Connect with us

crime

ಡೆಲ್ಲಿ ಮಹಿಳಾ ಪೊಲೀಸ್‌ ಕಮಾಂಡೋ ಹತ್ಯೆವರದಕ್ಷಿಣೆಗಾಗಿ ತಲೆಹೊಡೆದು ಕೊಲೆ ಮಾಡಿದ ಪತಿ

Published

on

ಮದುವೆಯಾದ ನಂತರ ಬಹುತೇಕ ಹಿಂಸೆಗಳು, ಕೊಲೆಗಳು ವರದಕ್ಷಿಣೆಗಾಗಿ ಬಾಯಿಬಿಡುವ ನರರಾಕ್ಷಸರಿಂದ ನಡೆಯುತ್ತಿರುವುದನ್ನು ಕೇಳುತ್ತಲೇ ಇರುತ್ತೇವೆ. ಆದರೆ ಒಬ್ಬ ಮಹಿಳಾ ಪೊಲೀಸ್‌ ಕೂಡಾ ಈ ವರದಕ್ಷಿಣೆ ಕಿರುಕುಳಕ್ಕೆ ತನ್ನ ಪತಿಯಿಂದಲೇ ಹತ್ಯೆಯಾಗುತ್ತಾರೆಂದರೆ ನಂಬುವುದೇ ಕಷ್ಟ ! ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂತಹುದೊಂದು ಘಟನೆ ನಡೆದಿರುವುದರಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ.

ಕಾಜಲ್‌ ಎಂಬವರೇ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆಗಳಿಂದ ನಿರಂತರವಾಗಿ ನೋವು ಅನುಭವಿಸುತ್ತಾ ಹತ್ಯೆಯಾದ ಡೆಲ್ಲಿ ಮಹಿಳಾ ಪೊಲೀಸ್ ಕಮಾಂಡೋ, ಪತಿ ಅಂಕುರ್ ಚೌಧರಿ ಎಂಬಾತನೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಪಾತಕಿ
ಡೆಲ್ಲಿ ಮಹಿಳಾ ಪೊಲೀಸ್ ಕಮಾಂಡೋ ಹತ್ಯೆ ಪ್ರಕರಣ ಕ್ಕೆ ಹೊಸ ತಿರುವು ದೊರೆತಿದ್ದು, ಹತ್ಯೆ ಮಾಡಿದ್ದು ಬೇರೆ ಯಾರು ಅಲ್ಲ ಸ್ವತಃ ಪತಿ ಎಂಬ ರೋಚಕ ಮಾಹಿತಿ ಕೊನೆಯ ಫೋನ್‌ ಕಾಲ್‌ನಲ್ಲಿ ಬಯಲಾಗಿದೆ.
ದೆಹಲಿಯ ಸ್ಪೆಷಲ್ ವೆಪನ್ಸ್ ಆ್ಯಂಡ್ ಟಾಕ್ಟಿಸ್ (SWAT) ಪೊಲೀಸ್ ಕಮಾಂಡೋ ಆಗಿದ್ದ ಕಾಜಲ್ ದುರಂತ ಅಂತ್ಯಕಂಡಿದ್ದು, ಕಾಜಲ್ ಹತ್ಯೆ ಡೆಲ್ಲಿ ಪೊಲೀಸ್ ಕಮಾಂಡೋ ವಿಭಾಗವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಪ್ರಕರಣದ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿದೆ. ಈ ಹತ್ಯೆ ಮಾಡಿದ್ದು ಬೇರೆ ಯಾರು ಅಲ್ಲ ಅದು ಸ್ವತಃ ಕಾಜಲ್ ಪತಿ ಅಂಕುರ್ ಚೌಧರಿ ಎಂದು ವರದಿಗಳು ಹೇಳಿದೆ.

