suicide
ವಿಟ್ಲ: ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/04/11-1000x600.jpg&description=ವಿಟ್ಲ: ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ', 'pinterestShare', 'width=750,height=350'); return false;" title="Pin This Post">
ವಿಟ್ಲ: ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ, ಇಂದು ಸಂಜೆ ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ನಿವಾಸಿ ರಮೇಶ್ ನಾಯ್ಕ (35) ಮೃತಪಟ್ಟ ದುರ್ದೈವಿ. ಇವರು ಬುಧವಾರ ಸಂಜೆಯಿಂದ ಮನೆಯಿಂದ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಮತ್ತು ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಅವರ ಸುಳಿವು ಸಿಕ್ಕಿರಲಿಲ್ಲ. ಆದರೆ, ಇಂದು ಸಂಜೆ ಅವರ ಮನೆಯ ಸಮೀಪದ ಗುಡ್ಡ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮೃತ ರಮೇಶ್ ನಾಯ್ಕ ಅವರು ತಂದೆ-ತಾಯಿಯನ್ನು ಕಳೆದುಕೊಂಡಿದ್ದರು.ಇಬ್ಬರು ವಿವಾಹಿತ ಸಹೋದರಿಯರಿದ್ದು, ರಮೇಶ್ ಅವರು ನೆಕ್ಕರೆಕಾಡಿನಲ್ಲಿ ತಮ್ಮ ವೃದ್ಧೆ ಚಿಕ್ಕಮ್ಮನ ಜೊತೆಗೆ ವಾಸವಾಗಿದ್ದರು.ಇವರು ಜೆಸಿಬಿ ಆಪರೇಟರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದರು.
ರಮೇಶ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Belthangady
ನೆಲ್ಯಾಡಿ: ಕಾಡಿನ ಮಧ್ಯೆ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ
ನೆಲ್ಯಾಡಿ ಸಮೀಪದ ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಮಧ್ಯೆ ಇರುವ ಕಾಡಿನೊಳಗೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಎಂದು ಗುರುತಿಸಲಾಗಿದೆ.

ಶನಿವಾರ ಮನೆಯಿಂದ ಬೈಕ್ನಲ್ಲಿ ಹೊರಟಿದ್ದ ಸಂಜೀವ ಅವರು ಸಂಜೆಯಾದರೂ ಮನೆಗೆ ವಾಪಸ್ ಆಗದಿದ್ದಾಗ ಆತಂಕಗೊಂಡ ಕುಟುಂಬಸ್ಥರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ಅವರ ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸುತ್ತಮುತ್ತಲಿನ ಕಾಡಿನಲ್ಲಿ ಶೋಧ ನಡೆಸಿದಾಗ, ಮರದ ಬುಡದಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಕಂಡುಬಂದಿದ್ದು, ಅವರು ಮೊದಲು ಮದ್ಯ ಸೇವಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Bantawala
ಬಂಟ್ವಾಳ: ಪುಣಚದಲ್ಲಿ ಯುವಕ ನೇಣಿಗೆ ಶರಣು
ಪುಣಚ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಘಟನೆಯ ವಿವರ: ಮೃತ ಹರ್ಷಿತ್ ಕಳೆದ ಐದಾರು ವರ್ಷಗಳಿಂದ ಪುಣಚ ಗ್ರಾಮದ ಬೈಲುಗುತ್ತು ಜಗನ್ನಾಥ ರೈ ಅವರ ಪುತ್ರಿ ಶುಕ್ಲಾ ವಿಜಯ ರೈ ಅವರ ಮನೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಪುತ್ತೂರಿನಲ್ಲಿರುವ ಅವರ ಜಮೀನಿಗೆ ಕೆಲಸದಾಳುಗಳನ್ನು ಕರೆದುಕೊಂಡು ಹೋಗುವ ಮತ್ತು ಇತರೆ ಕೆಲಸಗಳನ್ನು ಇವರು ಜವಾಬ್ದಾರಿಯುತವಾಗಿ ನಿಭಾಯಿಸುತ್ತಿದ್ದರು. ಒಂದೆರಡು ಗೆಳೆಯರನ್ನು ಬಿಟ್ಟರೆ ಯಾರ ಸಂಪರ್ಕದಲ್ಲಿಯೂ ಇರಲಿಲ್ಲ. ಶುಕ್ರವಾರ ರಾತ್ರಿ ಮನೆಯವರೊಂದಿಗೆ ಊಟ ಮಾಡಿ ಹೊರಾಂಗಣದಲ್ಲಿ ಮಲಗಿದ್ದ ಹರ್ಷಿತ್, ಶನಿವಾರ ಬೆಳಿಗ್ಗೆ ಮನೆಯವರು