karavali
ಪುತ್ತೂರು ಸರ್ಕಾರಿ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಸಸ್ಪೆಂಡ್.. ವಿದ್ಯಾರ್ಥಿಗಳ ಛೂ ಬಿಟ್ಟು ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ..
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/02/44433-1000x600.jpg&description=ಪುತ್ತೂರು ಸರ್ಕಾರಿ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಸಸ್ಪೆಂಡ್.. ವಿದ್ಯಾರ್ಥಿಗಳ ಛೂ ಬಿಟ್ಟು ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ..', 'pinterestShare', 'width=750,height=350'); return false;" title="Pin This Post">
ಫೆಬ್ರವರಿ 16ರಂದು ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ, ಜವಾಬ್ದಾರಿಯಲ್ಲಿ ನುಣುಚಿಕೊಂಡ ಆರೋಪದಲ್ಲಿ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿಡ್ಯಾ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ / ರಸ್ತೆ ತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳದೆ ಸಾರ್ವಜನಿಕ ಪ್ರತಿಭಟನೆ ತಡೆಯಲು ಅಗತ್ಯ ಕ್ರಮ ವಹಿಸದೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದ ಆರೋಪದಲ್ಲಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇಲ್ಲಿನ ಪ್ರಭಾರ ಪ್ರಾಂಶುಪಾಲರು ಹಾಗೂ ಸಹಪ್ರಾಧ್ಯಾಪಕರಾದ ಶ್ರೀಮತಿ ವೇದಶ್ರೀ ನಿಡ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅವರನ್ನು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957ರ ನಿಯಮ 10(1)(ಡಿ)ರನ್ವಯ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಮತ್ತು ಸಮನ್ವಯ ಇದರ ಸರಕಾರದ ಅಧೀನ ಕಾರ್ಯದರ್ಶಿಯಾದ ಜಬಿನ್ ತಾಜ್ ಜಿ..ಎಂ. ಅವರು ಆದೇಶಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿ ದಿನಾಂಕ 16.02.2026ರಂದು ವಿದ್ಯಾರ್ಥಿನಿಯರು ಪ್ರತಿಭಟನೆ /ಧರಣಿ ನಡೆಸಿರುವ ಕುರಿತು ದಿನಾಂಕ 17.02.2026ರಂದು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ, ಮಾಹಿತಿಯನ್ನು ಸಂಗ್ರಹಿಸಿ ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಸಲ್ಲಿಸಿರುವ ವರದಿಯ ಸಂಕ್ಷಿಪ್ತ ವರದಿಯಂತೆ ಪ್ರಸ್ತುತ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ವೇದಶ್ರೀ ನಿಡ್ಯ ಸಹಪ್ರಾಧ್ಯಾಪಕರು ಅರ್ಥಶಾಸ್ತ್ರ ವಿಭಾಗ ಇವರು ತಮ್ಮ ಹೇಳಿಕೆಯಲ್ಲಿ ನೂತನ ಕಟ್ಟಡಕ್ಕಾಗಿ ಮಾನ್ಯ ಶಾಸಕರಿಗೆ ಮನವಿ ನೀಡಿದ್ದು ದಿನಾಂಕ 16.02.2026ರಂದು ತರಗತಿಗೆ ಬಂದ ಸಂದರ್ಭದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದ್ದ ಕಾರಣ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವವುದಾಗಿ ತಿಳಿಸಿದ್ದರು.
ಪುತ್ತೂರು ನಗರ ಪೊಲೀಸ್ ಠಾಣೆಯವರು ಪೋಲಿಸ್ ನಿರೀಕ್ಷಕರು ಪುತ್ತೂರು ನಗರ ಪೊಲೀಸ್ ಠಾಣೆ ಅವರು ತಮ್ಮ ಪತ್ರದಲ್ಲಿ ದಿನಾಂಕ 16.02.2026ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆಯನ್ನು ಯಾವುದೇ ಪೂರ್ವಾನುಮತಿ ಪಡೆಯದೆ ನಡೆಸಿರುವುದಲ್ಲದೆ ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವುದಾಗಿ ತಿಳಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ವೇದಶ್ರೀ ನಿಡ್ಯ ಮತ್ತು ಪ್ರಾಧ್ಯಾಪಕರಾದ ಐವನ್ ಫ್ರಾನ್ಸಿಸ್ ಲೋಬೋರವರು ಉಪಸ್ಥಿತರಿದ್ದು ಮತ್ತು ಈ ಪ್ರತಿಭಟನೆಗೆ ಪ್ರೇರೇಪಿಸಿರುವ ಬಗ್ಗೆ ಇಲಾಖೆಗೆ ಗುಪ್ತ ಮಾಹಿತಿ ಬಂದಿರುವುದಾಗಿ ತಿಳಿಸಿರುತ್ತಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಆಶೋಕ್ ಕುಮಾರ್ ರೈಯವರು ತಮ್ಮ ಪತ್ರದಲ್ಲಿ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಿಡ್ಯ ಇವರು ವಿದ್ಯಾರ್ಥಿಗಳು ಡಯಾಲಿಸಿಸ್ ಕೇಂದ್ರದ ನಿರ್ಮಾಣ ಕಾಮಗಾರಿಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರೋಗ್ಯದ ಸಮಸ್ಯೆಗಳಾಗಲಿ, ತೊಂದರೆಗಳಾಗಲಿ, ಯಾವುದೇ ಮಾಹಿತಿಯನ್ನು ನನಗೆ ಅಥವಾ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದಿರುವುದಿಲ್ಲ, ಮತ್ತು ಈ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ ವಿದ್ಯಾರ್ಥಿಗಳಿಂದ ಸರ್ಕಾರದ ವಿರುದ್ಧ/ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿರುತ್ತಾರೆ. ಸದರಿ ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿರುವ ಬಗ್ಗೆ ಪತ್ರಿಕೆ ಮತ್ತು ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದ್ದು, ಈ ರೀತಿ ವಿದ್ಯಾರ್ಥಿನಿಯರು ಪ್ರತಿಭಟಿಸುವ ಸಂದರ್ಭದಲ್ಲಿ ಯಾವುದೇ ಅನಾಹುತಗಳು ನಡೆದರೆ ಅಥವಾ ಕಾನೂನಾತ್ಮಕ ಕ್ರಮಗಳು ಜಾರಿಯಾದಲ್ಲಿ ವಿದ್ಯಾರ್ಥಿನಿಯರ ಜವಾಬ್ದಾರಿ ಸಂಪೂರ್ಣವಾಗಿ ಪ್ರಾಂಶುಪಾಲರು ಮತ್ತು ಕಾಲೇಜಿನ ಸಿಬ್ಬಂದಿಗಳದಾಗಿರುತ್ತದೆ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಅಥವಾ ಉಪನ್ಯಾಸಕರಿಗೆ ಮನವಿಯನ್ನು ಸಲ್ಲಿಸಲು ಅವಕಾಶವಿದ್ದು, ಆದರೆ ಸದರಿ ಸಮಸ್ಯೆಗಳ ಬಗ್ಗೆ ತರಗತಿ ಪ್ರಾರಂಭಗೊಂಡ ನಂತರ ಇಂಥ ಯಾವುದೇ ಮಾಹಿತಿ ನೀಡಿರುವ ಬಗ್ಗೆ ದಾಖಲೆ ಇರುವುದಿಲ್ಲ ಮುಂದುವರಿದು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಂಸ್ಥೆಗಳ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಆಶೋಕ್ ಕುಮಾರ್ ರೈ ಇವರೊಂದಿಗೆ ಸಭೆ ನಡೆಸಿರುವ ಬಗ್ಗೆ ಸಭಾ ನಡವಳಿಯ ಯಾವುದೇ ದಾಖಲೆ ಅಥವಾ ಲಿಖಿತವಾಗಿ ಈ ಬಗ್ಗೆ ಅಧ್ಯಕ್ಷರಿಗೆ ಸಲ್ಲಿಸಿರುವ ಯಾವುದೇ ಪತ್ರ ವ್ಯವಹಾರ ದಾಖಲೆಗಳನ್ನು ಪ್ರಾಂಶುಪಾಲರು ನೀಡಿರುವುದಿಲ್ಲ, ಮತ್ತು ಈ ಸಭೆ ನಡೆಸಿರುವ ಬಗ್ಗೆ ಮಾಹಿತಿ ಇರುವುದಿಲ್ಲ, ಕಾಲೇಜಿನ ಅಭಿವೃದ್ಧಿಗೆ ಸಂಬಂಧಪಟ್ಟಂತ ವಿಷಯಗಳಲ್ಲಿ ಪ್ರಾಂಶುಪಾಲರು ಮಾನ್ಯ ಶಾಸಕರ / ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರ ವಿಶ್ವಾಸವನ್ನು ಗಳಿಸುವಲ್ಲಿ ವಿಫಲರಾಗಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕಾಲೇಜಿನ ಮತ್ತು ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತ ದೃಷ್ಟಿಯಿಂದ ಪ್ರಸ್ತುತ ಪ್ರಧಾನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಡ್ಯಾರವರ ಪ್ರಭಾರವನ್ನು ರದ್ದುಗೊಳಿಸಿ ಕಾಲೇಜಿನ ಹಿರಿಯ ಉಪನ್ಯಾಸಗಳಿಗೆ ಪ್ರಾಂಶುಪಾಲರ ಪ್ರಭಾರವನ್ನು ನೀಡಬಹುದೆಂದು ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ವರದಿ ನೀಡಿದ್ದರು.

ದಿನಾಂಕ 16.02.2026ರಂದು ಸರಕಾರಿ ಪ್ರಥಮ ದರ್ಜೆಕ ಮಹಿಳಾ ಕಾಲೇಜು ಪುತ್ತೂರಿನಲ್ಲಿ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ/ ರಸ್ತೆ ತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾದೇಶಿಕ ಜಂಟಿ ನಿರ್ದೇಶಕ ವರದಿ, ಪೊಲೀಸ್ ವರದಿ ಹಾಗೂ ಮಾನ್ಯ ಶಾಸಕರ ಪತ್ರಗಳನ್ನು ಪರಿಶೀಲಿಸಿದ್ದು, ವಿದ್ಯಾರ್ಥಿನಿಯರು ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳದೆ ಸಾರ್ವಜನಿಕ ಪ್ರತಿಭಟನೆ ತಡೆಯಲು ಅಗತ್ಯ ಕ್ರಮ ವಹಿಸದೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೋರಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸದರಿ ಘಟನೆಯಿಂದಾಗಿ ಕಾಲೇಜಿನ ಪ್ರಾಂಶುಪಾಲರು ಶೈಕ್ಷಣಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಜವಾಬ್ದಾರಿಯನ್ನು ಸಮರ್ಥಕವಾಗಿ ನೆರವೇರಿಸಲು ವಿಫಲರಾಗಿರುವುದು ಸ್ಪಷ್ಟವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ವೇದಶ್ರೀ ನಿಡ್ಯ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮಾವಳಿಗಳಲ್ಲಿ ಶಿಸ್ತು ಕ್ರಮ ಜರಗಿಸಲು ಉದ್ದೇಶಿಸಿ ಪ್ರಕರಣದ ಗಂಭೀರತೆಯನ್ನು ಹಾಗೂ ಇಲಾಖೆ ತನಿಖೆಯ ನಿಷ್ಪಕ್ಷಪಾತ ನಿರ್ವಹಣೆಯನ್ನು ಮನಗಂಡು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ವೇದಶ್ರೀ ನಡ್ಯ ಇವರನ್ನು ವಿಚಾರಣೆ ಕಾಯ್ದಿರಿಸಿ ಮೇಲ್ಕಂಡ ನಿಯಮಗಳ ನಿಯಮ 10ರಡಿಯಲ್ಲಿ ಅಮಾನತುಗೊಳಿಸಲು ಸರಕಾರದ ಅನುಮೋದನೆಗಾಗಿ ಆಯುಕ್ತರು (ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ) ಇವರು ಪ್ರಸ್ತಾವನೆ ಸಲ್ಲಿಸಿದ್ದರು.
