Politics
ಬಿಜೆಪಿಯಲ್ಲಿ ಯಡಿಯೂರಪ್ಪ ಏನು ? ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯೇ ? ಇದು ಯಡಿಯೂರಪ್ಪ ಸ್ಟೈಲ್ !!
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/03/333-1000x600.jpg&description=ಬಿಜೆಪಿಯಲ್ಲಿ ಯಡಿಯೂರಪ್ಪ ಏನು ? ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯೇ ? ಇದು ಯಡಿಯೂರಪ್ಪ ಸ್ಟೈಲ್ !!', 'pinterestShare', 'width=750,height=350'); return false;" title="Pin This Post">
ಇಂದು ಕರ್ನಾಟಕದಲ್ಲಿ ಬಿಜೆಪಿ ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದು ನಿಂತಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತ್ಯಾಗ ಮತ್ತು ಪರಿಶ್ರಮದ ದೊಡ್ಡ ಪಾಲಿದೆ. ಅವರು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ಇಂದಿಗೂ ಪಕ್ಷದ ಉನ್ನತ ಮಟ್ಟದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೂ ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ವಿಚಲಿತರಾಗದೆ ಧೈರ್ಯವಾಗಿ ಎದುರಿಸಿ ಜಯಶಾಲಿಯಾದವರು. ಅವರ ಯಾವುದೇ ಮಾತುಗಳಲ್ಲಿ, ಕೃತಿಗಳಲ್ಲಿ ಮುಂದಿನ ಭವಿಷ್ಯದ ನಿರ್ಧಾರಗಳಿವೆ. ಬಿಜೆಪಿಯಲ್ಲಿ ಯಡಿಯೂರಪ್ಪ ಏನು ? ಎಂಬುವುದನ್ನುಪರೋಕ್ಷವಾಗಿ ತೋರಿಸುವಾಗ ಇದು ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯಾಗಿರಬಹುದೇ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಇದುವೇ ಯಡಿಯೂರಪ್ಪ ಸ್ಟೈಲ್ !!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೀಡಿದ ಇತ್ತೀಚಿನ ಹೇಳಿಕೆಯು ಬಿಜೆಪಿ ನಾಯಕರ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೈಕಮಾಂಡ್ ಅನುಮತಿಗೂ ಮುನ್ನವೇ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಯಡಿಯೂರಪ್ಪ ಅವರ ನಡೆಗೆ ಪಕ್ಷದ ಹಿರಿಯ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ (BSY) ಅವರು ಇತ್ತೀಚೆಗೆ (ಮಾರ್ಚ್ 2026) ದಾವಣಗೆರೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಕುರಿತು ನೀಡಿದ ಹೇಳಿಕೆಯು ಪಕ್ಷದೊಳಗೆ ಸಂಚಲನ ಮೂಡಿಸಿದೆ. ಚುನಾವಣೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶವಿರುವಾಗಲೇ ಅವರು ಕೆಲವು ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಈ ವಿವಾದಕ್ಕೆ ಮುಖ್ಯ ಕಾರಣವಾಗಿದೆ.

ಈ ಬೆಳವಣಿಗೆಯಿಂದಾಗಿ ಪಕ್ಷದ ಆಂತರಿಕ ಕಲಹ ಬೀದಿಗೆ ಬಂದಂತಾಗಿದ್ದು, ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಕೆಲವು ಪ್ರಭಾವಿ ಬಿಜೆಪಿ ನಾಯಕರು ಈ ನಡೆಯನ್ನು ಖಂಡಿಸಿ, ಯಡಿಯೂರಪ್ಪ ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಪಕ್ಷದ ಕೇಂದ್ರ ಸಮಿತಿಗೆ ಸೇರಿದ್ದು, ಏಕಪಕ್ಷೀಯ ನಿರ್ಧಾರಗಳು ಸರಿಯಲ್ಲ’ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲದೇ, ಈ ನಡೆಯ ಹಿಂದೆ ಗಂಭೀರವಾದ ರಾಜಕೀಯ ತಂತ್ರ ಅಡಗಿದೆ ಎಂದು ಹಲವರು ಶಂಕಿಸಿದ್ದಾರೆ.ಯಡಿಯೂರಪ್ಪ ಅವರಿಗೆ ಪಕ್ಷ ಬಿಡುವ ಮತ್ತು ಸ್ವಂತ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಉದ್ದೇಶವಿದ್ದಂತಿದೆ’ ಎಂದು ಕೆಲವು ಮೂಲಗಳು ಗಂಭೀರ ಆರೋಪ ಮಾಡಿವೆ.
