Connect with us

Dakshina Kannada

ಪಿಲಿಕುಳಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು! ಸಂಕಷ್ಟದಲ್ಲಿ ಕರ್ನಾಟಕದ ಅತ್ಯಂತ ಸುಂದರ ಮೃಗಾಲಯ ಪಿಲಿಕುಳ

Published

on

ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್‌ ಆದ ನ್ಯಾಯಾದೀಶರು
ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ ಈ ಜಾಗಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು!
ಈಗ ಅವ್ಯವಸ್ಥೆಯಿಂದ ಸಂಕಷ್ಟ ಅನುಭವಿಸುತ್ತಿದೆ. ತುಕ್ಕುಪಂಜರ, ಅಶುಚಿ ನೀರು, ಲೈಸೆನ್ಸ್ ಇಲ್ಲದೆ ಕಾರ್ಯನಿರ್ವಹಣೆ, ಪ್ರಾಣಿಗಳ ದಯನೀಯ ಸ್ಥಿತಿ ಹೈಕೋರ್ಟ್ ನ್ಯಾಯಾಧೀಶರನ್ನು ಶಾಕ್ ಮಾಡಿದೆ.

ಮಂಗಳೂರು: ಅರಬ್ಬಿ ಸಮುದ್ರದ ತಡಿಯ ಮಂಗಳೂರಿನಲ್ಲಿರೋ (Mangaluru) ಈ ಪಿಲಿಕುಳ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಅಂತಲೇ ಹೆಸರುವಾಸಿ. ಮಂಗಳೂರು ಪಿಲಿಕುಳ ಪಾರ್ಕ್,270 ಎಕರೆಗಳಲ್ಲಿ ಹಬ್ಬಿದ್ದು, ‘ಪಿಲಿ’ ಅಂದ್ರೆ ಹುಲಿ, ‘ಕುಳ’ ಅಂದ್ರೆ ಕೆರೆ. ಒಂದು ಕಾಲದಲ್ಲಿ ಹುಲಿಗಳು (Tigers) ಬಂದು ನೀರು ಕುಡಿಯುತ್ತಿದ್ದ ಈ ಜಾಗವನ್ನ ಇಂದು ಅಂತರಾಷ್ಟ್ರೀಯ ಮಟ್ಟದ ಜೈವಿಕ ಉದ್ಯಾನವನವಾಗಿ ರೂಪಿಸಲಾಗಿದೆ. ಪಶ್ಚಿಮ ಘಟ್ಟಗಳ ಅಳಿವಿನಂಚಿನಲ್ಲಿರೋ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರೋ ಪಿಲಿಕುಳ, ಕರಾವಳಿಗೆ ಬರೋ ಪ್ರವಾಸಿಗರ ಮೊದಲ ಆಯ್ಕೆ. ಅಂತಹ ಸುಂದರ ತಾಣ ಇಂದು ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. ಪಿಲಿಕುಳದ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಅಂದ್ರೆ, ಇಲ್ಲಿನ ಅವ್ಯವಸ್ಥೆ, ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಹೈಕೋರ್ಟ್ ನ್ಯಾಯಧೀಶರೇ ಶಾಕ್ ಆಗಿದ್ದಾರೆ. ಮಂಗಳೂರಿನ ಪ್ರವಾಸಿಗರ ಹಾಟ್ ಫೇವರೆಟ್ ಪಿಲಿಕುಳ ಮೃಗಾಲಯಕ್ಕೀಗ ಇಂತಹದೊಂದು ಸಂಕಷ್ಟ ಎದುರಾಗಿದೆ. ಇದು ಇಲ್ಲಿರೋ ಮೂಕ ಪ್ರಾಣಿಗಳಿಂದಾದ ತಪ್ಪಲ್ಲ. ಬದಲಾಗಿ ಇಲ್ಲಿನ ಆಡಳಿತ ವ್ಯವಸ್ಥೆಯಿಂದ ಸ್ವಯಂ ಕೃತ ಅಪರಾಧ. ತುಕ್ಕು ಹಿಡಿದ ಪಂಜರ, ತುಕ್ಕು ಹಿಡಿದ ಪಂಜರ, ಕಲುಷಿತ ನೀರು ಅಶುಚಿ ವಾತಾವರಣ ಇದು ಪಿಲಿಕುಳ ಮೃಗಾಲಯದ ಸದ್ಯದ ಸ್ಥಿತಿ.

ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಕೇವಲ ದೂರು ನೀಡದೆ, ಮೃಗಾಲಯದ ಒಳಗಿನ ಭೀಕರ ಸ್ಥಿತಿಯನ್ನು ಎತ್ತಿ ತೋರಿಸುವ ಭದ್ರ ಸಾಕ್ಷ್ಯಗಳನ್ನು ಹೈಕೋರ್ಟ್‌ಗೆ ನೀಡಿದ್ದಾರೆ. ಸೊರಗಿದ ಪ್ರಾಣಿಗಳ ಫೋಟೋಗಳು: ಸರಿಯಾದ ಆಹಾರವಿಲ್ಲದೆ ಎಲುಬು ಕಾಣುವಂತಾಗಿರುವ ಚಿರತೆ ಮತ್ತು ಹುಲಿಗಳ ಫೋಟೋಗಳು. ಅಸುರಕ್ಷಿತ ಪಂಜರಗಳು, ತುಕ್ಕು ಹಿಡಿದು ಕಿತ್ತುಹೋಗಿರುವ ಕಬ್ಬಿಣದ ಸರಳುಗಳು, ಇದರಿಂದ ಪ್ರಾಣಿಗಳು ಹೊರಬರುವ ಅಥವಾ ಗಾಯ ಮಾಡಿಕೊಳ್ಳುವ ಅಪಾಯವಿದೆ ಎಂದು ತೋರಿಸಿದ್ದಾರೆ. ಪ್ರಾಣಿಗಳ ಕುಡಿಯುವ ನೀರಿನ ತೊಟ್ಟಿಗಳಲ್ಲಿ ಪಾಚಿ ಕಟ್ಟಿರುವುದು ಮತ್ತು ಪ್ರಾಣಿಗಳ ಮಲ-ಮೂತ್ರ ವಿಲೇವಾರಿ ಆಗದೆ ಪಂಜರದಲ್ಲೇ ಕೊಳೆಯುತ್ತಿರುವುದು. ಅನಾರೋಗ್ಯಕ್ಕೀಡಾದ ಪ್ರಾಣಿಗಳಿಗೆ ಸರಿಯಾದ ಸಮಯದಲ್ಲಿ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಸಂಗ್ರಹಿಸಿ ದಾಖಲೆಯಾಗಿ ನೀಡಿದ್ದಾರೆ.

ಪಿಲಿಕುಳ ಮೃಗಾಲಯದ ಕರ್ಮ ಕಾಂಡಗಳು ಹೈಕೋರ್ಟ್‍ನಲ್ಲಿ ಹೊರಬಿದ್ದಿವೆ. ಪ್ರಾಣಿಗಳನ್ನು ಇರಿಸಿರುವ ಪಂಜರಗಳು ಸಂಪೂರ್ಣ ತುಕ್ಕು ಹಿಡಿದಿವೆ, ಅಲ್ಲಿ ಸರಿಯಾದ ಭದ್ರತೆಯೇ ಇಲ್ಲ. ಅಶುಚಿಯಾದ ಪರಿಸರದಲ್ಲಿ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಕೆಂಡಾಮಂಡಲವಾಗಿದೆ. ಇಲ್ಲಿ ಮತ್ತೊಂದು ದುರಂತ ಅಂದ್ರೆ ಜನಮನ್ನಣೆ ಪಡೆದ ಈ ಪಾರ್ಕ್‍ನ ಲೈಸೆನ್ಸ್ ಅವಧಿ 2025ರ ಡಿಸೆಂಬರ್ 1ಕ್ಕೇ ಮುಕ್ತಾಯವಾಗಿದೆ. ಅಂದ್ರೆ ಸದ್ಯ ಯಾವುದೇ ಪರವಾನಗಿ ಇಲ್ಲದೇ ಪಿಲಿಕುಳ ಮೃಗಾಲಯ ನಡೀತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಬಗ್ಗೆ ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ 2023 ಮತ್ತು 2025ರಲ್ಲಿ ಶೋಕಾಸ್ ನೋಟಿಸ್ ನೀಡಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿಲ್ಲ. ಮಲೀನಗೊಂಡ ನೀರು ಕುಡಿದು, ಸರಿಯಾದ ಚಿಕಿತ್ಸೆ ಸಿಗದೆ ಮೂಕ ಪ್ರಾಣಿಗಳು ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿವೆ ಅನ್ನೋದು ಅರ್ಜಿದಾರರ ಗಂಭೀರ ಆರೋಪಕ್ಕೆ ಹೈಕೋರ್ಟ್‍ ಗರಂ ಆಗಿದೆ. ಇವುಗಳನ್ನು ನೋಡಿದ ನ್ಯಾಯಾಧೀಶರು ಆಘಾತ ಮತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿ” ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿದ್ದು, ಮೃಗಾಲಯದ ಆಡಳಿತವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಅಥವಾ ವ್ಯವಸ್ಥಿತವಾಗಿ ಸುಧಾರಿಸುವಂತೆ ಸೂಚಿಸಿದೆ. ಕರ್ನಾಟಕ ಹೈಕೋರ್ಟ್ ಫೆಬ್ರವರಿ ಮೊದಲ ವಾರದಲ್ಲಿ ಪಿಲಿಕುಳ ಮೃಗಾಲಯದ ಬಗ್ಗೆ ಅತ್ಯಂತ ಕಠಿಣವಾದ ನಿಲುವನ್ನು ತಳೆದಿದೆ.