ಮೇಲ್ಕಂಡ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇಲ್ಲಿನ ಪ್ರಭಾರ ಪ್ರಾಂಶುಪಾಲರು ಹಾಗೂ ಸಹಪ್ರಾಧ್ಯಾಪಕರಾದ ಶ್ರೀಮತಿ ವೇದಶ್ರೀ ನಿಡ್ಯ ಇವರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರಿನಲ್ಲಿ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ / ರಸ್ತೆತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದ ಪ್ರಕರಣದಲ್ಲಿ ಸದರಿಯವರ ವಿರುದ್ಧ ಇಲಾಖೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿ ಆದೇಶಿಸಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿದ್ದ ವರದಿಯ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಫೆ.17ರಂದು ಕಾಲೇಜಿಗೆ ಭೇಟಿ ನೀಡಿದ ಪ್ರಾದೇಶಿಕ ಜಂಟಿ ನಿರ್ದೇಶಕರು ವಿದ್ಯಾರ್ಥಿನಿಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದ ಜೊತೆ ಚರ್ಚಿಸಿ ವರದಿ ನೀಡಿದ್ದರು.
Watch the video
AWARNESS
ವೈರಲ್ ಹುಚ್ಚಿಗೆ ಬಲಿಯಾಗುತ್ತಿದ್ದಾರೆಯೇ ಹೆಣ್ಣುಮಕ್ಕಳು? ಸಾಮಾಜಿಕ ಜಾಲತಾಣಗಳಲ್ಲಿ ಕರಪತ್ರ ವೈರಲ್!
ಮಂಗಳೂರು: ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ವೈರಲ್” ಆಗುವ ಮತ್ತು ಲೈಕ್ಸ್-ಫಾಲೋವರ್ಸ್ ಗಳಿಸುವ ಹುಚ್ಚು ಕೆಲವು ಯುವಕರಲ್ಲಿ ಮಿತಿಮೀರಿದೆ. ಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಂಕ್ (Prank) ಮತ್ತು ಶಾರ್ಟ್ ವಿಡಿಯೋಗಳ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವ ಕರಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಏನಾಗುತ್ತಿದೆ ಮಂಗಳೂರಿನಲ್ಲಿ?
ವೈರಲ್ ಆಗಿರುವ ಕರಪತ್ರದ ಮಾಹಿತಿಯ ಪ್ರಕಾರ, ಮಂಗಳೂರಿನ ರೈಲ್ವೆ ಸ್ಟೇಷನ್, ಶಾಪಿಂಗ್ ಮಾಲ್ಗಳು, ಕಾಲೇಜು ರಸ್ತೆ ಹಾಗೂ ಮಾರುಕಟ್ಟೆ ಪ್ರದೇಶಗಳನ್ನು ಈ ತಂಡಗಳು ತಮ್ಮ ಪ್ರಮುಖ ಅಡ್ಡಾಗಳನ್ನಾಗಿ ಮಾಡಿಕೊಂಡಿವೆ. ಕೈಯಲ್ಲಿ ಹಣದ ಕಂತೆ ಅಥವಾ ಗಿಫ್ಟ್ ಬ್ಯಾಗ್ ಹಿಡಿದುಕೊಂಡು ಓಡಾಡುವ ಈ ಯುವಕರು, ಒಂಟಿಯಾಗಿರುವ ಯುವತಿಯರನ್ನು ಅಡ್ಡಗಟ್ಟಿ “ಒಂದು ಕ್ವಶ್ಚನ್ ಕೇಳ್ತೀವಿ”, “ಇನ್ಸ್ಟಾಗ್ರಾಮ್ ಫಾಲೋ ಮಾಡಿದರೆ ಜುಜುಬಿ ಗಿಫ್ಟ್ ಕೊಡ್ತೀವಿ” ಎಂದು ಮಾತು ಆರಂಭಿಸುತ್ತಾರೆ. ತದನಂತರ ಅವರ ಮೊಬೈಲ್ ನಂಬರ್ ಕೇಳುವುದು ಮತ್ತು ಬಲವಂತವಾಗಿ ಸ್ನೇಹ ಬೆಳೆಸಲು ಯತ್ನಿಸುವ ದೂರುಗಳು ಕೇಳಿಬರುತ್ತಿವೆ.

ವೈರಲ್ ಹುಚ್ಚು ಮತ್ತು ಬ್ಲ್ಯಾಕ್ಮೇಲ್ ತಂತ್ರ!
