crime
ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/02/sampaje-case-1-1000x600.jpg&description=ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..', 'pinterestShare', 'width=750,height=350'); return false;" title="Pin This Post">
ಪತಿ ಇಲ್ಲದ ಸಮಯಕ್ಕೆ ಬೆಡ್ ರೂಮ್ಗೆ ನುಗ್ಗಿ ಹಿಂದಿನಿಂದ ಗಟ್ಟಿಯಾಗಿ ತಬ್ಬಿಕೊಂಡ ಕಾಮುಕ , ಅತ್ಯಾಚಾರ ನಡೆಸಲು ಮಂಚದ ಮೇಲೆ ದೂಡಿದ, ವಿರೋಧಿಸಿದ್ದಕ್ಕೆ ಮುಖದ ಮೇಲೆ ಪರಚಿ ಮೂಗು ಕಚ್ಚಿದ, ಸಮಸ್ಯೆ ಗಂಭೀರವಾಗಬಹುದೆಂದು ಗಂಟಲಿನಲ್ಲಿ ಅದುಮಿ ಕೊಲೆ ಮಾಡಲು ಯತ್ನಿಸಿದ, ಕಣ್ಣಾರೆ ನೋಡಿ ಜೋರಾಗಿ ಕೂಗುತ್ತಿರುವ ಮಗುವಿನ ಬೊಬ್ಬೆಗೆ ಗಡಿಬಿಡಿಗೊಂಡ ಕಾಮುಕ ಮಾವ…. ರಕ್ತಸಿಕ್ತವಾದ ಪತ್ನಿ ತನ್ನ ಸಂಕಷ್ಟವನ್ನು ಆಗತಾನೆ ಬಂದ ಪತಿಯೊಂದಿಗೆ ಹೇಳಿಕೊಂಡಾಗ ತಂದೆಗೆ ಸಾಥ್ ನೀಡಿದ ಪತಿ, ತನ್ನ ಪತಿಯ ತಂದೆಯೇ ಮಾಡಿದ ಘೋರ ಕೃತ್ಯಕ್ಕೆ ನಲುಗಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆ- ಇದು ಜಿಲ್ಲೆಯ ಗಡಿ ಪ್ರದೇಶ ಸಂಪಾಜೆಯಲ್ಲಿ ಕಾಮುಕ ಮಾವನೊಬ್ಬ ನಡೆಸಿದ ಹೃದಯವಿದ್ರಾವಕ ಘಟನೆ. ಕಾಮುಕ ಮಾವ ಮತ್ತು ವ್ಯಬಿಚಾರಿ ಮಾವನ ಕೃತ್ಯಕ್ಕೆ ಸಾಥ್ ನೀಡಿದ ಪತಿಗೂ ಬಿದ್ದಿದೆ ಕೇಸ್…

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೊಳ್ಳೆಮಾರು ನಿವಾಸಿ ಸಾಹಿತ್ಯ ರೈ ಅವರೇ ಅತ್ಯಾಚಾರ ಯತ್ನಕ್ಕೆ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದವರಾಗಿದ್ದು, ಕಾಮುಕ ಮಾವ ( ಪತಿಯ ತಂದೆ ) ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ನಿತ್ಯಾನಂದ ರೈ ಮತ್ತು ಪತಿ ಯಶಸ್ವಿ ಎನ್ ರೈ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ಫೆ.3ರಂದು ರಾತ್ರಿ ಘಟನೆ ನಡೆದಿದ್ದು, ತನ್ನ ಪತಿ ಆಸ್ಪತ್ರೆಗೆ ಸೇರಿಸಲು ನಿರಾಕರಿಸಿದ ಬೆನ್ನಲ್ಲೇ ರಾತ್ರಿ 11.30ಕ್ಕೆ ಕಾರಿನಲ್ಲಿ ಬಂದ ತಂದೆ ತಾಯಿ ರಕ್ತಸಿಕ್ತರಾಗಿ ಬಿದ್ದಿದ್ದ ಸಾಹಿತ್ಯರನ್ನು ತಕ್ಷಣ ಕರೆದುಕೊಂಡು ಹೋಗಿ ಸಂಪಾಜೆ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಂಟ್ವಾಳದ ಮಂಚಿಗೆ ಹೋಗುವ ದಾರಿ ಮದ್ಯೆ ಮನೆ ಸಮೀಪ ತಲುಪುತ್ತಲೇ ಉಸಿರಾಟಕ್ಕೆ ತೊಂದರೆಯಾಗಿದೆ. ತಕ್ಷಣ ನೇರವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಹಿತ್ಯ ಅವರನ್ನು ಯಶಸ್ವಿಯವರಿಗೆ ದಿನಾಂಕ 21.04.2021 ರಂದು ವಿವಾಹ ಮಾಡಿಕೊಡಲಾಗಿತ್ತು. ಅವರಿಗೆ ಮೂರುವರೆ ವರ್ಷದ ಒಂದು ಗಂಡು ಮಗು ಇದೆ. ಪತಿ ಮನೆ ಸಂಪಾಜೆ ಕಲ್ಲುಗುಂಡಿಯಲ್ಲಿ ಸಾಹಿತ್ಯ, ಅವರ ಪತಿ ಯಶಸ್ವಿ, ಮೂರುವರೆ ವರ್ಷದ ಮಗು ಹಾಗೂ ಪತಿಯ ತಂದೆ ನಿತ್ಯಾನಂದ ಸೇರಿ ನಾಲ್ಕು ಜನ ಮಾತ್ರ ವಾಸಿಸುತ್ತಿದ್ದಾರೆ. ಸಾಹಿತ್ಯ ಅವರ ವಿವಾಹವಾಗಿ ಸುಮಾರು ಮೂರು ವರ್ಷ ತನಕ ಉತ್ತಮ ರೀತಿಯ ಸಂಬಂಧದಲ್ಲಿ ಇದ್ದಿದ್ದು, ಆದರೆ ಅನಂತರ ಕ್ರಮೇಣವಾಗಿ ಮಾವ ನಿತ್ಯಾನಂದನ ಕಾಮುಕ ದೃಷ್ಠಿ ಸಾಹಿತ್ಯರವರ ಮೇಲೆ ಬಿದ್ದಿತ್ತು. ಹಲವು ಸಲ ಸಾಹಿತ್ಯರವರ ಮೈ ಮೇಲೆ ಮಾವ ಕೈ ಮಾಡಲು ಬಂದಿದ್ದು ಅದನ್ನು ವಿರೋಧಿಸಿದಕ್ಕಾಗಿ ಮಾವನು ನನ್ನ ಪತಿಯಲ್ಲಿ ನೀನು ಅವಳಿಗೆ ವಿಚ್ಛೇದನ ಕೊಡು ನಿನಗೆ ಬೇರೆ ಚಂದದ ಹುಡುಗಿಯನ್ನು ನೋಡಿ ವಿವಾಹ ಮಾಡಿಕೊಡುವುದಾಗಿ ಮಾತ್ರವಲ್ಲದೆ ಕೆಲವೊಮ್ಮೆ ಸಾಹಿತ್ಯರವರ ಗಂಡನಲ್ಲಿ ಅಂದರೆ ಅವರ ಮಗನಲ್ಲಿ ನೀನು ಅವಳನ್ನು ಕೊಲೆ ಮಾಡು ಹೆದರಬೇಡ, ಜೈಲಲ್ಲಿ ಬೇಕಿದ್ದರೆ ನಾನು ಕುಳಿತುಕೊಳ್ಳುತ್ತೇನೆ ಎಂದು ಸಹ ಮಾವ ಪ್ರಚೋದಿಸುತ್ತಲೇ ಇದ್ದಾರೆ ಎಂದು ಭಯಭೀತರಾಗಿ ಸಾಹಿತ್ಯ ತನ್ನ ತಂದೆ ತಾಯಿಯವರಲ್ಲಿ ಹೇಳಿಕೊಂಡಿದ್ದರು. ಆ ಸಮಯ ಸಾಹಿತ್ಯರವರನ್ನು ಸಮಾಧಾನ ಪಡಿಸುತ್ತಿದ್ದ ತಂದೆ ತಾಯಿಯು ನೀನು