ಈ ಅನಿರೀಕ್ಷಿತ ಘೋಷಣೆಯು ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಹಾನಿಯುಂಟು ಮಾಡಬಹುದು ಎಂದು ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಸೂಚನೆಗೂ ಮೊದಲೇ ಅಭ್ಯರ್ಥಿಗಳನ್ನು ಹೆಸರಿಸುವುದು ಪಕ್ಷದ ಒಗ್ಗಟ್ಟನ್ನು ಹದಗೆಡಿಸುತ್ತದೆ ಎನ್ನುವುದು ವಿರೋಧಿಬಣದ ವಾದ. ಇತ್ತ ಯಡಿಯೂರಪ್ಪ ಬೆಂಬಲಿಗರು ಇದನ್ನು ಸಾಮಾನ್ಯ ಸಲಹೆ ಎಂದು ಸಮರ್ಥಿಸಿಕೊಳ್ಳುತ್ತಿದ್ದರೂ, ಪಕ್ಷದ ವರಿಷ್ಠರು ಈ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ.
ಸದ್ಯ ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ದೊಡ್ಡಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ. ಯಡಿಯೂರಪ್ಪ ಅವರು ತಮ್ಮ ನಿಲುವಿಗೆ ಬದ್ಧರಾಗಿರುತ್ತಾರೋ ಅಥವಾ ವರಿಷ್ಠರ ಮನವೊಲಿಕೆಗೆ ಬಾಗುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

ಸಾಮಾನ್ಯವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (CEC) ಮತ್ತು ಹೈಕಮಾಂಡ್ ಅಂತಿಮಗೊಳಿಸುತ್ತದೆ. ಆದರೆ ಯಡಿಯೂರಪ್ಪ ಅವರು ಸಂಸದೀಯ ಮಂಡಳಿಯ ಸದಸ್ಯರಾಗಿದ್ದರೂ, ಏಕಪಕ್ಷೀಯವಾಗಿ ಹೆಸರು ಘೋಷಿಸಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಎಂಬ ಆರೋಪ ಕೇಳಿಬಂದಿದೆ. ಪ್ರತಿ ಕ್ಷೇತ್ರದಲ್ಲಿ ಹತ್ತಾರು ಜನ ಆಕಾಂಕ್ಷಿಗಳು ಕೆಲಸ ಮಾಡುತ್ತಿರುವಾಗ, ಇಷ್ಟು ಮುಂಚಿತವಾಗಿಯೇ ಹೆಸರು ಘೋಷಿಸುವುದರಿಂದ ಇತರ ಕಾರ್ಯಕರ್ತರಲ್ಲಿ ನಿರಾಸಕ್ತಿ ಮೂಡುತ್ತದೆ ಎಂಬುದು ಸ್ಥಳೀಯ ನಾಯಕರ ವಾದ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು. ಹೀಗಿದ್ದರೂ ಬಿಎಸ್ವೈ ಅವರ ಹೇಳಿಕೆ ಹೈಕಮಾಂಡ್ಗೆ ಸವಾಲು ಹಾಕಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಚಾರ ತಿಳಿದುಕೊಂಡೇ ಯಡಿಯೂರಪ್ಪನವರು ಸವಾಲು ಹಾಕಿದ್ದಾರೆ ಎಂದರೆ ಹೈಕಮಾಂಡ್ ಇವರ ಮಾತಿಗೆ , ತೀರ್ಮಾನಕ್ಕೆ ಮನ್ನಣೆ ನೀಡಿಲ್ಲವೆಂದರೆ ಮುಂದಿನ ನಿರ್ಧಾರ ಏನು ಎಂಬುವುದರ ಮೇಲೆ ಬಿಜೆಪಿಯ ಭವಿಷ್ಯತ್ತು ನಿಂತಿದೆ.

