Dakshina Kannada
ಪಿಲಿಕುಳಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು! ಸಂಕಷ್ಟದಲ್ಲಿ ಕರ್ನಾಟಕದ ಅತ್ಯಂತ ಸುಂದರ ಮೃಗಾಲಯ ಪಿಲಿಕುಳ
ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್ ಆದ ನ್ಯಾಯಾದೀಶರು
ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ ಈ ಜಾಗಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು!
ಈಗ ಅವ್ಯವಸ್ಥೆಯಿಂದ ಸಂಕಷ್ಟ ಅನುಭವಿಸುತ್ತಿದೆ. ತುಕ್ಕುಪಂಜರ, ಅಶುಚಿ ನೀರು, ಲೈಸೆನ್ಸ್ ಇಲ್ಲದೆ ಕಾರ್ಯನಿರ್ವಹಣೆ, ಪ್ರಾಣಿಗಳ ದಯನೀಯ ಸ್ಥಿತಿ ಹೈಕೋರ್ಟ್ ನ್ಯಾಯಾಧೀಶರನ್ನು ಶಾಕ್ ಮಾಡಿದೆ.

ಮಂಗಳೂರು: ಅರಬ್ಬಿ ಸಮುದ್ರದ ತಡಿಯ ಮಂಗಳೂರಿನಲ್ಲಿರೋ (Mangaluru) ಈ ಪಿಲಿಕುಳ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಅಂತಲೇ ಹೆಸರುವಾಸಿ. ಮಂಗಳೂರು ಪಿಲಿಕುಳ ಪಾರ್ಕ್,270 ಎಕರೆಗಳಲ್ಲಿ ಹಬ್ಬಿದ್ದು, ‘ಪಿಲಿ’ ಅಂದ್ರೆ ಹುಲಿ, ‘ಕುಳ’ ಅಂದ್ರೆ ಕೆರೆ. ಒಂದು ಕಾಲದಲ್ಲಿ ಹುಲಿಗಳು (Tigers) ಬಂದು ನೀರು ಕುಡಿಯುತ್ತಿದ್ದ ಈ ಜಾಗವನ್ನ ಇಂದು ಅಂತರಾಷ್ಟ್ರೀಯ ಮಟ್ಟದ ಜೈವಿಕ ಉದ್ಯಾನವನವಾಗಿ ರೂಪಿಸಲಾಗಿದೆ. ಪಶ್ಚಿಮ ಘಟ್ಟಗಳ ಅಳಿವಿನಂಚಿನಲ್ಲಿರೋ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರೋ ಪಿಲಿಕುಳ, ಕರಾವಳಿಗೆ ಬರೋ ಪ್ರವಾಸಿಗರ ಮೊದಲ ಆಯ್ಕೆ. ಅಂತಹ ಸುಂದರ ತಾಣ ಇಂದು ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. ಪಿಲಿಕುಳದ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಅಂದ್ರೆ, ಇಲ್ಲಿನ ಅವ್ಯವಸ್ಥೆ, ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಹೈಕೋರ್ಟ್ ನ್ಯಾಯಧೀಶರೇ ಶಾಕ್ ಆಗಿದ್ದಾರೆ. ಮಂಗಳೂರಿನ ಪ್ರವಾಸಿಗರ ಹಾಟ್ ಫೇವರೆಟ್ ಪಿಲಿಕುಳ ಮೃಗಾಲಯಕ್ಕೀಗ ಇಂತಹದೊಂದು ಸಂಕಷ್ಟ ಎದುರಾಗಿದೆ. ಇದು ಇಲ್ಲಿರೋ ಮೂಕ ಪ್ರಾಣಿಗಳಿಂದಾದ ತಪ್ಪಲ್ಲ. ಬದಲಾಗಿ ಇಲ್ಲಿನ ಆಡಳಿತ ವ್ಯವಸ್ಥೆಯಿಂದ ಸ್ವಯಂ ಕೃತ ಅಪರಾಧ. ತುಕ್ಕು ಹಿಡಿದ ಪಂಜರ, ತುಕ್ಕು ಹಿಡಿದ ಪಂಜರ, ಕಲುಷಿತ ನೀರು ಅಶುಚಿ ವಾತಾವರಣ ಇದು ಪಿಲಿಕುಳ ಮೃಗಾಲಯದ ಸದ್ಯದ ಸ್ಥಿತಿ.

ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಕೇವಲ ದೂರು ನೀಡದೆ, ಮೃಗಾಲಯದ ಒಳಗಿನ ಭೀಕರ ಸ್ಥಿತಿಯನ್ನು ಎತ್ತಿ ತೋರಿಸುವ ಭದ್ರ ಸಾಕ್ಷ್ಯಗಳನ್ನು ಹೈಕೋರ್ಟ್ಗೆ ನೀಡಿದ್ದಾರೆ. ಸೊರಗಿದ ಪ್ರಾಣಿಗಳ ಫೋಟೋಗಳು: ಸರಿಯಾದ ಆಹಾರವಿಲ್ಲದೆ ಎಲುಬು ಕಾಣುವಂತಾಗಿರುವ ಚಿರತೆ ಮತ್ತು ಹುಲಿಗಳ ಫೋಟೋಗಳು. ಅಸುರಕ್ಷಿತ ಪಂಜರಗಳು, ತುಕ್ಕು ಹಿಡಿದು ಕಿತ್ತುಹೋಗಿರುವ ಕಬ್ಬಿಣದ ಸರಳುಗಳು, ಇದರಿಂದ ಪ್ರಾಣಿಗಳು ಹೊರಬರುವ ಅಥವಾ ಗಾಯ ಮಾಡಿಕೊಳ್ಳುವ ಅಪಾಯವಿದೆ ಎಂದು ತೋರಿಸಿದ್ದಾರೆ. ಪ್ರಾಣಿಗಳ ಕುಡಿಯುವ ನೀರಿನ ತೊಟ್ಟಿಗಳಲ್ಲಿ ಪಾಚಿ ಕಟ್ಟಿರುವುದು ಮತ್ತು ಪ್ರಾಣಿಗಳ ಮಲ-ಮೂತ್ರ ವಿಲೇವಾರಿ ಆಗದೆ ಪಂಜರದಲ್ಲೇ ಕೊಳೆಯುತ್ತಿರುವುದು. ಅನಾರೋಗ್ಯಕ್ಕೀಡಾದ ಪ್ರಾಣಿಗಳಿಗೆ ಸರಿಯಾದ ಸಮಯದಲ್ಲಿ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಸಂಗ್ರಹಿಸಿ ದಾಖಲೆಯಾಗಿ ನೀಡಿದ್ದಾರೆ.

ಪಿಲಿಕುಳ ಮೃಗಾಲಯದ ಕರ್ಮ ಕಾಂಡಗಳು ಹೈಕೋರ್ಟ್ನಲ್ಲಿ ಹೊರಬಿದ್ದಿವೆ. ಪ್ರಾಣಿಗಳನ್ನು ಇರಿಸಿರುವ ಪಂಜರಗಳು ಸಂಪೂರ್ಣ ತುಕ್ಕು ಹಿಡಿದಿವೆ, ಅಲ್ಲಿ ಸರಿಯಾದ ಭದ್ರತೆಯೇ ಇಲ್ಲ. ಅಶುಚಿಯಾದ ಪರಿಸರದಲ್ಲಿ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಕೆಂಡಾಮಂಡಲವಾಗಿದೆ. ಇಲ್ಲಿ ಮತ್ತೊಂದು ದುರಂತ ಅಂದ್ರೆ ಜನಮನ್ನಣೆ ಪಡೆದ ಈ ಪಾರ್ಕ್ನ ಲೈಸೆನ್ಸ್ ಅವಧಿ 2025ರ ಡಿಸೆಂಬರ್ 1ಕ್ಕೇ ಮುಕ್ತಾಯವಾಗಿದೆ. ಅಂದ್ರೆ ಸದ್ಯ ಯಾವುದೇ ಪರವಾನಗಿ ಇಲ್ಲದೇ ಪಿಲಿಕುಳ ಮೃಗಾಲಯ ನಡೀತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಬಗ್ಗೆ ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ 2023 ಮತ್ತು 2025ರಲ್ಲಿ ಶೋಕಾಸ್ ನೋಟಿಸ್ ನೀಡಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿಲ್ಲ. ಮಲೀನಗೊಂಡ ನೀರು ಕುಡಿದು, ಸರಿಯಾದ ಚಿಕಿತ್ಸೆ ಸಿಗದೆ ಮೂಕ ಪ್ರಾಣಿಗಳು ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿವೆ ಅನ್ನೋದು ಅರ್ಜಿದಾರರ ಗಂಭೀರ ಆರೋಪಕ್ಕೆ ಹೈಕೋರ್ಟ್ ಗರಂ ಆಗಿದೆ. ಇವುಗಳನ್ನು ನೋಡಿದ ನ್ಯಾಯಾಧೀಶರು ಆಘಾತ ಮತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿ” ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿದ್ದು, ಮೃಗಾಲಯದ ಆಡಳಿತವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಅಥವಾ ವ್ಯವಸ್ಥಿತವಾಗಿ ಸುಧಾರಿಸುವಂತೆ ಸೂಚಿಸಿದೆ. ಕರ್ನಾಟಕ ಹೈಕೋರ್ಟ್ ಫೆಬ್ರವರಿ ಮೊದಲ ವಾರದಲ್ಲಿ ಪಿಲಿಕುಳ ಮೃಗಾಲಯದ ಬಗ್ಗೆ ಅತ್ಯಂತ ಕಠಿಣವಾದ ನಿಲುವನ್ನು ತಳೆದಿದೆ.

