Bantawala
ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ 4ನೇ ವರ್ಷದ ವಾರ್ಷಿಕ ಕಾರ್ಯಕ್ರಮ
ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ ಯುವಕ ಮಂಡಲದ 4ನೇ ವರ್ಷದ ವಾರ್ಷಿಕ ಕಾರ್ಯಕ್ರಮ ಹಾಗೂ ಹಗ್ಗಜಗ್ಗಾಟ ಪಂಟ ಪೆಬ್ರವರಿ 21ನೇ ಶನಿವಾರ ಪೂರ್ಲಪ್ಪಾಡಿ ಶ್ರೀವರ ವೇದಿಕೆ ಮುಂಭಾಗದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯೊಂದಿಗೆ, ಯುವಕ ಮಂಡಲದ ವತಿಯಿಂದ ಮಧ್ಯಾಹ್ನ 2ರಿಂದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಕ್ ಉಳಿಪ್ಪಾಡಿ ಆಗಮಿಸಿ ಶುಭಹಾರೈಸಿದರು. ಸಂಜೆ 6.30ರಿಂದ ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ರಾತ್ರಿ 8.30 ಗಂಟೆಗೆ ಸರಿಯಾಗಿ ಸಭಾಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನು ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ನಿರ್ದೇಶಕರಾದ ಉದಯ ಭಟ್ ನೆಡ್ಯಾಳ ವಹಿಸಿದ್ದರು. ಅತಿಥಿಗಳಾಗಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಂತ್ ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ಉಪಾಧ್ಯಕ್ಷರಾದ ರವೀಶ್ ಶೆಟ್ಟಿ ಕರ್ಕಳ, ಶ್ರೀ ಮಲರಾಯಿ ದೈವಸ್ಥಾನ ಆಡಳಿತ ಸೇವಾ ಟ್ರಸ್ಟ್ (ರಿ) ಪೂರ್ಲಪ್ಪಾಡಿ ಇದರ ಅಧ್ಯಕ್ಷರಾದ ರಾಮಣ್ಣ ಗೌಡ ದೇವರಮನೆ , ಬ್ರಹಶ್ರೀ ವಿವಿಧೋದ್ಧೇಶ ಸಹಕಾರಿ ಸಂಘ ನಿ ವಿಟ್ಲ ಇದರ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಶ್ರೀಶೈಲ ಢೋಣೂರ, ಶ್ರೀವರ ಯುವಕ ಮಂಡಲದ ಗೌರವಾಧ್ಯಕ್ಷರಾದ ಶ್ರೀ ಈಶ್ವರ ಭಟ್ ಬದನಾಜೆ, ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ನಿರ್ಧೇಶಕರಾದ ಶ್ರೀಮತಿ ಧರ್ಮಾವತಿ ದೇವರಮನೆ, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ಶಿಲ್ಪಶ್ರೀ ಯುವಕ ಮಂಡಲ (ರಿ.) ಕೊಡಂಗಾಯಿ ಇದರ ಅಧ್ಯಕ್ಷರಾದ ರೋಹಿತ್ ರೈ ಚೆಂಬರಡ್ಕ, ಫ್ರೆಂಡ್ಸ್ ಕಾಪುಮಜಲು (ರಿ.) ಇದರ ಅಧ್ಯಕ್ಷರಾದ ವಿನಯ ಜೋಗಿ ಕಾಪುಮಜಲು, ಶಿವಾಜಿ ಪೆಂಡ್ಸ್ ಸೇವಾ ಟ್ರಸ್ಟ್ ರಿ. ಮಂಕುಡೆ ಇದರ ಅಧ್ಯಕ್ಷರಾದ ನವೀನ್ ಕುಳಾಲು ಪುಡೆಮಜಲು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಲಕ್ಷಿಮಿ ಕೆ, ಶ್ರೀವರ ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಚಂದ್ರ ಆಳ್ವ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಸಾಧನೆಗೈಯುತ್ತಿರುವ ಸಾಧಕರಾದ ಹಿರಿಯ ಯಕ್ಷಗಾನ ಅರ್ಥದಾರಿಗಳಾದ ಜಗದೀಶ ರೈ ಪನಡ್ಕ, ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ ಚಂದ್ರಹಾಸ ರವರಿಗೆ ಸನ್ಮಾನಿಸಲಾಯಿತು. ಮತ್ತು ಯುವಕ ಮಂಡಲದ ವತಿಯಿಂದ ನಡೆದ ವಿವಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಮಾಳವಿ ಯತೀಶ್ ಪ್ರಾರ್ಥಿಸಿದರು. ಜಯಂತ ಪಿ ಸ್ವಾಗತಿಸಿ, ಯುವಕ ಮಂಡಲದ ಕಾರ್ಯದರ್ಶಿ ಯತೀಶ್ ಪಿ ರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಹರೀಶ್ ವಿಟ್ಲ ವಂದಿಸುವುದರೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ಯುವಕ ಮಂಡಲದ ಪಧಾಧಿಕಾರಿಗಳು ಈ ಸಂದರ್ಭದಲ್ಲಿ ಸಹಕರಿಸಿದರು. ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಲೆವೆಲ್ ಮಾದರಿಯ 530 ಕೆ.ಜಿ ವಿಭಾಗದ 7ಜನರ ಮುಕ್ತ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ ನಡೆಯಿತು.