ಯಡಿಯೂರಪ್ಪನವರು ಕೇವಲ ಒಬ್ಬ ನಾಯಕನಾಗಿ ಮಾತ್ರವಲ್ಲದೆ, ಪಕ್ಷದ ಕಾರ್ಯಕರ್ತರನ್ನು ಹೆಸರು ಹಿಡಿದು ಕರೆಯುವಷ್ಟು ಆತ್ಮೀಯತೆಯನ್ನು ಹೊಂದಿದ್ದರು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಧೃತಿಗೆಡದೆ ಪಕ್ಷವನ್ನು ಮುನ್ನಡೆಸುವ ಅವರ ಗುಣವೇ ಅವರನ್ನು ‘ಹೋರಾಟದ ಹರಿಕಾರ’ ಎಂದು ಕರೆಯುವಂತೆ ಮಾಡಿತು. ಒಟ್ಟಾರೆಯಾಗಿ ಹೇಳುವುದಾದರೆ, ಇಂದು ಕರ್ನಾಟಕದಲ್ಲಿ ಬಿಜೆಪಿ ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದು ನಿಂತಿರುವುದರ ಹಿಂದೆ ಯಡಿಯೂರಪ್ಪ ಅವರ ತ್ಯಾಗ ಮತ್ತು ಪರಿಶ್ರಮದ ದೊಡ್ಡ ಪಾಲಿದೆ. ಅವರು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ಇಂದಿಗೂ ಪಕ್ಷದ ಉನ್ನತ ಮಟ್ಟದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೂ ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ವಿಚಲಿತರಾಗದೆ ಧೈರ್ಯವಾಗಿ ಎದುರಿಸಿ ಜಯಶಾಲಿಯಾದವರು.ಅವರ ಮಾತಿಗೆ ಮನ್ನಣೆ ಸಿಗಲೇ ಬೇಕು ಇಲ್ಲವಾದರೆ ಅದರ ಪರಿಣಾಮವನ್ನು ಪಕ್ಷ ಅನುಭವಿಸಲೇ ಬೇಕು ಎಂಬುವುದರ ಮೇಲೆ ಮುಂದೆ ಹೊಸ ಪಕ್ಷದ ಸ್ಥಾಪನೆಯೊಂದು ಅವರ ಅವರ ಭತ್ತಳಿಕೆಯಿಂದ ಬಂದರೂ ಬರಬಹುದು !
Politics
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ಡಾ. ಜಿ. ಪರಮೇಶ್ವರ್ ನೂತನ ಡಿಸಿಎಂ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದೆ. ಬೆಂಗಳೂರಿನ ಲೋಕಭವನದ ಭವ್ಯ ಗ್ಲಾಸ್ ಹೌಸ್ನಲ್ಲಿ ನಡೆದ ಹೈವೋಲ್ಟೇಜ್ ಸಮಾರಂಭದಲ್ಲಿ, ಕಾಂಗ್ರೆಸ್ನ ಶಕ್ತಿಶಾಲಿ ಹಾಗೂ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಡಿಕೆಶಿ
ಯಾವಾಗಲೂ ದೈವಭಕ್ತಿಗೆ ಹೆಸರಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏಕಮತದಿಂದ ನಾಯಕರಾಗಿ ಆಯ್ಕೆಯಾಗಿದ್ದ ಡಿಕೆಶಿ, ಪಕ್ಷದ ಸಂಕಷ್ಟದ ಸಮಯದಲ್ಲೆಲ್ಲಾ ‘ಟ್ರಬಲ್ ಶೂಟರ್’ ಆಗಿ ಕೆಲಸ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ.

ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್
ಮುಖ್ಯಮಂತ್ರಿಯವರ ಬೆನ್ನಲ್ಲೇ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೊದಲ ಹಂತದ ಸಚಿವ ಸಂಪುಟ: ಡಾ. ಪರಮೇಶ್ವರ್ ಸೇರಿ 13 ಮಂತ್ರಿಗಳ ಪದಗ್ರಹಣ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಮೊದಲ ಹಂತದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಒಟ್ಟು 13 ಹಿರಿಯ ನಾಯಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆ ಪಟ್ಟಿ ಇಲ್ಲಿದೆ:
| ಸಚಿವರ ಹೆಸರು | ಸಚಿವರ ಹೆಸರು | ||
| 1 | ಡಾ. ಜಿ. ಪರಮೇಶ್ವರ್ (ಡಿಸಿಎಂ) | 2 | ಕೆ. ಎಚ್. ಮುನಿಯಪ್ಪ |
| 3 | ಕೆ.ಜೆ. ಜಾರ್ಜ್ | 4 | ಎಂ. ಬಿ. ಪಾಟೀಲ್ |
| 5 | ರಾಮಲಿಂಗ ರೆಡ್ಡಿ | 6 | ಸತೀಶ್ ಜಾರಕಿಹೊಳಿ |
| 7 | ಕೃಷ್ಣ ಬೈರೇ ಗೌಡ | 8 | ಪ್ರಿಯಾಂಕ್ ಖರ್ಗೆ |
| 9 | ಯು.ಟಿ. ಖಾದರ್ | 10 | ಈಶ್ವರ್ ಖಂಡ್ರೆ |
| 11 | ಡಾ. ಯತೀಂದ್ರ ಸಿದ್ದರಾಮಯ್ಯ | 12 | ಬೈರತಿ ಸುರೇಶ್ |
| 13 | ಶರಣ ಪ್ರಕಾಶ್ ಪಾಟೀಲ್ |
ಗಣ್ಯರ ಉಪಸ್ಥಿತಿ
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಶಾಸಕರು ಹಾಗೂ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದು ನೂತನ ಸರ್ಕಾರಕ್ಕೆ ಶುಭ ಹಾರೈಸಿದರು.
“ಪಕ್ಷದ ಸಂಕಷ್ಟ ನಿವಾರಕ ಎಂದೇ ಹೆಸರಾಗಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರ ಇಂದಿನಿಂದ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದು, ರಾಜ್ಯದ ಜನರಲ್ಲಿ ಭಾರಿ ಕುತೂಹಲ ಮತ್ತು ನಿರೀಕ್ಷೆಗಳನ್ನು ಮೂಡಿಸಿದೆ.”


Politics
ಬೆಳಗಾವಿ ಸಾಹುಕಾರ್ಗೆ ತಪ್ಪಿದ ಕೆಪಿಸಿಸಿ ಪಟ್ಟ: ಒಬಿಸಿ ನಾಯಕ ಬಿ.ಕೆ.ಹರಿಪ್ರಸಾದ್ಗೆ ಹೈಕಮಾಂಡ್ ಜೈ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಗಾದಿಯ ರೇಸ್ ಕೊನೆಗೂ ಅಂತಿಮ ಘಟ್ಟಕ್ಕೆ ತಲುಪಿದ್ದು, ಬೆಳಗಾವಿ ಸಾಹುಕಾರ್ ಸತೀಶ್ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ ಎನ್ನಲಾಗಿದೆ. ಕೊನೆಯ ಕ್ಷಣದ ರಾಜಕೀಯ ಬೆಳವಣಿಗೆಯಲ್ಲಿ ಒಬಿಸಿ ಸಮುದಾಯದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್ ಆಗಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ಎರಡಕ್ಕೂ ಪಟ್ಟು ಹಿಡಿದಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಎಐಸಿಸಿ ನಾಯಕರು ನಿರಾಸೆ ಮೂಡಿಸಿದ್ದು, ಹಿಂದುಳಿದ ವರ್ಗದ (ಬಿಲ್ಲವ) ಪ್ರಭಾವಿ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಅದೃಷ್ಟ ಖುಲಾಯಿಸಿದೆ. ಎಐಸಿಸಿಯಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಇಂದು ಸಂಜೆ ವೇಳೆ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಸಾಹುಕಾರ್ಗೆ ಶಾಕ್; ಹರಿಪ್ರಸಾದ್ಗೆ ಒಲಿದ ಅದೃಷ್ಟ!