ಕಾಜಲ್ ಕತೆ ಮುಗಿಸಿದ ಪತಿ
ಕಾಜಲ್ ದೆಹಲಿ SWAT ವಿಭಾಗದಲ್ಲಿ ದಕ್ಷ ಮಹಿಳಾ ಕಮಾಂಡೋ ಅಧಿಕಾರಿಯಾಗಿದ್ದರು. ಆದರೆ ಮನೆಯಲ್ಲಿ ಗಂಡನ ಟಾರ್ಚರ್‌ಗೆ ಬೇಸತ್ತಿದ್ದಳು. ವರದಕ್ಷಿಣೆ ಕಿರುಕುಳ, ಹಲ್ಲೆಗಳಿಂದ ಪ್ರತಿ ದಿನ ನೋವು ಅನುಭವಿಸುತ್ತಿದ್ದಳು. ಆದರೂ ತಾಳ್ಮೆಯಿಂದ ಸಂಸಾರ ಸರಿದೂಗಿಸಿಕೊಂಡು ಹೋಗುತ್ತಿದ್ದ ಕಾಜಲ್ ಮೇಲೆ ಗಂಡ ವರದಕ್ಷಿಣ ವಿಚಾರದಲ್ಲಿ ಮತ್ತೆ ಜಗಳವಾಡಿದ್ದಾನೆ. ಕಮಾಂಡೋ ಅಧಿಕಾರಿಯಾಗಿದ್ದ ಕಾರಣ ಫಿಸಿಕಲ್ ಫಿಟ್ನೆಸ್‌ಗೆ ಕಾಜಲ್ ಡಂಬೆಲ್ಸ್ ಸೇರಿದಂತೆ ಇತರ ಕೆಲ ವ್ಯಾಯಮಗಳನ್ನು ಮನೆಯಲ್ಲೇ ಮಾಡುತ್ತಿದ್ದರು. ಇದೇ ಡಂಬಲ್ಸ್ ತೆಗೆದು ಕಾಜಲ್ ತಲೆಗೆ ಹಲ್ಲೆ ಮಾಡಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ವರದಿಗಳು ಹೇಳುತ್ತಿದೆ.

ಕಾಜಲ್ ತನ್ನ ಸಹೋದರ ನಿಖಿಲ್‌ಕೆ ಕರೆ ಮಾಡಿ ಗಂಡನ ಕಿರುಕುಳ ಕುರಿತು ಹೇಳಿದ್ದಾಳೆ. ಅಷ್ಟರಲ್ಲೇ ಕಾಜಲ್ ಬಳಿ ಬಂದ ಗಂಡ ಅಂಕುರ್ ಚೌಧರಿ ಡಂಬಲ್ಸ್ ಮೂಲಕ ಹಲ್ಲೆ ಮಾಡಿದ್ದಾನೆ. ಎರಡೇ ಏಟಿಗೆ ಕಾಜಲ್ ನೆಲಕ್ಕುರುಳಿ ಬಿದ್ದಿದ್ದಾಳೆ, ಚೀರಾಟ ಕೇಳಿಸಿದೆ. ಸಹೋದರ ನಿಖಿಲ್ ಆಘಾತಗೊಂಡಿದ್ದಾನೆ. ಏನಾಯಿತು ಏನಾಯಿತು ಎಂದು ಕೇಳುತ್ತಿದ್ದಾನೆ. ಪತ್ನಿಯ ಕೈಯಲ್ಲಿದ್ದ ಫೋನ್ ತೆಗೆದು ಸಹೋದರಿಯನ್ನು ಹತ್ಯೆ ಮಾಡಿದ್ದೇನೆ ಎಂದು ಫೋನ್ ಕಟ್ ಮಾಡಿದ್ದಾನೆ ಎಂದು ನಿಖಿಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಹೋದರಿ ಕರೆ ಕಡಿತಗೊಳ್ಳುತ್ತಿದ್ದಂತೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಬಳಿಕ ನಿಖಿಲ್ ಸ್ಥಳಕ್ಕೆ ಧಾವಿಸಿದ್ದಾನೆ. ಇತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಷ್ಟರಲ್ಲೆ ಸಹೋದರಿ ಕಾಜಲ್ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇತ್ತ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಅಂಕುರ್ ಚೌಧರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತ ಅಂಕುರ್ ಚೌಧರಿ ತಾಯಿ ಸೇರಿದಂತೆ ಕಟುಂಬಸ್ಥರ ವಿರುದ್ಧ ನಿಖಿಲ್ ದೂರು ದಾಖಲಿಸಿದ್ದಾರೆ. ಅಂಕುರ್ ಚೌಧರಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ವಿಚಾರದಲ್ಲಿ ಕಿರುಕುಳ ನೀಡುತ್ತಿದ್ದರು. ಸಹೋದರಿ ಪೊಲೀಸ್ ಕಮಾಂಡೋ ಆಗಿದ್ದ ಕಾರಣ ಪ್ರತಿ ದಿನ ದುಡ್ಡಿಗಾಗಿ ಕಿರುಕುಳ ನೀಡುತ್ತಿದ್ದರು ಎಂದು ನಿಖಿಲ್ ಆರೋಪಿಸಿದ್ದಾನೆ. ಬಿಟ್ಟು ಬರವಂತೆ ಸಹೋದರಿಗೆ ಸೂಚಿಸಿದ್ದರು. ಆದರೆ ತಾಳ್ಮೆಯಿಂದ ಇರುತ್ತೇನೆ. ಸಂಸಾರ ಹಾಳಾಗುವುದು ಬೇಡ ಎಂದು ಅಲ್ಲೇ ಉಳಿದುಕೊಂಡಿದ್ದಳು ಎಂದು ನಿಖಿಲ್ ಆರೋಪಿಸಿದ್ದಾರೆ. ಸಹೋದರಿ ಕರೆ ಮಾಡಿ ಪತಿಯ ಹಲ್ಲೆ ಕುರಿತು ಹೇಳಿದ್ದಳು. ಪತಿ ಹಲ್ಲೆ ಆರಂಭಿಸಿದ ಕೆಲವೇ ನಿಮಿಷದಲ್ಲಿ ನನಗೆ ಕರೆ ಮಾಡಿ ಮಾಹಿತಿ ನೀಡಿದ್ದಳು. ನಾನು ಸಹೋದರಿ ಜೊತೆ ಮಾತನಾಡುತ್ತಿರುವಾಗಲೇ ಬಲವಾಗಿ ದಾಳಿ ಮಾಡಿ ಹತ್ಯೆ ಮಾಡಿದ್ದಾನೆ ಎಂದು ನಿಖಿಲ್ ಕಣ್ಮೀರಿಟ್ಟಿದ್ದಾನೆ.