Bantawala
ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಶಕಗಳ ಬೇಡಿಕೆಗೆ ಸ್ಪಂದನೆ
ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ.

ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದ ಸ್ಥಳೀಯರು, ಕೂಡಲೇ ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.
ತಾಂತ್ರಿಕ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು:”ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮನವರಿಕೆ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗಡಿ ಭಾಗದ ಅಭಿವೃದ್ಧಿ ಹಾಗೂ ಜನರ ಸಂಕಷ್ಟ ನಿವಾರಣೆಗೆ ಈ ಸೇತುವೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಶ್ರೀಧರ್ ಬಾಳೆಕಲ್ಲು , ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು

accident
ಮುಳಿಯದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ: ಪರಸ್ಪರ ದೂರು ದಾಖಲು
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಮಾರ್ಚ್ 24ರಂದು ಬೆಳಿಗ್ಗೆ ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತವು ಪರಸ್ಪರ ಹಲ್ಲೆ ಮತ್ತು ದೂರು-ಪ್ರತಿದೂರುಗಳಿಗೆ ಕಾರಣವಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ 1: ಬಸ್ ಕಂಡಕ್ಟರ್ ಪ್ರಶಾಂತ್ ನೀಡಿದ ದೂರು (ಕ್ರೈಂ ನಂ: 0072/2026)
ಬಸ್ ನಿರ್ವಾಹಕ ಪ್ರಶಾಂತ್ ಅವರು ನೀಡಿದ ದೂರಿನಲ್ಲಿ (ಕ್ರೈಂ ನಂ: 0072/2026), ಟಿಪ್ಪರ್ ಚಾಲಕ ಬಿಲಾಲ್ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ. ಅಪಘಾತದ ಫೋಟೋ ತೆಗೆಯಲು ಹೋದಾಗ ಚಾಲಕನು ಅವಾಚ್ಯವಾಗಿ ಬೈದು, ಪ್ರಶಾಂತ್ ಅವರ ಎದೆ ಮತ್ತು ಕುತ್ತಿಗೆಗೆ ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಶರ್ಟ್ ಜೇಬಿನಲ್ಲಿದ್ದ 3,000 ರೂ. ಸಾರಿಗೆ ಆದಾಯದ ಹಣವನ್ನು ದೋಚಿದ್ದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ದೂರಿರುತ್ತಾರೆ. ಈ ಸಂಬಂಧ ಆರೋಪಿ ಬಿಲಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 (ಅಜಾಗರೂಕ ಚಾಲನೆ), 352 (ಅಪಮಾನ), 115(2) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 132 (ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ 2: ಲಾರಿ ಚಾಲಕ ಸೈಯ್ಯದ್ ಬಿಲಾಲ್ ನೀಡಿದ ದೂರು (ಕ್ರೈಂ ನಂ: 0073/2026)
