Connect with us

crime

ಅನ್ಯ ಸಮುದಾಯದವನಿಂದ ತಂಗಿ ಗರ್ಭಿಣಿ ? ;ವಿಜಯನಗರದ ತ್ರಿವಳಿ ಕೊಲೆಯ ಕಾರಣ ಬಯಲು; ಕುಟುಂಬವನ್ನೇ ಸರ್ವನಾಶ ಮಾಡಿದ ಅಣ್ಣ

Published

on

ವಿಜಯನಗರ: ವಿಜಯನಗರದಲ್ಲಿ ನಡೆದಿದ್ದ ಭಯಾನಕ ತ್ರಿವಳಿ ಕೊಲೆ ಪ್ರಕರಣದ ಅಸಲಿ ಹಾಗೂ ರೋಚಕ ಕಾರಣ ಇದೀಗ ಬಯಲಾಗಿದೆ. ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಾನ್ಯ ಸಮುದಾಯದವನೊಂದಿನ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ ಮಾಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಅಕ್ಷಯ್, ಇದು ಕೇವಲ ದ್ವೇಷದ ಕೊಲೆಯಲ್ಲ, ಕುಟುಂಬದ ಗೌರವ ಉಳಿಸಿಕೊಳ್ಳಲು ಮಾಡಿದ ಕೃತ್ಯ ಎಂದು ಹೇಳಿಕೊಂಡಿದ್ದಾನೆ.

ತಂಗಿಯ ಪ್ರಿಯತಮ ಅನ್ಯ ಸಮುದಾಯಕ್ಕೆ ಸೇರಿದವ

ತಂಗಿ ಅಮೃತ (18) ಮೂರು ತಿಂಗಳ ಗರ್ಭಿಣಿ ಎಂಬ ವಿಚಾರ ತಿಳಿದ ನಂತರ ಆತ ತೀವ್ರ ಕೋಪಗೊಂಡಿದ್ದ. ತಂಗಿಯ ಪ್ರಿಯತಮ ಅನ್ಯ ಸಮುದಾಯಕ್ಕೆ ಸೇರಿದವನಾಗಿರುವುದೂ ಅಕ್ಷಯ್ ಕೋಪಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಅಕ್ಷಯ್ ತಂಗಿಯ ಮೊಬೈಲ್ ಪರಿಶೀಲಿಸಿದ ವೇಳೆ ಪಿಯುಸಿ ಓದುತ್ತಿದ್ದ ಯುವಕನೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ. ಬಳಿಕ ಆ ಯುವಕನಿಗೆ ಕರೆ ಮಾಡಿದ ಅಕ್ಷಯ್, ಇಬ್ಬರ ನಡುವೆ ಪ್ರೇಮ ಸಂಬಂಧ ಇರುವುದನ್ನು ತಿಳಿದುಕೊಂಡಿದ್ದ. ಇದರಿಂದ ಕೋಪಗೊಂಡ ಅಕ್ಷಯ್ ತಂಗಿಗೆ ಹಲ್ಲೆ ಮಾಡಿ ಬೆದರಿಸಿದ್ದಾನೆ. ಬಳಿಕ ಅಮೃತ ‘ನಾನು ಪ್ರೀತಿ ಮಾಡುವುದಿಲ್ಲ’ ಎಂದು ಕ್ಷಮೆ ಕೇಳಿದ್ದರೂ, ಜನವರಿ 26ರಂದು ಅವಳು ಗರ್ಭಿಣಿಯಾಗಿದ್ದಾಳೆ ಎಂಬ ವಿಚಾರ ಹೊರಬಿದ್ದಿದೆ. ಈ ವಿಷಯವನ್ನು ತಾಯಿ ಅಕ್ಷಯ್‌ಗೆ ತಿಳಿಸಿದ್ದರಿಂದ ಆತ ಇನ್ನಷ್ಟು ಕೋಪಗೊಂಡಿದ್ದಾನೆ. ಗರ್ಭಪಾತ ಮಾಡಿಸೋಣ ಎಂದು ಅಕ್ಷಯ್ ಹೇಳಿದ್ದರೂ, ತಂದೆ-ತಾಯಿ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ತನ್ನ ಮಾತಿಗೆ ಬೆಲೆ ಇಲ್ಲವೆಂದು ಭಾವಿಸಿದ ಅಕ್ಷಯ್, ತಂಗಿಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದಾನೆ.

