Connect with us

Mangaluru

ಎಸ್ ಎಲ್ ವಿ ಬುಕ್ ಹೌಸ್ ಗೆ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್“; ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್” ವಿಭಾಗದಲ್ಲಿ ಪ್ರಶಸ್ತಿ ; ಮಂಗಳೂರಿನಲ್ಲಿ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ ; ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ದಾಸ್ ನೇರ್ಲಾಜೆ

Published

on

ಪುಸ್ತಕ ಮಾರಾಟ ಮಳಿಗೆಯಲ್ಲಿ ರಾಜ್ಯದ್ಯಂತ ಹೆಸರುವಾಸಿಯಾದ SLV ಬುಕ್ ಹೌಸ್‌ಗೆ ಟೈಮ್ಸ್ ಬಿಸಿನೆಸ್ ಆವಾರ್ಡ್ ಲಭಿಸಿದೆ. .ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳು ಮತ್ತು ಉದ್ಯಮಿಗಳನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ನೀಡುವ ಕಾರ್ಯಕ್ರಮವನ್ನು ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿತ್ತು. SLV ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ದಾಸ್ ನೇರ್ಲಾಜೆಯವರ ಎಸ್‌ಎಲ್‌ವಿ ಬುಕ್ ಹೌಸ್ ಸಂಸ್ಥೆಗೆ ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ 2026 ಕಾರ್ಯಕ್ರಮದಲ್ಲಿ “ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್” ವಿಭಾಗದಲ್ಲಿ ಪ್ರಶಸ್ತಿ ಲಭಿಸಿತು.

ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪುಸ್ತಕ ಮಾರಾಟ ಮಳಿಗೆಯಲ್ಲಿ ರಾಜ್ಯದ್ಯಂತ ಹೆಸರುವಾಸಿಯಾದ SLV ಬುಕ್ ಹೌಸ್‌ಗೆ ಟೈಮ್ಸ್ ಬಿಸಿನೆಸ್ ಎವಾರ್ಡ್ ನೀಡಿ ಗೌರವಿಸಲಾಯಿತು.ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳು ಮತ್ತು ಉದ್ಯಮಿಗಳನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ನೀಡಲಾಯಿತು.

ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿಗಳನ್ನು ಪ್ರದಾನಿಸಿದರು.

ಎಸ್‌ಎಲ್‌ವಿ ಬುಕ್ ಹೌಸ್ ಸಂಸ್ಥೆಗೆ “ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್” ವಿಭಾಗದಲ್ಲಿ ಪ್ರಶಸ್ತಿ ಲಭಿಸಿತು. ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ದಾಸ್ ನೇರ್ಲಾಜೆಯವರು ಮತ್ತು ಎಸ್ ಎಲ್ ವಿ ಬುಕ್ ಹೌಸ್ ನ ಪ್ರಧಾನ ವ್ಯವಸ್ಥಾಪಕರಾದ ರಾಜಾ ಅಂಚನ್ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಚಂದ್ರಕಾಂತ್ ಬೆಂಗಳೂರು, ರಾಮ್ ದಾಸ್ ಶೆಟ್ಟಿ ವಿಟ್ಲ, ಯೋಗೀಶ್ ನೇರ್ಲಾಜೆ, ಅಮಿತ್ ಮೈಸೂರು ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ದಿವಾಕರ್ ದಾಸ್ ರವರು ಈ ಪ್ರಶಸ್ತಿಯನ್ನು ನಾವು ಗ್ರಾಹಕರಿಗೆ ನೀಡಿದ ಉತ್ತಮ ಸೇವೆಯಿಂದ ಈ ಪ್ರಶಸ್ತಿ ಲಭಿಸಿದೆ. ಹಾಗಾಗಿ ಈ ಪ್ರಶಸ್ತಿಯನ್ನು ನಮ್ಮ ಗ್ರಾಹಕರಿಗೆ ಮತ್ತು ಗ್ರಾಹಕಾರೊಂದಿಗೆ ವಿಶೇಷ ಸೇವೆಯನ್ನು ನೀಡಿದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೂ ಈ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ ಎಂದರು.

ರಾಜ್ಯಾದ್ಯಂತ ಪುಸ್ತಕ ಮಾರಾಟ ಮಳಿಗೆಯಲ್ಲಿ ಹೆಸರುವಾಸಿಯಾದ SLV ಬುಕ್ ಹೌಸ್‌ ಬೆಂಗಳೂರು, ಮೈಸೂರು, ಚಾಮರಾಜನಗರ, ಪುತ್ತೂರು, ಮೂಡಬಿದ್ರೆ, ಮಂಗಳೂರಿನ ಬಿಜೈ, ಮೇರಿಹಿಲ್, ಮಾರ್ನೆಮಿ ಕಟ್ಟೆ, ಕೊಡಿಯಾಲ್ ಬೈಲ್ ನಲ್ಲಿ ಕಾರ್ಯಾಚರಿಸುತ್ತಿರುತ್ತಿದ್ದು , ಇದೀಗ ಕೊಡಗಿನ ಕುಶಾಲನಗರದಲ್ಲಿ ಕೆಲವೇ ದಿನಗಳಲ್ಲಿ ಹೊಸ ಶಾಖೆ ಶುಭಾರಂಭಗೊಳ್ಳಲಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ: ಸಮಸ್ತ ತುಳುವರಿಂದ ಹರ್ಷ; ನುಡಿದಂತೆ ನಡೆದ ಸರಕಾರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹರ್ಷ