ಹೇಗಾದರೂ ಮಾಡಿ ಸಹಿಸಿಕೊಂಡು ಗಂಡನ ಮನೆಯಲ್ಲಿ ಜೀವನ ನಡೆಸು, ನೀನು ಗಂಡನನ್ನು ಬಿಟ್ಟು ಬಂದರೆ ಅದು ಕುಟುಂಬಕ್ಕೆ ಅವಮಾನ ಎಂದು ಸಾಹಿತ್ಯರವರಿಗೆ ಬುದ್ಧಿ ಮಾತು ಹೇಳುತ್ತಿದ್ದರು. ಅದೇ ರೀತಿ ಸಾಹಿತ್ಯ ಮಾವನ ಕಿರುಕುಳ ಮತ್ತು ಅಸಭ್ಯ ವರ್ತನೆಗಳ ಬಗ್ಗೆ ತನ್ನ ಪತಿಯಲ್ಲಿ ಹೇಳಿಕೊಂಡಾಗ ನೀನು ತಂದೆಯ ಮಾತನ್ನು ಪಾಲಿಸಬೇಕೆಂದು ಪತ್ನಿಗೆ ಜೋರು ಮಾಡಿ ಆಕೆಯ ಬಾಯಿ ಮುಚ್ಚಿಸುತ್ತಿದ್ದರು.

ಪತಿ ಯಶಸ್ವಿ ಎನ್ ರೈ ಸಂಪಾಜೆಪೇಟೆಯಲ್ಲಿ ಆಟೋಮೊಬೈಲ್ ಶಾಪ್ ಅನ್ನು ಹೊಂದಿದ್ದು ಅವರು ಪ್ರತಿದಿನ ರಾತ್ರಿ ಮನೆಗೆ ಬರುವಾಗ ಸುಮಾರು 9:00 ಯಾಗುತ್ತಿತ್ತು. ಫೆ.3ರಂದು ರಾತ್ರಿ ಸಾಹಿತ್ಯರವರ ಗಂಡನು ಬರುವ ಕೆಲವು ಸಮಯಗಳ ಮುಂಚೆ ಸಾಹಿತ್ಯ ತನ್ನ ಕೋಣೆಯಲ್ಲಿ ಬಟ್ಟೆಗಳನ್ನು ಮಡಚುತ್ತಿರುವ ಸಮಯ ಮಾವ ನಿತ್ಯಾನಂದ ಸಾಹಿತ್ಯಳ ಕೋಣೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ. ಮುಂದುವರಿದು ಮಂಚಕ್ಕೆ ದೂಡಿ ಆಕೆಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದು, ಆ ಸಮಯ ಸಾಹಿತ್ಯ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಯತ್ನಿಸಿದಾಗ ಕಾಮುಕ ಮಾವ ಆಕೆಯ ಗಂಟಲಲ್ಲಿ ಅಮುಕಿ ಹಿಡಿದಿದ್ದು ಪರಿಣಾಮವಾಗಿ ಗಂಟಲಿಗೆ ಮತ್ತು ಶರೀರದ ಭಾಗಗಳಿಗೆ ಪರಚಿತ ಗಾಯಗಳಾಗಿರುವುದಾಗಿದೆ ಮತ್ತು ಅದೇ ರೀತಿ ಮತ್ತೆ ಮತ್ತೆ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಕಾಮುಕ ಆಕೆಯ ಮೂಗಿಗೆ ಕಚ್ಚಿ ತೀವ್ರ ಸ್ವರೂಪದ ಗಾಯ ಉಂಟು ಮಾಡಿದ್ದು ಮೂಗಿನ ಗಾಯದಿಂದ ತೀವ್ರ ರಕ್ತ ಸುರಿದು ರೂಮಿನಲ್ಲಿಯೇ ಬಿದ್ದಿದ್ದರು. ಆ ವೇಳೆಗೆ ಆಕೆಯ ಎಳೆಯ ಮಗು ಈ ಕೃತ್ಯವನ್ನು ನೋಡಿ ಜೋರಾಗಿ ಕೂಗಿದ್ದು ಆ ಸಮಯ ಮಾವ ಮಗುವನ್ನು ಸಮಾಧಾನ ಪಡಿಸುವ ಸಲುವಾಗಿ ಮೇಲೆದ್ದಾಗ ಆಕೆ ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆ ಸಮಯ ಈ ದಿನ ನೀನು ಹೇಗೆ ತಪ್ಪಿಸಿಕೊಳ್ಳುತ್ತಿ ನೋಡುತ್ತೇನೆ ಮತ್ತು ನೀನು ಈ ಬಗ್ಗೆ ಹೊರಗೆ ಈ ವಿಷಯವನ್ನು ತಿಳಿಸಿದರೆ ನಿನ್ನನ್ನು ಕೊಲೆ ನಡೆಸದೆ ಬಿಡುವುದಿಲ್ಲ ಎಂದು ಮಾವ ಜೀವ ಬೆದರಿಕೆ ಹಾಕಿದಾಗ ನಿರ್ವಾಹವಿಲ್ಲದೆ ಮಗು ಮತ್ತು ಸಾಹಿತ್ಯ ಜೋರಾಗಿ ಕೂಗಿ ಬೊಬ್ಬೆ ಹಾಕಿದಾಗ ಮಗುವಿನತ್ತ ಹೋದ ಮಾವನ ಕಣ್ತಪ್ಪಿಸಿ ಸಾಹಿತ್ಯ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಸಮಯ ಗಂಡನು ಮನೆಗೆ ಬಂದಿದ್ದು, ಹೊರಗಡೆ ವಿಚಾರವನ್ನು ಪತಿಯಲ್ಲಿ ತಿಳಿಸಿದಾಗ ಅವರು ತಂದೆಯ ಪರವಾಗಿ ಮಾತನಾಡಿ ನೀನು ಮನೆಯಿಂದ ಹೊರಗೆ ಯಾಕೆ ಬಂದಿದ್ದು ಎಂದು ಹೇಳಿ ಯಾವುದನ್ನೂ ಕೇಳಿಸಿಕೊಳ್ಳದೆ ಸಾಹಿತ್ಯಾಳಿಗೆ ಹಿಗ್ಗಾ ಮುಗ್ಗಾ ಬೈದಿದ್ದಾನೆ. ನಿಮ್ಮ ತಂದೆಯಿಂದ ಹಲ್ಲೆಗೊಳಗಾಗಿ ತನ್ನ ಮೂಗಿನಿಂದ ರಕ್ತ ಸುರಿಯುತ್ತಿದ್ದು, ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿ ಎಂದು ಪತಿಯಲ್ಲಿ ಅತ್ತು ಗೋಗರೆದಾಗ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗದೆ ನೀನು ಇಲ್ಲೇ ಸತ್ತುಹೋಗು ಎಂದು ಪತ್ನಿಗೆ ಹೇಳಿದ್ದಾನೆ. ಅನ್ಯ ಮಾರ್ಗವಿಲ್ಲದೆ ಮನೆಗೆ ಫೋನು ಮಾಡಿ ಪೊಷಕರಿಗೆ ಸಾಹಿತ್ಯ ವಿಷಯವನ್ನು ತಿಳಿಸಿದ್ದಾರೆ.
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತ್ಯ ಪ್ರಕರಣದ ಬಗ್ಗೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ZERO FIR NO 01/2026 ಕಲಂ:85, 74, 115(2), 117(2), 351(2) ಜೊತೆಗೆ 3(5)BNS ನಂತೆ ಪ್ರಕರಣ ದಾಖಲಿಸಿಕೊಂಡು, ಘಟಣಾ ಸ್ಥಳದ ಆಧಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ.
arrest
ಪುಣಚದಲ್ಲಿ ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ, ಸೊತ್ತು ವಶ!