ಹೈಕೋರ್ಟ್ ಸರ್ಕಾರಕ್ಕೆ ಈ ಮೂರು ಪ್ರಶ್ನೆಗಳನ್ನು ಕೇಳಿದ್ದು, ಪರವಾನಗಿ ಇಲ್ಲದೆ ಇಷ್ಟು ದಿನ ಮೃಗಾಲಯವನ್ನು ಹೇಗೆ ನಡೆಸಲು ಬಿಟ್ಟಿದ್ದೀರಿ? ಪ್ರಾಣಿಗಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರೀಕ್ಷೆಯ ವರದಿ ಎಲ್ಲಿದೆ? ಪ್ರಾಣಿಗಳ ಅಸಹಜ ಸಾವುಗಳ ಬಗ್ಗೆ ಪೋಸ್ಟ್ ಮಾರ್ಟಂ (Post-mortem) ವರದಿಯನ್ನು ತಕ್ಷಣ ಸಲ್ಲಿಸಿ. ಎಂದು ಉತ್ತರ ನೀಡಲು ತಿಳಿಸಿದೆ. ಮೃಗಾಲಯದ ನಿರ್ದೇಶಕರು ಮತ್ತು ಅಧಿಕಾರಿಗಳು ಇತ್ತೀಚೆಗೆ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅಧಿಕ ಮಳೆಯಿಂದಾಗಿ ತಡೆಗೋಡೆ ಕುಸಿದು ಸಮಸ್ಯೆ ಉಂಟಾಗಿದೆ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ನ್ಯಾಯಾಲಯವು ಇದನ್ನು “ಆಡಳಿತಾತ್ಮಕ ವೈಫಲ್ಯ” ಎಂದು ಕರೆದಿದೆ. ಸರಿಯಾದ ಹಣಕಾಸಿನ ಹಂಚಿಕೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಮಾಜಿ ನಿರ್ದೇಶಕರು (ಜಯಪ್ರಕಾಶ್ ಭಂಡಾರಿ) ಈ ಹಿಂದೆ ರಾಜೀನಾಮೆ ನೀಡುವಾಗ ತಿಳಿಸಿದ್ದರು.

ಮುಂದಿನ ಕ್ರಮ ಏನಾಗಬಹುದು?
ನ್ಯಾಯಾಲಯದ ಸೂಚನೆಯಂತೆ ಸರ್ಕಾರವು ಮೃಗಾಲಯದ ನಿರ್ವಹಣೆಯನ್ನು ಸಂಪೂರ್ಣವಾಗಿ ಅರಣ್ಯ ಇಲಾಖೆ ಅಥವಾ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ (KZA) ಹಸ್ತಾಂತರಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಪ್ರಾಣಿಗಳನ್ನು ಬೇರೆ ಸುರಕ್ಷಿತ ಮೃಗಾಲಯಗಳಿಗೆ ವರ್ಗಾಯಿಸುವ ಆದೇಶ ಹೊರಬರುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು (PIL) ಅತ್ಯಂತ ತುರ್ತು ವಿಷಯವೆಂದು ಪರಿಗಣಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ನಡೆಸಲು ನ್ಯಾಯಾಲಯ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಾಣಿಗಳ ಪರಿಸ್ಥಿತಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ (CZA) ಸೂಚಿಸಿದೆ ಒಂದು ವೇಳೆ ಮೃಗಾಲಯದ ಪರವಾನಗಿಯನ್ನು ನವೀಕರಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರ ನಿರಾಕರಿಸಿದರೆ, ಅಲ್ಲಿರುವ ಪ್ರಾಣಿಗಳನ್ನು ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು) ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಅಥವಾ ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬೆಂಗಳೂರು) ಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ

ಪಿಲಿಕುಳ ಒಂದು ಕಾಲದಲ್ಲಿ ಜಿಲ್ಲಾಡಳಿತದ ಅಡಿಯಲ್ಲಿದ್ದ ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ (PNDA) ಮೂಲಕ ನಿರ್ವಹಿಸಲ್ಪಡುತ್ತಿತ್ತು. ಆದರೆ ಈಗ ಉಂಟಾಗಿರುವ ಅವ್ಯವಸ್ಥೆಯಿಂದಾಗಿ, ಇದನ್ನು ಸಂಪೂರ್ಣವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ (KZA) ಸುಪರ್ದಿಗೆ ಪಡೆಯುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಕೆ.ಜೆಡ್.ಎ ಅಡಿಯಲ್ಲಿ ಬಂದರೆ ಪ್ರಾಣಿಗಳಿಗೆ ನಿರಂತರ ಅನುದಾನ ಮತ್ತು ಪರಿಣಿತ ವೈದ್ಯರ ಸೇವೆ ಸಿಗಲಿದೆ.

ಪಿಲಿಕುಳ ಮೃಗಾಲಯ ಒಂದು ಕಾಲದಲ್ಲಿ ಇದು ಕರ್ನಾಟಕದ ಅತ್ಯಂತ ಸುಂದರ ಮೃಗಾಲಯಗಳಲ್ಲಿ ಒಂದಾಗಿತ್ತು ಇದನ್ನು 1990ರ ದಶಕದ ಉತ್ತರಾರ್ಧದಲ್ಲಿ ಮಂಗಳೂರಿನ ವಾಮಂಜೂರಿನಲ್ಲಿ ಸ್ಥಾಪಿಸಲಾಯಿತು. ‘ಪಿಲಿಕುಳ’ ಎಂದರೆ ತುಳು ಭಾಷೆಯಲ್ಲಿ “ಹುಲಿಗಳ ಕೆರೆ” ಎಂದರ್ಥ. ಇಲ್ಲಿ ಅಪರೂಪದ ರಾಜನಾಗ (King Cobra) ಸಂತಾನೋತ್ಪತ್ತಿ ಕೇಂದ್ರವಿದ್ದು, ಇದು ಏಷ್ಯಾದಲ್ಲೇ ಪ್ರಸಿದ್ಧವಾಗಿದೆ. ಸುಮಾರು 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿರುವ ಈ ಉದ್ಯಾನವನವು ಕರಾವಳಿಯ ಜೀವವೈವಿಧ್ಯದ ಕೇಂದ್ರವಾಗಿತ್ತು.
ಪಿಲಿಕುಳ ರೀಜನಲ್ ಸೈನ್ಸ್ ಸೆಂಟರ್ ಮೃಗಾಲಯಕ್ಕೆ ಹೋಲಿಸಿದರೆ ವಿಜ್ಞಾನ ಕೇಂದ್ರದ ಸ್ಥಿತಿ ಉತ್ತಮವಾಗಿದೆ. ಈಗ ಹೈಕೋರ್ಟ್‌ನ ಫೆಬ್ರವರಿ 3ನೇ ವಾರದ ವಿಚಾರಣೆಯ ಮೇಲೆ ಎಲ್ಲರ ಕಣ್ಣಿದೆ. ಅಲ್ಲಿ ಹೊರಬರುವ ತೀರ್ಪು ಪಿಲಿಕುಳದ ಪ್ರಾಣಿಗಳ ಭವಿಷ್ಯವನ್ನು ನಿರ್ಧರಿಸಲಿದೆ.

Continue Reading
Advertisement

award

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.


ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್‌ಎಸ್‌ಐ, 7ನೇ ಪಡೆ ಕೆಎಸ್‌ಆರ್‌ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್‌ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.

Continue Reading

accident

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

Published

on

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್‌ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.


2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige