Connect with us

Belthangady

ಯೂಟ್ಯೂಬರ್ ಸಮೀರ್ ಗೆ ಹೈಕೋರ್ಟ್ ರಿಲೀಫ್: ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ

Published

on

ಧರ್ಮಸ್ಥಳದ ಅಸಹಜ ಸಾವಿನ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಕಾಲ್ಪನಿಕ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಮೀರ್ ಸಲ್ಲಿಸಿದ್ದರು.

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಕುರಿತು ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೇಲ್ನೋಟಕ್ಕೆ ಬಲವಾದ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ. ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ (ಸೆಕ್ಷನ್ 153A) ನಡೆಸಲಾಗಿದೆ. ಸಾರ್ವಜನಿಕ ಶಾಂತಿ ಕದಡುವ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನ್ಯಾಯಾಲಯದಲ್ಲಿ ನಡೆದ ವಾದ-ಪ್ರತಿವಾದ
ಸಮೀರ್ ಮೊಹಮ್ಮದ್ ಪರ ವಕೀಲರು ನ್ಯಾಯಪೀಠದ ಮುಂದೆ ಅರ್ಜಿದಾರರು ಕೇವಲ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ವಿಷಯದ ಬಗ್ಗೆ ವಿಡಿಯೋ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಮುದಾಯಗಳ ನಡುವೆ ದ್ವೇಷ ಉಂಟುಮಾಡುವ ಉದ್ದೇಶವಿಲ್ಲ. ಇದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿದೆ ಎಂದು ಬಲವಾದ ವಾದ ಮಂಡಿಸಿದರು. ವಿಚಾರಣೆ ವೇಳೆ ಸಮೀರ್ ಪರ ವಕೀಲರು, “ಯೂಟ್ಯೂಬ್‌ನಲ್ಲಿ ವಿಡಿಯೋ ಹಾಕಿದ್ದಕ್ಕೆ ಪೊಲೀಸರು ಸಾರ್ವಜನಿಕ ಶಾಂತಿ ಭಂಗದ ನೆಪದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ” ಎಂದು ವಾದಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಮಾರ್ಮಿಕವಾಗಿ ಪ್ರತಿಕ್ರಿಯಿಸಿ, “ಯಾರ ನೆಮ್ಮದಿ ಹಾಳು ಮಾಡಿದ್ದೀರಿ ಎಂದು ನಮಗೆ ತಿಳಿದಿದೆ. ಅದು ಕೇವಲ ಸಾರ್ವಜನಿಕರ ನೆಮ್ಮದಿ ಮಾತ್ರವಲ್ಲ” ಎಂದು ನಗುತ್ತಲೇ ನುಡಿದರು.

ಹೈಕೋರ್ಟ್ ನೀಡಿದ ಮಹತ್ವದ ಆದೇಶ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಯಾವುದೇ ಗಂಭೀರ ಪುರಾವೆಗಳಿಲ್ಲ. ಯಾವುದೇ ನಿರ್ದಿಷ್ಟ ಸಮುದಾಯಗಳ ನಡುವೆ ದ್ವೇಷ ಅಥವಾ ಸಂಘರ್ಷಕ್ಕೆ ಪ್ರಚೋದನೆ ನೀಡಿದ ಅಂಶಗಳು ಈ ವಿಡಿಯೋದಲ್ಲಿ ಕಂಡುಬರುತ್ತಿಲ್ಲ. ಎಂಬ ಅಂಶಗಳನ್ನು ಗಮನಿಸಿ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆ ಮತ್ತು ಎಲ್ಲಾ ಕಾನೂನು ಕ್ರಮಗಳಿಗೆ ನ್ಯಾಯಾಲಯ ತಡೆ ನೀಡಿದೆ.

ನ್ಯಾಯಾಲಯವು ಈ ಕುರಿತು ರಾಜ್ಯ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮುಂದೂಡಿದೆ. ಹೈಕೋರ್ಟ್‌ನ ಈ ತೀರ್ಪು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವವರು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಧ್ವನಿ ಎತ್ತುವವರಿಗೆ ದೊಡ್ಡ ಸಮಾಧಾನ ತಂದಿದೆ.

Belthangady

ಬೆಳ್ತಂಗಡಿ: 50 ಲಕ್ಷದ ರಸ್ತೆ 9 ವರ್ಷಕ್ಕೆ ಗುಂಡಿಮಯ – ಕೈಕಂಬ–ಫಾರೆಸ್ಟ್ ಬಂಗಲೆ ರಸ್ತೆ ದುಸ್ಥಿತಿ

Published

on

ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್‌ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ, ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಅರ್ಥವಾಗದ ಸ್ಥಿತಿ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ ಮೂಲಕ 2017ರಲ್ಲಿ ನಿರ್ಮಾಣವಾದ ಈ 1 ಕಿ.ಮೀ ರಸ್ತೆ ಇದೀಗ ಇಂಚಿಂಚಿಗೂ ಗುಂಡಿಯಾಗಿದೆ. ಬೇಸಿಗೆಯಲ್ಲಿ ಗುಂಡಿ ಮುಚ್ಚಲು ಮಣ್ಣು ಹಾಕಲಾಗಿತ್ತು. ಆದರೆ ಮಳೆ ಆರಂಭವಾಗುತ್ತಿದ್ದಂತೆ ರಸ್ತೆ ಪೂರ್ತಿ ಕೆಸರುಮಯವಾಗಿ ಕಂಬಳ ಗದ್ದೆಯನ್ನು ನಾಚಿಸುವಂತಾಗಿದೆ.