ಮತ್ತೊಂದೆಡೆ, ಟಿಪ್ಪರ್ ಚಾಲಕ ಸೈಯ್ಯದ್ ಬಿಲಾಲ್ ಅವರು ನೀಡಿದ ಪ್ರತಿದೂರಿನಲ್ಲಿ (ಕ್ರೈಂ ನಂ: 0073/2026), ಬಸ್ ಚಾಲಕ ಗಣೇಶ್ ಅವರ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಅಪಘಾತದ ನಂತರ ಬಸ್ ನಿರ್ವಾಹಕ ಪ್ರಶಾಂತ್ ಅವರು ಮರದ ಕೋಲಿನಿಂದ ತಮ್ಮ ಬೆನ್ನಿಗೆ ಹೊಡೆದಿದ್ದಾರೆ ಮತ್ತು ಬಸ್ ಚಾಲಕ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನಿರ್ವಾಹಕರು ಶರ್ಟ್ ಹಿಡಿದು ಎಳೆದಾಡಿ “ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ದೂರಿನನ್ವಯ ಬಸ್ ಚಾಲಕ ಮತ್ತು ನಿರ್ವಾಹಕರ ವಿರುದ್ಧ BNS ಸೆಕ್ಷನ್ 281, 352, 118(1) (ಅಪಾಯಕಾರಿ ಆಯುಧದಿಂದ ಗಾಯಗೊಳಿಸುವುದು), 115(2), 351(2) (ಕ್ರಿಮಿನಲ್ ಬೆದರಿಕೆ) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಪ್ರಸ್ತುತ ಎರಡೂ ಪ್ರಕರಣಗಳ ಕುರಿತು ವಿಟ್ಲ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Bantawala
ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ
ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞoಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಹಲವು ವರ್ಷಗಳ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ರಸ್ತೆ ಕಾಂಕ್ರೀಟೀಕರಣ ಮತ್ತು ಅಭಿವೃದ್ಧಿಗಾಗಿ 60 ಲಕ್ಷ ರೂಪಾಯಿ ಅನುದಾನ ಮಂಜೂರುಗೊಳಿಸಿದ್ದಾರೆ.
ಸಮಸ್ಯೆಯ ಹಿನ್ನೆಲೆ:
ಅಂತರರಾಜ್ಯ ಸಂಪರ್ಕಿಸುವ ಈ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು. ರಸ್ತೆ ಕಿರಿದಾಗಿದ್ದರಿಂದ ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನುಗಳಿದ್ದ ಕಾರಣ ರಸ್ತೆ ಅಗಲೀಕರಣ ಸಾಧ್ಯವಾಗಿರಲಿಲ್ಲ, ಇದರಿಂದಾಗಿ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ರಸ್ತೆ ಬದಿಯಲ್ಲಿ ಕನಿಷ್ಠ ಜಾಗವೂ ಇಲ್ಲದಂತಾಗಿತ್ತು.

ಶಾಸಕರ ಇಚ್ಛಾಶಕ್ತಿ:
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳೊAದಿಗೆ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಖಾಸಗಿ ಜಮೀನು ಮಾಲೀಕರೊಂದಿಗೆ ಮಾತುಕತೆ ನಡೆಸಿ, ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಭರವಸೆ ನೀಡಿದ ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
“ಬೊಬ್ಬೆಕೇರಿಯಲ್ಲಿ ರಸ್ತೆ ಕಿರಿದಾಗಿದ್ದರಿಂದ ಶಾಲಾ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ಜೀವಭಯವಿತ್ತು. ಈ ಸಮಸ್ಯೆಯನ್ನು ಮನಗಂಡು ಖಾಸಗಿ ಜಮೀನು ಮಾಲೀಕರೊಂದಿಗೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅನುಕೂಲಕ್ಕಾಗಿ ಯಾರೇ ಅಡ್ಡಿಪಡಿಸಿದರೂ ಇಲ್ಲಿ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುವುದು ಖಚಿತ.”
— ಅಶೋಕ್ ರೈ, ಶಾಸಕರು, ಪುತ್ತೂರು
-
crime1 day agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
