crime
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡುತ್ತಿದ್ದ ವಂಚನಾ ಜಾಲ ಪೊಲೀಸ್ ಬಲೆಗೆ; ನೂರಾರು ಕೋಟಿ ವಂಚನೆ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್
ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಬರುವ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ತಂಡಕ್ಕೆ ಒಂದು ಬಿಗ್ ಸೇಲ್ಯೂಟ್….. ಈವರೆಗೆ ಯಾರೂ ಪತ್ತೆ ಮಾಡಲಾರದ ವಂಚನಾ ಜಾಲವನ್ನು ತಮ್ಮ ಬಲೆಗೆ ಕೆಡವಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಟಿಯಲ್ಲ, ಹತ್ತಾರು ಕೋಟಿಯೂ ಅಲ್ಲ.., ನೂರಾರು ಕೋಟಿಗೂ ಅಧಿಕ ವಂಚನೆ ಮಾಡಿದ ಸೈಬರ್ ವಂಚನಾ ಜಾಲವನ್ನು ಬೇಧಿಸಿ ಆರೋಪಿತರನ್ನು ಬಂಧಿಸಿ ಭೇಷ್ ಎನಿಸಿಕೊಂಡ ಪೊಲೀಸರ ಸಾಹಸಮಯ ಕರ್ತವ್ಯಕ್ಕೆ ತಲೆಬಾಗಲೇ ಬೇಕು.
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿರುತ್ತದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆದಬೇಕಾಗಿದೆ.

ಈ ಪ್ರಕರಣದಲ್ಲಿ ಆರೋಪಿಗಳಾದ 1.ಮಕವನ್ ವಿಕ್ರಂ (25) ತಂದೆ: ದೇವರಾಜ್ ಬಾಯ್, ಬಾವಾ ನಗರ್ ಜಿಲ್ಲೆ ಗುಜರಾತ್. 2.ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ತಂದೆ: ಸರಂಜಿತ್ ಕೊಲ್ಲತ್ತಾ ಪಶ್ಚಿಮ ಬಂಗಾಳ. 3.ಪುಪ್ಲ ಶಿವ ಕುಮಾರ್ ರಾವ್ (32) ತಂದೆ: ಲೇಟ್ ಪುಪ್ಲ ಕುಮಾರ್ ರಾವ್, ಸಿಂಗಬುಮ್ ಜಿಲ್ಲೆ ಜಾರ್ಖಾಂಡ್ 4.ಗೌರವ್ ಪಾಂಡೆ (24) ತಂದೆ; ಕೌಶಾಲ್ ಪಾಂಡೆ , ಮಾವೋ ಜಿಲ್ಲೆ ಉತ್ತರ ಪ್ರದೇಶ. 5.ಹರ್ಷ್ ಮಿಸ್ರಾ (22) ತಂದೆ: ಗ್ಯಾನ್ ಪ್ರಕಾಶ್, ಸುಲ್ತಾನ್ ಪುರ್ ಜಿಲ್ಲೆ ಉತ್ತರ ಪ್ರದೇಶ. 6.ರಾಜೇಶ್ ಮಂಡನ್ (30) ತಂದೆ: ಪಾವು ಮಂಡನ್, ಡಿಯೋಗರ್ ಜಿಲ್ಲೆ ಜಾರ್ಖಾಂಡ್. 7.ಮೊಹಮ್ಮದ್ ಆಕೀಬ್ ಅಲಿ (27) ತಂದೆ: ಮೊಹಮ್ಮದ್ ಸಾಬಿತ್ ಅಲಿ, ಲಕ್ನೋ ಜಿಲ್ಲೆ ಉತ್ತರ ಪ್ರದೇಶ. 8.ರಾಜೀವ್ ರಂಜನ್ ಕುಮಾರ್ (30) ತಂದೆ: ಶ್ರೀಕಾಂತ್ ಕುಮಾರ್, ನಳಂದ ಜಿಲ್ಲೆ ಬಿಹಾರ್. 9.ಮಿಥುನ್ ಕುಮಾರ್ ಮಂಗರಾಜ್ (38) ತಂದೆ: ನಿರ್ಮಲ್ ಕುಮಾರ್, ಸಿಂಗಬುಮ್ ಜಿಲ್ಲೆ ಜಾರ್ಖಾಂಡ್ 10. ನೌಶಾದ್ ಅಲಿ (34) ತಂದೆ: ಜೋಕಾನ್ ಅಲಿ, ಝಾನ್ಸಿ ಜಿಲ್ಲೆ ಉತ್ತರ ಪ್ರದೇಶ. 11. ಓಂ ಪ್ರಕಾಶ್ ಯಾಧವ್ (37)ತಂದೆ: ಪ್ರೇಮ್ ಚಂದ್ ಯಾದವ್, ಜೈಪುರ್ ರಾಜಸ್ಥಾನ ಬಂಧಿಸಲಾಗಿದೆ. ವಂಚಕರಿಂದ ಲ್ಯಾಪ್ ಟಾಪ್ -1, ಮೊಬೈಲ್ ಪೋನ್ ಗಳು-21 ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು – 20 ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು – 20 ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ವಿವರ
ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ ಪಿರ್ಯಾದಿದಾರರಿಂದ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ದಸ್ತಗಿರಿ ಮಾಡಲಾಗಿದೆ.
