crime
ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳು ದಾಸ್ತಾನು..ಉಪ್ಪಿನಂಗಡಿ ಪೊಲೀಸರ ದಾಳಿ..30 ಟನ್ ಮರಳು, ದೋಣಿ ಸಹಿತ ಸೊತ್ತುಗಳು ವಶ..
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ವಳಾಲು ಪರಿಸರದ ನೇತ್ರಾವತಿ ನದಿ ತೀರದಲ್ಲಿನ ಅಕ್ರಮ ಮರಳು ದಾಸ್ತಾನು ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.
ಫೆ.17ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಸುತೇಶ್ ಕೆ.ಪಿ.ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಗಣಿ ಇಲಾಖೆಯ ಪರವಾನಿಗೆ ಇಲ್ಲದೆ ಅಕ್ರಮವಾಗಿ ನದಿ ತೀರದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಕಾರ್ಮಿಕರನ್ನು ವಿಚಾರಣೆ ನಡೆಸಿದ್ದಾರೆ. ಆ ಸಂದರ್ಭ ಜೈನುದ್ಧೀನ್ ಎಂಬಾತನ ಸೂಚನೆಯಂತೆ ಮರಳು ದಾಸ್ತಾನು ಮಾಡಿದ್ದೇವೆಂದು ಸ್ಥಳದಲ್ಲಿದ್ದ ಕಾರ್ಮಿಕರು ಬಾಯ್ಬಿಟ್ಟಿದ್ದಾರೆ.

ದಾಸ್ತಾನು ಮಾಡಿದ್ದ 30ಟನ್ ಅಕ್ರಮ ಮರಳು, ಮರಳುಗಾರಿಕೆಗೆ ಬಳಸುತ್ತಿದ್ದ ಒಂದು ದೋಣಿ, ನಾಲ್ಕು ಹಾರೆಗಳು, ಹನ್ನೊಂದು ಕಬ್ಬಿಣದ ಬಕೆಟುಗಳು, ಹತ್ತು ಪ್ಲಾಸ್ಟಿಕ್ ಬಕೆbಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಜತ್ತೂರು ಗ್ರಾಮದ ನಿವಾಸಿ ಇದಿನಬ್ಬ ಪುತ್ರ ಜೈನುದ್ಧೀನ್ ಎಂಬಾತನ ವಿರುದ್ಧ
ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: 23/2026 ಕಲಂ : 44 KARNATAKA MINOR MINERAL CONSISTENT RULE 1994& ಕಲಂ 4(1),4(1A),21(1)(A) (MINES AND MINERALS REGULATION OF DEVELOPMENT) ACT 1957, & ಕಲಂ 303(2) BNS-2023ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
crime
ಕಂಟೇನರ್ನಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 18ಕ್ಕೂ ಹೆಚ್ಚು ಗೋವುಗಳ ರಕ್ಷಣೆ; ಕಡಬ ಪೊಲೀಸರ ಮಿಂಚಿನ ಕಾರ್ಯಾಚರಣೆ
ಕಡಬ: ಹಾಸನ ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಂಟೇನರ್ ಲಾರಿಯಲ್ಲಿ ಅತೀ ಕ್ರೂರವಾಗಿ ತುಂಬಿದ್ದ 18ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಹಾಸನ ಮಾರ್ಗವಾಗಿ ಕೇರಳಕ್ಕೆ ಕಂಟೇನರ್ ಲಾರಿಯೊಂದರಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು, ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲದ ಕಣ್ಣಾರೆ ಎಂಬಲ್ಲಿ ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದರು. ಈ ವೇಳೆ ಕಂಟೇನರ್ ಒಳಗೆ ಗೋವುಗಳನ್ನು ಅತೀ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಿರುವುದು ಕಂಡುಬಂದಿದೆ.

ಸಬ್ ಇನ್ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಹೊಸೂರು ಮೂಲದ ಅಕ್ರಮ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಾರಿಯಲ್ಲಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಪೊಲೀಸರು ಅಕ್ರಮ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಶಪಡಿಸಿಕೊಂಡ ಗೋವುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
Bantawala
ಕಬಕ: ಅಕ್ರಮ ಕೇರಳ ಲಾಟರಿ ಮಾರಾಟ ಜಾಲಕ್ಕೆ ಪೊಲೀಸರ ಲಗ್ಗೆ – ಮಂಗಳೂರು ತಂಡದಿಂದ ಮಿಂಚಿನ ದಾಳಿ
ಪುತ್ತೂರು: ಕರ್ನಾಟಕದಲ್ಲಿ ಸಂಪೂರ್ಣವಾಗಿ ನಿಷೇಧಿತವಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರ ವಿಶೇಷ ತಂಡ ಭೇದಿಸಿದೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ನಲ್ಲಿ ಕಾರ್ಯಾಚರಿಸುತ್ತಿದ್ದ ಪಾನ್ ಬೀಡಾ ಅಂಗಡಿಯ ಮೇಲೆ ದಾಳಿ ನಡೆಸಿದ ಪೊಲೀಸರು, ಮಾಲೀಕ ಸೇರಿದಂತೆ ಗ್ರಾಹಕರನ್ನು ವಶಕ್ಕೆ ಪಡೆದಿದ್ದಾರೆ.
ಕಬಕ ಜಂಕ್ಷನ್ನಲ್ಲಿರುವ ಪಾನ್ ಬೀಡಾ ಅಂಗಡಿಯೊಂದರಲ್ಲಿ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ, ಗುಪ್ತವಾಗಿ ಕೇರಳ ಲಾಟರಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಗಡಿ ಭಾಗಗಳಲ್ಲಿ ಈ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಮಂಗಳೂರಿನಿಂದ ಆಗಮಿಸಿದ ವಿಶೇಷ ತಂಡವು ಕಾರ್ಯಾಚರಣೆ ರೂಪಿಸಿತ್ತು.