ಕೆಲವು ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್ ಚಾನೆಲ್ಗಳು ಕೇವಲ ವ್ಯೂಸ್ ಮತ್ತು ಫಾಲೋವರ್ಸ್ಗಾಗಿ ಹೆಣ್ಣುಮಕ್ಕಳ ಅನುಮತಿ ಇಲ್ಲದೆ ಅವರ ವಿಡಿಯೋಗಳನ್ನು ಚಿತ್ರೀಕರಿಸುತ್ತಿವೆ. ಅವರ ಮುಜುಗರದ ಕ್ಷಣಗಳನ್ನು ಲಕ್ಷಾಂತರ ವೀಕ್ಷಕರಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಕಾಸರಗೋಡು ಮತ್ತು ಉಪ್ಪಳ ಭಾಗದ ಕೆಲವು ಯುವಕರು ಮಂಗಳೂರಿಗೆ ಬಂದು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದು ಕೇವಲ ತಮಾಷೆಯಲ್ಲ, ಇದೊಂದು ದೊಡ್ಡ ಅಪಾಯಕಾರಿ ಟ್ರ್ಯಾಪ್ ಆಗಿದೆ. ಇನ್ಸ್ಟಾಗ್ರಾಮ್ ಸ್ನೇಹದ ಹೆಸರಿನಲ್ಲಿ ಅಪ್ರಾಪ್ತರನ್ನು ಅಪಹರಿಸಿ ಕಿರುಕುಳ ನೀಡಿದ ಘಟನೆಗಳು ಈ ಹಿಂದೆ ನಡೆದಿವೆ. ಒಮ್ಮೆ ಮೊಬೈಲ್ ನಂಬರ್ ಅಥವಾ ಫೋಟೋಗಳು ಇವರ ಕೈ ಸೇರಿದರೆ, ಮುಂದೆ ಅದನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುವ ಸಾಧ್ಯತೆಗಳು ಹೆಚ್ಚಿರುತ್ತವೆ.
ನಮ್ಮ ಜವಾಬ್ದಾರಿ ಏನು? (ಜಾಗೃತಿ ಮಾರ್ಗಸೂಚಿ)
ಯುವತಿಯರೇ ಎಚ್ಚರ:
ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತರು ಗಿಫ್ಟ್ ಆಮಿಷ ಒಡ್ಡಿದರೆ ತಕ್ಷಣವೇ “ಬೇಡ” ಎಂದು ನಿರಾಕರಿಸಿ.
ಯಾವುದೇ ಕಾರಣಕ್ಕೂ ಅಪರಿಚಿತರಿಗೆ ಮೊಬೈಲ್ ಸಂಖ್ಯೆಯನ್ನು ನೀಡಬೇಡಿ.
ಒಂಟಿಯಾಗಿದ್ದಾಗ ಇಂತಹ ಪ್ರಾಂಕ್ ಮಾಡುವವರಿಂದ ದೂರವಿರಿ. ನಿಮ್ಮ ಅನುಮತಿ ಇಲ್ಲದೆ ವಿಡಿಯೋ ಮಾಡಿದರೆ ಧೈರ್ಯದಿಂದ ಜೋರಾಗಿ ಪ್ರಶ್ನಿಸಿ.
ಪೋಷಕರ ಗಮನಕ್ಕೆ:
ನಿಮ್ಮ ಹೆಣ್ಣುಮಕ್ಕಳಿಗೆ ಇಂತಹ ಸಾಮಾಜಿಕ ಜಾಲತಾಣಗಳ ಅಪಾಯಗಳ ಬಗ್ಗೆ ತಿಳಿಹೇಳಿ.
ಅಪರಿಚಿತರ ಫ್ರೆಂಡ್ ರಿಕ್ವೆಸ್ಟ್, ಆನ್ಲೈನ್ ಸ್ನೇಹ ಹಾಗೂ ಗಿಫ್ಟ್ಗಳ ಆಮಿಷದಿಂದ ದೂರವಿರಲು ಸೂಚಿಸಿ.
ಮಕ್ಕಳ ಫೋನ್ ಹಾಗೂ ಅವರ ದಿನನಿತ್ಯದ ಚಟುವಟಿಕೆಗಳ ಮೇಲೆ ನಿಗಾ ಇರಿಸಿ.
ಸಾರ್ವಜನಿಕರೇ ಧ್ವನಿ ಎತ್ತಿ:
ಮಾಲ್, ಕಾಲೇಜು ಅಥವಾ ಬಸ್ ಸ್ಟ್ಯಾಂಡ್ಗಳಲ್ಲಿ ಇಂತಹ ಪುಂಡಾಟಿಕೆ ಅಥವಾ ಹೆಣ್ಣುಮಕ್ಕಳಿಗೆ ಮುಜುಗರ ಉಂಟುಮಾಡುವ ದೃಶ್ಯಗಳು ಕಂಡುಬಂದರೆ ಸುಮ್ಮನೆ ಇರಬೇಡಿ.
ತಕ್ಷಣವೇ ಅಲ್ಲಿನ ಸೆಕ್ಯೂರಿಟಿ ಅಥವಾ ಪೊಲೀಸ್ ಇಲಾಖೆಗೆ ದೂರು ನೀಡಿ.
ಮುಖ್ಯ ಮಾಹಿತಿ: ಮಂಗಳೂರಿನ ಸಂಸ್ಕೃತಿ ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ನೆರವಿಗಾಗಿ ಮಂಗಳೂರು ಸಿಟಿ ಪೊಲೀಸ್ ಕಂಟ್ರೋಲ್ ರೂಮ್: 0824-2220500 ಅಥವಾ ತುರ್ತು ಸಹಾಯವಾಣಿ 112 ಅನ್ನು ಸಂಪರ್ಕಿಸಬಹುದಾಗಿದೆ.
ಯಾವುದೇ ಅನಾಹುತ ನಡೆದ ಮೇಲೆ ಅನುಭವಿಸುವ ಬದಲು, “ಈಗಲೇ ಎಚ್ಚೆತ್ತುಕೊಳ್ಳೋಣ, ಸುರಕ್ಷಿತರಾಗಿರೋಣ.”
