DEATH
ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಸುಂದರ್ ಕಬಕ ಇನ್ನಿಲ್ಲ.
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/02/425888-1000x600.jpg&description=ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಸುಂದರ್ ಕಬಕ ಇನ್ನಿಲ್ಲ.', 'pinterestShare', 'width=750,height=350'); return false;" title="Pin This Post">
ಬೆಂಗಳೂರಿನ ಹಿರಿಯ ಪತ್ರಕರ್ತರಾಗಿದ್ದ ಕಬಕದ ಕೆ. ಸುಂದರ್ (56) ಅವರು ಶನಿವಾರ ಬೆಳಿಗ್ಗೆ ಮಂಗಳೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.
ಕರ್ನಾಟಕದಲ್ಲಿ ಉದಯ ಟಿವಿ ಆರಂಭವಾದ ಸಂದರ್ಭದಲ್ಲಿ ಟಿವಿ ವರದಿಗಾರನಾಗಿ ವೃತ್ತಿ ಆರಂಭಿಸಿದ ಸುಂದರ್ ಅವರು ಬಳಿಕ , ಸುಪ್ರಭಾತ ಟಿವಿ, ಈಟಿವಿ ನ್ಯೂಸ್, ಜನಶ್ರೀ ನ್ಯೂಸ್ ನಲ್ಲಿ ಹಿರಿಯ ಹುದ್ದೆಯನ್ನು ನಿರ್ವಹಿಸಿ, ರಾಜ್ಯ ಮಟ್ಟದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ ಮಾದ್ಯಮ ಮಿತ್ರರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯ ವರದಿಗಾರಿಕೆಯಲ್ಲಿ ನೈಪುಣ್ಯತೆ ಹೊಂದಿದ ಇವರು ಬಹುತೇಕ ಮಾಜಿ ಮುಖ್ಯ ಮಂತ್ರಿಗಳ ಆಪ್ತರಲ್ಲಿ ಒಬ್ಬರಾಗಿದ್ದರು. ಇವರ ಮಾದ್ಯಮ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿಗಳು ಇವರಿಗೆ ಲಭಿಸಿದ್ದು, ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರು ಆಗಿದ್ದಾರೆ. ಮಾದಯಮ ಸೇವೆಯಲ್ಲಿ ಇರುವ ಸಂದರ್ಭಕ್ಕೆ ಅನಾರೋಗ್ಯಕ್ಕೆ ತುತ್ತಾದ ಇವರು ಕಣ್ಣಿನ ದೃಷ್ಠಿಯನ್ನು ಕಳೆದುಕೊಂಡ ನಂತರ ಪತ್ರಿಕಾರಂಗಕ್ಕೆ ವಿದಾಯ ಹೇಳಿದ್ದರು.
ಪುತ್ತೂರು ತಾಲೂಕಿನ ಕಬಕದವರಾದ ಸುಂದರ್ ಅವರು ಮಂಗಳೂರು ವಿ.ವಿ ಕಾಲೇಜಿನಲ್ಲಿ ಪದವಿ ಪಡೆದು ಬಳಿಕ ಕೊಣಾಜೆ ಮಂಗಳೂರು ವಿ.ವಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನದ ಬಳಿಕ ಬೆಂಗಳೂರು ಪಯಣಿಸಿದ ಸುಂದರ ಅವರು ಮೂರು ದಶಕಗಳ ಕಾಲ ಬೆಂಗಳೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದರು. ಅಪಾರ ಮಿತ್ರ ಬಳಗವಿದ್ದ ಸುಂದರ್ ಪರೋಪಕಾರಿಯಾಗಿ ಸ್ನೇಹಜೀವಿಯಾಗಿ ಬದುಕಿದವರು.
