crime
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡುತ್ತಿದ್ದ ವಂಚನಾ ಜಾಲ ಪೊಲೀಸ್ ಬಲೆಗೆ; ನೂರಾರು ಕೋಟಿ ವಂಚನೆ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್
ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಬರುವ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ತಂಡಕ್ಕೆ ಒಂದು ಬಿಗ್ ಸೇಲ್ಯೂಟ್….. ಈವರೆಗೆ ಯಾರೂ ಪತ್ತೆ ಮಾಡಲಾರದ ವಂಚನಾ ಜಾಲವನ್ನು ತಮ್ಮ ಬಲೆಗೆ ಕೆಡವಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೋಟಿಯಲ್ಲ, ಹತ್ತಾರು ಕೋಟಿಯೂ ಅಲ್ಲ.., ನೂರಾರು ಕೋಟಿಗೂ ಅಧಿಕ ವಂಚನೆ ಮಾಡಿದ ಸೈಬರ್ ವಂಚನಾ ಜಾಲವನ್ನು ಬೇಧಿಸಿ ಆರೋಪಿತರನ್ನು ಬಂಧಿಸಿ ಭೇಷ್ ಎನಿಸಿಕೊಂಡ ಪೊಲೀಸರ ಸಾಹಸಮಯ ಕರ್ತವ್ಯಕ್ಕೆ ತಲೆಬಾಗಲೇ ಬೇಕು.
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿರುತ್ತದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆದಬೇಕಾಗಿದೆ.

ಈ ಪ್ರಕರಣದಲ್ಲಿ ಆರೋಪಿಗಳಾದ 1.ಮಕವನ್ ವಿಕ್ರಂ (25) ತಂದೆ: ದೇವರಾಜ್ ಬಾಯ್, ಬಾವಾ ನಗರ್ ಜಿಲ್ಲೆ ಗುಜರಾತ್. 2.ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ತಂದೆ: ಸರಂಜಿತ್ ಕೊಲ್ಲತ್ತಾ ಪಶ್ಚಿಮ ಬಂಗಾಳ. 3.ಪುಪ್ಲ ಶಿವ ಕುಮಾರ್ ರಾವ್ (32) ತಂದೆ: ಲೇಟ್ ಪುಪ್ಲ ಕುಮಾರ್ ರಾವ್, ಸಿಂಗಬುಮ್ ಜಿಲ್ಲೆ ಜಾರ್ಖಾಂಡ್ 4.ಗೌರವ್ ಪಾಂಡೆ (24) ತಂದೆ; ಕೌಶಾಲ್ ಪಾಂಡೆ , ಮಾವೋ ಜಿಲ್ಲೆ ಉತ್ತರ ಪ್ರದೇಶ. 5.ಹರ್ಷ್ ಮಿಸ್ರಾ (22) ತಂದೆ: ಗ್ಯಾನ್ ಪ್ರಕಾಶ್, ಸುಲ್ತಾನ್ ಪುರ್ ಜಿಲ್ಲೆ ಉತ್ತರ ಪ್ರದೇಶ. 6.ರಾಜೇಶ್ ಮಂಡನ್ (30) ತಂದೆ: ಪಾವು ಮಂಡನ್, ಡಿಯೋಗರ್ ಜಿಲ್ಲೆ ಜಾರ್ಖಾಂಡ್. 7.ಮೊಹಮ್ಮದ್ ಆಕೀಬ್ ಅಲಿ (27) ತಂದೆ: ಮೊಹಮ್ಮದ್ ಸಾಬಿತ್ ಅಲಿ, ಲಕ್ನೋ ಜಿಲ್ಲೆ ಉತ್ತರ ಪ್ರದೇಶ. 8.ರಾಜೀವ್ ರಂಜನ್ ಕುಮಾರ್ (30) ತಂದೆ: ಶ್ರೀಕಾಂತ್ ಕುಮಾರ್, ನಳಂದ ಜಿಲ್ಲೆ ಬಿಹಾರ್. 9.ಮಿಥುನ್ ಕುಮಾರ್ ಮಂಗರಾಜ್ (38) ತಂದೆ: ನಿರ್ಮಲ್ ಕುಮಾರ್, ಸಿಂಗಬುಮ್ ಜಿಲ್ಲೆ ಜಾರ್ಖಾಂಡ್ 10. ನೌಶಾದ್ ಅಲಿ (34) ತಂದೆ: ಜೋಕಾನ್ ಅಲಿ, ಝಾನ್ಸಿ ಜಿಲ್ಲೆ ಉತ್ತರ ಪ್ರದೇಶ. 11. ಓಂ ಪ್ರಕಾಶ್ ಯಾಧವ್ (37)ತಂದೆ: ಪ್ರೇಮ್ ಚಂದ್ ಯಾದವ್, ಜೈಪುರ್ ರಾಜಸ್ಥಾನ ಬಂಧಿಸಲಾಗಿದೆ. ವಂಚಕರಿಂದ ಲ್ಯಾಪ್ ಟಾಪ್ -1, ಮೊಬೈಲ್ ಪೋನ್ ಗಳು-21 ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು – 20 ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು – 20 ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ವಿವರ
ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ ಪಿರ್ಯಾದಿದಾರರಿಂದ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ದಸ್ತಗಿರಿ ಮಾಡಲಾಗಿದೆ.
ಒಂದು ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್ ರವರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDT ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.
ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮೀಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದು, ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತಿಳಿದುಬಂದಿರುತ್ತದೆ.
ಸೆನ್ ಪೊಲೀ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಉಪಯೋಗಿಸಲು ಫಿರ್ಯಾದಿಗೆ ನೀಡಿದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ NCRP PORTAL ನಲ್ಲಿ ಸುಮಾರು 128 ಪ್ರಕರಣಗಳು ಮತ್ತು ಒಟ್ಟು 36 FIR ದಾಖಲಾಗಿರುತ್ತದೆ.
ಬ್ಯಾಂಕ್ ಖಾತೆಗಳನ್ನು ಪಡೆಯಲು ವಂಚಕರು ಅನುಸರಿಸುವ ವಿಧಾನ.
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operator ಗಳು ಮತ್ತು OTP Worker ರವರು ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.
ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ 5% ರಿಂದ 10% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೇಟ್, ಕ್ಯಾಬ್ ಬುಂಕಿಂಗ್, ಹೋಟೇಲ್, ಲಾಡ್ಜ್ ವ್ಯವಸ್ಥೆ ನೀಡಿವುದಾಗಿ ಹಾಗೂ ಇವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಿ, ದುಬೈ, ನೇಪಾಳ ಮುಂತಾದ ಕಡೆಗಳಲ್ಲಿ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟವಾದ ಸ್ಥಳದಲ್ಲಿ ವ್ಯವಸ್ಥೆ ಮಾಡಿರುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, Net Banking, ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.

