Connect with us

crime

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದ ಅಪ್ಪ !

Published

on

ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಅಧಿಕಾರ ದಾಹಕ್ಕಾಗಿ ತನ್ನ 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜವನ್ನು ಬೆಚ್ಚಿ ಬೀಳಿಸಿದೆ

ಮುಂಬೈ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಪಾಂಡುರಂಗ ಕೊಂಡ್ಮಂಗಲೆ ಎಂಬ ವ್ಯಕ್ತಿಗೆ ಮೂವರು ಮಕ್ಕಳು. ಆತನಿಗೆ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಆಸೆಯಾಗಿತ್ತು. ಆದರೆ, ಈ ಚುನಾವಣೆಗೂ ಮೊದಲೇ ಆತನ 6 ವರ್ಷದ ಮಗಳು ಕೊಲೆಯಾಗಿದ್ದಳು. ಆ ಮಗುವಿನ ಸಾವಿನ ಕಾರಣ ಹುಡುಕುತ್ತಾ ಹೊರಟ ಪೊಲೀಸರಿಗೆ ಅಚ್ಚರಿ ಕಾದಿತ್ತು. ಆ ಮಗುವಿನ ಹಂತ ಯಾರಿರಬಹುದು ಎಂಬ ಕುತೂಹಲ ಊರಿನವರಿಗೂ ಇತ್ತು. ಆದರೆ, ಆ ಮಗುವಿನ ಅಪ್ಪನೇ ಕೊಲೆಗಾರ (Killer) ಎಂದು ತಿಳಿದು ಪೊಲೀಸರು, ಊರಿನವರಿಗೆ ಮಾತ್ರವಲ್ಲ ಆತನ ಮನೆಯವರಿಗೂ ಶಾಕ್ ಆಗಿತ್ತು.

ಮುಂಬರುವ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸಲು ಆ ವ್ಯಕ್ತಿಗೆ 2 ಅಥವಾ 2ಕ್ಕಿಂತ ಕಡಿಮೆ ಮಕ್ಕಳಿರಬೇಕು ಎಂದು ನಿಯಮವಿತ್ತು. ಆದರೆ, ಪಾಂಡುರಂಗನಿಗೆ ಮೂವರು ಮಕ್ಕಳಿದ್ದರು. ಹೀಗಾಗಿ, ತನ್ನ ಮಕ್ಕಳ ಕಾರಣದಿಂದ ತಾನು ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಅವಕಾಶದಿಂದ ವಂಚಿತನಾಗುವುದು ಆತನಿಗೆ ಇಷ್ಟವಿರಲಿಲ್ಲ. ಹೀಗಾಗಿ, ಕೊನೆಯ ಮಗಳಾದ 6 ವರ್ಷದ ಪ್ರಾಚಿಯನ್ನು ಕೊಂದುಬಿಟ್ಟರೆ ತನಗೆ ಇಬ್ಬರೇ ಮಕ್ಕಳು ಉಳಿಯುತ್ತಾರೆ. ಆಗ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ತಾನು ಕೂಡ ಅರ್ಹನಾಗುತ್ತೇನೆ ಎಂದು ಯೋಚಿಸಿದ ಆತ ಕೊಲೆಯ ಪ್ಲಾನ್ ಮಾಡಿದ್ದ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ತಾಲ್ಲೂಕಿನ ಕೆರೂರ್ ಗ್ರಾಮದ ನಿವಾಸಿ 28 ವರ್ಷದ ಪಾಂಡುರಂಗ ಕೊಂಡ್ಮಂಗಲೆ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದ. ನಿಜಾಮಾಬಾದ್ ಪೊಲೀಸರು ಪ್ರಕರಣದ ಆರೋಪಿ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು ಎಂದು ತಿಳಿಸಿದ್ದಾರೆ.

ಹಲವು ದಿನಗಳಾದರೂ ನಾಪತ್ತೆಯಾಗಿದ್ದ ಪ್ರಾಚಿ ಪತ್ತೆಯಾಗಿರಲಿಲ್ಲ. ಹೀಗಾಗಿ, ಪೊಲೀಸರು ಆಕೆಯ ತಂದೆಯನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು. ಆಗ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಹೇಳುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ತಾನು ಮಗುವನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದ.