ಸುಂದರ್ ಕಬಕ ಮರಣದ ವಾರ್ತೆ ನೋವನ್ನುಂಟು ಮಾಡಿದೆ, ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಅನನ್ಯವಾದುದು, ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಅನುಗ್ರಹಿಸಲಿ ಎಂದು ಕರ್ನಾಟಕ ರಾಜ್ಯ ಜರ್ನಲಿಸ್ಟ್ ಯೂನಿಯನ್ ಇದರ ಜಿಲ್ಲಾ ಸಮಿತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಸುಂದರ್ ಕಬಕ ಅವರ ಅಕಾಲಿಕ ಮರಣದಿಂದ ಮಾದ್ಯಮ ಕ್ಷೇತ್ರದೊಂದಿಗೆ ಒಡನಾಟದಲ್ಲಿದ್ದ ಓರ್ವ ಸಹೋದ್ಯೋಗಿ ಮಿತ್ರನನ್ನು ಕಳೆದುಕೊಂಡಂತಾಗಿದೆ. ಅವರ ಅಕಾಲಿಕ ವಿದಾಯ ನೋವುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ನನ್ನ ಸಾಂತ್ವನಗಳನ್ನು ದೀವಟಿಗೆ ಡಿಜಿಟಲ್ ಮೀಡಿಯಾ ಬಳಗ ಸಲ್ಲಿಸುತ್ತಿದೆ.
accident
ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಸ್ನಾನಕ್ಕಿಳಿದ ಹೈದರಾಬಾದ್ ಮೂಲದ ತಂದೆ-ಮಗ ಸೇರಿ ಐವರು ನೀರುಪಾಲು!
ರಾಯಚೂರು/ಮಂತ್ರಾಲಯ: ರಾಯಚೂರು ಜಿಲ್ಲೆಯ ಗಡಿಭಾಗದಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯದ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಒಂದೇ ಕುಟುಂಬದ ಐವರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ಹೈದರಾಬಾದ್ ಮೂಲದ ಸತೀಶ್ (35) ಮತ್ತು ಅವರ 5 ವರ್ಷದ ಪುತ್ರ ಯುವನ ಚಂದ್ರ, ಮಂತ್ರಾಲಯ ಗ್ರಾಮದ ರಾಘವೇಂದ್ರ (25) ಹಾಗೂ ಧನುಷ್ (23) ಮತ್ತು ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಪರ್ಣಾ ಎಂಬ ಮಹಿಳೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸತ್ಯನಾರಾಯಣ ಪೂಜೆಗೆ ಬಂದಿದ್ದಾಗ ದುರಂತ: ಪೊಲೀಸ್ ಮೂಲಗಳ ಪ್ರಕಾರ, ಸುಮಾರು 10 ಜನರಿದ್ದ ಸಂಬಂಧಿಕರ ಗುಂಪೊಂದು ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಆಯೋಜಿಸಲಾಗಿದ್ದ ಕೌಟುಂಬಿಕ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಲು ಬಂದಿತ್ತು. ಪೂಜೆಯ ಬಳಿಕ ನದಿಯ ದಂಡೆಗೆ ತೆರಳಿದ್ದ ಇವರಲ್ಲಿ ಆರು ಜನರು ತುಂಗಭದ್ರಾ ನದಿಗೆ ಈಜಲು ಮತ್ತು ಸ್ನಾನ ಮಾಡಲು ಇಳಿದಿದ್ದಾರೆ. ಆದರೆ, ನೀರಿನ ಆಳದ ಅಂದಾಜು ಸಿಗದೆ ತೀವ್ರ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ನದಿ ದಂಡೆಯಲ್ಲಿದ್ದ ಇತರ ಸಂಬಂಧಿಕರು ತಕ್ಷಣವೇ ಕೂಗಾಡಲು ಆರಂಭಿಸಿದಾಗ, ಸ್ಥಳೀಯ ಮೀನುಗಾರರು ಮತ್ತು ಮಂತ್ರಾಲಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ತಂದೆ ಸತೀಶ್ ಹಾಗೂ ಮಗ ಯುವನ ಚಂದ್ರ ಸೇರಿದಂತೆ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದವರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡದ (SDRF) ಸಹಾಯದೊಂದಿಗೆ ತೀವ್ರ ಶೋಕ ಕಾರ್ಯ ಮುಂದುವರಿದಿದೆ.

