Connect with us

accident

ಬಡ ಮಹಿಳೆಯ ಕಣ್ಣೀರಿಗೆ ಸಹಾಯ ಹಸ್ತ ಚಾಚಿದ ಹೃದಯವಂತ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ; ಬೆಂಕಿ ದುರಂತದಿಂದ ಸರ್ವಸ್ವವನ್ನೂ ಕಳೆದುಕೊಂಡು ಬೀದಿಗೆ ಬಿದ್ದ ಬಡ ಕುಟುಂಬಕ್ಕೆ ಸ್ಪಂದಿಸಿದ ವಿಟ್ಲ ಪೊಲೀಸರು

Published

on

ಅದೆಷ್ಟೋ ದಾನಿಗಳು, ಜನಪ್ರತಿನಿಧಿಗಳು, ಸಮಾಜಸೇವಕರು ನೊಂದವರ, ಶೋಷಿತರ ಬದುಕಿನ ಕತ್ತಲೆಗೆ ದಾರಿದೀಪವಾಗಿ ಬಂದು ಅವರ ಸಂಕಷ್ಟಕ್ಕೆ ಸಹಾಯಹಸ್ತ ನೀಡುವುದನ್ನು ನೋಡುತ್ತೇವೆ. ಹಾಗೆಂದು ಯಾವುದೇ ಅಧಿಕಾರಿಗಳು ಯಾವ ಸಂಕಷ್ಟಗಳಿಗೂ ಸಹಾಯ ನೀಡುವುದು, ಅವರ ಶೋಚನೀಯ ಸ್ಥಿತಿಗೆ ಮರುಕ ಪಡುವುದು ಬಹಳ ವಿರಳ. ಆದರೆ ಇಲ್ಲೊಬ್ಬ ಅಧಿಕಾರಿ ಅದರಲ್ಲೂ ಪೊಲೀಸ್‌ ಅಧಿಕಾರಿ ಬೆಂಕಿ ದುರಂತದಿಂದ ಸರ್ವಸ್ವವನ್ನೂ ಕಳೆದುಕೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಸಂಕಷ್ಟವನ್ನು ನೋಡಿ ವೈಯಕ್ತಿಕ ನೆಲೆಯಲ್ಲಿ ಸಹಾಯಹಸ್ತ ನೀಡುವ ಮೂಲಕ ಬಡಕುಟುಂಬದ ಸಂಕಷ್ಟದಲ್ಲಿ ಭಾಗಿಯಾದ ಒಂದು ಮಾದರಿ ಹೃದಯವಂತಿಕೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಕಂಡುಬಂದಿದೆ. ಆ ಅಧಿಕಾರಿಯೇ ವಿಟ್ಲ ಪೊಲೀಸ್‌ ಠಾಣೆಯ ಜನಸ್ನೇಹಿ‌ ಪೊಲೀಸ್‌ ಇನ್ಸ್‌ ಪೆಕ್ಟರ್ ಪ್ರಕಾಶ್‌ ದೇವಾಡಿಗರು.

ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ತೀರಾ ಬಡಕುಟುಂಬದ ರಾಜೇಶ್ವರಿ ತನ್ನಿಬ್ಬರು ಶಾಲೆಗೆ ಹೋಗುತ್ತಿರುವ ಮಕ್ಕಳ ಜೊತೆ ಬದುಕು ಸಾಗಿಸುತ್ತಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಮಕ್ಕಳು ಶಾಲೆಗೆ ಹೋಗಿದ್ದು ತಾಯಿ ರಾಜೇಶ್ವರಿ ಅವರು ಕುಟುಂಬ ನಿರ್ವಹಣೆಗಾಗಿ ಅಡಿಕೆ ಗಾರ್ಬಲ್ ಸಂಸ್ಥೆಗೆ ಹೋಗಿ ದುಡಿಯುತ್ತಿದ್ದಾರೆ.
ಬೆಳಗ್ಗೆ ಹತ್ತೂವರೆ ಸುಮಾರಿಗೆ ಬೀಗ ಹಾಕಿದ್ದ ರಾಜೇಶ್ವರಿ ಅವರ ಮನೆಯೊಳಗಿಂದ ಏಕಾಏಕಿ ಭಾರಿ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ಅವರಿಗೆ ಮಾಹಿತಿ ನೀಡಿದ್ದಲ್ಲದೇ ಬಾಗಿಲು ಒಡೆದು ನೋಡಿದಾಗ ಬೆಂಕಿಯ ಜ್ವಾಲೆಗಳು ಸಂಪೂರ್ಣ ನಾಶ ಮಾಡಿದ್ದವು.

ಶಾಲೆಗೆ ಹೋಗಿದ್ದ ಮಕ್ಕಳಿಬ್ಬರು ಮತ್ತು ರಾಜೇಶ್ವರಿ ಅವರು ಉಟ್ಟ ಬಟ್ಟೆಗಳು ಹಾಗೂ ಶಾಲೆಗೆ ತೆಗೆದುಕೊಂಡು ಹೋಗಿದ್ದ ಪುಸ್ತಕಗಳು ಮಾತ್ರವೇ ಇದೀಗ ಬಡ ಕುಟುಂಬದ ಸೊತ್ತುಗಳಾಗಿ ಉಳಿದುಕೊಂಡಿವೆ.

ಇದೀಗ ಯಾರೇ ಹೋದರೂ ಮನೆಯೊಡತಿ ರಾಜೇಶ್ವರಿಯವರ ಕಣ್ಣೀರಿಗೆ ಎಂತಹ ಕಲ್ಲು ಹೃದಯವೂ ಕರಗುತ್ತಿದೆ. ಮೂರು ಬಡ ಜೀವಗಳು, ಉಟ್ಟ ಬಟ್ಟೆಗಳು ಬಿಟ್ಟು ಬೇರೇನೂ ಉಳಿದಿಲ್ಲ ಎನ್ನುತ್ತಾ ಕೈಮುಗಿದು ರಾಜೇಶ್ವರಿ ಅಳುತ್ತಿರುವುದಕ್ಕೆ ನಾವೇನು ಮಾಡಲು ಸಾಧ್ಯ ಅಂತೀರಾ.?