ಹೈಕೋರ್ಟ್ ಸರ್ಕಾರಕ್ಕೆ ಈ ಮೂರು ಪ್ರಶ್ನೆಗಳನ್ನು ಕೇಳಿದ್ದು, ಪರವಾನಗಿ ಇಲ್ಲದೆ ಇಷ್ಟು ದಿನ ಮೃಗಾಲಯವನ್ನು ಹೇಗೆ ನಡೆಸಲು ಬಿಟ್ಟಿದ್ದೀರಿ? ಪ್ರಾಣಿಗಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರೀಕ್ಷೆಯ ವರದಿ ಎಲ್ಲಿದೆ? ಪ್ರಾಣಿಗಳ ಅಸಹಜ ಸಾವುಗಳ ಬಗ್ಗೆ ಪೋಸ್ಟ್ ಮಾರ್ಟಂ (Post-mortem) ವರದಿಯನ್ನು ತಕ್ಷಣ ಸಲ್ಲಿಸಿ. ಎಂದು ಉತ್ತರ ನೀಡಲು ತಿಳಿಸಿದೆ. ಮೃಗಾಲಯದ ನಿರ್ದೇಶಕರು ಮತ್ತು ಅಧಿಕಾರಿಗಳು ಇತ್ತೀಚೆಗೆ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅಧಿಕ ಮಳೆಯಿಂದಾಗಿ ತಡೆಗೋಡೆ ಕುಸಿದು ಸಮಸ್ಯೆ ಉಂಟಾಗಿದೆ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ನ್ಯಾಯಾಲಯವು ಇದನ್ನು “ಆಡಳಿತಾತ್ಮಕ ವೈಫಲ್ಯ” ಎಂದು ಕರೆದಿದೆ. ಸರಿಯಾದ ಹಣಕಾಸಿನ ಹಂಚಿಕೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಮಾಜಿ ನಿರ್ದೇಶಕರು (ಜಯಪ್ರಕಾಶ್ ಭಂಡಾರಿ) ಈ ಹಿಂದೆ ರಾಜೀನಾಮೆ ನೀಡುವಾಗ ತಿಳಿಸಿದ್ದರು.

ಮುಂದಿನ ಕ್ರಮ ಏನಾಗಬಹುದು?
ನ್ಯಾಯಾಲಯದ ಸೂಚನೆಯಂತೆ ಸರ್ಕಾರವು ಮೃಗಾಲಯದ ನಿರ್ವಹಣೆಯನ್ನು ಸಂಪೂರ್ಣವಾಗಿ ಅರಣ್ಯ ಇಲಾಖೆ ಅಥವಾ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ (KZA) ಹಸ್ತಾಂತರಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಪ್ರಾಣಿಗಳನ್ನು ಬೇರೆ ಸುರಕ್ಷಿತ ಮೃಗಾಲಯಗಳಿಗೆ ವರ್ಗಾಯಿಸುವ ಆದೇಶ ಹೊರಬರುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು (PIL) ಅತ್ಯಂತ ತುರ್ತು ವಿಷಯವೆಂದು ಪರಿಗಣಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ನಡೆಸಲು ನ್ಯಾಯಾಲಯ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಾಣಿಗಳ ಪರಿಸ್ಥಿತಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ (CZA) ಸೂಚಿಸಿದೆ ಒಂದು ವೇಳೆ ಮೃಗಾಲಯದ ಪರವಾನಗಿಯನ್ನು ನವೀಕರಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರ ನಿರಾಕರಿಸಿದರೆ, ಅಲ್ಲಿರುವ ಪ್ರಾಣಿಗಳನ್ನು ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು) ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಅಥವಾ ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬೆಂಗಳೂರು) ಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ

ಪಿಲಿಕುಳ ಒಂದು ಕಾಲದಲ್ಲಿ ಜಿಲ್ಲಾಡಳಿತದ ಅಡಿಯಲ್ಲಿದ್ದ ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ (PNDA) ಮೂಲಕ ನಿರ್ವಹಿಸಲ್ಪಡುತ್ತಿತ್ತು. ಆದರೆ ಈಗ ಉಂಟಾಗಿರುವ ಅವ್ಯವಸ್ಥೆಯಿಂದಾಗಿ, ಇದನ್ನು ಸಂಪೂರ್ಣವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ (KZA) ಸುಪರ್ದಿಗೆ ಪಡೆಯುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಕೆ.ಜೆಡ್.ಎ ಅಡಿಯಲ್ಲಿ ಬಂದರೆ ಪ್ರಾಣಿಗಳಿಗೆ ನಿರಂತರ ಅನುದಾನ ಮತ್ತು ಪರಿಣಿತ ವೈದ್ಯರ ಸೇವೆ ಸಿಗಲಿದೆ.