ದೀರ್ಘ ಕಾಲದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿ ಹೈಕಮಾಂಡ್ ಮಟ್ಟದಲ್ಲಿ ಭಾರಿ ಕಸರತ್ತು ನಡೆಸಿದ್ದರು. ಆದರೆ, ರಾಜ್ಯ ಕಾಂಗ್ರೆಸ್ನಲ್ಲಿ ಉಂಟಾಗಿರುವ ರಾಜಕೀಯ ಸ್ಥಿತ್ಯಂತರಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ಒಬಿಸಿ ಕಾರ್ಡ್ ಪ್ಲೇ ಮಾಡಿದೆ. ಸಿದ್ದರಾಮಯ್ಯನವರ ಪದಚ್ಯುತಿ ಬೆನ್ನಲ್ಲೇ ‘ಅಹಿಂದ’ ಸಮುದಾಯವನ್ನು ಕೈಬಿಟ್ಟಿಲ್ಲ ಎಂಬ ಸಂದೇಶ ರವಾನಿಸಲು ಎಐಸಿಸಿ ನಿರ್ಧರಿಸಿದ್ದು, ಹರಿಪ್ರಸಾದ್ ಅವರ ಹೆಗಲಿಗೆ ಪಕ್ಷದ ಸಾರಥ್ಯ ನೀಡಲು ಮುಂದಾಗಿದೆ.

ಬಿ.ಕೆ.ಹರಿಪ್ರಸಾದ್ ನೇಮಕದ ಹಿಂದಿನ ಹೈಕಮಾಂಡ್ ಲೆಕ್ಕಾಚಾರಗಳೇನು?
ಅಹಿಂದ ಸಮುದಾಯಕ್ಕೆ ಮಣೆ: ಸಿದ್ದರಾಮಯ್ಯನವರ ಬೆಳವಣಿಗೆಗಳ ಬಳಿಕ ಅಹಿಂದ ವರ್ಗದಲ್ಲಿ ಮೂಡಬಹುದಾದ ಅಸಮಾಧಾನ ಶಮನಗೊಳಿಸಲು ಒಬಿಸಿ ಸಮುದಾಯದ ನಾಯಕನಿಗೆ ಮಣೆ ಹಾಕಲಾಗಿದೆ.
ರಾಷ್ಟ್ರ-ರಾಜ್ಯ ರಾಜಕಾರಣದ ಅನುಭವ: ದಶಕಗಳ ಕಾಲ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ರಾಜ್ಯಗಳ ಉಸ್ತುವಾರಿಯಾಗಿ ಕೆಲಸ ಮಾಡಿದ ಅಪಾರ ಸಾಂಘಿಕ ಅನುಭವ ಹರಿಪ್ರಸಾದ್ ಅವರಿಗಿದೆ.
ಸಂಘಟನಾ ಚಾತುರ್ಯ ಹಾಗೂ ವಾಕ್ಪಟುತ್ವ: ಪಕ್ಷದ ಸಿದ್ದಾಂತಗಳನ್ನು ಗಟ್ಟಿಯಾಗಿ ಮಂಡಿಸುವ ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸುವ ಅದ್ಭುತ ವಾಕ್ ಚಾತುರ್ಯ ಇವರ ಪ್ಲಸ್ ಪಾಯಿಂಟ್.
ಆರ್ಎಸ್ಎಸ್ಗೆ ಕೌಂಟರ್ ಕೊಡುವ ಚಾಣಾಕ್ಷತನ: ಸೈದ್ಧಾಂತಿಕವಾಗಿ ಬಿಜೆಪಿಯ ಬೆನ್ನೆಲುಬಾದ ಆರ್ಎಸ್ಎಸ್ ಅನ್ನು ತೀಕ್ಷ್ಣವಾಗಿ ಎದುರಿಸುವ ಮತ್ತು ಚುನಾವಣಾ ತಂತ್ರಗಾರಿಕೆ ಹೆಣೆಯುವಲ್ಲಿ ಹರಿಪ್ರಸಾದ್ ಮುಂಚೂಣಿಯಲ್ಲಿದ್ದಾರೆ.