ಹೂಡಿಕೆದಾರರನ್ನು ಆಕರ್ಷಿಸುವ ವಿಧಾನ.
ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಗಳ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಂಶ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭಂಶದ ಹಣವನ್ನು ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ, ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಪುಸುಲಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು 60 ಲಕ್ಷದಿಂದ 01 ಕೋಟಿಯವರೆಗೆ Investment fraud ಗೆ ಒಳಪಡಿಸುತ್ತಿದೆ.
ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿ.
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು.
ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕ ವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿರುತ್ತದೆ.
ಪಿರ್ಯಾದಿದಾರರಿಗೆ ಕಳೆದುಕೊಂಡ ಹಣವು ಮರಳಿ ಸಿಗದೇ ಇರುವುದಕ್ಕೆ ಕಾರಣಗಳು.
ವಂಚಕರು ವಂಚನೆಯಾದ ಹಣದಲ್ಲಿ ಆನ್ ಲೈನ್ ಮೂಲಕ USDT ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ವಿದೇಶಕ್ಕೆ ಹಣ ಹೋಗುತ್ತದೆ.
ವಂಚನೆಗೊಳಗಾದ ದೂರುದಾರರು ಅದೇ ದಿನ ದೂರನ್ನು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗುತ್ತದೆ.
ಬ್ಯಾಂಕ್ ಖಾತೆ ನೀಡುವರೇ ಎಚ್ಚರ,
ಕಮೀಷನ್ ಆಸೆಗೆ ಒಳಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.
ಹೂಡಿಕೆದಾರರೇ ಎಚ್ಚರ
ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಿತ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ. ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ.
ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತಿಚೀನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಹೂಡಿಕೆ ಮಾಡಬೇಕಾದರೆ SEBI Registration ಆಗಿರುವ ಸಂಸ್ಥೆ ಅಥವಾ ಬ್ರೋಕರ್ ರವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.
Bantawala
ಬಸ್ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
arrest
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ
ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.
30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ
ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.
ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
- ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
- ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
- ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
- ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
- ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 323, 427, 504, 506, 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
- ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
- ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
- ಕಲಂಗಳು: 143, 147, 148, 448, 504, 324, 323, 506, 427 R/w 149 IPC.
- ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
- ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
- ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
- ಕಲಂಗಳು: 379 IPC (ಕಳವು).
- ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
- ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.
ಪೊಲೀಸರ ಸಕಾಲಿಕ ಕಾರ್ಯಾಚರಣೆ
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

crime
ಮಣಿಪಾಲ: ಬಾರ್, ಪಬ್ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು
ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.
ದಾಳಿಗೊಳಗಾದ ಬಾರ್ ಮತ್ತು ಪಬ್ಗಳು:
ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:
- ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
- ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
- ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
- ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
- ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ
ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:
ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪೊಲೀಸರ ಎಚ್ಚರಿಕೆ:
“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
