crime
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡುತ್ತಿದ್ದ ವಂಚನಾ ಜಾಲ ಪೊಲೀಸ್ ಬಲೆಗೆ; ನೂರಾರು ಕೋಟಿ ವಂಚನೆ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್
ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಬರುವ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ತಂಡಕ್ಕೆ ಒಂದು ಬಿಗ್ ಸೇಲ್ಯೂಟ್….. ಈವರೆಗೆ ಯಾರೂ ಪತ್ತೆ ಮಾಡಲಾರದ ವಂಚನಾ ಜಾಲವನ್ನು ತಮ್ಮ ಬಲೆಗೆ ಕೆಡವಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಟಿಯಲ್ಲ, ಹತ್ತಾರು ಕೋಟಿಯೂ ಅಲ್ಲ.., ನೂರಾರು ಕೋಟಿಗೂ ಅಧಿಕ ವಂಚನೆ ಮಾಡಿದ ಸೈಬರ್ ವಂಚನಾ ಜಾಲವನ್ನು ಬೇಧಿಸಿ ಆರೋಪಿತರನ್ನು ಬಂಧಿಸಿ ಭೇಷ್ ಎನಿಸಿಕೊಂಡ ಪೊಲೀಸರ ಸಾಹಸಮಯ ಕರ್ತವ್ಯಕ್ಕೆ ತಲೆಬಾಗಲೇ ಬೇಕು.
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿರುತ್ತದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆದಬೇಕಾಗಿದೆ.

ಈ ಪ್ರಕರಣದಲ್ಲಿ ಆರೋಪಿಗಳಾದ 1.ಮಕವನ್ ವಿಕ್ರಂ (25) ತಂದೆ: ದೇವರಾಜ್ ಬಾಯ್, ಬಾವಾ ನಗರ್ ಜಿಲ್ಲೆ ಗುಜರಾತ್. 2.ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ತಂದೆ: ಸರಂಜಿತ್ ಕೊಲ್ಲತ್ತಾ ಪಶ್ಚಿಮ ಬಂಗಾಳ. 3.ಪುಪ್ಲ ಶಿವ ಕುಮಾರ್ ರಾವ್ (32) ತಂದೆ: ಲೇಟ್ ಪುಪ್ಲ ಕುಮಾರ್ ರಾವ್, ಸಿಂಗಬುಮ್ ಜಿಲ್ಲೆ ಜಾರ್ಖಾಂಡ್ 4.ಗೌರವ್ ಪಾಂಡೆ (24) ತಂದೆ; ಕೌಶಾಲ್ ಪಾಂಡೆ , ಮಾವೋ ಜಿಲ್ಲೆ ಉತ್ತರ ಪ್ರದೇಶ. 5.ಹರ್ಷ್ ಮಿಸ್ರಾ (22) ತಂದೆ: ಗ್ಯಾನ್ ಪ್ರಕಾಶ್, ಸುಲ್ತಾನ್ ಪುರ್ ಜಿಲ್ಲೆ ಉತ್ತರ ಪ್ರದೇಶ. 6.ರಾಜೇಶ್ ಮಂಡನ್ (30) ತಂದೆ: ಪಾವು ಮಂಡನ್, ಡಿಯೋಗರ್ ಜಿಲ್ಲೆ ಜಾರ್ಖಾಂಡ್. 7.ಮೊಹಮ್ಮದ್ ಆಕೀಬ್ ಅಲಿ (27) ತಂದೆ: ಮೊಹಮ್ಮದ್ ಸಾಬಿತ್ ಅಲಿ, ಲಕ್ನೋ ಜಿಲ್ಲೆ ಉತ್ತರ ಪ್ರದೇಶ. 8.ರಾಜೀವ್ ರಂಜನ್ ಕುಮಾರ್ (30) ತಂದೆ: ಶ್ರೀಕಾಂತ್ ಕುಮಾರ್, ನಳಂದ ಜಿಲ್ಲೆ ಬಿಹಾರ್. 9.ಮಿಥುನ್ ಕುಮಾರ್ ಮಂಗರಾಜ್ (38) ತಂದೆ: ನಿರ್ಮಲ್ ಕುಮಾರ್, ಸಿಂಗಬುಮ್ ಜಿಲ್ಲೆ ಜಾರ್ಖಾಂಡ್ 10. ನೌಶಾದ್ ಅಲಿ (34) ತಂದೆ: ಜೋಕಾನ್ ಅಲಿ, ಝಾನ್ಸಿ ಜಿಲ್ಲೆ ಉತ್ತರ ಪ್ರದೇಶ. 11. ಓಂ ಪ್ರಕಾಶ್ ಯಾಧವ್ (37)ತಂದೆ: ಪ್ರೇಮ್ ಚಂದ್ ಯಾದವ್, ಜೈಪುರ್ ರಾಜಸ್ಥಾನ ಬಂಧಿಸಲಾಗಿದೆ. ವಂಚಕರಿಂದ ಲ್ಯಾಪ್ ಟಾಪ್ -1, ಮೊಬೈಲ್ ಪೋನ್ ಗಳು-21 ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು – 20 ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು – 20 ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ವಿವರ
ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ ಪಿರ್ಯಾದಿದಾರರಿಂದ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ದಸ್ತಗಿರಿ ಮಾಡಲಾಗಿದೆ.
ಒಂದು ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್ ರವರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDT ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.
ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮೀಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದು, ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತಿಳಿದುಬಂದಿರುತ್ತದೆ.
ಸೆನ್ ಪೊಲೀ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಉಪಯೋಗಿಸಲು ಫಿರ್ಯಾದಿಗೆ ನೀಡಿದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ NCRP PORTAL ನಲ್ಲಿ ಸುಮಾರು 128 ಪ್ರಕರಣಗಳು ಮತ್ತು ಒಟ್ಟು 36 FIR ದಾಖಲಾಗಿರುತ್ತದೆ.
ಬ್ಯಾಂಕ್ ಖಾತೆಗಳನ್ನು ಪಡೆಯಲು ವಂಚಕರು ಅನುಸರಿಸುವ ವಿಧಾನ.
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operator ಗಳು ಮತ್ತು OTP Worker ರವರು ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.
ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ 5% ರಿಂದ 10% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೇಟ್, ಕ್ಯಾಬ್ ಬುಂಕಿಂಗ್, ಹೋಟೇಲ್, ಲಾಡ್ಜ್ ವ್ಯವಸ್ಥೆ ನೀಡಿವುದಾಗಿ ಹಾಗೂ ಇವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಿ, ದುಬೈ, ನೇಪಾಳ ಮುಂತಾದ ಕಡೆಗಳಲ್ಲಿ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟವಾದ ಸ್ಥಳದಲ್ಲಿ ವ್ಯವಸ್ಥೆ ಮಾಡಿರುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, Net Banking, ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.

ಹೂಡಿಕೆದಾರರನ್ನು ಆಕರ್ಷಿಸುವ ವಿಧಾನ.
ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಗಳ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಂಶ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭಂಶದ ಹಣವನ್ನು ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ, ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಪುಸುಲಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು 60 ಲಕ್ಷದಿಂದ 01 ಕೋಟಿಯವರೆಗೆ Investment fraud ಗೆ ಒಳಪಡಿಸುತ್ತಿದೆ.
ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿ.
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು.
ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕ ವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿರುತ್ತದೆ.
ಪಿರ್ಯಾದಿದಾರರಿಗೆ ಕಳೆದುಕೊಂಡ ಹಣವು ಮರಳಿ ಸಿಗದೇ ಇರುವುದಕ್ಕೆ ಕಾರಣಗಳು.
ವಂಚಕರು ವಂಚನೆಯಾದ ಹಣದಲ್ಲಿ ಆನ್ ಲೈನ್ ಮೂಲಕ USDT ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ವಿದೇಶಕ್ಕೆ ಹಣ ಹೋಗುತ್ತದೆ.
ವಂಚನೆಗೊಳಗಾದ ದೂರುದಾರರು ಅದೇ ದಿನ ದೂರನ್ನು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗುತ್ತದೆ.