ವಿನೋದದ ಹೆಸರಿನಲ್ಲಿ ಇತರರ ಸ್ವತಂತ್ರ ಮತ್ತು ಗೌರವಕ್ಕೆ ಧಕ್ಕೆ ತರುವ ಹಕ್ಕು ಯಾರಿಗೂ ಇಲ್ಲ. ಇಂತಹ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು.



Agriculture
ಕರಾವಳಿಯಲ್ಲಿ ರೇಷ್ಮೆ ಕೃಷಿ ಪುನರುಜ್ಜೀವನ: ವಿಟ್ಲದ ಎಫ್ಪಿಸಿಯಿಂದ ಮಹತ್ವದ ಹೆಜ್ಜೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲವನ್ನು ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿರುವ ಕರಾವಳಿ ಜಿಲ್ಲೆಗಳ ರೈತ ಉತ್ಪಾದಕ ಸಂಸ್ಥೆ (ಭಾರತ್ ಅಗ್ರಿ ಡೆವಲಪ್ಮೆಂಟ್ ಎಫ್ಪಿಸಿಎಲ್) ಕರಾವಳಿ ಭಾಗದಲ್ಲಿ ನಶಿಸಿಹೋಗುತ್ತಿದ್ದ ರೇಷ್ಮೆ ಕೃಷಿಯನ್ನು ಪುನರುಜ್ಜೀವನಗೊಳಿಸಲು ಮಹತ್ವಾಕಾಂಕ್ಷಿ ಯೋಜನೆಯನ್ನು ಹಮ್ಮಿಕೊಂಡಿದೆ.
ಇತ್ತೀಚೆಗೆ ರಾಜ್ಯ ರೇಷ್ಮೆ, ಪಶುಸಂಗೋಪನೆ ಹಾಗೂ ರೇಷ್ಮೆ ಕೃಷಿ ಸಚಿವರಾದ ಕೆ. ವೆಂಕಟೇಶ್ ಅವರು ಕರಾವಳಿ ಭಾಗದಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ನೀಡುವ ಈ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕರಾವಳಿಯ ರೈತರು ಅಡಿಕೆಗೆ ಪರ್ಯಾಯವಾಗಿ ರೇಷ್ಮೆ ಕೃಷಿಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದ್ದಾರೆ.

ಮೊದಲ ಹಂತದಲ್ಲಿ 50 ಎಕರೆ ರೇಷ್ಮೆ ತೋಟ ಸ್ಥಾಪನೆ
ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಕರಾವಳಿಯಲ್ಲಿ ರೇಷ್ಮೆ ಕೃಷಿ ಸಂಪೂರ್ಣ ಕುಸಿದಿತ್ತು. ಆದರೆ, ಪ್ರಸ್ತುತ ಭಾರತ್ ಅಗ್ರಿ ಡೆವಲಪ್ಮೆಂಟ್ ಸಂಸ್ಥೆಯು ಮೊದಲ ಹಂತದಲ್ಲಿ ಸುಮಾರು 50 ಎಕರೆ ಪ್ರದೇಶದಲ್ಲಿ ರೇಷ್ಮೆ ಹುಳು ಸಾಕಾಣಿಕೆಯನ್ನು ಆರಂಭಿಸುವ ಗುರಿ ಹೊಂದಿದ್ದು, ಈಗಾಗಲೇ ವಿಟ್ಲದ ಸುತ್ತಮುತ್ತ ಮೂರು ಎಕರೆ ಪ್ರದೇಶದಲ್ಲಿ ಮುಲ್ಬೆರಿ (ಹಿಪ್ಪುನೇರಳೆ) ತೋಟಗಳನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ. ಅಡಿಕೆ ಬೆಳೆಗೆ ಕನಿಷ್ಠ ಮೂರು ವರ್ಷ ಕಾಯಬೇಕಾಗಿರುವ ಹಿನ್ನೆಲೆಯಲ್ಲಿ, ಪ್ರತಿ ತಿಂಗಳು ಆದಾಯ ತಂದುಕೊಡುವ ರೇಷ್ಮೆ ಕೃಷಿ ಕರಾವಳಿ ರೈತರಿಗೆ ಅತ್ಯುತ್ತಮ ಪರ್ಯಾಯ ಬೆಳೆಯಾಗಲಿದೆ.
ಮುಲ್ಬೆರಿ ಸೊಪ್ಪಿನ ಕೊರತೆ ನೀಗಿಸಲು ನೂತನ ಯೋಜನೆ
ರೇಷ್ಮೆ ಕೃಷಿಗೆ ಪ್ರಮುಖವಾಗಿ ಬೇಕಾಗುವ ಮುಲ್ಬೆರಿ ಸೊಪ್ಪಿನ ಕೊರತೆಯನ್ನು ನೀಗಿಸಲು ವಿಟ್ಲ ಸುತ್ತಮುತ್ತ ಮೂರು ನರ್ಸರಿಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ತಾಲೂಕಿನಲ್ಲೂ ಸುಮಾರು 20 ಎಕರೆ ಜಾಗವನ್ನು ಗುತ್ತಿಗೆಗೆ ಪಡೆದು ಮುಲ್ಬೆರಿ ಬೆಳೆಸಲು ಸಂಸ್ಥೆ ಮುಂದಾಗಿದೆ. ಸ್ಥಳಾವಕಾಶದ ಕೊರತೆ ಇರುವ ಸಣ್ಣ ರೈತರಿಗೆ ಎಲೆಗಳನ್ನು ಪೂರೈಸುವ ವಿನೂತನ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಕಡಿಮೆ ಜಾಗ ಹೊಂದಿರುವ ರೈತರು ತಮ್ಮ ಖಾಲಿ ಜಾಗದಲ್ಲಿ ಸಣ್ಣ ಶೆಡ್ ನಿರ್ಮಿಸಿ ರೇಷ್ಮೆ ಹುಳು ಸಾಕಾಣಿಕೆ ಮಾಡಬಹುದಾಗಿದೆ. ಈಗಾಗಲೇ ಮುಲ್ಬೆರಿ ಕೃಷಿಗಾಗಿ ವಿಟ್ಲದಲ್ಲಿ 10 ಎಕರೆ ಹಾಗೂ ಸುಳ್ಯದಲ್ಲಿ 2 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ.