ಕಾರ್ಯಾಚರಣೆ ನಡೆದ ರೀತಿ:
ನಿಗಾ ಇರಿಸಿದ ತಂಡ: ಮಂಗಳೂರಿನಿಂದ ಬಂದ ವಿಶೇಷ ತಂಡದ ಪೊಲೀಸರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಾಮಾನ್ಯ ನಾಗರಿಕರಂತೆ ಪಾನ್ ಬೀಡಾ ಅಂಗಡಿಯ ಮಾಲೀಕನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ಯುವಕರು ಲಾಟರಿ ಖರೀದಿಸಲು ಬಂದಾಗ, ಪೊಲೀಸರು ಹಠಾತ್ ದಾಳಿ ನಡೆಸಿ ಲಾಟರಿ ಟಿಕೆಟ್ಗಳ ಸಮೇತ ಮಾಲೀಕ ಮತ್ತು ಗ್ರಾಹಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ವಿದ್ಯಾಪುರ ನಿವಾಸಿ ಜಗದೀಶ ಯಾನೆ ಜಗ್ಗ ಎಂದು ಗುರುತಿಸಲಾಗಿದೆ. ಈತ ತನ್ನ ಅಂಗಡಿಯಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದ ಬಗ್ಗೆ ಸ್ಥಳೀಯರು ಹಿರಿಯ ಅಧಿಕಾರಿಗಳಿಗೆ ನೀಡಿದ ದೂರು ಕಾರ್ಯಾಚರಣೆಗೆ ಪ್ರಮುಖ ಕಾರಣವಾಗಿದೆ.

ಕಾನೂನು ಕ್ರಮ ಮತ್ತು ತನಿಖೆ:
ದಾಳಿಯ ವೇಳೆ ಅಂಗಡಿಯಲ್ಲಿದ್ದ ಅಕ್ರಮ ಕೇರಳ ಲಾಟರಿ ಟಿಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿ ತಿಳಿದು ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
ಕರ್ನಾಟಕದಲ್ಲಿ ಲಾಟರಿ ಮಾರಾಟ ಮಾಡುವುದು ಕಾನೂನುಬಾಹಿರ. ಗಡಿ ಭಾಗದ ಮೂಲಕ ಅಕ್ರಮವಾಗಿ ಲಾಟರಿ ತಂದು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಜಾಲದ ಹಿಂದೆ ಬೇರೆ ಯಾರಾದರೂ ಪ್ರಭಾವಿಗಳು ಅಥವಾ ದೊಡ್ಡ ವಿತರಕರು ಇದ್ದಾರೆಯೇ ಎಂಬ ಬಗ್ಗೆ ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯು ಗಡಿ ಭಾಗದ ಅಕ್ರಮ ದಂಧೆಕೋರರಿಗೆ ಎಚ್ಚರಿಕೆಯ ಸಂದೇಶ ನೀಡಿದೆ.
crime
ದೈವಕ್ಕೆ ಅವಮಾನ: ಎಮ್ಮೆಮಾಡು ಜಮಾಅತ್ನಿಂದ ತಪ್ಪಿತಸ್ಥರಿಗೆ ಎಚ್ಚರಿಕೆ ಹಾಗೂ ಕ್ಷಮಾಪಣೆ
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭವೊಂದರಲ್ಲಿ ಸ್ಥಳೀಯ ದೈವವೊಂದಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಮ್ಮೆಮಾಡುವಿನ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಅತ್, ಘಟನೆಯಲ್ಲಿ ಭಾಗಿಯಾದವರಿಗೆ ಕಠಿಣ ಎಚ್ಚರಿಕೆ ನೀಡಿದೆ.