ಹಿಂದಿನ ಘಟನೆಯನ್ನು ನೆನಪಿಸಿಕೊಳ್ಳುತ್ತಾ, ನಿಖಿಲ್ ಅವರು ಸುಮಾರು ಐದು ತಿಂಗಳ ಹಿಂದೆ ಕಾಜಲ್ ಅವರನ್ನು ತಮ್ಮ ಪತಿ ಕಪಾಳಮೋಕ್ಷ ಮಾಡಿದ್ದರು ಎಂದು ಹೇಳಿದರು. “ನಾನು ಅಲ್ಲಿಗೆ ಹೋಗಿ ನನ್ನೊಂದಿಗೆ ಬರಲು ಕೇಳಿದೆ. ಅಂಕುರ್ ಕ್ಷಮೆಯಾಚಿಸಿದರು ಮತ್ತು ಅದನ್ನು ಪುನರಾವರ್ತಿಸುವುದಿಲ್ಲ ಎಂದು ತನ್ನ ಮಗುವಿನ ಮೇಲೆ ಪ್ರಮಾಣ ಮಾಡಿದರು. ನನ್ನ ಸಹೋದರಿಗೆ ಅವಳು ಬಯಸಿದಾಗ ಮನೆಗೆ ಹಿಂತಿರುಗಬಹುದು ಮತ್ತು ಅಲ್ಲಿ ಇರಬೇಕಾಗಿಲ್ಲ ಎಂದು ನಾನು ಹೇಳಿದೆ” ಎಂದು ಅವರು ಹೇಳಿದರು.

ಆಕೆಯ ತಂದೆ ರಾಕೇಶ್ ನಿರಂತರ ವರದಕ್ಷಿಣೆ ಬೇಡಿಕೆಗಳನ್ನು ಆರೋಪಿಸಿದ್ದಾರೆ. “ನಾವು ಮದುವೆಯಲ್ಲಿ ಅವರಿಗೆ ಬುಲೆಟ್ ಬೈಕ್, ಚಿನ್ನಾಭರಣ ಮತ್ತು ನಗದು ನೀಡಿದ್ದೇವೆ, ಆದರೆ ಅವರು ನಮ್ಮ ಮಗನಿಗೆ ಕಾರು ಸಿಗುತ್ತಿತ್ತು (ಅವನು ಬೇರೆಯವರನ್ನು ಮದುವೆಯಾಗಿದ್ದರೆ) ಎಂದು ಹೇಳಿದರು. ನಂತರ, ನನ್ನ ಮಗಳು ಕಾರನ್ನು ಸಹ ವ್ಯವಸ್ಥೆ ಮಾಡಿದಳು, ಆದರೆ ಅವರು ಅವಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ. ನಾವು ಅವಳೊಂದಿಗೆ ಮುಕ್ತವಾಗಿ ಮಾತನಾಡಲು ಸಹ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.
ಆಕೆಯ ತಾಯಿ ಹೇಳುವಂತೆ, ಕುಟುಂಬವು ಮದುವೆಗೆ ಸುಮಾರು ₹20 ಲಕ್ಷ ಖರ್ಚು ಮಾಡಿ ಸಾಲ ಪಡೆದಿತ್ತು. “ಅವನು (ಅಂಕುರ್) ಅವಳಿಂದ ₹5 ಲಕ್ಷ ಪಡೆದಿದ್ದ… ಅವಳು (ಕಾಜಲ್) ತುಂಬಾ ಕಷ್ಟ ಅನುಭವಿಸಿದಳು. ನನಗೆ ನ್ಯಾಯ ಬೇಕು. ಅವನು ಒಬ್ಬ ದೈತ್ಯ,” ಎಂದು ಅವರು ಹೇಳಿದರು.

ದಂಪತಿಗಳು ಪಾಣಿಪತ್‌ನಲ್ಲಿ ಕಾಲೇಜು ದಿನಗಳಿಂದಲೂ ಪರಸ್ಪರ ಪರಿಚಿತರಾಗಿದ್ದರು ಮತ್ತು ನವೆಂಬರ್ 23, 2023 ರಂದು ವಿವಾಹವಾದರು. ಹರಿಯಾಣದ ಗನೌರ್‌ನಲ್ಲಿರುವ ಅವರ ಸ್ಥಳೀಯ ಮನೆಯಲ್ಲಿ ಆಗಾಗ್ಗೆ ಜಗಳಗಳು ಉಂಟಾಗುತ್ತಿದ್ದ ಕಾರಣ, ಅವರು ಡಿಸೆಂಬರ್ 2024 ರಲ್ಲಿ ಪಶ್ಚಿಮ ದೆಹಲಿಯ ಮೋಹನ್ ಗಾರ್ಡನ್‌ನಲ್ಲಿರುವ ಬಾಡಿಗೆ ವಸತಿಗೃಹಕ್ಕೆ ಸ್ಥಳಾಂತರಗೊಂಡರು ಎಂದು ಕುಟುಂಬ ತಿಳಿಸಿದೆ. ಆದಾಗ್ಯೂ, ಉದ್ವಿಗ್ನತೆ ಮುಂದುವರೆದಿದೆ ಎಂದು ವರದಿಯಾಗಿದೆ.

ಆರ್ಥಿಕ ಒತ್ತಡ ಮತ್ತು ದೇಶೀಯ ವಿವಾದಗಳು ಸಹ ಘರ್ಷಣೆಯ ಭಾಗವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. “ದಂಪತಿಗಳು ಕೆಲವು ಸಾಲಗಳನ್ನು ತೆಗೆದುಕೊಂಡಿದ್ದರು ಮತ್ತು ಆಗಾಗ್ಗೆ ಹಣಕಾಸು ಮತ್ತು ಮನೆಯ ವೆಚ್ಚಗಳ ಬಗ್ಗೆ ಜಗಳವಾಡುತ್ತಿದ್ದರು” ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಖಿಲ್ ಅವರ ದೂರಿನ ಆಧಾರದ ಮೇಲೆ ಮೋಹನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. “ಆರಂಭದಲ್ಲಿ ಅವನ ಮೇಲೆ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು. ಆಕೆಯ ಮರಣದ ನಂತರ, ಆರೋಪಗಳನ್ನು ಕೊಲೆಯಾಗಿ ಪರಿವರ್ತಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದರು.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

crime

ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Published

on

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.

ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige