Connect with us

suicide

ವಿಟ್ಲ: ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

Published

on

ವಿಟ್ಲ: ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ, ಇಂದು ಸಂಜೆ ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ನಿವಾಸಿ ರಮೇಶ್ ನಾಯ್ಕ (35) ಮೃತಪಟ್ಟ ದುರ್ದೈವಿ. ಇವರು ಬುಧವಾರ ಸಂಜೆಯಿಂದ ಮನೆಯಿಂದ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಮತ್ತು ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಅವರ ಸುಳಿವು ಸಿಕ್ಕಿರಲಿಲ್ಲ. ಆದರೆ, ಇಂದು ಸಂಜೆ ಅವರ ಮನೆಯ ಸಮೀಪದ ಗುಡ್ಡ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮೃತ ರಮೇಶ್ ನಾಯ್ಕ ಅವರು ತಂದೆ-ತಾಯಿಯನ್ನು ಕಳೆದುಕೊಂಡಿದ್ದರು.ಇಬ್ಬರು ವಿವಾಹಿತ ಸಹೋದರಿಯರಿದ್ದು, ರಮೇಶ್ ಅವರು ನೆಕ್ಕರೆಕಾಡಿನಲ್ಲಿ ತಮ್ಮ ವೃದ್ಧೆ ಚಿಕ್ಕಮ್ಮನ ಜೊತೆಗೆ ವಾಸವಾಗಿದ್ದರು.ಇವರು ಜೆಸಿಬಿ ಆಪರೇಟರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದರು.

ರಮೇಶ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಕೊಕ್ಕಡ: ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Published

on

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ (18) ಎಂದು ಗುರುತಿಸಲಾಗಿದೆ. ಈಕೆ ಬೆಳ್ತಂಗಡಿಯ ಹಳೆಕೋಟೆ ಪರಿಸರದ ಪದವಿ ಪೂರ್ವ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಕೂಲಿ ಕೆಲಸ ಮಾಡಿ ಮಗಳಿಗೆ ಓದಿಸುತ್ತಿದ್ದ ಪೋಷಕರು

ಮೂಲತಃ ಧಾರವಾಡದವರಾದ ಶ್ವೇತಾ ಅವರ ತಂದೆ-ತಾಯಿ ಕಳೆದ ಐದು ವರ್ಷಗಳಿಂದ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ವಾಸವಾಗಿದ್ದರು. ತಂದೆ ಮತ್ತು ತಾಯಿ ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಜೀವನದ ನಡುವೆಯೂ ಮಗಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದರು ಎನ್ನಲಾಗಿದೆ.

ಬೆಳ್ಳಂಬೆಳಗ್ಗೆ ನಡೆದ ದುರಂತ

ಎಂದಿನಂತೆ ಬೆಳಗ್ಗೆ ಎದ್ದಿದ್ದ ಶ್ವೇತಾ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಳು. ಈ ವೇಳೆ ತಂದೆ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ತೆರಳಿದ್ದರು, ತಾಯಿ ಮಾತ್ರ ಮನೆಯಲ್ಲಿದ್ದರು. ತಾಯಿ ಮನೆಯ ಬೇರೆ ಕೆಲಸದಲ್ಲಿ ನಿರತರಾಗಿದ್ದ ಸಂದರ್ಭವನ್ನು ಗಮನಿಸಿ ಕೊಠಡಿಯೊಳಗೆ ಹೋದ ಶ್ವೇತಾ ನೇಣು ಬಿಗಿದುಕೊಂಡಿದ್ದಾಳೆ. ತದನಂತರ ತಾಯಿ ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆತ್ಮಹತ್ಯೆಗೆ ಕಾರಣ ನಿಗೂಢ

ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ದಿಢೀರನೆ ಇಂತಹ ಕಠಿಣ ನಿರ್ಧಾರ ಕೈಗೊಳ್ಳಲು ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಮಾನಸಿಕ ಒತ್ತಡ ಅಥವಾ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಸಹಾಯ ಪಡೆಯಲು ಸರ್ಕಾರಿ ಹೆಲ್ಪ್‌ಲೈನ್ ಸಂಖ್ಯೆ 104 ಅಥವಾ ಇತರೆ ಆಪ್ತಸಮಾಲೋಚನಾ ಕೇಂದ್ರಗಳನ್ನು ಸಂಪರ್ಕಿಸಬಹುದು.




Continue Reading

Belthangady

ಬೆಳ್ತಂಗಡಿ: ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಚಿತ್ರದುರ್ಗ ಮೂಲದ ಪಿಯುಸಿ ವಿದ್ಯಾರ್ಥಿನಿ ಅಫ್ರಿನ್ ತಾಜ್ ಆತ್ಮಹತ್ಯೆ

Published

on

ಬೆಳ್ತಂಗಡಿ: ಇಲ್ಲಿನ ಗುರುವಾಯನಕೆರೆಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜೂನ್ 4 ರಂದು ಸಂಭವಿಸಿದೆ.

ಮೃತ ವಿದ್ಯಾರ್ಥಿನಿ ಅಫ್ರಿನ್ ತಾಜ್ (17 ವರ್ಷ) ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ನಿವಾಸಿ ಎಂದು ಗುರುತಿಸಲಾಗಿದೆ. ಆಕೆ ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ಪ್ರಥಮ/ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದೆ.

ಘಟನೆಯ ವಿವರ:

ದಿನಾಂಕ 04.06.2026 ರಂದು ಮಧ್ಯಾಹ್ನ ತಾನು ಉಳಿದುಕೊಂಡಿದ್ದ ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡಿದ್ದಾಳೆ. ತಕ್ಷಣವೇ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೋಷಕರು ಮಗಳ ಮೃತದೇಹವನ್ನು ಕಂಡು ಕಣ್ಣೀರಿಟ್ಟಿದ್ದಾರೆ.

ಪೊಲೀಸ್ ದೂರು ಮತ್ತು ತನಿಖೆ: ಮೃತಳ ತಂದೆ/ಪೋಷಕರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ನಂ: 33/2026, ಕಲಂ: 194 ಬಿ.ಎನ್.ಎಸ್.ಎಸ್ (BNSS) ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.




Continue Reading

Belthangady

ನೆಲ್ಯಾಡಿ: ಕಾಡಿನ ಮಧ್ಯೆ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

Published

on

ನೆಲ್ಯಾಡಿ ಸಮೀಪದ ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಮಧ್ಯೆ ಇರುವ ಕಾಡಿನೊಳಗೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಎಂದು ಗುರುತಿಸಲಾಗಿದೆ.

ಶನಿವಾರ ಮನೆಯಿಂದ ಬೈಕ್‌ನಲ್ಲಿ ಹೊರಟಿದ್ದ ಸಂಜೀವ ಅವರು ಸಂಜೆಯಾದರೂ ಮನೆಗೆ ವಾಪಸ್ ಆಗದಿದ್ದಾಗ ಆತಂಕಗೊಂಡ ಕುಟುಂಬಸ್ಥರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ಅವರ ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸುತ್ತಮುತ್ತಲಿನ ಕಾಡಿನಲ್ಲಿ ಶೋಧ ನಡೆಸಿದಾಗ, ಮರದ ಬುಡದಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಕಂಡುಬಂದಿದ್ದು, ಅವರು ಮೊದಲು ಮದ್ಯ ಸೇವಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!