Published

on

ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸರ್ಕಾರವು ನುಡಿದಂತೆ ನಡೆದುಕೊಂಡಿದ್ದು, ಜಗತ್ತಿನಾದ್ಯಂತ ನೆಲೆಸಿರುವ ತುಳು ಭಾಷಿಗರಲ್ಲಿ ಇದು ಹೊಸ ಆತ್ಮವಿಶ್ವಾಸವನ್ನು ಮೂಡಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸುಮಾರು 3 ಸಾವಿರ ವರ್ಷಗಳ ಇತಿಹಾಸವಿರುವ ತುಳು ಭಾಷೆಗೆ ಸಿಕ್ಕಿರುವ ಈ ಮಾನ್ಯತೆ ಭಾಷೆಯ ಸಮಗ್ರ ಬೆಳವಣಿಗೆಗೆ ಮೈಲಿಗಲ್ಲಾಗಿದೆ ಎಂದಿದ್ದಾರೆ.

ಪ್ರಮುಖ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳಿಗೆ ಅಭಿನಂದನೆ

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು: ಶಿವರಾಜ್ ಎಸ್. ತಂಗಡಗಿ
  • ಜಿಲ್ಲಾ ಉಸ್ತುವಾರಿ ಸಚಿವರು: ಯು.ಟಿ. ಖಾದರ್
  • ಶಾಸಕರು: ಅಶೋಕ್ ರೈ ಹಾಗೂ ಕರಾವಳಿಯ ಎಲ್ಲಾ ಜನಪ್ರತಿನಿಧಿಗಳು
  • ಇತರರು: ಸರ್ಕಾರಕ್ಕೆ ನಿರಂತರ ಒತ್ತಡ ತಂದ ದೇಶ-ವಿದೇಶದ ಎಲ್ಲಾ ತುಳು ಸಂಘ-ಸಂಸ್ಥೆಗಳು

ಐತಿಹಾಸಿಕ ನಿರ್ಧಾರದ ಹಿನ್ನೆಲೆ

ಈ ಹಿಂದೆ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ ವರದಿ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ್ದ ‘ಆಂಧ್ರಪ್ರದೇಶ ಅಧ್ಯಯನ ವರದಿ’ಯ ಆಧಾರದ ಮೇಲೆ ಈ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಗೆ ಅಧಿಕೃತ ಮಾನ್ಯತೆ ನೀಡಿದ ಕಾನೂನು ಪ್ರಕ್ರಿಯೆಗಳ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ತಮಗೆ ಅವಕಾಶ ಸಿಕ್ಕಿFತು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ನೆನಪಿಸಿಕೊಂಡಿದ್ದಾರೆ. ಈ ವರದಿಯು ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸಿಕೊಡುವಲ್ಲಿ ಪ್ರಮುಖ ದಾಖಲೆಯಾಗಿ ಸಹಕಾರಿಯಾಗಿದೆ ಎಂದರು.

ಮುಂದಿನ ಗುರಿ: ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ

ಕರ್ನಾಟಕ ಸರ್ಕಾರದ ಈ ಚಾರಿತ್ರಿಕ ನಿರ್ಧಾರವು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ತುಳುವರ ದೀರ್ಘಕಾಲದ ಮಹತ್ವದ ಬೇಡಿಕೆ ಈಡೇರುವ ನಿಟ್ಟಿನಲ್ಲಿ ದೊಡ್ಡ ಶಕ್ತಿಯಾಗಲಿದೆ ಎಂದು ಅಕಾಡೆಮಿ ಅಧ್ಯಕ್ಷರು ಆಶಾವಾಹಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Continue Reading

accident

ಸುರತ್ಕಲ್ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಎಕ್ಸ್‌ಪ್ರೆಸ್ ಬಸ್ – ಓರ್ವನಿಗೆ ಗಾಯ

Published

on

ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ (ಸೆ.04) ಬೆಳಿಗ್ಗೆ ಪಣಂಬೂರು ಬಳಿ ಸಂಭವಿಸಿದೆ.

ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಕಾರ್ಕಳದಿಂದ ಮಂಗಳೂರಿಗೆ ಹೊರಟಿದ್ದ ‘ವಿಶಾಲ್ ಮೋಟಾರ್ಸ್ ಎಕ್ಸ್‌ಪ್ರೆಸ್’ ಬಸ್, ಬೆಳಿಗ್ಗೆ ಸುಮಾರು 8:10ಕ್ಕೆ ಪಣಂಬೂರಿನ ಎಂ.ಸಿ.ಎಫ್ (MCF) ಸಂಸ್ಥೆಯ ಸಮೀಪದ ರೈಲ್ವೆ ಗೇಟ್ ಬಳಿ ತಲುಪುತ್ತಿದ್ದಂತೆ ಈ ಅವಘಡ ಸಂಭವಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ಸಿನ ಚಕ್ರ ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಸರ್ವಿಸ್ ಭಾಗಕ್ಕೆ ಮಗುಚಿ ಬಿದ್ದಿದೆ.

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಆದಿತ್ಯ ಎಂಬ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಉಳಿದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.

Continue Reading

Trending

Copyright © 2025 Deevatige

error: Content is protected !!