ಒಂದು ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್ ರವರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDT ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.
ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮೀಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದು, ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತಿಳಿದುಬಂದಿರುತ್ತದೆ.
ಸೆನ್ ಪೊಲೀ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಉಪಯೋಗಿಸಲು ಫಿರ್ಯಾದಿಗೆ ನೀಡಿದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ NCRP PORTAL ನಲ್ಲಿ ಸುಮಾರು 128 ಪ್ರಕರಣಗಳು ಮತ್ತು ಒಟ್ಟು 36 FIR ದಾಖಲಾಗಿರುತ್ತದೆ.
ಬ್ಯಾಂಕ್ ಖಾತೆಗಳನ್ನು ಪಡೆಯಲು ವಂಚಕರು ಅನುಸರಿಸುವ ವಿಧಾನ.
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operator ಗಳು ಮತ್ತು OTP Worker ರವರು ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.
ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ 5% ರಿಂದ 10% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೇಟ್, ಕ್ಯಾಬ್ ಬುಂಕಿಂಗ್, ಹೋಟೇಲ್, ಲಾಡ್ಜ್ ವ್ಯವಸ್ಥೆ ನೀಡಿವುದಾಗಿ ಹಾಗೂ ಇವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಿ, ದುಬೈ, ನೇಪಾಳ ಮುಂತಾದ ಕಡೆಗಳಲ್ಲಿ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟವಾದ ಸ್ಥಳದಲ್ಲಿ ವ್ಯವಸ್ಥೆ ಮಾಡಿರುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, Net Banking, ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.

ಹೂಡಿಕೆದಾರರನ್ನು ಆಕರ್ಷಿಸುವ ವಿಧಾನ.
ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಗಳ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಂಶ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭಂಶದ ಹಣವನ್ನು ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ, ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಪುಸುಲಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು 60 ಲಕ್ಷದಿಂದ 01 ಕೋಟಿಯವರೆಗೆ Investment fraud ಗೆ ಒಳಪಡಿಸುತ್ತಿದೆ.
ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿ.
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು.
ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕ ವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿರುತ್ತದೆ.
ಪಿರ್ಯಾದಿದಾರರಿಗೆ ಕಳೆದುಕೊಂಡ ಹಣವು ಮರಳಿ ಸಿಗದೇ ಇರುವುದಕ್ಕೆ ಕಾರಣಗಳು.
ವಂಚಕರು ವಂಚನೆಯಾದ ಹಣದಲ್ಲಿ ಆನ್ ಲೈನ್ ಮೂಲಕ USDT ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ವಿದೇಶಕ್ಕೆ ಹಣ ಹೋಗುತ್ತದೆ.
ವಂಚನೆಗೊಳಗಾದ ದೂರುದಾರರು ಅದೇ ದಿನ ದೂರನ್ನು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗುತ್ತದೆ.
ಬ್ಯಾಂಕ್ ಖಾತೆ ನೀಡುವರೇ ಎಚ್ಚರ,
ಕಮೀಷನ್ ಆಸೆಗೆ ಒಳಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.
ಹೂಡಿಕೆದಾರರೇ ಎಚ್ಚರ
ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಿತ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ. ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ.
ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತಿಚೀನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಹೂಡಿಕೆ ಮಾಡಬೇಕಾದರೆ SEBI Registration ಆಗಿರುವ ಸಂಸ್ಥೆ ಅಥವಾ ಬ್ರೋಕರ್ ರವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್ನಲ್ಲಿ ಕರಾಳ ರಾತ್ರಿ: ಬಾತ್ರೂಮ್ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್ನಲ್ಲಿ ಮೂವರು ಒಂದೇ ರೂಮ್ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್ನ ಬಾತ್ರೂಮ್ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್ರೂಮ್ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