ಪಿಲಿಕುಳ ಮೃಗಾಲಯ ಒಂದು ಕಾಲದಲ್ಲಿ ಇದು ಕರ್ನಾಟಕದ ಅತ್ಯಂತ ಸುಂದರ ಮೃಗಾಲಯಗಳಲ್ಲಿ ಒಂದಾಗಿತ್ತು ಇದನ್ನು 1990ರ ದಶಕದ ಉತ್ತರಾರ್ಧದಲ್ಲಿ ಮಂಗಳೂರಿನ ವಾಮಂಜೂರಿನಲ್ಲಿ ಸ್ಥಾಪಿಸಲಾಯಿತು. ‘ಪಿಲಿಕುಳ’ ಎಂದರೆ ತುಳು ಭಾಷೆಯಲ್ಲಿ “ಹುಲಿಗಳ ಕೆರೆ” ಎಂದರ್ಥ. ಇಲ್ಲಿ ಅಪರೂಪದ ರಾಜನಾಗ (King Cobra) ಸಂತಾನೋತ್ಪತ್ತಿ ಕೇಂದ್ರವಿದ್ದು, ಇದು ಏಷ್ಯಾದಲ್ಲೇ ಪ್ರಸಿದ್ಧವಾಗಿದೆ. ಸುಮಾರು 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿರುವ ಈ ಉದ್ಯಾನವನವು ಕರಾವಳಿಯ ಜೀವವೈವಿಧ್ಯದ ಕೇಂದ್ರವಾಗಿತ್ತು.
ಪಿಲಿಕುಳ ರೀಜನಲ್ ಸೈನ್ಸ್ ಸೆಂಟರ್ ಮೃಗಾಲಯಕ್ಕೆ ಹೋಲಿಸಿದರೆ ವಿಜ್ಞಾನ ಕೇಂದ್ರದ ಸ್ಥಿತಿ ಉತ್ತಮವಾಗಿದೆ. ಈಗ ಹೈಕೋರ್ಟ್ನ ಫೆಬ್ರವರಿ 3ನೇ ವಾರದ ವಿಚಾರಣೆಯ ಮೇಲೆ ಎಲ್ಲರ ಕಣ್ಣಿದೆ. ಅಲ್ಲಿ ಹೊರಬರುವ ತೀರ್ಪು ಪಿಲಿಕುಳದ ಪ್ರಾಣಿಗಳ ಭವಿಷ್ಯವನ್ನು ನಿರ್ಧರಿಸಲಿದೆ.
Bantawala
ದಕ್ಷಿಣ ಕನ್ನಡ ಕಾಂಗ್ರೆಸ್ಗೆ ಹೊಸ ಚೈತನ್ಯದ ಸಾರಥಿ: ಜಿಲ್ಲಾ ಅಧ್ಯಕ್ಷ ಗಾದಿಗೆ ‘ಚಂದ್ರಪ್ರಕಾಶ್ ಶೆಟ್ಟಿ ತುಂಬೆ’ ಪ್ರಬಲ ಸ್ಪರ್ಧಿ!