ಬಣ ರಾಜಕೀಯಕ್ಕೆ ಬ್ರೇಕ್: ಕಾಂಗ್ರೆಸ್ನೊಳಗಿನ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಎರಡೂ ಬಣಗಳನ್ನು ಸಮಾನವಾಗಿ ತೂಗಿಸಿಕೊಂಡು, ಒಟ್ಟಾಗಿ ಕೊಂಡೊಯ್ಯಬಲ್ಲ ಸಮರ್ಥ ನಾಯಕತ್ವ ಇವರದ್ದಾಗಿದೆ.

ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಈ ನೇಮಕಾತಿ ಪ್ರಕ್ರಿಯೆ ಅಧಿಕೃತವಾಗಿ ಹೊರಬೀಳುತ್ತಿದ್ದಂತೆ, ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಮಹತ್ವದ ಬದಲಾವಣೆಗಳು ಕಂಡುಬರುವ ಸಾಧ್ಯತೆ ದಟ್ಟವಾಗಿದೆ.



INCIDENT
2 ವಾರದಲ್ಲೇ 75 ಟನ್ ಚಿನ್ನ ಮಾರಿದ ಭಾರತ! ರೂಪಾಯಿ ಮೌಲ್ಯ ಕುಸಿತ ತಡೆಯಲು ಆರ್ಬಿಐ ಬಿಗ್ ಸ್ಟೆಪ್
ನವದೆಹಲಿ: ಮಧ್ಯಪ್ರಾಚ್ಯದಲ್ಲಿ (ವೆಸ್ಟ್ ಏಷ್ಯಾ) ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆ ಹಾಗೂ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿಯ ಮೌಲ್ಯದ ಭಾರಿ ಕುಸಿತವನ್ನು ನಿಯಂತ್ರಿಸಲು ಮತ್ತು ವಿದೇಶಿ ಕರೆನ್ಸಿ ಆಸ್ತಿಗಳನ್ನು ರಕ್ಷಿಸಲು ಆರ್ಬಿಐ ತನ್ನ ಸಂಗ್ರಹದಿಂದ ಕೇವಲ ಎರಡೇ ವಾರಗಳಲ್ಲಿ ಭಾರಿ ಪ್ರಮಾಣದ ಚಿನ್ನವನ್ನು ಮಾರಾಟ ಮಾಡಿದೆ ಎಂದು ವರದಿಯಾಗಿದೆ.
ಬ್ಲೂಮ್ಬರ್ಗ್ ಎಕನಾಮಿಕ್ಸ್ ಬಿಡುಗಡೆ ಮಾಡಿರುವ ಇತ್ತೀಚಿನ ಆರ್ಥಿಕ ವಿಶ್ಲೇಷಣೆಯ ಪ್ರಕಾರ, ಮೇ 22ಕ್ಕೆ ಕೊನೆಗೊಂಡ ಎರಡು ವಾರಗಳ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ಸುಮಾರು 12 ಬಿಲಿಯನ್ ಡಾಲರ್ (ಅಂದಾಜು 1.14 ಲಕ್ಷ ಕೋಟಿ ರೂಪಾಯಿ) ಮೌಲ್ಯದ ಹತ್ತಿರಹತ್ತಿರ 75 ಟನ್ ಚಿನ್ನವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿರುವ ಸಾಧ್ಯತೆಯಿದೆ.
ಚಿನ್ನ ಮಾರಾಟಕ್ಕೆ ಪ್ರಮುಖ ಕಾರಣಗಳೇನು?
ರೂಪಾಯಿ ಮೌಲ್ಯದ ಕುಸಿತಕ್ಕೆ ಬ್ರೇಕ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ (Strait of Hormuz) ಮುಚ್ಚಲ್ಪಟ್ಟಿರುವುದರಿಂದ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ತೀವ್ರವಾಗಿ ಏರಿಕೆಯಾಗಿದೆ. ಇದರಿಂದಾಗಿ ಭಾರತೀಯ ರೂಪಾಯಿಯ ಮೌಲ್ಯ ಡಾಲರ್ ಎದುರು ಭಾರಿ ಕುಸಿತ ಕಾಣುತ್ತಿದ್ದು, ಇದನ್ನು ನಿಯಂತ್ರಿಸಲು ಆರ್ಬಿಐ ಈ ಕ್ರಮಕ್ಕೆ ಮುಂದಾಗಿದೆ.