ಮಹಿಳೆ, ಮಕ್ಕಳ ಕಣ್ಣೀರು ಹಾಗೂ ಬಿಡ ಕುಟುಂಬದ ಅಸಹಾಯಕ ಸ್ಥಿತಿಗೆ ವಿಟ್ಲ ಪೊಲೀಸ್ ಠಾಣೆಯ ಹೃದಯವಂತ inspector ಪ್ರಕಾಶ್ ದೇವಾಡಿಗ ಅವರು ವೈಯುಕ್ತಿಕ ನೆಲೆಯಲ್ಲಿ ಸ್ಪಂದಿಸಿ ಇತರರಿಗೆ ಮಾದರಿಯಾಗಿದ್ದಾರೆ.
ರಾಜೇಶ್ವರಿ ಅವರನ್ನು ಠಾಣೆಗೆ ಬರಮಾಡಿ ವೈಯಕ್ತಿಕ ನೆಲೆಯಲ್ಲಿ ಸಹಾಯ ಹಸ್ತ ಚಾಚುವ ಮೂಲಕ ಬಡ ಕುಟುಂಬದ ಕಷ್ಟದಲ್ಲಿ ತಾನೂ ಭಾಗಿಯಾಗಿದ್ದಾರೆ.

ನಾವೇನು ಮಾಡಲು ಸಾಧ್ಯ.?

ಧಾರ್ಮಿಕ ಕೇಂದ್ರಗಳ ಡಬ್ಬಿಗೆ, ತಟ್ಟೆಗೆ, ಸಮಾಜೋತ್ಸವ-ಸಮಾರಂಭಗಳಿಗೆ, ಕೋಳಿ ಅಂಕ, ಜೂಜಾಟಕ್ಕೆ ಹಣ ಖರ್ಚು ಮಾಡುವ ಸ್ವಯಂ ಘೋಷಿತ ಕೊಡುಗೈ ದಾನಿಗಳೇ, ಇಂತಹ ಬಡವರಿಗೆ ದಾನ ಮಾಡುವ ಮೂಲಕ ಬಡ ಜೀವಗಳ ಕಣ್ಣೀರಿಗೆ ಸ್ಪಂದಿಸಬಾರದೇ.?

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಉಚ್ಚಿಲ: ಜಿಒಎಸ್ ಆಫ್ ಮಾಡದೆ ಟ್ರಾನ್ಸ್‌ಫಾರ್ಮರ್ ಏರಿದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಆಘಾತದಿಂದ ಸಾವು

Published

on

ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝುಮೀರ್ (49) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.

ಘಟನೆಯ ವಿವರ:

ಉಚ್ಚಿಲ ನಯಾಪಟ್ಟಣದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಮೆಸ್ಕಾಂಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೇಖ್ ಝುಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಎಂಬುವರು ಇಂದು ಬೆಳಿಗ್ಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.

ಜಿಒಎಸ್ (GOS) ಆಫ್ ಆಗಿದೆ ಎಂದು ತಪ್ಪಾಗಿ ಗ್ರಹಿಸಿದ ಝುಮೀರ್, ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಈ ವೇಳೆ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತೀವ್ರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಝುಮೀರ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

accident

ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ: ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದಾರುಣ ಸಾವು

Published

on

ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಹಾಗೂ ನೈವೇದ್ಯ ಹೋಟೆಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ಬಿಜೆಪಿ ಹಾಗೂ ಹಿಂದೂ ಮುಖಂಡ ಮಂಜುನಾಥ್ ಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಕೊಳ (37) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ:

ಶನಿವಾರ ಬೆಳಿಗ್ಗೆ ಕಡಿಯಾಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲಕ್ಷ್ಮೀ ಮಂಜುನಾಥ್ ಅವರು, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಮರಳಲು ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ದಾಟುತ್ತಿದ್ದ ವೇಳೆ, ವೇಗವಾಗಿ ಬಂದ ಖಾಸಗಿ ಬಸ್‌ ಒಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಸ್ಥಳದಲ್ಲೇ ಕೊನೆಯುಸಿರು:

ಬಸ್ ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಮಂಜುನಾಥ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸ್ ತನಿಖೆ:

ಘಟನೆ ನಡೆದ ತಕ್ಷಣವೇ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

Continue Reading

accident

ಮಾಣಿ ಸಮೀಪ ಭೀಕರ ರಸ್ತೆ ಅಪಘಾತ: ಕೆಟ್ಟು ನಿಂತಿದ್ದ ಟಿಪ್ಪರ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

Published

on

ಮಾಣಿ / ಉಪ್ಪಿನಂಗಡಿ, ಜು. 28: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪೆರ್ನೆ ಮೈರ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಅತೀವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮೇಲ್ಭಾಗ ಹಾಗೂ ಬದಿಯ ಭಾಗಕ್ಕೂ ಭಾರೀ ಹಾನಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಎರಡು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಗಾಯಾಳುಗಳಿಗೆ ಶೀಘ್ರ ವೈದ್ಯಕೀಯ ನೆರವು ದೊರಕಿದೆ.

ಘಟನೆಯಲ್ಲಿ ಗಾಯಗೊಂಡವರ ಹೆಸರು, ವಿಳಾಸ ಹಾಗೂ ಅವರು ಎಲ್ಲಿಂದ ಎಲ್ಲಿಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!