ತನ್ನ ಗ್ರಾಮದಲ್ಲಿ ಕ್ಷೌರಿಕನ ಅಂಗಡಿ ನಡೆಸುತ್ತಿರುವ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕನಾಗಿದ್ದ. ಅವನಿಗೆ 3 ವರ್ಷದ ಗಂಡು ಮಗು ಮತ್ತು 6 ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಆದರೆ, ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 2 ಮಕ್ಕಳ ಮಾನದಂಡವಿತ್ತು. ಹೀಗಾಗಿ ಅವನು ಸ್ಪರ್ಧಿಸಲು ಅನರ್ಹನಾಗಿದ್ದನು.

ಹೀಗಾಗಿ, ಅವನು ತನ್ನ ಸ್ನೇಹಿತ ಮತ್ತು ಗ್ರಾಮದ ಪ್ರಸ್ತುತ ಸರಪಂಚ್ ಗಣೇಶ್ ಶಿಂಧೆ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದ. ಆಗ ಆತ ಅವನ ಅವಳಿ ಮಕ್ಕಳಲ್ಲಿ ಒಬ್ಬಳನ್ನು ಕೊಂದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸಲಹೆ ನೀಡಿದ್ದ. ಇದಕ್ಕೆ ಆತ ಮೊದಲು ಒಪ್ಪಿರಲಿಲ್ಲ. ಸಾಯಿಸುವ ಬದಲು ಒಂದು ಮಗುವನ್ನು ಯಾರಿಗಾದರೂ ದತ್ತು ನೀಡಿದರಾಯಿತು ಎಂದು ನಿರ್ಧರಿಸಿದ್ದ. ಆದರೆ, ದತ್ತು ನೀಡಿದರೂ ಕೂಡ ಆ ಮಗುವಿನ ಜನನ ಪ್ರಮಾಣಪತ್ರದಲ್ಲಿ ಆಕೆ ಆತನ ಮಗುವೇ ಎಂದು ರಿಜಿಸ್ಟರ್ ಆಗಿರುತ್ತಿತ್ತು.

ಹೀಗಾಗಿ, ಕೊನೆಗೆ ಆತ ತನ್ನ ಗೆಳೆಯನ ಸಲಹೆಯಂತೆ ಮಗುವನ್ನು ಕೊಲ್ಲುವ ನಿರ್ಧಾರ ಮಾಡಿದ್ದ. ಮಗುವನ್ನು ಕೊಂದು ಅದನ್ನು ಅಪಘಾತದಂತೆ ಕಾಣುವಂತೆ ಮಾಡಲು ಸಂಚು ರೂಪಿಸಿದ್ದ. ನಿಜಾಮಾಬಾದ್ ಜಿಲ್ಲೆ ತನ್ನ ಗ್ರಾಮದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವುದರಿಂದ ಪಾಂಡುರಂಗ ಪ್ರಾಚಿಯನ್ನು ಬೈಕ್​ನಲ್ಲಿ ನಿಜಾಮ್ ಸಾಗರ್ ಕಾಲುವೆಗೆ ಕರೆದೊಯ್ದ. ಅಲ್ಲಿ ಅವನು ಅವಳನ್ನು ಕಾಲುವೆಗೆ ತಳ್ಳಿ ಓಡಿಹೋದ.

ಆ ವೇಳೆ ಹತ್ತಿರದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಗ್ರಾಮಸ್ಥರು ನೀರಿಗೆ ಏನೋ ಬೀಳುವ ಶಬ್ದ ಕೇಳಿ ಅಲ್ಲಿಗೆ ಬಂದು ನೋಡಿದಾಗ ಆ ಬಾಲಕಿಯ ಶವ ಕಾಲುವೆಯಲ್ಲಿ ತೇಲುತ್ತಿರುವುದನ್ನು ಕಂಡರು. ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತನಿಖೆ ಆರಂಭಿಸಿದರು. ಆ ಬಾಲಕಿಯ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದವು. ಮಹಾರಾಷ್ಟ್ರ ಗ್ರಾಮದ ಯಾರೋ ಒಬ್ಬರು ಪ್ರಾಚಿಯ ಫೋಟೋವನ್ನು ನೋಡಿದಾಗ ಆಕೆಯನ್ನು ಗುರುತಿಸಿದರು. ತಕ್ಷಣ ಪೊಲೀಸ್ ತಂಡ ಗ್ರಾಮಕ್ಕೆ ತಲುಪಿ ತನಿಖೆಯನ್ನು ಪ್ರಾರಂಭಿಸಿತು. ಇದರಿಂದ ಪಾಂಡುರಂಗ ಸಿಕ್ಕಿಬಿದ್ದ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!