ಒಂದೊಂದಾಗಿ ನಡೆಯಿತು ಭೀಕರ ಹತ್ಯೆ
ಪೊಲೀಸ್ ತನಿಖೆ ವೇಳೆ ದೊರೆತಿರುವ ಮಾಹಿತಿ ಪ್ರಕಾರ, ಜನವರಿ 26ರಂದು ಮೊದಲು ಅಕ್ಷಯ್ ತನ್ನ ತಾಯಿಯನ್ನು ಕೊಂದಿದ್ದಾನೆ. ಕೊಲೆ ಬಳಿಕ ಸ್ನಾನ ಮಾಡಿ ರಕ್ತಸಿಕ್ತ ಬಟ್ಟೆಗಳನ್ನು ನಾಶಪಡಿಸಿದ್ದಾನೆ. ಸಂಜೆ ತಂಗಿ ಮನೆಗೆ ಬಂದಾಗ ಆಕೆಯನ್ನೂ ಹತ್ಯೆ ಮಾಡಿ, ತಾಯಿಯ ಮೃತದೇಹದ ಪಕ್ಕದಲ್ಲೇ ಮಲಗಿಸಿದ್ದಾನೆ. ಮತ್ತೆ ಸ್ನಾನ ಮಾಡಿ ಅದೇ ಬಟ್ಟೆ ಧರಿಸಿದ್ದಾನೆ. ರಾತ್ರಿ 10.30ರ ಸುಮಾರಿಗೆ ಕುಡಿದು ಮನೆಗೆ ಬಂದ ತಂದೆ ಸೋಫಾದ ಮೇಲೆ ಕೂತಿದ್ದಾಗ, ಅಕ್ಷಯ್ ಅವರ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಾನೆ. ತಂದೆಯ ಮೃತದೇಹವನ್ನೂ ತಾಯಿ ಹಾಗೂ ತಂಗಿಯ ಪಕ್ಕ ಇಟ್ಟಿದ್ದಾನೆ. ನಂತರ ಆ ಕೊಠಡಿಗೆ ಬೀಗ ಹಾಕಿ, ಮತ್ತೆ ಸ್ನಾನ ಮಾಡಿ ಬೇರೆ ಬಟ್ಟೆ ಧರಿಸಿದ್ದಾನೆ.

ಮೂರು ಕೊಲೆಗಳ ಬಳಿಕ ತಾಯಿ ಹಾಗೂ ತಂಗಿಯ ಮೊಬೈಲ್‌ಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದ ಅಕ್ಷಯ್ (ಆತನ ಮೊಬೈಲ್ ಮನೆಯಲ್ಲೇ ಬಿಟ್ಟುಬಂದಿದ್ದ), ಜಯದೇವ ಆಸ್ಪತ್ರೆ ಬಳಿ ಫೋಟೋ ತೆಗೆದು ತನ್ನ ಮೊಬೈಲ್​ಗೆ ಕಳುಹಿಸಿದ್ದಾನೆ. ನಂತರ ಆ ಮೊಬೈಲ್‌ಗಳನ್ನು ಆಸ್ಪತ್ರೆ ಸಮೀಪದ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದಾನೆ. ಈ ಸಂದರ್ಭದಲ್ಲಿ ಅಕ್ಷಯ್ ತನ್ನ ಮಾವ ವಸಂತನನ್ನು ಭೇಟಿ ಮಾಡಿ ಎಲ್ಲ ವಿಚಾರ ತಿಳಿಸಿದ್ದಾನೆ. ಶವಗಳನ್ನು ಹೂತು ‘ಮಿಸ್ಸಿಂಗ್’ ನಾಟಕ ಆಡೋಣ ಎಂಬ ಐಡಿಯಾ ಮಾವನೇ ಕೊಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಂತೆ ಜನವರಿ 27ರ ರಾತ್ರಿ ಕೊಟ್ಟೂರಿಗೆ ವಾಪಸ್ ಆಗಿದ್ದ ಅಕ್ಷಯ್, ಟೈಲ್ಸ್ ಕಟರ್ ಹಾಗೂ ಡ್ರಿಲ್ಲಿಂಗ್ ಯಂತ್ರ ತರಿಸಿ, 5×5 ಅಳತೆಯ ಗುಂಡಿ ತೋಡಿ ಮೂವರ ಶವಗಳನ್ನು ಹೂತಿದ್ದಾನೆ.