ಬ್ಯಾಂಕ್ ಖಾತೆ ನೀಡುವರೇ ಎಚ್ಚರ,
ಕಮೀಷನ್ ಆಸೆಗೆ ಒಳಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.
ಹೂಡಿಕೆದಾರರೇ ಎಚ್ಚರ
ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಿತ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ. ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ.
ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತಿಚೀನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಹೂಡಿಕೆ ಮಾಡಬೇಕಾದರೆ SEBI Registration ಆಗಿರುವ ಸಂಸ್ಥೆ ಅಥವಾ ಬ್ರೋಕರ್ ರವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.
crime
ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು
ಆನ್ ಲೈನ್ ಪ್ಲಾಟ್ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.
Belthangady
ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ; ಬಯಲಾದ ನಿಜಾಂಶ
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದ್ದು, ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದರ ಮೂಲಕ ಪ್ರಕರಣದ ನಿಜಾಂಶ ಬಯಲಾಗಿದೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದು, ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರುತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ.
ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿತ್ತು.ಕೊನೆಗೂ ಬೆಳ್ತಂಗಡಿ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಬಯಲಾಗಿದೆ.
Belthangady
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರಂತೆ !

ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ 16 ವರ್ಷದ ಶಾಲಾ ಬಾಲಕಿ ಕಾಲೇಜಿಗೆ ಸ್ಕೂಟಿಯಲ್ಲಿ ತೆರಳಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಒಮ್ನಿ ಬಂದಿದೆ. ಮಾರುತಿ ಒಮ್ನಿಯ ನಂಬರ್ ಪ್ಲೇಟ್ ಮುಚ್ಚಲಾಗಿತ್ತು, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ಮುಸುಕುದಾರಿ ವ್ಯಕ್ತಿಗಳು ಇದ್ದರು, ಸ್ಕೂಟಿಗೆ ಅಡ್ಡ ಇಟ್ಟು ಮೂವರು ಮುಸುಕುದಾರಿಗಳು ವಿದ್ಯಾರ್ಥಿನಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ, ಅವರು ಒಮ್ನಿಯಲ್ಲಿ ವಿದ್ಯಾರ್ಥಿನಿಯನ್ನು ಹಾಕಿಕೊಂಡು ಅಪಹರಿಸಲು ಯತ್ನಿಸಿದಾಗ ಅವಳು ಪ್ರತಿರೋಧಿಸಿ ಬೊಬ್ಬೆ ಹೊಡೆದಿದ್ದಾಳೆ. ಹಿಂದಿನಿಂದ ಒಂದು ದ್ವಿಚಕ್ರ ವಾಹನವೂ ಬಂದಿದೆ. ಇದರಿಂದ ಬೆದರಿದ ಅಪಹರಣಕಾರರು ತಮ್ಮಲ್ಲಿದ್ದ ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಅಪಹರಣಕಾರರು ಬೆದರಿ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ.

ಇದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿವರಣೆಯ ವಿದ್ಯಾರ್ಥಿನಿಯ ಹೇಳಿಕೆ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಎಂಬ ಸುದ್ದಿಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆಯ ಬಗ್ಗೆ ಸರಕಾರ ಮತ್ತು ಗೃಹ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ಆಯ್ತು. ಮದ್ಯಾಹ್ನ ನಂತರ ಘಟನೆಯ ಸತ್ಯಾಂಶ ಒಂದೊಂದಾಗಿ ಹೊರಬರುತ್ತಲೇ ಆತಂಕದ ವಾತಾವರಣ ಕಡಿಮೆಯಾಗುತ್ತಾ ಬಂದಿದೆ. ಈವರೆಗೆ ಅಪಹರಣಕಾರರ ಪತ್ತೆಯಾಗಿಲ್ಲ, ಮಾರುತಿ ಒಮ್ನಿ ಯಾವ ಸಿಸಿ ಕ್ಯಾಮಾರದಲ್ಲೂ ಕಂಡುಬರಲೇ ಇಲ್ಲ. ಅಂದರೆ ವಿದ್ಯಾರ್ಥಿನಿಯ ಸುತ್ತಲೇ ಅಪಹರಣದ ಕಥೆ ಕಂಡುಬರುತ್ತಿದೆ.
ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಜನತೆಗೆ ಸತ್ಯಾಂಶ ತಿಳಿಸಿ ಆತಂಕ ದೂರ ಮಾಡುವ ಉದ್ದೇಶಕ್ಕಾಗಿ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾ ಎಸ್ಪಿಯವರ ಅಧಿಕೃತ ಹೇಳಿಕೆಗಾಗಿ ಕಾಯುತ್ತಿದ್ದಾರೆ.
ರಾಜಸ್ಥಾನದ ಘಟನೆ: ರಾಜಸ್ಥಾನದ ಬಿಕನೇರ್ನಲ್ಲಿ 10ನೇ ತರಗತಿಯ ಹುಡುಗಿಯೊಬ್ಬಳು ಶಾಲೆಗೆ ಹೋಗಲು ಇಷ್ಟವಿಲ್ಲದೆ ತನ್ನನ್ನು ಅಪಹರಿಸಲಾಗಿದೆ ಎಂದು ಸುಳ್ಳು ಕಥೆ ಸೃಷ್ಟಿಸಿದ್ದಳು. ಪೊಲೀಸರು ತನಿಖೆ ನಡೆಸಿದಾಗ ಆಕೆ ಸುಳ್ಳು ಹೇಳುತ್ತಿರುವುದು ಬಯಲಾಗಿತ್ತು.
ಬೆಂಗಳೂರು ಅಥವಾ ಇತರ ನಗರಗಳಲ್ಲಿ ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಮಕ್ಕಳು ತಮ್ಮ ಕೈ-ಕಾಲುಗಳನ್ನು ತಾವೇ ಕಟ್ಟಿಕೊಂಡು ಅಥವಾ ಬಾಯಿಗೆ ಪಟ್ಟಿ ಅಂಟಿಸಿಕೊಂಡು ಪೋಷಕರನ್ನು ಭಯಪಡಿಸುತ್ತಾರೆ.
ಇಂತಹ ಘಟನೆಗಳು ಬಹುತೇಕ ಪರೀಕ್ಷಾ ಸಮಯ ಹತ್ತಿರಕ್ಕೆ ಬರುವ ಸಂದರ್ಭಗಳಲ್ಲಿಯೇ ನಡೆಯುತ್ತಿದ್ದು, ಪರೀಕ್ಷೆ ಅಥವಾ ಹೋಮ್ ವರ್ಕ್ ಪೂರ್ಣಗೊಳಿಸದಿದ್ದಾಗ ಶಿಕ್ಷಕರಿಗೆ ಹೆದರಿ ಹೀಗೆ ಮಾಡುತ್ತಾರೆ. ಶಾಲೆಯಲ್ಲಿ ಕಿರುಕುಳ (Bullying): ಶಾಲೆಯಲ್ಲಿ ಬೇರೆ ವಿದ್ಯಾರ್ಥಿಗಳು ತೊಂದರೆ ನೀಡುತ್ತಿದ್ದರೆ ಅಲ್ಲಿಗೆ ಹೋಗದಿರಲು ಇಂತಹ ದಾರಿ ಹುಡುಕುತ್ತಾರೆ. ತಮ್ಮ ಮಕ್ಕಳು ಅತೀ ಹೆಚ್ಚು ಅಂಕಗಳನ್ನು ಪಡೆಯಬೇಕೆಂದು ಮಕ್ಕಳ ಮೇಲೆ ಪೋಷಕರು ನಿರಂತರವಾಗಿ ಒತ್ತಡ ಹೇರುತ್ತಿರುವಾಗ ಪೋಷಕರ ಅತಿಯಾದ ನಿರೀಕ್ಷೆಗಳು ಮಕ್ಕಳನ್ನು ಇಂತಹ ಹಂತಕ್ಕೆ ತಳ್ಳಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯ ತನಿಖೆ ನಡೆಯಬೇಕಾಗಿದೆ.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