ಘಟನೆಯ ಹಿನ್ನೆಲೆ ಮತ್ತು ಜಮಾಅತ್ ಕ್ರಮ
ಮದುವೆ ಸಮಾರಂಭ ಮುಗಿದ ನಂತರ ಕೆಲವು ಯುವಕರು ದೈವದ ಆಚರಣೆಯನ್ನು ಅಪಹಾಸ್ಯ ಮಾಡುವ ರೀತಿಯಲ್ಲಿ ವರ್ತಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಎಮ್ಮೆಮಾಡು ಜಮಾಅತ್ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಯಿತು. ಈ ಕುರಿತು ಪ್ರಧಾನ ಕಾರ್ಯದರ್ಶಿ ಸೈಯದ್ ಝಕರಿಯ ಸಅದಿ ಅಲ್ ಐದರೂಸಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ:
ಸಭೆಯ ಬಳಿಕ ಜಮಾಅತ್ ಪ್ರಧಾನ ಕಾರ್ಯದರ್ಶಿ ಸೈಯದ್ ಝಕರಿಯ ಸಅದಿ ಅಲ್ ಐದರೂಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ “ಮದುವೆ ಸಮಾರಂಭ ಮುಗಿದ ಬಳಿಕ ಸ್ನೇಹಿತರೆಲ್ಲರೂ ಒಗ್ಗೂಡಿದಾಗ ಕೇವಲ ತಮಾಷೆಗಾಗಿ ಈ ರೀತಿ ವರ್ತಿಸಿದ್ದೇವೆ ಎಂದು ಯುವಕರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಯಾವುದೇ ಜಾತಿ, ಧರ್ಮ ಅಥವಾ ಧಾರ್ಮಿಕ ಆಚರಣೆಗಳನ್ನು ನಿಂದಿಸುವ ಉದ್ದೇಶ ತಮಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ನಡವಳಿಕೆಯಿಂದ ತಪ್ಪಾಗಿರುವುದನ್ನು ಅರಿತ ಯುವಕರು ಜಮಾಅತ್ ಮುಂದೆ ಸಭೆಯಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಇದರಿಂದ ಯಾರ ಮನಸ್ಸಾದರೂ ನೊಂದಿದ್ದರೆ ಅವರೆಲ್ಲರಲ್ಲೂ ಯುವಕರು ಕ್ಷಮೆಯನ್ನ ಕೋರಿದ್ದಾರೆ. ಎಂದು ತಿಳಿಸಿದ್ದು, ಯುವಕರು ಈಗಾಗಲೇ ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿರುವುದರಿಂದ, ಸಾರ್ವಜನಿಕರು ಕೂಡ ಅವರಿಗೆ ಕ್ಷಮೆಯನ್ನು ನೀಡಿ ಎಲ್ಲರೂ ಸೌಹಾರ್ದತೆಯಿಂದ ಬಾಳಬೇಕೆಂದು ಸೈಯದ್ ಝಕರಿಯ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಜಮಾಅತ್ ನೀಡಿದ ಕಠಿಣ ಎಚ್ಚರಿಕೆ
ಈ ಪ್ರಕರಣವನ್ನು ಇಲ್ಲಿಗೆ ಅಂತ್ಯಗೊಳಿಸದ ಜಮಾಅತ್ ಮಂಡಳಿಯು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
“ಯಾವುದೇ ಧರ್ಮ ಅಥವಾ ದೈವದ ಬಗ್ಗೆ ಅವಹೇಳನ ಮಾಡುವುದು ಜಮಾಅತ್ನ ಆಶಯಕ್ಕೆ ವಿರುದ್ಧವಾಗಿದೆ. ಇನ್ನು ಮುಂದೆ ಎಮ್ಮೆಮಾಡು ಜಮಾಅತ್ ವ್ಯಾಪ್ತಿಯಲ್ಲಿ ಇಂತಹ ಕೃತ್ಯಗಳು ನಡೆದರೆ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಜಮಾಅತ್ ನಿಯಮಾವಳಿಗಳ ಪ್ರಕಾರ ಕಠಿಣ ನಿಯಮಗಳನ್ನು ಎದುರಿಸಬೇಕಾಗುತ್ತದೆ.”
— ಸೈಯದ್ ಝಕರಿಯ ಸಅದಿ ಅಲ್ ಐದರೂಸಿ,
ಪ್ರಧಾನ ಕಾರ್ಯದರ್ಶಿ.
ಕೋಮು ಸೌಹಾರ್ದತೆಗೆ ಆದ್ಯತೆ
ಜಿಲ್ಲೆಯಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಜಮಾಅತ್ ತೆಗೆದುಕೊಂಡ ಈ ತ್ವರಿತ ನಿರ್ಧಾರವು ಮಹತ್ವದ್ದಾಗಿದೆ. ಈ ಮಹತ್ವದ ಸಭೆಯಲ್ಲಿ ಜಮಾಅತ್ ಅಧ್ಯಕ್ಷರಾದ ಹುಸೈನ್ ಸಖಾಫಿ, ಸಹ ಕಾರ್ಯದರ್ಶಿ ಹನೀಫಾ ಸೇರಿದಂತೆ ಜಮಾಅತ್ನ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು., ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವಂತೆ ಸಮುದಾಯದ ಯುವಕರಿಗೆ ಕರೆ ನೀಡಿದರು.
-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