ವಿಜ್ಞಾನಿಗಳ ನೇಮಕ ಮತ್ತು ತರಬೇತಿ
ಗ್ರಾಮ ಪಂಚಾಯತ್ ಮಟ್ಟದಲ್ಲಿ ಮುಲ್ಬೆರಿ ಬೆಳೆಯ ಉಸ್ತುವಾರಿ ಮತ್ತು ನಿರ್ವಹಣೆಗಾಗಿ ಇಬ್ಬರು ತಜ್ಞ ವಿಜ್ಞಾನಿಗಳನ್ನು ಹಾಗೂ ರೇಷ್ಮೆ ಸಖಿಯರನ್ನು ನೇಮಿಸುವ ಯೋಜನೆ ಜಾರಿಯಲ್ಲಿದೆ. ರೇಷ್ಮೆ ಹುಳುಗಳ ರೋಗ ನಿಯಂತ್ರಣ ಹಾಗೂ ಉತ್ತಮ ಇಳುವರಿಗಾಗಿ ರೈತರಿಗೆ ತರಬೇತಿ ನೀಡಲು ರೇಷ್ಮೆ ತರಬೇತಿ ಕೇಂದ್ರವನ್ನು ತೆರೆಯುವ ಪ್ರಸ್ತಾವನೆಯೂ ಸರಕಾರದ ಮುಂದಿದೆ. ಬೆಳ್ತಂಗಡಿಯ ಗೇರುಕಟ್ಟೆಯಲ್ಲಿರುವ ಇಲಾಖೆಯ ರೇಷ್ಮೆ ಕೇಂದ್ರವನ್ನು ವಾರ್ಷಿಕ 30,000 ಕೆ.ಜಿ. ರೇಷ್ಮೆ ಗೂಡು ಉತ್ಪಾದಿಸುವ ಅತ್ಯಾಧುನಿಕ ಘಟಕವನ್ನಾಗಿ ಪರಿವರ್ತಿಸಿ ರೈತರಿಗೆ ಪೂರೈಸಲಾಗುತ್ತಿದೆ.
ಮಾರುಕಟ್ಟೆ ಕೊರತೆಗೆ ಶಾಶ್ವತ ಪರಿಹಾರ
ಈ ಹಿಂದೆ ಕರಾವಳಿ ಭಾಗದಲ್ಲಿ ಸಮೀಪದ ಮಾರುಕಟ್ಟೆ ಇಲ್ಲದ ಕಾರಣ ರೈತರು ರೇಷ್ಮೆ ಗೂಡುಗಳನ್ನು ಮಾರಾಟ ಮಾಡಲು ಹಾಸನ ಅಥವಾ ರಾಮನಗರದವರೆಗೆ ಹೋಗಬೇಕಾದ ಅನಿವಾರ್ಯತೆ ಇತ್ತು. ಕಾರ್ಮಿಕರ ಕೊರತೆ ಮತ್ತು ಭಾರೀ ಮಳೆಯಿಂದಾಗಿ ರೈತರು ನಷ್ಟ ಅನುಭವಿಸಿದ್ದರು. ಈ ಸಮಸ್ಯೆಗೆ ಪರಿಹಾರವಾಗಿ, 2020 ರಿಂದ ನಿಷ್ಕ್ರಿಯವಾಗಿದ್ದ ದಕ್ಷಿಣ ಕನ್ನಡ-ಉಡುಪಿ ರೇಷ್ಮೆ ರೈತರ ಸಂಘವನ್ನು ಪುನರುಜ್ಜೀವನಗೊಳಿಸಲು ತೀರ್ಮಾನಿಸಲಾಗಿದೆ. ಸ್ಥಳೀಯವಾಗಿಯೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ ಕರಾವಳಿಯ ರೇಷ್ಮೆ ಬೆಳೆಗಾರರಿಗೆ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ.

ಭಾರತ್ ಅಗ್ರಿ ಡೆವಲಪ್ಮೆಂಟ್ ಎಫ್ಪಿಸಿಎಲ್ (Bharath Agri Development Farmers Producer Company Limited – FPCL) ಎನ್ನುವುದು ರೈತರ ಕಲ್ಯಾಣ ಮತ್ತು ಕೃಷಿ ಅಭಿವೃದ್ಧಿಗಾಗಿ ಸ್ಥಾಪಿಸಲಾದ ಒಂದು ರೈತ ಉತ್ಪಾದಕ ಕಂಪನಿ (Farmers Producer Company) ಆಗಿದೆ.
ಇದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ (MCA) ಅಡಿಯಲ್ಲಿ ಜೂನ್ 13, 2024 ರಂದು ಅಧಿಕೃತವಾಗಿ ನೋಂದಣಿಯಾಗಿದೆ.
