಗೂ ಕೇರಳ ರಾಜ್ಯಗಳನ್ನು ಜೋಡಿಸುವ ಅಂತರರಾಜ್ಯ ಗಡಿಭಾಗದ ಅತ್ಯಂತ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಈ ರಸ್ತೆಯ ಮೂಲಕ ಪ್ರತಿನಿತ್ಯ ಕೇರಳದ ಬೆರಿಪದವು, ಉಪ್ಪಳ ಮುಂತಾದ ಭಾಗಗಳಿಗೆ ನೂರಾರು ವಾಹನಗಳು ಸಂಚರಿಸುತ್ತವೆ.
ಆದರೆ, ಈ ಸೇತುವೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರಿಗೆ ತೀವ್ರ ಮುಜುಗರ ಉಂಟುಮಾಡುತ್ತಿದೆ. ಇದರ ಜೊತೆಗೆ ಸೇತುವೆಯ ತೀರಾ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್ಫಾರ್ಮರ್ ಅಳವಡಿಸಲಾಗಿದ್ದು, ಇದು ಅಪಘಾತಗಳಿಗೆ ನೇರ ಆಹ್ವಾನ ನೀಡುವಂತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಇದೇ ತಿರುವಿನಲ್ಲಿ ಹತ್ತಕ್ಕೂ ಹೆಚ್ಚು ವಾಹನಗಳು ಅಪಘಾತಕ್ಕೀಡಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಅಕ್ರಮ ಕೆಂಪುಕಲ್ಲು ಸಾಗಾಟದ ಹಾವಳಿ:
ಕೇರಳ ಕಡೆಯಿಂದ ಪ್ರತಿನಿತ್ಯ ಈ ಮಾರ್ಗವಾಗಿ ಕೆಂಪುಕಲ್ಲಿನ ಅಕ್ರಮ ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದರಿಂದಾಗಿ ಈ ಕಿರಿದಾದ ರಸ್ತೆಯಲ್ಲಿ ವಾಹನಗಳ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದು ಕೂಡ ಇಲ್ಲಿನ ಸರಣಿ ಅಪಘಾತಗಳಿಗೆ ಪ್ರಮುಖ ಕಾರಣಗಳಲ್ಲೊಂದು ಎಂದು ಸ್ಥಳೀಯರು ದೂರಿದ್ದಾರೆ.
ಗ್ರಾಮಸ್ಥರ ಆಕ್ರೋಶ – ಅಭಿವೃದ್ಧಿಗೆ ಬಿಗಿ ಪಟ್ಟು:
“ಇದು ಅಂತರರಾಜ್ಯ ಸಂಪರ್ಕದ ಪ್ರಮುಖ ರಸ್ತೆಯಾಗಿದ್ದರೂ, ಯಾವುದೇ ಸರ್ಕಾರಗಳು ಈ ಸೇತುವೆಯ ಅಭಿವೃದ್ಧಿಗೆ ಮುತುವರ್ಜಿ ವಹಿಸಿಲ್ಲ. ಸೇತುವೆಯನ್ನು ಅಗಲಗೊಳಿಸದೆ, ಅಪಾಯಕಾರಿ ತಿರುವನ್ನು ಸರಿಪಡಿಸದೆ ಮತ್ತು ಇಲ್ಲಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಬೇರೆಡೆಗೆ ಸ್ಥಳಾಂತರಿಸದ ಹೊರತು ಈ ಭಾಗದಲ್ಲಿ ಅಪಘಾತಗಳನ್ನು ತಡೆಯಲು ಸಾಧ್ಯವಿಲ್ಲ” ಎಂದು ಪೆರುವಾಯಿ ಗ್ರಾಮಸ್ಥರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಇನ್ನಾದರೂ ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆ (PWD) ಎಚ್ಚೆತ್ತುಕೊಂಡು, ತಕ್ಷಣವೇ ಮಧ್ಯಪ್ರವೇಶಿಸಿ ಸೇತುವೆಯನ್ನು ವಿಸ್ತರಿಸಬೇಕು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆಗಳನ್ನು (Crash Barriers) ನಿರ್ಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