ಜನರ ಸಂಕಷ್ಟ:
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಸೇರಿದಂತೆ ಫಾರೆಸ್ಟ್ ಬಂಗಲೆ, ಕಣಾಲು, ಕಾರಿಂಜ, ಕುಂಡಡ್ಕ, ಸುಳ್ಳೊಡಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖ ರಸ್ತೆ ಇದಾಗಿದೆ. ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೂರಾರು ಜನರು ಕೆಲಸಕ್ಕೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಅಂಗನವಾಡಿ, ಕಿ.ಪ್ರಾ ಶಾಲೆ, ಹಾಲು ಉತ್ಪಾದಕರ ಸಂಘವೂ ಇದೆ.

ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ, ಆಟೋ, ಖಾಸಗಿ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿದ್ದು, ಅಪಘಾತಗಳೂ ಸಂಭವಿಸಿವೆ. ಆದರೂ ರಸ್ತೆ ದುರಸ್ತಿ ಆಗದಿರುವುದು ದುರಂತ ಎಂದು ಸ್ಥಳೀಯರು ಬೇಸರಿಸಿದ್ದಾರೆ.

ಒತ್ತಾಯ:
“ಕೈಕಂಬದಿಂದ ಮೂರು ಮಾರ್ಗದವರೆಗಿನ ರಸ್ತೆ ಜನ, ವಾಹನ ಸಂಚರಿಸಲು ಅಯೋಗ್ಯವಾಗಿದೆ. ದಿತ್ಯೋಪಯೋಗಿ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಯೂ ಅಗತ್ಯ” ಎಂದು ಆಟೋ ರಿಕ್ಷಾ ಚಾಲಕ-ಮಾಲೀಕರಾದ ದಿನೇಶ್ ಗೌಡ ಆಗ್ರಹಿಸಿದ್ದಾರೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

arrest

ಬೆಳ್ತಂಗಡಿ: ಸರಣಿ ಕಳ್ಳತನದ ಅಂತರಾಜ್ಯ ಗ್ಯಾಂಗ್ ಪತ್ತೆ; ಇಬ್ಬರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ

Published

on

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು ರೂ. 23,67,000/- ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಿವರ:

ಹಮೀದ್ (42): ಕಾಸರಗೋಡು ನಿವಾಸಿ (ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ ನಿವಾಸಿ). ಈತನನ್ನು ಮೇ 15, 2026 ರಂದು ಬಂಧಿಸಲಾಗಿತ್ತು.

ಜಾಬೀರ್ @ ಜಾಬೀ (38): ಕಾಸರಗೋಡು ನಿವಾಸಿ (ಮೂಲತಃ ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ). ಹಮೀದ್ ನೀಡಿದ ಮಾಹಿತಿ ಮೇರೆಗೆ ಈತನನ್ನು ಜೂನ್ 07, 2026 ರಂದು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

    ಪ್ರಕರಣದ ಹಿನ್ನೆಲೆ ಮತ್ತು ತನಿಖೆ:

    ಕಳೆದ ಏಪ್ರಿಲ್ 5, 2026 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿತ್ತು. ಈ ಕುರಿತು ದಾಖಲಾಗಿದ್ದ ಅ.ಕ್ರ: 38/2026 ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸ್ ತಂಡ ಮೊದಲು ಹಮೀದ್‌ನನ್ನು ತಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಜಾಲ ಪತ್ತೆಯಾಗಿದೆ.

    ವಶಪಡಿಸಿಕೊಂಡ ಸೊತ್ತುಗಳು: ಆರೋಪಿಗಳಿಂದ ಈ ಕೆಳಗಿನ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ:

    ಪುಂಜಾಲಕಟ್ಟೆ ಠಾಣಾ ಪ್ರಕರಣಕ್ಕೆ ಸಂಬಂಧಿಸಿ: 68.690 ಗ್ರಾಂ ಚಿನ್ನಾಭರಣ ಮತ್ತು ರೂ. 2,00,000/- ನಗದು.

    ಉಪ್ಪಿನಂಗಡಿ ಠಾಣಾ ಪ್ರಕರಣಕ್ಕೆ (ಅ.ಕ್ರ: 28/2025) ಸಂಬಂಧಿಸಿ: 21.810 ಗ್ರಾಂ ಚಿನ್ನಾಭರಣ.

    ಇತರ: ಕೃತ್ಯಕ್ಕೆ ಬಳಸಿದ ಕಾರು. (ವಶಪಡಿಸಿಕೊಂಡ ಒಟ್ಟು ಸೊತ್ತಿನ ಮೌಲ್ಯ ರೂ. 23,67,000/-)

    5 ಕಳ್ಳತನ ಪ್ರಕರಣಗಳ ಸುಳಿವು:

    ಪೊಲೀಸ್ ತನಿಖೆಯ ವೇಳೆ ಈ ಆರೋಪಿಗಳು ಕರಾವಳಿಯ ವಿವಿಧೆಡೆ ಸರಣಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕುಂಬಳೆ, ಉಪ್ಪಿನಂಗಡಿ, ಬಂಟ್ವಾಳ ನಗರ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಭಾಗಿಯಾಗಿರುವುದು ದೃಢಪಟ್ಟಿದೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಕಾರ್ಯಾಚರಣೆ ನಡೆಸಿದ ತಂಡ:

    ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಉಪವಿಭಾಗಾಧೀಕ್ಷಕಿ (DySP) ಶ್ರೀಮತಿ ರೋಹಿಸಿ ಸಿ.ಕೆ. ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.

    ತಂಡದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಪಿ.ಎಸ್.ಐ ರಾಜೇಶ್ ಕೆ.ವಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ತಾಂತ್ರಿಕ ನೆರವು ನೀಡಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.




    Continue Reading

    Trending

    Copyright © 2025 Deevatige

    error: Content is protected !!