ದೃಶ್ಯಂ ಸಿನಿಮಾ ನೋಡಿ ಅದರಂತೆ ಎಸ್ಕೇಪ್ ಆಗಲು ಪ್ಲಾನ್
ಮೂವರನ್ನು ಕೊಂದ ಅಕ್ಷಯ್​​ ರಾತ್ರಿಯಿಡೀ ತಪ್ಪಿಸಿಕೊಳ್ಳಲು ಪ್ಲಾನ್ ಮಾಡ್ತಾ ಟಿವಿ ನೋಡ್ತಿದ್ದ ಎನ್ನಲಾಗ್ತಿದೆ. ದೃಶ್ಯಂ ಸಿನಿಮಾ ನೋಡಿ ಅದರಂತೆ ಎಸ್ಕೇಪ್ ಆಗಲು ಪ್ಲಾನ್ ಮಾಡಿದ್ದನಂತೆ. ಪೊಲೀಸ್ರ ತನಿಖೆ ವೇಳೆ ಒಂದೊಂದೇ ವಿಚಾರಗಳು ಬಯಲಾಗಿದೆ. ಪೊಲೀಸರನ್ನೇ ಡೈವರ್ಟ್ ಮಾಡೋಕೆ ಮುಂದಾದ ಅಕ್ಷಯ್​ ಅಪ್ಪ-ಅಮ್ಮ ಹಾಗೂ ತಂಗಿ ಮಿಸ್ಸಿಂಗ್ ಆಗಿದ್ದಾರೆ ಎಂದು ಕಂಪ್ಲೇಂಟ್​ ಕೊಟ್ಟಿದ್ದಾನೆ. ಆದರೆ ಬೆಂಗಳೂರು ಪೊಲೀಸರಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ನಾಟಕ ಬಯಲಾಗಿದ್ದು, ಕೊನೆಗೆ ಅಕ್ಷಯ್ ಮತ್ತು ವಸಂತನನ್ನು ಬಂಧಿಸಲಾಗಿದೆ

ತಂಗಿ ಪ್ರಿಯಕರನನ್ನು ಕೊಂದನಾ?
ಯುವತಿಯ ಪ್ರಿಯಕರನನ್ನೂ ಕೊಲೆ ಮಾಡಿದ್ದಾನಾ..? ಎಂದು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಪೊಲೀಸರ ಜೊತೆ ಸೇರಿ ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಂಗಿಯ ಪ್ರಿಯಕರನನ್ನೂ ಕೊಲೆ ಮಾಡಿರಬಹುದು ಅನ್ನೋ ಅನುಮಾನ ವ್ಯಕ್ತವಾಗಿದೆ. ತನಿಖೆ‌ ವೇಳೆ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗ್ತಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಪುಣಚದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ, ಸೊತ್ತು ವಶ!

Published

on

ವಿಟ್ಲ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಮತ್ತು ಯಶ್ವಂತ್ (34) ಬಂಧಿತ ಆರೋಪಿಗಳಾಗಿದ್ದಾರೆ.