ಈ ಸಂಸ್ಥೆಯ ಪ್ರಮುಖ ವಿವರಗಳು ಈ ಕೆಳಗಿನಂತಿವೆ:
1. ಮುಖ್ಯ ಕಚೇರಿ ಮತ್ತು ಕಾರ್ಯಾಚರಣೆ
ನೋಂದಾಯಿತ ಕಚೇರಿ: ಲಕ್ಷ್ಮಿ ಕೃಷ್ಣ ಟವರ್, ಬಲ್ಮಠ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ (ಪಿನ್: 575002).
ಸ್ಥಳೀಯ ಶಾಖೆ/ಕಚೇರಿ: ಇದರ ಜಿಎಸ್ಟಿ (GST) ನೋಂದಣಿಯ ಪ್ರಕಾರ, ವಿಟ್ಲ-ಪುತ್ತೂರು ರಸ್ತೆಯ ವಿಟ್ಲದ ಶ್ರೀ ಮಂಜುನಾಥ ಸ್ವಾಮಿ ಸಂಕೀರ್ಣದಲ್ಲೂ ಇದು ತನ್ನ ವ್ಯವಹಾರದ ಸ್ಥಳವನ್ನು ಹೊಂದಿದೆ.
2. ಪ್ರಮುಖ ಉದ್ದೇಶಗಳು (FPO/FPC ಗಳ ಕೆಲಸ)
ಒಂದು ರೈತ ಉತ್ಪಾದಕ ಕಂಪನಿಯಾಗಿ (FPC), ಇದು ಪ್ರಮುಖವಾಗಿ ಈ ಕೆಳಗಿನ ಉದ್ದೇಶಗಳನ್ನು ಹೊಂದಿರುತ್ತದೆ:
ರೈತರ ಒಕ್ಕೂಟ: ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಒಂದೆಡೆ ಸೇರಿಸಿ, ಅವರಿಗೆ ಕೃಷಿಯಲ್ಲಿ ಮಾರುಕಟ್ಟೆ ಶಕ್ತಿಯನ್ನು ಒದಗಿಸುವುದು.
ಕೃಷಿ ಪರಿಕರಗಳ ಪೂರೈಕೆ: ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳು, ರಸಗೊಬ್ಬರಗಳು, ಜೈವಿಕ ಪೋಷಕಾಂಶಗಳು ಮತ್ತು ಆಧುನಿಕ ಕೃಷಿ ಉಪಕರಣಗಳನ್ನು ರೈತರಿಗೆ ನ್ಯಾಯಯುತ ಬೆಲೆಯಲ್ಲಿ ತಲುಪಿಸುವುದು.
ಮಾರುಕಟ್ಟೆ ವ್ಯವಸ್ಥೆ: ರೈತರು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಮತ್ತು ಯೋಗ್ಯ ಬೆಲೆ ಸಿಗುವಂತೆ ನೇರ ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.
ಈ ಆಡಳಿತ ಮಂಡಳಿಯಲ್ಲಿ ಎಂ ಪ್ರಸಾದ್ ಶೆಟ್ಟಿ ನೇತೃತ್ವದ ನಿರ್ದೇಶಕರ ಮತ್ತು ಸಲಹಾ ಸಮಿತಿಗಳನ್ನು ರಾಜ್ಯಮಟ್ಟದಲ್ಲಿ ಜವಾಬ್ದಾರಿತವಾಗಿ ಮಾಡಲು ಸಂಸ್ಥೆಯಿಂದ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಣ್ಣ ಹಿಡುವಳಿದಾರರಾದ ಸ್ಥಳೀಯ ರೈತರಿಗೆ ತಾಂತ್ರಿಕತೆ, ಸೌಲಭ್ಯ ಹಾಗೂ ಮಾರುಕಟ್ಟೆ ಬೆಂಬಲ ನೀಡಿ ಅವರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.



Dakshina Kannada
ಕರಾವಳಿ ಮಕ್ಕಳಾಟ ಅಲ್ಲ, ಉಸ್ತುವಾರಿ ಆಯ್ಕೆಯಲ್ಲಿ ಎಚ್ಚರ ತಪ್ಪಿದರೆ ಇಡೀ ರಾಜ್ಯಕ್ಕೆ ಗಂಡಾಂತರ: ಮುನೀರ್ ಕಾಟಿಪಳ್ಳ ಎಚ್ಚರಿಕೆ
ಮಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣದೊಂದು ಆತಂಕದ ವಾತಾವರಣ ಶುರುವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ಆಡಳಿತಗಾರರು ಹಾಗೂ ಉಸ್ತುವಾರಿಗಳ ಆಯ್ಕೆಯು ಕರಾವಳಿಯ ಕಾನೂನು ಸುವ್ಯವಸ್ಥೆಯ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಅವರು ಗಂಭೀರ ಎಚ್ಚರಿಕೆಯನ್ನು ನೀಡಿದ್ದಾರೆ.