ನೋಡುವಾಗ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಡಿದಾಗ ಮನೆಯ ಹಿಂಭಾಗದ ಗುಡ್ಡದ ಮರವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಯಾರೊಂದಿಗೂ ಅತಿಯಾಗಿ ಮಾತನಾಡದ ಸಾಧು ಸ್ವಭಾವದವರಾಗಿದ್ದ ಹರ್ಷಿತ್, ಕಳೆದ ಒಂದು ವಾರದಿಂದ ಇನ್ನಷ್ಟು ಮೌನವಾಗಿ ಯಾರಲ್ಲೂ ಮಾತನಾಡದೆ ಯಾವುದೋ ಬೇಸರದಲ್ಲಿ ಬಳಲುತ್ತಿದ್ದರು ಎನ್ನಲಾಗಿದೆ. ತಾಯಿಯ ಅನಾರೋಗ್ಯದ ಬಗ್ಗೆಯೂ ಅತಿಯಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ. ಆದರೆ, ಇವರ ಈ ಸಾವಿಗೆ ಯಾರಾದರೂ ಬೆದರಿಕೆ ಹಾಕಿರಬಹುದೇ ಎಂಬ ಅನುಮಾನಗಳನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ. ಬೆದರಿಕೆಗೆ ಹೆದರಿ ಹರ್ಷಿತ್ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಕುಟುಂಬದಲ್ಲಿ ಶೋಕದ ಛಾಯೆ: ಮೃತ ಯುವಕ ತಂದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯೊಂದಿಗೆ ವಾಸವಾಗಿದ್ದರು. ಇಬ್ಬರು ಸಹೋದರಿಯರಿಗೆ ಈಗಾಗಲೇ ವಿವಾಹವಾಗಿದೆ. ಆಘಾತದ ಮೇಲೆ ಆಘಾತವೆಂಬಂತೆ, ಹರ್ಷಿತ್ ಅವರ ತಂದೆಯ ಸಹೋದರಿಯ ಪುತ್ರ ಕೂಡ ಹಲವಾರು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಇದೇ ಏಪ್ರಿಲ್ 23ರಂದು ಅವರ ತಂದೆಯ ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವ ನಿಗದಿಯಾಗಿದ್ದು, ಈಗಾಗಲೇ ಗೊನೆ ಮುಹೂರ್ತವೂ ನೆರವೇರಿತ್ತು. ಶುಭ ಕಾರ್ಯದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಮಗನ ಸಾವು ಬರಸಿಡಿಲು ಬಡಿದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಾವಿನ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

Mangaluru
ಮಂಗಳೂರು: ಪ್ರೇಯಸಿ ದೂರವಾದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆ; ಯುವತಿಯ ವಿರುದ್ಧ ಪ್ರಚೋದನೆಯ ಆರೋಪ
ಮಂಗಳೂರು: ಪ್ರೀತಿಸಿದ ಯುವತಿ ತನ್ನಿಂದ ದೂರವಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಶೆಡ್ಡೆಯ ಎದುರುಪದವು ಎಂಬಲ್ಲಿ ನಡೆದಿದೆ.
ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಮೃತಪಟ್ಟ ಯುವಕ. ಆಶಿಕ್ ಕಾಲೇಜಿನಲ್ಲಿ ತನ್ನ ಸಹಪಾಠಿಯಾಗಿದ್ದ ಉಳ್ಳಾಲ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಪದವಿ ಶಿಕ್ಷಣ ಮುಗಿದ ನಂತರ ಆಶಿಕ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಈ ಯುವತಿ ಆಶಿಕ್ನಿಂದ ದೂರವಾಗಲು ಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದ್ದು, ತೀವ್ರವಾಗಿ ಮನನೊಂದ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಶಿಕ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯುವತಿಗೆ ವಿಡಿಯೋ ಕರೆ ಮಾಡಿದ್ದು, ಮೊಬೈಲ್ ಚಾಟಿಂಗ್ ಕೂಡ ನಡೆಸಿದ್ದಾರೆ. ಈ ಚಾಟಿಂಗ್ ವೇಳೆ ಯುವತಿಯು ಆಶಿಕ್ ಜೊತೆಗೆ ಅಶ್ಲೀಲವಾಗಿ ಮಾತನಾಡಿದ್ದಲ್ಲದೆ, “ಸಾಯುವಂತೆ” ಪ್ರಚೋದನೆ ನೀಡಿದ್ದಾರೆ ಎಂದು ಆಶಿಕ್ ಮನೆಯವರು ಗಂಭೀರವಾಗಿ ಆರೋಪಿಸಿದ್ದಾರೆ. ಯುವತಿಯ ಮಾತುಗಳಿಂದ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಸದ್ಯ ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
