Connect with us

F.I.R.

ಬುರ್ಖಾ ಧರಿಸಿ ಲೇಡೀಸ್ ಕೋಚ್‌ನಲ್ಲಿ ಯುವಕನ ಪಯಣ : ಮಹಿಳೆಯರಿಗೆ ಗೊತ್ತಾದಾಗ ಏನು ಮಾಡಿದರು ?

Published

on

ಮುಂಬೈ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಪುರುಷನೊಬ್ಬನನ್ನು ಮಹಿಳಾ ಪ್ರಯಾಣಿಕರು ಪತ್ತೆಹಚ್ಚಿದ್ದಾರೆ. ಮಹಿಳೆಯರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸುವ ಬೆದರಿಕೆ ಹಾಕಿದಾಗ, ಆತ ಚಲಿಸುವ ರೈಲಿನಿಂದ ಜಿಗಿದಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ.


ಮುಂಬೈ ಲೋಕಲ್ ರೈಲಿನ ಲೇಡಿಸ್‌ ಕೋಚ್‌ನಲ್ಲಿ ಬುರ್ಖಾ ಧರಿಸಿ ಪುರುಷನೋರ್ವ ಪ್ರಯಾಣಿಸಿದ ಘಟನೆ ನಡೆದಿದೆ ಈ ಸಂಬಂಧ ರೈಲ್ವೆ ರಕ್ಷಣಾ ಪಡೆ, ಆರ್‌ಪಿಎಫ್ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು ಸಂಕಿತನಿಗಾಗಿ ಹುಡುಕಾಟ ಮುಂದುವರಿಸಿದೆ ಶುಕ್ರವಾರ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಲ್ ಸಿ ಎಸ್ ಎಮ್ ಟಿ ಕಡೆಗೆ ತೆರಳುತ್ತಿದ್ದ ಲೋಕಲ್ ರೈಲಿನ ಲೇಡೀಸ್ ಭೋಗಿಯಲ್ಲಿ ಈ ಘಟನೆ ನಡೆದಿದೆ. ಬುರ್ಖಾ ಧರಿಸಿ ಮಹಿಳೆಯಂತೆ ಕಾಣಿಸಿಕೊಂಡಿದ್ದ ಆತನ ದೇಹ ಭಾಷೆ ಮತ್ತು ಚಲನವಲನ ಮಹಿಳೆಯಂತೆ ಇರಲಿಲ್ಲ ಎಂಬ ಕಾರಣದಿಂದ ಕೆಲವು ಮಹಿಳೆಯರು ಆತನನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಪ್ರಶ್ನಿಸಿದ ವೇಳೆ ಬುರ್ಖಾಧಾರಿಯು ಮಹಿಳೆ ಅಲ್ಲ ಪುರುಷ ಎಂಬುದು ಸ್ಪಷ್ಟವಾಗಿದ್ದು, ಇದರಿಂದ ಮಹಿಳಾ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋ ನೋಡಿದ ರೈಲ್ವೆ ರಕ್ಷಣಾ ದಳ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಅಧಿಕಾರಿಗಳ ಪ್ರಕಾರ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌(CSMT)ಗೆ ಹೋಗುತ್ತಿದ್ದ ಲೋಕಲ್ ರೈಲಿನ ಲೇಡೀಸ್ ಬೋಗಿಯಲ್ಲಿ ಪುರುಷನೋರ್ವ ಬುರ್ಖಾ ಧರಿಸಿ ಪಯಣಿಸುತ್ತಿದ್ದಾನೆ ಎಂಬ ಅನುಮಾನ ಆ ಬೋಗಿಯಲ್ಲಿದ್ದ ಇತರ ಮಹಿಳಾ ಪ್ರಯಾಣಿಕರಿಗೆ ಬಂದಿದೆ. ಅವರು ಆತನನ್ನು ಪ್ರಶ್ನಿಸಲು ಮುಂದಾದಾಗ ಆತ ಪುರುಷ ಎಂಬುದು ತಿಳಿದು ಬಂದಿದೆ. ಮಹಿಳೆಯರು ಆತನನ್ನು ಲೇಡೀಸ್ ಬೋಗಿಯಲ್ಲಿ ಬುರ್ಖಾ ಧರಿಸಿ ಬಂದಿದ್ದಕ್ಕೆ ಪ್ರಶ್ನಿಸಿದ್ದಲ್ಲದೇ ಆ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ಅಲ್ಲದೇ ಮುಂಬರುವ ಘಾಟ್‌ಕೋಪರ್ ನಿಲ್ದಾಣದಲ್ಲಿ ಆತನನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಬೆದರಿಕೆ ಹಾಕಿದ್ದಾರೆ