ದಾಳಿಯ ವಿವರ:

ಮೇ 30ರಂದು ರಾತ್ರಿ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಠಾಣಾ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ದಾಳಿಯ ವೇಳೆ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖವಾಗಿ ಸ್ಥಳದಲ್ಲಿದ್ದ 4 ಅಂಕದ ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ಕೋಳಿ ಕತ್ತಿ (ಬಾಳು), ಇತರೆ ಪರಿಕರಗಳು ಹಾಗೂ ರೂ. 4,145/- ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 119/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ: 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ: 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ: 112 ರ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.




Continue Reading

crime

ಬೆಳ್ಳಾರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸವಣೂರು ಬಳಿ ಅಕ್ರಮ ಗೋವಧೆ ಅಡ್ಡೆ ಪತ್ತೆ, ಮೂವರ ಬಂಧನ, ಪ್ರಮುಖ ಆರೋಪಿ ಪರಾರಿ!

Published

on

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಮಾಂತೂರು ಎಂಬಲ್ಲಿ ಶುಕ್ರವಾರ ಸಂಜೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಗೋವಧೆ ಅಡ್ಡೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತೋಟದ ಮಾಲೀಕ ತಲೆಮರೆಸಿಕೊಂಡಿದ್ದಾನೆ.

ಅಡಿಕೆ ತೋಟದಲ್ಲಿ ನಡೀತಿತ್ತು ಕೃತ್ಯ

ದಿನಾಂಕ 29.05.2026ರಂದು ಸಂಜೆ, ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ನಿವಾಸಿ ನಝೀರ್ ಎಂಬಾತನಿಗೆ ಸೇರಿದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋವಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ತೋಟವೊಂದರಲ್ಲಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ಒಂದು ಕೋಣ ಮತ್ತು ಎರಡು ದನಗಳು ಸೇರಿದಂತೆ ಒಟ್ಟು ಮೂರು ಮೂಕಪ್ರಾಣಿಗಳನ್ನು ವಧೆ ಮಾಡಿ, ಮಾಂಸ ಮಾಡಲು ಸಿದ್ಧಪಡಿಸುತ್ತಿದ್ದ ದೃಶ್ಯ ಕಂಡುಬಂದಿದ್ದು, ಮೂರು ಗೋವುಗಳ ಕಳೆಬರಹಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಮೂವರ ಬಂಧನ – ಪ್ರಮುಖ ಆರೋಪಿ ಪರಾರಿ

ಪೊಲೀಸರು ಧಾಳಿ ನಡೆಸಿದ ವೇಳೆ ಸ್ಥಳದಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು:

  • ಕೆ. ಅಬ್ದುಲ್ ರಫೀಕ್ (37 ವರ್ಷ)
  • ಅದ್ರಾಮ ಮಂತೂರು (41 ವರ್ಷ)
  • ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ.

ವಿಚಾರಣೆಯ ವೇಳೆ ಇವರು ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದೆ. ಆದರೆ, ಈ ಅಕ್ರಮ ಗೋವಧೆ ಅಡ್ಡೆಯ ಪ್ರಮುಖ ಆರೋಪಿ ಹಾಗೂ ಸ್ಥಳದ ಮಾಲೀಕನಾದ ನಝೀರ್ ಧಾಳಿಯ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೆಳ್ಳಾರೆ ಎಸ್‌ಐ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ

ಬೆಳ್ಳಾರೆ ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಬಿ.ಪಿ. ಅವರ ನೇತೃತ್ವದಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸತೀಶ್, ಶ್ರೀಧರ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪ್ರಕರಣ ದಾಖಲು: ಸ್ಥಳದಲ್ಲಿದ್ದ ಜಾನುವಾರು ಮಾಂಸ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ: ಸವಣೂರು ಮತ್ತು ಮಾಂತೂರು ಪರಿಸರದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋವಧೆ ದಂಧೆಕೋರರಿಗೆ ಈ ದಾಳಿಯ ಮೂಲಕ ಬೆಳ್ಳಾರೆ ಪೊಲೀಸರು ಸಿಂಹಸ್ವಪ್ನವಾಗಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ತತ್‌ಕ್ಷಣದ ಭರ್ಜರಿ ಕಾರ್ಯಾಚರಣೆಯನ್ನು ಪರಿಸರದ ಸಾರ್ವಜನಿಕರು ಹಾಗೂ ನಾಗರಿಕರು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

Continue Reading

Bantawala

ಬಂಟ್ವಾಳ: ಅಕ್ರಮ ಜಾನುವಾರು ವಧೆ ಅಡ್ಡೆಗೆ ಪೊಲೀಸರ ದಿಢೀರ್ ದಾಳಿ; ಇಬ್ಬರು ಆರೋಪಿಗಳ ಬಂಧನ, 6 ದನಗಳ ರಕ್ಷಣೆ!

Published

on

ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಅಡ್ಡೆಯೊಂದಕ್ಕೆ ಬಂಟ್ವಾಳ ನಗರ ಪೊಲೀಸರು ಬುಧವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಧೆಗಾಗಿ ಕಟ್ಟಿ ಹಾಕಲಾಗಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ.

ನಡೆದದ್ದೇನು?

ಮೇ 27ರ ಬುಧವಾರ ತಡರಾತ್ರಿ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಮತ್ತು ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಆರೋಪಿಗಳು ಜಾನುವಾರೊಂದನ್ನು ವಧೆ ಮಾಡಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ದನಗಳನ್ನು ವಧೆ ಮಾಡುವ ಉದ್ದೇಶದಿಂದ ಅಲ್ಲಿ ಕಟ್ಟಿಹಾಕಲಾಗಿತ್ತು. ಆದರೆ ಅವುಗಳನ್ನು ಕೊಲ್ಲುವ ಮೊದಲೇ ಪೊಲೀಸರು ಎಂಟ್ರಿ ಕೊಟ್ಟು ಆರೋಪಿಗಳ ಸ್ಕೆಚ್ ಉಲ್ಟಾ ಮಾಡಿದ್ದಾರೆ.

ಸ್ವಾಧೀನಪಡಿಸಿಕೊಂಡ ಸೊತ್ತುಗಳು:

ಸ್ಥಳದಲ್ಲಿ ವಧೆ ಮಾಡಲಾಗಿದ್ದ ಒಂದು ಜಾನುವಾರಿನ ಮಾಂಸ

ವಧೆಯಿಂದ ಪಾರುಗಾಣಿಸಿ ರಕ್ಷಿಸಲಾದ 06 ಜೀವಂತ ಜಾನುವಾರುಗಳು

ಕೃತ್ಯಕ್ಕೆ ಬಳಸಲಾದ ಒಂದು ಕಾರು ಹಾಗೂ ಮಾರಕಾಸ್ತ್ರ/ಸಾಮಾಗ್ರಿಗಳು

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಈ ದಂಧೆ ನಡೆಸುತ್ತಿರುವುದು ವಿಚಾರಣೆ ವೇಳೆ ದೃಢಪಟ್ಟಿದೆ. ಪೊಲೀಸರು ಕೃತ್ಯದ ಸ್ಥಳದಲ್ಲಿದ್ದ ಮಾಂಸ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ

ಪ್ರಕರಣ ದಾಖಲು:

ಬಂಧಿತ ಆರೋಪಿಗಳು, ರಕ್ಷಿಸಲಾದ ಜಾನುವಾರುಗಳು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು, ಅ crime ಸಂಖ್ಯೆ 68/2026 ರಂತೆ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020” ರ ಕಲಂ: 4, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.






Continue Reading

Trending

Copyright © 2025 Deevatige

error: Content is protected !!