ವಿದೇಶಿ ಕರೆನ್ಸಿ ನಗದೀಕರಣ (Forex Liquidity): ಚಿನ್ನ ಮಾರಾಟ ಮಾಡಿದ ಅದೇ ಎರಡು ವಾರಗಳ ಅವಧಿಯಲ್ಲಿ ಆರ್ಬಿಐ ಸುಮಾರು 7.5 ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ಕರೆನ್ಸಿ ಆಸ್ತಿಗಳನ್ನು (ಡಾಲರ್) ಖರೀದಿಸಿದೆ. ಪ್ರಸ್ತುತ ಸನ್ನಿವೇಶದಲ್ಲಿ ಚಿನ್ನದ ದಾಸ್ತಾನಿಗಿಂತ ತಕ್ಷಣವೇ ಬಳಸಬಹುದಾದ ಲಿಕ್ವಿಡ್ ನಗದು (ಡಾಲರ್) ಅತ್ಯಗತ್ಯವಾಗಿರುವುದರಿಂದ ಈ ಅದಲು-ಬದಲು ಪ್ರಕ್ರಿಯೆ ನಡೆದಿದೆ.
ತೈಲ ಆಮದು ವೆಚ್ಚದ ಹೊರೆ: ಭಾರತವು ಜಗತ್ತಿನಲ್ಲೇ ಮೂರನೇ ಅತಿ ದೊಡ್ಡ ತೈಲ ಆಮದುದಾರ ದೇಶವಾಗಿದೆ. ಯುದ್ಧದ ಬಿಕ್ಕಟ್ಟಿನಿಂದಾಗಿ ಹೆಚ್ಚುತ್ತಿರುವ ಕರೆಂಟ್ ಅಕೌಂಟ್ ಡೆಫಿಸಿಟ್ (ಚಾಲ್ತಿ ಖಾತೆ ಕೊರತೆ) ನಿಭಾಯಿಸಲು ವಿದೇಶಿ ವಿನಿಮಯ ನಿಧಿಯನ್ನು ಬಲಪಡಿಸುವುದು ಅನಿವಾರ್ಯವಾಗಿದೆ.
ಸುಂಕ ಹೆಚ್ಚಳದ ನಡುವೆಯೂ ಕುಸಿದ ಚಿನ್ನದ ದಾಸ್ತಾನು ಮೌಲ್ಯ!
ಆರ್ಥಿಕ ತಜ್ಞರ ಪ್ರಕಾರ, ಭಾರತ ಸರ್ಕಾರವು ಇತ್ತೀಚೆಗೆ ಮೌಲ್ಯಯುತ ಲೋಹಗಳ (ಚಿನ್ನ ಮತ್ತು ಬೆಳ್ಳಿ) ಮೇಲಿನ ಆಮದು ಸುಂಕವನ್ನು (Import Duty) ಭಾರಿ ಪ್ರಮಾಣದಲ್ಲಿ ಹೆಚ್ಚಿಸಿತ್ತು. ಸಾಮಾನ್ಯ ನಿಯಮಗಳ ಪ್ರಕಾರ ಆಮದು ಸುಂಕ ಹೆಚ್ಚಾದಾಗ ರಿಸರ್ವ್ ಬ್ಯಾಂಕ್ ಬಳಿ ಇರುವ ಚಿನ್ನದ ಮೌಲ್ಯ ತಾನಾಗಿಯೇ ವೃದ್ಧಿಸಬೇಕಿತ್ತು. ಆದರೆ, ಆರ್ಬಿಐನ ಚಿನ್ನದ ದಾಸ್ತಾನಿನ ಒಟ್ಟು ಮೌಲ್ಯದಲ್ಲಿ ಇಳಿಕೆ ಕಂಡುಬಂದಿರುವುದು, ಬ್ಯಾಂಕ್ ಸಕ್ರಿಯವಾಗಿ ಚಿನ್ನವನ್ನು ಮಾರಾಟ ಮಾಡಿದೆ ಎಂಬುದಕ್ಕೆ ಸ್ಪಷ್ಟ ಪುರಾವೆಯಾಗಿದೆ ಎಂದು ಬ್ಲೂಮ್ಬರ್ಗ್ನ ಹಿರಿಯ ಭಾರತೀಯ ಆರ್ಥಿಕ ತಜ್ಞ ಅಭಿಷೇಕ್ ಗುಪ್ತಾ ವಿಶ್ಲೇಷಿಸಿದ್ದಾರೆ.