ಮಹಿಳೆಯರು ಮುಂದಿನ ಘಾಟ್ ಕೋಪರ್ ನಿಲ್ದಾಣದಲ್ಲಿ ಆತನನ್ನು ಪೊಲೀಸರಿಗೆ ಒಪ್ಪಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದರಿಂದ ಭಯಗೊಂಡ ಶಂಕಿತ ವ್ಯಕ್ತಿ ರೈಲು ನಿಲ್ದಾಣಕ್ಕೆ ತಲುಪುವ ಮುನ್ನ ರೈಲಿನಿಂದ ಜಿಗಿದಿದ್ದಾನೆ. ಚಲಿಸುತ್ತಿದ್ದ ರೈಲಿನಿಂದಲೇ ಹಾರಿ ಕೆಳಗೆ ಬಿದ್ದ ಆತ ರೈಲು ಹಳಿಗಳ ಮೇಲೆ ಓಡಿ ತಪ್ಪಿಸಿಕೊಂಡಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ ತನಿಖೆ ಆರಂಭಿಸಿದ್ದು, ವಿವಿಧ ನಿಲ್ದಾಣಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಮುಲುಂಡ್ ನಿಲ್ದಾಣದಲ್ಲಿ ಕರ್ಜತ್ ಲೋಕಲ್ ರೈಲನ್ನು ತಪಾಸಣೆ ನಡೆಸಿದರೂ, ಶಂಕಿತ ವ್ಯಕ್ತಿ ಆಗಲೇ ರೈಲಿನಿಂದ ಇಳಿದು ಪರಾರಿಯಾಗಿದ್ದರಿಂದ ಪೊಲೀಸರು ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.

ಇದಾದ ಬಳಿಕ ಆತ ಕರ್ಜತ್‌ನಿಂದ ಬರುತ್ತಿದ್ದ ಮತ್ತೊಂದು ಲೋಕಲ್ ರೈಲಿಗೆ ಪ್ಲಾಟ್‌ಫಾರ್ಮ್ ಬದಲಿಸಿ ಹತ್ತಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಮಹಿಳಾ ಪ್ರಯಾಣಿಕರು ಘಟ್ಕೊಪರ್ ನಿಲ್ದಾಣದಲ್ಲಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ ತನಿಖೆ ಆರಂಭಿಸಿದ್ದು, ಮಹಿಳಾ ಕೋಚ್‌ನಲ್ಲಿ ಅನಧಿಕೃತವಾಗಿ ಪ್ರವೇಶಿಸಿ ಪ್ರಯಾಣಿಸಿದ್ದ ಆರೋಪದಡಿ ಭಾರತೀಯ ರೈಲ್ವೆ ಕಾಯ್ದೆಯ ಪ್ರಕಾರ ಆರ್‌ಪಿಎಫ್ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಶಂಕಿತನ ಗುರುತು ಪತ್ತೆಹಚ್ಚಲು ವೈರಲ್ ವೀಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.

Continue Reading
Advertisement

crime

ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು

Published

on

ಆನ್‌ ಲೈನ್‌ ಪ್ಲಾಟ್‌ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್‌ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.

Continue Reading

DEATH

ಮನೆಯಲ್ಲಿ ಒಬ್ಬಂಟಿಯಾಗಿದ್ದ ವೃದ್ಧ ಸಂಶಯಾಸ್ಪದ ಸಾವು..ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು.