ಕಾರ್ಯಕರ್ತರ ಪಡೆಗೆ ಹೊಸ ಶಕ್ತಿ, ತಳಮಟ್ಟದ ಸಂಘಟನೆಗೆ ಹೊಸ ಹುರುಪು – ಚಂದ್ರಪ್ರಕಾಶ್ ಶೆಟ್ಟಿ ಸಾರಥ್ಯಕ್ಕೆ ಹೈಕಮಾಂಡ್ಗೆ ಕಾರ್ಯಕರ್ತರ ಜೈಕಾರ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಅಖಾಡದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ಗಾದಿಯ ಕೌತುಕ ಮುಗಿಲುಮುಟ್ಟಿದೆ. ಜುಲೈ 28ರಿಂದ ಆರಂಭಗೊಂಡಿರುವ ಹೊಸ ಅಧ್ಯಕ್ಷರ ಆಯ್ಕೆಯ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಜಿಲ್ಲಾದ್ಯಂತ ಕಾವೇರಿದ ವಾತಾವರಣ ಸೃಷ್ಟಿಸಿದೆ. ಪ್ರಮುಖ ನಾಯಕರು ಪಟ್ಟಕ್ಕೇರಲು ತೀವ್ರ ಪೈಪೋಟಿ ನಡೆಸುತ್ತಿರುವ ಈ ಹೊತ್ತಿನಲ್ಲಿ, ಪಕ್ಷದ ನಿಷ್ಠಾವಂತ ನಾಯಕ, ಸಂಘಟನಾ ಚತುರ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಹೆಸರು ಕರಾವಳಿ ರಾಜಕೀಯದಲ್ಲಿ ಸಿಂಹಪಾಲು ಪಡೆದುಕೊಂಡಿದೆ!
ಕಷ್ಟಕಾಲದ ನಿಷ್ಠಾವಂತ ಕಾಂಗ್ರೆಸ್ಸಿಗ : ಹೋರಾಟದ ಹಾದಿಯಲ್ಲಿ ಗೆದ್ದು ಬಂದ ಸರದಾರ!
ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಎಂದರೆ ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಹೋರಾಟ, ತ್ಯಾಗ ಮತ್ತು ಸದಾ ಜನಸೇವೆಯಲ್ಲಿ ನಿರತರಾಗಿರುವ ನಿಷ್ಠಾವಂತ ಕಾಂಗ್ರೆಸ್ಸಿಗ. ಪಕ್ಷದ ಪರಿಸ್ಥಿತಿ ಸವಾಲಿನಿಂದ ಕೂಡಿದ್ದಾಗಲೂ ಕಾಂಗ್ರೆಸ್ ಧ್ವಜವನ್ನು ಎತ್ತಿಹಿಡಿದು, ತಳಮಟ್ಟದ ಕಾರ್ಯಕರ್ತನಲ್ಲಿ ಹೊಸ ಆತ್ಮವಿಶ್ವಾಸ ಮತ್ತು ಭರವಸೆಯ ಕಿಚ್ಚು ಹೊತ್ತಿಸಿದ ಧೀರ ನಾಯಕ ಇವರು.
ಇತಿಹಾಸ ಸೃಷ್ಟಿಸಿದ ಐತಿಹಾಸಿಕ ವಿಜಯಗಳು:
ಇವರ ನಾಯಕತ್ವದ ಕಸುವಿಗೆ, ಸಂಘಟನಾ ಶಕ್ತಿಗೆ ಇತಿಹಾಸವೇ ಸಾಕ್ಷಿ ನೀಡುತ್ತದೆ:
ದಿಗ್ಗಜರನ್ನು ಪತನಗೊಳಿಸಿದ ಸಜಿಪ ಮುನ್ನೂರು ಜಯ: ಸಜಿಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಮಾಜಿ ಶಾಸಕರಂತಹ ಪ್ರಭಾವಿ ಎದುರಾಳಿಯನ್ನೇ ನೆಲಕಚ್ಚಿಸಿ ಐತಿಹಾಸಿಕ ಗೆಲುವು ಸಾಧಿಸಿದ ಹೆಗ್ಗಳಿಕೆ ಇವರದ್ದು.
35 ವರ್ಷಗಳ ಕೋಟೆಯನ್ನು ಪುಡಿಗಟ್ಟಿದ ಗೋಲ್ತಮಜಲು ಕ್ರಾಂತಿ: ಬದ್ಧ ವೈರಿ ಬಿಜೆಪಿಯ ಉಕ್ಕಿನ ಕೋಟೆಯಂತಿದ್ದ ಗೋಲ್ತಮಜಲು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬರೋಬ್ಬರಿ 35 ವರ್ಷಗಳ ಬಳಿಕ ಕಮಲ ಕಲಿಗಳನ್ನು ಸೋಲಿಸಿ, ಕಾಂಗ್ರೆಸ್ನ ವಿಜಯ ಪತಾಕೆ ಹಾರಿಸಿದ ಅಪರೂಪದ ಸಾಧನೆ ಇವರದ್ದು!