ಐಪಿಎಸ್ ಅಧಿಕಾರಿಗಳ ಬದಲಾವಣೆ ಆತಂಕ:
ಜಿಲ್ಲೆಯಲ್ಲಿ ಸದ್ಯ ಕಾನೂನು ಸುವ್ಯವಸ್ಥೆಯ ಮೇಲೆ ಬಿಗಿ ಹಿಡಿತ ಹೊಂದಿರುವ ದಕ್ಷಿಣ ಕನ್ನಡದ ದಕ್ಷ ಐಪಿಎಸ್ ಅಧಿಕಾರಿಗಳನ್ನು ಬದಲಾಯಿಸುವ ಅಥವಾ ಹೊಸ ಆಡಳಿತಗಾರರು ಅವರ ಕೈಗಳನ್ನು ಕಟ್ಟಿ ಹಾಕುವ ಸಾಧ್ಯತೆಗಳೇ ಈ ಆತಂಕಕ್ಕೆ ಮುಖ್ಯ ಕಾರಣವಾಗಿದೆ. ಇದರೊಂದಿಗೆ ಜಿಲ್ಲೆಯ ಕಂದಾಯ ಆಡಳಿತವನ್ನು ಜನಸ್ನೇಹಿಗೊಳಿಸುವ ದೊಡ್ಡ ಸವಾಲು ಕೂಡ ಹೊಸ ಆಡಳಿತದ ಮೇಲಿದೆ. ಜಿಲ್ಲೆಯ ಹಿತದೃಷ್ಟಿಯಿಂದ “ಒಂದೆರಡು ಹೆಸರುಗಳು ಸಚಿವರಾಗಿ ಬಾರದಿರಲಿ” ಎನ್ನುವುದೇ ಬಹುತೇಕ ಜನರ ಪ್ರಾರ್ಥನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಹರಿಪ್ರಸಾದ್, ರಮಾನಾಥ ರೈ ಅವರಂಥ ನಾಯಕತ್ವಕ್ಕೆ ಆಗ್ರಹ:
“ಕಳೆದ ವರ್ಷ ಸರಣಿ ಕೊಲೆಗಳು, ಮತೀಯ ಸಂಘರ್ಷದ ಚಟುವಟಿಕೆಗಳಿಂದ ಜಿಲ್ಲೆ ಹೈರಾಣಾಗಿ ಹೋಗಿದ್ದ ಸಂದರ್ಭದಲ್ಲಿ, ಪರಿಸ್ಥಿತಿಯನ್ನು ನಿಭಾಯಿಸಲು ಬಿ. ಕೆ. ಹರಿಪ್ರಸಾದ್ ಅಥವಾ ರಮಾನಾಥ ರೈ ಅವರಂತಹ ಹಿರಿಯ ನಾಯಕರ ಕೈಗೆ ಅಧಿಕಾರ ಸಿಗಬೇಕು ಎಂದು ಜನತೆ ಆಗ್ರಹಿಸುತ್ತಿದ್ದರು” ಎಂಬುದನ್ನು ಮುನೀರ್ ಕಾಟಿಪಳ್ಳ ಈ ಸಂದರ್ಭದಲ್ಲಿ ನೆನಪಿಸಿದ್ದಾರೆ.
ಬಾಲ ಬಿಚ್ಚಲು ಕಾಯುತ್ತಿವೆ ಅನಾಹುತಕಾರಿ ಶಕ್ತಿಗಳು:
ಹೊಸ ಮುಖ್ಯಮಂತ್ರಿಗಳು, ರಾಜೀನಾಮೆ ನೀಡಿರುವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣರು ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತಿಸಬೇಕಾಗಿದೆ. ಸರಿಯಾದವರ ಕೈಗೆ ಜಿಲ್ಲೆಯ ಆಡಳಿತ ನೀಡದಿದ್ದಲ್ಲಿ, ಕಳೆದ ಒಂದು ವರ್ಷದಿಂದ ಉಸಿರು ಬಿಗಿಹಿಡಿದು ಕಾಯುತ್ತಿರುವ ಮತೀಯ ಶಕ್ತಿಗಳು ಮತ್ತು ಅನಾಹುತಕಾರಿ ಮಾಫಿಯಾಗಳು ಜಿಲ್ಲೆಯಲ್ಲಿ ಮತ್ತೆ ಮೇಲುಗೈ ಸಾಧಿಸಲಿವೆ. ಅವರು ಒಮ್ಮೆ ಬಾಲ ಬಿಚ್ಚಿದರೆ ಮುಂದೆ ನಿಯಂತ್ರಣ ಮಾಡುವುದು ಅಸಾಧ್ಯವಾಗುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ನಾಯಕತ್ವಕ್ಕೆ ನೇರ ಎಚ್ಚರಿಕೆ:
ಮುಂದಿನ ದಿನಗಳಲ್ಲಿ ಚುನಾವಣೆ ಬರಲಿದ್ದು, ರಾಜ್ಯ ಸರ್ಕಾರದ ಅಧಃಪತನಕ್ಕೆ ಕರಾವಳಿಯ ಅಧ್ವಾನಗಳೇ ಸಾಕಾಗುತ್ತದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಮರೆಯಬಾರದು.
ಸೈದ್ಧಾಂತಿಕವಾಗಿ ಹಾಗೂ ಆಡಳಿತಾತ್ಮಕವಾಗಿ ದೃಢವಾಗಿ ಇರುವವರಿಗೆ ಮಾತ್ರ ಜವಾಬ್ದಾರಿ ನೀಡಿ.
ವಿಪರೀತ ಹಣದ ಹುಚ್ಚು ಇರುವವರ ಕೈಗೆ ಜಿಲ್ಲೆಯ ಉಸ್ತುವಾರಿ ಅಥವಾ ಸಚಿವ ಸ್ಥಾನದ ಅವಕಾಶ ನೀಡದಂತೆ ಎಚ್ಚರ ವಹಿಸಿ.
“ಕರಾವಳಿ ಎಂಬುದು ಮಕ್ಕಳಾಟ ಅಲ್ಲ. ಇಲ್ಲಿ ಎಚ್ಚರ ತಪ್ಪಿದರೆ ಅದರ ಭೀಕರ ಪರಿಣಾಮವನ್ನು ಇಡೀ ರಾಜ್ಯವೇ ಅನುಭವಿಸಬೇಕಾಗುತ್ತದೆ” ಎಂದು ಮುನೀರ್ ಕಾಟಿಪಳ್ಳ ಅತ್ಯಂತ ಕಡಕ್ ಆಗಿ ಎಚ್ಚರಿಸಿದ್ದಾರೆ



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