Published

on

ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ. ವರ್ಗೀಸ್ (73)ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭ ಕಳೆದ ರಾತ್ರಿ(ಫೆ.8) ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸಾವಿನ ಹಿಂದೆ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು, ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ಕಾರ್ಯದಲ್ಲಿ ತೊಡಗಿದ್ದಾರೆ. ಕೆ.ಸಿ. ವರ್ಗೀಸ್ ಅವರ ಮೂವರು ಗಂಡು ಮಕ್ಕಳ ಪೈಕಿ ಇಬ್ಬರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಆಟೋ ಚಾಲಕರಾಗಿರುವ ಕಿರಿಯ ಪುತ್ರ ಕೆ.ವಿ. ಥೋಮಸ್ ತನ್ನ ಪತ್ನಿ, ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಾಗಿದ್ದಾರೆ. ವೃದ್ಧ ದಂಪತಿಗಳಾದ ಕೆ.ಸಿ. ವರ್ಗೀಸ್ ಹಾಗೂ ಅವರ ಪತ್ನಿ ಎಸ್ತರಾ ವರ್ಗೀಸ್ ಕೊಪ್ಪ ಮಾದೇರಿಯ ಮನೆಯಲ್ಲಿ ವಾಸವಾಗಿದ್ದು, ಮದ್ಯ ಸೇವಿಸುತ್ತಿರುವ ಕೆ.ಸಿ. ವರ್ಗೀಸ್ ಪ್ರತಿನಿತ್ಯ ಪತ್ನಿ ಜೊತೆಗೆ ಜಗಳ ಮಾಡುತ್ತಿದ್ದರೆಂಬ ಮಾಹಿತಿ ಕೇಳಿಬರುತ್ತಿದೆ. ಫೆ.8ರಂದು ಹಗಲು ವೇಳೆ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಎಸ್ತರಾ ಅವರು ಮಗ ಕೆ.ವಿ. ಥೋಮಸ್ ಅವರ ಮನೆಗೆ ಹೋಗಿದ್ದರು.ರಾತ್ರಿ ಆಟೋ ಬಾಡಿಗೆ ಮುಗಿಸಿ ಇದೇ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ತಂದೆ ಕೆ.ಸಿ. ವರ್ಗೀಸ್ ಅವರ ಮನೆಯಲ್ಲಿ ಲೈಟ್ ಉರಿಯುತ್ತಿರುವುದನ್ನು ಗಮನಿಸಿ ಬಂದು ಪರಿಶೀಲನೆ ನಡೆಸಿದ ವೇಳೆ ತಂದೆ ಮಂಚದಿಂದ ಬಿದ್ದು ಗಾಯಗೊಂಡಿದ್ದರೆನ್ನಲಾಗಿದೆ. ತಕ್ಷಣವೇ ಅವರನ್ನು ಅಂಬುಲೆನ್ಸ್ ವಾಹನದಲ್ಲಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಪುತ್ರ ಕೆ.ವಿ. ಥೋಮಸ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.ವರ್ಗೀಸ್ ಸಾವಿನ ಹಿಂದೆ ಹಲವು ರೀತಿಯ ಅನುಮಾನಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದಾರೆ. ಹೊರಗಿನಿಂದ ಮನೆಗೆ ಬಂದವರು ಹಲ್ಲೆ ನಡೆಸಿರುವುದರಿಂದಲೇ ಕೆ.ಸಿ. ವರ್ಗೀಸ್ ಸಾವನ್ನಪ್ಪಿರಬಹುದು ಎಂಬ ಮಾತುಗಳು ಪರಿಸರದಲ್ಲಿ ಕೇಳಿ ಬರುತ್ತಿವೆ. ಕೆ.ಸಿ. ವರ್ಗೀಸ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳೂ ಆಗಮಿಸಿ ತನಿಖೆ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ UDR 07/2026, ಕಲಂ : 194(III) (IV)BNSS 2023ರಂತೆ ಪ್ರಕರಣ ದಾಖಲಾಗಿದೆ.

Continue Reading

accident

ಕನ್ಯಾನದ ಹೋಟೆಲ್ ಕಾರ್ಮಿಕ ಮುನೀರ್ ದುರ್ಮರಣ.. ಕುಂಬಳೆ ಆರಿಕ್ಕಾಡಿಯಲ್ಲಿ ಕಾರು-ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ..

Published

on

ರಾಷ್ಟ್ರೀಯ ಹೆದ್ದಾರಿಯ ಕುಂಬಳೆ-ಆರಿಕ್ಕಾಡಿಯಲ್ಲಿ ಕಾರು ಮತ್ತು ಡಿಯೋ ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಡಿಯೋ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು ವಿವಾಹವಾಗಿದ್ದು ಬಳಿಕ ಇಲ್ಲೇ ವಾಸವಾಗಿದ್ದರು. ಕನ್ಯಾನ ಪೇಟೆಯಲ್ಲಿರುವ ಹೋಟೆಲಲ್ಲಿ ಕಾರ್ಮಿಕರಾಗಿರುವ ಮುನೀರ್ ಸಂಜೆ ಮಾಲಿಕನ KA19 EW 9003ಸಂಖ್ಯೆಯ ಡಿಯೋ ಸ್ಕೂಟರ್ ಪಡೆದು ಕುಂಬಳೆ ಕಡೆ ಹೋಗಿದ್ದರೆನ್ನಲಾಗಿದೆ.

ಮರಳಿ ಬರುವ ಸಂದರ್ಭ ಆರಿಕ್ಕಾಡಿಯಲ್ಲಿ ಮಿತಿಮೀರಿದ ವೇಗದಲ್ಲಿ ಬಂದ ಕಾರು ಡಿಯೋಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Continue Reading

Trending

Copyright © 2025 Deevatige