ಭಾರತದ ಬಳಿ ಸದ್ಯ ಎಷ್ಟಿದೆ ಚಿನ್ನ?
ಒಟ್ಟು ದಾಸ್ತಾನು: 2026ರ ಮಾರ್ಚ್ ಅಂತ್ಯದ ಅಧಿಕೃತ ವರದಿಯ ಪ್ರಕಾರ, ಆರ್ಬಿಐ ಒಟ್ಟು 880.52 ಮೆಟ್ರಿಕ್ ಟನ್ ಚಿನ್ನದ ದಾಸ್ತಾನನ್ನು ಹೊಂದಿತ್ತು.
ದೇಶದೊಳಗಿನ ಸುರಕ್ಷತೆ: ರಷ್ಯಾ-ಉಕ್ರೇನ್ ಯುದ್ಧದ ನಂತರ ಪಾಶ್ಚಿಮಾತ್ಯ ದೇಶಗಳು ರಷ್ಯಾದ ವಿದೇಶಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರಿಂದ ಎಚ್ಚೆತ್ತಿದ್ದ ಭಾರತ, ಬ್ಯಾಂಕ್ ಆಫ್ ಇಂಗ್ಲೆಂಡ್ನಲ್ಲಿದ್ದ ತನ್ನ ಚಿನ್ನವನ್ನು ಭಾರತಕ್ಕೆ ತರಲಾರಂಭಿಸಿತ್ತು. ಪ್ರಸ್ತುತ ಭಾರತದ ಶೇ. 77 ರಷ್ಟು ಚಿನ್ನದ ದಾಸ್ತಾನು ದೇಶದೊಳಗಿನ ಸುರಕ್ಷಿತ ತಿಜೋರಿಗಳಲ್ಲೇ ಇದೆ.
ತಾತ್ಕಾಲಿಕ ಕ್ರಮ: ತಜ್ಞರ ಪ್ರಕಾರ, ಆರ್ಬಿಐನ ಈ ಚಿನ್ನದ ಮಾರಾಟವು ಕೇವಲ ಪ್ರಸ್ತುತ ಬಿಕ್ಕಟ್ಟನ್ನು ಎದುರಿಸಲು ಕೈಗೊಂಡ “ತಾತ್ಕಾಲಿಕ ನಗದು ನಿರ್ವಹಣಾ ಕ್ರಮ” (Temporary Liquidity Measure) ಆಗಿದೆಯೇ ಹೊರತು ಆರ್ಬಿಐ ತನ್ನ ಚಿನ್ನದ ನಿಧಿಯನ್ನು ಕಾಯಂ ಆಗಿ ಕಡಿಮೆ ಮಾಡುತ್ತಿಲ್ಲ. ಮಾರುಕಟ್ಟೆ ಯಥಾಸ್ಥಿತಿಗೆ ಮರಳಿದಾಗ ಆರ್ಬಿಐ ಮತ್ತೆ ಚಿನ್ನವನ್ನು ಖರೀದಿಸಲಿದೆ.
ರೂಪಾಯಿ ಮೌಲ್ಯವು ಇತ್ತೀಚೆಗೆ ಸಾರ್ವಕಾಲಿಕ ಕುಸಿತ ಕಂಡು ಪ್ರತಿ ಡಾಲರ್ಗೆ 96.92 ರ ಗಡಿ ತಲುಪಿತ್ತು. ಆದರೆ ಆರ್ಬಿಐನ ಈ ತಂತ್ರಗಾರಿಕೆಯ ಮಧ್ಯಪ್ರವೇಶದಿಂದಾಗಿ ರೂಪಾಯಿ ಸದ್ಯ ಇತರ ಏಷ್ಯನ್ ಕರೆನ್ಸಿಗಳಿಗಿಂತ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ಜೂನ್ ಆರಂಭದ ವೇಳೆಗೆ 95.17 ರ ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿದೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