ಕಾರ್ಯಕರ್ತರೇ ಆಸ್ತಿ, ಹಿರಿಯ-ಕಿರಿಯರ ಸಮನ್ವಯವೇ ಶಕ್ತಿ!
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಕಟ್ಟಿಬೆಳೆಸಲು ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವ ಶಕ್ತಿ ಬೇಕಿದೆ. ಯುವಕರಲ್ಲಿ ಹೊಸ ಹುರುಪು ತುಂಬಿ, ಹಿರಿಯ ನಾಯಕರ ಸುದೀರ್ಘ ಅನುಭವವನ್ನು ಮಾರ್ಗದರ್ಶನವಾಗಿ ಪಡೆದುಕೊಂಡು ಪಕ್ಷವನ್ನು ಮುನ್ನಡೆಸಬಲ್ಲ ಏಕೈಕ ಸಮರ್ಥ ನಾಯಕ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಎಂಬ ಮಾತುಗಳು ಜಿಲ್ಲೆಯ ಮೂಲೆ ಮೂಲೆಯಿಂದ ಕೇಳಿಬರುತ್ತಿವೆ.
“ಸಂಘಟನೆಗೆ ಶಕ್ತಿ – ಕಾರ್ಯಕರ್ತರಿಗೆ ಗೌರವ – ಕಾಂಗ್ರೆಸ್ಗೆ ವಿಜಯ!”
ಈ ಧ್ಯೇಯಮಂತ್ರದೊಂದಿಗೆ ನಿರಂತರವಾಗಿ ಶ್ರಮಿಸುತ್ತಿರುವ ಚಂದ್ರಪ್ರಕಾಶ್ ಶೆಟ್ಟಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಗಾದಿ ಒಲಿಯಲೇಬೇಕು ಎಂದು ಸಾವಿರಾರು ಅಭಿಮಾನಿಗಳು ಹಾಗೂ ಬ್ಲಾಕ್ ಮಟ್ಟದ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್ಗೆ ಬಿನ್ನವಿಸಿಕೊಂಡಿದ್ದಾರೆ.
ಅವರ ಕಟ್ಟುಮಸ್ತಾದ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ, ಕರಾವಳಿಯಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಜಿಲ್ಲೆಯ ಕಾರ್ಯಕರ್ತರ ದೃಢ ವಿಶ್ವಾಸ!

Dakshina Kannada
ದಕ್ಷಿಣ ಕನ್ನಡ: ನಾಳೆ (ಆಗಸ್ಟ್ 4) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 04, 2026 (ಮಂಗಳವಾರ) ರಂದು ಜಿಲ್ಲೆಯ ಪ್ರಮುಖ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದ್ದಾರೆ:
ರಜೆ ವಿವರ:
- ಮಂಗಳೂರು ಉಪವಿಭಾಗ: ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
- ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (PUC), ITI ಹಾಗೂ ಡಿಪ್ಲೊಮಾ (12 ನೇ ತರಗತಿವರೆಗೆ) ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಲಾಗಿದೆ.
ಗಮನಿಸಿ: ಈ ನಿಯಮವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ‘ವಿಪತ್ತು ನಿರ್ವಹಣಾ ಕಾಯ್ದೆ 2005’ ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಮುನ್ನೆಚ್ಚರಿಕೆ ಸೂಚನೆಗಳು:
- ಪೋಷಕರ ಗಮನಕ್ಕೆ: ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು.
- ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
- ಪ್ರವಾಸಿಗರಿಗೆ ಸೂಚನೆ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರತೀರಕ್ಕೆ ತೆರಳದಂತೆ ನಿರ್ಬಂಧಿಸಲಾಗಿದೆ.
- ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ತುರ್ತು ನಿರ್ವಹಣೆಗೆ ಸದಾ ಸನ್ನದ್ಧರಾಗಿರಲು ಸೂಚಿಸಲಾಗಿದೆ.
ತುರ್ತು ಸಹಾಯವಾಣಿ (Helpline Numbers):
ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ಮಾಹಿತಿಗಾಗಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
- Toll Free No: 1077
- ದೂರವಾಣಿ: 0824-2442590

Bantawala
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.
ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು
ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.
ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.
ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.
ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.
ಪ್ರಶಸ್ತಿ ಹಾಗೂ ಪುರಸ್ಕಾರ
ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