ಎಮ್ಮಿಗನೂರು ಡಿವೈಎಸ್ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ನದಿಯಲ್ಲಿ ನೀರುಪಾಲಾದವರ ಹುಡುಕಾಟ ವೇಳೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಪವಿತ್ರ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಹಾಗೂ ಪೂಜೆ ಮುಗಿಸಿದ ತಕ್ಷಣವೇ ಇಡೀ ಕುಟುಂಬ ದುರಂತಕ್ಕೀಡಾಗಿರುವುದು ಸ್ಥಳದಲ್ಲಿ ಜಮಾಯಿಸಿರುವ ಭಕ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ



DEATH
ವಿದ್ಯುತ್ ಶಾಕ್ ತಗುಲಿ ಯುವಕ ದಾರುಣ ಸಾವು
ಪುತ್ತೂರು: ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ನಿಮಿತ್ತ ಊರಿಗೆ ಬಂದಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ತಗುಲಿ ದಾರುಣವಾಗಿ ಮೃತಪಟ್ಟ ಘಟನೆ ನಿಡ್ಪಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರಂದು ರಾತ್ರಿ ಸಂಭವಿಸಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29 ವರ್ಷ) ಮೃತಪಟ್ಟ ದುರ್ದೈವಿ.
ರೋಶನ್ ಪಿಂಟೋ ಅವರು ತಮ್ಮ ತಂದೆ-ತಾಯಿ ಹಾಗೂ ಸಹೋದರಿಯೊಂದಿಗೆ ನಿಡ್ಪಳ್ಳಿಯಲ್ಲಿರುವ ಮಾವನ ಮನೆಗೆ ಬಂದಿದ್ದರು. ಮೇ 24ರಂದು ರಾತ್ರಿ ಸ್ನಾನ ಮುಗಿಸಿದ ರೋಶನ್, ಬಟ್ಟೆ ಒಗೆಯುವ ಜಾಗಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿ ಆಕಸ್ಮಿಕವಾಗಿ ಲೈವ್ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ಜೋರಾಗಿ ಶಾಕ್ ಹೊಡೆದು ನೆಲಕ್ಕೆ ಬಿದ್ದಿದ್ದಾರೆ.
ತಕ್ಷಣವೇ ಮನೆಯವರು ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ರೋಶನ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



accident
ಮಾಣಿ: ಮೀನಿನ ಲಾರಿ–ಸ್ಕೂಟಿ ಭೀಕರ ಅಪಘಾತ; ಪುತ್ತೂರಿನ ಖಲಂದರ್ ಶಾ ದುರ್ಮರಣ
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಮೇ 25 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಸುಳ್ಯ ಗಾಂಧಿನಗರದ ಮೋಹಿದೀನ್ ಎಂಬವರ ಪುತ್ರ ಖಲಂದರ್ ಶಾ (ಖಲಂದರ್) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ವರ್ಷಗಳಿಂದ ಪುತ್ತೂರಿನಲ್ಲಿ ವಾಸವಾಗಿದ್ದರು.
ಘಟನೆಯ ವಿವರ:
ಮುಖಾಮುಖಿ ಢಿಕ್ಕಿ: ಖಲಂದರ್ ಶಾ ಅವರು ತಮ್ಮ ಹೋಂಡಾ ಡಿಯೋ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದಾಗ, ಮಾಣಿ ಜಂಕ್ಷನ್ ಸಮೀಪ ವೇಗವಾಗಿ ಬಂದ ಮೀನಿನ ಲಾರಿಯೊಂದು ಮುಖಾಮುಖಿ ಢಿಕ್ಕಿ ಹೊಡೆದಿದೆ.
ತೀವ್ರ ರಕ್ತಸ್ರಾವ: ಢಿಕ್ಕಿಯ ಭೀಕರತೆಗೆ ಸ್ಕೂಟಿ ಸವಾರ ರಸ್ತೆಗೆ ಬಿದ್ದು ತಲೆ ಹಾಗೂ ದೇಹದ ಭಾಗಗಳಿಗೆ ಗಂಭೀರ ಗಾಯಗಳಾಗಿ, ರಕ್ತದ ಮಡುವಿನಲ್ಲಿ ಬಿದ್ದಿದ್ದರು.
ಆಸ್ಪತ್ರೆಗೆ ಸಾಗಿಸುವಾಗ ಸಾವು:
ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಅವರು ಆಸ್ಪತ್ರೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢೀಕರಿಸಿದ್ದಾರೆ.
ಸ್ಥಳಕ್ಕೆ ಸಂಚಾರಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಅವರು ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ ಕಲ್ಲರ್ಪೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
