Connect with us

murder

ವಾರಣಾಸಿ: ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ; ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಆಸ್ತಿಪಾಸ್ತಿ ಧ್ವಂಸ

Published

on

ವಾರಣಾಸಿ ಉದಯ್ ಪ್ರತಾಪ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಶುಕ್ರವಾರ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದ್ದು, 23 ವರ್ಷದ ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ವೈಯಕ್ತಿಕ ದ್ವೇಷವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೊಲೆಯಾದ ವಿದ್ಯಾರ್ಥಿಯನ್ನು ಬಿ.ಎ. ನಾಲ್ಕನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೂರ್ಯ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮೂಲತಃ ಗಾಜಿಪುರ ಜಿಲ್ಲೆಯವನಾಗಿದ್ದು, ಓದಿಗಾಗಿ ವಾರಣಾಸಿಯಲ್ಲಿ ನೆಲೆಸಿದ್ದ. ಹೆತ್ತವರ ಏಕೈಕ ಪುತ್ರನಾಗಿದ್ದ ಸೂರ್ಯ ಪ್ರತಾಪ್ ಓದಿನಲ್ಲಿ ಬಹಳ ಪ್ರತಿಭಾವಂತನಾಗಿದ್ದ ಎಂದು ತಿಳಿದುಬಂದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾಲೇಜಿನ ಕಟ್ಟಡದ ಕಾರಿಡಾರ್‌ನಲ್ಲಿ ಸೂರ್ಯ ಪ್ರತಾಪ್ ಮೇಲೆ ಆತನ ಸಹಪಾಠಿ ಮಂಜೀತ್ ಚೌಹಾಣ್ ಎಂಬಾತ ತೀರಾ ಹತ್ತಿರದಿಂದ ಗುಂಡು ಹಾರಿಸಿದ್ದಾನೆ. ತಲೆ ಮತ್ತು ಎದೆಗೆ ಗುರಿಯಿಟ್ಟು ನಾಲ್ಕು ಸುತ್ತು ಗುಂಡು ಹಾರಿಸಿದ ಆರೋಪಿ, ನಂತರ ಮೊದಲ ಮಹಡಿಯ ತಡೆಗೋಡೆ ಹಾರಿ ಪಾರಾರಿಯಾಗಿದ್ದಾನೆ. ಹೋಗುವ ದಾರಿಯಲ್ಲಿ ಪಿಸ್ತೂಲನ್ನು ಕಸದ ಬುಟ್ಟಿಗೆ ಎಸೆದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉದ್ವಿಗ್ನ ಸ್ಥಿತಿಯಲ್ಲಿ ಕ್ಯಾಂಪಸ್:

ಹತ್ಯೆ ಸುದ್ದ ತಿಳಿಯುತ್ತಿದ್ದಂತೆ ಕಾಲೇಜಿನಲ್ಲಿ ಭಾರೀ ಉದ್ವಿಗ್ನತೆ ಸೃಷ್ಟಿಯಾಗಿದೆ. ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾಲೇಜಿನ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಹಲವು ವಾಹನಗಳಿಗೆ ಹಾನಿ ಮಾಡಲಾಗಿದ್ದು, ಮೂವರು ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಒಬ್ಬ ಪ್ರಾಧ್ಯಾಪಕರನ್ನು ಪೊಲೀಸ್ ರಕ್ಷಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂದೆಯ ಆಕ್ರೋಶ:

ಮಗನನ್ನು ಕಳೆದುಕೊಂಡ ತಂದೆಯ ಆಕ್ರೋಶ ಮುಗಿಲು ಮುಟ್ಟಿದೆ. “ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಗೈಯುವವರೆಗೂ ನನ್ನ ಮಗನ ಅಂತ್ಯಕ್ರಿಯೆ ಮಾಡುವುದಿಲ್ಲ” ಎಂದು ಅವರು ಹಠ ಹಿಡಿದಿದ್ದಾರೆ. ಸದ್ಯ ಕಾಲೇಜು ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು

Published

on

ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:

ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್‌ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

DEATH

ಬೆಳಗಾವಿ: ಆಸ್ತಿಗಾಗಿ ಆಕ್ರೋಶ; ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ

Published

on

ಬೆಳಗಾವಿ: ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯಿತಿಗೆ ಬಂದಿದ್ದ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಮತ್ತು ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಗೀಡಾದ ದುರ್ದೈವಿಗಳು. ಈ ಭೀಕರ ದಾಳಿಯಲ್ಲಿ ರುದ್ರಪ್ಪ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಹಿನ್ನೆಲೆ:

ಮೃತರಾದ ರುದ್ರಪ್ಪ ಹಾಗೂ ಅವರ ಅಣ್ಣತಮ್ಮಂದಿರ ನಡುವೆ 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ವ್ಯಾಜ್ಯವಿತ್ತು ಎನ್ನಲಾಗಿದೆ. ಈ ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ, ರುದ್ರಪ್ಪ ಅವರಿಗೆ ಸೇರಿದ್ದ ಜಮೀನನ್ನು ಅವರು ಈಗಾಗಲೇ ಮಾರಿಕೊಂಡಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಸಹೋದರರು ಪಟ್ಟು ಹಿಡಿದಿದ್ದರು. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಮುಂದುವರಿದಿರುವ ವಿಚಾರವೇ ಈ ಮಾರಣಾಹೋಮಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ಪಂಚಾಯಿತಿ ಒಳಗಡೆಯೇ ಕೃತ್ಯ:

ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ಗ್ರಾಮಕ್ಕೆ ಬಂದಿದ್ದ ರುದ್ರಪ್ಪ, ಆಸ್ತಿ ಪಾಲುದಾರಿಕೆ ಹಾಗೂ ದಾಖಲೆಗಳನ್ನು ಪಡೆದುಕೊಳ್ಳಲು ಅವರಾದಿ ಗ್ರಾಮ ಪಂಚಾಯಿತಿಗೆ ತೆರಳಿದ್ದರು. ರುದ್ರಪ್ಪ ಪಂಚಾಯಿತಿಗೆ ಬಂದಿರುವ ಸುದ್ಧಿ ತಿಳಿದು ಸ್ಥಳಕ್ಕೆ ಆಗಮಿಸಿದ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಏಕಾಏಕಿ ದಾಳಿ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ರುದ್ರಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರನ್ನೂ ನಿರ್ದಯವಾಗಿ ಹತ್ಯೆ ಮಾಡಿದ್ದಾರೆ.

ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪಂಚಾಯಿತಿ ಕಚೇರಿಯಲ್ಲೇ ನಡೆದ ಈ ಜೋಡಿ ಹತ್ಯೆಯು ಇಡೀ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಶೋಕಮೂಡಿಸಿದೆ.

ಇಬ್ಬರ ಆಸ್ತಿಯಲ್ಲೂ ಪಾಲು ಕೇಳಿದ್ದಕ್ಕೆ ಕುಪಿತಗೊಂಡಿದ್ದ ಇಬ್ಬರು ಸಹೋದರರು, ಇಂದು ಜಮೀನು ದಾಖಲು ಮಾಡಲು ಗ್ರಾಮ ಪಂಚಾಯತ್​ಗೆ ರುದ್ರಪ್ಪ ಬಂದಿದ್ದರು. ಈ ವೇಳೆಯೇ ದಾಳಿ ಮಾಡಿ ತಂದೆ-ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಅಲ್ಲಿಂದ ಪರಾರಿ ಆಗಿದ್ದಾರೆ ಅಂತಾ ಸ್ಥಳೀಯರು ಹೇಳಿದ್ದಾರೆ.

ತಂದೆ-ಮಗಳ ಕೊಲೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಜೋಡಿ ಕೊಲೆಯಿಂದ ಅವರಾದಿ ಗ್ರಾಮದಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದಾರೆ.

Continue Reading

Bantawala

ಸೌಜನ್ಯ ಮನೆಗೆ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ: ನ್ಯಾಯ ಹೋರಾಟಕ್ಕೆ ಮತ್ತೆ ಹೊಸ ಸಂಚಲನ ?

Published

on

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ, 13 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಭೀಕರ ಕೊಲೆಗೀಡಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಮನೆಗೆ ಆರ್‌ಎಸ್‌ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಬುಧವಾರ (ಆ.26) ದಿಢೀರ್ ಭೇಟಿ ನೀಡಿದ್ದಾರೆ.

ಧರ್ಮಸ್ಥಳ ಗ್ರಾಮದ ಪಾಂಗಾಳದಲ್ಲಿರುವ ಸೌಜನ್ಯ ಅವರ ಮನೆಯಲ್ಲಿ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಡಾ. ಪ್ರಭಾಕರ ಭಟ್ ಅವರು ಸುದೀರ್ಘ ಮಾತುಕತೆ ನಡೆಸಿದರೆನ್ನಲಾಗಿದೆ. ಮಗಳ ಅಗಲಿಕೆಯಿಂದ ಕಂಗಾಲಾಗಿ, ನ್ಯಾಯಕ್ಕಾಗಿ ಸುದೀರ್ಘ ವರ್ಷಗಳಿಂದ ಸತತ ಹೋರಾಟ ನಡೆಸುತ್ತಿರುವ ಕುಟುಂಬಕ್ಕೆ ಈ ಭೇಟಿ ಸಾಂತ್ವನ ನೀಡುವ ಜೊತೆಗೆ, ತನಿಖೆಯ ದಿಕ್ಕಿನಲ್ಲಿ ಹಾಗೂ ಸಾಮಾಜಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಬಹುದೇ ? ಎಂದು ಸಾರ್ವಜನಿಕವಾಗಿ ಕೇಳಿ ಬರುತ್ತಿದೆ.

ಮಾತುಕತೆಯ ನಿಖರ ವಿವರಗಳು ತಕ್ಷಣಕ್ಕೆ ತಿಳಿದುಬಂದಿಲ್ಲವಾದರೂ, ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವ ಹೋರಾಟದ ವಿಚಾರವಾಗಿ ಹಾಗೂ ಕುಟುಂಬಕ್ಕೆ ಬೆಂಬಲ ನೀಡುವ ಕುರಿತು ಚರ್ಚೆ ನಡೆದಿರಬಹುದೇ ? ಎಂಬ ಬಗ್ಗೆಯೂ ಚರ್ಚೆಯಾಗುತ್ತಿದೆ.

ಈ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಪ್ರಮುಖರಾದ ಪುರಂದರ, ಸೌಜನ್ಯ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯ ಸಹೋದರ ಮೋಹನ್ ಶೆಟ್ಟಿ ಉಜಿರೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದೀರ್ಘ ಕಾಲದಿಂದ ರಾಜ್ಯಾದ್ಯಂತ ಕಾವು ಕಾಯ್ದುಕೊಂಡಿರುವ ಸೌಜನ್ಯ ಪ್ರಕರಣದಲ್ಲಿ ಆರ್‌ಎಸ್‌ಎಸ್‌ನ ಪ್ರಭಾವಿ ನಾಯಕರ ಈ ಭೇಟಿಯು ಮುಂಬರುವ ದಿನಗಳಲ್ಲಿ ಯಾವ ರೀತಿಯ ಹೊಸ ತಿರುವು ಪಡೆಯಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Continue Reading

Trending

Copyright © 2025 Deevatige

error: Content is protected !!