ವಿಟ್ಲ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46) ಮತ್ತು ಯಶ್ವಂತ್ (34) ಬಂಧಿತ ಆರೋಪಿಗಳಾಗಿದ್ದಾರೆ.
ದಾಳಿಯ ವಿವರ:
ಮೇ 30ರಂದು ರಾತ್ರಿ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಠಾಣಾ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.
ದಾಳಿಯ ವೇಳೆ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖವಾಗಿ ಸ್ಥಳದಲ್ಲಿದ್ದ 4 ಅಂಕದ ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ಕೋಳಿ ಕತ್ತಿ (ಬಾಳು), ಇತರೆ ಪರಿಕರಗಳು ಹಾಗೂ ರೂ. 4,145/- ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 119/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ: 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ: 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ: 112 ರ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



crime
ಬೆಳ್ಳಾರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸವಣೂರು ಬಳಿ ಅಕ್ರಮ ಗೋವಧೆ ಅಡ್ಡೆ ಪತ್ತೆ, ಮೂವರ ಬಂಧನ, ಪ್ರಮುಖ ಆರೋಪಿ ಪರಾರಿ!
ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಮಾಂತೂರು ಎಂಬಲ್ಲಿ ಶುಕ್ರವಾರ ಸಂಜೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಗೋವಧೆ ಅಡ್ಡೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತೋಟದ ಮಾಲೀಕ ತಲೆಮರೆಸಿಕೊಂಡಿದ್ದಾನೆ.
ಅಡಿಕೆ ತೋಟದಲ್ಲಿ ನಡೀತಿತ್ತು ಕೃತ್ಯ
ದಿನಾಂಕ 29.05.2026ರಂದು ಸಂಜೆ, ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ನಿವಾಸಿ ನಝೀರ್ ಎಂಬಾತನಿಗೆ ಸೇರಿದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋವಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ತೋಟವೊಂದರಲ್ಲಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ಒಂದು ಕೋಣ ಮತ್ತು ಎರಡು ದನಗಳು ಸೇರಿದಂತೆ ಒಟ್ಟು ಮೂರು ಮೂಕಪ್ರಾಣಿಗಳನ್ನು ವಧೆ ಮಾಡಿ, ಮಾಂಸ ಮಾಡಲು ಸಿದ್ಧಪಡಿಸುತ್ತಿದ್ದ ದೃಶ್ಯ ಕಂಡುಬಂದಿದ್ದು, ಮೂರು ಗೋವುಗಳ ಕಳೆಬರಹಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಮೂವರ ಬಂಧನ – ಪ್ರಮುಖ ಆರೋಪಿ ಪರಾರಿ
ಪೊಲೀಸರು ಧಾಳಿ ನಡೆಸಿದ ವೇಳೆ ಸ್ಥಳದಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು:
- ಕೆ. ಅಬ್ದುಲ್ ರಫೀಕ್ (37 ವರ್ಷ)
- ಅದ್ರಾಮ ಮಂತೂರು (41 ವರ್ಷ)
- ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ.

ವಿಚಾರಣೆಯ ವೇಳೆ ಇವರು ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದೆ. ಆದರೆ, ಈ ಅಕ್ರಮ ಗೋವಧೆ ಅಡ್ಡೆಯ ಪ್ರಮುಖ ಆರೋಪಿ ಹಾಗೂ ಸ್ಥಳದ ಮಾಲೀಕನಾದ ನಝೀರ್ ಧಾಳಿಯ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಳ್ಳಾರೆ ಎಸ್ಐ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ
ಬೆಳ್ಳಾರೆ ಸಬ್ ಇನ್ಸ್ಪೆಕ್ಟರ್ ಸಂತೋಷ್ ಬಿ.ಪಿ. ಅವರ ನೇತೃತ್ವದಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸತೀಶ್, ಶ್ರೀಧರ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಪ್ರಕರಣ ದಾಖಲು: ಸ್ಥಳದಲ್ಲಿದ್ದ ಜಾನುವಾರು ಮಾಂಸ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.
ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ: ಸವಣೂರು ಮತ್ತು ಮಾಂತೂರು ಪರಿಸರದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋವಧೆ ದಂಧೆಕೋರರಿಗೆ ಈ ದಾಳಿಯ ಮೂಲಕ ಬೆಳ್ಳಾರೆ ಪೊಲೀಸರು ಸಿಂಹಸ್ವಪ್ನವಾಗಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ತತ್ಕ್ಷಣದ ಭರ್ಜರಿ ಕಾರ್ಯಾಚರಣೆಯನ್ನು ಪರಿಸರದ ಸಾರ್ವಜನಿಕರು ಹಾಗೂ ನಾಗರಿಕರು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.
Bantawala
ಬಂಟ್ವಾಳ: ಅಕ್ರಮ ಜಾನುವಾರು ವಧೆ ಅಡ್ಡೆಗೆ ಪೊಲೀಸರ ದಿಢೀರ್ ದಾಳಿ; ಇಬ್ಬರು ಆರೋಪಿಗಳ ಬಂಧನ, 6 ದನಗಳ ರಕ್ಷಣೆ!
ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಅಡ್ಡೆಯೊಂದಕ್ಕೆ ಬಂಟ್ವಾಳ ನಗರ ಪೊಲೀಸರು ಬುಧವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಧೆಗಾಗಿ ಕಟ್ಟಿ ಹಾಕಲಾಗಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.

ನಡೆದದ್ದೇನು?
ಮೇ 27ರ ಬುಧವಾರ ತಡರಾತ್ರಿ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿರವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಸಿಬ್ಬಂದಿಗಳ ತಂಡ ಸ್ಥಳಕ್ಕೆ ಜಂಟಿ ದಾಳಿ ನಡೆಸಿದೆ.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಆರೋಪಿಗಳು ಜಾನುವಾರೊಂದನ್ನು ವಧೆ ಮಾಡಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ದನಗಳನ್ನು ವಧೆ ಮಾಡುವ ಉದ್ದೇಶದಿಂದ ಅಲ್ಲಿ ಕಟ್ಟಿಹಾಕಲಾಗಿತ್ತು. ಆದರೆ ಅವುಗಳನ್ನು ಕೊಲ್ಲುವ ಮೊದಲೇ ಪೊಲೀಸರು ಎಂಟ್ರಿ ಕೊಟ್ಟು ಆರೋಪಿಗಳ ಸ್ಕೆಚ್ ಉಲ್ಟಾ ಮಾಡಿದ್ದಾರೆ.
ಸ್ವಾಧೀನಪಡಿಸಿಕೊಂಡ ಸೊತ್ತುಗಳು:
ಸ್ಥಳದಲ್ಲಿ ವಧೆ ಮಾಡಲಾಗಿದ್ದ ಒಂದು ಜಾನುವಾರಿನ ಮಾಂಸ
ವಧೆಯಿಂದ ಪಾರುಗಾಣಿಸಿ ರಕ್ಷಿಸಲಾದ 06 ಜೀವಂತ ಜಾನುವಾರುಗಳು
ಕೃತ್ಯಕ್ಕೆ ಬಳಸಲಾದ ಒಂದು ಕಾರು ಹಾಗೂ ಮಾರಕಾಸ್ತ್ರ/ಸಾಮಾಗ್ರಿಗಳು

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಈ ದಂಧೆ ನಡೆಸುತ್ತಿರುವುದು ವಿಚಾರಣೆ ವೇಳೆ ದೃಢಪಟ್ಟಿದೆ. ಪೊಲೀಸರು ಕೃತ್ಯದ ಸ್ಥಳದಲ್ಲಿದ್ದ ಮಾಂಸ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ
ಪ್ರಕರಣ ದಾಖಲು:
ಬಂಧಿತ ಆರೋಪಿಗಳು, ರಕ್ಷಿಸಲಾದ ಜಾನುವಾರುಗಳು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು, ಅ crime ಸಂಖ್ಯೆ 68/2026 ರಂತೆ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020” ರ ಕಲಂ: 4, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada5 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala3 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
